ಕುಶಾಲನಗರ, ಏ.3 NEWS DESK : ಕುಶಾಲನಗರ ತಾಲ್ಲೂಕಿನ ತೊರೆನೂರು ಹಾಲು ಉತ್ಪಾದಕರ ಸಹಕಾರ ಸಂಘ ( ಹಾಲಿನ ಡೇರಿ ) ದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಟಿ.ಟಿ.ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಟಿ.ಡಿ.ಉದಯ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೊರೆನೂರು ಹಾಲಿನ ಡೇರಿಯ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಹಕಾರ ಇಲಾಖೆಯ ಬಿ.ಜಿ.ಸಂದೀಪ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಹಾಲಿನ ಡೇರಿಯ ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿ ಟಿ.ಎಲ್.ಪುಟ್ಟಸ್ವಾಮಿ, ಎ.ಎಂ.ಅಣ್ಣಯ್ಯ, ಟಿ.ಎನ್.ಗಿರೀಶ್, ಟಿ.ಎಂ.ಚಂದ್ರ, ಟಿ.ಟಿ.ಹನುಮಪ್ಪ, ನಾಗಮ್ಮ ಗಣೇಶ್, ಕುಮಾರಿ ಸೋಮಶೇಖರ್ ಆಯ್ಕೆಯಾಗಿದ್ದಾರೆ. ಡೇರಿಯ ನೂತನ ಅಧ್ಯಕ್ಷ ಟಿ.ಟಿ. ಪ್ರಕಾಶ್ ಮಾತನಾಡಿ, ಹಾಲಿನ ಡೇರಿಯ ಮೂಲಕ ಹೈನುಗಾರಿಕೆ ಕ್ಷೇತ್ರದ ಅಭಿವೃದ್ಧಿಯೊಂದಿಗೆ ರೈತರ ಆರ್ಥಿಕಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಡೇರಿಯ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಟಿ.ಎಲ್.ಮಹೇಶ್ ಕುಮಾರ್ ಅಭಿನಂದಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ…
ಲೇಖಕ: admin
ಸುಂಟಿಕೊಪ್ಪ ಏ.2 NEWS DESK : ವೊಲ್ ವೊ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಸುಂಟಿಕೊಪ್ಪ ಸಮೀಪದ ಕೆದಕಲ್ ವ್ಯಾಪ್ತಿಯ 7ನೇ ಮೈಲ್ ತಿರುವಿನಲ್ಲಿ ನಡೆದಿದೆ. ಸುಂಟಿಕೊಪ್ಪ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ವೊಲ್ವೊ ಬಸ್ ಮತ್ತು ಮಡಿಕೇರಿಯಿಂದ ಸುಂಟಿಕೊಪ್ಪದ ಕಡೆಗೆ ಆಗಮಿಸುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಬಸ್ ಚಾಲಕ ಶಿವಾನಂದ ಹಾಗೂ ಲಾರಿ ಚಾಲಕ ಪ್ರತಾಪ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ರೀತಿಯ ನೋವುಗಳು ಸಂಭವಿಸಿಲ್ಲ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಜಗದೀಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಏ.3 NEWS DESK : ನಕಲಿ ಜಾತಿ ಪ್ರಮಾಣ ಪತ್ರಗಳ ಮೂಲಕ ಸರ್ಕಾರದ ಸೌಲಭ್ಯಗಳಿಂದ ನೈಜ ಆದಿವಾಸಿಗಳನ್ನು ವಂಚಿಸಲಾಗುತ್ತಿದೆಯೆಂದು ಆರೋಪಿಸಿ, ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಏ.4 ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆಯೆಂದು ಆದಿವಾಸಿ ಸಂಘಟನೆಗಳ ಒಕ್ಕೂಟ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಜೇನುಕುರುಬರ ಅಭಿವೃದ್ಧಿ ಸಮಿತಿಯ ಸಂಘಟನಾ ಸಂಚಾಲಕರಾದ ಜೆ.