ಲೇಖಕ: admin

ಮಡಿಕೇರಿ ಮಾ.29 NEWS DESK :  ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ ಗೌಡ ಜನಾಂಗಬಾಂಧವರ ನಡುವೆ 8ನೇ ವರ್ಷದ ಗೌಡ ಫುಟ್ಬಾಲ್ ಪಂದ್ಯಾವಳಿ ಮೇ 10 ರಂದು ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದೆ ಎಂದು ಅಕಾಡೆಮಿ ಕಾರ್ಯದರ್ಶಿ ಇಟ್ಟಣಿಕೆ ನವನೀತ್ ತಿಳಿಸಿದರು.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕಳೆದ ಬಾರಿ‌ 70 ತಂಡಗಳು ಪಾಲ್ಗೊಂಡಿತ್ತು. ಈ ಬಾರಿ 90 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸುಮಾರು 15 ಲಕ್ಷ ವೆಚ್ಚದಲ್ಲಿ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಏ.25 ತಂಡಗಳ ನೋಂದಾಣಿಗೆ ಕೊನೆ ದಿನವಾಗಿದ್ದು, ಆಸಕ್ತ ಜನಾಂಗಬಾಂಧವರು 9591711032, 9611502270 ಸಂಖ್ಯೆಯನ್ನು ಸಂಪರ್ಕಿಸಿ ಹೆಚ್ಚಿನ ತಂಡಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು. ಪ್ರಥಮ ಸ್ಥಾನ ಪಡೆದ‌ತಂಡಕ್ಕೆ‌ 1 ಲಕ್ಷ ನಗದು ಮತ್ತು‌ ಆಕರ್ಷಕ‌ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 50 ಸಾವಿರ ಹಾಗೂ ತೃತೀಯ, ಚತುರ್ಥ ಸ್ಥಾನ ಪಡೆದ ತಂಡಕ್ಕೆ ತಲಾ 15 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಜತೆಗೆ ವೈಯುಕ್ತಿಕ…

Read More

ಮಡಿಕೇರಿ ಮಾ.29 NEWS DESK : ಕೊಡವ ಕೌಟುಂಬಿಕ ‘ಮುದ್ದಂಡ ಕಪ್ ಹಾಕಿ ನಮ್ಮೆ’ಯ ಉದ್ಘಾಟನಾ ಸಮಾರಂಭದ ಆಕರ್ಷಕ ಪ್ರದರ್ಶನ ಪಂದ್ಯಗಳಲ್ಲಿ ಹಾಕಿ ಉತ್ಸವದ ಆಯೋಜಕ ತಂಡ ಮತ್ತು ಕೊಡವ ಹಾಕಿ ಅಕಾಡೆಮಿ ಇಲೆವೆನ್ ತಂಡಗಳು ಸೊಗಸಾದ ಆಟದ ಮೂಲಕ ಗೆಲುವು ಸಾಧಿಸಿದವು. ಪಂದ್ಯಾವಳಿ ಆಯೋಜಕ ತಂಡವು ಮೊದಲ ಪ್ರದರ್ಶನ ಪಂದ್ಯದಲ್ಲಿ ಕೊಡಗು ಜಿಲ್ಲಾಡಳಿತ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿತು. ವಿಜೇತ ತಂಡದ ಪರವಾಗಿ ಅಮ್ಮುಣಿಚಂಡ ವಿಘ್ನೇಶ್ ಬೋಪಣ್ಣ, ಮುದ್ದಂಡ ಆದ್ಯ ಪೂವಣ್ಣ ಹಾಗೂ ನೆಲ್ಲಮಕ್ಕಡ ಚಂಗಪ್ಪ ತಲಾ 1 ಗೋಲು ಸಿಡಿಸಿ ಗಮನ ಸೆಳೆದರು. ದ್ವಿತೀಯ ಪ್ರದರ್ಶನ ಪಂದ್ಯದಲ್ಲಿ ಕೊಡವ ಹಾಕಿ ಅಕಾಡೆಮಿ ಇಲೆವೆನ್ ತಂಡ 3-0 ಗೋಲುಗಳ ಅಂತರದಿಂದ ಕರ್ನಾಟಕ ಇಲೆವೆನ್ ತಂಡವನ್ನು ಪರಾಭವಗೊಳಿಸಿತು. ರೋಚಕತೆಯಿಂದ ಕೂಡಿದ್ದ ಪಂದ್ಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಪಂದ್ಯಗಳ ವೀಕ್ಷಕ ವಿವರಣೆಯನ್ನು ಚೆಪ್ಪುಡಿರ ಕಾರ್ಯಪ್ಪ ಹಾಗೂ ಮಾಳೇಟಿರ ಶ್ರೀನಿವಾಸ್ ನೀಡಿದರು.

