ಲೇಖಕ: admin

ಪುತ್ತೂರು ಏ.2 NEWS DESK : ಪ್ರತಿಯೊಬ್ಬರೂ ಕೂಡಾ ಸಮಸ್ಯೆಗಳನ್ನು ಸರಿಯಾಗಿ ಗುರುತಿಸಿ ಅದಕ್ಕೆ ವಿಮರ್ಶಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಅಲ್ಲದೆ ಜೀವನದಲ್ಲಿ ನಾವು ಮಾಡುವ ಕೆಲಸವನ್ನು ಪ್ರಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2023-24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಎಂಬಿಎ ಮತ್ತು ಎಂಸಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸ್ನಾತಕೋತ್ತರ ಪದವೀಧರರಾದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭದಲ್ಲಿ ಮಾತಾಡಿದರು. ನಿಮ್ಮ ಜೀವನವನ್ನು ರೂಪಿಸುವಲ್ಲಿ ಅಪಾರ ತ್ಯಾಗವನ್ನು ಮಾಡಿದ ಮಾತಾ ಪಿತರನ್ನು ಮತ್ತು ಕಲಿತ ವಿದ್ಯಾಸಂಸ್ಥೆಯನ್ನು ಸದಾ ನೆನಪಿನಲ್ಲಿಕೊಳ್ಳಿ ಎಂದರು. ಈ ಮಣ್ಣಿನ, ನೆಲ, ಜಲದ ಬಗ್ಗೆ ಪ್ರೀತಿ ಗೌರವವಿರುವ ಪ್ರಜ್ಞಾವಂತ ಪ್ರಜೆಗಳಾಗಿ…

Read More

ವಿರಾಜಪೇಟೆ ಏ.2 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವತಿಯಿಂದ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಶಿಕ್ಷಕಿ ಲಲಿತ ಪ್ರಸನ್ನ, ಮಹಿಳೆ ಮನೆಯಿಂದಲೇ ದೇಶಭಕ್ತಿ, ದೈವಭಕ್ತಿಯ ಜೊತೆಗೆ ಎಲ್ಲ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿದ್ದಾರೆ. ಆದರೆ ಮನ್ನಣೆ ಸಿಗುವುದು ಮಾತ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುವರಿಗೆ. ದೇಶದ ಯಶಸ್ಸಿನ ಹಿಂದೆ ಎಷ್ಟೋ ಕೋಟಿ ಹೆಣ್ಣುಮಕ್ಕಳ ಶ್ರಮವಿದೆ. ಅಂತಹ ಪರಿಶ್ರಮಕ್ಕೆ ಬೆಲೆ ನೀಡಬೇಕು ಎಂದರು. ಆರೋಗ್ಯವಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಹಾಗಾಗಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಲು ಮುಖ್ಯ. ಪ್ರತಿನಿತ್ಯ ಯೋಗವನ್ನು ಮಾಡುವುದರಿಂದ ನಮ್ಮ ಮನಸ್ಸನ್ನು, ದೇಹವನ್ನು ಸಮತೋಲನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಹಾಗೆಯೇ ನಮ್ಮ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಿಕೊಡಬೇಕು. ಇದರಿಂದ ಮಕ್ಕಳು ಸುಸಂಸ್ಕೃತರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು. ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿರ್ದೇಶಕರುಗಳ ಸಹಕಾರದಿಂದ ಸಮಾಜ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸ್ತ್ರೀ…

Read More

ಮಡಿಕೇರಿ ಏ.2 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಏ.5 ಮತ್ತು 6 ರಂದು 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸ್ವಾಗತ ಸಮಿತಿ ಅಧ್ಯಕ್ಷ ವಿ.ಎಸ್.ವಿನೋದ್ ಕುಮಾರ್ ಮನವಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.5 ರಂದು ಸಂಜೆ 4 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದರು. ಮೆರವಣಿಗೆಯಲ್ಲಿ ಚಂಡೆ, ತೈಯಂ ಕುಣಿತ, ಫ್ಲವರ್ ಡ್ಯಾನ್ಸ್, ತಮಟೆ, ರಾಮ, ಆಂಜನೇಯ ವೇಷಧಾರಿಗಳು, ಹುಲಿ ವೇಷ, ಭಜನಾ ತಂಡಗಳು, ಕಳಸ ಹಾಗೂ ರಾಮನ ಪಲ್ಲಕ್ಕಿ ಮೆರವಣಿಗೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಮೆರವಣಿಗೆಯು ನಗರದ ಗಾಂಧಿ ಮೈದಾನ, ಜನರಲ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ ನಿಲ್ದಾಣ, ಚೌಕಿ, ಮಹದೇವಪೇಟೆ, ಮಾರುಕಟ್ಟೆ, ಶ್ರೀಚೌಡೇಶ್ವರಿ ದೇವಾಲಯ ಮೂಲಕ…

Read More

ಮಡಿಕೇರಿ ಏ.2 NEWS DESK : ಭಾರತೀಯ ಜನತಾ ಪಾರ್ಟಿ ಎಸ್.ಸಿ ಮೋರ್ಚಾದಿಂದ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಏ.13 ರಂದು ವಿವಿಧ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ತಿಳಿಸಿದ್ದಾರೆ. ದೇಶಕ್ಕೆ ಮಹತ್ತರವಾದ ಕೊಡುಗೆ ನೀಡಿರುವ ರಾಷ್ಟ್ರ ನಾಯಕರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದ್ದು, ಅಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ 1 ಗಂಟೆಯ ಕಾಲ ಸ್ಪರ್ಧೆ ನಡೆಯಲಿದೆ. 5 ರಿಂದ 7 ತರಗತಿ ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಕುರಿತು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದ್ದು, ಪ್ರಥಮ ಬಹುಮಾನ 2000 ನಗದು, ಆಕರ್ಷಕ ಟ್ರೋಫಿ ಹಾಗೂ ಪ್ರಶಾಂಸನಾ ಪತ್ರ, ದ್ವಿತೀಯ 1,000 ನಗದು, ಟ್ರೋಫಿ ಹಾಗೂ ಪ್ರಶಾಂಸನಾ ಪತ್ರ ನೀಡಲಾಗುವುದು.…

Read More

ಮಡಿಕೇರಿ ಏ.2 NEWS DESK : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಂಚೂಣಿ ಘಟಕವಾದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಕೋರ್ ಕಮಿಟಿಯಲ್ಲಿ ಕೊಡಗು ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ತೆನ್ನಿರಾ ಮೈನಾ ಸ್ಥಾನ ಪಡೆದಿದ್ದಾರೆ. ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ಮತ್ತು ಹೊಣೆಗಾರಿಕೆ ಹೊತ್ತಿದ್ದ ತೆನ್ನಿರ ಮೈನಾ ಅವರನ್ನು ಕೋರ್ ಕಮಿಟಿಗೆ ನೇಮಕ ಮಾಡುವಂತೆ ಸಂಘಟನೆಯ ರಾಜ್ಯಾಧ್ಯಕ್ಷ ವಿಜಯ್ ಸಿಂಗ್ ಎಐಸಿಸಿಗೆ ಶಿಫಾರಸ್ಸು ಮಾಡಿದ್ದರು. ಸಂಘಟನೆಯ ಎಐಸಿಸಿ ಅಧ್ಯಕ್ಷರಾದ ಹರ್ಷವರ್ಧನ್ ಸಕ್ಪಾಲ್ ಅವರು ಕರ್ನಾಟಕ ರಾಜ್ಯದಲ್ಲಿ ತೆನ್ನಿರಾ ಮೈನಾ ಸೇರಿದಂತೆ 15 ಮುಖಂಡರನ್ನು ರಾಜ್ಯ ಕೋರ್ ಸಮಿತಿಯ ಸದಸ್ಯರನ್ನಾಗಿ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.

Read More

ಕುಶಾಲನಗರ ಏ.2 NEWS DESK :  ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸ್ಥಳೀಯ ಆಡಳಿತಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಕುಶಾಲನಗರದ ಶಾಸಕರ ಕಚೇರಿಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ  ಅಗತ್ಯ ಇರುವಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ ಸಂಬಂಧಿಸಿದ ಪುರಸಭೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾವೇರಿ ಮತ್ತು ಹಾರಂಗಿ ಸಂಗಮ ಬಳಿ ಈಗಾಗಲೇ ಸರ್ಕಾರದ ಮೂಲಕ 40 ಕೋಟಿ ರೂ. ಯೋಜನೆಯನ್ನು ರೂಪಿಸಲಾಗಿದ್ದು ಕಾಮಗಾರಿ ನಡೆಯುತ್ತಿದೆ. ಈ ಯೋಜನೆ ಮೂಲಕ ಕುಶಾಲನಗರ ಮತ್ತು ಸುತ್ತಮುತ್ತ ಗ್ರಾಮಗಳ ಜನತೆಗೆ 24*7 ಕಾಲ ನಿರಂತರ ನೀರು ಒದಗಿಸುವ ಕಾರ್ಯ ನಡೆಯಲಿದೆ ಎಂದು ಹೇಳಿದರು. ಮುಂದಿನ ವರ್ಷ ಈ ಯೋಜನೆ ಪೂರ್ಣಗೊಂಡು ಲೋಕಾರ್ಪಣೆ ಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳ…

