ಮಡಿಕೇರಿ ಮಾ.11 NEWS DESK : ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಎಸ್.ಸಿ, ಎಸ್.ಟಿ ಸಮಿತಿಯ ವತಿಯಿಂದ ನಮ್ಮ ನಡಿಗೆ ಸಮುದಾಯದ ಕಡೆಗೆ ಶೀರ್ಷಿಕೆಯಡಿಯಲ್ಲಿ ತಿತಿಮತಿ ಗ್ರಾಮ ಪಂಚಾಯಿತಿಯ ಮರಪಾಲ ಹಾಡಿಯಲ್ಲಿ ಹಾಡಿ ನಿವಾಸಿಗಳಿಗೆ ವಿಶೇಷ ಉಪನ್ಯಾಸ, ಹಾಡಿ ಭೇಟಿ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಮರಪಾಲ ಅಂಗನವಾಡಿಯಲ್ಲಿ ನಡೆದ ಕಾರ್ಯಕ್ರಮವನ್ನು ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಪಿ.ಸಿ.ರಾಮು ಉದ್ಘಾಟಿಸಿ ಭಿತ್ರಿಪತ್ರವನ್ನು ಬಿಡುಗಡೆ ಮಾಡಿದರು. ಇಂದಿನ ವಿದ್ಯಾರ್ಥಿಗಳಿಗೆ ಹಾಡಿಯ ಅರಿವು ಹಾಗೂ ಹಾಡಿಯ ಜನರಲ್ಲಿ ಜಾಗೃತಿಯನ್ನು ಮೂಡಿಸಲು ಇಂತಹ ಕಾರ್ಯಕ್ರಮ ಅಗತ್ಯ ಎಂದು ಹೇಳಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಆರ್.ರಘುರಾಜ್ ಸಮುದಾಯದ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದರು. ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಹಾಡಿಯಜನರು ಒಳ್ಳೆಯ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂದು ಕಿವಿ ಮಾತನ್ನು…
ಲೇಖಕ: admin
ಮಡಿಕೇರಿ ಮಾ.11 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ವಿಭಾಗೀಯ ಪೀಠ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿತು. ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಅವರ ಕಾನೂನು ಸಹಾಯಕರು ವಿಚಾರಣೆ ಸಂದರ್ಭ ಭಾಗಿಯಾಗಿದ್ದರು. ಸಿಎನ್ಸಿ ಬೇಡಿಕೆಗೆ ಆಕ್ಷೇಪ ಸಲ್ಲಿಸಿದ ಪ್ರತಿವಾದಿಗಳ ಅಹವಾಲನ್ನು ಕೂಡ ಆಲಿಸಿದ ಮುಖ್ಯ ನ್ಯಾಯಾಧೀಶರು ವಿಚಾರಣೆಯ ಮುಂದಿನ ದಿನಾಂಕವನ್ನು 2025 ಜೂ.9ಕ್ಕೆ ನಿಗದಿಪಡಿಸಿದರು. ಸಿಎಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2…
ಮಡಿಕೇರಿ ಮಾ.11 NEWS DESK : ನಾಪೋಕ್ಲು ಠಾಣಾ ಆವರಣದಲ್ಲಿ ಮಡಿಕೇರಿ ಉಪ ವಿಭಾಗದ ಡಿ.ಎಸ್.ಪಿ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಅಪ್ರಾಪ್ತ ಬಾಲಕರ ವಾಹನ ಚಾಲನೆ, ಕುಡಿದು ವಾಹನ ಚಾಲನೆ, ಕಾಫಿ ಖರೀದಿದಾರರಿಗೆ ಸೂಚನೆಗಳು, ಅಕ್ರಮ ಮದ್ಯ ಮಾರಾಟ, ಮಾದಕ ವಸ್ತು ಮಾರಾಟ, ಸೇವನೆ ಬಗ್ಗೆ ಮುಂತಾದ ಅಂಶಗಳ ಬಗ್ಗೆ ಅರಿವು ಮೂಡಿಸಲಾಯಿತು.
