ಪುತ್ತೂರು ಮಾ.27 NEWS DESK : ಬೆಂಕಿ ನಮ್ಮ ಮಿತ್ರನೂ ಹೌದು ಶತ್ರುವೂ ಹೌದು. ಆದರೆ ಅದನ್ನು ಬಳಸುವಲ್ಲಿ ವ್ಯತ್ಯಯ ಉಂಟಾದರೆ ಅದರಿಂದ ಸಾವು ನೋವುಗಳು, ಕಷ್ಟ ನಷ್ಟಗಳು ಉಂಟಾಗಬಹುದು. ಹಾಗಾಗಿ ಇದರ ಬಗ್ಗೆ ಸೂಕ್ತ ಮುನ್ನೆಚ್ಚರಿಕೆಯ ಜತೆಗೆ ಅಗ್ನಿ ಅವಘಡಗಳ ನಿಯಂತ್ರಣದ ಬಗ್ಗೆಯೂ ನಾವು ಜಾಗೃತರಾಗಿರಬೇಕು ಎಂದು ಪುತ್ತೂರು ಅಗ್ನಿಶಾಮಕ ಮತ್ತು ತುರ್ತುಸೇವಾ ಠಾಣೆಯ ಪ್ರಮುಖ ಅಗ್ನಿಶಾಮಕ ರುಕ್ಮಯ ಗೌಡ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಎಂಬಿಎ ಮತ್ತು ಎನ್ಎಸ್ಎಸ್ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು. ಬೆಂಕಿಯ ತೀವ್ರತೆಗಳಿಗೆ ಅನುಗುಣವಾಗಿ ಅದನ್ನು ಅನೇಕ ವಿಭಾಗಗಳಾಗಿ ವಿಂಗಡಿಸಿದ್ದಾರೆ. ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ ನಿವಾರಕ ವಿಧಾನಗಳನ್ನು ಅನುಸರಿಸಬೇಕು. ಬೆಂಕಿ ಉರಿಯುವುದಕ್ಕೆ ದಹ್ಯ ವಸ್ತು, ಶಾಖ ಮತ್ತು ಗಾಳಿಯ ಅಗತ್ಯವಿದೆ. ಇದರಲ್ಲಿ ಒಂದನ್ನು ನಿವಾರಿಸಿದರೆ ಬೆಂಕಿಯನ್ನು ನಂದಿಸಬಹುದು ಎಂದರು. ಸಂದರ್ಭಕ್ಕೆ ತಕ್ಕಂತೆ…
ಲೇಖಕ: admin
ಮಡಿಕೇರಿ ಮಾ.27 NEWS DESK : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಡಿಕೇರಿ ಘಟಕವು ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನ ದಿನವನ್ನು ಆಚರಿಸಿದರು. ನಗರದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಮಹಾನ್ ಕ್ರಾಂತಿಕಾರಿಗಳ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆ ಮೂಲಕ ಗೌರವ ಸೂಚಿಸಿದರು. ನಂತರ, ನಗರದ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಅಲ್ಲಿಯೂ ಪುಷ್ಪ ನಮನ ಸಲ್ಲಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಎಬಿವಿಪಿ ಸದಸ್ಯ ಪ್ರಮೋದ್, ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಜೀವನ ಮತ್ತು ಹೋರಾಟದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅವರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುವ ಮೂಲಕ ದೇಶಭಕ್ತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕು ಸಂಚಾಲಕರಾದ ಮಂಜು, ನಗರ ಕಾರ್ಯದರ್ಶಿ ಸಂತೋಷ್, ನಗರ ಸಹ ಕಾರ್ಯದರ್ಶಿ ಸೌಜನ್ಯ ಮತ್ತು ಇತರ ಎಬಿವಿಪಿ ಸದಸ್ಯರು ಉಪಸ್ಥಿತರಿದ್ದರು.
