ಲೇಖಕ: admin

*ಅಚ್ಚುಮೆಚ್ಚಿನ ನಾಯಕರಾದ ಮಾನ್ಯ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡಗಿಗೆ ಆತ್ಮೀಯ ಸ್ವಾಗತ*

Read More

*ಜನಮೆಚ್ಚಿದ ನಾಯಕರಾದ ಮಾನ್ಯ ಡಿ.ಕೆ.ಶಿವಕುಮಾರ್‌ ಅವರಿಗೆ ಕಾವೇರಿ ನಾಡಿಗೆ ಆತ್ಮೀಯ ಸ್ವಾಗತ*

Read More

*ಉಪ ಮುಖ್ಯಮಂತ್ರಿಗಳಾದ ಮಾನ್ಯ ಡಿ.ಕೆ.ಶಿವಕುಮಾರ್‌ ಅವರಿಗೆ ಹೃದಯ ತುಂಬಿದ ಸುಸ್ವಾಗತ*

Read More

ಮಡಿಕೇರಿ NEWS DESK ಮಾ.20 : ಸರ್ಕಾರಿ ಭೂಮಿ ಒತ್ತುವರಿ ಕುರಿತು ಹೊದ್ದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹದ್ದು ಬಸ್ತ್ ಸರ್ವೆ ನಡೆಸಲು ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಬಹುಜನ ಕಾರ್ಮಿಕರ ಸಂಘದ ಕೊಡಗು ಜಿಲ್ಲಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹುಜನ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ಅವರು ಇತ್ತೀಚೆಗೆ ಹೊದ್ದೂರಿನಲ್ಲಿ ರೈತ ಸಂಘದ ಹೆಸರಿನಲ್ಲಿ ನಡೆಸಿದ ಸಭೆಯಲ್ಲಿ ನಿವೇಶನ ರಹಿತ ಬಡವರ ಪರ ಹೋರಾಟ ನಡೆಸುತ್ತಿರುವವರ ವಿರುದ್ಧ ಮಾಡಿರುವ ಸುಳ್ಳು ಆರೋಪಗಳನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಹೊದ್ದೂರು ಗ್ರಾ.ಪಂ ಮತ್ತು ಮೂರ್ನಾಡು ಗ್ರಾ.ಪಂ ವ್ಯಾಪ್ತಿಯ ಸುಮಾರು 600 ರಿಂದ 700 ಬಡ ಕುಟುಂಬಗಳಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಸರ್ಕಾರಿ ಭೂಮಿಯಲ್ಲಿ ನಮ್ಮ ಸಂಘಟನೆ ಹೋರಾಟ ನಡೆಸುತ್ತಿದೆ. ಆದರೆ ಕೆಲವು ಮಾಜಿ ಜನಪ್ರತಿನಿಧಿಗಳು ಬಡವರಿಗೆ ನಿವೇಶನ ನೀಡುವ ನಿಟ್ಟಿನಲ್ಲಿ ಕಾಳಜಿ ತೋರುವ ಬದಲು ಉಳ್ಳವರ ಪರ ಸೇರಿಕೊಂಡು ಪ್ರತಿಭಟನಾ ಸಭೆ ನಡೆಸಿದ್ದಾರೆ ಎಂದು…

Read More

ಮಡಿಕೇರಿ ಮಾ.20 NEWS DESK : ಜಿಲ್ಲೆಯಲ್ಲಿ ಮಾ.21 ರಿಂದ ಏ.4 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರ ಸೇರಿದಂತೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು  ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.  ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು…

