ಮಡಿಕೇರಿ NEWS DESK ಮೇ 24 : ಪತ್ರಕರ್ತರ ಸ್ನೇಹಿತರ ಬಳಗ ವತಿಯಿಂದ ಪ್ರಸನ್ನ ಎಡಿಕೇರಿ ಮಾಲೀಕತ್ವದ ಲೀಡಿಂಗ್ ಎಡ್ಜ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಡಿಕೇರಿ ನಗರದ ಪತ್ರಕರ್ತರಿಗೆ ಭಾನುವಾರ ಆಯೋಜಿಸಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯಾಟದಲ್ಲಿ ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ ಸ್ಥಾನ ಪಡೆಯಿತು. ಬೆಸ್ಟ್ ಆಫ್ ತ್ರಿ ಪಂದ್ಯಾಟದ ಮೊದಲ ಪಂದ್ಯದಲ್ಲಿ ನವೀನ್ ಡಿಸೋಜ ಮಾಲೀಕತ್ವದ ಮಂಜುಸುವರ್ಣ ನಾಯಕತ್ವದ ಪವರ್ ಹಿಟ್ಟರ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ನಿಗದಿತ 8 ಓವರ್ನಲ್ಲಿ 3 ವಿಕೆಟ್ ನಷ್ಟಕ್ಕೆ 79ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಿದ ರಾಕೇಶ್ ಮಾಲೀಕತ್ವದ ಆದರ್ಶ್ ಅದ್ಕಲೇಗಾರ್ ನಾಯಕತ್ವದ ಮೀಡಿಯಾ ಮಾಸ್ಟರ್ಸ್ ತಂಡ 5.3 ಓವರ್ನಲ್ಲಿ ಗೆಲುವಿನ ದಡ ಸೇರಿತು. 2ನೇ ಪಂದ್ಯದಲ್ಲಿ ಟಾಸ್ ಗೆದ್ದ ಮೀಡಿಯಾ ಮಾಸ್ಟರ್ಸ್ ತಂಡ ನಿಗದಿತ 8 ಓವರ್ನಲ್ಲಿ 3 ವಿಕೆಟ್ ಕಳೆದುಕೊಂಡು 113 ರನ್ ಕೆಲೆ ಹಾಕಿತು. ತಂಡದ ಪರ ಆದರ್ಶ್ 51…
ಲೇಖಕ: admin
ಮಡಿಕೇರಿ NEWS DESK ಮೇ 24 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಮೃತ ದಾನಿಯಾದ ಡಾಲು ಅವರಿಂದ ಸಂಗ್ರಹಿಸಲಾದ ಎರಡು ಮೂತ್ರಪಿಂಡಗಳನ್ನು ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಈ ಮೂಲಕ ಸಂಸ್ಥೆಯಲ್ಲಿ ನಡೆದ ಮೊದಲ ಅಂಗಾಂಗ ದಾನ ಕಾರ್ಯಾಚರಣೆ ಜೀವ ಉಳಿಸುವ ಮಹತ್ವದ ಸಾಧನೆಯಾಗಿ ಪರಿಣಮಿಸಿದೆ. ಅಂಗಾಂಗ ದಾನದ ಮೂಲಕ ಇಬ್ಬರು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ದೊರೆತಿದೆ. ಮೂತ್ರಪಿಂಡ ಕಸಿಗೆ ಅಗತ್ಯ ಸಹಕಾರ ನೀಡಿದ ಜೆ.ಎಸ್.ಎಸ್ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ಡಾ.ಮಂಜುನಾಥ ಶೆಟ್ಟಿ, ವಿಭಾಗದ ಮುಖ್ಯಸ್ಥರು ನೆಪ್ರಾಲಾಜಿ ವಿಭಾಗ ಹಾಗೂ ಅಂಗಾಗ ಕಸಿ ಸಂಯೋಜಕರು, ಡಾ. ವಿಜಯಕುಮಾರ್ ಆರ್., ಪ್ರೊಫೆಸರ್ ಆಫ್ ಯೂರಾಲಜಿ ಮತ್ತು ರಿನಲ್ ಟ್ರಾನ್ಸ್ಪ್ಲಾಂಟ್ ಸರ್ಜನ್, ಡಾ. ಸಚಿನ್ ಧಾರವಾಡ್ಕರ್, ಪ್ರೊಫೆಸರ್ ಆಫ್ ಯೂರಾಲಜಿ, ಶ್ರೀ ರಾಜೇಂದ್ರ, ಯೂರಾಲಜಿ ಓಟಿ ಇನ್ಚಾರ್ಜ್ ನರ್ಸ್ ಹಾಗೂ ಶ್ರೀ ಗವಿ ಪ್ರಸಾದ್, ಓಟಿ ತಾಂತ್ರಿಕ ತಜ್ಞರು ಸೇರಿದಂತೆ ಎಲ್ಲಾ ಸಿಬ್ಬಂದಿಗೆ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಅವರು…