ಮಡಿಕೇರಿ ಮಾ.27 NEWS DESK : ಚೆಟ್ಟಳ್ಳಿಯ ಕಾಫಿ ಬೋರ್ಡ್ ಜಾಗದಲ್ಲಿರುವ ಶ್ರೀ ಶಕ್ತಿ ಗಣಪತಿ ದೇವಾಲಯದ 25ನೇ ವರ್ಷದ ಬೆಳ್ಳಿ ಮಹೋತ್ಸವ ಮತ್ತು ದೇವಾಲಯ ನವೀಕರಣ, ಅಷ್ಟಬಂಧ, ಬ್ರಹ್ಮ ಕಲಶಾಭಿಷೇಕ ಮಾ.29 ಮತ್ತು 30 ರಂದು ನೆರವೇರಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶ್ರೀ ಶಕ್ತಿ ಗಣಪತಿ ದೇವಾಲಯ ಸಮಿತಿ ಕಾರ್ಯದರ್ಶಿ ಪಿ.ಅಪ್ಪುಕುಟ್ಟನ್, ಮಾ.29 ಮತ್ತು 30 ರಂದು ಎರಡು ದಿನಗಳ ಕಾಲ ಕೇರಳದ ಬ್ರಹ್ಮರ್ಷಿ ವೇದಮೂರ್ತಿ ಶಿವಸುಬ್ರಹ್ಮಣ್ಯ ಭಟ್ಟ ಶುಳುವಾಲ ಮೂಲೆ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಲಿದೆ. ಮಾ.29 ರಂದು ಬೆಳಗ್ಗೆ 9 ಗಂಟೆಗೆ ಸಪ್ತಶುದ್ಧಿ ಪುಣ್ಯಕ್ಷದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಸಾದ ಶುದ್ಧಿ ಅನುಜ್ಞಾ ಕಲಶ, ಕಲಶ ಪ್ರತಿಷ್ಠೆ, ವೇದಪಾರಾಯಾಣ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆಯೆಂದು ತಿಳಿಸಿದರು. ಅಂದು ಸಂಜೆ 5 ಗಂಟೆಗೆ ಶ್ರೀ ಲಕ್ಷೀ ಸಹಿತ ಶ್ರೀ ಸತ್ಯನಾರಾಯಣ ಪೂಜೆ, ರಕ್ತೋಘ್ನ ಹವನ, ವಾಸ್ತು ಪೂಜೆ, ವಾಸ್ತು…
ಮಡಿಕೇರಿ ಮಾ.27 NEWS DESK : ಇಬ್ನಿವಳವಾಡಿ ಗ್ರಾಮದ ಶ್ರೀ ಭದ್ರಕಾಳಿ ದೇವಿಯ ವಾರ್ಷಿಕ ಉತ್ಸವವು ಮಾ.29 ಮತ್ತು 30ರಂದು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಮಾ.29 ರಂದು ಮಧ್ಯಾಹ್ನ 1.30 ಗಂಟೆಗೆ ಕೊಡಿಆಟ್, 2 ಗಂಟೆಗೆ ಆಂಗೋಲ, ಪೊಂಗೋಲ, 2.30 ಗಂಟೆಗೆ ಪೀಲಿ ಆಟ್, 3 ಗಂಟೆಗೆ ಕೊಂಬಾಟ್ ಜರುಗಲಿದೆ. ನಂತರ ದೇವಿಯ ದರ್ಶನ ಹಾಗೂ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಲಿದೆ. ಮಾ.30 ರಂದು ಸಂಜೆ 5 ಗಂಟೆಗೆ ಕೊಂಬಾಟ್, ದೇವಿಯ ದರ್ಶನ, ದೇವರ ಜಳಕ ಜರುಗಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಕ್ಕಮುಖ್ಯಸ್ಥರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಮಡಿಕೇರಿ ಮಾ.27 NEWS DESK : ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿಯ ಮಧುಕೃಪದ ಆವರಣದಲ್ಲಿ “ಬಾಲಗೋಕುಲ” ಮಡಿಕೇರಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಮಾ.31 ರಿಂದ ಏಪ್ರಿಲ್ 9 ರ ವರೆಗೆ ಮಕ್ಕಳಿಗಾಗಿ “ವಸಂತ ಶಿಬಿರ – 2025” ಹೆಸರಿನಲ್ಲಿ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ನಡೆದ ಈ ಶಿಬಿರವು ಮಕ್ಕಳಿಗೆ ಬಹಳ ಉಪಯುಕ್ತವಾಗಿದ್ದು, ಮಕ್ಕಳು ತುಂಬಾ ಉತ್ಸಾಹದಿಂದ ಭಾಗವಹಿಸುವಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವವರು ನೊಂದಣಿಗಾಗಿ ಬಾಲಗೋಕುಲ ಮಡಿಕೇರಿ: 9448541328 ಸಂಪರ್ಕಿಸ ಬಹುದಾಗಿದೆ.