Read More

ಮಡಿಕೇರಿ NEWS DESK ಮಾ.29 : ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮದಲ್ಲಿ ಪತ್ನಿ ಸೇರಿದಂತೆ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಗಿರೀಶ್ ನನ್ನು ಮಿಂಚಿನ ಕಾರ್ಯಾಚರಣೆಯ ಮೂಲಕ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಕೇರಳ ರಾಜ್ಯದ ತಲಪುಳ ಎಂಬ ಪ್ರದೇಶದಲ್ಲಿ ಗಿರೀಶ್ (38) ನನ್ನು ವಶಕ್ಕೆ ಪಡೆದಿದ್ದಾರೆ. ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ಒಂಟಿ ಗುಡಿಸಿಲಿನಲ್ಲಿ ವಾಸವಿದ್ದ ಬುಡಕಟ್ಟು ಜನಾಂಗದ ಕರಿಯ (75), ಗೌರಿ (70), ನಾಗಿ(30) ಹಾಗೂ ನಾಗಿಯ ಪುತ್ರಿ ಕಾವೇರಿ(7)ಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಗಿರೀಶ್ ತಲೆ ಮರೆಸಿಕೊಂಡಿರುವ ಆರೋಪದಡಿ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮೈಸೂರು ದಕ್ಷಿಣ ವಲಯ ಐಪಿಎಸ್ ಡಾ||ಎಂ.ಬಿ.ಬೋರಲಿAಗಯ್ಯ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಐಪಿಎಸ್, ಅಪರ ಪೊಲೀಸ್ ಅಧೀಕ್ಷಕ ಸುಂದರ್ ರಾಜ್.ಕೆ.ಎಸ್ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್.ಎಸ್, ಗೋಣಿಕೊಪ್ಪ ವೃತ್ತದ ಸಿಪಿಐ ಶಿವರಾಜ್ ಮುಧೋಳ್,…

Read More

ಮಡಿಕೇರಿ ಮಾ.28 NEWS DESK : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಬೆಳ್ಳಿ ಮಹೋತ್ಸವದ ‘ಮುದ್ದಂಡ ಕಪ್ ಹಾಕಿ ಉತ್ಸವ-2025’ಕ್ಕೆ ಶುಕ್ರವಾರ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ವಿದ್ಯುಕ್ತ ಚಾಲನೆ ದೊರಕಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ ಅವರು ‘ಬೆಳ್ಳಿಯ ಸ್ಟಿಕ್’ನಿಂದ ‘ಬೆಳ್ಳಿಯ ಚೆಂಡು’ ತಳ್ಳುವ ಮೂಲಕ ತಿಂಗಳ ಕಾಲ ದಾಖಲೆಯ 396 ತಂಡಗಳ ನಡುವೆ ನಡೆಯುವ ಹಾಕಿ ಉತ್ಸವವನ್ನು ಉದ್ಘಾಟಿಸಿದರು. ಕೊಡವ ಸಂಸ್ಕೃತಿ ಸಂರಕ್ಷಣೆಯ ‘ಹೆಜ್ಜೆ’ : ಕೊಡವ ಕುಟಂಬಗಳ ಅತ್ಯಂತ ವಿಶಿಷ್ಟವಾದ ‘ಐನ್ ಮನೆ’ ವಿನ್ಯಾಸದ ಅತ್ಯಾಕರ್ಷಕ ವೇದಿಕೆಯಲ್ಲಿ ಜ್ಯೋತಿಯನ್ನು ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಕೊಡವ ಹಾಕಿ ಅಕಾಡೆಮಿ ಸ್ಥಾಪನೆಗೆ ಕಾರಣರಾದ ಪಾಂಡಂಡ ಕುಟ್ಟಪ್ಪ ಅವರು 1997 ರಲ್ಲಿ ಆರಂಭಿಸಿದ ‘ಕೊಡವ ಕೌಟುಂಬಿಕ ಹಾಕಿ ನಮ್ಮೆ’ ಇದೀಗ ಇಪ್ಪತ್ತೈದು ವಸಂತಗಳನ್ನು ಪೂರೈಸಿದೆ. ಈ…

