ಲೇಖಕ: admin

ಮಡಿಕೇರಿ ಏ.26 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12 ರಾಜಸೀಟ್ ಫೀಡರ್‍ನಲ್ಲಿ ಏ.29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮಂಗಳೂರು ರಸ್ತೆ, ತಾಳತ್ಮನೆ, ಡಿ.ಸಿ ಕಚೇರಿ, ರಾಜಸೀಟ್ ರಸ್ತೆ, ರೇಸ್‍ಕೋರ್ಸ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿನಗರ, ಸ್ಟೋನ್ ಹಿಲ್, ಎಲ್.ಐ.ಸಿ ರಸ್ತೆ, ಹೊಸ ಬಡಾವಣೆ, ರಿಮೈಂಡ್ ಹೋಮ್ ಹಿಂಭಾಗ, ಡೈರಿ ಫಾರಂ, ಎಫ್.ಎಂ.ಸಿ ಕಾಲೇಜು ರಸ್ತೆ, ಕನ್ನಿಕಾ ಬಡಾವಣೆ, ಮೈತ್ರಿ ಜಂಕ್ಷನ್, ವಿದ್ಯಾನಗರ, ಮುಳಿಯ ಬಡಾವಣೆ, ಹಿಮವನ ಬಡಾವಣೆ, ಕೋರ್ಟ್ ರಸ್ತೆ, ಜಿಲ್ಲಾ ಪಂಚಾಯತ್ ಕಟ್ಟಡ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಏ.26 NEWS DESK : ಕೊಡವ ಸಮುದಾಯ ಅತ್ಯಂತ ಚಿಕ್ಕ ಸಮುದಾಯವಾಗಿದ್ದು, ಕೊಡವ ಜನಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ. ಕೊಡವ ಕುಟುಂಬ ತಂಡಗಳ ನಡುವಿನ ಮುದ್ದಂಡ ಕಪ್ ಹಾಕಿ ಉತ್ಸವದ ಸೆಮಿಫೈನಲ್ ಪಂದ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ಕೊಡವ ಕುಟುಂಬಗಳು ಕನಿಷ್ಟ ಮೂರು ಮಕ್ಕಳನ್ನಾದರು ಹೊಂದುವ ಮೂಲಕ ಕೊಡವ ಜನಾಂಗದ ಅಭ್ಯುದಯಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಕೊಡಗಿನ 1176 ಕೊಡವ ಕುಟುಂಬಗಳ ಪೈಕಿ 396 ಕುಟುಂಬ ತಂಡಗಳು ಕೌಟುಂಬಿಕ ಹಾಕಿ ಉತ್ಸವದಲ್ಲಿ ಪಾಲ್ಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಹಾಕಿ ಉತ್ಸವದೊಂದಿಗೆ ಸಮುದಾಯದ ಸಂಘಟನೆಯೊಂದಿಗೆ, ಕೊಡಗಿನ ಉಜ್ವಲ ಭವಿಷ್ಯಕ್ಕಾಗಿ ಇತರ ಎಲ್ಲಾ ಸಮಾಜ ಬಾಂಧವರೊಂದಿಗೆ ಸೌಹಾರ್ದತೆಯಿಂದ ಮುನ್ನಡೆಯೋಣವೆಂದು ತಿಳಿಸಿದರು. ಮುದ್ದಂಡ ಕಪ್ ಹಾಕಿ ಉತ್ಸವದ ಗೌರವಾಧ್ಯಕ್ಷ ಮುದ್ದಂಡ ದೇವಯ್ಯ ಅವರು ಮಾತನಾಡಿ, ಬೆಳ್ಳಿ ಹಬ್ಬದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಉತ್ಸವದ ಆರಂಭದಲ್ಲೆ ಮೆರಥಾನ್…