Read More

ಕುಶಾಲನಗರ ಏ.2 NEWS DESK :   ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಹಾರಂಗಿ ನೀರಾವರಿ ಅಚ್ಚುಕಟ್ಟು ಪ್ರದೇಶದ ತೊರೆನೂರು, ಶಿರಂಗಾಲ, ಹುಲುಸೆ, ಮಣಜೂರು, ಕೂಡ್ಲೂರು ಮುಂತಾದ ಗ್ರಾಮಗಳಲ್ಲಿ  ನಡೆದ ಹೊಸ ವರ್ಷದ ಆರಂಭ ದಿನವಾದ ಯುಗಾದಿ ಹಬ್ಬದ ಸಂದರ್ಭದಲ್ಲಿ ರೈತರು ಜಾನುವಾರುಗಳೊಂದಿಗೆ ಹೊನ್ನಾರು ಉತ್ಸವದ ಮೂಲಕ ಹೊನ್ನಾರು (ಚಿನ್ನದ ಉಳುಮೆ) ಉಳುಮೆ ಆರಂಭಿಸಿದರು.  ಹೊಸ ಪಂಚಾಂಗದ ಪ್ರಕಾರ ತೊರೆನೂರು ಗ್ರಾಮದಲ್ಲಿ ರೈತ ಟಿ.ಎಸ್.ಗಣೇಶ್ ಹಾಗೂ ಶಿರಂಗಾಲ ಗ್ರಾಮದಲ್ಲಿ ಗಂಗಾ ಎಂಬ ರೈತ ಆಯಾ ಗ್ರಾಮದ ದೇವರ ಜಮೀನಿನಲ್ಲಿ ಮೊದಲ ಉಳುಮೆ ಆರಂಭಿಸಿದರು. ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಬಯಲುಸೀಮೆಯ ಹಾರಂಗಿ ನೀರಾವರಿ ಅಚ್ಚುಕಟ್ಟು ಪ್ರದೇಶದ ತೊರೆನೂರು,  ಶಿರಂಗಾಲ, ಹುಲುಸೆ, ಕೂಡ್ಲೂರು ಗ್ರಾಮಗಳಲ್ಲಿ ಭಾನುವಾರ ( ಮಾರ್ಚ್ 30 ರಂದು )  ನೂತನ ಸಂವತ್ಸರ ಹೊಸ ವರ್ಷ ಯುಗಾದಿ ಹಬ್ಬದ ಅಂಗವಾಗಿ ರೈತರು  ಗ್ರಾಮೀಣ  ಜನಪದ ಸಂಸ್ಕೃತಿಯ ಪ್ರತೀಕವಾದ ಹೊನ್ನಾರು ಉತ್ಸವ (ಚಿನ್ನದ ಉಳುಮೆ)ವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಯುಗಾದಿ ಹಬ್ಬವು ಗ್ರಾಮೀಣ ಪ್ರದೇಶದ ರೈತರ…

Read More

ಸೋಮವಾರಪೇಟೆ ಏ.2 NEWS DESK : ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ, ಮಹಾನಗರ ಪಾಲಿಕೆಯಲ್ಲಿ ಅಲ್ಪಸಂಖ್ಯಾಯತರ ಕಾಲನಿ ಅಭಿವೃದ್ಧಿ ಯೋಜನೆ, ಅಲ್ಪ ಸಂಖ್ಯಾಯತರ ವಿವಿಧ ಸಮುದಾಯಗಳ ಅಭಿವೃದ್ಧಿ ಯೋಜನೆಯಲ್ಲಿ ಬಜೆಗುಂಡಿ ಕಾಲೋನಿಯಲ್ಲಿ ರೂ.47.50ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಾಂಕ್ರಿಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬೇಳೂರು ಗ್ರಾ.ಪಂ ಅಧ್ಯಕ್ಷೆ ಪಾರ್ವತಿ, ವಲಯ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಕುಮಾರ್, ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್, ಪಕ್ಷದ ಪ್ರಮುಖರಾದ ಸುರೇಂದ್ರ, ಕೆ.ಎ.ಪ್ರಕಾಶ್, ಅಬ್ದುಲ್ ರಜಾಕ್, ಸುನಿಲ್, ಲಾರೆನ್ಸ್, ಅಶ್ರಪ್, ಪಿಡಿಒ ಮೋಹನ್ ಇದ್ದರು.

