ಮಡಿಕೇರಿ NEWS DESK ಮಾ.22 : ಬ್ರಿಟಿಷ್ ಯುಗದ ಜನಗಣತಿ ದಾಖಲೆಗಳು (1871-1931) ಕೊಡವರನ್ನು ಜಾತಿ ವ್ಯವಸ್ಥೆಯಿಂದ ಪ್ರತ್ಯೇಕವಾದ ವಿಶಿಷ್ಟ ಜನಾಂಗೀಯ ಮೂಲ ವಂಶಸ್ಥ ಗುಂಪು (ರೇಸ್) ಎಂದು ನಿಖರವಾಗಿ ಗುರುತಿಸಿದೆ. ಕೊಡವರ ವಿಚಾರದಲ್ಲಿ ಇದೇ ಮಾನದಂಡವನ್ನು ಈಗಲೂ ಅನುಸರಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿದ ಸಿಎನ್ಸಿ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಸದಸ್ಯರು 1941 ರಿಂದ 2011 ರವರೆಗಿನ ಜನಗಣತಿ ದಾಖಲೆಗಳು ಕೊಡವರನ್ನು ಜಾತಿ ಎಂದು ತಪ್ಪಾಗಿ ವರ್ಗೀಕರಿಸಿದ ಜನಗಣತಿ ದಾಖಲೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಎನ್.ಯು.ನಾಚಪ್ಪ ಅವರು ಮಾತನಾಡಿ ವಿಶಿಷ್ಟ ಜನಾಂಗೀಯ ಗುಂಪಾದ ಕೊಡವರ ಸೂಕ್ತÀ ಸ್ಥಾನವನ್ನು ಕಸಿದುಕೊಂಡ ಐತಿಹಾಸಿಕ ತಪ್ಪುಗಳನ್ನು ಸರಿಪಡಿಸಬೇಕು. ಕೊಡವರನ್ನು ಮೂಲ ವಂಶಸ್ಥ ಕೊಡವ ಸಮುದಾಯಕ್ಕೆ ಸೀಮಿತಗೊಳಿಸಿದ ಏಕ ಮತ್ತು ವಿಭಿನ್ನ ಜನಾಂಗೀಯ ಗುಂಪು ಎಂದು ಗುರುತಿಸಬೇಕು. ಕೊಡವರಿಗೆ ಸಂಬಂಧಿಸಿದಂತೆ ಜಾತಿಯ ಯಾವುದೇ ಉಲ್ಲೇಖವನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿದರು. ಕೊಡವ ಜನಾಂಗವು…
ಲೇಖಕ: admin
ವಿರಾಜಪೇಟೆ ಮಾ.22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರದಲ ಆಪ್ತ ಸಮಾಲೋಚಕಿ ಬಿ.ಅಶ್ವಿತಾ ಏಡ್ಸ್ ನ ಇತಿಹಾಸ, ಅದರ ಹರಡುವಿಕೆಗೆ ಕಾರಣಗಳು, ಸರ್ಕಾರ ಅದನ್ನು ನಿಯಂತ್ರಿಸಲು ಕೈಗೊಳ್ಳುತ್ತಿರುವ ಕ್ರಮಗಳು, ಕಾಯಿದೆ, ಕಳಂಕ ತಾರತಮ್ಯದ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ ಏಡ್ಸ್ ನಿಯಂತ್ರಿಸುವುದರಲ್ಲಿ ಯುವಜನತೆ ಪಾತ್ರ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಹ ಸಂಚಾಲಕರಾದ ಡಾ. ಬಸವರಾಜು. ಕೆ, ರೆಡ್ ರಿಬ್ಬನ್ ಕ್ಲಬ್ ಸಂಚಾಲಕರಾದ ರುದ್ರ, ಬೋಧಕ ಮತ್ತು ಬೋಧಕೇತರರು ಇದ್ದರು. ಏಡ್ಸ್…
ಕುಶಾಲನಗರ ಮಾ.22 NEWS DESK : ನಾಲ್ಕು ಗೋಡೆಗಳ ನಡುವೆ ಸಿಲುಕಿಕೊಂಡಿದ್ದ ಮಹಿಳೆಗೆ ಇದೀಗ ಸ್ವಾವಲಂಬಿಯಾಗಿ ತನ್ನ ಪ್ರತಿಭೆಯನ್ನು ಹೊರಹೊಮ್ಮಿಸಲು ಹಲವು ಅವಕಾಶಗಳಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳ ಬೇಕಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ ಭೂಮಿಕಾ ಮಹಿಳಾ ಹಿತ ರಕ್ಷಣಾ ಸಮಿತಿಯ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಡುಗೆ ಮನೆಯಿಂದ ಅಂತರಿಕ್ಷದ ತನಕ ಇದೀಗ ಮಹಿಳೆಯರು ತಮ್ಮ ಸಾಧನೆ ಪ್ರದರ್ಶನ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಜ್ಞಾನವಿಕಾಸ ವೇದಿಕೆ ಮೂಲಕ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಈ ಮೂಲಕ ಲಕ್ಷಾಂತರ ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಯಾವುದೇ ಸಂದರ್ಭ ಮಹಿಳೆಯರು ತಮ್ಮ ಜವಾಬ್ದಾರಿಯನ್ನು ಮರೆಯದೆ ಕೌಟುಂಬಿಕ ಸಾಮರಸ್ಯವನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋಗಬೇಕಾಗಿದೆ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಕಾರ್ಯಕ್ರಮಗಳ…
