ಮಡಿಕೇರಿ ಮಾ.15 NEWS DESK : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ‘25ನೇ ವರ್ಷದ ಮುದ್ದಂಡ ಕಪ್ ಹಾಕಿ ಉತ್ಸವ’ಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದೆ. ಪಂದ್ಯಾವಳಿಯು ಮಾ.28 ರಿಂದ ಏ.27ರ ವರೆಗೆ ಮೂರು ಮೈದಾನದಲ್ಲಿ ನಡೆಯಲಿದ್ದು, ಈಗಾಗಲೇ ದಾಖಲೆಯ 370 ತಂಡಗಳು ನೋಂದಣಿ ಮಾಡಿಕೊಂಡಿವೆ. ಒಂದು ತಿಂಗಳ ಹಾಕಿ ಪಂದ್ಯಾವಳಿ ಹಾಗೂ ಈ ಅವಧಿಯಲ್ಲಿ ನಡೆಯುವ ವಿಭಿನ್ನ ಕಾರ್ಯಕ್ರಮಗಳ ಕುರಿತು ಕೊಡವ ಹಾಕಿ ಅಕಾಡೆಮಿ ಹಾಗೂ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಪ್ರಮುಖರು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅವರು ಮಾತನಾಡಿ ಕಳೆದ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ 360 ತಂಡಗಳು ಪಾಲ್ಗೊಂಡಿದ್ದವು, ಈ ಬಾರಿಯ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ 10 ತಂಡಗಳು ಹೆಚ್ಚುವರಿಯಾಗಿದ್ದು, 370 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ನೋಂದಣಿಯ ಕೊನೆಯ ದಿನಾಂಕ ಮಾ.18 ಆಗಿದ್ದು, ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ ಎಂದು…
ಲೇಖಕ: admin
ಕುಶಾಲನಗರ ಮಾ.15 NEWS DESK : ಕುಶಾಲನಗರ ತಾಲ್ಲೂಕಿನ ಕಾವೇರಿ ನದಿ ದಂಡೆಯಲ್ಲಿರುವ ಗಡಿಭಾಗ ಶಿರಂಗಾಲ ಗ್ರಾಮದೇವತೆ ಶ್ರೀ ಮಂಟಿಗಮ್ಮ ದೇವಿಯ ದ್ವೈವಾರ್ಷಿಕ ಹಬ್ಬದ ಉತ್ಸವ ಹಾಗೂ ಜಾತ್ರೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಿಯನ್ನು ಭಕ್ತಾದಿಗಳು ತಮಟೆ ಮತ್ತು ಮಂಗಳವಾದ್ಯದೊಂದಿಗೆ ಪವಿತ್ರ ಬನಕ್ಕೆ ದೇವಿಗೆ ಸಂಬಂಧಿಸಿದ ಆಭರಣಗಳನ್ನೊಳಗೊಂಡ ಬುಟ್ಟಿ ಮತ್ತಿತರರ ಸಾಂಪ್ರದಾಯಿಕ ಸಾಮಗ್ರಿಗಳನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ಗ್ರಾಮದ ಕೋಟೆಯ ಗದ್ದಿಗೆಯಿಂದ ಆರಂಭಗೊಂಡ ದೇವಿಯ ಮೆರವಣಿಗೆ ಮತ್ತು ಉತ್ಸವವು ಮಧ್ಯರಾತ್ರಿ 1.15 ಗಂಟೆ ವೇಳೆಗೆ ಪವಿತ್ರ ಬನವನ್ನು ತಲುಪಿತು. ದೇವಿಯ ಬನದಲ್ಲಿ ಹಾಕಿದ್ದ ಅಗ್ನಿಕುಂಡವನ್ನು ಹರಕೆ ಹೊತ್ತ ಭಕ್ತಾಧಿಗಳು