ಲೇಖಕ: admin

ನಾಪೋಕ್ಲು ಜ.17 NEWS DESK : ಕಠಿಣ ಪರಿಶ್ರಮ, ಶಿಸ್ತು ಹಾಗೂ ಸಮಯ ನಿರ್ವಹಣೆಯಿಂದ  ವಿದ್ಯಾರ್ಥಿಗಳು ಯಶಸ್ಸು ಪಡೆಯಲು ಸಾಧ್ಯ ಎಂದು  ಬದಿಯಡ್ಕದ ಕುನಿಲ್ ಎಜುಕೇಶನ್ ಇನ್ಸ್ಟಿಟ್ಯೂಟ್ ನ ಸಿಇಒ ವಿಕ್ರಂ ದತ್ ಹೇಳಿದರು. ರೋಟರಿ ಮಿಸ್ಟಿ ಹೀಲ್ಸ್ ಮಡಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ ನಾಪೋಕ್ಲು ಸಹಯೋಗದೊಂದಿಗೆ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಆತ್ಮಸ್ಥೈರ್ಯ ವೃದ್ಧಿಗಾಗಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರೇರಣ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಉತ್ತೀರ್ಣರಾಗುವುದು ಮುಖ್ಯ ಅಲ್ಲ ಜ್ಞಾನ, ಅನುಭವ ಗಳಿಸಿಕೊಳ್ಳುವುದು ಅಗತ್ಯ ಎಂದರು. ಜೀವನದಲ್ಲಿ ನಾನೇನು ಆಗಬೇಕು, ಮುಂದಿನ ಭವಿಷ್ಯದ ಬಗ್ಗೆ ಈಗಾಗಲೇ ನಿರ್ಧರಿಸಕೊಳ್ಳಬೇಕಿದೆ ಎಂದರು.  ವಿದ್ಯಾರ್ಥಿಗಳು ಜೀವನದಲ್ಲಿ ಐದು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಂವಹನ ಕಲೆ, ಡಿಜಿಟಲ್ ಸಾಕ್ಷರತೆ, ಆರ್ಥಿಕ ಸಾಕ್ಷರತೆ, ಭಾವನಾತ್ಮಕ ಬುದ್ಧಿವಂತಿಕೆ ಹಾಗೂ ವೇಗವಾಗಿ ಕಲಿಕೆ ಇದು ಇಂದಿನ…

Read More

ಸೋಮವಾರಪೇಟೆ ಜ.17 NEWS DESK : ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ 67ನೇ ಮಹಾರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದ ಆವರಣದಿಂದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದ ನಂತರ ಗ್ರಾಮಸ್ಥರು, ಭಕ್ತಾದಿಗಳು ಜೈಕಾರ ಹಾಕುತ್ತ ಗ್ರಾಮದ ಬೀದಿಯಲ್ಲಿ ಉತ್ಸವ ಮೂರ್ತಿಯನ್ನು ಹೊತ್ತ ರಥವನ್ನು ಎಳೆಯಲಾಯಿತು. ಶಾಸಕ ಡಾ.ಮಂತರ್‍ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವ ಅಪ್ಪಚ್ಚು ರಂಜನ್, ಹರಪಳ್ಳಿ ರವೀಂದ್ರ, ತಹಸೀಲ್ದಾರ್ ಕೃಷ್ಣಮೂರ್ತಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ದಾನಿಗಳಾದ ಕೊತ್ನಳ್ಳಿ ಅರುಣ್ ಸೇರಿದಂತೆ ಅನೇಕ ಗಣ್ಯರು ರಥವನ್ನು ಎಳೆದರು. ದಾರಿಯುದ್ದಕ್ಕೂ ಗ್ರಾಮಸ್ಥರು ಮತ್ತು ಭಕ್ತರು ರಥಕ್ಕೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು. ಶಾಂತಳ್ಳಿ ಗ್ರಾಮದವರೊಂದಿಗೆ ಕೊತ್ತನಳ್ಳಿ, ಬೀದಳ್ಳಿ, ಹೆಗ್ಗಡಮನೆ, ಕುಮಾರಳ್ಳಿ, ಬಾಚಳ್ಳಿ, ಕೂತಿನಾಡು, ತೋಳುನಾಡು, ಯಡೂರು, ತಲ್ತಾರೆಶೆಟ್ಟಳ್ಳಿ ಸೇರಿದಂತೆ ಮತ್ತಿತರ ಗ್ರಾಮದವರು ವಿಶೇಷ ಪರಿಶುದ್ಧತೆಯಿಂದ ಸ್ವಾಮಿಗೆ ಫಲ, ತಾಂಬೂಲ, ದವಸ, ಧಾನ್ಯ, ಕಾಣಿಕೆಗಳನ್ನು ನೀಡಿ ಪೂಜೆಯಲ್ಲಿ ಭಾಗಿಯಾದರು.…

