ಮಡಿಕೇರಿ NEWS DESK ಮಾ.17 : ನಾಡಿನ ಜೀವನದಿ ಕಾವೇರಿ ಉಗಮಿಸುವ ತಲಕಾವೇರಿ ಹಾಗೂ ಶ್ರೀಭಗಂಡೇಶ್ವರ ಪುಣ್ಯ ಕ್ಷೇತ್ರಗಳಿಗೆ ತೆರಳುವ ಭಾಗಮಂಡಲ ರಸ್ತೆ ಒಟ್ಟು 7.50 ಕೋಟಿ ರೂ.ಗಳಲ್ಲಿ ಅಭಿವೃದ್ಧಿಯಾಗಲಿದೆ.NEWS DESK ತಲಕಾವೇರಿ ಹಾಗೂ ಶ್ರೀಭಗಂಡೇಶ್ವರ ಕ್ಷೇತ್ರಗಳಿಗೆ ಪ್ರತಿದಿನ ಸಾವಿರಾರು ಭಕ್ತರು, ಪ್ರವಾಸಿಗರು ಭೇಟಿ ನೀಡುತ್ತಾರೆ. ನಿತ್ಯ ಭಾಗಮಂಡಲ ರಸ್ತೆಯಲ್ಲಿ ಪ್ರವಾಸಿಗರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತವೆ. ಆದರೆ ಪುಣ್ಯಕ್ಷೇತ್ರಗಳಿಗೆ ತೆರಳುವ ಈ ಹೆದ್ದಾರಿ ಹೊಂಡ, ಗುಂಡಿಗಳಿಂದ ಕೂಡಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ ಎನ್ನುವ ಅಸಮಾಧಾನ ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು.NEWS DESKಇದನ್ನು ಮನಗಂಡ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ರಸ್ತೆಯ ಅಭಿವೃದ್ಧಿಗೆ ತ್ವರಿತ ಕ್ರಮ ಕೈಗೊಂಡಿದ್ದಾರೆ. ಭಾಗಮಂಡಲ- ಚೆಟ್ಟಿಮಾನಿ ವ್ಯಾಪ್ತಿಯ ರಸ್ತೆ 2 ಕೋಟಿ ರೂ., ಬೆಟ್ಟಗೇರಿ- ಅಪ್ಪಂಗಳ 4 ಕೋಟಿ ರೂ. ಮತ್ತು ಚೇರಂಬಾಣೆ- ಕೊಟ್ಟೂರು ಭಾಗದ ರಸ್ತೆ 1.50 ಕೋಟಿ ರೂ.ಗಳಲ್ಲಿ ಅಭಿವೃದ್ಧಿಯಾಗಲಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರ ಕಾಮಗಾರಿ…
ಲೇಖಕ: admin
ಮಡಿಕೇರಿ ಮಾ.17 NEWS DESK : ಶಿವುಮಾದಪ್ಪ ನಿಧನದಿಂದ ಕಾಂಗ್ರೆಸ್ ಪಕ್ಷದಲ್ಲಿನ ಮತ್ತೊಂದು ಕೊಂಡಿ ಕಳೆದುಕೊಂಡಿದೆ ಎನ್ನಬಹುದು. ನಾನು ರಾಜಕೀಯದಲ್ಲಿ ಸಕ್ರಿಯನಾದರು ಯಾವುದೇ ನಾಯಕರೊಡನೇ ಒಡನಾಟ ಕಮ್ಮಿ. ಏಕೆಂದರೆ ನನಗೆ ಅನಾವಶ್ಯಕವಾಗಿ ಅವರಿಗೆ ಕಿರಿಕಿರಿ ಮಾಡಲು ಇಷ್ಟ ಇಲ್ಲ ಅದು ಎಲ್ಲಾ ನಾಯಕರುಗಳಿಗೂ ಗೊತ್ತು. ಆದರೆ ಎಲ್ಲರೊಡನೆ ಉತ್ತಮ ಬಾಂಧವ್ಯ ಇಟ್ಟುಕೊಂಡಿರುತ್ತೇನೆ. ಪಕ್ಷದ ಕೆಲಸ ಮಾಡಿ ಸುಮ್ಮನೆ ಇದ್ದು ಬಿಡುತ್ತಿದ್ದೆ. ನಾನು ಮಾನಸಿಕವಾಗಿ ನೋವು ಅನುಭವಿಸಿದ್ದು, ಬಿ.ಟಿ.