ಮಡಿಕೇರಿ ಮಾ.22 NEWS DESK : ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮಾ.24ರಿಂದ ಮೇ 1ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ (ಮ್ಯಾನ್ಸ್ ಕಾಂಪೌಂಡ್)ದಲ್ಲಿ 31ನೇ ವರ್ಷದ ಉಚಿತ ಕ್ರೀಡಾ ಶಿಬಿರ ನಡೆಯಲಿದೆಯೆಂದು ಕ್ಲಬ್ನ ಪ್ರಮುಖರಾದ ಬೊಪ್ಪಂಡ ಶ್ಯಾಂ ಪೂಣಚ್ಚ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಕಿ, ಅಥ್ಲೆಟಿಕ್ಸ್, ಯೋಗ ತರಬೇತಿಗೆ ಸಂಬಂಧಿಸಿದಂತೆ ನಡೆಯುವ ಬೇಸಿಗೆ ಶಿಬಿರದಲ್ಲಿ 6 ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ. ಶಿಬಿರ ಮಾ.24ರಿಂದ ಆರಂಭಗೊಂಡರು, ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾದ ದಿ.ಸಿ.ವಿ.ಶಂಕರ ಸ್ವಾಮಿ ಅವರ ಜನ್ಮದಿನವಾದ ಏ.1 ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ ಎಂದರು. ಪ್ರತಿ ದಿನ ಬೆಳಿಗ್ಗೆ 6.30 ರಿಂದ 8.30 ಗಂಟೆಯವರೆಗೆ ಶಿಬಿರ ನಡೆಯಲಿದೆ. ಆಸಕ್ತರು ಮಾ.24 ರಂದು ಬೆಳಗ್ಗೆ ಆಗಮಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹದು. ಆ ನಂತರದ ದಿನಗಳಲ್ಲು ಶಿಬಿರಕ್ಕೆ ಸೇರಲು ಅವಕಾಶವಿರುವುದಾಗಿ ಸ್ಪಷ್ಟಪಡಿಸಿದರು. ಕ್ಲಬ್ ಅಧ್ಯಕ್ಷರಾದ ಕೊಟೇರ ಮುದ್ದಯ್ಯ ಮಾತನಾಡಿ, ಶಿಬಿರದಲ್ಲಿ ನುರಿತ ತರಬೇತುದಾರರಿಂದ ಕ್ರೀಡಾ ತರಬೇತಿ ನೀಡಲಾಗುತ್ತದೆ.…
ಮಡಿಕೇರಿ ಮಾ.22 NEWS DESK : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯ ಅಂಕನಳ್ಳಿಯ ಮನೆಹಳ್ಳಿ ಶ್ರೀ ತಪೋಕ್ಷೇತ್ರದಲ್ಲಿ ಏ.12 ರಿಂದ 14ರ ವರೆಗೆ ಶ್ರೀ ಗುರುಸಿದ್ಧವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಜರುಗಲಿದೆಯೆಂದು ಕ್ಷೇತ್ರದ ಸ್ವಾಮೀಜಿಗಳಾದ ಶ್ರೀ ಮಹಾಂತ ಶಿವಲಿಂಗ ಸ್ವಾಮಿಗಳು ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ದೇವಾಲಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಏ.12 ರಂದು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣದ ಮೂಲಕ ಚಾಲನೆ ದೊರೆಯಲಿದೆ. ಅಂದು ಸಂಜೆ 6.30 ಗಂಟೆಗೆ ಶ್ರೀ ಸ್ವಾಮಿಗೆ ಕಂಕಣ ಧಾರಣೆ, ಮಹಾಮಂಗಳಾರತಿ, 7 ಗಂಟೆಗೆ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರಸ್ವಾಮಿಯವರಿಗೆ ಸೂರ್ಯ ಮಂಡಲೋತ್ಸವ ಜರುಗಲಿದೆ ಎಂದು ಹೇಳಿದರು. ಏ.13 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಮದನಾಧಿ ಅನಘ ನಿರಂಜನ ಜಂಗಮ ಪೂಜೆ, ಸಂಜೆ 6.30 ಗಂಟೆಗೆ ಶ್ರೀ ಸ್ವಾಮಿಯವರ ‘ಅಡ್ಡಪಲ್ಲಕ್ಕಿ ಉತ್ಸವ’, ರಾತ್ರಿ 8.30 ಗಂಟೆಗೆ ದಾಸೋಹ ಜರುಗಲಿದೆ. ಏ.14 ರಂದು ಬೆಳಿಗ್ಗೆ…