ಟಿ.ಕಾಳಿಂಗ ಮಾತನಾಡಿ, ವಿವಿಧ ಆದಿವಾಸಿ ಸಂಘಟನೆಗಳು, ದಲಿತ ಪರ ಸಂಘಟನೆUಳು, ಪ್ರಗತಿಪರ ಸಂಘಟನೆಗಳನ್ನು ಒಳಗೊಂಡಂತೆ ಏ.4ರಂದು ಬೆಳಗ್ಗೆ ನಗರದ ಸುದರ್ಶನ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದೆಂದು ತಿಳಿಸಿದರು. ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಬಳಸಿಕೊಂಡು ಪ್ರಸ್ತುತ ಸರ್ಕಾರದಿಂದ ಆದಿವಾಸಿಗಳಿಗೆ ಮೀಸಲಾದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇದರಿಂದ ಆದಿವಾಸಿಗಳ ಅಭ್ಯುzಯಕ್ಕಾಗಿ ಮೀಸಲಾದ ಶೈಕ್ಷಣಿಕವಾದ, ಸಾಮಾಜಿಕವಾದ ಹತ್ತಾರು ಸರ್ಕಾರಿ ಯೋಜನೆಗಳು ನೈಜ ಆದಿವಾಸಿಗಳಿಗೆ ತಲುಪುತ್ತಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತನಿಖೆಗೆ ಆಗ್ರಹ :: ಕರ್ನಾಟಕ ರಾಜ್ಯ…
ಮಡಿಕೇರಿ ಏ.3 NEWS DESK : ‘ಶೂನ್ಯ’ ಬಡ್ಡಿದರದ ಕೃಷಿ ಸಾಲ ವಿತರಣೆಗೆ ಸರ್ಕಾರದ ‘ಸಿಂಗಲ್ ಆರ್ಟಿಸಿ’ ಷರತ್ತು ತೊಡಕಾಗಿ ಪರಿಣಮಿಸಿದ್ದು, ಇದನ್ನು ಸರಳೀಕರಿಸಿ, ಕೃಷಿಕ ಬಾಂಧವರಿಗೆಲ್ಲ ಸಾಲ ಸೌಲಭ್ಯ ದೊರಕುವಂತೆ ಮಾಡಬೇಕೆಂದು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದ ಸಾಲ ವಿತರಣೆಗೆ ಸಿಂಗಲ್ ಆರ್ಟಿಸಿ, ಅಂದರೆ ಒಬ್ಬರ ಹೆಸರಿನಲ್ಲೆ ಮಾತ್ರ ಇರುವ ಆರ್ಟಿಸಿಯನ್ನಷ್ಟೆ ಪರಿಗಣಿಸಬೇಕೆನ್ನುವ ಆದೇಶವನ್ನು ಸರ್ಕಾರ 2021ರಲ್ಲೆ ಹೊರಡಿಸಿತ್ತು. ಹೀಗಿದ್ದೂ ಕಳೆದ ಸಾಲಿನವರೆಗೂ ನಿಯಮಗಳ ಸರಳೀಕರಣದ ಹಿನ್ನೆಲೆ ಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಸಾಲವನ್ನು ಒದಗಿಸಲಾಗಿದೆ. ಆದರೆ, ಈ ಸಾಲಿನಲ್ಲಿ ಸಿಂಗಲ್ ಆರ್ಟಿಸಿಯನ್ನು ಕಡ್ಡಾಯ ಗೊಳಿಸಿರುವುದು ಸಹಕಾರ ಸಂಘದಿಂದ ಸಾಲ ವಿತರಣೆಗೆ ತೊಡಕನ್ನು ಉಂಟುಮಾಡುತ್ತಿದೆಯೆಂದು ಕಳವಳ ವ್ಯಕ್ತಪಡಿಸಿದರು. ಜಂಟಿ ಖಾತೆಯ ತೊಡಕು :: ಕೊಡಗು ಜಿಲ್ಲೆಯಲ್ಲಿ ಈ ಹಿಂದಿನಿಂದಲೂ ಆಸ್ತಿಗಳು ‘ಜಂಟಿ ಖಾತೆ’, ಅಂದರೆ ಒಂದು ಜಾಗದ ಆರ್ಟಿಸಿಯಲ್ಲಿ ಕುಟುಂಬದ…
