ಲೇಖಕ: admin

ವಿರಾಜಪೇಟೆ ಮಾ.29 NEWS DESK : ನಿರಂತರವಾಗಿ ಬಿ.ಎಸ್‍ಎನ್‍ಎಲ್ ನೆಟ್ವರ್ಕ್ ಇಲ್ಲದೆ ಸಮಸ್ಯೆ ಎದುರಾಗಿದ್ದು, ತಕ್ಷಣವೆ ಸಂಪರ್ಕ ಸಮಸ್ಯೆ ಬಗೆಹರಿಸುವಂತೆ ವಿರಾಜಪೇಟೆ-ಕೆದಮುಳ್ಳೂರು ಗ್ರಾಮದ ನಿವಾಸಿಗಳು ಮನವಿ ಮಾಡಿದ್ದಾರೆ. ವಿರಾಜಪೇಟೆ ಗಾಂಧಿನಗರದ ಬಿ.ಎಸ್‍ಎನ್‍ಎಲ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ನೆಟ್ವರ್ಕ್ ಇಲ್ಲದೆ ಸಾರ್ವಜನಿಕರು ಅನುಭವಿಸುತ್ತಿರವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಕೆದಮುಳ್ಳುರು ಗ್ರಾ.ಪಂಚಾಯಿತಿ ಉಪಾಧ್ಯಕ್ಷ ಪರಮೇಶ್ವರ, ನಮ್ಮ ಗ್ರಾಮದ ಮೂರು ರಸ್ತೆ, ಕೊಟ್ಟಚ್ಚಿ ಎಂಬಲ್ಲಿ ಬಿ.ಎಸ್.ಎನ್.ಎಲ್‍ನ ಎರಡು ಟವರ್‍ಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಇದರಿಂದಾಗಿ ಪರೀಕ್ಷೆ ಸಮಯದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆ ಉಂಟಾಗಿದೆ. ಅಲ್ಲದೆ ವಿರಾಜಪೇಟೆ ನಗರಕ್ಕೆ ಆಗಮಿಸಿದರೆ ಮನೆಯವರ ಸಂಪರ್ಕ ಸಾಧ್ಯವಾಗುತ್ತಿಲ್ಲ, ಆರೋಗ್ಯ ಸಮಸ್ಯೆ ಉಂಟಾದರೆ ವಾಹನಗಳ ವ್ಯವಸ್ಥೆ ಮಾಡಲು ದೂರವಾಣಿ ವ್ಯವಸ್ಥೆ ಇರುವುದಿಲ್ಲ ಇದರಿಂದಾಗಿ ಅನೇಕ ಬಾರಿ ಮನವಿ ಸಲ್ಲಿಸಿದರೂ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಆದಷ್ಟು ಬೇಗ ಸಮಸ್ಯೆ ಬಗೆಹರಿಸದಿದ್ದರೆ ರಾಷ್ಟ್ರಪತಿಗಳಿಗೆ ಇಲಾಖೆಯ ವಿರುದ್ಧ ಪತ್ರ ಬರೆಯಾಗುವುದೆಂದು ತಿಳಿಸಿದರು.…