ಮಡಿಕೇರಿ ಮಾ.11 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯರಾಗಿದ್ದ ಮುಕ್ಕಾಟಿರ ಶಿವು ಮಾದಪ್ಪಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಶಿವು ಮಾದಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂತಾಪ ಸೂಚಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಶಿವು ಮಾದಪ್ಪ ಅವರ ವ್ಯಕ್ತಿತ್ವವನ್ನು ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರಿಗೆ ಹೋಲಿಕೆ ಮಾಡಿದರು. ದಿವಂಗತ ಗುಂಡು ರಾವ್ ರಂತೆಯೇ ಶಿವು ಮಾದಪ್ಪ ಸ್ನೇಹ ನಡೆ ಹಾಗೂ ವರ್ಣರಂಜಿತ ವ್ಯಕ್ತಿತ್ವ ಮಾತ್ರವಲ್ಲ ಅವರ ಗಂಭೀರ ವ್ಯಕ್ತಿತ್ವ ಎಲ್ಲರಿಗೂ ಅಚ್ಚುಮೆಚ್ಚು ಎಂದು ಬಣ್ಣಿಸಿದರು. ಶಿವು ಮಾದಪ್ಪ ಪಕ್ಷಕ್ಕಾಗಿ ದುಡಿದವರು. ಅವರು ಕೈಗೊಂಡ ಹಲವಾರು ಉತ್ತಮ ನಿರ್ಧಾರಗಳ ಬಗ್ಗೆ ಸ್ಮರಿಸಿದರು. ಡಿಸಿಸಿ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, RGPRS ಸಂಚಾಲಕ…
ಮಡಿಕೇರಿ ಮಾ.11 NEWS DESK : ಮಡಿಕೇರಿ ಟ್ರಾಫಿಕ್ ಪೊಲೀಸ್ ಠಾಣೆ ವತಿಯಿಂದ ಲಾರಿ ಮಾಲೀಕರು ಮತ್ತು ಚಾಲಕರು, ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು, ಜೀಪ್ ಮಾಲೀಕರು ಮತ್ತು ಚಾಲಕರು, ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಸಭೆ ಕರೆದು ರಸ್ತೆ ಸುರಕ್ಷತೆ, ಸುರಕ್ಷಿತ ಚಾಲನೆ, ರಸ್ತೆ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಬೆಂಗಳೂರು NEWS DESK : ದುರ್ಘಟನೆಗಳು ಸಂಭವಿಸಿದರೆ ಹೋಂಸ್ಟೇ ಮಾಲೀಕರೇ ನೇರ ಹೊಣೆ : ಸರ್ಕಾರದ ಹೊಸ ಆದೇಶ
ಪುತ್ತೂರು ಮಾ.11 NEWS DESK : ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಬಿ.ಪ್ರೇಮಾ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಶಿಕ್ಷಣವು ಮಾನವನ ಜೀವನವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಅದರಂತೆಯೇ ಕ್ರೀಡೆಗಳೂ ಸಹ ಯಶಸ್ಸಿನ ದೊಡ್ಡ ಮೂಲವಾಗಿದೆ. ಆದರೆ ಕೇವಲ ಸಂಪತ್ತಿನ ಹಿಂದೆ ಓಡುವ ನಾವು ದೈಹಿಕ ಸಮತೋಲನವೂ ಒಂದು ಸಂಪತ್ತೆಂದು ತಿಳಿದುಕೊಳ್ಳದೇ ಇರುವುದು ವಿಪರ್ಯಾಸ ಎಂದರು. ಶಿಕ್ಷಣದೊಂದಿಗೆ ಕ್ರೀಡೆಗೂ ಸಮಾನ ಮಹತ್ವವನ್ನು ನೀಡುವುದರ ಜತೆಯಲ್ಲಿ ಯುವಜನತೆ ದೇಶದ ಪ್ರಜ್ಞಾವಂತ ನಾಗರಿಕರಾಗುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಮಾತನಾಡಿ ನಿರಂತರ ಪ್ರೋತ್ಸಾಹ, ಉತ್ತಮ ತರಬೇತಿ ಹಾಗೂ ಉನ್ನತ ಸಾಧನೆ ಇದ್ದಾಗ ನಾವು ಖಂಡಿತವಾಗಿಯೂ ಮೇಲ್ಮಟ್ಟಕ್ಕೆ ಏರಬಲ್ಲೆವು…
ಬೆಂಗಳೂರು ಮಾ.11 NEWS DESK : ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು. ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ. ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು. ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ…
ಮಡಿಕೇರಿ ಮಾ.11 NEWS DESK : ಮೂರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಕ್ಕಳ ಸುರಕ್ಷತೆ ಮತ್ತು ಭದ್ರತೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಸಂಚಾರ ಸುರಕ್ಷತೆ ಬಗ್ಗೆ ಬಗ್ಗೆ ಅರಿವು ಮೂಡಿಸಿದರು.
ಮಡಿಕೇರಿ ಮಾ.11 NEWS DESK : ಸುಂಟಿಕೊಪ್ಪ ಬಳಿಯ ಸ್ವಸ್ಥ ಶಾಲೆಗೆ ಸುಂಟಿಕೊಪ್ಪ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ಮಕ್ಕಳ ಸಂಚಾರ ಸುರಕ್ಷತೆ, ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಸೈಬರ್ ಜಾಗೃತಿ, ಮುಂತಾದ ವಿಷಯಗಳ ಕುರಿತು ಅರಿವು ಮೂಡಿಸಿದರು.






