ಲೇಖಕ: admin

ಮಡಿಕೇರಿ NEWS DESK ಮಾ.16 : ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕನ್ನಡ ನುಡಿವೈಭವ ಕಾರ್ಯಕ್ರಮದಲ್ಲಿ ಪ್ರಿತುನ್ ಪೂವಣ್ಣ ಅಯ್ಯನೆರವಂಡ ಅವರ ಕವನ ಆಯ್ಕೆಯಾಗಿದ್ದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರು ಕಕ್ಕಬ್ಬೆ ನಾಲಡಿ ಗ್ರಾಮದ ಅಯ್ಯನೆರವಂಡ ಪ್ರಭಾ ಪೂವಯ್ಯ ದಂಪತಿಯ ಪುತ್ರ.

Read More

ಮಡಿಕೇರಿ NEWS DESK ಮಾ.16 : ತೋಟದ ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಗೋಣಿಕೊಪ್ಪದ ಅತ್ತೂರು ಗ್ರಾ.ಪಂ ವ್ಯಾಪ್ತಿಯ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ. ತೋಟದ ಕಾರ್ಮಿಕ ಮಹಿಳೆ ಭವಾನಿ ಎಂಬುವವರ ಪುತ್ರಿ ಚನ್ನಂಗೊಲ್ಲಿ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ(10) ಲಾವಣ್ಯ ಎಂಬಾಕೆಯೇ ಮೃತ ದುರ್ದೈವಿ. ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಸಂದರ್ಭ ಕೆರೆಯ ಕೆಸರಿನಲ್ಲಿ ಸಿಲುಕಿದ ಲಾವಣ್ಯ ಮೃತಪಟ್ಟಳು ಎಂದು ತಿಳಿದು ಬಂದಿದೆ. ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ NEWS DESK ಮಾ.16 : ಮೀಸಲು ಅರಣ್ಯದಲ್ಲಿ ಬೆಂಕಿ ನಂದಿಸಲು ಹೋಗಿದ್ದ ಅರಣ್ಯ ಸಿಬ್ಬಂದಿಗಳ ವಾಹನ ಪಲ್ಟಿಯಾದ ಘಟನೆ ಸೋಮವಾರಪೇಟೆ ವಲಯದ ಹುದುಗೂರು ಯಡನವಾಡು ಬಸವೇಶ್ವರ ದೇವಾಲಯದ ಬಳಿ ನಡೆದಿದೆ. ಘಟನೆಯಿಂದ 12 ಅರಣ್ಯ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಹುದುಗೂರು ಉಪ ವಿಭಾಗಕ್ಕೆ ಸೇರಿದ ಯಡನವಾಡು ಮೀಸಲು ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪಿಕ್ ಅಪ್ ವಾಹನದಲ್ಲಿ ಅರಣ್ಯ ಸಿಬ್ಬಂದಿಗಳು ತೆರಳಿದ್ದರು. ಮಧ್ಯಾಹ್ನ ಕರ್ತವ್ಯ ಮುಗಿಸಿ ಬರುವ ಸಂದರ್ಭ ಬಸವೇಶ್ವರ ದೇವಾಲಯದ ಬಳಿ ಪಲ್ಟಿಯಾಗಿದೆ. ಗಾಯಾಳುಗಳಿಗೆ ಕುಶಾಲನಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹುದುಗೂರು ಉಪ ವಲಯ ಅರಣ್ಯಾಧಿಕಾರಿ ಚಂದ್ರೇಶ್, ಸಿಬ್ಬಂದಿಗಳಾದ ವೆಂಕಟೇಶ, ಸಚಿನ್, ವಿನು, ಸತೀಶ್, ಜೀವನ್, ಗಣೇಶ್, ಸುರೇಶ್, ಶ್ರೀ ಕಾಂತ್, ಹರೀಶ್ ಮತ್ತಿತರರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ್ ಭೇಟಿ ನೀಡಿದರು.