ಮಡಿಕೇರಿ ಮಾ.22 NEWS DESK : ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಎಸ್ಸಿ ಮೋರ್ಚಾ ವತಿಯಿಂದ ಏ.13 ರಂದು ನಗರದಲ್ಲಿ ಸಾರ್ವಜನಿಕರಿಗಾಗಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ರಾಷ್ಟ್ರೀಯ ವಿಚಾರಗಳ ಪುಸ್ತಕ ಮೇಳ, ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಪಿ.ಎಂ.ರವಿ ಈ ಕುರಿತು ಮಾಹಿತಿ ನೀಡಿ, ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏಕ ಕಾಲಕ್ಕೆ ಈ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಸಮಾಜದ ಎಲ್ಲಾ ಸ್ತರಗಳ ಜನರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳ ಬಗ್ಗೆ ಇಂದಿಗೂ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರದ ಯೋಜನೆಗಳ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ನೀಡಲಾಗುತ್ತದೆಂದು ತಿಳಿಸಿದರು. ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಮಾಹಿತಿ ಕಾರ್ಯಾಗಾರದ ಸಭಾ ಕಾರ್ಯಕ್ರಮದಲ್ಲಿ ಮೈಸೂರು ಕೊಡಗು ಕ್ಷೇತ್ರದ ಸಂಸದ ಯದುವೀರ್…
ಪುತ್ತೂರು ಮಾ.22 NEWS DESK : ಕಾರಂಜಿಯಲ್ಲೂ ಒಂದು ಧ್ಯೇಯವಿದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮುಂಭಾಗದಲ್ಲಿ, ದಿವಂಗತ ಜಿ.ಎಲ್.ಆಚಾರ್ಯ ಅವರ ಜನ್ಮ ಶತಾಬ್ಧಿಯ ಸವಿನೆನಪಿಗಾಗಿ ಅವರ ಪುತ್ರ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಅವರು ಕೊಡುಗೆಯಾಗಿ ನೀಡಿದ ಕಾರಂಜಿಯ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತಾಡಿದರು. ದಿವಂಗತ ಜಿ.ಎಲ್.ಆಚಾರ್ಯ ಅವರು ಅಂದಿನ ದಿನಗಳಲ್ಲಿ ವಿಧ್ಯಾವರ್ಧಕ ಸಂಘದ ಏಳಿಗೆಗಾಗಿ ದುಡಿದವರು. ಇಂದು ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅನೇಕ ಸಮಾಜಮುಖೀ ಕಾರ್ಯಗಳನ್ನು ನಡೆಸುತ್ತಿರುವುದು ಸಂತೋಷವನ್ನು ತಂದಿದೆ. ಇದರಿಂದ ಅವರ ಆತ್ಮಕ್ಕೂ ಸಂತೋಷವಾಗಿರಬಹುದು ಎಂದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ನಿರ್ದೆಶಕ ಬಲರಾಮ ಆಚಾರ್ಯ.ಜಿ, ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಲಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು…
