ಲೇಖಕ: admin

ಮಡಿಕೇರಿ ಮಾ.21 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಹಾಗೂ ಅರ್ವತ್ತೋಕ್ಲು, ಬಿಳಿಗೇರಿ ಮತ್ತು ಕುಂಬಳದಾಳು ಪೆರಾತ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ 35ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ ಏ.6 ರಂದು ಬಿಳಿಗೇರಿ ಗ್ರಾಮದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದ ಪೆರಾತ ಯುವಕ ಸಂಘದ ಮಾಜಿ ಅಧ್ಯಕ್ಷ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್, ಬಿಳಿಗೇರಿಯ ಪೆರಾತ ಯುವಕ ಸಂಘದ ಮೈದಾನದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದರು. ಅಂದು ಬೆಳಿಗ್ಗೆ 9 ಗಂಟೆಗೆ ಪೆರಾತ ಫ್ರೆಂಡ್ಸ್ ಯುವಕ ಸಂಘದ ಅಧ್ಯಕ್ಷ ಬಾಳಾಡಿ ಪ್ರತಾಪ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡಾಕೂಟವನ್ನು ಮೇಕೇರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಿ.ಡಿ.ಮಮತ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ…

Read More

ನಾಪೋಕ್ಲು ಮಾ.21 NEWS DESK : ಏಡ್ಸ್ ತಡೆಗಟ್ಟುವಲ್ಲಿ ಯುವ ಜನತೆಯ ಪಾತ್ರ ಪ್ರಮುಖ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ನಿರ್ಮಲ ಹೇಳಿದರು. ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೆಚ್‍ಐವಿ ಏಡ್ಸ್ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಏಡ್ಸ್ ಹರಡುವ ವಿಧಾನ, ಏಡ್ಸ್ ರೋಗದ ಲಕ್ಷಣಗಳು, ಅದರಿಂದ ಆಗುವ ಸಮಸ್ಯೆಗಳು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಹೊಂದಿರಬೇಕು ಎಂದರು. ಏಡ್ಸ್ ಜಾಗೃತಿ ಮತ್ತು ನಿಯಂತ್ರಣದ ಕುರಿತು ರಸಪ್ರಶ್ನೆ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮನೋಜ್ ಕುಮಾರ್ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಎಸ್.ಆಶಾ, ಬೋಧಕ, ಬೋಧಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಶೇಷ ಉಪನ್ಯಾಸ ನೀಡಿದ ಆಪ್ತ ಸಮಾಲೋಚಕಿ ನಿರ್ಮಲ ಅವರಿಗೆ ಕಾಲೇಜಿನ ವತಿಯಿಂದ ನೆನಪಿನ ಕಾಣಿಕೆ…

Read More

ಮಡಿಕೇರಿ ಮಾ.21 NEWS DESK : ಬೃಹತ್ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಮಂಡಲ-ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಭಗಂಡೇಶ್ವರ ದೇಗುಲ ಹಾಗೂ ಕಾವೇರಿ, ಸುಜ್ಯೋತಿ, ಕನ್ನಿಕಾ ನದಿಗಳ ತ್ರಿವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಿ ಪವಿತ್ರ ತೀರ್ಥ ಸಂಗ್ರಹಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿಗೆ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಬಿಡಬ್ಲ್ಯೂಎಸ್ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. ಬೆಂಗಳೂರಿನಲ್ಲಿ ಇಂದು ಸಂಜೆ ನಡೆಯಲಿರುವ ‘ಕಾವೇರಿ ಆರತಿ’ಯ ಪುಣ್ಯ ಕಾರ್ಯಕ್ರಮದ ವೇಳೆ ಸಾರ್ವಜನಿಕರಿಗೆ ಈ ತೀರ್ಥ ವಿತರಿಸಲಾಗುವುದು.

Read More

ಬೆಂಗಳೂರು ಮಾ.21 NEWS DESK : ಕನ್ನಡದ ಖ್ಯಾತ ನಿರ್ದೇಶಕ ಎ.ಟಿ.ರಘು (76) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ಎ.ಟಿ. ರಘು ಅವರು ನಿರ್ದೇಶನ ಮಾಡಿದ್ದರು. ಹಿಂದಿ ಮತ್ತು ಮಳಯಾಲಂ ಚಿತ್ರಗಳಲ್ಲೂ ಕೆಲಸ ಮಾಡಿದ್ದರು. ಅವರ ನಿಧನ ವಾರ್ತೆ ತಿಳಿದು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಂಬರೀಷ್‌ ನಾಯಕನಾಗಿ ನಟಿಸಿದ 25ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಹಿರಿಮೆ ಎ.ಟಿ.ರಘು ಅವರಿಗಿದೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಿದ್ದರು. ನಿರಂತರವಾಗಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಬೆಂಗಳೂರಿನ ಆರ್‌ಟಿ ನಗರದ ಮಠದಹಳ್ಳಿಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದ್ದು, ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಎ.ಟಿ.ರಘು ಹುಟ್ಟಿದ್ದು ಕೊಡಗಿನಲ್ಲಿ. ಕೊಡವ ಸಮುದಾಯಕ್ಕೆ ಸೇರಿದ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದರು. ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಿರ್ಮಾಪಕನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡರು. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ನಿರ್ದೇಶನ ಮಾಡಿದ್ದಾರೆ. 1980ರಲ್ಲಿ ಬಿಡುಗಡೆಯಾದ ‘ನ್ಯಾಯ…

