ಮಡಿಕೇರಿ ಜ.19 NEWS DESK : ಆಟೋ ಮಾಲೀಕ ಚಾಲಕರ ಸಂಘದ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಸಂಘದ ಸದಸ್ಯರಿಗೆ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಏ.5ರಿಂದ 7ರವರೆಗೆ ನಗರದಲ್ಲಿ ಆಯೋಜಿಸಲಾಗಿದ್ದು, ಏ.12ರಂದು ಸಾರ್ವಜನಿಕರಿಗೆ ಹಾಗೂ ಆಟೋ ಚಾಲಕರಿಗೆ ಆಟೋಟ ಸ್ಪರ್ಧೆ ಮತ್ತು ಡ್ಯಾನ್ಸ್ ಮೇಳವನ್ನು ಆಯೋಜಿಸಲಾಗಿದೆಯೆಂದು ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್. ಮೇದಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ ಆಟೋ ಮಾಲೀಕ ಚಾಲಕರ ಸಂಘದೊಂದಿಗೆ ನೋಂದಾಯಿಸಿಕೊಂಡ 37 ಸ್ಥಾನೀಯ ಸಮಿತಿಗಳಿವೆ. ಈ ಸಮಿತಿಗಳಲ್ಲಿ ಸದಸ್ಯರಾಗಿರುವ ಆಟೋ ಚಾಲಕರಿಗಾಗಿ ಏ.5ರಿಂದ ಮೂರು ದಿನಗಳ ಕಾಲ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆಯೆಂದು ತಿಳಿಸಿದರು. ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ 25 ರಿಂದ 30 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿಚ್ಛಿಸುವ ತಂಡಗಳಿಗೆ 5ಸಾವಿರ ರೂ. ಮೈದಾನ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆಸಕ್ತ ತಂಡಗಳು ಮಾ.25ರ ಒಳಗಾಗಿ ತಮ್ಮ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು.…
ಲೇಖಕ: admin
ಮಡಿಕೇರಿ ಜ.19 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ವಿದ್ಯಾನಗರದಲ್ಲಿ 15ಲಕ್ಷ ವೆಚ್ಚದಲ್ಲಿ ಪೂರ್ಣಗೊಂಡ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಈ ಹಿಂದೆ ವಿದ್ಯಾನಗರದ ನಿವಾಸಿಗಳ ಬೇಡಿಕೆಗೆ ಸ್ಪಂದಿಸಿದ ಶಾಸಕರು, ತಮ್ಮ ಅನುದಾನದಲ್ಲಿ ಈ ಭಾಗದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲು ಸೂಚನೆ ನೀಡಿದ್ದರು. ಅದರಂತೆ ಈಗ ಕಾಮಗಾರಿ ಮುಕ್ತಾಯಗೊಂಡ ಬಳಿಕ ಸಾರ್ವಜನಿಕರ ಉಪಯೋಗಕ್ಕೆ ರಸ್ತೆಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಬಗರ್ ಹುಕುಂ ತಾಲೂಕು ಅಧ್ಯಕ್ಷರು ಸಲಾಂ, ಪುರಸಭೆ ಮಾಜಿ ಉಪಾಧ್ಯಕ್ಷರು ಫಸಿಯಾ ತಬ್ಸುಂ, ವಿರಾಜಪೇಟೆ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ಪುರಸಭೆ ಮಾಜಿ ಸದಸ್ಯರು ರಾಫಿ, ಅತಿಫ್ ಮನ್ನ, ಸ್ಥಾಯಿ ಸಮಿತಿಯ ಅಧ್ಯಕ್ಷರು ಜಲಿಲ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ರಫೀಕ್, ಪಕ್ಷದ ಮುಖಂಡರು ಮೊಯಿದು, ಜಾಫರ್,…
ಮಡಿಕೇರಿ ಜ.19 NEWS DESK : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಮಾಲಂಬಿ ಗ್ರಾಮದ ರಾಜ ಹಾಗೂ ಪಾರ್ವತಿ ದಂಪತಿಯ ಪುತ್ರಿ ಪೂಜಾ ಎಂ.