ಸುಂಟಿಕೊಪ್ಪ NEWS DESK ಜ.17 : ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಸುಂಟಿಕೊಪ್ಪ ಸಮೀಪದ ಗರಗಂದೂರು ಮಲಿಕಾರ್ಜುನ ಕಾಲೋನಿಯ ಮಾದಾಪುರ ಹೊಳೆಯಲ್ಲಿ ಶನಿವಾರ ನಡೆದಿದೆ. ಸುಂಟಿಕೊಪ್ಪದ ಪಂಪ್ಹೌಸ್ ನಿವಾಸಿಗಳಾದ ಸುಂಟಿಕೊಪ್ಪ ಆಟೋಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಶರೀಫ್ ಅವರ ಪುತ್ರ ಮಹಮ್ಮದ್ ರಾಯಿಜ್ (16) ಹಾಗೂ ಸರದಾರ್ ಅವರ ಪುತ್ರ ಮಹಮ್ಮದ್ ನಿಹಾಲ್ (16) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರು ಮಾದಾಪುರ ಚೆನ್ನಮ್ಮ ಜೂನಿಯರ್ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮನೆಗೆ ತೆರಳುವ ಸಂದರ್ಭ ಮಾದಾಪುರ ಹೊಳೆಯಲ್ಲಿ ಈಜಲು ನೀರಿಗಿಳಿದಿದ್ದ ವಿದ್ಯಾರ್ಥಿಗಳು ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್ರಾಜ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ಈಜು ತಜ್ಞರ ಸಹಾಯದಿಂದ ಮೃತದೇಹಗಳನ್ನು ಹೊಳೆಯಿಂದ ಹೊರತೆಗೆಯಲಾಗಿದೆ.
ಲೇಖಕ: admin
ಮಡಿಕೇರಿ ಜ.17 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯು ರಾಜ್ಯದ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಇದುವರೆಗೆ 1.12 ಲಕ್ಷ ಕೋಟಿ ರೂ. ಭರಿಸಲಾಗಿದೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಇದುವರೆಗೆ 647.59 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಮಾಹಿತಿ ನೀಡಿದ್ದಾರೆ. ನಗರದ ಹೊರವಲಯದಲ್ಲಿರುವ ಆಕ್ಸಿರಿಚ್ ರೆಸಾರ್ಟ್ನಲ್ಲಿ ಶನಿವಾರ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತವಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರ ಜಿಎಸ್ಟಿ ಸಂಗ್ರಹಣೆಯಲ್ಲಿ ಸರಾಸರಿ ಹೆಚ್ಚಳವಾಗಿದೆ. ಐದು ಗ್ಯಾರಂಟಿ ಯೋಜನೆ ಜಾರಿಯಿಂದ ಶೇ.24 ರಷ್ಟು ಜಿಡಿಪಿ ದರ ಹೆಚ್ಚಳವಾಗಿದೆ. ನಿರುದ್ಯೋಗ ಪ್ರಮಾಣ ಶೇ.4.3 ರಷ್ಟು ಇದ್ದದ್ದು ಈಗ ಶೇ.2.5ಕ್ಕೆ ಇಳಿಕೆಯಾಗಿದೆ. ಮಹಿಳೆಯರು ಉದ್ಯೋಗ ಮತ್ತು ಉದ್ಯಮಶೀಲತೆಯಲ್ಲಿ ಶೇ.25 ರಿಂದ 30 ಕ್ಕೆ ಏರಿಕೆಯಾಗಿರುವುದು ವಿಶೇಷವಾಗಿದೆ. ಜೊತೆಗೆ ರಾಷ್ಟ್ರದ ತಲಾ…
