*ಕೊಡಗಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು*
ಲೇಖಕ: admin
*ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು… ಯುಗಾದಿ ಹಬ್ಬ ಸರ್ವರಿಗೂ ಶುಭ ದಿನಗಳನ್ನೇ ತರಲಿ*
*ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಸರ್ವರಿಗೂ ಸುಖ, ಶಾಂತಿ, ಸಮೃದ್ಧಿ ಸಿಗಲಿ… ಮಳೆ ಬೆಳೆಯಾಗಿ ನಾಡಿಗೆ ಒಳಿತಾಗಲಿ*
*ಹೊಸ ವರ್ಷ ಯುಗಾದಿ ಎಲ್ಲರ ಜೀವನದಲ್ಲಿ ಹೊಸ ಭರವಸೆಗಳನ್ನು ಮೂಡಿಸಲಿ. ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು*
*ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು… ಬೇವು ಬೆಲ್ಲದಂತೆ ನೋವು ನಲಿವು ಬೆರೆಯಲಿ, ಶಾಂತಿ, ಸಮೃದ್ಧಿ, ಸಂತೋಷದ ಬದುಕು ನಿಮ್ಮದಾಗಲಿ*
*ಯುಗಾದಿ ಹಬ್ಬ ಸರ್ವರಿಗೂ ಒಳಿತು ಮಾಡಲಿ, ನಾಡು ಸಮೃದ್ಧಿಯಾಗಲಿ, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು*
*ಹೊಸ ಭರವಸೆ, ಹೊಸ ಚಿಂತನೆ… ಆತ್ಮ ವಿಶ್ವಾಸದ ಬದುಕು… ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು*
*ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ… ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಯುಗಾದಿಯ ಹಾರ್ದಿಕ ಶುಭಾಶಯಗಳು. ಹೊಸ ವರ್ಷ ಸರ್ವರಿಗೂ ಹರುಷವನ್ನು ತರಲಿ, ನಾಡಿಗೆ ಒಳಿತಾಗಲಿ (ತೇಲಪಂಡ ಶಿವಕುಮಾರ್ ನಾಣಯ್ಯ, ಪ್ರಧಾನ ಸಂಚಾಲಕರು, ಸಾಮಾಜಿಕ ಜಾಲತಾಣ, ಕೊಡಗು ಜಿಲ್ಲಾ ಬಿಜೆಪಿ)*
ಮಡಿಕೇರಿ ಮಾ.29 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ಕ್ರಿಕೆಟ್ ಪಂದ್ಯಾವಳಿ ಏ.1 ರಿಂದ ಏ.13 ರವರೆಗೆ ಪಾಲಿಬೆಟ್ಟದಲ್ಲಿ ನಡೆಯಲಿದೆ. ಪಾಲಿಬೆಟ್ಟದ ಟಾಟಾ ಕಾಫಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಟಾಟಾ ಕಾಫಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಪಿ.ಎ.ಮಂದಣ್ಣ, ಕೂರ್ಗ್ ಎಜುಕೇಶನ್ ಫಂಡ್ ನ ಅಧ್ಯಕ್ಷ ಸಿ.ಎ.ಮುತ್ತಣ್ಣ, ಟಾಟಾ ಕಾಫಿ ಲಿಮಿಟೆಡ್ ನ ಹಿರಿಯ ಪ್ರಧಾನ ವ್ಯವಸ್ಥಾಪಕ ಕೆ.