ತುಳಿದು ದೇವರ ದರ್ಶನ ಪಡೆದರು. ಗ್ರಾಮದ ಮಂಟಿಗಮ್ಮ ದೇವಸ್ಥಾನದಲ್ಲಿ ಬೆಳಿಗ್ಗಿನಿಂದಲೇ ಆರಂಭಗೊಂಡ ಮಂಟಿಗಮ್ಮ ದೇವಿಯ ಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನಗಳಲ್ಲಿ ಸಾವಿರಾರು ಮಂದಿ ಭಕ್ತಾಧಿಗಳು ಪಾಲ್ಗೊಂಡು ದೇವಿಗೆ ಪೂಜೆ ಸಲ್ಲಿಸಿದರು. ಮಂಟಿಗಮ್ಮ ದೇವಸ್ಥಾನದಲ್ಲಿ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಜಾನಪದ ಜಾತ್ರೆಯು ಜನರ ಗಮನ ಸೆಳೆಯಿತು. ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಶ್ರೀ…
ಗೋಣಿಕೊಪ್ಪಲು ಮಾ.15 NEWS DESK : ಹಲವು ಮಹಾಪುರುಷರ ಆಚರಣೆಯನ್ನು ರಾಜ್ಯ ಸರ್ಕಾರ ಮಾಡುತ್ತಾ ಬಂದಿದ್ದು, ಯಾವುದೇ ಪುಣ್ಯ ಪುರುಷರ ಆಚರಣೆ ಒಂದು ಸಮುದಾಯಕ್ಕೆ ಮೀಸಲಾಗದೆ ಎಲ್ಲ ಸಮುದಾಯ ಒಗ್ಗೂಡಿ ಆಚರಿಸುವಂತಾಗಬೇಕು ಎಂದು ಪೊನ್ನಂಪೇಟೆ ತಾಲ್ಲೂಕು ತಹಶೀಲ್ಧಾರ್ ಮೋಹನ್ ಕುಮಾರ್ ಅಭಿಪ್ರಾಯಪಟ್ಟರು. ಪೊನ್ನಂಪೇಟೆ ತಹಶೀಲ್ಧಾರ್ ಕಚೇರಿಯಲ್ಲಿ ಕೊಡಗು ಬಲಿಜ ಸಮಾಜ ನೇತೃತ್ವದಲ್ಲಿ ನಡೆದ ಶ್ರೀ ಯೋಗಿ ನಾರೇಯಣ ಯತೀಂದ್ರರ 299ನೇ ಜಯಂತಿಯನ್ನು ಕೈವಾರ ತಾತಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮಹಾಪುರುಷರ ಆದರ್ಶಗಳನ್ನು ನಾವು ಪಾಲಿಸಬೇಕು. ಕೈವಾರ ತಾತಯ್ಯ ಸುಮಾರು 200 ವರ್ಷಗಳ ಹಿಂದೆ ನುಡಿದ ಕಾಲಜ್ಞಾನ ಭವಿಷ್ಯ ಇಂದು ನಿಜವಾಗುತ್ತಿದೆ. ದೈವ ಬಲದಿಂದ ಯಾವುದೇ ಕಾರ್ಯ ಮಾಡಿದರೂ ಅದು ಯಶಸ್ವಿಯಾಗುತ್ತದೆ ಎಂದರು. ಕೊಡಗು ಬಲಿಜ ಸಮಾಜದ ಅಧ್ಯಕ್ಷ ಟಿ.ಎಲ್.ಶ್ರೀನಿವಾಸ್ ಅವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಕಳೆದ 5 ವರ್ಷಗಳಿಂದ ಕೊಡಗು ಜಿಲ್ಲೆಯ ವಿವಿಧೆಡೆ ಕಾಲಜ್ಞಾನಿ ತಾತಯ್ಯ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕಾಲಜ್ಞಾನಿಗಳು ಸುಮಾರು 110 ವರ್ಷ…