ಮಡಿಕೇರಿ NEWS DESK ಮೇ 24 : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಕಚೇರಿ ಮೇ 27 ರಂದು ಮಡಿಕೇರಿಯ ಮಹದೇವಪೇಟೆಯಲ್ಲಿ ಉದ್ಘಾಟನೆಗೊಳ್ಳಲಿದೆ. ನೂತನ ಕಚೇರಿಯನ್ನು ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಹಾಗೂ ಹಿರಿಯ ವಕೀಲ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಉದ್ಘಾಟಿಸಲಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಮೈಸೂರು ಘಟಕದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ, ಮೇ 23 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ದೊಡ್ಡಮ್ಮ ಹಾಗೂ ಶ್ರೀ ಚಿಕ್ಕಮ್ಮ ದೇವಿಯ ವಾರ್ಷಿಕ ಜಾತ್ರೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಶ್ರೀ ಬಸವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ನಡೆದ ಗ್ರಾಮ ದೇವತೆ ಹಬ್ಬ ಹಾಗೂ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿ ದೇವರ ದರ್ಶನ ಪಡೆದರು. ತೊರೆನೂರು ಗ್ರಾಮದ ದೇವಸ್ಥಾನದ ಬಳಿಯಿಂದ ಶುಕ್ರವಾರ ರಾತ್ರಿ ಆರಂಭಗೊಂಡ ದೇವರ ಉತ್ಸವವು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ವಿರಕ್ತ ಮಠದ ಆವರಣದಲ್ಲಿರುವ ಗ್ರಾಮ ದೇವತೆಗಳ ಆವರಣಕ್ಕೆ ಶನಿವಾರ ಮುಂಜಾನೆ ತಲುಪಿದವು. ಮೆರವಣಿಗೆಯಲ್ಲಿ ಕುಕ್ಕೆಯೊಂದಿಗೆ ಹರಕೆ ಹೊತ್ತ ಭಕ್ತರು ಅಗ್ನಿಕುಂಡ ಹಾಯ್ದು ಭಕ್ತಿಭಾವ ಮೆರೆದರು. ದೇವರಿಗೆ ಹಣ್ಣುತುಪ್ಪ ಸಮರ್ಪಿಸಿದರು. ರಾತ್ರಿ ಅಮ್ಮನವರ ದೇವಸ್ಥಾನದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕೈಗೊಳ್ಳಲಾಗಿತ್ತು. ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ದೇವಸ್ಥಾನ ಸಮಿತಿ ಸೇರಿದಂತೆ ಗ್ರಾಮದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದ ಉತ್ಸವ ಮಂಟಪಗಳ ಮೆರವಣಿಗೆಯು ಹಬ್ಬಕ್ಕೆ ಮೆರಗು…