Read More

ಮಡಿಕೇರಿ ಮಾ.20 NEWS DESK : ಮಾ.21 ರಿಂದ ಏ.4 ರವರೆಗೆ ಬೆಳಗ್ಗೆ 10 ಗಂಟೆಯಿಂದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ-1 ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿ ಈ ಬಾರಿ 6997 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗೆ ನೋಂದಣಿ ಮಾಡಿದ್ದು, 6622 ಹೊಸ ವಿದ್ಯಾರ್ಥಿಗಳು, 375 ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು  ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.  ಕೊಡಗು ಜಿಲ್ಲೆಯಲ್ಲಿ 171 ಶಾಲೆಗಳಿದ್ದು, ಒಟ್ಟು 27 ಪರೀಕ್ಷಾ ಕೇಂದ್ರಗಳಿವೆ. ಮಡಿಕೇರಿ ತಾಲ್ಲೂಕಿನಲ್ಲಿ 8, ಸೋಮವಾರಪೇಟೆ ತಾಲ್ಲೂಕಿನಲ್ಲಿ 11 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 8 ಪರೀಕ್ಷಾ ಕೇಂದ್ರಗಳಿವೆ.  ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ, ಶೌಚಾಲಯ, ಕುಡಿಯುವ ನೀರು, ಸಿಸಿಟಿವಿ, ವೆಬ್‍ಕಾಸ್ಟಿಂಗ್ ಮತ್ತು ಇಂಟರ್‍ನೆಟ್ ಸೌಲಭ್ಯ ಒದಗಿಸಲಾಗಿದೆ.  ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಜಿಲ್ಲೆಯಲ್ಲಿ ಜಾಗೃತ ದಳ ರಚಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸುಗಮವಾಗಿ ಮತ್ತು ಸುರಕ್ಷಿತವಾಗಿ ಸಾಗಿಸಲು ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಮತ್ತು ಪ್ರತೀ ಮಾರ್ಗಕ್ಕೆ ಒಬ್ಬರಂತೆ…

Read More

ಮಡಿಕೇರಿ ಮಾ.20 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಮತ್ತು ದಂತ ಭಾಗ್ಯ ಯೋಜನೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಭೋಧಕ ಆಸ್ಪತ್ರೆಯ ದಂತ ವಿಭಾಗದ ಸಹಯೋಗದಲ್ಲಿ “ಸಂತೋಷಕರ ಬಾಯಿ ಸಂತೋಷಕರ ಮನಸ್ಸು” ಎಂಬ ಘೋಷಣೆಯೊಂದಿಗೆ ಇಂದು ವಿಶ್ವ ಬಾಯಿ ಆರೋಗ್ಯ ದಿನಾಚರಣೆ ನಡೆಯಿತು.  ನಗರದ ಭೋಧಕ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯ ಡೀನ್ ಹಾಗೂ ನಿರ್ದೇಶಕ ಡಾ. ಎ.ಜೆ.ಲೋಕೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಾಯಿ ಹಾಗೂ ದಂತ ಆರೋಗ್ಯದ ಕಾಳಜಿ ವಹಿಸಲು ಸಲಹೆ ಮತ್ತು ಸೂಚನೆ ನೀಡಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಕೊಡಗಿನಲ್ಲಿ ಬಾಯಿ ಆರೋಗ್ಯ ಅರಿವು, ಬಾಯಿ ತಪಾಸಣೆ ಹಾಗೂ…

