ಲೇಖಕ: admin

ಮಡಿಕೇರಿ NEWS DESK ಏ.25 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಹಾಗೂ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೌಸರ್ ಎಂ.ಬಿ ಅವರು ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರುಗಳು ಉಗ್ರರ ದಾಳಿಯಲ್ಲಿ ಅಸುನೀಗಿರುವ 26 ಅಮಾಯಕ ಜೀವಗಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಭಯೋತ್ಪಾದಕರ ನಾಶವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ ಮತ್ತು ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕೇಂದ್ರ ಸರ್ಕಾರ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ. ಮಾನವೀಯತೆಯ ನೆಲೆಗಟ್ಟಿನಲ್ಲಿ ಶಾಂತಿ, ಸಹಬಾಳ್ವೆಯ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿರುವ ಭಾರತೀಯರ ಒಗ್ಗಟ್ಟಿನ ಬೆಳವಣಿಗೆಯನ್ನು ಸಹಿಸದ ದೇಶದ್ರೋಹಿಗಳು ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇದನ್ನು ವಿಫಲಗೊಳಿಸಲು ಕೇಂದ್ರ ಸರ್ಕಾರ ಹಾಗೂ ಗುಪ್ತಚರ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು.…

Read More

*ಮುದ್ದಂಡ ಹಾಕಿ ಉತ್ಸವ  :  ಏ.24 ರಂದು ನಡೆದ 5’ಎ ಸೈಡ್ ಮಹಿಳಾ ಕ್ವಾಟರ್ ಫೈನಲ್-ಸೆಮಿ ಫೈನಲ್ ಪಂದ್ಯಾವಳಿಯ ವಿಜೇತರ ವಿವರ : ಕಂಬೀರಂಡ ಮತ್ತು ಕೇಚೆಟ್ಟಿರ ಫೈನಲ್ಸ್ ಗೆ* *ಮೈದಾನ 2* *ಕ್ವಾಟರ್ ಫೈನಲ್ * ಕಾಂಡಂಡ ಮತ್ತು ಕೇಚೆಟ್ಟಿರ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಕೇಚೆಟ್ಟಿರ ಜಯ ಸಾಧಿಸಿತು. ಕೇಚೆಟ್ಟಿರ ಪರ ತೇಜಸ್ವಿ 2 ಹಾಗೂ ಲಕ್ಷ್ಯ 1 ಗೋಲು ದಾಖಲಿಸಿದರು. ಕಾಂಡಂಡ ನೇಹಾ ಅಪ್ಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಟ್ಟಂಡ (ಮಾದಾಪುರ) ಮತ್ತು ಕುಪ್ಪಂಡ (ಕೈಕೇರಿ) ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 2-0 ಗೋಲುಗಳ ಅಂತರದಲ್ಲಿ ಕುಪ್ಪಂಡ ತಂಡ ಜಯ ಸಾಧಿಸಿತು. ಕುಟ್ಟಂಡ ಚುಪ್ಪಿ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಂಬೀರಂಡ ಮತ್ತು ಚೆಯ್ಯಂಡ ನಡುವಿನ ಪಂದ್ಯದಲ್ಲಿ 9-1 ಗೋಲುಗಳ ಅಂತರದಲ್ಲಿ ಕಂಬೀರಂಡ ಗೆಲುವು ದಾಖಲಿಸಿತು. ಕಂಬೀರಂಡ ಪರ…

Read More

*ಮೈದಾನ 1* ಬೆಳಿಗ್ಗೆ 9.30 ಗಂಟೆಗೆ ನೆಲ್ಲಮಕ್ಕಡ ಮತ್ತು ಕೂತಂಡ,  11 ಗಂಟೆಗೆ ಮಂಡೇಪಂಡ ಮತ್ತು ಕರವಂಡ , ಮಧ್ಯಾಹ್ನ 12.30 ಗಂಟೆಗೆ  ಚೆಪ್ಪುಡಿರ ಮತ್ತು ಚೇಂದಂಡ, 2.30 ಗಂಟೆಗೆ ಕುಪ್ಪಂಡ (ಕೈಕೇರಿ) ಮತ್ತು ಪುದಿಯೊಕ್ಕಡ

