ಮಡಿಕೇರಿ NEWS DESK ಮಾ.26 : ಕೊಡಗಿನ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಮಳೆೆಯಾಗುತ್ತಿದೆ. ಬುಧವಾರ ಸುರಿದ ಗಾಳಿ ಮಳೆಗೆ ಮಡಿಕೇರಿ ತಾಲ್ಲೂಕಿನ ಪಾರಾಣೆ ಗ್ರಾಮದಲ್ಲಿ ಸುಮಾರು 200 ವರ್ಷಗಳಷ್ಟು ಹಳೆಯದಾದ ಬೃಹತ್ ಮರ ರಸ್ತೆಗಡ್ಡ ಉರುಳಿ ಬಿದ್ದ ಘಟನೆ ನಡೆದಿದೆ. ಮಧ್ಯಾಹ್ನ 2.30 ಗಂಟೆಗೆ ಆರಂಭಗೊಂಡ ಭಾರೀ ಗಾಳಿ ಮಳೆಗೆ ಪಾರಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಳಿ ಭಾರೀ ಗಾತ್ರದ ಮರ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ರಸ್ತೆಗಡ್ಡಲಾಗಿ ಬಿದ್ದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ಜಿಲ್ಲೆಯ ಇತರ ಭಾಗಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗಿದೆ. ಕಾಫಿ ಕೊಯ್ಲಿನ ಬಳಿಕ ಮುಂದಿನ ಸಾಲಿನ ಫಸಲಿಗೆ ಅತ್ಯಗತ್ಯವಾದ ಹೂಮಳೆಯನ್ನು ಬೆಳೆಗಾರರು ನಿರೀಕ್ಷಿಸಿದ್ದರು.
ಲೇಖಕ: admin
ಮಡಿಕೇರಿ NEWS DESK ಮಾ.26 : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದ್ದು, ಬೆಳ್ಳಿ ಹಬ್ಬದ ಪ್ರಯುಕ್ತ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮುದ್ದಂಡ ಹಾಕಿ ಹಬ್ಬದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. ಹಾಕಿ ಪಂದ್ಯಾವಳಿ ನಡೆಯುವ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಕೊಡವ ಕುಟುಂಬಗಳ ದಾಖಲೆಯ 396 ತಂಡಗಳು ನೋಂದಾಯಿಸಿಕೊಂಡಿದ್ದು, ಮಡಿಕೇರಿಯ ಕೇಂದ್ರ ಸ್ಥಾನದಲ್ಲಿ ಪಂದ್ಯಾವಳಿ ನಡೆಯುತ್ತಿರುವುದು ಈ ಬಾರಿಯ ವಿಶೇಷ ಎಂದರು. ಪಂದ್ಯಾವಳಿಯ ವಿಜೇತ ತಂಡಕ್ಕೆ ರೂ.5 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ 3 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ಸೆಮಿಫೈನಲ್ಗೆ ಬಂದ ಎರಡು ತಂಡಗಳಿಗೆ ತಲಾ 1 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ಪಂದ್ಯಾವಳಿಯ ಯಶಸ್ಸಿಗೆ ಸರ್ಕಾರದ ಸಂಪೂರ್ಣ ಸಹಕಾರ ಇದ್ದು, ಬೇಡಿಕೆಗಳನ್ನು ಈಡೇರಿಸುವ ಭರವಸೆ…