Read More

ಮಡಿಕೇರಿ NEWS DESK ಜ.16 : ಕನ್ನಡ ಭವನದ ವತಿಯಿಂದ ನೀಡಲಾಗುವ ʼಕನ್ನಡ ಪಯಸ್ವಿನಿ ಅಚೀವ್ಮೆಂಟ್‌ ಅವಾರ್ಡ್-2026ʼಗೆ ಭಾಜನರಾಗಿರುವ ಸಮುದಾಯದ ಸಾಧಕರನ್ನು ಕೊಡಗು ಜಿಲ್ಲಾ ಯುವ ಬಂಟ್ಸ್‌ ಅಸೋಸಿಯೇಷನ್‌ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.  ಇತ್ತೀಚೆಗೆ ಮಡಿಕೇರಿಯ ಹೋಟೆಲ್‌ ಸಮುದ್ರ ಸಭಾಂಗಣದಲ್ಲಿ ಜರುಗಿದ ಕೊಡಗು ಜಿಲ್ಲಾ ಬಂಟರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕಿ ಪ್ರತಿಮಾ ಹರೀಶ್‌ ರೈ, ಪತ್ರಕರ್ತ ಕಿಶೋರ್‌ ರೈ ಕತ್ತಲೆಕಾಡು, ನಿರೂಪಕಿ ಹರ್ಷಿತಾ ಶೆಟ್ಟಿ ಅವರನ್ನು ಅತಿಥಿಗಳು ಸನ್ಮಾನಿಸಿ, ಅಭಿನಂದಿಸಿದರು. ಜಿಲ್ಲೆಯ ಹೆಸರಾಂತ ಚಿತ್ರ ಕಲಾವಿದ ಬಿ.ಕೆ. ಗಣೇಶ್‌ ರೈ ಅವರನ್ನೂ ಸನ್ಮಾನಿಸಿ  ಅಭಿನಂದಿಸಲಾಯಿತು. ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ. ಜಗದೀಶ್‌ ರೈ, ಕಾರ್ಯದರ್ಶಿ ರವೀಂದ್ರ ವಿ.ರೈ, ಖಜಾಂಚಿ ರತ್ನಾಕರ ರೈ, ಗೌರವಾಧ್ಯಕ್ಷ ಬಿ.ಬಿ. ಐತಪ್ಪ ರೈ, ಯುವ ಬಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಸದಾನಂದ ರೈ ಹಾಗೂ ಇನ್ನಿತರರು ಈ ಸಂದರ್ಭ ಇದ್ದರು.  ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮದ ಪ್ರಯುಕ್ತ ನಾಡಿನ ವಿವಿಧ…

Read More

ಮಡಿಕೇರಿ NEWS DESK ಜ.16 : ಮೈಸೂರಿನ ಯುವರಾಜ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗಮಂಡಲದ ಚೈನೀಸ್ ಕೆನ್‌ಪೊ ಕರಾಟೆ ಶಾಖೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ 7 ಚಿನ್ನ ಮತ್ತು 11 ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಜಿತಿಕಾ, ಜಶ್ವಿನ್, ಪ್ರತಾಪ್, ಮನ್ವಿತ್, ಗುರುದೀಪ್, ಚೇತಕ್ ಹಾಗೂ ಶಿವಾನಿ ಚಿನ್ನದ ಪದಕಗಳನ್ನು ಗೆದ್ದುಕೊಂಡರು. ರತನ್, ಹಿಮಾನಿ, ಹರ್ಷಿಕಾ, ಪ್ರಿಯಾಂಕ, ಹಿರಾಲ್, ಅಕುಲ್, ಗಗನ್, ತಮನ್, ತ್ರೈಸಿ, ಜಾನೇಶ್ ಹಾಗೂ ಪ್ರೀತಂ ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡರು. ತಂಡದ ಪರವಾಗಿ ಚೈನೀಸ್ ಕೆನ್‌ಪೊ ಕರಾಟೆ ಶಾಖೆಯ ನಿರ್ದೇಶಕ ನಾಗರಾಜ್, ಕರಾಟೆ ಶಿಕ್ಷಕರಾದ ಇಮ್ಯಾನ್ವಲ್ ಕೆ.ಜೆ, ರಾಯ್ ಜೋಸೆಫ್ ಹಾಗೂ ಗ್ರಾಂಡ್ ಮಾಸ್ಟರ್ ರಾಜೇಶ್ ಉಪಸ್ಥಿತರಿದ್ದರು.