ನಾಪೋಕ್ಲು ಮಾ.15 NEWS DESK : ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಸನ್ನಿಧಿಯಲ್ಲಿ “ಪಾಡೀಶ್ವರಂಡ ನಡೆಲೋರ್ ಸ್ವರ” ಕೊಡವ ಹಾಡಿನ (ಕೃತಿ) ಧ್ವನಿಸುರುಳಿಯನ್ನು ಸನ್ನಿಧಿಯ ಭಕ್ತ ಜನ ಸಂಘದ ವತಿಯಿಂದ ಲೋಕಾರ್ಪಣೆಗೊಳಿಸಲಾಯಿತು. ಕೊಕೇರಿ ಗ್ರಾಮದ ಕ್ಯಾಪ್ಟನ್ ಬಿದ್ದಂಡ ನಾಣಿ ದೇವಯ್ಯ ಶ್ರೀ ಇಗ್ಗುತ್ತಪ್ಪ ದೇವರ ಕುರಿತು ರಚಿಸಿದ ಕೊಡವ ಹಾಡಿನ ಧ್ವನಿಸುರುಳಿಯನ್ನು ದೇವಾಲಯದ ತಕ್ಕ ಮುಖ್ಯಸ್ಥರು, ಭಕ್ತ ಜನ ಸಂಘದ ಅಧ್ಯಕ್ಷ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಕ್ಯಾಪ್ಟನ್ ಬಿದ್ದಂಡ ನಾಣಿದೇವಯ್ಯ ಕೊಡವ ಭಾಷೆಯ ಮೇಲೆ ಅಭಿಮಾನವಿಟ್ಟು ಇಗ್ಗುತ್ತಪ್ಪ ದೇವರ ಕುರಿತು ಉತ್ತಮವಾದ ಸಾಹಿತ್ಯ ಬರೆದಿದ್ದಾರೆ. ಈ ಪದ್ಯಗಳನ್ನು ಕರುಣ್-ಕಾವೇರಪ್ಪ ಹಾಡಿದ್ದು ನಾಣಿದೇವಯ್ಯ ಅವರಿಂದ ಇನ್ನು ಹೆಚ್ಚಿನ ಸಾಹಿತ್ಯ ರಚನೆಯಾಗಲಿ. ಈ ಪುಣ್ಯಭೂಮಿಯಲ್ಲಿ ಮತ್ತಷ್ಟು ಸಾಹಿತ್ಯ ಕೃತಿಗಳು ಹೊರಬಂದು ಅಜರಾಮರವಾಗಲೆಂದು ಶುಭ ಹಾರೈಸಿದರು. ಈ ಸಂದರ್ಭ ರಚನೆಗಾರ ಕ್ಯಾಪ್ಟನ್ ಬಿದ್ದಂಡ ನಾಣಿದೇವಯ್ಯ, ಹಾಡುಗಾರ ಕರುಣ್-ಕಾವೇರಪ್ಪ, ಉಪಾಧ್ಯಕ್ಷ ಕಲಿಯಾಟಂಡ ಅಪ್ಪಣ್ಣ, ಕಾರ್ಯದರ್ಶಿ ಬಟ್ಟಿರ…
ನಾಪೋಕ್ಲು ಮಾ.15 NEWS DESK : ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಉತ್ಸವದ ಅಂಗವಾಗಿ ದೇವಾಲಯದಲ್ಲಿ ಮುಂಜಾನೆಯಿಂದಲೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿಸಲಾಯಿತು. ದೇವಾಲಯದಲ್ಲಿ ಎತ್ತುಪೋರಾಟ, ಮಹಾಪೂಜೆ ಮಹಾಮಂಗಳಾರತಿ, ಜರುಗಿತು. ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರುಗಿತು. ದೇವರ ಪ್ರದರ್ಶನ, ನೃತ್ಯ ಸೇವೆ ನೆರವೇರಿತು. ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಎತ್ತುಪೋರಾಟದೊಂದಿಗೆ ತೆರಳಿ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಭಕ್ತಾಧಿಗಳು ತಮ್ಮ ಇಷ್ಟಾರ್ಥ ಸಿದ್ಧಿಗೆ ತುಲಾಭಾರ ಸೇವೆ, ಕಾಫಿ, ಕಾಳುಮೆಣಸು, ಎಣ್ಣೆ ಸೇರಿದಂತೆ ಮತ್ತಿತರ ಹರಕೆ ಒಪ್ಪಿಸಿದರು. ತಂತ್ರಿ ಸಂತೋಷ್ ಹೆಬ್ಬಾರ್, ಅರ್ಚಕ ವಿಜಯಕುಮಾರ್ ಹಾಗೂ ಜಯಚಂದ್ರ (ಪುಂಡ) ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಉತ್ಸವದಲ್ಲಿ ತಕ್ಕಮುಖ್ಯಸ್ಥರಾದ ಬದಂ ಜೆಟ್ಟೀರ ನಾಣಯ್ಯ, ನಾಪನೆರವಂಡ ಪೊನ್ನಪ್ಪ, ಬಾಳೆಯಡ ರಾಜ ಕುಂಞಪ್ಪ, ಕೈಯಂದಿರ ರಮೇಶ್ ಉತ್ತಯ್ಯ, ದೇವಾಲಯದ ಆಡಳಿತ ಮಡಳಿ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ಉಪಾಧ್ಯಕ್ಷ ಮಂಡಿರ ಜಯ ದೇವಯ್ಯ ,…