Read More

ಮಡಿಕೇರಿ ಏ.26 NEWS DESK : ಶಿಕ್ಷಣದ ಗುರಿ ಕೇವಲ ಅಂಕಗಳಿಗೆ, ರ್ಯಾಂಕ್ ಗಳಿಕೆಗೆ ಸಿಮೀತವಾಗಬಾರದು. ಅದರ ಜೊತೆಯಲ್ಲಿ ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಮತ್ತು ದೇಶಕ್ಕೆ ಅಮೂಲ್ಯ ಸಂಪತ್ತಾಗಿ ಪರಿವರ್ತನೆಯಾಗಬೇಕು. ಈ ರೀತಿಯ ಮಾರ್ಪಾಡು ಮಾಡುವವರು ಮತ್ತು ಹೊಂದುವವರು ನಿಜವಾದ ದೇಶಪ್ರೇಮಿಗಳು ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮಹದೇವಪೇಟೆಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದ ಸಂಪರ್ಕದ ಕೊಂಡಿಯಾಗಿರುವ ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ನ ದೊಡ್ಡ ಉದ್ದೇಶ ಯಶಸ್ವಿಯಾಗಲಿ ಎಂದು ಹಾರೈಸಿದರು. ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸರ್ವಜನಾಂಗದವರಿಗೆ ಪ್ರಯೋಜನ ಆಗಬೇಕು, ಈ ಸಂಸ್ಥೆ ಇತರರಿಗೆ ಪ್ರೇರಣೆಯಾಗಬೇಕು. ಸರ್ಕಾರದಿಂದ ಯಾವುದೇ ಸಂದರ್ಭದಲ್ಲಿ ಸಹಕಾರ ಸಿಗಲಿದೆ ಎಂದರು. ಉತ್ತಮ ಸಮಾಜ ದೇಶಕ್ಕೆ ಅತ್ಯಗತ್ಯ, ಯುವ ಜನತೆ ಶಿಕ್ಷಣದ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಮತ್ತು ಪ್ರೀತಿ, ವಿಶ್ವಾಸ ಸಂಪಾದಿಸಬೇಕು. ಸಮಾಜ ಕಟ್ಟುವುದಕ್ಕಾಗಿ ಯುವ…

Read More

ಪುತ್ತೂರು ಏ.26 NEWS DESK : ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಅಮಾಯಕ ಹಿಂದೂ ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿಯನ್ನು ಖಂಡಿಸಿ, ವಿವೇಕಾನಂದ ವಿಧ್ಯಾವರ್ಧಕ ಸಂಘ, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ ಕಾಲೇಜಿನ ಎಬಿವಿಪಿ ಘಟಕದ ಸಂಯುಕ್ತ ಆಶ್ರಯದಲ್ಲಿ ಜಾಥಾ ನಡೆಯಿತು. ಕಾಲೇಜಿನ ವಿಧ್ಯಾರ್ಥಿಗಳು, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಅವರ ಮುಂದಾಳುತ್ವದಲ್ಲಿ ಕಾಲೇಜು ಆವರಣದಿಂದ ನೆಹರೂ ನಗರದ ವರೆಗೆ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ನೆಹರೂ ನಗರದಲ್ಲಿ ವಿದ್ಯಾರ್ಥಿ ನಾಯಕರು ಘಟನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿ, ನಾವೆಲ್ಲರೂ ಒಗ್ಗಟ್ಟಾಗದೇ ಇದ್ದರೆ ಮುಂದಿನ ದಿನಗಳಲ್ಲಿ ಜೀವನ ನಡೆಸುವುದು ಕಷ್ಟವಾಗಬಹುದು, ಈ ವಿಷಯದಲ್ಲಿ ಯಾವುದೇ ರಾಜಕೀಯ ಮಾಡದೆ ಸರ್ಕಾರವು ನಡೆಸುವ ಕಾರ್ಯಾಚರಣೆಗೆ ನಮ್ಮೆಲ್ಲರ ಸಹಕಾರವನ್ನು ನೀಡೋಣ ಎಂದರು. ಧರ್ಮಾಂಧತೆಗೆ ಅವಕಾಶವನ್ನು ನೀಡದೆ ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ನಮ್ಮಿಂದಾದ ಸಹಕಾರವನ್ನು ನೀಡೋಣ ಎಂದರು. ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಎಂದು ಈ ಸಂದರ್ಭದಲ್ಲಿ…

