ಮಡಿಕೇರಿ ಮಾ.13 NEWS DESK : ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ ಗ್ರಾ.ಪಂ ವತಿಯಿಂದ ಗ್ರಾ.ಪಂ ವ್ಯಾಪ್ತಿಯ 11 ಅಂಗನವಾಡಿಗಳಿಗೆ ಕುರ್ಚಿಗಳನ್ನು ವಿತರಿಸಿ ಮಾತನಾಡಿದ ಅವರು ಅಂಗನವಾಡಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ. ಗ್ರಾ.ಪಂ ಅನುದಾನದಲ್ಲಿ 11 ಅಂಗನವಾಡಿಗಳ ಮಕ್ಕಳಿಗೆ ತಲಾ 14 ಕುರ್ಚಿಗಳನ್ನು ವಿತರಿಸಲಾಗುತ್ತಿದೆ. ಪೋಷಕರು ಹಾಗೂ ಅಂಗನವಾಡಿ ಕಾರ್ಯಕರ್ತರು ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಟಾಟು ಮೊಣ್ಣಪ್ಪ ಕರೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಸದಪ್ಪ ಮಟಲ್ಕೋಡ್, ಉಪಾಧ್ಯಕ್ಷರಾದ ಪಿ.ಎಸ್.ಶಾಂತ, ಸದಸ್ಯರುಗಳಾದ ಹೆಚ್.ಆರ್.ಸುಶೀಲ, ಪಿ.ಕೆ.ಸರಸ್ವತಿ, ಕೆ.ಕೆ.ಸುಮಿತ್ರ ರವಿ, ಎಂ.ಪಿ.ವೀಣಾ, ಸಿ.ಕೆ.ಪೂವಯ್ಯ, ಕೆ.ಕೆ.ಶಬರೀಶ್, ಪಿ.ಮುತ್ತಮ್ಮ, ಸಿಬ್ಬಂದಿಗಳಾದ ಆಶಾ ಸೂದನ್, ಸಚಿತಾ,…
ಲೇಖಕ: admin
ಕುಶಾಲನಗರ ಮಾ.13 NEWS DESK : ಮುಳ್ಳುಸೋಗೆಯಲ್ಲಿರುವ ಮೂರು ಗ್ರಾಮಗಳ ಗ್ರಾಮದೇವತೆ ದೊಡ್ಡಮ್ಮ ದೇವತಾ ಪ್ರತಿಷ್ಠಾಪನೆಯ 12ನೇ ವಾರ್ಷಿಕೋತ್ಸವದ ಅಂಗವಾಗಿ ಕುಂಭಾಭಿಷೇಕ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿತು. ಎರಡು ದಿನಗಳ ಕಾಲ ನಡೆದ ದೇವತಾ ಪೂಜೋತ್ಸವದಲ್ಲಿ ಮುಂಜಾನೆ ಗಣಪತಿ ಹೋಮ, ನವಗ್ರಹ ಹೋಮ, ಕಳಸಾಭಿಷೇಕ, ಮಹಾಪೂಜೆ, ಸಂಜೆ ವಾಸ್ತು ಹೋಮ, ರಾಕ್ಷೋಘ್ನ ಹೋಮ, ದಿಗ್ಬಲಿ ನೆರವೇರಿತು. ಮರುದಿನ ಬೆಳಗ್ಗೆ ಕಾವೇರಿ ನದಿಯಿಂದ ಕಳಶ ತರಲಾಯಿತು. ಬಳಿಕ ಗಣಪತಿ ಹೋಮ, ದುರ್ಗಾ ಹೋಮ, ಪ್ರತಿಷ್ಠಾ ಕಳಸಾಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನೆರವೇರಿತು. ದೈವಜ್ಞ ಜಗದೀಶ್ ಉಡುಪ, ಸುಂಟಿಕೊಪ್ಪದ ಗಣೇಶ ಭಟ್, ಕೌಶಿಕ್ ಅವರಿಂದ ವಿವಿಧ ಹೋಮ ಹವನಾದಿಗಳು ನಡೆದವು. ದೇವಾಲಯ ಸಮಿತಿ ಅಧ್ಯಕ್ಷ ಎಂ.ಎ.ಕುಮಾರಸ್ವಾಮಿ, ಉಪಾಧ್ಯಕ್ಷ ಧನರಾಜ್, ಕಾರ್ಯದರ್ಶಿ ಎಂ.ಹೆಚ್.