ಮಡಿಕೇರಿ ಏ.2 NEWS DESK : ಕೊಡಗು ಜಿಲ್ಲಾ ಪೊಲೀಸ್ ಘಟಕ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮವು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎಸ್.ಸುಧೀಶ್ ಕುಮಾರ್ ಅವರಿಗೆ ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿಯನ್ನು ವಿತರಿಸಿದರು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಶ್ವಾನದಳ ವಿಭಾಗದಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮನಮೋಹನ್ ಅವರಿಗೆ ಉತ್ತಮ ಸೇವೆ ಸಲ್ಲಿಸಿರುವುದಕ್ಕೆ ಉತ್ತಮ ಪೊಲೀಸ್ ಟ್ರೋಫಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ವಿತರಿಸಿದರು. ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಪೊಲೀಸ್ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಅವರು ಗೌರವ ವಂದನೆ ಸ್ವೀಕರಿಸಿ ಮಾತನಾಡಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಬದುಕಿಗೆ ಪೊಲೀಸ್ ಇಲಾಖೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಪ್ರಮುಖವಾಗಿದೆ ಎಂದರು. ಪೊಲೀಸರ ವೃತ್ತಿಯು ದಿನದ 24…
ಮಡಿಕೇರಿ ಏ.2 NEWS DESK : ಮುದ್ದಂಡ ಕಪ್ ಹಾಕಿ ಉತ್ಸವ : ಏ.2 ರಂದು ನಡೆದ ಪಂದ್ಯಾವಳಿಯ ವಿಜೇತ ತಂಡಗಳ ವಿವರ ಮೈದಾನ 1 :: ಪೊಂಜಂಡ ಮತ್ತು ಪಟ್ಟಮಾಡ ತಂಡಗಳ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪಟ್ಟಮಾಡ ತಂಡ ಗೆಲುವು ದಾಖಲಿಸಿತು. ಪಟ್ಟಮಾಡ ಪರ ದೀಪಕ್ ಪೂವಣ್ಣ, ನಿಖಿಲ್ ತಿಮ್ಮಯ್ಯ ಹಾಗೂ ಶ್ರೀಷ್ಮ ಬೊಳ್ಳಮ್ಮ ತಲಾ 1 ಗೋಲು ದಾಖಲಿಸಿದರು. ದೇಗುಲ್ ಪಿ.ಎನ್. ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುದ್ದಿಯಡ ಮತ್ತು ಚಿಮ್ಮಣಮಾಡ ನಡುವಿನ ಪಂದ್ಯದಲ್ಲಿ ಮುದ್ದಿಯಡ ತಂಡ 3-0 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು. ಮುದ್ದಿಯಡ ತಂಡದ ಧೀರಜ್ 2 ಹಾಗೂ ದಿಶಾಂತ್ 1 ಗೋಲು ಬಾರಿಸಿದರು. ಚಿಮ್ಮಣಮಾಡ ಸಚಿನ್ ಪ್ಲೇಯರ್ ಆಫ್ ಮ್ಯಾಚ್ ಪ್ರಶಸ್ತಿಗೆ ಭಜನರಾದರು. ಬೊಳೆಯಾಡಿರ ಮತ್ತು ಪೆಮ್ಮುಡಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಳೆಯಾಡಿರ 3-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಬೊಳೆಯಾಡಿರ ಚೇತನ್ ಸುಬ್ಬಯ್ಯ 2 ಹಾಗೂ ಸಚಿನ್…
