ಲೇಖಕ: admin

ಮಡಿಕೇರಿ ಮಾ.13 NEWS DESK : ವೀರಶೈವ ಪರಂಪರೆಯನ್ನು ಪಸರಿಸುವಲ್ಲಿ ಶ್ರೀ ರೇಣುಕಾಚಾರ್ಯರ ಪಾತ್ರ ಮಹತ್ತರವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಂದು ಶ್ರೀ ನಗರದ ಗಾಂಧಿ ಭವನದಲ್ಲಿ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರದ ಸನಾತನ ಸಂಸ್ಕೃತಿಯಲ್ಲಿ ದ್ವೈತ, ಅದ್ವೈತ, ವಿಶಿಷ್ಟ ಅದ್ವೈತ ಎಂಬ ಸಿದ್ಧಾಂತಗಳು ಪ್ರಚಲಿತದಲ್ಲಿದ್ದು, ಇತಿಹಾಸದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದೆ. ಜಾತಿ, ಮತ, ಭಾಷೆ, ಪ್ರದೇಶ ಎಂಬ ಸಂಕುಚಿತ ಸಂಕೋಲೆಗಳನ್ನು ಮೀರಿ ಮಾನವ ಧರ್ಮದ ಉನ್ನತಿಗೆ ರೇಣುಕಾಚಾರ್ಯರು ಶ್ರಮಿಸಿದ್ದಾರೆ ಎಂದು ಪ್ರತಿಪಾದಿಸಿದರು. ಯಾವುದೇ ಜಾತಿ ಜನಾಂಗದಲ್ಲಿ ಹುಟ್ಟಿದ ವ್ಯಕ್ತಿ ತನ್ನ ಸತ್ಯ, ಶುದ್ಧ ಆಚರಣೆಯಿಂದ ಸದ್ಗುರುವಿಗೆ ಶರಣಾತಿ ಗುರು ನೀಡಿದ ಬೋಧಾಮೃತವನ್ನು ಅಳವಡಿಸಿಕೊಂಡು ಜೀವನದಲ್ಲಿ ಉನ್ನತ್ತಕ್ಕೆ ಏರಲು ಸಾಧ್ಯ ಎಂದು ರೇಣುಕಾಚಾರ್ಯರು ತಿಳಿಸಿದ್ದಾರೆ ಎಂದರು. ಆಧುನಿಕತೆ, ವಿಜ್ಞಾನ, ಪರಿವರ್ತನೆ ಯುಗದಲ್ಲಿ ಸಾಕಷ್ಟು ಬದಲಾವಣೆ ಮತ್ತು ಸುಧಾರಣೆಗಳಾಗುತ್ತಿದ್ದು, ಮನುಷ್ಯನ ಆತ್ಮ ಜ್ಞಾನವನ್ನು ಹೆಚ್ಚಿಸುವುದಕ್ಕೆ…

Read More

ಮಡಿಕೇರಿ ಮಾ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಸ್ಥಳನಾಮಗಳ ಅಧ್ಯಯನ ಹಾಗೂ ಮಾಹಿತಿ ಸಂಗ್ರಹ ಕಾರ್ಯಕ್ಕೆ ಮುಂದಾಗಿದೆ. ಆರಂಭದಲ್ಲಿ ಪ್ರಾಯೋಗಿಕವಾಗಿ ಸುಳ್ಯ ತಾಲೂಕನ್ನು ಆಯ್ದುಕೊಳ್ಳಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರೂ ಸ್ಮಾರಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಕಾರದಲ್ಲಿ ನಡೆದ ಸ್ಥಳನಾಮ ಅಧ್ಯಯನ ಮತ್ತು ಮಾಹಿತಿ ಸಂಗ್ರಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಂದು ಸ್ಥಳದ ಹೆಸರಿಗೂ ಒಂದೊಂದು ಕಾರಣ, ಭೌಗೋಳಿಕ ಹಾಗೂ ಐತಿಹಾಸಿಕ ಹಿನ್ನೆಲೆ ಇದೆ. ಆ ದಿಸೆಯಲ್ಲಿ ಕಾಲ ಕ್ರಮೇಣದಲ್ಲಿ ಬರಬರುತ್ತಾ ಬಾಯಿಂದ ಬಾಯಿಗೆ ಮಾತನಾಡುವ ಸಂದರ್ಭದಲ್ಲಿ ಆಯಾಯ ಕಾಲಕ್ಕೆ ತಕ್ಕಂತೆ ಊರಿನ ಹೆಸರು ಬದಲಾಗುತ್ತಾ ಹೋದದ್ದೂ ಇದ್ದು, ಹಳೇ ಹೆಸರನ್ನು ಉಳಿಸಿಕೊಳ್ಳುವುದು ಅತ್ಯಗತ್ಯ ಎಂದು ಸದಾನಂದ ಮಾವಜಿ ನುಡಿದರು. ಆಧುನಿಕ ಯುಗದಲ್ಲಿ ಮೂಲ ಹೆಸರನ್ನು ಬದಲಿಸಿ…