Read More

  ಸುಂಟಿಕೊಪ್ಪ ಮಾ.29 NEWS DESK : ಕೊಡಂಗಲ್ಲೂರ್ ಶ್ರೀ ಕುರಂಭ (ಭಗವತಿ) ದೇವಾಲಯದ 59ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಗಣಪತಿ ಹೋಮ, ಮುತ್ತಪ್ಪ ದೇವರ ಮಲೆ ಇಳಿಸುವುದು, ಶ್ರೀ ಗಣಪತಿ ಮತ್ತು ಶ್ರೀ ಸುಬ್ರಮಣ್ಯ ಸ್ವಾಮಿ ದೇವರ ಪೂಜೆ, ಶ್ರೀ ಮುತ್ತಪ್ಪ ದೇವರ ಬೆಳ್ಳಾಟಂ ಮತ್ತು ಪೈಂಗುತ್ತಿ, ಶ್ರೀ ಚಾಮುಂಡೇಶ್ವರಿ ದೇವಿ ಪೂಜೆ, ಗುಳಿಗನ ಪೂಜೆ, ಶ್ರೀಭದ್ರಕಾಳಿ ದೇವಿಗೆ ಆರ್ಚನೆ, ನೈವೇದ್ಯ ಪೂಜೆ, ತಲಪುರಿ ಮೆರವಣಿಗೆ, ವಸೂರ ಮಾಲೆ ದೇವರ ಬೆಳ್ಳಾಟಂ, ದೇವಿ ದರ್ಶನ ಹಾಗೂ ಮಹಾಮಂಗಳಾರತಿ ನಡೆಯಿತು. ಮರದಿನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆದು ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಸುಂಟಿಕೊಪ್ಪ, ಶ್ರೀ ದೇವಿ, ಹರದೂರು, ನಾಕೂರು, ಕಂಬಿಬಾಣೆ, ಮತ್ತಿಕಾಡು ಸೇರಿದಂತೆ ಕೇರಳ ದಿಂದಲೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ಕೆಸರಿ ಬಂಟಿಗ್ಸ್, ಬಣ್ಣ ಬಣ್ಣದ ಹೂ, ವಿದ್ಯುತ್…

Read More

ಮಡಿಕೇರಿ ಮಾ.29 NEWS DESK : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ 2024-25ನೇ ಸಾಲಿನ ಕಿಂಡರ್ ಗಾರ್ಟನ್ ವಿಭಾಗದ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಚೌರಿರ ರಿಷಿ ಕಾಶ್ಯಾಮ್ಕಿಂಡರ್ ಯುಕೆಜಿ ಮಕ್ಕಳಿಗೆ ನೆನಪಿನ ಕಾಣಿಕೆ ನೀಡಿ ಮಾತನಾಡಿ, ಶಿಕ್ಷಕರು ಪೋಷಕರು ಮಕ್ಕಳು ಇವರು ಮೂವರು ತ್ರಿಕೋನದಂತೆ ಒಬ್ಬರ ಸಂಬಂಧ ಇನ್ನೊಬ್ಬರೊಂದಿಗೆ ತುಂಬಾ ಗಾಢವಾಗಿರುತ್ತದೆ, ಮಕ್ಕಳ ಲಾಲನೆ ಪಾಲನೆಯಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲೆ ಎಂ.ಜಿ.ಸವಿತ, ಪ್ರತಿಯೊಂದು ಮಗುವಿನಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಹೊರಗಿಡುವಲ್ಲಿ ಶಿಕ್ಷಕರಪಾತ್ರ ಪ್ರಮುಖ ಎಂದರು. ವೇದಿಕೆಯಲ್ಲಿ ಶಾಲಾ ಆಡಳಿತಾಧಿಕಾರಿ ಎನ್.ಎಪೊನ್ನಮ್ಮ ಉಪಸ್ಥಿತರಿದ್ದರು. ಗಾರ್ಟನ್ ವಿಭಾಗದ ಶಿಕ್ಷಕಿ ವಿನ್ಯಾ ಉತ್ತಪ್ಪ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಬಿ.ಎಸ್.ಚಂದ್ರಾವತಿ ವರದಿ ವಾಚಿಸಿದರು. ಮಿಥಿಲ ಪೊನ್ನಪ್ಪ ಕಾರ್ಯಕ್ರಮ ನಿರೂಪಿಸಿದರು. ಎ.ಎಂ.ಹರ್ಷಿತಾ ವಂದಿಸಿದರು. ಪುಟಾಣಿಗಳು ತಮ್ಮ ಅನಿಸಿಕೆಯಲ್ಲಿ ತಮ್ಮ ಶಿಕ್ಷಕಿಯರನ್ನು ನೆನಪಿಸಿಕೊಂಡರು. ಪುಟಾಣಿಗಳು ನೃತ್ಯದ ಮೂಲಕ ಎಲ್ಲರ ಮನರಂಜಿಸಿದರು. ಪೋಷಕರು…