Read More

ಮಡಿಕೇರಿ NEWS DESK ಏ.1 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.1 ರಿಂದ ಏ.13 ರವರೆಗೆ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ಕ್ರಿಕೆಟ್ ಪಂದ್ಯಾವಳಿ ಇಂದು ಉದ್ಘಾಟನೆಗೊಂಡಿತು. ಮೊದಲ ದಿನದ ಪಂದ್ಯಾವಳಿಯಲ್ಲಿ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಕೂರ್ಗ್ ಬ್ಲಾಸ್ಟರ್ಸ್ ತಂಡಗಳು ಗೆಲುವು ದಾಖಲಿಸಿದವು. ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಎಂ.ಟಿ.ಬಿ ರಾಯಲ್ಸ್ ತಂಡಗಳ ನಡುವೆ ನಡೆದ ರೋಚಕ ಪಂದ್ಯದಲ್ಲಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 158 ರನ್ ಗಳಿಸುವ ಮೂಲಕ ವೆಸ್ಟರ್ನ್ ಘಾಟ್ ವಾರಿಯರ್ ತಂಡ ಭರ್ಜರಿ ಗೆಲುವು ಸಾಧಿಸಿತು. ಎಂಟಿಬಿ ರಾಯಲ್ಸ್ ತಂಡ 20 ಓವರ್ ಗಳಲ್ಲಿ7 ವಿಕೆಟ್ ನಷ್ಟಕ್ಕೆ 129 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಟಾಸ್ ಗೆದ್ದ ಎಂ.ಟಿ.ಬಿ ರಾಯಲ್ಸ್ ತಂಡ ಬೌಲಿಂಗ್ ಅನ್ನು ಆಯ್ಕೆ ಮಾಡಿಕೊಂಡಿತು. ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್ ನ ಚೋನಿರ ಅಯ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್…

Read More

ಮಡಿಕೇರಿ ಏ.1 NEWS DESK : ಮುದ್ದಂಡ ಕಪ್ ಹಾಕಿ ಉತ್ಸವ : ಏ.1 ರಂದು ನಡೆದ ಪಂದ್ಯಾವಳಿಯ ವಿಜೇತ ತಂಡಗಳ ವಿವರ >> ಕೋಡಿರ ಮತ್ತು ಕೊಡಂದೇರ ತಂಡ >> ವಾಕ್ ಓವರ್ ನಲ್ಲಿ ಕೋಡಿರ ತಂಡ ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು. ಮೈದಾನ 1 :: ಮಂಗೇರಿರ ಮತ್ತು ಅಕ್ಕಪಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಕ್ಕಪಂಡ ತಂಡ ಗೆಲುವು ದಾಖಲಿಸಿತು. ತಂಡದ ಪರ ಪುತ್ತು ಅಯ್ಯಪ್ಪ ಗೋಲು ದಾಖಲಿಸಿದರು. ಡೆನ್ನಿ ಗಣಪತಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಮರುವಂಡ ಮತ್ತು ಮಾಣಿಪಂಡ ತಂಡಗಳ ನಡುವಿನ ಪಂದ್ಯದಲ್ಲಿ ಮಾಣಿಪಂಡ ತಂಡ 4-3 ಗೋಲುಗಳ ಅಂತರದಲ್ಲಿ ಗೆಲುವು ದಾಖಲಿಸಿತು. ಮಾಣಿಪಂಡ ತಂಡದ ದೀಪು ಗಣಪತಿ, ಬೋಪಣ್ಣ, ಬಬಿನ್ ಬೆಳ್ಯಪ್ಪ ಹಾಗೂ ಸಂಪತ್ ತಲಾ 1 ಗೋಲು ದಾಖಲಿಸಿದರು. ಮರುವಂಡ ತಂಡದ ಭವಿಷ್ ಮಾದಪ್ಪ 2 ಹಾಗೂ ಧವನ್ ಬೋಪಣ್ಣ 1 ಗೋಲು ಬಾರಿಸಿದರು. ಧವನ್ ಬೋಪಣ್ಣ ಮ್ಯಾನ್…

Read More