ಲೇಖಕ: admin

ಸುಂಟಿಕೊಪ್ಪ ಮಾ.22 NEWS DESK : ಕಾರ್ಮಿಕರನ್ನು ಗುರುತಿಸಿ ಅವರ ಕಣ್ಣಿನ ತಪಾಸಣಾಯನ್ನು ಮಾಡುವ ಮೂಲಕ ಚಿಕಿತ್ಸೆ ನೀಡುತ್ತಿರುವ ಯುಪಿಕೃತಿ ಎನ್‍ಜಿಓ ಸಂಸ್ಥೆಯ ಸೇವಾ ಕಾರ್ಯಕ್ರಮ ಶ್ಲಾಘನಿಯ ಎಂದು ಮಾದಾಪುರ ಗ್ರಾ.ಪಂ ಸದಸ್ಯ ಕೆ.ಎ.ಲತೀಫ್ ಹೇಳಿದರು. ಮಾದಾಪುರದ ಕುಂಬೂರು ಎಸ್ಟೇಟ್‍ನಲ್ಲಿ ಬೆಂಗಳೂರಿನ ಯುಪಿಕೃತಿ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಕಾರ್ಮಿಕರಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಿಸುವ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿ, ಮನುಷ್ಯನ ಜೀವನಕ್ಕೆ ಕಣ್ಣು ಅಮೂಲ್ಯವಾದದ್ದು, ಎಲ್ಲರೂ ಕಣ್ಣಿನ ರಕ್ಷಣೆಗೆ ಕಾಳಜಿ ವಹಿಸಬೇಕು ಎಂದು ಹೇಳಿದರು. ಕುಂಬೂರು ಕಾಫಿ ಎಸ್ಟೇಟಿನ ಕಾರ್ಮಿಕರಿಗೆ ಹಾಗೂ ಹೊರ ರಾಜ್ಯದಿಂದ ಅಸ್ಸಾಂ, ಬಿಹಾರ, ಉತ್ತರ ಪ್ರದೇಶದಿಂದ ಬಂದ ವಲಸೆ ಕಾರ್ಮಿಕರ ಹಾಗೂ ಅವರ ಮಕ್ಕಳ ಕಣ್ಣಿನ ತಪಾಸಣೆ ನಡೆಸಿದ ಯುಪಿಕೃತಿ ಎನ್‍ಓ ಸಂಸ್ಥೆಯವರು ಜೌಷಧಿ ಹಾಗೂ ಕನ್ನಡಕ ಬೇಕಾದವರಿಗೆ ಪರಿಶೀಲಿಸಿ ಉಚಿತ ಕನ್ನಡಕ ವಿತರಿಸಿದರು. ಯುಪಿಕೃತಿ ಸಂಸ್ಥೆಯ ಡಾ.ಚಂದನ್, ಸಂತೋಷ್, ಸುಮಂತ್ ಹಾಗೂ ಡಾ.ಕಾವ್ಯಶ್ರೀ ಕಾರ್ಮಿಕರ ಕಣ್ಣಿನ ತಪಾಸಣೆ ನಡೆಸಿ ಸಲಹೆ…