Read More

ಮಡಿಕೇರಿ ಮಾ.29 NEWS DESK : ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆಯಿಂದ ಮೂನಾ೯ಡುವಿನಲ್ಲಿ 40 ಸಾವಿರ ರು. ವೆಚ್ಚದಲ್ಲಿ ನಿಮಿ೯ಸಿರುವ ಸೋಲಾರ್ ವಿದ್ಯುತ್ ದೀಪಗಳನ್ನು ರೋಟರಿ ಜಿಲ್ಲಾ ಗವನ೯ರ್ ವಿಕ್ರಂದತ್ತ ಉದ್ಘಾಟಿಸಿದರು.  ಮಡಿಕೇರಿ – ಪಾರಾಣೆ – ನಾಪೋಕ್ಲು ಕಡೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸೇರುವ ವೃತ್ತದಲ್ಲಿ ಸೋಲಾರ್ ದೀಪವನ್ನು ಸ್ಥಾಪಿಸಲಾಗಿದೆ. ಈ ದೀಪವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ವಿಕ್ರಂದತ್ತ, ಸಹಸ್ರಾರು ಪಾದಾಚಾರಿಗಳಿಗೆ, ವಾಹನ ಚಾಲಕರಿಗೆ ಅನುಕೂಲ ಕಲ್ಪಿಸುವ ಈ ಪ್ರಾಜೆಕ್ಟ್ ಮಾಡಿರುವ ರೋಟರಿ ವುಡ್ಸ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರಲ್ಲದೇ, ರೋಟರಿಯಿಂದ ಮುಂದೆಯೂ ಇಂತಹ ದೀರ್ಘಕಾಲ ಬಾಳುವ ಯೋಜನೆಗಳತ್ತ ಗಮನ ಹರಿಸುವಂತಾಗಲಿ ಎಂದು ಸಲಹೆ ನೀಡಿದರು. ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ಮತ್ತು ರೋಟರಿ ಸದಸ್ಯ .ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.  ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾರ್ಯದರ್ಶಿ ಕಿರಣ್ ಕುಂದರ್, ಅಸಿಸ್ಟೆಂಟ್ ಗವರ್ನರ್ ದೇವಣಿರ ಕಿರಣ್, ರೋಟರಿ ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಳಿಗ, ಮಾಜಿ ಅಸಿಸ್ಟೆಂಟ್ ಗವರ್ನರ್…

Read More

ಮಡಿಕೇರಿ ಮಾ.29 NEWS DESK : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 2024-25ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡಲಾಯಿತು.  ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲೆ ಎಂ.ಜಿ.ಸವಿತ ಹಾಗೂ ಆಡಳಿತ ಅಧಿಕಾರಿ ಎನ್.ಎ.ಪೊನ್ನಮ್ಮ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ನೆನಪಿನ ಕಾಣಿಕೆಯನ್ನು ವಿತರಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು.  ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಅಧಿಕಾರಿ ಎನ್.ಎ.ಪೊನ್ನಮ್ಮ ಪಾಲ್ಗೊಂಡಿದ್ದರು. 9ನೇ ತರಗತಿ ವಿದ್ಯಾರ್ಥಿನಿ ಟಿ.ಪಿ.ನಿಧಿ ಪ್ರಾರ್ಥಿಸಿದರು. ಹತ್ತನೇ ತರಗತಿ ವಿದ್ಯಾರ್ಥಿನಿ ಲಿಷ್ಮಾ ಹಾಗೂ ಪುಣ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ತರುಣ್ ವಂದಸಿದರು.

Read More

ಮಡಿಕೇರಿ ಮಾ.29 NEWS DESK : ಸುಳ್ಯ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಮೂರು ಧರ್ಮ ಗುರುಗಳನ್ನು ಸನ್ಮಾನಿಸಲಾಯಿತು. ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ಇಪ್ಪತ್ತನೇ ವರ್ಷದ ಸರ್ವಧರ್ಮ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮರ್ಕಂಜ ಅನ್ನಪೂರ್ಣೇಶ್ವರಿ ಕ್ಷೇತ್ರದ ಯೋಗೇಶ್ವರ ಸಿದ್ದ ಪುರುಷ ಮಠದ ಧರ್ಮದರ್ಶಿ ರಾಜೇಶ್ ನಾಥ್ ಜಿ., ಸುಳ್ಯ ಬೀರಮಂಗಲ ಸೈಂಟ್ ವಿಕ್ಟರ್ ಚರ್ಚ್‍ನ ಧರ್ಮ ಗುರು ಫಾದರ್ ವಿಕ್ಟರ್ ಡಿ’ಸೋಜಾ, ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಅವರನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಶಾಲು ಹೊದಿಸಿ ಸನ್ಮಾನಿಸಿದರು. ಇಫ್ತಾರ್ ಬಿಡುವ ಸಂದರ್ಭದಲ್ಲಿ ಧರ್ಮದರ್ಶಿ ರಾಜೇಶ್ ನಾಥ್ ಜಿ ಖರ್ಜುರವನ್ನು ಫಾದರ್ ವಿಕ್ಟರ್ ಡಿ’ಸೋಜ ಹಣ್ಣು ಹಂಪಲುಗಳನ್ನು ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ತಿನ್ನಿಸುವ ಮೂಲಕ ಭಾವೈಕ್ಯತೆಯ ಸಂದೇಶವನ್ನು ಸಾರಿದರು. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸುಳ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್…

