ಮಡಿಕೇರಿ ಏ.3 NEWS DESK : ಕಳೆದ ಎರಡು ಮೂರು ವರ್ಷಗಳಿಂದ ಜನರ ನಡುವೆ ಬೆರೆತು ಜನಪ್ರತಿನಿಧಿಯಾಗಿ ಆಯ್ಕೆಯಾಗಿ ಜನರ ಪ್ರೀತಿಗಳಿಸಿದ ಸಾರ್ಥಕತೆ ತಮ್ಮ 28 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ಪಡೆದಿರಲಿಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಮಡಿಕೇರಿಯ ಕಾವೇರಿ ಹಾಲ್ ಸಭಾಂಗಣದಲ್ಲಿ ಪ್ರೊಟೆಸ್ಟೆಂಟ್ ಸಭೆಗಳ ಸಂಘ ಏರ್ಪಡಿಸಿದ ಮೂರು ದಿನದ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು ಹೈ ಕೋರ್ಟ್ ವಕೀಲನಾಗಿ, ಅಡ್ವೋಕೆಟ್ ಜನರಲ್ ಆಗಿ 28 ವರ್ಷಕಾಲ ತಾವು ನ್ಯಾಯಾಂಗ ಮತ್ತು ಕಾರ್ಯಾಂಗಳಲ್ಲಿ ಕೆಲಸ ಮಾಡಿದ್ದರೂ ಜನಪ್ರತಿನಿಧಿಯಾಗಿ ಜನರ ಸೇವೆ ಮಾಡುವಾಗ ಸಿಗುವ ಸಂತೃಪ್ತಿ ತಮ್ಮ ವೃತ್ತಿ ಜೀವನದಲ್ಲಿ ಕಾಣಲಿಲ್ಲ ಎಂದು ಹೇಳಿದರು. ಪ್ರತಿಯೊಬ್ಬ ಭಾರತೀಯರಿಗೂ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅದನ್ನು ಪಾಲಿಸಲು ಎಲ್ಲರೂ ಬದ್ದರಾಗಿರಬೇಕು ಎಂದು ಕರೆ ನೀಡಿದ ಪೊನ್ನಣ್ಣನ, 1935 ರಲ್ಲಿ ಗವರ್ನಮೆಂಟ್ ಆಫ್ ಇಂಡಯಾ…
ಲೇಖಕ: admin
ಮಡಿಕೇರಿ ಏ.3 NEWS DESK :ಶಾಲೆಗಳಲ್ಲಿ ವಿದ್ಯಾಥಿ೯ಗಳನ್ನು ಪಠ್ಯಧ್ಯಯನಕ್ಕೆ ಮಾತ್ರ ಸೀಮಿತಗೊಳಿಸದೇ ವೈವಿವಿಧ್ಯಮಯ ಕಲಿಕಾ ಶಿಬಿರಗಳ ಮೂಲಕ ಅವರಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರತರಬೇಕೆಂದು ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಕರೆ ನೀಡಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ ಹೀಲಿಯಂ ಬಲೂನನ್ನು ಆಕಾಶಕ್ಕೆ ಹಾರಿಸುವ ಮೂಲಕ ಬೇಸಿೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ರಾಮರಾಜನ್, ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹವ್ಯಾಸಗಳನ್ನು ಉತ್ತೇಜಿಸಲು ಮತ್ತು ಅವರ ಸಾಮರ್ಥ್ಯಗಳನ್ನು ವಿಸ್ತರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಪಠ್ಯಾಧ್ಯಯನಕ್ಕಷ್ಟೇ ಸೀಮಿತವಾಗದೆ, ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆಯ ಬೆಳವಣಿಗೆಗೆ ಅವಕಾಶವನ್ನು ಶಾಲೆಗಳಲ್ಲಿ ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಮೊಬೈಲ್ ಬಳಸಬೇಡಿ ಎಂದು ಮಕ್ಕಳಿಗೆ ಹೇಳುವ ಬದಲು, ವಿದ್ಯಾಥಿ೯ಗಳು ತೊಡಗಿಸಿಕೊಳ್ಳಬೇಕಾದ ಸೃಜನಾತ್ಮಕ ಚಟುವಟಿಕೆಗಳತ್ತ ಅವರು ಗಮನ ನೀಡುವಂತೆ ಮಾಡುವಂತಾಗಬೇಕು. ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ, ಅವರ ಹವ್ಯಾಸಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು,” ಎಂದೂ ರಾಮರಾಜನ್ ಹೇಳಿದರು. ವಿವಿಧ ಕ್ಷೇತ್ರ ಗಳಲ್ಲಿ ಸಾಧನೆ ಮಾಡಿ ತಮ್ಮದೇ ಛಾಪು ಮೂಡಿಸಿರುವ…