Read More

ಮಡಿಕೇರಿ ಜ.16 NEWS DESK : ಕುಶಾಲನಗರ ಗೌಡ ಮಹಿಳಾ ಸಂಘ ಸುಮುಖ – ಸುಕೃತದ ವತಿಯಿಂದ ‘ಸಂಕ್ರಾತಿ ಸಂಭ್ರಮ’ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕುಶಾಲನಗರ ಗೌಡ ಸಮಾಜದಲ್ಲಿ ನಡೆದ ‘ಸಂಕ್ರಾಂತಿ ಸಂಭ್ರಮ’ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಹಿಳಾ ಸಂಘದ ಅಧ್ಯಕ್ಷೆ ಕಲಾ ಕರಂದ್ಲಾಜೆ ಅವರು ಜೀವನದಲ್ಲಿ ಸುಖ ಮತ್ತು ದು:ಖವನ್ನು ಸಮಾನವಾಗಿ ಸ್ವೀಕರಿಸುವ ಹಾಗೂ ಪ್ರೀತಿಯಿಂದ ಬದುಕು ಸಾಗಿಸುವ ಸಂದೇಶ ಸಂಕ್ರಾಂತಿ ಹಬ್ಬದಲ್ಲಿ ಅಡಗಿದೆ ಎಂದರು. ಸಂಕ್ರಾಂತಿ ಎಳ್ಳು ಬೆಲ್ಲವನ್ನು ಹಂಚಿ ಸಂಭ್ರಮಿಸುವ ಮತ್ತು ಪ್ರಕೃತಿಯೊಂದಿಗಿನ ಒಡನಾಟವನ್ನು ಸೂಚಿಸುವ ಒಂದು ಸುಂದರವಾದ ಹಬ್ಬವಾಗಿದೆ. ಈ ಹಬ್ಬದ ಆಚರಣೆಯ ಮೂಲಕ ಪ್ರೀತಿ, ಸೌಹಾರ್ದತೆ ಮತ್ತು ಒಗ್ಗಟ್ಟಿನ ಸಂದೇಶವನ್ನು ನಾವೆಲ್ಲರೂ ಸಾರಬೇಕು. ಚಳಿಗಾಲದಲ್ಲಿ ದೇಹಕ್ಕೆ ಶಕ್ತಿ ನೀಡುವ ಮತ್ತು ಶಾಖವನ್ನು ಹೆಚ್ಚಿಸುವ ಸಾಮಥ್ರ್ಯ ಹೊಂದಿರುವ ಸಂಕ್ರಾಂತಿ ಹಬ್ಬದ ಕೃಷಿ ಫಸಲು ಮತ್ತು ಖಾದ್ಯಗಳೆಲ್ಲವೂ ವೈಜ್ಞಾನಿಕವಾಗಿಯೂ ಗಮನ ಸೆಳೆದಿವೆ ಎಂದು ವಿವರಿಸಿದರು. ಸಂಘದ ಸದಸ್ಯೆ ಅನಿತಾ ನಂಗಾರು ಅವರು ಮಾತನಾಡಿ…