ಮಡಿಕೇರಿ ಮಾ.15 NEWS DESK : ಅಮ್ಮತ್ತಿ ಕೊಡವ ಸಮಾಜವು ಸಾಹಿತಿಕ ಹಾಗೂ ಸಾಂಸ್ಕೃತಿಕವಾಗಿ ಸಿಂಗಾರಗೊಳ್ಳುತ್ತಿದೆ. ಇದೇ ಮಾರ್ಚ್ 29,30ರಂದು ನಡೆಯಲಿರುವ ‘ಕೊಡವ ಬಲ್ಯನಮ್ಮೆ’ಗೆ ಸಕಲ ಸಿದ್ಧತೆಗಳು ಬಿಡುವಿಲ್ಲದೆ ನಡೆಯುತ್ತಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಅಮ್ಮತ್ತಿ ಕೊಡವ ಸಮಾಜದ ಸಹಯೋಗದಲ್ಲಿ ನಡೆಸುತ್ತಿರುವ ಕೊಡವ ಬಲ್ಯನಮ್ಮೆಯು ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡಿದ್ದು ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಸಾರಥ್ಯದಲ್ಲಿ ತಯಾರಿಗೊಳ್ಳುತ್ತಿದೆ. ಸಾಂಸ್ಕೃತಿಕ – ಜಾನಪದ ಮೆರವಣಿಗೆ :: ಕೊಡವ ಬಲ್ಯನಮ್ಮೆಯ ಮೊದಲ ದಿನ ಬೆಳಗ್ಗೆ 9 ಗಂಟೆಗೆ ಹೊಸೂರು ಜಂಕ್ಷನ್ನಿಂದ ಕೊಡವ ಸಮಾಜದವರೆಗೆ ಕೊಡವ ಸಾಂಸ್ಕೃತಿಕ–ಜಾನಪದ ಮೆರವಣಿಗೆಯನ್ನು ಅಮ್ಮತ್ತಿ ನಾಡಿನ ಹಿರಿಯರು ಹಾಗೂ ಸಮಾಜ ಸೇವಕರಾದ ನೆಲ್ಲಮಕ್ಕಡ ಶಂಭು ಸೋಮಯ್ಯ, ಕಾವಾಡಿಚಂಡ ಯು. ಗಣಪತಿ ಉದ್ಘಾಟಿಸಲಿದ್ದಾರೆ. ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷರಾದ ಐನಂಡ ಪ್ರಕಾಶ್ ಗಣಪತಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯನವರು ವಹಿಸಲಿದ್ದು, ವಿಧಾನ…
ಮಡಿಕೇರಿ NEWS DESK ಮಾ.15 : ಮಡಿಕೇರಿ ನಗರದ ಶ್ರೀಕೋದಂಡ ರಾಮೋತ್ಸವ ಸಮಿತಿಯ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಅಭಿಯಂತರ ವಿ.ಎಸ್.ವಿನೋದ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಮಲ್ಲಿಕಾರ್ಜುನ ನಗರ ಬಡಾವಣೆಯ ಶ್ರೀಕೋದಂಡ ರಾಮ ದೇವಾಲಯದಲ್ಲಿ ರಾಮೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲು ಸಿದ್ಧತೆ ನಡೆದಿದೆ. ಏ.5 ಮತ್ತು 6ರಂದು ರಾಮೋತ್ಸವ ಅದ್ದೂರಿಯಾಗಿ ಜರುಗಲಿದ್ದು, ವಿಜೃಂಭಣೆಯ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮವನ್ನು ಕೂಡ ಆಯೋಜಿಸಲಾಗಿದೆ.