Read More

ಮಡಿಕೇರಿ ಏ.26 NEWS DESK : ಪ್ರಾದೇಶಿಕ ಅಸಮತೋಲನ ಬಗ್ಗೆ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತ ಅಧಿಕಾರ ಸಮಿತಿ ಸದಸ್ಯರಾದ ಎಂ.ಎಚ್.ಸೂರ್ಯನಾರಾಯಣ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳ ಜತೆ ಸುಧೀರ್ಘ ಚರ್ಚೆ ನಡೆಸಿದರು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ನಂಜುಂಡಪ್ಪ ವರದಿಯಂತೆ ಜಿಲ್ಲೆ ಜಿಲ್ಲೆಗಳ ನಡುವೆ ಶಿಕ್ಷಣ, ಆರೋಗ್ಯ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ, ಕೃಷಿ, ಕೈಗಾರಿಕೆ, ಮತ್ತಿತರ ಸಂಬಂಧ ಅಸಮತೋಲನ ನಿವಾರಣೆ ಬಗ್ಗೆ ಮಾಹಿತಿ ಪಡೆದರು. ನಂಜುಂಡಪ್ಪ ವರದಿಯಂತೆ ರಾಜ್ಯದಲ್ಲಿ ಹಿಂದಿನ ಬಾಂಬೆ ಪ್ರೆಸಿಡೆನ್ಸಿ, ಹೈದರಾಬಾದ್ ಕರ್ನಾಟಕ, ಕೊಡಗು ಮತ್ತು ಹಳೇ ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿದ ಜಿಲ್ಲೆಗಳು ವಿಭಿನ್ನತೆಯಿಂದ ಕೂಡಿವೆ. ಈ ಪ್ರದೇಶದಲ್ಲೂ ಅಂತರ್ ಜಿಲ್ಲಾ ಅಸಮತೋಲನತೆ ಇವೆ ಎಂದು ನಂಜುಂಡಪ್ಪ ವರದಿ ನೀಡಿದ್ದು, ಸಮಿತಿಯು ಅಂತಹ ಅಸಮತೋಲನೆ ಹಾಗೂ ವಿಶೇಷವಾಗಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ನಡುವಿನ ಅಸಮಾನತೆ…

Read More

ಮಡಿಕೇರಿ ಏ.26 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ದೇಶದ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಮತ್ತು ಅಮಾಯಕರ ಸಾವಿಗೆ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಕಳೆದ 11 ವರ್ಷಗಳಿಂದ ಭಯೋತ್ಪಾದಕರ ದಾಳಿಯಿಂದ ಭಾರತ ಮುಕ್ತವಾಗಿಲ್ಲ. ಕೇಂದ್ರ ಸರ್ಕಾರ ಸೂಕ್ತ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಭದ್ರತಾ ಲೋಪ ಎದ್ದು ಕಾಣುತ್ತಿದ್ದು, ಗಡಿಯಲ್ಲಿ ನುಸುಳುಕೋರರು ಸುಲಭವಾಗಿ ದೇಶವನ್ನು ಪ್ರವೇಶಿಸುತ್ತಿದ್ದಾರೆ ಎನ್ನುವ ಸಂಶಯ ಮೂಡುತ್ತಿದೆ. ಕೇಂದ್ರ ಗುಪ್ತಚರ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದು ಈ ರೀತಿಯ ಘಟನೆಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜಮ್ಮು ಕಾಶ್ಮೀರ ಸೇರಿದಂತೆ ಭಾರತ ದೇಶ…