Read More

ಕುಶಾಲನಗರ ಜ.16 NEWS DESK : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪರಿಕಲ್ಪನೆಯ ನಾರಿ ಶಕ್ತಿಯೊಂದಿಗೆ ವಿಕಸಿತ ಭಾರತ ನಿರ್ಮಾಣ ಪ್ರಗತಿ ದಾಯಕವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಹಿಳಾ ಶಕ್ತಿಗೆ ಬೇಕಾದ ಕಟ್ಟಡಗಳ ನಿರ್ಮಾಣ ಅವರ ಅಭ್ಯುದಯಕ್ಕೆ ಪೂರಕವಾಗಿವೆ ಎಂದು ಕೊಡಗು ಸಂಸದ ಯದುವೀರ್ ಒಡೆಯರ್ ಹೇಳಿದರು. ಹೆಬ್ಬಾಲೆ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಎನ್‍ಆರ್‍ಎಲ್‍ಎಂ ಸಂಜೀವಿನಿ ಶೆಡ್ (ಸ್ತ್ರೀ ಶಕ್ತಿ ಭವನ) ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಸಂಸ್ಕೃತಿ, ಪರಂಪರೆ ಸಂರಕ್ಷಣೆಯಲ್ಲಿ ಮಹಿಳೆಯರ ಪಾತ್ರ ಅಪಾರವಿದೆ. ಕೌಶಲ್ಯಾಭಿವೃದ್ದಿಗೆ ಕಟ್ಟಡಗಳು ಪೂರಕವಾಗಿದ್ದು ಸಂಜೀವಿನಿ ಒಕ್ಕೂಟದಲ್ಲಿ ಹೆಬ್ಬಾಲೆ ವ್ಯಾಪ್ತಿಯಲ್ಲಿ 44 ಸಂಘಗಳ 705 ಮಹಿಳಾ ಸದಸ್ಯರಿದ್ದು ಪೂರಕ ಅಭಿವೃದ್ದಿಗೆ ಬಳಸಿಕೊಳ್ಳಬಹುದಾಗಿದೆ. ಗ್ರಾಮೀಣ ಭಾಗದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಯೋಜನೆಯ ಹೆಸರು ಬದಲಾವಣೆ ಮುಖ್ಯವಲ್ಲ. ಗ್ರಾಮೀಣ ಕೌಶಲ್ಯ ಅಭಿವೃದ್ಧಿಗೆ ಬೇಕಾದ ಸವಲತ್ತುಗಳು ಹೊಸ ಹೆಸರಿನಲ್ಲಿ ಅಡಕವಾಗಿದೆ. ಆದರೆ ಕಾಂಗ್ರೆಸ್ ನವರ ಅಪಪ್ರಚಾರ ಸಲ್ಲದು. ಮನರೇಗಾ ಆ ಕಾಲ ಘಟ್ಟಕ್ಕೆ…

Read More

ಕುಶಾಲನಗರ ಜ.16 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸೀಗೆಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ  ಏರ್ಪಡಿಸಿದ್ದ ಮಕ್ಕಳ ಕಲಿಕಾ ಹಬ್ಬವು ಸಂಭ್ರಮದಿಂದ‌ ನಡೆಯಿತು. 1 ರಿಂದ 5 ನೇ ತರಗತಿಯವರೆಗಿನ ಮಕ್ಕಳಿಗೆ ಮೂಲಭೂತ – ಸಾಕ್ಷರತೆ- ಸಂಖ್ಯಾಶಾಸ್ತ್ರ (ಎಫ್ ಎಲ್ ಎನ್ ) ಸಂಬಂಧಿಸಿದಂತೆ ಏರ್ಪಡಿಸಿದ್ದ ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳುಳ್ಳ ಚಟುವಟಿಕೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್, ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ”. ಕಲಿಕಾ ಹಬ್ಬವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು. ಸ್ಥಳೀಯರ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ಸಂಘಟಿಸಿರುವ ಮಕ್ಕಳ ಕಲಿಕಾ ಹಬ್ಬ ವಿಶಿಷ್ಟವಾದ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳಲ್ಲಿ ಸಂತಸದಾಯಕ ಕಲಿಕೆಯ ಮೂಲಕ ಹೆಚ್ಚು ಜ್ಞಾನಾರ್ಜನೆಗೆ ಸಹಕಾರಿಯಾಗಿದೆ ಎಂದು ಚೇತನ್ ಹೇಳಿದರು.  ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ…