ಮಡಿಕೇರಿ ಏ.2 NEWS DESK : ಮುದ್ದಂಡ ಕಪ್ ಹಾಕಿ ಉತ್ಸವ : ಏ.2 ರಂದು ನಡೆದ ಪಂದ್ಯಾವಳಿಯ ವಿಜೇತ ತಂಡಗಳ ವಿವರ ಮೈದಾನ 1 :: ಪೊಂಜಂಡ ಮತ್ತು ಪಟ್ಟಮಾಡ ತಂಡಗಳ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪಟ್ಟಮಾಡ ತಂಡ ಗೆಲುವು ದಾಖಲಿಸಿತು. ಪಟ್ಟಮಾಡ ಪರ ದೀಪಕ್ ಪೂವಣ್ಣ, ನಿಖಿಲ್ ತಿಮ್ಮಯ್ಯ ಹಾಗೂ ಶ್ರೀಷ್ಮ ಬೊಳ್ಳಮ್ಮ ತಲಾ 1 ಗೋಲು ದಾಖಲಿಸಿದರು. ದೇಗುಲ್ ಪಿ.ಎನ್. ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುದ್ದಿಯಡ ಮತ್ತು ಚಿಮ್ಮಣಮಾಡ ನಡುವಿನ ಪಂದ್ಯದಲ್ಲಿ ಮುದ್ದಿಯಡ ತಂಡ 3-0 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು. ಮುದ್ದಿಯಡ ತಂಡದ ಧೀರಜ್ 2 ಹಾಗೂ ದಿಶಾಂತ್ 1 ಗೋಲು ಬಾರಿಸಿದರು. ಚಿಮ್ಮಣಮಾಡ ಸಚಿನ್ ಪ್ಲೇಯರ್ ಆಫ್ ಮ್ಯಾಚ್ ಪ್ರಶಸ್ತಿಗೆ ಭಜನರಾದರು. ಬೊಳೆಯಾಡಿರ ಮತ್ತು ಪೆಮ್ಮುಡಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಳೆಯಾಡಿರ 3-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಬೊಳೆಯಾಡಿರ ಚೇತನ್ ಸುಬ್ಬಯ್ಯ 2 ಹಾಗೂ ಸಚಿನ್…
ಮಡಿಕೇರಿ, ಏ.2 NEWS DESK : ಮಕ್ಕಳು ಜೀವನದಲ್ಲಿ ಕಷ್ಟಪಟ್ಟು ಸಿಕ್ಕುವ ಸೌಲಭ್ಯಗಳನ್ನು ಬಳಸಿಕೊಂಡು ಯಶಸ್ಸುಗಳಿಸಬೇಕೆಂದು ಅಂತರರಾಷ್ಟ್ರೀಯ ಬಾಸ್ಕೆಟ್ಬಾಲ್ ಆಟಗಾರ್ತಿ, ಫೀ.ಮಾ. ಕಾರ್ಯಪ್ಪ ಕಾಲೇಜು ನಿವೃತ್ತ ಪ್ರಾಂಶುಪಾಲೆ ಡಾ. ಮಂಡೇಪಂಡ ಪುಷ್ಪ ಕುಟ್ಟಣ್ಣ ಕರೆ ನೀಡಿದರು. ಮಡಿಕೇರಿಯ ವಾಂಡರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕೊಡಗಿನ ಕ್ರೀಡಾ ಕ್ಷೇತ್ರದ ದ್ರೋಣಾಚಾರ್ಯ ಎಂದೇ ಕರೆಯಲ್ಪಡುವ ದಿ. ಸಿ.ವಿ. ಶಂಕರ್ಸ್ವಾಮಿ ಅವರ ಸ್ಮರಣಾರ್ಥ ಏರ್ಪಡಿಸಿಕೊಂಡು ಬದಲಾಗುತ್ತಿರುವ 31ನೇ ವರ್ಷದ ಉಚಿತ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜ. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಸರಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೆ ಕ್ರೀಡೆಯಾಗಲಿ, ಇನ್ನಿತರ ಯಾವುದೇ ಕ್ಷೇತ್ರಗಳಲ್ಲಿಯೂ ಅಭ್ಯಸಿಸಲು ಸೌಲಭ್ಯಗಳಿರಲಿಲ್ಲ. ಈಗಿನ ಮಕ್ಕಳು ಅದೃಷ್ಟವಂತರು. ಇಂತಹ ಶಿಬಿರಗಳ ಮೂಲಕ ತರಬೇತಿ ನೀಡಲಾಗುತ್ತಿದೆ. ಇದೊಂದು ವಿಭಿನ್ನ ಶಿಬಿರವಾಗಿದ್ದು, ಇಲ್ಲಿ ಅನೇಕ ವಿಷಯಗಳನ್ನು ಕಲಿಸಿಕೊಡುತ್ತಿರುವುದು ಶ್ಲಾಘನೀಯವಾದುದು. ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳೇ ತರಬೇತುದಾರರಾಗಿ ತೊಡಗಿಸಿಕೊಂಡು ಪ್ರೋತ್ಸಾಹ ನೀಡುತ್ತಿದ್ದಾರೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಹೇಳಿದರು. ಮಕ್ಕಳಲ್ಲಿ ಶ್ರಮ, ಶಿಸ್ತು, ಸಂಯಮ,…