Read More

ಮಡಿಕೇರಿ ಏ.24 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ವತಿಯಿಂದ ಇದೇ ಪ್ರಥಮ ಬಾರಿಗೆ ಜಿಲ್ಲಾ ಕುಲಾಲ ಕುಂಬಾರ ಬಾಂಧವರಿಗಾಗಿ ಆಯೋಜಿಸಲಾಗಿರುವ ಕ್ರೀಡೋತ್ಸವ ಹಾಗೂ ಸಮ್ಮಿಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಮಡಿಕೆ ತಯಾರಕರ ಸಹಕಾರ ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಕುಲಾಲ ಕುಂಬಾರ ಬಾಂಧವರ ಸಂಘಟನೆಗಾಗಿ ಏ.26 ಮತ್ತು 27 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಕೆಳಗಿನ ಮೈದಾನದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಮಾಜ ಬಾಂಧವರು ಮಕ್ಕಳಾದಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ. ಈಗಾಗಲೇ ಸಂಘಟನೆ ವತಿಯಿಂದ ಪ್ರತಿ ಮನೆಮನೆಗಳಿಗೆ ತೆರಳಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಲಾಗಿದೆ. ಸಮಾಜ ಬಾಂಧವರು ಈ ವಿನೂತನ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದು, ಕ್ರೀಡಾಕೂಟ ಮತ್ತು ಸಮ್ಮಿಲನ ಕಾರ್ಯಕ್ರಮ ಸಂಭ್ರಮದಿಂದ ನಡೆಯಲಿದೆ. ಕುಲಾಲ…

Read More

ಮಡಿಕೇರಿ NEWS DESK ಏ.24 : ಹಿರಿಯ ಕಾಂಗ್ರೆಸ್ ಮುಖಂಡ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಅವರು (83) ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಯಶಿಕಾ, ಪುತ್ರಿಯರಾದ ಕಾವ್ಯ ಹಾಗೂ ಕೃತಿಯನ್ನು ಅಗಲಿದ್ದಾರೆ. ಏ.25ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಿಟ್ಟು ಚಂಗಪ್ಪ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ಮಿಟ್ಟು ಚಂಗಪ್ಪ ಅವರು ಕಳೆದ 5 ದಶಕಗಳಿಂದ ರಾಜಕೀಯದಲ್ಲಿದ್ದು, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದರು. ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಸಚಿವ ದಿನೇಶ್ ಗುಂಡೂರಾವ್, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಮುಖರು ಮತ್ತಿತರರು ಸಂತಾಪ ಸೂಚಿಸಿದ್ದಾರೆ. 32 ಚುನಾವಣೆಗಳಲ್ಲಿಯೂ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡಿ ಮತದಾನ ಜಾಗೃತಿಯ ರಾಯಭಾರಿಯಂತೆ ಗಮನಸೆಳೆದಿದ್ದ ಮಿಟ್ಟುಚಂಗಪ್ಪ…