ಕುಶಾಲನಗರ ಮೇ 23 NEWS DESK : ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ವಿಠಲ ಸಾಲಿಯಾನ್ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ಉಚಿತ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಕಾಲ ಕಾಲಕ್ಕೆ ಅಗತ್ಯವಿರುವ ತಂತ್ರಜ್ಞಾನಗಳಲ್ಲಿ ನುರಿತು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆ ನೀಡುವಲ್ಲಿ ನಿಪುಣರಾಗಬೇಕಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಗಳ ಮೂಲಕ ಮಹಿಳೆಯರಿಗೆ ಹಲವು ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಅದರ ಸದುಪಯೋಗವನ್ನು ಪಡೆಯುವಂತೆ ಅವರ ಕೋರಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಮಾತನಾಡಿ, ಮಹಿಳೆಯರು ಸಮಯ ವ್ಯರ್ಥ ಮಾಡದೆ ತಾವು ಕಲಿತಿರುವ ವಿದ್ಯೆಯನ್ನು ಬಳಸಿಕೊಂಡು ಕುಟುಂಬ ನಿರ್ವಹಣೆಯಲ್ಲಿ…
ಚೆಟ್ಟಳ್ಳಿ ಮೇ 23 NEWS DESK : ಪುಸ್ತಕಗಳನ್ನು ಓದುವುದರಿಂದ ಮನಸ್ಸಿಗೆ ಸುಖ-ಶಾಂತಿ, ನೆಮ್ಮದಿ ಪ್ರಾಪ್ತಿಯಾಗುವುದರೊಂದಿಗೆ ಮನೆಯ ವಾತಾವರಣವು ಬೆಳಗುವುದೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಚೇರಂಬಾಣೆಯ ಬೇಂಗ್ನಾಡ್ ಕೊಡವ ಸಮಾಜದಲ್ಲಿ ಆಯೋಜಿಸಿದ್ದ 10ನೇ ಕೊಡವ ಪುಸ್ತಕ ಪತ್ತಾಯ ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ ಎಂಬುವುದು ಜ್ಞಾನದ ದೀವಿಗೆಯಿದ್ದಂತೆ. ಇದರಿಂದ ಓದುಗರ ಜ್ಞಾನ ವೃದ್ಧಿಸುವುದು. ಕೊಡವರ ವಿಚಾರವಾಗಿ ಕಾವೇರಿ ಪುರಾಣ, ಸ್ಕಂದ ಪುರಾಣಗಳಲ್ಲಿ ಉಲ್ಲೇಖವಿದ್ದು, 2ನೇ ಶತಮಾನದ ತಮಿಳು ಸಂಘದ ಸಾಹಿತ್ಯದಲ್ಲಿಯೂ ಉಲ್ಲೇಖಿಸಲಾಗಿದೆ. ಇಂತಹ ಜನಾಂಗದ ಸಾಹಿತ್ಯ, ಸಂಸ್ಕೃತಿಯ ವಿಚಾರವಾಗಿ ಪ್ರತಿಯೊಬ್ಬರೂ ಅರಿತಿರಬೇಕು. ಮಕ್ಕಳನ್ನು ಕೊಡವಾಮೆಯ ಪಥದಲ್ಲಿ ಬೆಳೆಸುವುದು ಒಂದು ಕರ್ತವ್ಯ ಅಥವಾ ಜವಾಬ್ದಾರಿಯಾಗಿಬಾರದು, ಇದೊಂದು ಜೀವನ ಕ್ರಮವಾಗಿರಬೇಕು ಎಂದರು. ಬಾಲ್ಯದಲ್ಲಿಯೇ ಬಾಳೋಪಾಟ್, ಕೊಡಗಿನ ಚರಿತ್ರೆ, ಪೂರ್ವಜರ ಸಾಧನೆಗಳು ಹಾಗೂ ಸಂಸ್ಕೃತಿಯ ಬಗ್ಗೆ ಅರಿತಿದ್ದರೆ ಭವಿಷ್ಯದಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ದಕ್ಷತೆಯ ಬದುಕು ರೂಪುಗೊಳ್ಳಲು ಕಾರಣವಾಗುವುದು. ಬೇಂಗ್ನಾಡ್ ಜನರಲ್ಲಿ ಸಾಹಿತ್ಯದ ಬಗ್ಗೆ ಇರುವ…