Read More

ಮಡಿಕೇರಿ ಜ.16 NEWS DESK : ಕೊಡಗು ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಯಡಿ 2025-26ನೇ ಸಾಲಿಗೂ ಮುಂದುವರೆಸಲು ಅರ್ಹ ಸದಸ್ಯರ ನೋಂದಣಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯಡಿ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ನೊಂದಣಿಗೆ ಮಾ.31 ರವರೆಗೆ ಅವಕಾಶವಿದೆ ಎಂದು ಸಹಕಾರ ಸಂಘಗಳ ಉಪ ನಿಬಂಧಕರಾದ ಹೆಚ್.ಡಿ.ರವಿಕುಮಾರ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿರುವ ಯಾವುದೇ ಸಹಕಾರ ಸಂಘಗಳು, ಸಹಕಾರ ಬ್ಯಾಂಕ್‍ಗಳು ಮತ್ತು ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಅದರಂತೆ ಈ ಯಶಸ್ವಿನಿ ಯೋಜನೆಯ ವಿಮೆ ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ. ನೋಂದಣಿಗೆ ಲಗತ್ತಿಸಬೇಕಾದ ದಾಖಲೆಗಳು: ಅರ್ಜಿ ನಮೂನೆ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಯೋಜನೆಗೆ ಒಳಪಡುವ ಸದಸ್ಯರ ಪ್ರತಿಯೊಬ್ಬರ ತಲಾ 2 ಭಾವಚಿತ್ರ, ಗ್ರಾಮೀಣ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಠ 04 ಸದಸ್ಯರ ಕುಟುಂಬ ಒಂದಕ್ಕೆ ರೂ. 500 ಗಳ ವಂತಿಕೆ ಹಾಗೂ 4 ಕ್ಕಿಂತ ಹೆಚ್ಚಿನ ಸದಸ್ಯರುಗಳ…

Read More

ಮಡಿಕೇರಿ ಜ.16 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಜನವರಿ, 17 ಮತ್ತು 18 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಉಪಾಧ್ಯಕ್ಷರು ಜ.17 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ವುಡ್ ಸ್ಟಾಕ್ ರೆಸಾರ್ಟ್‍ನಲ್ಲಿ ಕೊಡಗು ಪತ್ರಕರ್ತರ ಸಂಘ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜ.18 ರಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲಾ ಪತ್ರಕರ್ತರ ಸಂಕ್ರಾಂತಿ ಕ್ರಿಕೆಟ್ ಸಂಭ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.16 NEWS DESK : ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅನುಮಾನಾಸ್ಪದವಾದ ಯಾವುದೇ ಲಿಂಕ್‍ಗಳು ತಮ್ಮ ಇ-ಮೇಲ್, ಫೇಸ್ ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಲ್ಲಿ ಅದನ್ನು ತೆರೆಯುವ ಪ್ರಯತ್ನ ಮಾಡಬೇಡಿ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಮನವಿ ಮಾಡಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರನ್ನು ವಂಚಿಸುವ, ಕೆಟ್ಟ ಸಂದೇಶಗಳನ್ನು ಪಸರಿಸುವ ‘ಸೈಬರ್ ಕ್ರೈಂ’ಗಳ ಕುರಿತು ಜನಸಾಮಾನ್ಯರು ಜಾಗೃತರಾಗಬೇಕು ಎಂದರು. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಅಶ್ಲೀಲ ಸಂದೇಶವನ್ನು ಹರಡಿರುವ ಬಗ್ಗೆ ಇದೇ ಜ.13 ರಂದು ಸೈಬರ್ ಕ್ರೈಂ ವಿಭಾಗದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಮಾಹಿತಿಗಳನ್ನು ಕಲೆ ಹಾಕಿ, ಪರಿಶೀಲಿಸುವ ಕಾರ್ಯ ನಡೆದಿರುವುದಾಗಿ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಸಾಮಾಜಿಕ ಜಾಲತಾಣದ ವಿವಿಧ ಮಾಧ್ಯಮಗಳ ಮೂಲಕ ವಂಚನೆಯ ಸಂಚನ್ನು ದುಷ್ಕರ್ಮಿಗಳು ರೂಪಿಸಿ, ಜನ…

Read More