Read More

ಮಡಿಕೇರಿ  ಏ.26 NEWS DESK : ಮಕ್ಕಳಲ್ಲಿ ಶಿಸ್ತು ಸಜ್ಜನಿಕೆ ಸರಳತೆ ಬೆಳೆಯಲು ಬೇಸಿಗೆ ಶಿಬಿರಗಳು ಸಹಾಯಕಾರಿಯಾಗಿದೆ. ಮಕ್ಕಳ ಮೊದಲ ಗುರುಗಳಾಗಿರುವ ಪೋಷಕರು ಸದಾ ಮಕ್ಕಳಿಗೆ  ಸ್ಫೂರ್ತಿಯಾಗಿರಬೇಕು ಎಂದು ಹಿರಿಯ ಪತ್ರಕತ೯ ಜಿ. ಚಿದ್ವಿಲಾಸ್ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ  ಸಮಾಗಮ  ಹೆಸರಿನ  ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಚಿದ್ವಿಲಾಸ್, ಪೋಷಕರಿಂದ ಸ್ಪೂತಿ೯ ಪಡೆದ  ಮಕ್ಕಳು ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಅೂಬಿಪ್ರಾಯಪಟ್ಟರಲ್ಲದೇ,  ನೀರಿನ ಮಹತ್ವದ ಅರಿವು, ಮೊಬೈಲ್ ನ ದುಷ್ಪರಿಣಾಮ, ಪ್ಲಾಸ್ಟಿಕ್ ಬಳಕೆಯ ತೊಂದರೆಗಳ ಬಗ್ಗೆ ಪ್ರೇರಣದಾಯಕವಾದ ಮಾತುಗಳನ್ನು ಅವರು ಹೇಳಿದರು. ಗೌರವ ಅತಿಥಿಯಾಗಿ ಆಗಮಿಸಿದ  ರಾಷ್ಟ್ರೀಯ  ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಡಾ.ಪುಷ್ಪ ಕುಟ್ಟಣ್ಣ  ಮಾತನಾಡಿ ಶಾಲಾ ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಹಪಠ್ಯ ಚಟುವಟಿಕೆಗಳು ಕೂಡ ತುಂಬಾ ಅವಶ್ಯಕ ಕೊಡಗು ವಿದ್ಯಾಲಯ ಸಹ ಇದಕ್ಕೆ ಪೂರಕವಾದ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ ಎಂದು ಶ್ಲಾಘಿಸಿದರು.  ಕಳೆದ 20ದಿನಗಳಿಂದ ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಬೇಸಿಗೆ …

Read More

ಮಡಿಕೇರಿ NEWS DESK ಏ.26 : ಮಡಿಕೇರಿ ತಾಲ್ಲೂಕು ಬಿಳಿಗೇರಿ ಗ್ರಾಮದ ಶ್ರೀ ಅರ್ಧನಾರೀಶ್ವರ ದೇವಾಲಯದ ವಾರ್ಷಿಕೋತ್ಸವವು ಏ.27ರಿಂದ ಮೇ1ರ ವರೆಗೆ ನಡೆಯಲಿದೆ. ಉತ್ಸವದ ಅಂಗವಾಗಿ ಏ.27ರ ಆದಿತ್ಯವಾರ ಬೆಳಿಗ್ಗೆ 6.30ಗಂಟೆಗೆ ಬೊಟ್ಲಪ್ಪ ದೇವಾಲಯದಿಂದ ತೀರ್ಥ ತರುವುದು, ಗಣಪತಿ ಹೋಮ, ದೇವರಿಗೆ ಅಭಿಷೆೆÃಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6ಗಂಟೆಗೆ ದೇವರ ಭಂಡಾರ ತರುವುದು, ದೇವರು ಬಲಿಬರುವುದು, ಬೆಳಕು, ಅನ್ನಸಂತರ್ಪಣೆ ನಡೆಯಲಿದೆ. ಏ.28ರ ಸೋಮವಾರ ಬೆಳಿಗ್ಗೆ 5 ಗಂಟೆಗೆ ದೇವರು ನೃತ್ಯ ಬಲಿ ಬರುವುದು, 10 ಗಂಟೆಗೆ ಹಬ್ಬದ ಕಟ್ಟು ಮುರಿಯುವುದು, ಮಹಾಪೂಜೆ, ದೇವರ ನೆರಪು ಬಲಿ ಬರುವುದು, ವಸಂತಪೂಜೆ, ದೇವರ ಶಯನ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4 ಗಂಟೆಗೆ ದೇವರ ಜಳಕ ಕಾರ್ಯ ನಡೆಯಲಿದೆ. ಬಳಿಕ ದೇವರ ನೃತ್ಯ ಬಲಿ ನಡೆಯಲಿದ್ದು, ನಂತರ ಅನ್ನಸಂತರ್ಪಣೆಯಾಗಲಿದೆ. ಏ.29ರ ಮಂಗಳವಾರ ಬೆಳಗ್ಗೆ 10ಗಂಟೆಗೆ ಶುದ್ಧ ಕಲಶ, ಮಹಾಪೂಜೆ, ಅನ್ನಸಂತರ್ಪಣೆ. ಏ.30ರÀ ಬುಧವಾರ ಸಂಜೆ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ತೋತಬರುವುದು, ಮೇಲೇರಿಗೆ ಅಗ್ನಿ ಸ್ಪರ್ಶ ನಡೆಯಲಿದೆ.…