ಆರ್ ಅವರು ಬಿಎಡ್ ಪದವಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಾಸನದ ರಾಜೀವ್ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಮಡಿಕೇರಿ ಜ.19 NEWS DESK : ವಿರಾಜಪೇಟೆ ತಾಲ್ಲೂಕು ಕಚೇರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು. ಇತ್ತೀಚಿಗೆ ಈಚೂರು ಭಾಗದಲ್ಲಿ ಸಾರ್ವಜನಿಕರ ದೂರು ಬಂದ ಮೇರೆಗೆ ಅಲ್ಲಿಯ ಡಾಂಬರ್ ತಯಾರಕ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆ ಸಂದರ್ಭದಲ್ಲಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಶಾಸಕರು, ಜನರ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದ್ದರು. ಆ ಪ್ರಯುಕ್ತ ಇಂದು ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಮೇ 31ರ ಒಳಗಾಗಿ ಈ ಘಟಕದ ಕಾರ್ಯ ಚಟುವಟಿಕೆಯನ್ನು ನಿಲ್ಲಿಸುವಂತೆ ಸೂಚಿಸಲಾಯಿತು. ಇದಕ್ಕೆ ಸ್ಥಳೀಯ ಮಾಲೀಕರುಗಳು ಹಾಗೂ ಸಾರ್ವಜನಿಕರು ಒಪ್ಪಿಗೆ ಸೂಚಿಸಿದ್ದು, ಸಾರ್ವಜನಿಕರ ಮನವಿಗೆ ಸ್ಪಂದಿಸಿ ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಶಾಸಕರ ನಡೆ ಬಗ್ಗೆ ಸಭೆಯಲ್ಲಿ ಪ್ರಶಂಸೆ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸೋಮಶೇಖರ್,…
ಮಡಿಕೇರಿ ಜ.19 NEWS DESK : ಕೊಡಗಿನ ಗಡಿಭಾಗ ಸಂರಕ್ಷಿತ ಅರಣ್ಯ ಮಾಕುಟ್ಟ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಯರವ ಜನಾಂಗಕ್ಕೆ ಸೇರಿದ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಆಧಾರ್ ಕಾರ್ಡ್ ವಿತರಿಸಿದರು. ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಯಾವುದೂ ಇವರಿಗೆ ಇರದ ಪರಿಣಾಮ ಸರ್ಕಾರ ನೀಡುವ ಯಾವುದೇ ಸೌಲಭ್ಯ ಇವರಿಗೆ ಲಭಿಸುತ್ತಿರಲಿಲ್ಲ. ಈ ವಿಚಾರ ಶಾಸಕ ಪೊನ್ನಣ್ಣ ನವರ ಗಮನಕ್ಕೆ ಬಂದಾಗ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಮತ್ತು ಸೂಚನೆ ನೀಡಿ ಮೊದಲ ಹಂತದಲ್ಲಿ ಆಧಾರ್ ಕಾರ್ಡ್ ಮಾಡಿಸುವಲ್ಲಿ ಸಫಲರಾಗಿದ್ದು, ಮುಂದಿನ ತಿಂಗಳ ಒಳಗಾಗಿ ಪಡಿತರ ಚೀಟಿ ವಿತರಿಸಿ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನಾಗಿ ಅವರನ್ನು ನೋಂದಾಯಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಇಲ್ಲಿ ಹದಿನೇಳು ಕುಟುಂಬಗಳು ವಾಸವಾಗಿದ್ದು, ಕೂಡಲೇ ಪ್ರತಿ ಮನೆಗೆ ಶೌಚಾಲಯ ನಿರ್ಮಿಸಿ ಅನುಪಾಲನಾ ವರದಿ…
ಮಡಿಕೇರಿ ಜ.19 NEWS DESK : ತುಮಕೂರಿನಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟದಲ್ಲಿ ಟೆಕ್ವಾಂಡೋ ವಿಭಾಗದಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿ ಎನ್.ಕೆ.ಪ್ರಜ್ಞಾ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾಳೆ. ಕರ್ನಾಟಕ ಸರಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಆರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಅಂಡರ್ 73 ಕೆ.ಜಿ ವಿಭಾಗದಲ್ಲಿ ಎನ್.ಕೆ.ಪ್ರಜ್ಞಾ ಕೊಡಗನ್ನು ಪ್ರತಿನಿಧಿಸಿದ್ದಳು. ಮಂಗಳೂರಿನ ಶ್ರೀಚೈತ್ಯನ್ಯ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪ್ರಜ್ಞಾ ಮಡಿಕೇರಿ ನಗರದ ದೇಚೂರು ನಿವಾಸಿ ಎನ್.ಎನ್.ಕುಶಾಲ್ ಕುಮಾರ್ ಹಾಗೂ ಸಿ.ಪುಷ್ಪಲತ ದಂಪತಿಯ ಪುತ್ರಿ. ಈಕೆ ಟೆಕ್ವಾಂಡೋ ಕ್ಲಬ್ ನ ಮಾಸ್ಟರ್ ಕುಶಾಲ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.