Read More

ಸೋಮವಾರಪೇಟೆ ಮಾ.22 NEWS DESK : ತಥಾಸ್ತು ಸಾತ್ವಿಕ ಸಂಸ್ಥೆ, ಅಬಕಾರಿ ಇಲಾಖೆ, ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮಾ.24 ರಂದು ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಮಹಿಳಾ ಸಹಕಾರ ಸಂಘದ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ ಎಂದು ತಥಾಸ್ತು ಸಂಸ್ಥೆಯ ಅಧ್ಯಕ್ಷ ಉದಯ ಮಾಳವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಮಾ.22 NEWS DESK : ಶಿಕ್ಷಣವೇ ನಿಜವಾದ ಸಂಪತ್ತು. ಅನೇಕ ದಶಕಗಳಿಂದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಅಭಿಪ್ರಾಯಿಸಿದರು. ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ಥಳೀಯ ದಾನಿಗಳಿಂದ ಶಾಲೆ ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಸರ್ಕಾರವು ಸರ್ಕಾರಿ ಶಾಲೆಗಳು ಹಾಗೂ ವಿದ್ಯಾರ್ಥಿಗಳಿಗೆ ಹಲವಷ್ಟು ಸವಲತ್ತುಗಳನ್ನು ಒದಗಿಸುತ್ತಿದೆ. ಯಾವೊಬ್ಬ ಮಗುವೂ ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಇಲಾಖೆಯೂ ಕಾರ್ಯನಿರ್ವಹಿಸುತ್ತಿದೆ. ಇಂತಹ ಶಾಲೆಗಳ ಉಳಿವಿಗೆ ಪೋಷಕರ ಸಹಕಾರ ಅತ್ಯಗತ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಹಾನಗಲ್ಲು ಶೆಟ್ಟಳ್ಳಿ ಗ್ರಾಮದ ಕಾಫಿ ಬೆಳೆಗಾರ ಡಿ.ಪಿ. ಪ್ರೀತಮ್ ಅವರು ಶಾಲೆಗೆ ಬ್ಯಾಂಡ್ ಸೆಟ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಅವರು ಗ್ರಂಥಾಲಯಕ್ಕೆ ಪುಸ್ತಕಗಳು, ಕಾಫಿ ಬೆಳೆಗಾರರಾದ ಉಮಾ ಗಣಪತಿ ಟಿ.ವಿ.ಯನ್ನು ಕೊಡುಗೆಯಾಗಿ ನೀಡಿದರು. ಇದರೊಂದಿಗೆ ಕಿಂಗ್ಸ್ ಲ್ಯಾಂಡಿಂಗ್ ಹೋಂ ಸ್ಟೇ ವತಿಯಿಂದ ಶಾಲಾ…

Read More

ಮಡಿಕೇರಿ NEWS DESK ಮಾ.21 : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದ ಕುರುಳಿ ರಸ್ತೆಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಎಮ್ಮೆಮಾಡು ಗ್ರಾಮದ ನಿವಾಸಿಗಳಾದ ಸಾಧಿಕ್ ಎಂ.ಹೆಚ್ (30), ಅಶ್ರಫ್ ಕೆ.ಎಂ (44) ಹಾಗೂ ಸರ್ಫುದ್ದೀನ್ (24) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 10.37 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಸೂರಜ್.ಪಿ.ಎ, ಮಡಿಕೇರಿ ಗ್ರಾಮಾಂತರ ಠಾಣೆಯ ಪ್ರಬಾರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ.ಪಿ, ನಾಪೋಕ್ಲು ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ.ಈ ಹಾಗೂ ಸಿಬ್ಬಂದಿಗಳು ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿ ಮಾಲು ಸಹಿತ ಆರೋಪಿಗಳನ್ನು ಬಂಧಿಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘಿಸಿದ್ದಾರೆ. ಮಾದಕ ವಸ್ತು ಸಾಗಾಟ ಮತ್ತು ಮಾರಾಟದ…

Read More

ಮಡಿಕೇರಿ NEWS DESK ಮಾ.21 : ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು ಮಂಡಿಸಿತು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿದ ಸಂಘಟನೆಯ ಸದಸ್ಯರು ಕೊಡವರ ಪರವಾದ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು, ಸಿಎನ್‌ಸಿ ಸಂಘಟನೆ ಕಳೆದ 35 ವರ್ಷಗಳಿಂದ ಸಂವಿಧಾನಬದ್ಧವಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಾಂತಿಯುತವಾಗಿ ಹೋರಾಟ ನಡೆಸುತ್ತಿದೆ. ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಸಿಎನ್‌ಸಿ ಜಂಟಿಯಾಗಿ ಕರ್ನಾಟಕ ಹೈಕೋರ್ಟ್ನಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದ್ದು, ಕಾನೂನುಬದ್ಧ ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದು ಹೇಳಿದರು. ಆದಿಮಸಂಜಾತ ಕೊಡವ ಜನಾಂಗವನ್ನು ಪರಿಶಿಷ್ಟ…