ಮಡಿಕೇರಿ ಮಾ.27 NEWS DESK : ಚೆಟ್ಟಳ್ಳಿ ಕಾಫಿ ಬೋಡ್೯ನಲ್ಲಿರುವ ಶ್ರೀ ಶಕ್ತಿ ಗಣಪತಿ ದೇವಾಲಯದ 25ನೇ ವಷ೯ದ ಬೆಳ್ಳಿ ಮಹೋತ್ಸವದ ಅಂಗವಾಗಿ ಮಾ.29 ಮತ್ತು 30 ರಂದುದೇವಾಲಯ ನವೀಕರಣ ಅಷ್ಟಬಂಧ ಬ್ರಹ್ಮ ಕಲಶಾಭಿಷೇಕ ನಡೆಯಲಿದೆ. ಮಾ.29 ಮತ್ತು 30 ರಂದು ಎರಡು ದಿನಗಳ ಕಾಲ ಕೇರಳದ ಬ್ರಹ್ಮಷಿ೯ ವೇದಮೂತಿ೯ ಶಿವಸುಬ್ರಹ್ಮಣ್ಯ ಭಟ್ಟ ಶುಳುವಾಲಮೂಲೆ ಅವರ ನೇತೃತ್ವದಲ್ಲಿ ಪೂಜಾ ಕಾಯ೯ಗಳು ನೆರವೇರಲಿದ್ದು, ಮಾ.29 ರಂದು ಬೆಳಗ್ಗೆ 9 ಗಂಟೆಗೆ ಸಪ್ತುಶುದ್ದಿ ಪುಣ್ಯಕ್ಷದೇವತಾ ಪ್ರಾಥ೯ನೆ, ಆಚಾಯ೯ ಪಠಣ, ಪ್ರಸಾದಶುದ್ದಿ, ಅನುಜ್ಞ ಕಳಶ. ಕಳಶ ಪ್ರತಿಷ್ಟೆ, ವೇದಪಾರಾಯಾಣ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತಪ೯ಣೆ ನೆರವೇರಲಿದೆ. ಸಂಜೆ 5 ಗಂಟೆಗೆ ಶ್ರೀ ಲಕ್ಷ್ಮಿಸಹಿತ ಶ್ರೀ ಸತ್ಯನಾರಾಯಣ ಪೂಜೆ, ರಕ್ತೋಘ್ನ ಹವನ, ವಾಸ್ತು ಪೂಜೆ, ವಾಸ್ತು ಬಲಿ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತಪ೯ಣೆ ನಡೆಯಲಿದೆ. ಮಾ.30 ರಂದು ಭಾನುವಾರ ಬೆಳಗ್ಗೆ 6 ಗಂಟೆಯಿಂದ 48 ತೆಂಗಿನಕಾಯಿ ಅಷ್ಟದ್ರವ್ಯದಿಂದ ಗಣಪತಿ…
ಕುಶಾಲನಗರ ಮಾ.27 NEWS DESK : ಕುಶಾಲನಗರ ಪಟ್ಟಣದ ವಾಣಿಜ್ಯ ಸಂಕೀರ್ಣ ಈ ಸಾಲಿನ ನವೆಂಬರ್ ಒಳಗೆ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಅವರು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಎಸ್ಎಫ್ ಸಿ ವಿಶೇಷ ಅನುದಾನ 2 ಕೋಟಿ, ಕೆ ಆರ್ ಐ ಡಿ ಎಲ್ ಅನುದಾನ 1.5 ಕೋಟಿ ಮತ್ತು ಅಲ್ಪಸಂಖ್ಯಾತ ವಿಶೇಷ ಅನುದಾನ ರು.35 ಲಕ್ಷದಲ್ಲಿ ಕುಶಾಲನಗರ ಪಟ್ಟಣ ಬಡಾವಣೆಗಳು ಹಾಗೂ ಗೊಂದಿ ಬಸವನಹಳ್ಳಿ ಗ್ರಾಮದ ಮುಖ್ಯರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಇದುವರೆಗೆ ತಮ್ಮ ಕ್ಷೇತ್ರಕ್ಕೆ ಸುಮಾರು 25 ಕೋಟಿ ರೂಗಳ ಅನುದಾನ ದೊರೆತಿದ್ದು ಅದರಲ್ಲಿ 19 ಕೋಟಿ ರೂಗಳ ಕಾಮಗಾರಿ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುತ್ತಿದೆ. ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ ಪಟ್ಟಣಗಳಲ್ಲಿ ಉಳಿದ ಅನುದಾನಗಳ ಮೂಲಕ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳು ಚಾಲನೆಯಲ್ಲಿದೆ ಎಂದು ಹೇಳಿದರು. ಗುತ್ತಿಗೆದಾರರು ಅವಧಿಯ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು, ಜನರು ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ…