Read More

ಮಡಿಕೇರಿ NEWS DESK ಮಾ.12 : ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ಶ್ರೀ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ಗೆ ಒಳಪಟ್ಟ ಬಿಜಿಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಬಿ.ಕೆ.ಸಿಂಚನ, ಯೋಗಾಸನದ ಮೂರು ಪ್ರಕಾರಗಳಲ್ಲಿ ವಿಶಿಷ್ಟ ಸಾಧನೆಯೊಂದಿಗೆ ಗೋಲ್ಡ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ತನ್ನ ಹೆಸರನ್ನು ದಾಖಲಿಸಿ ಅಪೂರ್ವ ಸಾಧನೆಗೈದಿದ್ದಾಳೆ. ಮಧ್ಯಪ್ರದೇಶದ ಇಂದೋರ್‌ನ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಏಷಿಯಾ ವಿಭಾಗದ ಮುಖ್ಯಸ್ಥರು ಹಾಗೂ ತೀರ್ಪುಗಾರರಾಗಿ ಪಾಲ್ಗೊಂಡಿದ್ದ ಡಾ.ಮನೀಶ್ ಬಿಷ್ಣೋಯ್ ಅವರ ಸಮ್ಮುಖದಲ್ಲಿ ಶಾಲೆಯ ಆವರಣದಲ್ಲಿ ಸಿಂಚನ ಯೋಗಾಸನಗಳನ್ನು ಪ್ರದರ್ಶಿಸಿ ವಿಶ್ವ ದಾಖಲೆ ಬರೆದರು. ಈ ಸಂದರ್ಭ ಡಾ.ಮನೀಶ್ ಬಿಷ್ಣೋಯ್ ಅವರು, ‘ಡಿಂಪಾಸನ’ದಲ್ಲಿ 14 ಮೀಟರ್‌ನ್ನು ಕ್ರಮಿಸುವ ಮೂಲಕ ಸಿಂಚನ ತನ್ನ ಹೆಸರಿನಲ್ಲೇ ಇದ್ದ 10 ಮೀಟರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ಮಾಡಿದ್ದಾಳೆ. ‘ಉರಭ್ರಾಸನ’ದಲ್ಲಿ 1.04 ನಿಮಿಷ ಏಕಸ್ಥಿತಿಯಲ್ಲಿ ಇರುವ ಮೂಲಕ ಹಾಗೂ ‘ಮೃಗ ಮುಖಾಸನ’ದಲ್ಲಿ 1.45 ನಿಮಿಷ ಏಕಸ್ಥಿತಿಯಲ್ಲಿ ಇರುವ ಮೂಲಕ ಈಕೆ ವಿಶ್ವದಾಖಲೆಯ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿರುವುದಾಗಿ…

Read More

ಸುಂಟಿಕೊಪ್ಪ NEWS DESK ಮಾ.12 : ಕಾರೊಂದು ಡಿಕ್ಕಿಯಾದ ಪರಿಣಾಮ ಇಬ್ಬರು ವ್ಯಕ್ತಿಗಳು ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ 7ನೇ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದಿದೆ. ಹೆದ್ದಾರಿ ಬದಿಯಲ್ಲಿ ನಿಂತಿದ್ದ ನಿಜಾಮುದ್ದೀನ್ ಹಾಗೂ ಹರ್ಬಜ್ ಅವರಿಗೆ ಕಾರು ಡಿಕ್ಕಿಯಾಗಿದೆ. ಇದರ ಪರಿಣಾಮ ನಿಜಾಮುದ್ದೀನ್ ಅವರ ಕಾಲು ಮುರಿತಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಸುಂಟಿಕೊಪ್ಪ NEWS DESK ಮಾ.12 : ಕೆದಕಲ್ ಗ್ರಾಮದ ಶ್ರೀಭದ್ರಕಾಳೇಶ್ವರಿ ದೇವಾಲಯದ 25ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ದೇವಾಲಯದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಅವರ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಯಿತು. ಕುಂಭಾಭಿಷೇಕ, ಕಳಶ ಪೂಜೆ, ಹೂವಿನ ಪೂಜೆ, ಕುಂಕುಮಾರ್ಚನೆ ನಡೆಯಿತು. ವಿಶೇಷ ಪೂಜೆ, ಆರಾಧನೆ, ಮಹಾಪೂಜೆ, ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗವಾಯಿತು. ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಏರ್ಪಾಡಿಸಲಾಗಿತ್ತು. ದೇವಾಲಯ ಸಮಿತಿಯ ಅಧ್ಯಕ್ಷ ಸಿ.ಎ.ಕರುಂಬಯ್ಯ, ಕಾರ್ಯದರ್ಶಿ ಕೆ.ಎಂ.ಸತೀಶ್, ತಕ್ಕ ಮುಖ್ಯಸ್ಥ ಪುಲ್ಲೇರ ತಿಮ್ಮಯ್ಯ, ಪುಲ್ಲೇರ, ಕಾಳಪ್ಪ, ಪಿ.ಬಿ.ವಸಂತ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು. ಕೆದಕಲ್, ಬೋಯಿಕೇರಿ, ಹಾಲೇರಿ, ಕಾಂಡನಕೊಲ್ಲಿ, ಸುಂಟಿಕೊಪ್ಪ, ಬಾಳೆಕಾಡು, ಮಡಿಕೇರಿ, ಹೊರೂರು ಸೇರಿದಂತೆ ಹೊರ ಜಿಲ್ಲೆಗಳ ನೂರಾರು ಭಕ್ತರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಮಾ.12 NEWS DESK : ಜಿಲ್ಲೆಯ ಪ್ರವಾಸಿ ಸ್ಥಳ, ಹೋಂಸ್ಟೇ ಹಾಗೂ ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇದುವರೆಗೆ ನೋಂದಣಿ ಆಗದಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ನಿರ್ವಹಿಸುವ ಕುರಿತು ಜಿಲ್ಲೆಯ ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಟ್ರಾವೆಲ್ಸ್ ಏಜೆನ್ಸಿ ಸಂಸ್ಥೆಯ ಪ್ರತಿನಿಧಿಗಳ ಜತೆ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸ್ತುತ ಹೋಂ-ಸ್ಟೇ ನೋಂದಣಿ ಪ್ರಕ್ರಿಯೆಯು ಅತ್ಯಂತ ಸರಳೀಕರಣವಾಗಿದ್ದು, ಕಡಿಮೆ ಅವಧಿಯಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡಲಾಗುತ್ತದೆ. ಆ ದಿಸೆಯಲ್ಲಿ ಪ್ರವಾಸೋದ್ಯಮ ಇಲಾಖೆಯಲ್ಲಿ ಜಿಲ್ಲೆಯ ಎಲ್ಲಾ ಹೋಂ-ಸ್ಟೇಗಳು ಕಡ್ಡಾಯವಾಗಿ ಹೆಸರು ನೋಂದಾಯಿಸುವಂತೆ ಜಿಲ್ಲಾಧಿಕಾರಿ ಕೋರಿದರು. ಪ್ರವಾಸಿ ಸ್ಥಳಗಳಲ್ಲಿ, ಹೋಂಸ್ಟೇ, ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಸಿಸಿಟಿವಿ ಅಳವಡಿಸುವುದು, ಹೋಂಗಾರ್ಡ್‍ಗಳ ನಿಯೋಜನೆ, ರಾತ್ರಿ…