ಸುಂಟಿಕೊಪ್ಪ ಮೇ 23 NEWS DESK : ಸಾಹಿತ್ಯಾಸಕ್ತರಿಗೆ ಕೊಡಗು ಜಿಲ್ಲೆಯಲ್ಲಿ ಎಲ್ಲಾ ರೀತಿಯಲ್ಲಿ ಪ್ರೋತ್ಸಾಹದಾಯಕ ವಾತಾವರಣ ಇದೆ. ಹೀಗಾಗಿಯೇ ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿ ಇದೆ ಎಂದು ಕೊಡಗು ಜಿಲ್ಲಾ 17 ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಅಬ್ದುಲ್ ರಶೀದ್ ಶ್ಲಾಘಿಸಿದ್ದಾರೆ. ಹುಣಸೂರು ಬಳಿಯಲ್ಲಿ ನೆಲಸಿರುವ ಸುಂಟಿಕೊಪ್ಪ ಮೂಲದ ನಾಡಿನ ಹಿರಿಯ ಸಾಹಿತಿ ಅಬ್ದುಲ್ ರಶೀಧ್ ಮೇ 29 ಮತ್ತು 30 ರಂದು ಸುಂಟಿಕೊಪ್ಪದಲ್ಲಿ ಆಯೋಜಿತ ಕನ್ನಡ ಸಾಹಿತ್ಯದ 17 ನೇ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದು, ಈ ಹಿನ್ನಲೆಯಲ್ಲಿ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ಅಬ್ದುಲ್ ರಶೀದ್ ಜೊತೆ ಅವರ ಆದಿವಾಸಿ ಫಾರ್ಮ್ನಲ್ಲಿ ಸಂವಾದ ಆಯೋಜಿಸಲಾಗಿತ್ತು. ಪತ್ರಕರ್ತರೊಂದಿಗಿನ ಸಂವಾದ ಸಂದರ್ಭ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ ಅಬ್ದುಲ್ ರಶೀದ್, ಸುಂದರ ಕೊಡಗು ವಿಭಿನ್ನ ಧಾರ್ಮಿಕ, ಸಮುದಾಯಗಳ ಸಹಭಾಳ್ವೆಗೆ ಸಾಕ್ಷಿಯಾಗಿ ವಿಶಿಷ್ಟ ಜೀವನ ಶೈಲಿಯನ್ನು ಅಳವಡಿಸಿಕೊಂಡಿರುವ ಜನರನ್ನು ಹೊಂದಿದೆ. ಕನ್ನಡ, ಕೊಡವ, ಅರೆಭಾಷೆ, ತುಳು, ಮಲಯಾಳ, ಹಿಂದಿ, ತೆಲುಗು, ತಮಿಳು ಹೀಗೆ ವಿವಿಧ…
ಸೋಮವಾರಪೇಟೆ ಮೇ 23 NEWS DESK : ಗ್ಯಾರಂಟಿ ಯೋಜನೆಯ ಪ್ರಾಧಿಕಾರ ಸಮಿತಿ ಸಭೆ ಅಧ್ಯಕ್ಷರಾದ ಜಿ.ಎಂ.ಕಾಂತರಾಜು ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸೋಮವಾರಪೇಟೆ ತಾಲೂಕಿಗೆ ಸಂಬಂಧಿಸಿದಂತೆ 1032 ಬಿಪಿಎಲ್ ಪಡಿತರ ಚೀಟಿಗಳು ಎಪಿಎಲ್ ಆಗಿ ಪರಿವರ್ತನೆ ಆಗಿದ್ದು, ಅದರಲ್ಲಿ 261 ಅರ್ಜಿದಾರರು, ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರೆಂದು ಅರ್ಜಿ ಸ್ವೀಕೃತಗೊಂಡಿದೆ. ಇದರ ಪೈಕಿ 102 ಪ್ರಕರಣಗಳನ್ನು ಮರು ಸ್ಥಾಪಿಸಲಾಗಿದೆ. ಉಳಿದ ಪ್ರಕರಣಗಳಿಗೆ ಅಗತ್ಯ ದಾಖಲೆಗಳನ್ನು ಹಾಜರು ಪಡಿಸುವಂತೆ ನೋಟೀಸು ನೀಡಲಾಗಿದೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ಸಭೆಗೆ ತಿಳಿಸಿದರು. ವೈದ್ಯಕೀಯ ತುರ್ತು ಚಿಕಿತ್ಸೆಗೆ ಅರ್ಜಿ ಸಲ್ಲಿಸಲು ಹಾಗೂ ಪಡಿತರ ಚೀಟಿ ತಿದ್ದುಪಡಿಗಾಗಿ 2027ರ ಮಾರ್ಚ್ 31ರವರೆಗೆ ಸÀರ್ಕಾರದಿಂದ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಯುವನಿಧಿ ಯೋಜನೆಯಡಿ ಜನವರಿ 2024ರಿಂದ ಫೆಬ್ರವರಿ 2026ರವರೆಗೆ ಒಟ್ಟು 1,64,74,500 ರೂ.ಗಳನ್ನು ಯುವನಿಧಿ ಹಣ ನೀಡಲಾಗಿರುತ್ತದೆ ಎಂದು ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದರು. ಗೃಹಲಕ್ಷ್ಮೀ ಯೋಜನೆಯಡಿ ಡಿಸೆಂಬರ್ 2025ರಿಂದ ಫೆಬ್ರವರಿ 2026ರವರೆಗೆ ಫಲಾನುಭವಿಗಳ ಖಾತೆಗೆ…
ಸೋಮವಾರಪೇಟೆ ಮೇ 23 NEWS DESK : ಕುಂಬೂರು ಗ್ರಾಮ ಪೈಸಾರಿ ಜಾಗದಲ್ಲಿ ಉಚಿತ ನಿವೇಶನಕ್ಕಾಗಿ ನಡೆಯುತ್ತಿರುವ ನಿವೇಶನ ರಹಿತ ಕಾರ್ಮಿಕರ ಧರಣಿ 22ನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ಬಡ ಕಾರ್ಮಿಕರು ಟಾರ್ಪಲ್ನಿಂದ ನಿರ್ಮಿಸಿರುವ ಶೆಡ್ನಲ್ಲಿ ಮಳೆ-ಚಳಿಯಲ್ಲೇ ರಾತ್ರಿ ಕಳೆಯುತ್ತಿದ್ದಾರೆ.
ಮಡಿಕೇರಿ ಮೇ 23 NEWS DESK : ಕೊಡಗಿನ ಪತ್ರಕರ್ತ ಪ್ರಶಾಂತ್ ವಿರಚಿತ “ಹೊನ್ನಮ್ಮನ ಕನಸು” ಕಾದಂಬರಿ ವಿಶ್ವ ಕನ್ನಡ ಸಮ್ಮೇಳನದ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಭಾಜನವಾಗಿದೆ. ಚೇತನ ಪ್ರತಿಷ್ಠಾನ ಹಾಗೂ ಗೋವಾ ಕನ್ನಡಿಗರ ಒಕ್ಕೂಟ ಆಯೋಜಿಸುತ್ತಿರುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಭಾನುವಾರ ಗೋವಾದ ಪಣಜಿಯ ಕಡಲ ತೀರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಅದ್ದೂರಿಯಾಗಿ ನಡೆಯಲಿದೆ. ಖ್ಯಾತ ಚಿತ್ರ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಡಾ.ರಾಜಶೇಖರ್ ಮಠಪತಿ, ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರು, ಸೇರಿದಂತೆ ಹಲವು ಗಣ್ಯರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪರ್ತಕರ್ತ ಪ್ರಶಾಂತ್ ವಿಶ್ವವಾಣಿ ಪತ್ರಿಕೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊನ್ನಮ್ಮನ ಕನಸು ಕಾದಂಬರಿ ದೃಷ್ಟಿ ಕಳೆದುಕೊಂಡು ವೃದ್ದೆಯೊಬ್ಬರ ಮೂಕರೋಧನೆಯನ್ನು ಒಳಗೊಂಡಿದೆ. ಬಾಳ ಹಾದಿಯಲಿ…