ಮಡಿಕೇರಿ ಮಾ.26 NEWS DESK : ನಗರದ ಪೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನ ಮೈದಾನದಲ್ಲಿ ಆಟಗಾರರಿಗೆ ಪ್ರಯೋಜನಕಾರಿಯಾಗಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ 1.80 ಲಕ್ಷ ರು. ವೆಚ್ಚದಲ್ಲಿ ನಿಮಿ೯ಸಲಾದ ಶುದ್ದ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಾಯಿತು. ನಗರದ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜು ಮೈದಾನದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕವನ್ನು ರೋಟರಿ ಜಿಲ್ಲೆ 3181 ನ ಗವನ೯ರ್ ವಿಕ್ರಂದತ್ತ ಲೋಕಾಪ೯ಣೆಗೊಳಿಸಿದರು. ನಂತರ ಸಮಾರಂಭದಲ್ಲಿ ಮಾತನಾಡಿದ ವಿಕ್ರಂದತ್ತ, ಕೊಡಗು ಜಿಲ್ಲೆಯಲ್ಲಿ ರೋಟರಿ ಸಂಸ್ಥೆಯು ಜನೋಪಯೋಗಿ ಕಾಯ೯ಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಂಡಿರುವುದು ಶ್ಲಾಘನೀಯ. ರೋಟರಿ ವುಡ್ಸ್ ಶುದ್ದ ಕುಡಿಯುವ ನೀರಿನ ಘಟಕದ ಮೂಲಕ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ ಎಂದು ಶ್ಲಾಘಿಸಿದರು. ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಮಾತನಾಡಿ, 120 ವಷ೯ಗಳ ಸುಧೀಘ೯ ಇತಿಹಾಸವನ್ನು ಮನುಕುಲದ ಸೇವೆಯಲ್ಲಿ ಕಳೆದಿರುವ ರೋಟರಿ ಸಂಸ್ಥೆಯು ಜಗತ್ತಿನಾದ್ಯಂತ ಲಕ್ಷಾಂತರ ಯೋಜನೆಗಳೊಂದಿಗೆ ಮಾನವ ಸೇವೆಗೆ ಮುಂದಾಗಿದೆ. ಕಾಯ೯ಪ್ಪ ಕಾಲೇಜಿನ ಕ್ರೀಡಾಪಟುಗಳಿಗೆ ಅಗತ್ಯವಾದ ಶುದ್ದ ಕುಡಿಯುವ…
ಮಡಿಕೇರಿ ಮಾ.26 NEWS DESK : ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾಕೀತು ಮಾಡಿದ್ದಾರೆ. ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು. ತಹಶೀಲ್ದಾರರು ಮತ್ತು ತಾ.ಪಂ.ಇಒಗಳು ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ವಿಶೇಷ ಗಮನಹರಿಸಬೇಕು. ಜೊತೆಗೆ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಕುಂದುಕೊರತೆ ಆಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. ನಾಗರಹೊಳೆಯಲ್ಲಿನ ಗಿರಿಜನ ಆಶ್ರಮ ಶಾಲೆಯಲ್ಲಿ ಮೂಲ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ. ಸರ್ಕಾರ ಹಲವು ಯೋಜನಾ ಕಾರ್ಯಕ್ರಮಗಳು ಜಾರಿಗೊಳಿಸಿದ್ದರೂ ಸಹ ಪರಿಪೂರ್ಣವಾಗಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ…
ಮಡಿಕೇರಿ ಮಾ.26 NEWS DESK : ಕಾವೇರಿ ಕ್ಷೇತ್ರ ಭಾಗಮಂಡಲದಲ್ಲಿ ವಜ್ರಮಹೋತ್ಸವದ ಹೊಸ್ತಿಲಲ್ಲಿರುವ ಜೀರ್ಣೋದ್ಧಾರಗೊಂಡ ‘ಶ್ರೀ ರಾಮ ಮಂದಿರ’ದ ಪುನರ್ ಪ್ರತಿಷ್ಠೆ ಮತ್ತು ಲೋಕಾರ್ಪಣಾ ಕಾರ್ಯ ಮಾ.29 ರಿಂದ 31ರವರೆಗೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶ್ರೀ ರಾಮ ಮಂದಿರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್ ಜೋಯಪ್ಪ, ಶಿಥಿಲಾವಸ್ಥೆಯಲ್ಲಿದ್ದ ಶ್ರೀ ರಾಮ ಮಂದಿರವನ್ನು ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಿರುವುದಾಗಿ ಮಾಹಿತಿ ನೀಡಿದರು. 