Read More

ಮಡಿಕೇರಿ NEWS DESK ಮಾ.16 : ತೋಟದ ಲೈನ್ ಮನೆಯೊಂದರಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಲಮಾವಟ್ಟಿ ಪೇರೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ಹೆಣ್ಣು ಶಿಶು ಪತ್ತೆಯಾಗಿದ್ದು, ಕೇವಲ ಒಂದೆರಡು ಗಂಟೆಗಳ ಹಿಂದೆ ಇದು ಜನಿಸಿದೆ ಎಂದು ಹೇಳಲಾಗಿದೆ. ಯಾರೂ ವಾಸವಿಲ್ಲದ ಲೈನ್ ಮನೆಯಲ್ಲಿ ಬಟ್ಟೆಯಲ್ಲಿ ಸುತ್ತಿದ್ದ ಶಿಶುವನ್ನು ಇರುವೆಗಳು ಸುತ್ತುವರೆದಿದ್ದವು. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದರು. ನಂತರ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಿದರು. ನಾಪೋಕ್ಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶಿಶುವಿನ ವಾರಸುದಾರರ ಬಗ್ಗೆ ಮಾಹಿತಿ ಲಭಿಸಿದಲ್ಲಿ ನಾಪೋಕ್ಲು ಪೊಲೀಸ್ ಠಾಣೆಗೆ (9480804948) ಮಾಹಿತಿ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

Read More

ಮಡಿಕೇರಿ NEWS DESK ಮಾ. 16 – ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಶಿಸ್ತು, ಜೀವನಮೌಲ್ಯಗಳನ್ನು ಸರಿಯಾದ ರೀತಿಯಲ್ಲಿ ಕಲಿಸಿಕೊಡಬೇಕು. ಸ್ವಚ್ಚಂದ ಜೀವನದ ಬಗೆಗಿನ ಎಚ್ಚರಿಕೆಯನ್ನೂ ಇಂದಿನ ಮಕ್ಕಳಿಗೆ ತಿಳಿಹೇಳುವುದು ಅಗತ್ಯ ಎಂದು ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಕಿವಿಮಾತು ಹೇಳಿದರು. ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಯುಕೆಜಿ ವಿದ್ಯಾಥಿ೯ಗಳಿಗೆ ಪದವಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹುಟ್ಟಿಂದನಿಂದಲೇ ಮಕ್ಕಳನ್ನು ಅತಿಯಾದ ಪ್ರೀತಿಯಿಂದ ಪೋಷಕರು ಸಲಹುತ್ತಾ ಮಕ್ಕಳು ಮಾಡಿದ್ದೆಲ್ಲವೂ ಸರಿ ಎಂದು ಭಾವಿಸುತ್ತಾರೆ. ಇದರಿಂದಾಗಿ ಸ್ವಚ್ಚಂದತೆಯನ್ನು ಹೆಚ್ಚಾಗಿಯೇ ಮಕ್ಕಳು ಬೆಳೆಸಿಕೊಂಡು ಸಮಾಜದಲ್ಲಿ ದಾರಿ ತಪ್ಪುವ ಸಾಧ್ಯತೆಯೂ ಹೆಚ್ಚಾಗಿದೆ. ಇಂಥ ಸಂದಭ೯ ಜೀವನಮೌಲ್ಯ, ಶಿಸ್ತನ್ನು ಕೂಡ ಸರಿಯಾದ ರೀತಿಯಲ್ಲಿ ಸರಿಯಾದ ವಯಸ್ಸಿನಲ್ಲಿಯೇ ಕಲಿಸುವ ಮೂಲಕ ತಮ್ಮ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಸಾಧ್ಯ ಎಂದು ಅನಂತಶಯನ ಹೇಳಿದರು. ತಮ್ಮ ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆ, ಶಿಕ್ಷಕ ವಗ೯ದ ಬಗ್ಗೆ ಪೋಷಕರು ನಂಬಿಕೆ ಹೊಂದಿರಬೇಕು. ಶಿಕ್ಷಣ ಸಂಸ್ಥೆಗಳೇ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಕೇಂದ್ರಗಳೆಂದು ಮರೆಯಬಾರದು ಎಂದು…