Read More

ಮಡಿಕೇರಿ ಮಾ.29 NEWS DESK : ತಿಗಳ ಸಮಾಜದ ಮೂಲಪುರುಷ ಶ್ರೀ ಅಗ್ನಿಬನ್ನಿರಾಯ ಅವರ ಆದರ್ಶಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವಂತಾಗಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಶ್ರೀ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಗ್ನಿ ಬನ್ನಿರಾಯರಂತಹ ಮಹಾನ್ ಚೇತನಗಳ ಜೀವನಾದರ್ಶಗಳು ಮನುಕುಲದ ಹಾದಿಗೆ ಬೆಳಕಾಗಿದೆ ಎಂದು ಮಂಜುಳ ನುಡಿದರು. ಬೆಂಗಳೂರಿನ ಲಾಲ್‍ಬಾಗ್ ನಿರ್ಮಾಣಕ್ಕೆ ತಿಗಳ ಸಮಾಜ ಮೂಲ ಕಾರಣಕರ್ತರಾಗಿದ್ದಾರೆ. ತಿಗಳ ಸಮಾಜವು ಬೆಂಗಳೂರು, ತುಮಕೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಅವರು ಹೇಳಿದರು. ಪುರಾಣ, ಐತಿಹ್ಯಗಳಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಅವರ ಬಗ್ಗೆ ಉಲ್ಲೇಖವಿದ್ದು, ಸಮಾಜದಲ್ಲಿ ಶಾಂತಿ, ನೆಮ್ಮದಿಗೆ ಹಲವು ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪಿ.ಪಿ.ಕವಿತ ಮಾತನಾಡಿ ಸಮಾಜದಲ್ಲಿ ಪ್ರತಿಯೊಬ್ಬರೂ ಸಾಮಾಜಿಕವಾಗಿ,…

Read More

ಕುಶಾಲನಗರ ಮಾ.29 NEWS DESK : ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವುದರ ಜೊತೆಗೆ ತಮ್ಮ ಜೀವನದ ಗುರಿ ಸಾಧಿಸುವ ಛಲ ಹೊಂದಬೇಕೆಂದು ಐಗೂರು ಗ್ರಾಮ ಪಂಚಾಯಿತಿ ಸದಸ್ಯ ಬಿ.ಪಿ.ಜೋಯಪ್ಪ ಹೇಳಿದರು.  ಕುಶಾಲನಗರ ಸಮೀಪದ ಯಡವನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕುಶಾಲನಗರ ಮಹಾತ್ಮಾ ಗಾಂಧಿ ಸ್ಮಾರಕ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024-25ರ ವಾರ್ಷಿಕ ವಿಶೇಷ ಶಿಬಿರದ ಎನ್.ಎನ್.ಎಸ್ ಜ್ಯೋತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಣದ ನಂತರ ಯುವ ಜನಾಂಗ ಸರಕಾರಿ ಉದ್ಯೋಗಕ್ಕೆ ಅವಲಂಬಿಸದೆ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅನ್ನದಾತರಾಗಬೇಕೆಂದು ಆಶಯ ವ್ಯಕ್ತಪಡಿಸಿದರು.  ಕಾವೇರಿ ಸ್ವಚ್ಛತಾ ಅಭಿಯಾನದ ಸಂಚಾಲಕ ಎಂ.ಎನ್.ಚಂದ್ರಮೋಹನ್, ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಶಿಕ್ಷಣದೊಂದಿಗೆ ಶಿಕ್ಷಣೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಬೇಕು. ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಇದೇ ಸಂದರ್ಭ ಶಿಬಿರಕ್ಕೆ ಸಹಾಯ ಹಸ್ತ…