1948ರಲ್ಲಿ ದಾನಿಗಳಾದ ಶ್ರೀನಿವಾಸಯ್ಯ ಮತ್ತು ನರಸಿಂಹ ನಾಯಕ್ ಅವರು ಉದಾರವಾಗಿ ನೀಡಿದ 12 ಸೆಂಟ್ ಜಾಗದಲ್ಲಿ ನಿರ್ಮಿಸಲ್ಪಟ್ಟ ಶ್ರೀ ರಾಮ ಮಂದಿರ, 1952 ರಲ್ಲಿ ಉದ್ಘಾಟನೆಗೊಂಡಿತ್ತು. ಭಾಗಮಂಡಲ ವ್ಯಾಪ್ತಿಯ ಜನರ ಭಜನಾ ಕಾರ್ಯಗಳಿಗೆ ಮೀಸಲಾಗಿದ್ದ ಮಂದಿರ ಶಿಥಿಲಗೊಂಡಿದ್ದ ಹಿನ್ನೆಲೆಯಲ್ಲಿ ಇದರ ಜೀಣೋದ್ಧಾರ ಕಾರ್ಯವನ್ನು 2017-18ನೇ ಸಾಲಿನಲ್ಲಿ ಕೈಗೆತ್ತಿಕೊಂಡಿದ್ದು, ಇದೀಗ ಪೂರ್ಣವಾಗಿದೆ. ಮಂದಿರದಲ್ಲಿ ನಿತ್ಯದ ಯಾವುದೇ ಪೂಜಾ ಕಾರ್ಯಗಳು ಇರುವುದಿಲ್ಲ. ಬದಲಾಗಿ ನಿರಂತರವಾಗಿ ವಾರಕ್ಕೊಮ್ಮೆಯಾದರು ಭಜನಾ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವ…
ಸುಂಟಿಕೊಪ್ಪ ಮಾ.26 NEWS DESK : ಬಾಳೆಕಾಡು ಚಾಮುಂಡೇಶ್ವರಿ ಮತ್ತು ಮುತ್ತಪ್ಪ ಸೇವಾ ಸಮಿತಿ ವತಿಯಿಂದ 60ನೇ ವರ್ಷದ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದ ವಾರ್ಷಿಕ ಮಹೋತ್ಸವದ ಶೋಭಯಾತ್ರೆ ನಡೆಯಿತು. ದೇವಾಲಯದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ಪೈಂಗುತ್ತಿ ಪೂಜೆ, ಅಲಂಕಾರ ಪೂಜೆ ನಡೆಯಿತು. ಬಾಳೆಕಾಡುವಿನ ತೋಟದ ದೇವಾಲಯದಿಂದ ಕೇರಳದ 30 ಅಡಿ ಎತ್ತರದ ಬೃಹತ್ ವಿದ್ಯುತ್ ದೀಪ ಅಲಂಕೃತ ಆಕರ್ಷಣೀಯ ಮಂಟಪ ಮತ್ತು ವೈಭವಯುತ ಮಂಟಪದಲ್ಲಿ ಮುತ್ತಪ್ಪ, ತಿರುವಪ್ಪ ಉತ್ಸವ ಮೂರ್ತಿಯ ಭವ್ಯ ಮೆರವಣಿಯು ಬಾಳೆಕಾಡು ದೇವಾಲಯದಿಂದ ಸುಂಟಿಕೊಪ್ಪ ಪಟ್ಟಣದತ್ತ ಸಾಗಿತು. ವಾದ್ಯಮೇಳ, ಕೇರಳದ ಸಿಂಗಾರಿ ಮೇಳಕ್ಕೆ ಮಕ್ಕಳು, ಮಹಿಳೆಯರು, ಯುವಕರು, ಯುವತಿಯರು ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಸಮಿತಿಯ ಸದಸ್ಯರು, ಸಮೂದಾಯ ಬಾಂಧವರು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದರು. ಮೆರವಣಿಗೆಯಲ್ಲಿ ಮುತ್ತಪ್ಪ ಮತ್ತು ತಿರುವಪ್ಪ ದೇವರ ಸ್ತಬ್ಥಚಿತ್ರ ಸೇರಿದಂತೆ ಮೂರು ಕಳಶದ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ನಂತರ ಸುಂಟಿಕೊಪ್ಪ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ಕಳಸ ಪೂಜೆ…