Read More

ಮಡಿಕೇರಿ ಮಾ.21 NEWS DESK :  “ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು.  ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು. ಕಾವೇರಿ ನದಿ ಮಲೀನತೆ ಹಾಗೂ ಒತ್ತುವರಿ ಬಗ್ಗೆ ಕೇಳಿದಾಗ, “ಈ ನೆಲ,‌ಜಲ, ಇತಿಹಾಸ, ಪರಂಪರೆ ಉಳಿಸಲು ಏನು ಬೇಕೋ ಅದೆಲ್ಲವನ್ನು ನಾವು ಮಾಡುತ್ತೇವೆ. ನಿಮ್ಮ (ಮಾಧ್ಯಮಗಳ) ಸಲಹೆ ಇದ್ದರೂ ಸ್ವೀಕರಿಸುತ್ತೇವೆ” ಎಂದು ಉತ್ತರಿಸಿದರು. ನೀರಿನ ಸದ್ಬಳಕೆ ಕುರಿತು ಅರಿವು; ಒಂದು ವಾರಗಳ ಕಾಲ ಅಭಿಯಾನ ::  “ವಿಶ್ವ ಜಲದಿನದ ಅಂಗವಾಗಿ ಒಂದು ಒಂದು ವಾರಗಳ ಕಾಲ ಜಲ ಸಂರಕ್ಷಣೆ ಅಭಿಯಾನ ನಡೆಯಲಿದೆ. ನೀರಿನ ದುರ್ಬಳಕೆ ತಡೆಗಟ್ಟಿ, ಸದ್ಬಳಕೆ ಮಾಡುವಂತೆ ಜಾಗೃತಿ ಮೂಡಿಸುವುದೇ ಕಾವೇರಿ ಆರತಿ ಉದ್ದೇಶ” ಎಂದು ತಿಳಿಸಿದರು. ಕಳೆದ ವರ್ಷ ಉತ್ತಮ ಮಳೆಯಾದಂತೆ ಈ ವರ್ಷವೂ ಉತ್ತಮವಾಗಿ ಮಳೆಯಾಗಿ ಜನರ ಬದುಕು ಹಸನಾಗಲಿ ಎಂದು ತಲಕಾವೇರಿಯಲ್ಲಿ ಪೂಜೆ ಸಲ್ಲಿಸುತ್ತಿದ್ದೇನೆ”…

Read More

ಮಡಿಕೇರಿ ಮಾ.21 NEWS DESK : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಇಂದಿನಿಂದ ಆರಂಭಗೊಂಡ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು 6444 ಮಂದಿ ಎದುರಿಸಿದ್ದು, 161 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮಡಿಕೇರಿ ತಾಲ್ಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ 1797 ಮಕ್ಕಳು ಹಾಜರಾಗಿದ್ದರೆ, 22 ಮಂದಿ ಗೈರು ಹಾಜರಾಗಿದ್ದರು. ಸೋಮವಾರಪೇಟೆ ತಾಲ್ಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ 2664 ಮಕ್ಕಳು ಪರೀಕ್ಷೆ ಬರೆದರೆ, 86 ಮಕ್ಕಳು ಗೈರು ಹಾಜರಾಗಿದ್ದರು. ವಿರಾಜಪೇಟೆ ತಾಲ್ಲೂಕಿನ 8 ಪರೀಕ್ಷಾ ಕೇಂದ್ರದಲ್ಲಿ 1983 ಮಕ್ಕಳು ಪರೀಕ್ಷೆ ಬರೆದರೆ, 53 ಮಂದಿ ಗೈರು ಹಾಜರಾಗಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖಾ ಉಪನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.21 NEWS DESK : ದಕ್ಷಿಣ ವಲಯದ ಭೂಸೇನಾ ಮುಖ್ಯಸ್ಥರಾದ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಪಿವಿಎಸ್‍ಎಂ, ಎವಿಎಸ್‍ಎಂ ಅವರ ಉಪಸ್ಥಿತಿಯಲ್ಲಿ ನಿವೃತ್ತ ಸೈನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಬೃಹತ್ ಸಮಾವೇಶ ಮಾ.24 ರಂದು ನಗರದಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ನಿವೃತ್ತ ಮೇಜರ್ ಓ.ಎಸ್.ಚಿಂಗಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ನಗರದ ಕ್ರಿಸ್ಟಲ್ ಕೋರ್ಟ್ ಸಂಭಾಂಗಣದಲ್ಲಿ ಸಮಾವೇಶ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಇದರಲ್ಲಿ ಜಿಲ್ಲೆಯ ನಿವೃತ್ತ ಸೈನಿಕರು, ಅವರ ಅವಲಂಬಿತರು ಪಾಲ್ಗೊಳ್ಳಲಿದ್ದಾರೆ. ನೆರೆಯ ಕೇರಳ ವಿಭಾಗದ ಮಾಜಿ ಸೈನಿಕರು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ಹೇಳಿದರು. ಕಳೆದ ಸಾಲಿನಲ್ಲಿ ಗೋಣಿಕೊಪ್ಪಲಿನಲ್ಲಿ ಸಮಾವೇಶ ನಡೆದಿತ್ತು, ಈ ಬಾರಿ ಮಡಿಕೇರಿಯಲ್ಲಿ ನಡೆಯುತ್ತಿದೆ. ರಾಷ್ಟ್ರಕ್ಕೆ ಇಬ್ಬರು ಜನರಲ್‍ಗಳನ್ನು ಮತ್ತು ಅಸಂಖ್ಯ ವೀರಯೋಧರನ್ನು ನೀಡಿದ ಕೊಡಗಿನಲ್ಲಿ ಸೈನಿಕ ಪರಂಪರೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಭಾರತೀಯ ಸೈನ್ಯದ ದಕ್ಷಿಣ…