Read More

ಮಡಿಕೇರಿ ಮಾ.28 NEWS DESK : ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ದೈವಕೋಲ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಎರಡು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ವಿಶೇಷ ಪೂಜಾಕೈಂಕರ್ಯಗಳೊಂದಿಗೆ ಶ್ರೀ ವಿಷ್ಣುಮೂರ್ತಿ (ತೀ ಚಾಮುಂಡಿ), ರಕ್ತೇಶ್ವರಿ (ರಕ್ತ ಚಾಮುಂಡಿ), ಕುಟ್ಟಿಶಾಸ್ತಾನ್, ಉಚ್ಚಿಟ್ಟ ವೀರನ್ (ಗುರು) ಗುಳಿಗನ್, ಭೂತಂ (ನಕ್ಕಿಚ್ಚು), ಪಾಷಾಣಮೂರ್ತಿ (ಕಲ್ಲುಟ್ರ್ಟಿ) ಮತ್ತು ಅಜ್ಜಪ್ಪ ತೆರೆಗಳ ದೈವಕೋಲ ನಡೆಯಿತು. ಇಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವದ ಮೇಲೇರಿ ಮತ್ತು ರಕ್ತೇಶ್ವರಿ ದೈವಕೋಲ ಉತ್ಸವ ಜರುಗಿತು. ನೆರೆದಿದ್ದ ಭಕ್ತಾಧಿಗಳಿಗೆ ರಾತ್ರಿ ಅನ್ನದಾನ ನೆರವೇರಿತು. ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಆಡಳಿತ ಮಂಡಳಿ ಟ್ರಸ್ಟಿಗಳುಗಳು ಪಾಲ್ಗೊಂಡಿದ್ದರು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.  

Read More

ಮಡಿಕೇರಿ NEWS DESK ಮಾ.28 : ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ ಹಾಗೂ ಪತ್ನಿಯ ಅಜ್ಜ, ಅಜ್ಜಿಯನ್ನು ಭೀಕರವಾಗಿ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಘಟನೆ ಇಂದು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಗಿರೀಶ್(35) ಎಂಬಾತ ಕೊಲೆ ಆರೋಪಿಯಾಗಿದ್ದು, ಘಟನೆ ಬಳಿಕ ತಲೆ ಪರೆಸಿಕೊಂಡಿದ್ದಾನೆ. ಜೇನು ಕುರುಬರ ಕರಿಯ(75), ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(5) ಕತ್ತಿಯಿಂದ ಹತ್ಯೆಗೀಡಾದವರಾಗಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಗಿರೀಶ್ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ.