ಪ್ರದೀಪ್ ಅವರನ್ನು ಕಳೆದುಕೊಂಡಾಗ ಮನದಲ್ಲಿ ಒಂದು ರೀತಿಯ ಮಾನಸಿಕ ಹಿಂಸೆ ಅನುಭವಿಸಿದೆ. ನಾನು ಮೊದಲೇ ಹೇಳಿದಂತೆ ನನಗೆ ಅವರ ಒಡನೆ ಹೇಳಿಕೊಳ್ಳುವ ಒಡನಾಟ ಇರಲಿಲ್ಲ. ಆದರೂ ಅವರು ಮನಸ್ಸಿಗೆ ನಾಟಿಕೊಂಡಿದ್ದರು. ನಾನು ನಾಪೋಕ್ಲುವಿನ ತೋಟಕ್ಕೆ ಬೆಳಿಗ್ಗೆ 7 ಗಂಟೆಗೆ ಹೋಗುವಾಗ ದಾರಿಯಲ್ಲಿ ಅವರ ಕಾರು ಸಿಗುತ್ತಿತ್ತು. ಅಷ್ಟು ಹೊತ್ತಿಗೆ ಮನೆ ಬಿಟ್ಟರೆ ಹಿಂದುರುಗುವುದು ರಾತ್ರಿ ಇದರಲ್ಲಿ ವಿಶೇಷ ಏನು ಇಲ್ಲ. ಎಲ್ಲಾ ರಾಜಕಾರಣಿಗಳು ಮಾಡುವುದು ಇದೇ ಕೆಲಸ, ಇಲ್ಲಿ ಪ್ರಶ್ನೆ ಏನೆಂದರೆ ಇಷ್ಟು ಕಷ್ಟ…
ಮಡಿಕೇರಿ NEWS DESK ಮಾ.17 : ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಮತ್ತು ಕೊಡಗು ವಿಶ್ವ ವಿದ್ಯಾನಿಲಯವನ್ನು ಮುಚ್ಚದಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಸೋಮವಾರಪೇಟೆಯ ಜೆಸಿ ವೇದಿಕೆಯಲ್ಲಿ ಧರಣಿ ಕುಳಿತ ಬಿಜೆಪಿಯ ವಿವಿಧ ಘಟಕಗಳ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೊಡಗು ವಿವಿಯನ್ನು ಮುಚ್ಚಬಾರದು, ಸಿ ಮತ್ತು ಡಿ ಭೂಮಿಯ ಗೊಂದಲ ನಿವಾರಿಸಬೇಕು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿರುವ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು, ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ವನ್ಯಜೀವಿಗಳ ದಾಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನಾಕಾರರು ಒತ್ತಾಯಿಸಿದರು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ ರಾಜ್ಯ ಸರ್ಕಾರದ ನಡೆ ಜನವಿರೋಧಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಸೋಮವಾರಪೇಟೆ ಮಂಡಳ ಅಧ್ಯಕ್ಷ ಗೌತಮ್ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ,…
ಕುಶಾಲನಗರ ಮಾ.17 NEWS DESK : ನದಿ ಮತ್ತು ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ವಹಿಸುವುದು ಅಗತ್ಯ ಎಂದು ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ ತಿಳಿಸಿದ್ದಾರೆ. ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ 170 ನೇ ಹುಣ್ಣಿಮೆ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನದಿ ತಟ ಬಹುತೇಕ ಒತ್ತುವರಿಯಾಗುವುದರೊಂದಿಗೆ ಲೋಡುಗಟ್ಟಲೆ ಮಣ್ಣು ತುಂಬಿಸಿ ಅಭಿವೃದ್ದಿಯ ಹೆಸರಿನಲ್ಲಿ ಜಲಮೂಲಗಳಿಗೆ ಅಡ್ಡಿ ಮಾಡಲಾಗುತ್ತಿದೆ. ಇದರಿಂದ ಜೀವನದಿ ಕಾವೇರಿ ಸೇರಿದಂತೆ ಉಪನದಿಗಳು ಬತ್ತಿ ಹೋಗಿ ಆತಂಕದ ದಿನಗಳು ಎದುರಾಗುತ್ತಿವೆ ಎಂದು ಹೇಳಿದರು. ಮಹಾ ಆರತಿ ಅಂಗವಾಗಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅಷ್ಟೋತ್ತರ, ಕುಂಕುಮಾರ್ಚನೆ ನಂತರ ನದಿಗೆ ಆರತಿ ಬೆಳಗಿದರು. ಹೋಳಿ ಹುಣ್ಣಿಮೆ ಮಹತ್ವದ ಬಗ್ಗೆ ಮಾಹಿತಿ ಒದಗಿಸಿದ ಅವರು ಮಳೆಗಾಗಿ ಕೋರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್. ಶ್ರೀ ಕ್ಷೇತ್ರ ಧರ್ಮಸ್ಥಳ…
ಕುಶಾಲನಗರ ಮಾ.17 NEWS DESK : ಕುಶಾಲನಗರದ ಲಯನ್ಸ್ ಕ್ಲಬ್ ಮತ್ತು ಗೌಡ ಸಮಾಜದ ವತಿಯಿಂದ ಕರ್ನಾಟಕ ರತ್ನ, ಯೂತ್ ಐಕಾನ್ ಡಾ।। ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾ.17 ರಕ್ತದಾನ ಶಿಬಿರ, ಮಧುಮೇಹ, ರಕ್ತದೊತ್ತಡ ತಪಾಸಣೆ ಮತ್ತು ಜಾಗೃತಿ ಶಿಬಿರ ಕುಶಾಲನಗರದ ಗೌಡ ಸಮಾಜ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ತಿಳಿಸಿದರು. ಕುಶಾಲನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಕೋರಿದರು. ಲಯನ್ಸ್ ವಲಯ ರಾಯಭಾರಿ ಕೊಡಗನ ಹರ್ಷ ಮಾತನಾಡಿ, ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಎಂಬುದು ಇಲ್ಲ. ರಕ್ತಕ್ಕೆ ನಿರಂತರ ಬೇಡಿಕೆಯಿದೆ. ದಾನಿಗಳಿಂದ ಒಮ್ಮೆ ಸಂಗ್ರಹಿಸಿದ ರಕ್ತ 35 ದಿನಗಳವರೆಗೆ ಮಾತ್ರ ತನ್ನ ಶಕ್ತಿಯನ್ನು ಉಳಿಸಿಕೊಂಡಿರುತ್ತದೆ. ಆರೋಗ್ಯವಂತರು ಕಾಲಕಾಲಕ್ಕೆ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆ ನೀಗಿಸಲು ಮುಂದಾಗಬೇಕಿದೆ. ಸೋಮವಾರ ಬೆಳಗ್ಗೆ 10 ರಿಂದ 3 ಗಂಟೆವರೆಗೆ ನಡೆಯಲಿರುವ…
ಕುಶಾಲನಗರ, ಮಾ.17 NEWS DESK : ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ, ಕೊಡಗು ಜಿಲ್ಲೆಯ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದು ಎಂದೇ ಹೆಸರಾಗಿರುವ ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಶ್ರೀ ಮಂಟಿಗಮ್ಮ ದೇವಿಯ ಜಾತ್ರೆ ಭಾನುವಾರ ರಾತ್ರಿ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿದ ಗ್ರಾಮದೇವತೆ ಶ್ರೀ ಮಂಟಿಗಮ್ಮ ದೇವಿಯ ದ್ವೈವಾರ್ಷಿಕ ಜಾತ್ರೋತ್ಸವ ಭಾನುವಾರ ದೇವಿಯ ದೇಗುಲ ಪ್ರವೇಶದ ದ್ವಾರವನ್ನು ಮುಚ್ಚುವ ಮೂಲಕ ಸಂಪನ್ನಗೊಂಡಿತು. ಗ್ರಾಮದಲ್ಲಿ ಶುಕ್ರವಾರ ರಾತ್ರಿಯಿಂದ ಪವಿತ್ರ ಬನದಲ್ಲಿ ಎರಡು ದಿನಗಳ ಕಾಲ ಶ್ರೀ ಮಂಟಿಗಮ್ಮ ದೇವಸ್ಥಾನದಲ್ಲಿ ನಡೆದ ದೇವಿಯ ವಿಶೇಷ ಪೂಜೆ ಹಾಗೂ ಧಾರ್ಮಿಕ ಕೈಂಕರ್ಯಗಳಲ್ಲಿ ಕೊಡಗು ಜಿಲ್ಲೆಯ ಆಸ್ತಿಕರು ಸೇರಿದಂತೆ ನೆರೆಯ ಹಾಸನ ಹಾಗೂ ಮೈಸೂರು ಜಿಲ್ಲೆಗಳ ನೆರೆಯ ಗ್ರಾಮಗಳ ಆಸ್ತಿಕರು ಮತ್ತು ಗ್ರಾಮಸ್ಥರು ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಮಂಟಿಗಮ್ಮ ದೇವರ ಮೂರ್ತಿಗೆ ವಿವಿಧ ಪುಷ್ಪಗಳಿಂದ ಅಲಂಕೃತಗೊಳಿಸಲಾಗಿತ್ತು. ದೇವರ ಹಬ್ಬದ ಅಂಗವಾಗಿ ದೇವಸ್ಥಾನ ಸೇರಿದಂತೆ ಇಡೀ ಗ್ರಾಮವನ್ನು ವಿದ್ಯುತ್ದೀಪಗಳ ಅಲಂಕಾರದಿಂದ ಕಂಗೊಳಿಸಲಾಗಿತ್ತು. ದೇವಿಯ ದರ್ಶನಕ್ಕೆ…
ನಾಪೋಕ್ಲು ಮಾ.17 NEWS DESK : ರೇಬಿಸ್ ರೋಗ ಹರಡುವಿಕೆಯನ್ನು ತಡೆಗಟ್ಟಲು ಲಸಿಕೆ ಹಾಕಲಾಗುವುದು ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕೆಂದು ನಾಪೋಕ್ಲು ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಶಿಲ್ಪಶ್ರೀ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯತಿ, ಪಶುಪಾಲನೆ ಇಲಾಖೆ ಮಡಿಕೇರಿ ಹಾಗೂ ಪಶು ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ ಸಮೀಪದ ಬೇತು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಉಚಿತ ರೇಬಿಸ್ ಲಸಿಕೆ ಹಾಗೂ ಪಶು ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು. ಗ್ರಾಮದ ಊರ್ ಮಂದ್ ನಲ್ಲಿ ನಡೆದ ಶಿಬಿರವನ್ನು ಗ್ರಾಮ ಪಂಚಾಯಿತಿ ಸದಸ್ಯ ಸಾಬ ತಿಮ್ಮಯ್ಯ ಉದ್ಘಾಟಿಸಿದರು. ಶಿಬಿರದಲ್ಲಿ ಬಂಜೆ ರಾಸುಗಳ ತಪಾಸಣೆ, ಹೋರಿ ಮತ್ತು ರಾಸುಗಳ ಕಸಿ, ಜಂತು ನಾಶಕ ಔಷಧಿ, ಲವಣ ಮಿಶ್ರಣ, ಸಾಕು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕೆ ಹಾಕಿ ಸಲಹೆ ಸೂಚನೆ ಹಾಗೂ ಮಾರ್ಗದರ್ಶನವನ್ನು ನೀಡಲಾಯಿತು. ಮಡಿಕೇರಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಪ್ರಸನ್ನ, ನಾಪೋಕ್ಲು ಪಶು ಆಸ್ಪತ್ರೆಯ ಜಾನುವಾರು ಅಧಿಕಾರಿ ನವೀನ್, ಹಿರಿಯ ಪಶು ವೈದ್ಯಕೀಯ ಪರೀಕ್ಷಕ…