ಮಡಿಕೇರಿ ಮಾ.15 NEWS DESK : ಮಡಿಕೇರಿ ನಗರದ ಶ್ರೀಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿ ಮತ್ತು ವಿಜೃಂಭಣೆಯ ರಾಮೋತ್ಸವವನ್ನು ಆಚರಿಸಲು ಸಿದ್ಧತೆ ನಡೆದಿದೆ. ಏ.5 ಮತ್ತು 6ರಂದು ಅದ್ಧೂರಿಯಾಗಿ ರಾಮೋತ್ಸವ ನಡೆಯಲಿದ್ದು, ಸಾವಿರಾರು ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅನ್ನದಾನಕ್ಕೆ ಆರ್ಥಿಕ ಅಥವಾ ಸಾಮಾಗ್ರಿ ನೆರವು ನೀಡುವವರು ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ (9880778047) ಹಾಗೂ ಆಹಾರ ಸಮಿತಿಯ ಅಧ್ಯಕ್ಷ ಹೆಚ್.ವಿ.ಸುಧಾಕರ್ (9916393382) ಅವರನ್ನು ಸಂಪರ್ಕಿಸುವಂತೆ ರಾಮೋತ್ಸವ ಸಮಿತಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಮಡಿಕೇರಿ ಮಾ.15 NEWS DESK : ಭಾರತೀಯ ಜನತಾ ಪಾರ್ಟಿ ಎಸ್.ಸಿ ಮೋರ್ಚಾದ ಸಭೆಯು ನಗರದಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಜಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಶ್ರಮವಹಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು. ಸರ್ಕಾರದ ಯೋಜನೆಗಳು ಪರಿಶಿಷ್ಟರಿಗೆ ದೊರಕಿಸಿಕೊಡುವಲ್ಲಿ ಎಸ್.ಸಿ ಮೋರ್ಚಾವು ಶ್ರಮಪಡಬೇಕೆಂದರು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪರಿಶಿಷ್ಟರಿಗೆ ಮಾಹಿತಿ ನೀಡುವಂತೆ ಕರೆ ನೀಡಿದರು. ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡುತ್ತಿದ್ದು, ಈ ವಿಚಾರವಾಗಿ ಅನೇಕ ಹೋರಾಟ ಪ್ರತಿಭಟನೆ ನಡೆಯುತ್ತಿದೆ. ಎಸ್ಸಿ ಮೋರ್ಚಾವು ಎಲ್ಲ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದು, ಪಕ್ಷದ ಬಲವರ್ಧನೆಗೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಎಸ್.ಸಿ.ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಜಿಲ್ಲೆಯಲ್ಲಿ ಎಸ್.ಸಿ.ಮೋರ್ಚಾವನ್ನು ಬಲಿಷ್ಠ ಗೊಳಿಸಲಾಗುವುದು. ಈ…
ನಾಪೋಕ್ಲು ಮಾ.14 NEWS DESK : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುದೀರ್ಘ 35 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಎನ್.ಜಾನಕಿಗೆ ಸಂಸ್ಥೆಯ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಎಸ್.ಎನ್.ಜಾನಕಿಯ ಮತ್ತು ಅವರ ಪತಿ ಯಪಾರೆ ಲಿಂಗಪ್ಪ ಅವರಿಗೆ ಸಂಘದ ಪರವಾಗಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಅಶೋಕ ಪೆರುಮುಂಡ, ಗ್ರಾ.ಪಂ ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ, ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ, ಕೆಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ವಿನೀತ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಸಂಸ್ಥೆಯ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯತ್ ಸದಸ್ಯರುಗಳು, ಹಿರಿಯ ಸಹಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಸಂಸ್ಥೆಯ ಸಿಬ್ಬಂದಿಗಳಾದ ಎಂ.ಆರ್.ಗೋಪಾಲಕೃಷ್ಣ ಸ್ವಾಗತಿಸಿ ವಂದಿಸಿದರು. ವರದಿ : ದುಗ್ಗಳ ಸದಾನಂದ.