Read More

ಮಡಿಕೇರಿ NEWS DESK ಮಾ.28 : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ‘ಮುದ್ದಂಡ ಕಪ್ ಹಾಕಿ ಉತ್ಸವ’ ಇಂದು ಮಡಿಕೇರಿಯಲ್ಲಿ ಅದ್ದೂರಿಯಾಗಿ ಉದ್ಘಾಟನೆಗೊಂಡಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರು, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಬೋಪಣ್ಣ ಅವರು ಬೆಳ್ಳಿಯ ಸ್ಟಿಕ್ ನಿಂದ ಬೆಳ್ಳಿಯ ಚೆಂಡನ್ನು ತಳ್ಳುವ ಮೂಲಕ ‘ಮುದ್ದಂಡ ಕಪ್ ಹಾಕಿ ಉತ್ಸವ’ ವನ್ನು ಉದ್ಘಾಟಿಸಿದರು. ಒಲಂಪಿಯನ್ ಎ.ಬಿ.ಸುಬ್ಬಯ್ಯ ಅವರು ಕ್ರೀಡಾಜ್ಯೋತಿ ಬೆಳಗಿದರು. ಇದಕ್ಕೂ ಮೊದಲು ಜನರಲ್ ತಿಮ್ಮಯ್ಯ ವೃತ್ತದಿಂದ ಕ್ರೀಡಾಜ್ಯೋತಿಯನ್ನು ಮೆರವಣಿಗೆ ಮೂಲಕ ಮೈದಾನಕ್ಕೆ ತರಲಾಯಿತು. ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿದ್ದ ಕೊಡವರು ಮೆರವಣಿಗೆಗೆ ಮೆರುಗು ನೀಡಿದರು. ಧ್ವಜಾರೋಹಣದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಇದೇ ಸಂದರ್ಭ ಗಣ್ಯರು ಹಾಕಿ ಉತ್ಸವದ ಸ್ಮರಣ ಸಂಚಿಕೆಯನ್ನು ಕೂಡ ಬಿಡುಗಡೆ ಮಾಡಿದರು. ಮೈಸೂರು, ಕೊಡಗು ಕ್ಷೇತ್ರದ ಸಂಸದ ಯದುವೀರ್…

Read More

ಮಡಿಕೇರಿ ಮಾ.28 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ( ಕೊಡಗು ಜಿಲ್ಲಾ ಆಸ್ಪತ್ರೆ. ಮಡಿಕೇರಿ) ಯಲ್ಲಿ ಸದ್ಯದಲ್ಲಿಯೇ ಹೃದ್ರೋಗ ಚಿಕಿತ್ಸೆ ಲಭ್ಯವಾಗಲಿದೆ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾಹಿತಿ ನೀಡಿದ್ದಾರೆ. ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ” ಅವೆನ್ಸಿಸ್ 2025″ ಎಂಬ ಬೃಹತ್ ಅರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಆಸ್ಪತ್ರೆ ಯನ್ನು ಅತ್ಯಂತ ಸುಸಜ್ಜಿತ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು ತಾವು ಬದ್ದರಾಗಿದ್ದು, ಪ್ರಸ್ತುತ ಹೃದ್ರೋಗ ಚಿಕಿತ್ಸೆ ಕೇಂದ್ರ ಸ್ಥಾಪನೆಗೆ ಸರ್ಕಾರ ಒಪ್ಪಿದೆ ಎಂದು ತಿಳಿಸಿದರು. ಮೆಡಿಕಲ್ ವಿಧ್ಯಾರ್ಥಿಗಳ ಕಲಿಕೆಗೆ ಆರೋಗ್ಯ ಪ್ರದರ್ಶನ ಮೇಳ ಅತ್ಯಂತ ಅಗತ್ಯ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಕೂಡ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. ದಸರಾ ಸಾಂಸ್ಕೃತಿಕ ಸಮಿತಿಯ ಸಂಚಾಲಕ ತೆನ್ನಿರ ಮೈನಾ ಮಾತನಾಡಿ, ಜನರ ಆರೋಗ್ಯ ದ ಬಗ್ಗೆ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಿದ ಮೆಡಿಕಲ್…