ಮಡಿಕೇರಿ ಮಾ.26 NEWS DESK : ಮಡಿಕೇರಿ ಎ.ಎಲ್.ಜಿ ಕ್ರೆಸೆಂಟ್ ಶಾಲೆಯ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಹಾಯಕ ಅಧಿಕಾರಿ ಸವಿತಾ ಕೀರ್ತನ್, ವಿದ್ಯಾರ್ಥಿಗಳನ್ನು ಅಭಿನಂದಿಸಿ, ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯಕರ ಬೆಳವಣಿಗೆಯ ಮಹತ್ವವನ್ನು ಹೇಳಿದರು. ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಮತ್ತು ದೈಹಿಕ ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು. ಎಎಲ್ಜಿ ಕ್ರೆಸೆಂಟ್ ಆಡಳಿತ ಮಂಡಳಿಯ ಭಾತ್ಮಿದಾರ ಮುನೀರ್ ಅಹಮ್ಮದ್, ಕಾರ್ಯದರ್ಶಿ ಮೊಹಮ್ಮದ್ ಹನೀಫ್ ಮತ್ತು ನಿರ್ದೇಶಕರಾದ ಲಿಯಾಕತ್, ಉಮರ್, ಖಜಾಂಚಿ ಫಯಾಜ್, ಪ್ರಾಂಶುಪಾಲರಾದ ಜಾಯ್ಸಿ ವಿನಯಾ ಮತ್ತು ಕೆ.ಜಿ ವಿಭಾಗದ ಸಂಯೋಜಕಿ ತಾಸಿನ್ ಸೇರಿದಂತೆ ಅತಿಥಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಬೇಬಿ ಅನೀನಾ, ಬೇಬಿ ಆಯಿರಾ ಸಜ್ಜತ್, ಬೇಬಿ ಅಲ್ಫಿಯ ಶೇಖ್ ನಿರೂಪಿಸಿದರು, ಬೇಬಿ ಮಿಥಾಲಿ ಸ್ವಾಗತಿಸಿದರು ಮತ್ತು ಬೇಬಿ ಧಾನ್ವಿ ವಂದಿಸಿದರು. ಪ್ರಿ-ಕೆಜಿ, ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಪ್ರತಿಭೆ…
ಮಡಿಕೇರಿ ಮಾ.26 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಅಧಿಕಾರಿಗಳ ಸಭೆಯು ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಚಿವರು ಹಾಗೂ ಶಾಸಕರು ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ವರದಿಯನ್ನು ಪಡೆದರು ಹಾಗೂ ಪ್ರಗತಿ ಪರಿಶೀಲನೆ ನಡೆಸಿದರು. ಇಲಾಖೆಗಳಲ್ಲಿಯ ಕೆಲಸಗಳನ್ನು ಮತ್ತಷ್ಟು ಚುರುಕುಗೊಳಿಸುವಂತೆ ಸಲಹೆ ನೀಡಿದರು. ಮಾನವ-ಪ್ರಾಣಿ ಸಂಘರ್ಷ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಣ ಮೀಸಲಿಟ್ಟಿದ್ದು, ಜನರ ಸುರಕ್ಷತೆಯ ಬಗ್ಗೆಯೂ ಗಮನಹರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ಇಲಾಖೆಗಳ ನೂನ್ಯತೆಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಜನಸಾಮಾನ್ಯರಿಗೆ ಅನುಕೂಲ ಆಗುವಂತೆ ಕಾರ್ಯನಿರ್ವಹಿಸದೇ ಇದ್ದಲ್ಲಿ ಕಠಿಣ ಕ್ರಮ ಎದುರಿಸಬೇಕಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದರು. ಈ ಸಂದರ್ಭ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವಿರಾಜಪೇಟೆ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಪಿ.ವಿ.ಜಾನ್ಸನ್, ಅಧಿಕಾರಿಗಳು…