ಮಡಿಕೇರಿ ಮಾ.27 NEWS DESK : ಐತಿಹಾಸಿಕ ಹಿನ್ನಲೆಯನ್ನು ಒಳಗೊಂಡ ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಪುರಾತನ ಶ್ರೀ ಭಗವತಿ ದೇವಾಲಯದ ವಾರ್ಷಿಕೋತ್ಸವ ವಿಶೇಷ ಪೂಜಾ ಕಾರ್ಯ, ತೆರೆಗಳ ದರ್ಶನ, ದೇವರ ಅವಭೃತ ಸ್ನಾನ ಮತ್ತು ನೃತ್ಯ ಬಲಿಯೊಂದಿಗೆ ಶ್ರದ್ಧಾ ಭಕ್ತಿಯಿಂದ ಬುಧವಾರ ಸಂಪನ್ನಗೊಂಡಿತು. ಇದೇ ಮಾ.22 ರಂದು ಮಹಾಗಣಪತಿ ಹೋಮದೊಂದಿಗೆ ಆರಂಭಗೊಂಡ ಉತ್ಸವದಲ್ಲಿ ತಕ್ಕರ ಮನೆಯಿಂದ ಭಂಡಾರ ತರುವದು, ಅಂದಿ ಬೆಳಕು, ದೇವರ ನೃತ್ಯ ಬಲಿ, ಶ್ರೀ ಪರದೇವರ ಕೋಟದಲ್ಲಿ ಕೊಟ್ಟಿ ಪಾಡುವ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳು ಶ್ರದ್ಧಾ ಭಕ್ತಿಯಿಂದ ನೆರವೇರಿತು. ದೇವತಾ ಕಾರ್ಯಗಳು ತಂತ್ರಿಗಳಾದ ಉದಯ ಕುಮಾರ್ ಹುಲಿತಾಳ ಅವರ ನೇತೃತ್ವದಲ್ಲಿ, ಕುಮಾರ್, ಪ್ರಶಾಂತ್ ಬಟ್ಟೆಮಕ್ಕಿ ಅವರುಗಳ ಸಹಕಾರದೊಂದಿಗೆ ನಡೆಯಿತು. ಉತ್ಸವದ ನಾಲ್ಕನೇ ದಿನವಾದ ಮಂಗಳವಾರದ ದೊಡ್ಡ ಹಬ್ಬದಂದು ಬೆಳಗ್ಗೆ ದೇವರ ನೃತ್ಯ ಬಲಿ, ಶ್ರೀ ಪರದೇವರ ಕೋಟದಿಂದ ದೇವರ ಮುಡಿ ಮಲಿಯಪಟ್ಟಿಗೆ ಬರುವುದು, ಶೀ ಅಯ್ಯಪ್ಪ ದೇವರ ಭಂಡಾರ ತರುವುದು, ಎತ್ತು ಪೋರಾಟ, ಹಬ್ಬದ ಕಟ್ಟು ಮುರಿಯುವುದು,…
*ಹಳೆಯ ಕೆರೆ ದುರಸ್ತಿ ಮಾಡಿಕೊಡಲಾಗುವುದು*
ಮಡಿಕೇರಿ NEWS DESK ಮಾ.26 : ಕೊಡಗಿನ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಮಳೆೆಯಾಗುತ್ತಿದೆ. ಬುಧವಾರ ಸುರಿದ ಗಾಳಿ ಮಳೆಗೆ ಮಡಿಕೇರಿ ತಾಲ್ಲೂಕಿನ ಪಾರಾಣೆ ಗ್ರಾಮದಲ್ಲಿ ಸುಮಾರು 200 ವರ್ಷಗಳಷ್ಟು ಹಳೆಯದಾದ ಬೃಹತ್ ಮರ ರಸ್ತೆಗಡ್ಡ ಉರುಳಿ ಬಿದ್ದ ಘಟನೆ ನಡೆದಿದೆ. ಮಧ್ಯಾಹ್ನ 2.30 ಗಂಟೆಗೆ ಆರಂಭಗೊಂಡ ಭಾರೀ ಗಾಳಿ ಮಳೆಗೆ ಪಾರಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಳಿ ಭಾರೀ ಗಾತ್ರದ ಮರ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ರಸ್ತೆಗಡ್ಡಲಾಗಿ ಬಿದ್ದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ಜಿಲ್ಲೆಯ ಇತರ ಭಾಗಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗಿದೆ. ಕಾಫಿ ಕೊಯ್ಲಿನ ಬಳಿಕ ಮುಂದಿನ ಸಾಲಿನ ಫಸಲಿಗೆ ಅತ್ಯಗತ್ಯವಾದ ಹೂಮಳೆಯನ್ನು ಬೆಳೆಗಾರರು ನಿರೀಕ್ಷಿಸಿದ್ದರು.