ಮಡಿಕೇರಿ, ಏ.3 NEWS DESK : ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಕೊಡಮಾಡುವ 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಜಿಲ್ಲಾ ಸಿಐಡಿ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕಿ ಸಿ.ಯು. ಸವಿ ಭಾಜನಾರಾಗಿದ್ದಾರೆ. ಬೆಂಗಳೂರಿನ ಕೋರಮಂಗಲ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕವನ್ನು ಸಿ.ಯು. ಸವಿ ಅವರಿಗೆ ಪ್ರದಾನ ಮಾಡಿದರು. ಗೃಹ ಸಚಿವ ಜಿ. ಪರಮೇಶ್ವರ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಹಾಜರಿದ್ದರು. ಸವಿ ಅವರು ಬೆಟ್ಟಗೇರಿಯ ಚಳಿಯಂಡ ಉತ್ತಯ್ಯ, ಕಮಲ ದಂಪತಿ ಪುತ್ರಿ. ಕೋಕೇರಿ ನಿವಾಸಿ ಲೋಕೇಶ್ ಅವರ ಪತ್ನಿ.
ಮಡಿಕೇರಿ NEWS DESK ಏ.3 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ ಎರಡನೇ ದಿನದ ಪಂದ್ಯದಲ್ಲಿ ಪ್ರಗತಿ ಕ್ರಿಕೆಟರ್ಸ್ ಮತ್ತು ಎಂಟಿಬಿ ರಾಯಲ್ಸ್ ತಂಡ ಗೆಲುವು ದಾಖಲಿಸಿದವು. ಪ್ರಗತಿ ಕ್ರಿಕೆಟರ್ಸ್ ಮತ್ತು ಕೂರ್ಗ್ ಯುನೈಟೆಡ್ ತಂಡಗಳ ನಡುವೆ ನಡೆದ ದಿನದ ಮೊದಲ ಪಂದ್ಯದಲ್ಲಿ ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 151 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಯುನೈಟೆಡ್ ತಂಡ 18.5 ಓವರ್ ಗಳಲ್ಲಿ 121 ರನ್ ಗಳನ್ನು ಗಳಿಸಿ ಆಲ್ ಔಟ್ ಆಯಿತು. ಆ ಮೂಲಕ ಪ್ರಗತಿ ಕ್ರಿಕೆಟರ್ಸ್ ತಂಡ ಜಯ ದಾಖಲಿಸಿತು. ಕೂರ್ಗ್ ಯುನೈಟೆಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತು. ಪ್ರಗತಿ ಕ್ರಿಕೆಟರ್ಸ್ ನ ತಂಬುಕುತ್ತೀರ ಸುಖೇಶ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ದ್ವಿತೀಯ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು…
ಮಡಿಕೇರಿ NEWS DESK ಏ.3 : ತಾಳತ್ತಮನೆಯಲ್ಲಿ ಏ.5 ರಂದು ಕಲ್ಲುರ್ಟಿ ದೈವ ಹಾಗೂ ಸ್ವಾಮಿ ಕೊರಗಜ್ಜ ದೈವದ ವರ್ಷಾವಧಿ ನೇಮೋತ್ಸವ ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ ಗಣಹೋಮ, 11 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 6.30 ಗಂಟೆಗೆ ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ಅವರ ಉಪಸ್ಥಿಯಲ್ಲಿ ಭಂಡಾರ ತೆಗೆಯುವುದು, ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ, 9 ಗಂಟೆಗೆ ಕಲ್ಲುರ್ಟಿ ದೈವದ ನೇಮೋತ್ಸವ, ರಾತ್ರಿ 2 ಗಂಟೆಗೆ ಕೊರಗಜ್ಜ ಕೋಲಸೇವೆ ಹಾಗೂ ಪ್ರಸಾದ ವಿತರಣೆಯಾಗಲಿದೆ. ತಾಳತ್ತಮನೆಯ ದಿ.ರಾಧಾಕೃಷ್ಣ ರೈ ಹಾಗೂ ದಿ.