Read More

ಮಡಿಕೇರಿ ಮಾ.21 NEWS DESK :  ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಸುಗಮ ಸಂಚಾರಕ್ಕೆ ಖಾಸಗಿ ಬಸ್ ಮಾಲೀಕ ತಿತಿಮತಿಯಿಂದ ಖಾಸಗಿ ಬಸ್ ವ್ಯವಸ್ಥೆ ಕಲ್ಪಿಸಿದ್ದು, ವಿದ್ಯಾರ್ಥಿಗಳ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಬಾಳೆಲೆ, ಪೊನ್ನಪ್ಪಸಂತೆ, ಮಾಯಮುಡಿ ಭಾಗದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ತಿತಿಮತಿ  ಪರೀಕ್ಷಾ ಕೇಂದ್ರದಿಂದ ಶೀಘ್ರವಾಗಿ ಮನೆಗೆ ತಲುಪಲು ಜಯಲಕ್ಷ್ಮಿ ಬಸ್ ಮಾಲಿಕ ಕಾಡೇಮಾಡ ಗೌತಮ್  ವಿಶೇಷ ಖಾಸಗಿ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ.  ಲಾಭಕ್ಕಾಗಿ ರಾಜಕೀಯ ಪಕ್ಷಗಳು ನಡೆಸುವ ಕಾರ್ಯಕ್ರಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವವರ ಮಧ್ಯೆ ಮಕ್ಕಳ ಭವಿಷ್ಯವನ್ನು ಮುಂದಿಟ್ಟುಕೊಂಡು ಈ ರೀತಿಯ ಸೇವೆ ನೀಡುವ ಬಸ್ ಮಾಲೀಕರ ಸೇವೆ ಶ್ಲಾಘನೀಯ ಎಂದು ಗಿರಿಜನ ಮುಖಂಡ ಕಾಳ ಕಾರ್ಮಾಡು ಬಸ್ ಮಾಲೀಕರ ಸೇವೆಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಮಾ.21 NEWS DESK : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಹಬ್ಬದ ‘ಮುದ್ದಂಡ ಹಾಕಿ ಉತ್ಸವ’ ಮಾ.28 ರಂದು ಮಡಿಕೇರಿಯ ಫೀ.ಮಾ. ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಉದ್ಘಾಟನೆಗೊಳ್ಳಲಿದೆ. ಅಂದು ಬೆಳಿಗ್ಗೆ 9.45ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಕೊಡವ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ನಂತರ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಅರ್ಜುನ ಪ್ರಶಸ್ತಿ ವಿಜೇತ ಒಲಂಪಿಯನ್ ಅಂಜಪರವಂಡ ಬಿ.ಸುಬ್ಬಯ್ಯ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಅತಿಥಿಗಳಾಗಿ ಜಿಲ್ಲಾಧಿಕಾರಿ…

Read More