Read More

ಮಡಿಕೇರಿ ಏ.24 NEWS DESK : ಚಿಕ್ಕ ಅಳುವಾರದ ಕೊಡಗು ವಿವಿಯ ಜ್ಞಾನ ಕಾವೇರಿ ಆವರಣದಲ್ಲಿ ಏ.28 ರಂದು ‘ಸಮಗ್ರ-ಸಮತೆಯೆಡೆಗೆ ಸಾಹಿತ್ಯ’ ವಿಷಯದ ಮೇಲೆ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ಅಹಿಂದ ಸ್ಥಾಪಕ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವ ವಿದ್ಯಾನಿಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಮತ್ತು ಅಹಿಂದ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್‍ರವರ 134ನೇ ಜನ್ಮದಿನದ ಅಂಗವಾಗಿ  ವಿಚಾರ ಸಂಕಿರಣವನ್ನು ನಡೆಸುತ್ತಿರುವುದಾಗಿ ತಿಳಿಸಿದರು. ರಾಷ್ಟ್ರೀಯ ವಿಚಾರ ಸಂಕಿರಣವನ್ನು ಅಂದು ಬೆಳಗ್ಗೆ 10 ಗಂಟೆಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ವಿವಿ ಕುಲಪತಿಗಳಾದ ಡಾ. ಅಶೋಕ ಸಂಗಪ್ಪ ಆಲೂರ ವಹಿಸಲಿದ್ದಾರೆ. ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ವಿವಿ ಕುಲ ಸಚಿವರಾದ…

Read More

ಮಡಿಕೇರಿ ಏ.24 NEWS DESK : ಕೊಡಗು ಜಿಲ್ಲಾ ಕುಲಾಲ(ಕುಂಬಾರ) ಸಂಘದ ವತಿಯಿಂದ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕ ಸಹಯೋಗದೊಂದಿಗೆ ಸಮಾಜ ಬಾಂಧವರ ಸಮ್ಮಿಲನ ಮತ್ತು ಕ್ರೀಡೋತ್ಸವ ಏ.26 ಮತ್ತು 27 ರಂದು ಮಡಿಕೇರಿಯ ನಡೆಯಲಿದೆ ಎಂದು ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್ ಕುಲಾಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬಾರ ಬಾಂಧವರ ಸಂಘಟನೆಗಾಗಿ ಪ್ರಪ್ರಥಮ ಬಾರಿಗೆ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜನಾಂಗಬಾಂಧವರ ಸಮ್ಮಿಲನ ಮತ್ತು ಕ್ರೀಡಾಕೂಟಕ್ಕೆ 5000ಕ್ಕೂ ಅಧಿಕ ಸಂಖ್ಯೆಯಲ್ಲಿ ಸಮಾಜಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು. ಏ.26ರಂದು ಬೆಳಗ್ಗೆ 6.30 ಗಂಟೆಗೆ ನಗರದ ಓಂಕಾರೇಶ್ವ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಕ್ರೀಡಾಜ್ಯೋತಿಗೆ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಚಾಲನೆ ನೀಡಲಿದ್ದು, 7 ಗಂಟೆಗೆ ಪುರುಷರ ಕ್ರಿಕೆಟ್ ಪಂದ್ಯಾವಳಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು. ಏ.27ರಂದು ಸಂಜೆ 4 ಗಂಟೆಗೆ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ…

Read More

ಮಡಿಕೇರಿ NEWS DESK ಏ.24 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ 26 ಮಂದಿಯ ಸಾವಿಗೆ ಕಾರಣಕರ್ತರಾದ ಭಯೋತ್ಪಾದಕರ ವಿರುದ್ಧ ಕಠಿಣ ಕಾರ್ಯಾಚರಣೆ ನಡೆಸುವ ಮೂಲಕ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯ ಕೆ.ಎ.ಯಾಕುಬ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿರುವ ಘಟನೆ ಅತೀವ ಬೇಸರವನ್ನುಂಟು ಮಾಡಿದೆ. ಹೇಡಿತನದ ಭಯೋತ್ಪಾದಕರು ನಡೆಸಿರುವ ಹೇಯ ಕೃತ್ಯವನ್ನು ಕಟುವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ. ಉಗ್ರರ ಬೇಟೆಗಾಗಿ ಭಾರತೀಯ ಸೇನೆ ಈಗಾಗಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ. ಕೇಂದ್ರ ಸರ್ಕಾರ ಕೂಡ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಕೇಂದ್ರ ಗುಪ್ತಚರ ಇಲಾಖೆ ಕಟ್ಟೆಚ್ಚರ ವಹಿಸಬೇಕು. ದೇಶದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ದುಷ್ಟಶಕ್ತಿಗಳ ವಿರುದ್ಧ ಜನರು ಕೂಡ ಜಾಗೃತರಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದು. ದೇಶದ…