ದೇವಕ್ಕಿ ರೈ ಅವರ ಮನೆಯಲ್ಲಿ ನಡೆಯುವ ನೇಮೋತ್ಸವದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗುತ್ತಿಗೆದಾರ ಸದಾಶಿವ ರೈ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 9480290688 ನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಏ.3 : ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಬೇಕು ಮತ್ತು ಇದರ ಪ್ರಗತಿಗೆ ಅಗತ್ಯವಿರುವ ಅನುಕೂಲವನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಉನ್ನತ ಶಿಕ್ಷಣ ಸಚಿವ ಸುಧಾಕರ ಅವರಿಗೆ ಮನವಿ ಸಲ್ಲಿಸಿದೆ. ಈ ಕುರಿತು ಮಾಹಿತಿ ನೀಡಿರುವ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು, ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುವುದಲ್ಲದೆ ಜಿಲ್ಲೆಯ ಆರ್ಥಿಕ ಪ್ರಗತಿಗೂ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಕೊಡಗು ಜಿಲ್ಲೆ ಬೆಟ್ಟಗುಡ್ಡಗಳಿಂದ ಕೂಡಿದ ಪ್ರದೇಶವಾಗಿದ್ದು, ಅನೇಕ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿನ ಹಿನ್ನಡೆಯಿಂದ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹೊರ ಜಿಲ್ಲೆಗಳನ್ನೇ ಅವಲಂಬಿಸಬೇಕಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಮಂದಿ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಾಲ ಮಾಡಿ, ಆಸ್ತಿ ಮತ್ತು ಚಿನ್ನಾಭರಣಗಳನ್ನು ಅಡವಿಟ್ಟು ಹಣ ಹೊಂದಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುತ್ತಿದೆ. ದಕ್ಷಿಣ ಕೊಡಗು ಭಾಗದಲ್ಲಿ ಶಿಕ್ಷಣದ ವಿಚಾರದಲ್ಲಿ ಪೋಷಕರು ಹೆಚ್ಚು ಕಷ್ಟ ಪಡುತ್ತಿದ್ದಾರೆ. ಕೊಡಗು…
ನಾಪೋಕ್ಲು ಏ.3 NEWS DESK : ಕೊಡಗಿನ ಪ್ರಥಮ ಪೊನ್ನು ಮುತ್ತಪ್ಪ ದೇವಸ್ಥಾನ ಹಾಗೂ ಎರಡನೇ ಪರಶಿನಿ ಎಂದು ಪ್ರಖ್ಯಾತವಾಗಿರುವ ನಾಪೋಕ್ಲುವಿನ ಶ್ರೀ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವವು ಆರಂಭಗೊಂಡಿದ್ದು, ಇಂದಿನಿಂದ(ಏ.3) ಏ.5ರವರೆಗೆ ಶ್ರದ್ಧಾಭಕತಿಯಿಂದ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ ಚಂದ್ರನ್ ಹೇಳಿದರು. ದೇವಾಲಯದ ಆವರಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸವದ ಅಂಗವಾಗಿ ಕೇರಳ ನೀಲೇಶ್ವರದ ಮುರಳಿ ಕೃಷ್ಣ ತಂತ್ರಿಗಳಿಂದ ಗಣಪತಿ ಹೋಮ ಮತ್ತು ಶುದ್ಧ ಕಳಸ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಇಂದು ರಾತ್ರಿ 8.30 ಗಂಟೆಗೆ ಗುರು ಪೂಜೆ ಹಾಗೂ ಶ್ರೀದೇವಿ ಪೂಜೆ ನಡೆಯಲಿದೆ. ಏ.4 ರಂದು ಪೈಂಗುತ್ತಿ ಹಾಗೂ ಸಂಜೆ ಶ್ರೀ ಮುತ್ತಪ್ಪ ದೇವರ ಕಳಸ ನಡೆಯಲಿದೆ. ಪವಿತ್ರ ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳ ಚಂಡಗಳೊಂದಿಗೆ ನಾಪೋಕ್ಲು ಪೇಟೆಯ ಮುಖ್ಯಬೀದಿಯಲ್ಲಿ ಸನ್ನಿಧಾನಕ್ಕೆ ಮೆರವಣಿಗೆ ಮೂಲಕ ಆಗಮನವಾಗಲಿದೆ. ರಾತ್ರಿ ವೆಳ್ಳಾಟಂ ಬಳಿಕ ಕುಟ್ಟಿಚಾತ ಮತ್ತು ಗುಳಿಗ ದೇವರ…