Read More

ಮಡಿಕೇರಿ ಮಾ.21 NEWS DESK : ಎನ್‍ಟಿಇಪಿ ಕಾರ್ಯಕ್ರಮ ಕ್ಷಯಮುಕ್ತ ಭಾರತ ಅಭಿಯಾನದಡಿಯಲ್ಲಿ ಮಾ.24 ರಂದು ಬೆಳಗ್ಗೆ 11 ಗಂಟೆಗೆ ವಿಶ್ವ ಕ್ಷಯ ರೋಗ ದಿನಾಚರಣೆಯು ಕೊಡಗು ವೈದ್ಯಕೀಯ ವಿಜ್ಞಾನಗಳ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಯಲ್ಲಿ 21 ಗ್ರಾಮ ಪಂಚಾಯಿತಿಗಳು ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಾಗಿ ಆಯ್ಕೆ ಆಗಿರುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.21 NEWS DESK : ಬೃಹತ್ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಮಂಡಲಕ್ಕೆ ಭೇಟಿ ನೀಡಿ, ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.  ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿಗೆ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಮಾ.21 NEWS DESK : ಭಾರತದ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭವಾಗಿದ್ದೆ ಕೊಡಗಿನಿಂದ 1937ರ ಅಮರ ಸುಳ್ಯ ಹೋರಾಟ ಅದು ಮೊದಲ ಸ್ವಾತಂತ್ರ್ಯ ಸಂಗ್ರಾಮವಾಗಿದ್ದು, ಆಗ ಸುಳ್ಯ ಪ್ರದೇಶವು ಕೊಡಗು ಜಿಲ್ಲೆಗೆ ಸೇರಿತ್ತು ಎಂದು ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ಎಸ್.ಜಿ.ಚೈತ್ರ ನುಡಿದರು.  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಹಕಾರ ಸಂಘಗಳ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜರುಗಿದ ದಿ.ಗಂಗಾಧರ್ ಶೇಠ್ ಮತ್ತು ಸುಲೋಚನಭಾಯಿ ಸ್ಮಾರಕ ದತ್ತಿ ಮತ್ತು ದಿ. ಡಿ.ಜೆ.ಪದ್ಮನಾಭ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮಾತನಾಡಿದರು. ಅಂದು ಕೊಡಗಿನ ವ್ಯಾಪ್ತಿ ತುಂಬ ದೊಡ್ಡದಿತ್ತು. ಅಲ್ಲದೆ ಹಾಲೇರಿ ವಂಶದ ಆಡಳಿತ ಮುಗಿದು ಬ್ರಿಟಿಷರ ಆಡಳಿತ ಪ್ರಾರಂಭವಾದಾಗ ಕರ ಶೇಕರಣೆ ವಿಧಾನ ಬದಲಾಯಿಸಲಾಯಿತು. ಹಾಲೇರಿ ವಂಶಸ್ಥರ ಆಡಳಿತದಲ್ಲಿ ವಸ್ತು ರೂಪದಲ್ಲಿ ಕರ ಸಂಗ್ರಹಣೆ ಮಾಡುತ್ತಿದ್ದರು. ಆದರೆ ಬ್ರಿಟಿಷರು ಹಣ ರೂಪದಲ್ಲಿ ಸಂಗ್ರಹ…

Read More

*ಮೆಚ್ಚಿನ ನಾಯಕ, ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡಗು ಜಿಲ್ಲೆಗೆ ಪ್ರೀತಿಯ ಸುಸ್ವಾಗತ*

Read More

*ಕಾವೇರಿ ನಾಡು ಕೊಡಗಿನ ಪುಣ್ಯಕ್ಷೇತ್ರಕ್ಕೆ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರಿಗೆ ಹೃದಯ ತುಂಬಿದ ಸುಸ್ವಾಗತ*

Read More

*ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರಿಗೆ ತಲಕಾವೇರಿ ಪುಣ್ಯಕ್ಷೇತ್ರಕ್ಕೆ ಆತ್ಮೀಯ ಸ್ವಾಗತ*

Read More