Read More

ಮಡಿಕೇರಿ NEWS DESK ಮಾ.16 : ಕೊಡಗು ಪತ್ರಕರ್ತರ ಸಂಘ(ರಿ)ದ ಕ್ಷೇಮಾಭಿವೃದ್ಧಿ ಸಮಿತಿಯ 2025-27ರ ಸಾಲಿನ ಅಧ್ಯಕ್ಷರಾಗಿ ಜಿ.ವಿ.ರವಿ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಕೂರ್ಗ್ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಸಂಘದ ಅಧ್ಯಕ್ಷರಾದ ಅನಿಲ್ ಹೆಚ್.ಟಿ. ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ. ಸಂತೋಷ್, ನಿಕಟ ಪೂರ್ವ ಅಧ್ಯಕ್ಷ ಎಸ್.ಎ. ಮುರಳೀಧರ್, ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ, ಪ್ರಸಾದ್ ಸಂಪಿಗೆ ಕಟ್ಟೆ ಹಾಗೂ ಟಿ .ಜೆ. ಪ್ರವೀಣ್ ಕುಮಾರ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಹೆಚ್.ಆರ್. ಹರೀಶ್ ಕುಮಾರ್, ವೀರಾಜಪೇಟೆ ತಾಲ್ಲೂಕು ಅಧ್ಯಕ್ಷರಾದ ಮುಲ್ಲೇಂಗಡ ಮಧೋಶ್ ಪೂವಯ್ಯ, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ವಿಘ್ನೇಶ್ ಭೂತನಕಾಡು, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷರಾದ ಕಿರಿಯಮಾಡ ರಾಜ್ ಕುಶಾಲಪ್ಪ, ಸಂಘದ ಸಲಹೆಗಾರರಾದ ಟಿ.ಪಿ. ರಮೇಶ್. ಬಿ.ಜಿ.ಅನಂತಶಯನ ಆಯ್ಕೆಯಾಗಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ NEWS DESK ಮಾ.15 : ನಿವೇಶನದ ಬೇಡಿಕೆ ಮುಂದಿಟ್ಟುಕೊAಡು ಕೆಲವರು ಹೋರಾಟದ ಹೆಸರಿನಲ್ಲಿ ಕೃಷಿಕರ ಭೂಮಿಗೆ ಅಕ್ರಮ ಪ್ರವೇಶ ಮಾಡಿ ಶೆಡ್‌ಗಳನ್ನು ನಿರ್ಮಿಸಿಕೊಂಡು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮತ್ತು ಅಕ್ರಮ ಶೆಡ್‌ಗಳನ್ನು ತಕ್ಷಣ ತೆರವುಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಸೋಮವಾರಪೇಟೆಯ ನಮ್ಮ ಭೂಮಿ ನಮ್ಮ ಹಕ್ಕು ರೈತ ಹೋರಾಟ ಸಮಿತಿ ಹಾಗೂ ಹೊದ್ದೂರು ರೈತ ಸಂಘಗಳು ಹೊದ್ದೂರಿನ ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಪ್ರತಿಭಟನಾ ಸಭೆ ನಡೆಸಿತು. ಸಭೆೆಯಲ್ಲಿ ಪಾಲ್ಗೊಂಡ ರೈತ ಸಂಘದ ಪ್ರಮುಖರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಹೊದ್ದೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಹೆಚ್.ಎ.ಹಂಸ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು. ಕೃಷಿಕರ ಜಮೀನಿನಲ್ಲಿ ನಿರ್ಮಿಸಲಾಗಿರುವ ಅಕ್ರಮ ಶೆಡ್‌ಗಳನ್ನು 15 ದಿನಗಳ ಒಳಗೆ ತೆರವುಗೊಳಿಸಬೇಕು, ರೈತರ ಮನೆ ಖಾತೆ ಬದಲಾವಣೆ, ಹೋಂ ಸ್ಟೇ ದೃಢೀಕರಣ ಪತ್ರ ಮತ್ತಿತರ ದಾಖಲೆಗಳ ವಿಲೇವಾರಿಯಲ್ಲಿ ವಿಳಂಬ ತೋರುತ್ತಿರುವ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯನ್ನು ವರ್ಗಾವಣೆಗೊಳಿಸಬೇಕು. ಪಂಚಾಯ್ತಿಯ ಸಾಮಾಜಿಕ…