ಮಡಿಕೇರಿ ಜ.17 NEWS DESK : ಯಕ್ಷಗಾನ, ಡೊಳ್ಳುಕುಣಿತ, ಪೂಜಾಕುಣಿತ, ಜಾನಪದ ಗಾಯನ, ಭರತನಾಟ್ಯ, ಸುಗಮ ಸಂಗೀತ ಹೀಗೆ ಹಲವು ಕಲೆಗಳು ನಾಡನ್ನು ಪ್ರತಿಬಿಂಭಿಸುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸುವಂತಾಗಬೇಕು. ಜೊತೆಗೆ ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಸಂಪಾಜೆ ಗ್ರಾ.ಪಂ ಅಧ್ಯಕ್ಷರಾದ ರಮಾದೇವಿ ಕಳಗಿ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಪಾಜೆ ಗ್ರಾಮ ಪಂಚಾಯಿತಿ ಹಾಗೂ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಸಮಿತಿ ಇವರ ಸಹಯೋಗದೊಂದಿಗೆ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ‘ಸಾಂಸ್ಕøತಿಕ ಸೌರಭ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಾಂಸ್ಕøತಿಕ ಹಾಗೂ ಜಾನಪದ ಕಲೆಗಳು ನಾಡಿನ ಅಸ್ಮಿತೆಯನ್ನು ಪ್ರತಿಬಿಂಭಿಸುತ್ತಿದ್ದು, ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಲ್ಲಿ ಯುವಜನರು ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಯಕ್ಷಗಾನ, ಜಾನಪದ ಸೋಭಾನೆ ಸೇರಿದಂತೆ ಜಾನಪದ ಕಲೆಗಳು ಹಿಂದಿನ ಐತಿಹಾಸಿಕವಾಗಿ ಮಹತ್ವದ ಪರಂಪರೆಯನ್ನು ಹೊಂದಿದ್ದು, ಗ್ರಾಮೀಣ ಪ್ರದೇಶದ ಸೊಗಡನ್ನು ತಿಳಿಸುತ್ತವೆ. ಆ ನಿಟ್ಟಿನಲ್ಲಿ…
ಮಡಿಕೇರಿ ಜ.17 NEWS DESK : ದೈವ ನಿಂದನೆ, ಅವಮಾನ, ಅಪಹಾಸ್ಯ, ಕಾರ್ಯಕ್ರಮಗಳಲ್ಲಿ ದೈವ ನರ್ತನಗಳ ಬಳಕೆಯನ್ನು ತೀವ್ರವಾಗಿ ವಿರೋಧಿಸಲಾಗುವುದು ಮತ್ತು ಇದರ ವಿರುದ್ಧ ಸರಕಾರದ ಮಟ್ಟದಲ್ಲಿ ಕ್ರಮಕ್ಕಾಗಿ ಒತ್ತಾಯಿಸಲಾಗುವುದು ಎಂದು ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಮಹಾಸಭೆ ನಿರ್ಣಯ ಕೈಗೊಂಡಿದೆ. ಮಡಿಕೇರಿಯ ಬಾಲಭವನದ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಪಾಲ್ಗೊಂಡ ದೈವ ಆರಾಧಕರು ಹಾಗೂ ದೈವ ನರ್ತಕರು ಇತ್ತೀಚಿನ ದಿನಗಳಲ್ಲಿ ತಮ್ಮ ಭಾವನೆಗೆ ದಕ್ಕೆಯಾಗುತ್ತಿರುವುದನ್ನು ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಜಿಲ್ಲಾಧ್ಯಕ್ಷ ಸದಾಶಿವ ರೈ ಅವರು ದೈವಾರಾಧನೆಯ ಆಚಾರ, ವಿಚಾರವನ್ನು ಕ್ರಮಬದ್ಧವಾಗಿ ಮಾಡುವಂತಾಗಬೇಕು. ಮುಂದಿನ ದಿನಗಳಲ್ಲಿ ಶಾಲಾ, ಕಾಲೇಜು ಹಾಗೂ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ದೈವ ನರ್ತನ ಬಳಕೆಯಾಗದಂತೆ ಮತ್ತು ದೈವವನ್ನು ಅನುಕರಣೆ ಮಾಡದಂತೆ ನೋಡಿಕೊಳ್ಳಬೇಕು. ಎಂದರು. ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ದೈವ ನರ್ತನದ ಕಾರ್ಯಕ್ರಮಗಳೇ ನಡೆಯುತ್ತಿದ್ದು, ದೈವಕ್ಕೆ ಅಪಹಾಸ್ಯ ಮಾಡಿದಂತಾಗುತ್ತಿದೆ. ಅಲ್ಲದೆ…
ಮಡಿಕೇರಿ ಜ.17 NEWS DESK : ಸುಂಟಿಕೊಪ್ಪದ ಮಂಜಿಕೆರೆ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ 7ನೇ ವರ್ಷದ ಗಗ್ಗರ ಸೇವೆ (ಕೋಲ) ಜ.18 ರಂದು ನಡೆಯಲಿದೆ. ಅಂದು ಸಂಜೆ 6 ಗಂಟೆಯ ನಂತರ ಕೋಲ ನಡೆಯಲಿದ್ದು, ಅನ್ನದಾನ ಸೇವೆ ನೆರವೇರಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೊರಗಜ್ಜ ದೈವದ ಕರಿಗಂಧ ಪ್ರಸಾದವನ್ನು ಸ್ವೀಕರಿಸುವಂತೆ ದೈವಸ್ಥಾನದ ದೈವ ಆರಾಧಕ ಎಂ.ಎ.ಮಹೇಶ್ ಮನವಿ ಮಾಡಿದ್ದಾರೆ. ಸೇವೆಗೆ ಸಹಕಾರ ನೀಡುವವರು ಮತ್ತು ಹೆಚ್ಚಿನ ಮಾಹಿತಿಗೆ ಎಂ.ಎ.ಮಹೇಶ್ 8762304217 ನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.17 NEWS DESK : ಜೀವ ವಿಮಾ ನಿಗಮವು ತನ್ನ ಸ್ಥಾಪನೆಯ 70ನೇ ವರ್ಷಕ್ಕೆ ಕಾಲಿಡುತ್ತಿದ್ದು, ಪಾಲಿಸಿದಾರರ ಸೇವೆಗೆ ಪೂರಕವಾದ ಎಲ್ಲಾ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಸೇವಾ ದಕ್ಷತೆಗೆ ನಿರಂತರವಾಗಿ ಒತ್ತು ನೀಡುತ್ತಿದೆ. ಸಾರ್ವಜನಿಕರು ಎಲ್ಐಸಿಯಲ್ಲಿಯೇ ಪಾಲಿಸಿ ತೆಗೆದುಕೊಳ್ಳುವಂತೆ ಎಲ್ಐಸಿ ಮೈಸೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ನಾಗೇಶ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1956ರವರೆಗೆ ಖಾಸಗಿ ರಂಗದಲ್ಲಿದ್ದ ಜೀವ ವಿಮಾ ವಹಿವಾಟನ್ನು ರಾಷ್ಟ್ರೀಕರಣಗೊಳಿಸುವ ಸುಗ್ರೀವಾಜ್ಞೆಯನ್ನು ಅಂದಿನ ಕೇಂದ್ರ ಸರ್ಕಾರವು ಜ.19, 1956 ರಂದು ಅಂಗೀಕರಿಸಿದ್ದು, ಜ.19ಕ್ಕೆ ಜೀವ ವಿಮೆಯ ರಾಷ್ಟ್ರೀಕರಣದ 70ನೇ ವರ್ಷಕ್ಕೆ ಕಾಲಿಡುತ್ತಿದೆ. ಭಾರತದ ಜನತೆಯ ನಂಬಿಕೆಯ ಬ್ರಾಂಡ್ ಆಗಿರುವ ಎಲ್ಐಸಿಯನ್ನು ಪೋಷಿಸಿ, ಬೆಳೆಸಿದ ಮತ್ತು ಇಂದಿಗೂ ನಂಬಿಕೆ ಇರಿಸಿಕೊಂಡಿರುವ ಪಾಲಿಸಿದಾರರಿಗೆ ಎಸ್.ಎಸ್.ನಾಗೇಶ್ ಕೃತಜ್ಞತೆ ಸಲ್ಲಿಸಿದರು. ಈ 69 ವರ್ಷಗಳಲ್ಲಿ ಎಲ್ಐಸಿಯು ರಾಷ್ಟ್ರೀಕರಣದ ಸಂದರ್ಭದಲ್ಲಿ ತನಗೆ ನೀಡಿದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದೆ. ಭಾರತದ ಜನತೆ ನಂಬಿಕೆಯಿಂದ ನೀಡುವ ಪ್ರೀಮಿಯಂ ಮೊತ್ತವನ್ನು ಜೋಪಾನವಾಗಿರಿಸಿ ಇಂದು ಬೃಹತ್…