ಜಿ.ರಾಜೀವ್, ಕಾಫಿ ಲಿಮಿಟೆಡ್ ನ ಅರಣ್ಯ ಸಂಪನ್ಮೂಲ ನಿರ್ವಹಣೆಯ ಪ್ರಧಾನ ವ್ಯವಸ್ಥಾಪಕ ಬಿ.ಜಿ.ಪೊನ್ನಪ್ಪ, ಕಾಫಿ ಲಿಮಿಟೆಡ್ನ ಹೆಚ್ಆರ್ ಮತ್ತು ಐಆರ್ನ ಉಪ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಮ್ಯಾಥ್ಯು ಉಪಸ್ಥಿತರಿರಲಿದ್ದಾರೆ ಎಂದು ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಅಧ್ಯಕ್ಷ ಪೊರುಕೊಂಡ ಸುನಿಲ್ ಪಾಲಿಬೆಟ್ಟದಲ್ಲಿ ತಿಳಿಸಿದ್ದಾರೆ. ಕಳೆದ ಬಾರಿ 160 ಆಟಗಾರರು ಪಾಲ್ಗೊಂಡಿದ್ದು, ಈ ಬಾರಿ 175ಕ್ಕೂ ಅಧಿಕ ಕ್ರೀಡಾಪಟುಗಳು ಆಡಲಿದ್ದಾರೆ. ಏ.1 ರಿಂದ…
ವಿರಾಜಪೇಟೆ ಮಾ.29 NEWS DESK : ನಿರಂತರವಾಗಿ ಬಿ.ಎಸ್ಎನ್ಎಲ್ ನೆಟ್ವರ್ಕ್ ಇಲ್ಲದೆ ಸಮಸ್ಯೆ ಎದುರಾಗಿದ್ದು, ತಕ್ಷಣವೆ ಸಂಪರ್ಕ ಸಮಸ್ಯೆ ಬಗೆಹರಿಸುವಂತೆ ವಿರಾಜಪೇಟೆ-ಕೆದಮುಳ್ಳೂರು ಗ್ರಾಮದ ನಿವಾಸಿಗಳು ಮನವಿ ಮಾಡಿದ್ದಾರೆ. ವಿರಾಜಪೇಟೆ ಗಾಂಧಿನಗರದ ಬಿ.ಎಸ್ಎನ್ಎಲ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ನೆಟ್ವರ್ಕ್ ಇಲ್ಲದೆ ಸಾರ್ವಜನಿಕರು ಅನುಭವಿಸುತ್ತಿರವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಕೆದಮುಳ್ಳುರು ಗ್ರಾ.ಪಂಚಾಯಿತಿ ಉಪಾಧ್ಯಕ್ಷ ಪರಮೇಶ್ವರ, ನಮ್ಮ ಗ್ರಾಮದ ಮೂರು ರಸ್ತೆ, ಕೊಟ್ಟಚ್ಚಿ ಎಂಬಲ್ಲಿ ಬಿ.ಎಸ್.ಎನ್.ಎಲ್ನ ಎರಡು ಟವರ್ಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಇದರಿಂದಾಗಿ ಪರೀಕ್ಷೆ ಸಮಯದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆ ಉಂಟಾಗಿದೆ. ಅಲ್ಲದೆ ವಿರಾಜಪೇಟೆ ನಗರಕ್ಕೆ ಆಗಮಿಸಿದರೆ ಮನೆಯವರ ಸಂಪರ್ಕ ಸಾಧ್ಯವಾಗುತ್ತಿಲ್ಲ, ಆರೋಗ್ಯ ಸಮಸ್ಯೆ ಉಂಟಾದರೆ ವಾಹನಗಳ ವ್ಯವಸ್ಥೆ ಮಾಡಲು ದೂರವಾಣಿ ವ್ಯವಸ್ಥೆ ಇರುವುದಿಲ್ಲ ಇದರಿಂದಾಗಿ ಅನೇಕ ಬಾರಿ ಮನವಿ ಸಲ್ಲಿಸಿದರೂ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಆದಷ್ಟು ಬೇಗ ಸಮಸ್ಯೆ ಬಗೆಹರಿಸದಿದ್ದರೆ ರಾಷ್ಟ್ರಪತಿಗಳಿಗೆ ಇಲಾಖೆಯ ವಿರುದ್ಧ ಪತ್ರ ಬರೆಯಾಗುವುದೆಂದು ತಿಳಿಸಿದರು.…