ಮಡಿಕೇರಿ ಜ.19 NEWS DESK : ಮಡಿಕೇರಿ ಜಾಮಿಯಾ ಮಸೀದಿ ಆಡಳಿತ ಮಂಡಳಿಯ ಪ್ರಮುಖರು ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾಗಿ ಮಸೀದಿಗೆ ಸೇರಿದ ಆಸ್ತಿಯ ಕುರಿತು ಚರ್ಚಿಸಿದರು. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಭೇಟಿಯಾದ ಮಸೀದಿಯ ಪ್ರಮುಖರಾದ ನಜೀóರ್ ಖುರೇಶಿ, ಬಾಷಾ ಮತ್ತಿತರರು ಜಾಮಿಯಾ ಮಸೀದಿಗೆ ಸೇರಿದ ಆಸ್ತಿ ಒತ್ತುವರಿಯಾಗುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಈ ಸಂದರ್ಭ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಸೋಮಶೇಖರ್ ಎಸ್.ಜೆ ಅವರೊಂದಿಗೂ ಚರ್ಚಿಸಿದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಪ್ರಧಾನ ಕಾರ್ಯದರ್ಶಿ ರಾವೋಫ್ ಎಂ.ಎನ್, ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ.ಮೋಹನ್, ಪ್ರಮುಖರಾದ ಹರಿಪ್ರಸಾದ್ ಕೋಚನ ಹಾಗೂ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಜ.19 NEWS DESK : ಕೊಡಗು ಪತ್ರಕತ೯ರ ಸಂಘ ಮತ್ತು ಪತ್ರಕತ೯ರ ಕ್ಷೇಮಾಭಿವೖದ್ದಿ ಸಮಿತಿ ವತಿಯಿಂದ ಆಯೋಜಿತವಾಗಿದ್ದ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಗ್ಗಿ ತಂಡವು ಸಿರಿ ತಂಡದ ವಿರುದ್ಧ ಜಯಗಳಿಸಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದ ಪ್ರದಶ೯ನ ಪಂದ್ಯದಲ್ಲಿ, ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ, ಸೋಮವಾರಪೇಟೆ ತಹಶೀಲ್ದಾರ್ ಕೃಷ್ಣಮೂತಿ೯ ನೇತೃತ್ವದ ಅಧಿಕಾರಿಗಳ ತಂಡವು, ಮಹೇಶ್ ಜೈನಿ ನಾಯಕತ್ವದ ಜನಪ್ರತಿನಿಧಿಗಳ ತಂಡದ ವಿರುದ್ಧ 45 ರನ್ ಗಳ ಅಂತರದ ಗೆಲವು ಗಳಿಸಿತು. ನಿತಿನ್ ಚಿಕ್ಕಿ ಆಲ್ ರೌಂಡರ್ ಆಟಗಾರನಾಗಿ ವಿಜ್ರಂಭಿಸಿದರೆ ಮಹೇಶ್ ಜೈನಿ ಬ್ಯಾಟಿಂಗ್ , ಉದ್ಯಮಿ ಎಡಿಕೇರಿ ಪ್ರಸನ್ನ ಬೌಲಿಂಗ್ ನಲ್ಲಿ ಗಮನ ಸೆಳೆದರು. ನಂತರ ಪತ್ರಕತ೯ರ ತಂಡಗಳಾದ ಸಿರಿ, ಸುಗ್ಗಿ, ಹೊನ್ನು ಮತ್ತು ಸಮೖದ್ದಿ ತಂಡಗಳ ನಡುವೆ ಕ್ರಿಕೆಟ್ ಲೀಗ್ ಪಂದ್ಯಾಟ ಜರುಗಿತು. ಸುರೇಶ್ ಬಿಳಿಗೇರಿ ನಾಯಕತ್ವದ ಸುಗ್ಗಿ ತಂಡವು ಕುಡೆಕಲ್ ಸಂತೋಷ್ ನಾಯಕತ್ವದ ಸಿರಿ ತಂಡದ…