ಮಡಿಕೇರಿ ಜ.17 NEWS DESK : ಗೋಣಿಕೊಪ್ಪ-ಪಾಲಿಬೆಟ್ಟ ಮುಖ್ಯ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. 1 ಕೋಟಿ 20 ಲಕ್ಷಗಳ ಅನುದಾನದಲ್ಲಿ ಗೋಣಿಕೊಪ್ಪ ದಿಂದ ಪಾಲಿಬೆಟ್ಟಕ್ಕೆ ತೆರಳುವ ಪ್ರಮುಖ ರಸ್ತೆ ಇದಾಗಿದ್ದು, ದಿನಕ್ಕೆ ಸಾವಿರಾರು ವಾಹನಗಳು ಈ ದಾರಿಯಲ್ಲಿ ಸಂಚರಿಸುತ್ತಿವೆ. ಈ ಬಾರಿಯ ತೀವ್ರ ಮಳೆಯಿಂದಾಗಿ ಹಾನಿ ಗಿಡದ ರಸ್ತೆಯ ದುರಸ್ತಿಗೆ ಶಾಸಕರು, ವಿಶೇಷ ಅನುದಾನ ಒದಗಿಸಿದ್ದರು. ಕೊಟ್ಟ ಮಾತಿನಂತೆ, ಮಳೆ ನಿಂತ ಕೂಡಲೇ ಗುಣಮಟ್ಟದ ಕಾಮಗಾರಿಯನ್ನು ನಡೆಸಿ ಸಂಚಾರಕ್ಕೆ ಯೋಗ್ಯವಾದ ಉತ್ತಮ ರಸ್ತೆಯನ್ನು ಸಾರ್ವಜನಿಕರ ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭಶಾಸಕರ ಸಹೋದಾರರಾದ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರಾದ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಮಂಜುಳಾ, ಸದಸ್ಯರು, ಪೊನ್ನಂಪೇಟೆ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ಪಕ್ಷದ ಪ್ರಮುಖರು ಎ.ಜೆ.ಬಾಬು, ಅಜಿತ್ ಅಯ್ಯಪ್ಪ,…
ಮಡಿಕೇರಿ ಜ.17 NEWS DESK : ಕೊಡಗು ಪತ್ರಕತ೯ರ ಸಂಘ ಮತ್ತು ಪತ್ರಕತ೯ರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಜ.18 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿ ಆಯೋಜಿತವಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮತ್ತು ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಕ್ರಿಕೆಟ್ ಪಂದ್ಯಾಟವನ್ನು ಶಾಸಕರಾದ ಎ.ಎಸ್. ಪೊನ್ನಣ್ಣ, ಎಂ.ಪಿ. ಸುಜಾಕುಶಾಲಪ್ಪ ಉದ್ಘಾಟಿಸಲಿದ್ದಾರೆ. ಕನಾ೯ಟಕ ಸಕಾ೯ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್ ಪಾಲ್ಗೊಳ್ಳಲಿರುವ ಸಭಾ ಕಾಯ೯ಕ್ರಮವನ್ನು ಸಮಾಜಸೇವಕರು, ಉದ್ಯಮಿಗಳಾದ ನಾಪಂಡ ಮುತ್ತಪ್ಪ ನಾಪಂಡ ಮುದ್ದಪ್ಪ ಉದ್ಘಾಟಿಸಲಿದ್ದಾರೆ. ಕ್ರೀಡಾಪಟುಗಳ ಜೆಸಿ೯ಯನ್ನು ಉದ್ಯಮಿ, ಸಮಾಜಸೇವಕ ಎಡಕೇರಿ ಪ್ರಸನ್ನ ಅನಾವರಣಗೊಳಿಸಲಿದ್ದಾರೆ. ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ನಗರಸಭಾಧ್ಯಕ್ಷೆ ಕಲಾವತಿ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನಸಭೆಯ ಮಾಜಿ ಸಬಾಧ್ಯಕ್ಷ ಕೆ.ಜಿ.ಬೋಪಯ್ಯ, ಕನಾ೯ಟಕ ಕ್ರಿಕೆಟ್ ಅಕಾಡೆಮಿ ಸಂಚಾಲಕ ಚೇನಂಡ ಪೃಥ್ವಿ ದೇವಯ್ಯ ಹೈಕೋಟ್೯ನ ಹಿರಿಯ ವಕೀಲ ಹಾಗೂ…
ಮಡಿಕೇರಿ ಜ.17 NEWS DESK : ನಗರದ ಹಿಂದೂಸ್ತಾನಿ ಶಾಲಾ ವ್ಯಾಪ್ತಿಯಲ್ಲಿ ಎಸ್ ಐ ಆರ್ ಮ್ಯಾಪಿಂಗ್ ಪರಿಷ್ಕರಣೆ ಬಿರುಸುಗೊಂಡಿದೆ. ವಾರ್ಡ್ ಸಂಖ್ಯೆ 10ರ ಕ್ರಮ ಸಂಖ್ಯೆ 216 ಹಿಂದೂಸ್ತಾನಿ ಶಾಲಾ ವ್ಯಾಪ್ತಿಯಲ್ಲಿ ಬಿ.ಎಲ್.ಓ(BLO) ಸುಮತಿ ಅವರು ಸುಮಾರು ಶೇ.70 ರಷ್ಟು ಎಸ್ಐಆರ್ ಮ್ಯಾಪಿಂಗ್ ಪ್ರಕ್ರಿಯೆ ನಡೆಸಿದರು. ಈ ಸಂದರ್ಭ ನಗರ ಸಭಾ ಸದಸ್ಯರಾದ ಮುಸ್ತಪ ತಾವೇ ಖುದ್ದಾಗಿ ನಿಂತು ಮತದಾರರ ಹೆಸರುಗಳ ಪರಿಷ್ಕರಣೆಗೆ ಸಹಕರಿಸಿದರು. ನಂತರ ಮಾತನಾಡಿದ ಅವರು, ಬಾಕಿ ಉಳಿದಿರುವ ಮತದಾರರು ಶೀಘ್ರ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಮಡಿಕೇರಿ ಜ.17 NEWS DESK : ಕೊಡಗಿನ ಜಮ್ಮಾಬಾಣೆಯ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಉಚ್ಚ ನ್ಯಾಯಾಲಯವು ನೀಡಿದ ತೀರ್ಪನ್ನು ತಕ್ಷಣ ಅನುಷ್ಠಾನಗೊಳಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ ಬಿಜೆಪಿಯ ಪ್ರಮುಖರು, ನ್ಯಾಯಾಲಯ ತೀರ್ಪಿನಲ್ಲಿ ಆದೇಶಿಸಿರುವಂತೆ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುದಾಗಿ ಎಚ್ಚರಿಕೆ ನೀಡಿದರು. 2011 ರಲ್ಲಿ ಅಂದಿನ ಬಿಜೆಪಿ ಸರಕಾರವು ಕೊಡಗಿನ ಜ್ವಲಂತ ಸಮಸ್ಯೆಯಾದ ಜಮ್ಮಾ ಬಾಣೆಯ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ನಿಯಮ 2(20) ಮತ್ತು ನಿಯಮ 80ಕ್ಕೆ ತಿದ್ದುಪಡಿ ತಂದಿದ್ದು, ಇದು ರಾಜ್ಯ ಸರಕಾರದ ಪತ್ರದಲ್ಲಿ ಪ್ರಕಟಣೆಗೊಂಡಿದೆ. ಇದನ್ನು ಪ್ರಶ್ನಿಸಿ ಕೆಲವರು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ರಿಟ್ ಅರ್ಜಿಗಳ ಬಗ್ಗೆ ಸುದೀರ್ಘವಾದ ವಾದ ವಿವಾದಗಳು ನಡೆದು ಉಚ್ಚ ನ್ಯಾಯಾಲಯವು ಜುಲೈ 2024 ರಲ್ಲಿ ಸುದೀರ್ಘವಾದ ತೀರ್ಪನ್ನು ನೀಡಿ ರಿಟ್ ಪಿಟಿಷನ್ ಅನ್ನು…