ಅಣ್ಣೇಗೌಡ, ಸಹಕಾರ್ಯದರ್ಶಿ ಎಂ.ಮಂಜುನಾಥ್, ಖಜಾಂಚಿ ಸೋಮು, ನಿರ್ದೇಶಕರಾದ ಎಂ.ಕೆ.ಗಣೇಶ್, ಎಂ.ಆರ್.ನಂಜುಂಡ, ಗೋವಿಂದರಾಜು, ಡಿ.ಅಪ್ಪಣ್ಣ, ಎಂ.ಸಿ.ಮಂಜುನಾಥ್, ಪುಟ್ಟರಾಜು, ಜಯರಾಜ್, ವಿಶ್ವನಾಥ್, ಗಣಪತಿ, ಸೋಮು, ಎಂ.ಸಂತೋಷ್ ಇದ್ದರು. ಮುಳ್ಳುಸೋಗೆ, ಗುಮ್ಮನಕೊಲ್ಲಿ…
ಪುತ್ತೂರು ಮಾ.13 NEWS DESK : ರಕ್ತಕ್ಕೆ ಪರ್ಯಾಯವಿಲ್ಲ, ಯಾವ ಸಂದರ್ಭದಲ್ಲಿಯೂ ಮನುಷ್ಯನಿಗೆ ರಕ್ತದ ಆವಶ್ಯಕತೆ ಉಂಟಾಗಬಹುದು ಹಾಗಾಗಿ ರಕ್ತದಾನವು ನಾವು ಇತರರಿಗೆ ನೀಡಬಹುದಾದ ಅಮೂಲ್ಯ ಹಾಗೂ ಜೀವ ಉಳಿಸುವ ಕೊಡುಗೆಯಾಗಿದೆ ಎಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ.ಸೀತಾರಮ ಭಟ್.ಕೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್ಕ್ರಾಸ್ ಮತ್ತು ಎನ್ಎಸ್ಎಸ್ ಘಟಕ ಹಾಗೂ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ರಕ್ತದಾನದ ನಂತರ ಅವಶ್ಯಕತೆಯುಳ್ಳ ರೋಗಿಗೆ ಅದನ್ನು ನೀಡುವ ಮೊದಲು ಯಾವೆಲ್ಲಾ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಮತ್ತು ರಕ್ತದಾನದ ಪರಿಣಾಮಗಳ ಬಗ್ಗೆ ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಮಾತನಾಡಿ, ಸಾಮಾಜದ ಆವಶ್ಯಕತೆಗನುಗುಣವಾಗಿ ವಿವಿಧ ಸಂಘ ಸಂಸ್ಥೆಗಳ ಜತೆ ಸೇರಿ ಕಾಲೇಜಿನಲ್ಲಿ ಪ್ರತಿವರ್ಷವೂ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುತ್ತದೆ, ವಿದ್ಯಾರ್ಥಿಗಳು…
ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕಾಂಗ್ರೆಸ್ ಭವನ ( ಕಾಂಗ್ರೆಸ್ ಪಕ್ಷದ ಸುಸಜ್ಜಿತವಾದ ನೂತನ ಕಚೇರಿ) ನಿರ್ಮಿಸುವ ನಿಟ್ಟಿನಲ್ಲಿ ಕೊಡಗು ಕಾಂಗ್ರೆಸ್ ನಿಯೋಗವು ಬೆಂಗಳೂರಿನಲ್ಲಿ ಸಭೆ ನಡೆಸಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಸ್.ಚಂದ್ರಮೌಳಿ, ಕುಡ ಸಮಿತಿ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಹಾಗೂ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.