Read More

ಮಡಿಕೇರಿ ಮಾ.20 NEWS DESK : ಮೌಖಿಕ ಪರಂಪರೆಯು ಮಾಯವಾಗಿ ಅಖಿತ ಪರಂಪರೆಯ ಈ ಹೊತ್ತಿನಲ್ಲಿ ಜನಪದವನ್ನು ಉಳಿಸಿ ಬೆಳೆಸಬೇಕಿದೆ ಎಂದು ಹಿರಿಯ ಸಾಹಿತಿ ಕಟ್ರತನ ಲಲಿತಾ ಅಯ್ಯಣ್ಣ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆದ ಜನಪದ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ತನ್ನದೇ ಆದ ಜಾನಪದ ಶ್ರೀಮತಿಕೆ ಹೊಂದಿದೆ. ಕರ್ನಾಟಕದ ಜಾನಪದ ಪರಂಪರೆಯನ್ನು ಕೋಲಾಟ, ಕಂಸಾಳೆ, ಯಕ್ಷಗಾನ, ಡೊಳ್ಳುಕುಣಿತ, ಸುಗ್ಗಿಕುಣಿತ ಮುಂತಾದ ಜಾನಪದ ಕಲ್ಲು, ರಾಗಿಕಲ್ಲು, ರಾಡೆ ಇವೆಲ್ಲ ಮಾಯವಾಗಿ, ಆಧುನಿಕ ವಸ್ತುಗಳು ಅವುಗಳ ಸ್ಥಾನ ಪಡೆದುಕೊಂಡಿದೆ. ಜನಪದದಲ್ಲಿ ಮನುಷ್ಯ ಪ್ರೀತಿ, ಸಮಾಜದ ಮೇಲಿನ ಕಾಳಜಿಯನ್ನು ವಿಶೇಷವಾಗಿ ಕಾಣಬಹುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ಪತಿ ಪ್ರಕಾಶ ಮೌಖಿಕ ಪರಂಪರೆಯು ಬಾಯಿಯಿಂದ ಬಾಯಿಗೆ ಹರಿದು ಬರುವಂಥದ್ದು, ಅದು ಗಾದೆ, ಒಗಟು, ಸೋಬಾನೆ ಹಾಡುಗಳು, ಕಥೆಗಳು, ಕುಣಿತಗಳು, ಆಟಗಳು, ಹೀಗೆ ಹಲವು ಪ್ರಕಾರಗಳಲ್ಲಿ ಒಳಗೊಂಡಿದೆ. ನಮ್ಮ ಜೀವನಾವರ್ತನದ…

Read More

ಮಡಿಕೇರಿ ಮಾ.20 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ರಾಮೋತ್ಸವ ಆಡಳಿತ ಮಂಡಳಿ ವತಿಯಿಂದ ಏ.5 ಮತ್ತು 6 ರಂದು ನಡೆಯಲಿರುವ ಮೂವತ್ತೈದನೇ ರಾಮೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಶ್ರೀ ಕೋದಂಡರಾಮ ದೇವಾಲಯದಲ್ಲಿ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಉಪಸಮಿತಿಗಳ ಪದಾಧಿಕಾರಿಗಳಡನೆ ಚರ್ಚಿಸಲಾಯಿತು. ರಾಮೋತ್ಸವದ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ದೇಣಿಗೆ ಸಂಗ್ರಹ, ಅನ್ನದಾನಕ್ಕೆ ದಾನಿಗಳಿಂದ ಬೇಕಾದ ಸಾಮಾಗ್ರಿಗಳನ್ನು ಸಂಗ್ರಹಿಸಲು ತೀರ್ಮಾನಿಸಲಾಯಿತು. ಸಮಿತಿ ಅಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಈಗಾಗಲೇ ರಾಮೋತ್ಸವದ ಸಿದ್ಧತೆಗಳು ಆರಂಭವಾಗಿದ್ದು, ಎಲ್ಲಾ ಸಮಿತಿಗಳು ತಮಗೆ ಒಪ್ಪಿಸಿರುವ ಜವಾಬ್ಧಾರಿಯನ್ನು ಸಮರ್ಪವಾಗಿ ನಿರ್ವಹಿಸುತ್ತಿದ್ದಾರೆ. ನಾಡಿನ ಜನತೆ ರಾಮೋತ್ಸವಕ್ಕೆ ತಮ್ಮ ತನುಮನಧನ ಸಹಕಾರವನ್ನು ನೀಡುವ ಮೂಲಕ ಜಾತಿ, ಮತ, ಭೇದವಿಲ್ಲದೆ ಒಗ್ಗಟ್ಟಿನಿಂದ ಭಾಗವಹಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಶ್ರೀ ಕೋದಂಡ ರಾಮ ದೇವಾಲಯ ಟ್ರಸ್ಟ್‍ನ ಅಧ್ಯಕ್ಷ ನಂಜುಂಡ, ದೇವಾಲಯದ ಮುಖ್ಯ ಸಲಹೆಗಾರ ಜಿ.ರಾಜೇಂದ್ರ, ಸಲಹೆಗಾರ ಸಂಪತ್ತು, ಗೌಡ…

Read More