ಪುತ್ತೂರು ಮಾ.22 NEWS DESK : ತಾಂತ್ರಿಕತೆ ಬಹಳ ಮುಂದುವರಿದಿದೆ, ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಗಳ ಕಣಜವೇ ಸಿಗುತ್ತದೆ. ಅದರಲ್ಲಿ ಕೆಟ್ಟದ್ದೂ ಇದೆ ಒಳ್ಳೆಯದೂ ಇದೆ. ಅದರ ಬಳಕೆಯಲ್ಲಿ ಬುದ್ದಿವಂತಿಕೆಯನ್ನು ತೋರಿಸಿದರೆ ನಮ್ಮ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಳ್ಳಬಹುದು ಎಂದು ವೆಂಚೂರ್ಸಾಫ್ಟ್ ಗ್ಲೋಬಲ್ ಯುಎಸ್ಎ ಮುಖ್ಯ ಕಾರ್ಯನಿರ್ವಣಾಧಿಕಾರಿ ಅಗರ್ತ ವೆಂಕಟ್ರಮಣ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಇದರ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಕಾಲೇಜು ಜೀವನ ಅತಿ ಮುಖ್ಯವಾದದ್ದು ಅಲ್ಲಿನ ಘಟನೆಗಳನ್ನು ನಾವು ಯಾವತ್ತೂ ಮರೆಯುವುದಕ್ಕೆ ಸಾಧ್ಯವಿಲ್ಲ. ಸಮಾಜದಲ್ಲಿ ವ್ಯಕ್ತಿಯೊಬ್ಬನನ್ನು ಗುರುತಿಸುವುದು ಅವನ ಶ್ರೀಮಂತಿಕೆಯಿಂದಲ್ಲ, ಬದಲಿಗೆ ಅವನ ವ್ಯಕ್ತಿತ್ವದಿಂದ. ನಿಮ್ಮ ನಡತೆ, ವ್ಯವಹಾರ ಮತ್ತು ಸಂಪರ್ಕ ಉತ್ತಮವಾಗಿದ್ದರೆ ಸಮಾಜದಲ್ಲಿ ನೀವು ಉನ್ನತರಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು. ಮುಖ್ಯ ಅತಿಥಿ ಮರ್ಸಿಡಿಸ್ ಬೆಂಜ್ ರೀಸರ್ಚ್ ಎಂಡ್ ಡೆವೆಲಪ್ಮೆಂಟ್ ಇಂಡಿಯಾ ಇದರ ಸೀನಿಯರ್ ಕನ್ಸಲ್ಟೆಂಟ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಶ್ರೀಮತಿ ತನ್ವಿ.ಡಿ.ಐ…
ಮಡಿಕೇರಿ ಮಾ.22 NEWS DESK : ‘ಮುದ್ದಂಡ ಕಪ್ ಹಾಕಿ ಉತ್ಸವ’ದ ಕ್ರೀಡಾಜ್ಯೋತಿ ಮಾ.25ರಂದು ಕೊಡವ ಹಾಕಿ ಹಬ್ಬದ ಜನಕರಾದ ಕರಡ ಗ್ರಾಮದ ಪಾಂಡಂಡ ಕುಟುಂಬದ ಐನ್ ಮನೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಮತ್ತು ಕೊಡವ ಹಾಕಿ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಹಬ್ಬದ ಜನಕ ದಿ.ಪಾಂಡಂಡ ಕುಟ್ಟಪ್ಪ ಅವರ ಪತ್ನಿ ಲೀಲ ಕುಟ್ಟಪ್ಪ ಅವರು ಉದ್ಘಾಟಿಸಲಿದ್ದಾರೆ. 1997ರಿಂದ ಇಲ್ಲಿಯವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ಎಲ್ಲಾ ಕುಟುಂಬಗಳ ಐನ್ ಮನೆಗಳಿಗೆ ಮ್ಯಾರಥಾನ್ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ಮಾ.28ರಂದು ಬೆಳಿಗ್ಗೆ 9ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿ ಸಾಗಲಿದೆ. ::: ಕ್ರೀಡಾಜ್ಯೋತಿ ಮಾರ್ಗ ::: ಮಾ.25ರಂದು ಕರಡ ಪಾಂಡಂಡ, ಕಿರುಗೂರು ಚೆಪ್ಪುಡಿರ, ಅಲಮೇಂಗಡ, ಟಿ.ಶೆಟ್ಟಿಗೇರಿ- ಒಂಟಿಯಂಗಡಿ ಮಚ್ಚಮಾಡ, ಚೆಕ್ಕೇರ, ಕಳ್ಳಿಚಂಡ,…
ತಮಿಳುನಾಡು ಮಾ.22 NEWS DESK : ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ನೇತೃತ್ವದಲ್ಲಿ ಸಮಾನಮನಸ್ಕರ ಮುಖಂಡರುಗಳ, ದಕ್ಷಿಣ ಭಾರತದ ಪ್ರಮುಖ ನಾಯಕರು ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಹಲವು ಪ್ರಮುಖ ಬೇಡಿಕೆಗಳ ಹಕ್ಕೊತ್ತಾಯಕ್ಕೆ ಸಂಬಂಧಪಟ್ಟ ಸಭೆಯು ಇಂದು ತಮಿಳುನಾಡಿನ ಚೆನ್ನೈನಲ್ಲಿ ನಡೆಯುತ್ತಿದೆ. ಸಭೆಯಲ್ಲಿ ಕರ್ನಾಟಕ ರಾಜ್ಯದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಪಾಲ್ಗೊಂಡಿದ್ದಾರೆ.