Read More

ಮಡಿಕೇರಿ ಮಾ.28 NEWS DESK : ಕರ್ನಾಟಕ ರಾಜ್ಯ ಸರ್ಕಾರ, ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕೈಗಾರಿಕಾ ವಿಭಾಗ ವತಿಯಿಂದ 2024-25ನೇ ಸಾಲಿಗೆ ಮಂಜೂರಾದ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ವಿವಿಧ ವಿದ್ಯುತ್ ಚಾಲಿತ ಉಪಕರಣಗಳನ್ನು ವಿತರಿಸಲಾಯಿತು. ಮುಖ್ಯಮಂತ್ರಿಗಳಿಗೆ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿರಾಜಪೇಟೆಯ ತಮ್ಮ ಗೃಹ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಸಲಕರಣೆ ವಿತರಿಸಿ, ಮಾತನಾಡಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವರ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮೀಣ ಜನತೆ ಇದರ ಸದುಪಯೋಗ ಪಡಿಸಿಕೊಳ್ಳುವುದರೊಂದಿಗೆ ತಮ್ಮ ಜೀವನ ಮಟ್ಟ ಏರಿಸಿಕೊಳ್ಳುವುದು ಹಾಗೂ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಮುಂದೆ ಬರಬೇಕೆಂದು ಕರೆ ನೀಡಿದರು. ಕರ್ನಾಟಕ ಕಾಂಗ್ರೆಸ್ ಸರಕಾರದ ಇಂತಹ ಕಾರ್ಯಕ್ರಮಗಳು ಪ್ರಾಚೀನ ಕಾಲದ ಕಲೆಯನ್ನು ಪೋಷಿಸುವುದರೊಂದಿಗೆ ಗ್ರಾಮೀಣ ಭಾಗದ ಜನತೆಗೆ ಮುನ್ನಡೆಗೆ ಬರಲು ತುಂಬಾ ಸಹಕಾರಿಯಾಗಲಿದೆ. ಗ್ರಾಮೀಣ ಕುಶಲಕರ್ಮಿಗಳು ತಮ್ಮ ತಲಾತಲಾಂತರದಿಂದ ಬಂದಂತಹ ಕೆಲಸ ಕಾರ್ಯಗಳನ್ನು ಮುಂದುವರೆಸುತ್ತಾ…

Read More

ಮಡಿಕೇರಿ ಮಾ.28 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿ.ಬಾಡಗ ಗ್ರಾಮದ ಕೊಕ್ಕ ಎಂಬಲ್ಲಿ ನೂತನವಾಗಿ ವಿದ್ಯುತ್ ಪರಿವರ್ತಕ ಘಟಕ ಉದ್ಘಾಟಿಸಿದರು. ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ವಿ.ಬಾಡಗದ ಮುಖ್ಯ ರಸ್ತೆಯಿಂದ ಪಡವಟ್ಟು-ಪೆಗ್ಗರೆಮಾಡು ಈಶ್ವರ ಅಂಬಾಲಕ್ಕಾಗಿ, ಕೋಲತಂಡ ಹಾಗೂ ಮುಲ್ಲೆಂಗಡ ಕುಟುಂಬಸ್ಥರ ಭಾಗಕ್ಕೆ ಹೋಗುವ ರಸ್ತೆಯ ಅಭಿವೃದ್ಧಿ ಕಾಮಗಾರಿ, ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯ ಪೆರುಂಬಾಡಿ-ಬಿಟ್ಟಂಗಾಲ ಭಾಗದ ಸುಮಾರು 3-80 ರಿಂದ 5-10ರ ಕಿಲೋಮೀಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿ, ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನ್ವರುದ್ದ ಮಸೀದಿ ಹಾಗೂ ಚರ್ಚೆಗೆ ಸಂಬಂಧ ಪಟ್ಟ ಕೃಷಿ ಜಮೀನಿನ ಬಳಿ ಹರಿಯುತ್ತಿರುವ ನದಿಗೆ ಸಂರಕ್ಷಣೆ ಹಾಗು ಜಮೀನಿಗೆ ಹಾನಿಯಾಗದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ, ಹೆಗ್ಗಳ ಹಾಗೂ ಬೇಟೋಳಿ ಗ್ರಾಮಗಳ ಹಲವು ಭಾಗಗಳಲ್ಲಿ, ಮಳೆಗಾಲದಲ್ಲಿ ನದಿಯಲ್ಲಿ ಹರಿಯುವ ರಭಸದ…

Read More