ಮಡಿಕೇರಿ NEWS DESK ಏ.3 : ವಾರದ ಹಿಂದೆ ನಾಪತ್ತೆಯಾಗಿದ್ದ ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಮಲ್ಲಿಕಮ್ಮ ಅವರು ಇಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪತ್ತೆಯಾಗಿದ್ದಾರೆ ಎಂದು ಕುಟುಂಬ ವರ್ಗ ತಿಳಿಸಿದೆ. ಇದೇ ಮಾ.26ರಂದು ಮಡಿಕೇರಿ ಪಟ್ಟಣಕ್ಕೆ ಹೋದವರು ಮರಳಿ ಮನೆಗೆ ಬಂದಿರಲಿಲ್ಲವೆAದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ವಿರಾಜಪೇಟೆ ಏ.3 NEWS DESK : ಭಾರತದ ಜಾನಪದ ಇತಿಹಾಸದಲ್ಲಿ ಪ್ರಪ್ರಥಮ ಜಾನಪದ ಆಧಾರಿತ ಸಂಗ್ರಹ ಪುಸ್ತಕ ಪಟ್ಟೋಲೆ ಪಳಮೆಯನ್ನು ಪ್ರಕಟಿಸಿದ, ಜಾನಪದ ಬ್ರಹ್ಮ ಎಂದೇ ಖ್ಯಾತರಾಗಿರುವ, ದಿ. ನಡಿಕೇರಿಯಂಡ ಚಿಣ್ಣಪ್ಪ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ, ಕೊಡವಾಮೆರ ಕೊಂಡಾಟ ಸಂಘಟನೆ ವತಿಯಿಂದ ಏ.4 ರಂದು ಕೊಡವ ಜಾನಪದ ನಾಳ್ ಮತ್ತು ಕೊಡವಾಮೆಗಾಗಿ ಎಲೆಮರೆಯಲ್ಲಿ ದುಡಿಯುತ್ತಿರುವ ಸುಮಾರು 250 ಜನರಿಗೆ, ದಿವಂಗತ ಮುಕ್ಕಾಟಿರ ಶಿವು ಮಾದಪ್ಪ ನೆನಪಿನಲ್ಲಿ ಸ್ಮರಣಿಕೆ ವಿತರಣಾ ಕಾರ್ಯಕ್ರಮ ನಡೆಯಲಿದೆ. ವಿರಾಜಪೇಟೆ ಕೊಡವ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ, ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ, ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣೂ ಅಪ್ಪಣ್ಣ, ಅಖಿಲ ಅಮ್ಮ ಕೊಡವ ಸಮಾಜ ಅಧ್ಯಕ್ಷ ಬಾನಂಡ ಪ್ರತ್ಯು,…
ಮಡಿಕೇರಿ ಏ.3 NEWS DESK : ದೇವರ ದಾಸಿಮಯ್ಯ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 5 ಲಕ್ಷ ರೂ.ಬಿಡುಗಡೆ ಮಾಡಲಾಗುವುದು. ಈ ಸಂಬಂಧ ಜಾಗ ಎಲ್ಲಿ ಎಂಬ ಬಗ್ಗೆ ನಿರ್ಧರಿಸುವಂತೆ ಸಮಾಜದ ಪ್ರಮುಖರಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾಗ ಅಂತಿಮಗೊಳಿಸಿದ ಕೂಡಲೇ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟವರಿಗೆ ಶಾಸಕರು ಸಲಹೆ ಮಾಡಿದರು. ದೇವರ ದಾಸಿಮಯ್ಯ ಕುರಿತು ಹೆಚ್ಚಿನ ಅಧ್ಯಯನಗಳು ನಡೆಯಬೇಕು. ಜೊತೆಗೆ ಪುಸ್ತಕವನ್ನು ಹೊರತರುವಂತಾಗಬೇಕು. ಆ ನಿಟ್ಟಿನಲ್ಲಿ ದೇವರ ದಾಸಿಮಯ್ಯ ಅವರ ಸಂಶೋಧನಾ ಅಧ್ಯಯನಕ್ಕಾಗಿ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ಹೆಚ್ಚಿನ ಅನುದಾನ ಬಿಡುಗಡೆಗೆ ಮುಂದಾಗಲಾಗುವುದು ಎಂದು ಡಾ.ಮಂತರ್ ಗೌಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಸಮಾಜದಲ್ಲಿ ಅಭಿವೃದ್ಧಿ ಮತ್ತು ಬದಲಾವಣೆ ಕಾಣಬೇಕಾದರೆ ಶಿಕ್ಷಣವೇ ಅತೀಮುಖ್ಯ.…