ಕುಶಾಲನಗರ ಜ.19 NEWS DESK : ಈ ಶತಮಾನ ಕಂಡ ಕಾಯಕ ಯೋಗಿ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ವಿಶ್ವಶ್ರೇಷ್ಠ ಸಂತ. ಬಡವರು ದೀನರು ಶೋಷಿತರಿಗೆ ತ್ರಿವಿಧ ದಾಸೋಹ ನೀಡುವ ಮೂಲಕ ಲಕ್ಷಾಂತರ ಕುಟುಂಬಗಳಲ್ಲಿ ಆರದ ಹಣತೆಯಾಗಿ ಬೆಳಗುತ್ತಿರುವ ಮಹಾಜ್ಯೋತಿ ಎಂದು ಸೋಮವಾರಪೇಟೆ – ಕುಶಾಲನಗರ ಅವಳಿ ತಾಲ್ಲೂಕುಗಳ ಪೋಲಿಸ್ ಉಪ ಅಧೀಕ್ಷಕ ( ಡಿವೈಎಸ್ಪಿ) ಚಂದ್ರಶೇಖರ್ ಬಣ್ಣಿಸಿದರು. ಶ್ರೀ ಸಿದ್ದಗಂಗಾ ಭಕ್ತಮಂಡಳಿ ವತಿಯಿಂದ ಕುಶಾಲನಗರದ ಸೋಮೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಡಾ.ಶಿವಕುಮಾರ ಸ್ವಾಮೀಜಿಯವರ ಭಕ್ತಿ ಸ್ಮರಣೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಡೆದಾಡಿದ ದೇವರು ಭಕ್ತಜನಕ್ಕೆ ಸಾರಿದ ನೀತಿಯ ಸಂದೇಶಗಳನ್ನು ಎಲ್ಲರೂ ತಪ್ಪದೇ ಪಾಲಿಸುವ ಮೂಲಕ ಅತ್ಯುತ್ತಮ ವಾದ ಜೀವನ ಕಟ್ಟಿಕೊಳ್ಳುವಂತೆ ಕರೆಕೊಟ್ಟರು. ಸಿದ್ದಗಂಗಾ ಭಕ್ತಮಂಡಳಿ ಸಂಚಾಲಕ ಕೆ.ಎಸ್.ಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ 15 ವರ್ಷಗಳಿಂದಲೂ ಎಲ್ಲಾ ಜಾತಿ ಹಾಗೂ ಸಮುದಾಯಗಳ ಭಕ್ತಜನರೊಂದಿಗೆ ಕುಶಾಲನಗರದ ವಿವಿಧೆಡೆಗಳಲ್ಲಿ ಶ್ರೀಗಳ ಭಕ್ತಿಯ ಸ್ಮರಣೆ ಆಚರಿಸುತ್ತಾ ಸಮಾಜದ ಸಾಧಕರನ್ನು ಶ್ರೀಗಳ ಹೆಸರಿನಲ್ಲಿ…
ವಿರಾಜಪೇಟೆ ಜ.19 NEWS DESK : ಗಡಿಯಾರ ಕಂಬದ ಬಳಿಯಿಂದ ಖಾಸಗಿ ಬಸ್ ನಿಲ್ದಾಣದವರೆಗೆ ದ್ವಿಮುಖ ಸಂಚಾರಕ್ಕೆ ವಿರೋಧ ವ್ಯಕ್ತಪಡಿಸಿ ನಗರದ ವರ್ತಕರ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರು. ಈ ಕುರಿತು ಶಾಸಕರಿಗೆ ಮನವಿ ಸಲ್ಲಿಸಿ ಮಾಹಿತಿ ನೀಡಿದ ವರ್ತಕರು, ಗಡಿಯಾರ ಕಂಬದ ಬಳಿಯಿಂದ ಖಾಸಗಿ ಬಸ್ ನಿಲ್ದಾಣದವರೆಗೆ ಏಕಮುಖ ಸಂಚಾರದ ವ್ಯವಸ್ಥೆ ಬಹಳ ವರ್ಷಗಳಿಂದ ಇತ್ತು. ಅಲ್ಲದೆ ತಿಂಗಳ ಹದಿನೈದು ದಿನ ಒಂದು ಬದಿಯಲ್ಲಿ ಇನ್ನು 15 ದಿನ ಮತ್ತೊಂದು ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ಪುರಸಭೆ ಮತ್ತು ನಗರ ಪೆÇಲೀಸರಿಂದ ವ್ಯವಸ್ಥೆ ಕಲ್ಪಿಸಲಾಗಿತ್ತು. ವ್ಯಾಪಾರ ವಹಿವಾಟು ನಡೆಸುವ ಅಂಗಡಿಗಳಿಗೆ ಯಾವುದೇ ಸಮಸ್ಯೆ ಎದುರಾಗಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಪುರಸಭೆಯು ದ್ವಿಮುಖ ಸಂಚಾರದ ವ್ಯವಸ್ಥೆ ಮಾಡುವುದಾಗಿ ಮಾಹಿತಿ ಬಂದಿದ್ದು ಇದರಿಂದ ವರ್ತಕರಿಗೆ ವ್ಯಾಪಾರ ವಹಿವಾಟು ನಡೆಸಲು ಸಮಸ್ಯೆಯಾಗುತ್ತದೆ. ವಾಹನಗಳ ಪಾರ್ಕಿಂಗ್ಗೆ ಅವಕಾಶ ಮಾಡಿಕೊಡಬೇಕು. ಇದೀಗ ಕಾಫಿ ಸೀಸನ್ ಆಗಿರುವುದರಿಂದ ಜನ ವ್ಯಾಪಾರಕ್ಕೆಂದು…