Read More

ಕುಶಾಲನಗರ, ಮಾ.29 NEWS DESK :  ಅಸ್ಪೃಶ್ಯತೆ , ಅಸಮಾನತೆ ನಿವಾರಣೆಗೆ ಸಾಹಿತ್ಯ ಸಹಕಾರಿ. ಸಾಹಿತ್ಯವು ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಅಸಮಾನತೆಯನ್ನು ತೊಡೆದು ಹಾಕಿ ಜಾತ್ಯತೀತ ನೆಲೆಗಟ್ಟಿನ ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಖ್ಯಾತ ಸಾಹಿತಿ ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷ ಕಾಳೇಗೌಡ ನಾಗವಾರ ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕುಶಾಲನಗರ ಕನ್ನಡ ಭಾರತ ಪ್ರಥಮ ದರ್ಜೆ ಕಾಲೇಜಿನಲ್ಲಿ  ಆಯೋಜಿಸಿದ್ದ ಚಕೋರ ಕೊಡಗು ಸಾಹಿತ್ಯ ವಿಚಾರ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಜಾತಿ ತಾನೊಂದೇ ವಲಂ ಎಂದು ಸಾರಿದ ಆದಿಕವಿ ಪಂಪ ನಮಗೆಲ್ಲಾ ಆದರ್ಶವಾಗಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಸಂದೇಶವನ್ನು ಸಾಕಾರಗೊಳಿಸುವುದು ಯುವ ಜನಾಂಗದ ಮೊದಲ ಆದ್ಯತೆಯಾಗಿದೆ ಎಂದು ಆಶಿಸಿದರು. ಮೌಢ್ಯ ಮತ್ತು ಅಸ್ಪೃಶ್ಯತಾ ರಹಿತ ಸಮಾಜ ಕಟ್ಟಲು ಪಂಪನಿಂದ ಮೊದಲು ಗಂಡು ವಚನಕಾರಾದಿಯಾಗಿ ಕನ್ನಡದ ಎಲ್ಲ ಸಾಹಿತಿಗಳು ಶ್ರಮಿಸಿದರು ಎಂದು ಹಿರಿಯ ಸಾಹಿತಿ…

Read More

ಮಡಿಕೇರಿ ಮಾ.29 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಅಮ್ಮತ್ತಿ ಕೊಡವ ಸಮಾಜದ ಸಹಯೋಗದಲ್ಲಿ ಎರಡು ದಿನಗಳ ಕಾಲ ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆಯುವ ಕೊಡವ ಬಲ್ಯನಮ್ಮೆ (ಕೊಡವ ಅಕಾಡೆಮಿ ಗೌರವ ಪ್ರಶಸ್ತಿ, ಪುಸ್ತಕ ಪ್ರಶಸ್ತಿ ಮತ್ತು ದುಡಿ-ತಾಳ ಕೊಡ್‍ಪ ಆಯಿಮೆ) ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಹೊಸೂರು ಜಂಕ್ಷನ್‍ನಿಂದ ಕೊಡವ ಸಮಾಜದವರೆಗೆ ಕೊಡವ ಸಾಂಸ್ಕೃತಿಕ ಜಾನಪದ ಮೆರವಣಿಗೆ ನಡೆಯಿತು. ಅಮ್ಮತ್ತಿ ನಾಡಿನ ಹಿರಿಯರು ಹಾಗೂ ಸಮಾಜ ಸೇವಕ ನೆಲ್ಲಮಕ್ಕಡ ಶಂಭು ಸೋಮಯ್ಯ, ಕಾವಾಡಿಚಂಡ ಯು.ಗಣಪತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ  ಐನಂಡ ಪ್ರಕಾಶ್ ಗಣಪತಿ ಇದ್ದರು.

Read More