ಮಡಿಕೇರಿ ಏ.2 NEWS DESK : ಮುದ್ದಂಡ ಕಪ್ ಹಾಕಿ ಉತ್ಸವ : ಏ.3 ರಂದು ನಡೆಯಲಿರುವ ಪಂದ್ಯಾವಳಿ ವಿವರ ಮೈದಾನ 1 :: ಬೆಳಿಗ್ಗೆ 9 ಗಂಟೆಗೆ ಕುಂಧೀರ ಮತ್ತು ಪೊನ್ನಿಮಾಡ, 10 ಗಂಟೆಗೆ ಚಟ್ಟಂಗಡ ಮತ್ತು ಕುಟ್ಟಂಡ (ಅಮ್ಮತ್ತಿ), 11 ಗಂಟೆಗೆ ಕನ್ನಂಬೀರ ಮತ್ತು ಪಾಲೆಂಗಡ, ಮಧ್ಯಾಹ್ನ 12 ಗಂಟೆಗೆ ಕುಟ್ಟೇಟಿರ ಮತ್ತು ಪುಟ್ಟಿಚಂಡ, 1 ಗಂಟೆಗೆ ಬೈರೇಟಿ ಮತ್ತು ಪಳೆಯಂಡ (ಹಮ್ಮಿಯಾಲ), 2 ಗಂಟೆಗೆ ಮಂದಂಗಡ ಮತ್ತು ಐಮಂಡ, 3 ಗಂಟೆಗೆ ಮಂಡೇಡ ಮತ್ತು ದೇಯಂಡ ಮೈದಾನ 2 :: ಬೆಳಿಗ್ಗೆ 9 ಗಂಟೆಗೆ ಬಟ್ಟಕಾಳಂಡ ಮತ್ತು ಅಣ್ಣಾಡಿಯಂಡ, 10 ಗಂಟೆಗೆ ಚೇರಂಡ ಮತ್ತು ಚೆನ್ನಪಂಡ, 11 ಗಂಟೆಗೆ ನಂದಿನೆರವಂಡ ಮತ್ತು ಐತಿಚಂಡ, ಮಧ್ಯಾಹ್ನ 12 ಗಂಟೆಗೆ ಮುಂಡಂಡ ಮತ್ತು ಅಮ್ಮಂಡ, 1 ಗಂಟೆಗೆ ಕಟ್ಟೇರ ಮತ್ತು ಮಾಳೇಟಿರ (ಕೆದಮುಳ್ಳೂರು), 2 ಗಂಟೆಗೆ ಚೇಂದ್ರಿಮಾಡ ಮತ್ತು ಸುಳ್ಳಿಮಾಡ, 3 ಗಂಟೆಗೆ ಮಂಡೋಟಿರ ಮತ್ತು ಚೋಡುಮಾಡ ಮೈದಾನ 3…
ಮಡಿಕೇರಿ ಏ.2 NEWS DESK : ಕೊಡವ ಕುಟುಂಬಗಳ ನಡುವಣ 23ನೇ ‘ಚೆಕ್ಕೇರ ಕ್ರಿಕೆಟ್ ಪಂದ್ಯಾವಳಿ’ ಏ.6ರಿಂದ ಹುದಿಕೇರಿಯಲ್ಲಿ ಆರಂಭಗೊಳ್ಳಲಿದ್ದು, ಪ್ರಶಸ್ತಿಗಾಗಿ 281 ತಂಡಗಳ ನಡುವೆ ಸ್ಪರ್ಧೆ ನಡೆಯಲಿದೆಯೆಂದು ಪಂದ್ಯಾವಳಿ ಆಯೋಜನಾ ಸಮಿತಿಯ ಅಧ್ಯಕ್ಷರಾದ ಚೆಕ್ಕೇರ ಚಂದ್ರ ಪ್ರಕಾಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಆಯೋಜಿತ ಕೊಡವ ಕ್ರಿಕೆಟ್ ಪಂದ್ಯಾವಳಿ ಹುದಿಕೇರಿಯ ಜನತಾ ಪ್ರೌಢಶಾಲಾ ಮೈದಾನ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ 41 ದಿನಗಳ ಕಾಲ ನಡೆಯಲಿದೆ ಎಂದರು. ಪುರುಷರ ಕ್ರಿಕೆಟ್ನೊಂದಿಗೆ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನೂ ಆಯೋಜಿಸಲಾಗಿದ್ದು, ಇದರಲ್ಲಿ 64 ಕುಟುಂಬ ತಂಡಗಳು ಹೆಸರನ್ನು ನೋಂದಾಯಿಸಿಕೊಂಡಿವೆ. ಈ ಪಂದ್ಯಾವಳಿ ಏ.28ರಿಂದ ಆರಂಭಗೊಳ್ಳಲಿದೆಯೆಂದರು. ಚೆಕ್ಕೇರ ಕ್ರಿಕೆಟ್ ಪಂದ್ಯಾವಳಿಯ ಫೈನಲ್ಸ್ ಮೇ 19 ರಂದು ನಡೆಯಲಿದೆ. ಪುರುಷರ ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ 1 ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ 75 ಸಾವಿರ ರೂ. ಮತ್ತು ಟ್ರೋಫಿ ಹಾಗೂ ಸೆಮಿಫೈನಲ್ನಲ್ಲಿ ಪರಾಜಿತ ಎರಡು ತಂಡಗಳಿಗೆ…