Read More

ಪೊನ್ನಂಪೇಟೆ ಮಾ.12 NEWS DESK : ಪಠ್ಯೇತರ ಚಟುವಟಿಕೆಗಳ ಭಾಗವಾಗಿ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಎಂ.ಕಾಂ. ವಿಭಾಗದ ವಿದ್ಯಾರ್ಥಿಗಳು ವಿರಾಜಪೇಟೆ ಸಮೀಪದ ಹೆಗ್ಗಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದರು. ಸಂತ ಅನ್ನಮ್ಮ ಪದವಿ ಕಾಲೇಜಿನ ಎಂ.ಕಾಂ.ವಿಭಾಗದ ಉಪನ್ಯಾಸಕರೊಂದಿಗೆ ಶಾಲೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಪ್ರಾಥಮಿಕ ಹಂತದ ವಿದ್ಯಾರ್ಥಿಗಳೊಂದಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಇದಕ್ಕೂ ಮೊದಲು ನಡೆದ ಸಭಾ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲ್ತೋಡು ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿ ವೆಂಕಟೇಶ್  ಉದ್ಘಾಟಿಸಿದರು. ಎಂ.ಕಾಂ. ವಿದ್ಯಾರ್ಥಿಗಳ ಭೇಟಿಯ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಆಟೋಟಗಳ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಲ್ಲದೆ, ಶಾಲೆಯ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಫಿಲ್ಟರ್, ನೋಟ್ ಬುಕ್, ಜಾಮಿಟ್ರಿ ಬಾಕ್ಸ್, ತಟ್ಟೆ ಮತ್ತು ಲೋಟಗಳನ್ನು ಸೇರಿದಂತೆ ಕಲಿಕಾ ಸಾಮಾಗ್ರಿಗಳನ್ನು ಇದೇ ಸಂದರ್ಭದಲ್ಲಿ ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂತ ಅನ್ನಮ್ಮ ಕಾಲೇಜಿನ ಉಪನ್ಯಾಸಕ ಪೂಜ, ದೃಶ್ಯ ಅವರನ್ನು ಶಾಲೆಯ ಪರವಾಗಿ…

Read More

ಮಡಿಕೇರಿ NEWS DESK ಮಾ.12 : ಕೊಡಗು ಜಿಲ್ಲೆಯಲ್ಲೇ ಮಾದರಿ ರಾಮೋತ್ಸವವನ್ನು ಆಚರಿಸಲು ಮಡಿಕೇರಿಯ ಶ್ರೀ ಕೋದಂಡ ರಾಮೋತ್ಸವ ಸಮಿತಿ ತಯಾರಿ ನಡೆಸಿದೆ. ಏ.5 ಮತ್ತು 6ರಂದು ಅದ್ಧೂರಿಯಾಗಿ ರಾಮೋತ್ಸವ ನಡೆಯಲಿದ್ದು, ಮೆರವಣಿಗೆ ಸಮಿತಿಯ ಅಧ್ಯಕ್ಷರಾಗಿ ಪರಮೇಶ್, ಮಲ್ಲಿಕಾರ್ಜುನ ನಗರ ಆಯ್ಕೆಯಾಗಿದ್ದಾರೆ.  ಉಪಾಧ್ಯಕ್ಷರಾಗಿ ಪ್ರಜ್ಞ ಜಿ.ಆರ್, ಪ್ರಶಾಂತ್, ಅಭಿಷೇಕ್, ಪ್ರಧಾನ ಕಾರ್ಯದರ್ಶಿಯಾಗಿ ಗೋಪಿನಾಥ್, ಕಾರ್ಯದರ್ಶಿಯಾಗಿ ಚಂದ್ರಶೇಖರ್, ಖಜಾಂಚಿಯಾಗಿ ಕುಶಾಲ್, ಗೌರವಾಧ್ಯಕ್ಷರಾಗಿ ಅರುಣ್ ಶೆಟ್ಟಿ, ಜಯಂತಿ ಆರ್.ಶೆಟ್ಟಿ, ಮಿಥುನ್ ಶೆಟ್ಟಿ, ಸಹ ಕಾರ್ಯದರ್ಶಿಗಳಾಗಿ ಮದನ್, ಗಣೇಶ್, ಶರತ್, ಸಂಪತ್, ಸಂಚಾಲಕರಾಗಿ ಕುಮಾರ್ ಮೇಕೇರಿ, ಸಂಘಟನಾ ಕಾರ್ಯದರ್ಶಿ ಚರಣ್, ಸದಸ್ಯರಾಗಿ ಸತೀಶ್, ಸುರೇಶ್ ಟಿ.ಆರ್, ಧನಂಜಯ ಆಚಾರ್ಯ, ಬಾಲಕೃಷ್ಣ, ಕಿಶೋರ್, ರವಿಕಿರಣ್, ಧ್ರುವ, ಚಂದ್ರು, ಅಭಿಷೇಕ್, ಸಲಹೆಗಾರರಾಗಿ ಟ್ರಸ್ಟ್ ನ ಅಧ್ಯಕ್ಷ ಹೆಚ್.ಎನ್.ನಂಜುಂಡ, ತಿಮ್ಮಯ್ಯ, ಜಿ.ರಾಜೇಂದ್ರ, ಹೆಚ್.ಮಂಜುನಾಥ್ ಕಾರ್ಯನಿರ್ವಹಿಸಲಿದ್ದಾರೆ.