ಸೋಮವಾರಪೇಟೆ ಮಾ.26 NEWS DESK : ಕೊಡಗಿನ ಮತದಾರರು ವಿದ್ಯಾವಂತ ಯುವಕರನ್ನು ಶಾಸಕರನ್ನು ಆಯ್ಕೆ ಮಾಡಿರುವ ಕಾರಣದಿಂದ ಜಿಲ್ಲೆಯಲ್ಲಿ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಜಿಲ್ಲಾ ಹಾಗೂ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೊಡವ ಸಮಾಜದಲ್ಲಿ ನಡೆದ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕಾಗಿ ತ್ಯಾಗ ಮಾಡಿದವರು ಪಕ್ಷದ ಆಸ್ತಿಯಾಗಿದ್ದಾರೆ. ಅಂತಹವರಿಗೆ ಪಕ್ಷ ಯಾವತ್ತು ಚಿರರುಣೆಯಾಗಿರುತ್ತದೆ. 1919ರಿಂದ ನಾನು ಕಾಂಗ್ರೆಸ್ಗಾಗಿ ದುಡಿದಿದ್ದೇನೆ. ನನಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಕಾರ್ಯಕರ್ತರೇ ಪಕ್ಷದ ಜೀವಾಳ ಎಂದು ಬಣ್ಣಿಸಿದರು. ಪಂಚ ಗ್ಯಾರೆಂಟಿಗಳು ಎಲ್ಲ ಮನೆಗಳಿಗೆ ತಲುಪಿವೆ. ಪ್ರತಿ ಕುಟುಂಬಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಯ ಉದ್ದೇಶಗಳನ್ನು ಪ್ರತಿ ಕುಟುಂಬಗಳಿಗೂ ತಿಳಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಈ ಮೂಲಕ ಪಕ್ಷದ ಸಂಘಟನೆ ಮಾಡಬೇಕು ಎಂದು ಹೇಳಿದರು. ಕೊಡಗಿನಲ್ಲಿ ಬಿಜೆಪಿ ಶಾಸಕರು 25 ವರ್ಷ ಅಧಿಕಾರ ನಡೆಸಿದ್ದಾರೆ. ಆದರೆ ಅಭಿವೃದ್ಧಿ ಕಡೆ ಹೆಚ್ಚಿನ…
ಸೋಮವಾರಪೇಟೆ ಮಾ.26 NEWS DESK : ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪ್ರಥಮ ವರ್ಷದ ವಾರ್ಷಿಕ ಮಹಾಸಭೆ ಸೋಮವಾರಪೇಟೆ ಸಂಕಪ್ಪ ಸಭಾಂಗಣದಲ್ಲಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹೋರಾಟ ಸಮಿತಿಯನ್ನು ರಚಿಸಲಾಗಿದ್ದು, ಶಾಸಕಾಂಗ ಮತ್ತು ಕಾರ್ಯಾಂಗದ ಮೂಲಕ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು. ಈಗಾಗಲೇ ಗ್ರಾಮೀಣ ಭಾಗಗಳಿಗೆ ಬಸ್ ಸೇವೆ, ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳ ನಿವಾರಣೆ, ನೂತನ ಹೋಬಳಿ ಕಚೇರಿಗಳ ಸ್ಥಾಪನೆ, ರಸ್ತೆಗಳ ಅಭಿವೃದ್ಧಿ, ಮೂಲಭೂತ ಸೌಕರ್ಯ, ಜಾಗದ ದಾಖಲಾತಿ ಸಮಸ್ಯೆ, ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಇಲಾಖೆ, ಶಾಸಕರು, ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಸಮಿತಿಯ ಕೆಲವೊಂದು ಬೇಡಿಕೆಗಳಿಗೆ ಸ್ಪಂದನೆ ಲಭಿಸಿದ್ದು, ಉಳಿದ ಬೇಡಿಕೆಗಳ ಈಡೇರಿಕೆಗಾಗಿ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದರು. ಸಂಘದ ಆಡಳಿತ ಮಂಡಳಿ ವರದಿಯನ್ನು ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಲೆಕ್ಕಪತ್ರವನ್ನು ಖಜಾಂಚಿ ತ್ರಿಶೂಲ್ ಕಾರ್ಯಪ್ಪ ಮಂಡಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಕೆ.ಎನ್.…