Read More

ಮಡಿಕೇರಿ ಮಾ.15 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ (2024-25)ವು ಮಾ.18 ರಂದು ಬೆಳಗ್ಗೆ 10 ಗಂಟೆಗೆ ಕೂಡಿಗೆ ಡಯಟ್ ಸಭಾಂಗಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷರಾದ ಡಿ.ಭಾಸ್ಕರ್ ನಾಯಕ್, ಕೂಡಿಗೆ ಗ್ರಾ.ಪಂ. ಅಧ್ಯಕ್ಷರಾದ ಕೆ.ಟಿ.ಗಿರೀಶ್, ಕೊಡಗು ಜಿ.ಪಂ. ಆಡಳಿತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ,…

Read More

ಮಡಿಕೇರಿ ಮಾ.15 NEWS DESK : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು, ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ:: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಮಾನವ ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 391.832 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ ಎಂದರು. ಆನೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಹಾಸನ, ಚಿಕ್ಕಮಗಳೂರು,…

Read More

ಮಡಿಕೇರಿ ಮಾ.15 NEWS DESK : ವಿದೇಶಿ ಪ್ರವಾಸಿಗರ ಭೇಟಿ ಸಂದರ್ಭ ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವಂತೆ ಹೋಟೆಲ್, ರೆಸಾರ್ಟ್, ಹೋಂಸ್ಟೇ ಮಾಲೀಕರುಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೂಚನೆ ನೀಡಿದ್ದಾರೆ. ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಮಡಿಕೇರಿ ನಗರ, ಸುತ್ತ ಮುತ್ತಲ ಹೋಟೆಲ್, ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರುಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಪ್ರವಾಸಿಗರ ತಾಣವಾಗಿರುವ ಮಡಿಕೇರಿ ನಗರಕ್ಕೆ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಪ್ರವಾಸಿಗರಿಗೆ ಆತಿಥ್ಯವನ್ನು ಒದಗಿಸುವ ಸಮಯದಲ್ಲಿ ಪಡೆದುಕೊಳ್ಳಬೇಕಾದ ದಾಖಲೆಗಳು, ನಿರ್ವಹಿಸಬೇಕಾದ ದಾಖಲೆಗಳು, ವಿದೇಶೀ ಪ್ರವಾಸಿಗರ ಭೇಟಿಯ ಸಮಯದಲ್ಲಿ ಕಾನೂನು ಪ್ರಕಾರ ನಡೆಸಬೇಕಾದ ನೋಂದಣಿ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಲಾಯಿತು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್.ಸುಂದರ್ ರಾಜ್, ಮಡಿಕೇರಿ ನಗರದ ಪೊಲೀಸ್ ಅಧಿಕಾರಿಗಳು ಮತ್ತು ಹೋಟೆಲ್, ರೆಸಾರ್ಟ್, ಹೋಂಸ್ಟೇ ಮಾಲೀಕರುಗಳ ಸಂಘಗಳ ಪದಾಧಿಕಾರಿಗಳು, ಮಾಲೀಕರುಗಳು ಹಾಜರಿದ್ದರು.

Read More