Read More

ಮಡಿಕೇರಿ ಮಾ.12 NEWS DESK : ಗೋಣಿಕೊಪ್ಪ-ಪೊನ್ನಂಪೇಟೆ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಅರುವತ್ತೊಕ್ಲು ಕಾಡ್ಲ್ ಅಯ್ಯಪ್ಪ ದೇವರ ವಾರ್ಷಿಕ ಉತ್ಸವವು ಮಾ.15 ಮತ್ತು 16 ರಂದು ನಡೆಯಲಿದೆ ಎಂದು  ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಾಡ್ಯಮಾಡ ಪ್ರೀತ್ ತಿಳಿಸಿದ್ದಾರೆ.  ಉತ್ಸವಕ್ಕೆ ಫೆ.26 ರಂದು ಸಂಜೆ ಚಾಲನೆ ದೊರೆತಿದ್ದು, ಮಾ.1 ರಿಂದ ಊರಿನಲ್ಲಿ ದೇವರ ವಿವಿಧ ಕಟ್ಟುಪಾಡುಗಳನ್ನು ಆಚರಿಸಲಾಗುತ್ತಿದೆ. ಮಾ.15 ರಂದು ಸಂಜೆ ತಕ್ಕಮುಖ್ಯಸ್ಥರಾದ ಕಾಡ್ಯಮಾಡ ಐನ್ ಮನೆಯಿಂದ ಭಂಡಾರ ತರುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ವಿವಿಧ ಆಚರಣೆಯೊಂದಿಗೆ 15 ರಂದು ರಾತ್ರಿ ಹಬ್ಬ ನಡೆದು, 16 ರಂದು ಬೆಳಿಗ್ಗೆ 8 ಗಂಟೆಗೆ ಬೆಂಕಿ ಕೊಂಡ ಹಾಯುವ ಕಾರ್ಯಕ್ರಮ ನಡೆಯಲಿದೆ ಎಂದು ತಕ್ಕಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಮತ್ತು ಗಾಳಿಬೀಡು ಗ್ರಾ.ಪಂ ಪಂಚಾಯ್ತಿ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ ಲಘು ಭೂ ಕಂಪನವಾಗಿದ್ದು, ಇದರ ತೀವ್ರತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವಂತೆ 1.6 ಕಂಪನಾಂಕವನ್ನು ಹೊಂದಿತ್ತು. ಇಂದು ಬೆಳಗ್ಗೆ 10.49 ಗಂಟೆಗೆ ಮದೆ ಗ್ರಾಮ ಪಂಚಾಯ್ತಿ ಮತ್ತು ಗಾಳಿಬೀಡು ಗ್ರಾಮ ಪಂಚಾಯ್ತಿಗೆ ಒಳಪಟ್ಟ ಮೊಣ್ಣಂಗೇರಿ ಗ್ರಾಮ ವ್ಯಾಪ್ತಿಯಲ್ಲಿ ಭೂ ಕಂಪನದ ಅನುಭವವಾಗಿದೆ. ಲಘು ಭೂಕಂಪನವಾಗಿರುವುದರಿಂದ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ(ಕೆಎಸ್‍ಎನ್‍ಡಿಎಂಸಿ) ತಿಳಿಸಿದೆ. ಕೆಎಸ್‍ಎನ್‍ಡಿಎಂಸಿ ದಾಖಲಿಸಿರುವ ಭೂ ಕಂಪನದ ಅಂಕಿ ಅಂಶಗಳಂತೆ ಭೂ ಕಂಪನದ ಕೇಂದ್ರವನ್ನು ಮದೆ ಪಂಚಾಯ್ತಿಯ ವಾಯುವ್ಯ ಭಾಗದ 2.4 ಕಿ.ಮೀ. ದೂರ ಮತ್ತು 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಇದರ ಪ್ರಭಾವ ಕೇಂದ್ರ ಸ್ಥಾನದಿಂದ ಗರಿಷ್ಠ 15 ರಿಂದ 20 ಕಿ.ಮೀ. ದೂರದವರೆಗೆ ಮಾತ್ರ ಇತ್ತು. ಮದೆನಾಡು, ಮೊಣ್ಣಂಗೇರಿ,…

Read More