Read More

ಮಡಿಕೇರಿ NEWS DESK ಏ.26 : ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ನಮ್ಮ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು. ನಗರದ ಮಹದೇವಪೇಟೆಯಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಕರೆ ನೀಡಿದರು. ಉಮ್ಮತ್ ಒನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ.ಬಿ.ಬಶೀರ್, ಪ್ರಧಾನ ಕಾರ್ಯದರ್ಶಿ ಪಿ.ಕೆ.ಖಾಲಿದ್, ಕೋಶಾಧಿಕಾರಿ ಅಬ್ದುಲ್ ಹಮೀದ್ ಫೈಝಿ, ಟ್ರಸ್ಟಿಗಳಾದ ಎಂ.ಯು.ಅಬ್ದುಲ್ ಮಜೀದ್, ಕೆ.ಎಂ.ಹನೀಫ್ ಹಾಗೂ ಒ.ಹೆಚ್.ಸಿದ್ಧಿಕ್ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಏ.25 NEWS DESK : ಹಾಕಿ ಪ್ರೇಮಿಗಳನ್ನು ಸೂಜಿಗಲ್ಲಿನಂತೆ ತನ್ನತ್ತ ಸೆಳೆಯುತ್ತಿರುವ ಮುದ್ದಂಡ ಕಪ್ ಹಾಕಿ ಉತ್ಸವ ಕುತೂಹಲಕಾರಿ ಘಟ್ಟವನ್ನು ಪ್ರವೇಶಿಸಿದೆ. ಶುಕ್ರವಾರದ ರೋಚಕ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ನೆಲ್ಲಮಕ್ಕಡ, ಮಂಡೇಪಂಡ, ಚೇಂದಂಡ ಮತ್ತು ಕುಪ್ಪಂಡ ತಂಡಗಳು ಸೆಮಿಫೈನಲ್ ಹಂತವನ್ನು ಪ್ರವೇಶಿಸಿವೆ. ತೀವ್ರ ಪೈಪೋಟಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನೆಲ್ಲಮಕ್ಕಡ ತಂಡ 3-1 ಗೋಲುಗಳ ಅಂತರದಿಂದ ಬಲಿಷ್ಠ ಕೂತಂಡ ತಂಡದ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್ ಹಂತಕ್ಕೇರಿತು. ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ನೆಲ್ಲಮಕ್ಕಡ ತಂಡದ ವೀಕ್ಷಿತ್ ಸೋಮಯ್ಯ ಒಂದು ಗೋಲು ಗಳಿಸಿದರೆ, ಸಚಿನ್ 2 ಸೊಗಸಾದ ಗೋಲುಗಳನ್ನು ಬಾರಿಸಿ ತಂಡದ ಗೆಲುವನ್ನು ಖಾತರಿ ಪಡಿಸಿದರು. ಎದುರಾಳಿ ಕೂತಂಡ ಪರವಾಗಿ ಸಜನ್ ದೇವಯ್ಯ ಅವರು ಒಂದು ಗೋಲನ್ನಷ್ಟೆ ಗಳಿಸಲು ಶಕ್ತರಾದರು. ಪಂದ್ಯದಲ್ಲಿ ಕೂತಂಡ ಬೋಪಣ್ಣ ಪಂದ್ಯ ಪುರುಷೋತ್ತಮ ಗೌರವವನ್ನು ಪಡೆದುಕೊಂಡರು. ಮಂಡೇಪಂಡ-ಕರವಂಡ-ದ್ವಿತೀಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಂಡೇಪಂಡ ತಂಡ 6-0 ಗೋಲುಗಳ ಭಾರೀ ಅಂತರದಿಂದ ಕರವಂಡ ತಂಡವನ್ನು…

Read More