ಕುಶಾಲನಗರ ಮಾ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಸೌಂದರ್ಯವರ್ಧಕ ತರಬೇತಿ ಶಿಬಿರ ನಡೆಯಿತು. ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ವ್ಯಾಪ್ತಿಯ ಕಂಪ್ಲಾಪುರದಲ್ಲಿ ನಡೆದ ಎರಡು ತಿಂಗಳ ಅವಧಿಯ ತರಬೇತಿ ಶಿಬಿರದಲ್ಲಿ 12 ಮಂದಿ ಮಹಿಳೆಯರು ಪಾಲ್ಗೊಂಡಿದ್ದರು. ಪತ್ರಕರ್ತೆ ಹಾಗೂ ಸೌಂದರ್ಯ ತಜ್ಞರಾದ ವನಿತಾ ಚಂದ್ರಮೋಹನ್ ಅವರು ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು. ಕೇಶ ವಿನ್ಯಾಸ, ಚರ್ಮದ ಸುರಕ್ಷತೆ, ಫೇಶಿಯಲ್, ಹೇರ್ ಸ್ಟೈಲ್ ಆಯಿಲ್ ಮಸಾಜ್, ವ್ಯಾಕ್ಸಿಂಗ್, ಐ ಬ್ರೋ ಸೇರಿದಂತೆ ವ್ಯಕ್ತಿತ್ವ ವಿಕಸನ ಮತ್ತಿತರ ವಿಷಯಗಳ ಬಗ್ಗೆ ವಿಶೇಷ ತರಗತಿಗಳ ಮೂಲಕ ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತರಬೇತಿ ಕಾರ್ಯಕ್ರಮದ ಪ್ರಯೋಜನಗಳನ್ನು ಹಾಗೂ ಹೆಚ್ಚಿನ ಜ್ಞಾನ ಪಡೆಯುವ ಮೂಲಕ ಪ್ರತಿಯೊಬ್ಬರೂ ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವಂತೆ ಶುಭ ಹಾರೈಸಿದರು.
ನಾಪೋಕ್ಲು ಮಾ.13 NEWS DESK : ಮಹಿಳೆ ತ್ಯಾಗಮೂರ್ತಿ, ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿಯ ಪ್ರತಿರೂಪವಾಗಿದ್ದಾಳೆ ಎಂದು ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕಿ, ಲೇಖಕಿ ಡಾ.ಕಾವೇರಿ ಪ್ರಕಾಶ್ ಹೇಳಿದರು. ಮಹಿಳಾ ಸಮಾಜ ಮತ್ತು ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲು ಮಹಿಳಾ ಸಮಾಜದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗಿನ ಹೆಣ್ಣು ಮಕ್ಕಳು ವ್ಯವಸ್ಥಿತವಾದ ಬದುಕನ್ನು ಕಟ್ಟಿಕೊಳ್ಳಬಲ್ಲಳು. ಇಲ್ಲಿನ ಹೆಣ್ಣು ಮಕ್ಕಳು ದಿಟ್ಟತನ ಹೊಂದಿದವರು. ಇತರರಿಗೆ ಬದುಕು ಕಟ್ಟಿಕೊಡುವ ಹೆಣ್ಣು ನಗಳು ಇತರರಿಗೆ ಕಲೆಯನ್ನು ಹೇಳಿಕೊಡುವ ಮೂಲಕ ಮಾದರಿಯಾಗಿದ್ದಾಳೆ ಎಂದರು. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ. ಮಹಿಳೆಯರು ಸಮಾಜದಲ್ಲಿ ಉತ್ತಮ ಕೆಲಸಗಳನ್ನು ನಿರ್ವಹಿಸಬೇಕು. ಇದಕ್ಕಾಗಿ ಯಾರ ಹೊಗಳಿಕೆ ಬೇಕಿಲ್ಲ. ಕ್ಷಣಿಕ ಜೀವನದಲ್ಲಿ ಒಂದಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಬೇಕು ಎಂದರು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕಷ್ಟಪಟ್ಟು ತಮ್ಮ ಅಸ್ಮಿತೆಯನ್ನು ಗಳಿಸಿಕೊಳ್ಳಬೇಕು. ನಮ್ಮ ಪ್ರತಿಭೆಯನ್ನು ನಾವು ಕಾಪಾಡಿಕೊಳ್ಳಬೇಕು ಎಂದ ಅವರು ಯಾವುದೇ…
ನಾಪೋಕ್ಲು ಮಾ.13 NEWS DESK : ಕೊಡಗು ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಹಾಗೂ ಪಶು ಪಾಲನಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಾ.14 ರಂದು ಬೇತು ಗ್ರಾಮದಲ್ಲಿ ಉಚಿತ ಪಶು ಚಿಕಿತ್ಸಾ ಶಿಬಿರ ನಡೆಯಲಿದೆ. ಬೆಳಿಗ್ಗೆ 9.30 ರಿಂದ 11.30 ಗಂಟೆವರೆಗೆ ಸಾಕು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕೆ ಹಾಕಲಾಗುವುದು. ಕಾರ್ಯಕ್ರಮದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವೆಯ ಉಪ ನಿರ್ದೇಶಕರಾದ ಲಿಂಗರಾಜ್ ದೊಡ್ಡಮನಿ, ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಕೆ.ಪ್ರಸನ್ನ ಭಾಗಿಯಾಗಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮಾ.13 NEWS DESK : ಕಳೆದ 9 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಿದ್ದಾಪುರ ಗ್ರಾಮ ಪಂಚಾಯ್ತಿಯ ಮೈಸೂರು ರಸ್ತೆ ಹಾಗೂ ಕಾಲೋನಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನ ಸುಮಾರು 5 ಲಕ್ಷ ದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ಕೈಗೊಂಡಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಅನುದಾನ ಒದಗಿಸಿದ ಶಾಸಕರು ಹಾಗೂ ಸಹಕರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ, ಜಿಲ್ಲಾ ಅಲ್ಪ ಸಂಖ್ಯಾತ ಅಧ್ಯಕ್ಷ ಹನೀಫ್, ಬ್ಲಾಕ್ ಅಲ್ಪಸಂಖ್ಯಾತ ಅಧ್ಯಕ್ಷ ಕೋಲುಮಂಡ ರಫೀಕ್ ಅವರಿಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದ್ದಾರೆ.