ಮಡಿಕೇರಿ ಮಾ.17 NEWS DESK : ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಪೋಸ್ಟ್ ಗ್ರಾಜುಯೇಷನ್ ಡಿಪ್ಲೋಮಾ ಇನ್ ಯೋಗ ಥೆರಪಿ (PGDYT)ನಲ್ಲಿ ಡಿಸ್ಟಿಂಕ್ಷನ್ ವಿತ್ ಪ್ರಾಕ್ಟಿಕಲ್ಸ್ ನಲ್ಲಿ ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಸಿ.ಶಿವರಾಜ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಈ ಹಿಂದೆ ಇವರು 2022-23ನೇ ಸಾಲಿನಲ್ಲಿ ಪೋಸ್ಟ್ ಗ್ರಾಜುಯೇಷನ್ ಡಿಪ್ಲೋಮಾ ಇನ್ ಯೋಗ ಎಜುಕೇಶನ್ (PGDYEd) ನಲ್ಲಿ ಡಿಸ್ಟಿಂಕ್ಷನ್ ವಿತ್ ಪ್ರಾಕ್ಟಿಕಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದಿದ್ದು, ಇದೀಗ ಯೋಗ ಥೆರಪಿನಲ್ಲಿ ಡಿಸ್ಟಿಂಕ್ಷನ್ ವಿತ್ ಪ್ರಾಕ್ಟಿಕಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆಯುವುದರ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮಡಿಕೇರಿ ಮಾ.17 NEWS DESK : ಮೂಲತಃ ಗೋಣಿಕೊಪ್ಪಲು ನಿವಾಸಿ, ಕುಶಾಲನಗರದ ಇಂದಿರಾ ಬಡಾವಣೆಯಲ್ಲಿ ನೆಲೆಸಿರುವ ದಿ.ಟಿ.ವಿ.ಲಕ್ಷ್ಮಣ ನಾಯ್ಡು ಅವರ ಪುತ್ರ, ನಿವೃತ್ತ ಬ್ಯಾಂಕ್ ಉದ್ಯೋಗಿ ಟಿ.ಎಲ್.ನಾಗೇಂದ್ರ (76) ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು (ಮಾ.17) ನಡೆಯಲಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇವರು ಪತ್ರಕರ್ತ ಟಿ.ಎಲ್.ಶ್ರೀನಿವಾಸ್ ಅವರ ಹಿರಿಯ ಸಹೋದರ ಆಗಿದ್ದಾರೆ.
ಮಡಿಕೇರಿ NEWS DESK ಮಾ.16 : ಹೊನ್ನಮ್ಮನ ಕನಸು ಕಾದಂಬರಿಯ ರಚನೆಕಾರ ಕೊಡಗಿನ ಪತ್ರಕರ್ತ ರಾಜ್ಯ ಪ್ರಶಸ್ತಿ ವಿಜೇತ ಟಿ.ಆರ್.ಪ್ರಶಾಂತ್ ಅವರನ್ನು ಸಿರಿಗನ್ನಡ ಮಿತ್ರ ತಂಡ- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬೆಂಗಳೂರಿನ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.