Read More

ಮಡಿಕೇರಿ ಏ.24 NEWS DESK : ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏ.26 ರಂದು ಮಡಿಕೇರಿಯಲ್ಲಿ ನಮ್ಮ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಉಮ್ಮತ್ ಒನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ.ಬಿ.ಬಶೀರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ ನಗರದ ಮಹದೇವ ಪೇಟೆಯಲ್ಲಿಯಲ್ಲಿರುವ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿದ ನಂತರ 10.30 ಗಂಟೆಗೆ ಕಾವೇರಿ ಹಾಲ್‍ನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್, ಕಣಚೂರು ಗ್ರೂಫ್ ಆಫ್ ಇಂಡಸ್ಟ್ರಿಸ್‍ನ ಅಧ್ಯಕ್ಷ ಡಾ.ಯು.ಕೆ.ಮೋನುಹಾಜಿ, ದಕ್ಷಿಣ ಕನ್ನಡ ನಿವೃತ್ತ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ, ಭಾರಧಿಯಾರ್ ಯುನಿವರ್ಸಿಟಿಯ…

Read More

ಮಡಿಕೇರಿ NEWS DESK ಏ.24 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ನಡೆಸಿರುವ ಅಮಾನವೀಯ ಕೃತ್ಯ ಖಂಡನೀಯವೆಂದು ಮೇಕೇರಿ ಗ್ರಾ.ಪಂ ಸದಸ್ಯ ಹಾಗೂ ಹಾಕತ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷ ಎಂ.ಯು.ಹನೀಫ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿರುವ ದಾಳಿ ಹೇಡಿತನದ ದುಷ್ಕೃತ್ಯವಾಗಿದೆ. ಕೇಂದ್ರ ಸರ್ಕಾರ ವಿಳಂಬ ಮಾಡದೆ ದುಷ್ಟರ ವಿರುದ್ಧ ಸಮರ ಸಾರಬೇಕು ಎಂದು ಒತ್ತಾಯಿಸಿದ್ದಾರೆ. ಉಗ್ರರ ಗುಂಡಿಗೆ ಬಲಿಯಾದವರ ಆತ್ಮಕ್ಕೆ ಶಾಂತಿ ಕೋರುತ್ತೇವೆ, ಪ್ರವಾಸಿಗರ ಸಾವಿಗೆ ನ್ಯಾಯ ಸಿಗಬೇಕಾದರೆ ದುಷ್ಕರ್ಮಿಗಳು ನಾಶವಾಗಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಭಯೋತ್ಪಾದಕರನ್ನು ಸದೆಬಡಿಯಲು ರಾತ್ರಿ ಹಗಲೆನ್ನದೆ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತೀಯ ಯೋಧರ ಬಗ್ಗೆ ನಮಗೆ ಹೆಮ್ಮೆ ಇದೆ. ದೇಶದ್ರೋಹಿಗಳ ವಿರುದ್ಧ ಸರ್ಕಾರ ಮತ್ತು ಜನ ಎಚ್ಚೆತ್ತುಕೊಳ್ಳಬೇಕಾಗಿದೆ. ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ದೇಶದ ಭದ್ರತೆಗೆ ಸಹಕರಿಸಬೇಕು ತಿಳಿಸಿದ್ದಾರೆ. ದೇಶದಲ್ಲಿ ನಿಯಮಬಾಹಿರವಾಗಿ ನೆಲೆಸಿರುವ ವಿದೇಶಿಯರ ಬಗ್ಗೆ ನಿಗಾ ವಹಿಸಬೇಕು ಮತ್ತು…

Read More