ಮಡಿಕೇರಿ ಮಾ.13 NEWS DESK : ಗ್ಲಾಕೋಮವನ್ನು ಸದ್ದಿಲ್ಲದೇ ದೃಷ್ಟಿ ಕದ್ದೊಯ್ಯುವ ಕಳ್ಳ ಎಂದು ಕರೆಯ ಬಹುದು. ಗ್ಲಾಕೋಮಾ ಕಣ್ಣಿಗೆ ಸಂಬಂಧ ಪಟ್ಟ ಆತಂಕಕಾರಿ ಕಾಯಿಲೆಯ ಸ್ಥಿತಿಗಳಲ್ಲೊಂದು. ಇದರಿಂದ ಕಣ್ಣಿನ ದೃಷ್ಟಿ ಹೋಗುತ್ತದೆ. ಸಾಧಾರಣವಾಗಿ 40 ವರ್ಷಗಳಿಗಿಂತಲೂ ಹೆಚ್ಚಿನ ವಯಸ್ಸಿನವರಿಗೆ, ಅದರಲ್ಲೂ ಅನುವಂಶಿಕವಾಗಿ ಗ್ಲಾಕೋಮಾ ರೋಗವು ಹರಡುವುದು ಕಂಡು ಬರುತ್ತದೆ. ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಟಿ ಕದಿಯುವ ಕಾಯಿಲೆ ಗ್ಲಾಕೋಮಾ ರೋಗ ಲಕ್ಷಣಗಳು: ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಠಿ ಕದಿಯುವ ಕಾಯಿಲೆ ಗ್ಲಾಕೋಮಾ, 40 ವಯಸ್ಸಿನ ನಂತರ ಪ್ರತೀಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ಒತ್ತಡ ಪರೀಕ್ಷಿಸಿಕೊಳ್ಳಿ, ಬೆಳಕಿನ ಸುತ್ತ ಕಾಮನ ಬಿಲ್ಲಿನಂತಹ ವೃತ್ತಗಳನ್ನು ಕಾಣುವುದು. ತಲೆನೋವು ಹಾಗೂ ಕಣ್ಣು ನೋವು. ಅಸ್ಪಷ್ಟ ದೃಷ್ಟಿ ಹಾಗೂ ನೋಟದ ವಲಯಕುಗ್ಗುತಾ ಹೋಗುವುದು. ಪದೇ ಪದೇ ಕನ್ನಡಕ ಬದಲಾಯಿಸಬೇಕಾಗಿ ಬರುವುದು. ಮೇಲಿನ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ತಮ್ಮ ಸಮೀಪದ ನೇತ್ರ ತಜ್ಞರನ್ನು ಕೂಡಲೆ ಸಂಪರ್ಕಸಿ, ಗ್ಲಾಕೋಮ ಇದೆ ಅಥಾವ ಇಲ್ಲವೇ ಎಂದು ಪರೀಕ್ಷಿಸಿ ದೃಢಪಡಿಸಿಕೊಳ್ಳಿ ಗ್ಲಾಕೋಮಾವನ್ನು…
ಮಡಿಕೇರಿ ಮಾ.13 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಮಾರ್ಚ್ 25 ರಂದು ನೇರ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.…






