ಮಡಿಕೇರಿ NEWS DESK ಮಾ.11 : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಲುಕುಪ್ಪೆ ಹೆದ್ದಾರಿಯಲ್ಲಿ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆ ನಿವಾಸಿ, ದೇವಾಂಗ ಸಂಘದ ಸಂಚಾಲಕ ಡಿ.ಎನ್.ಶಶಿ (47) ಮೃತ ದುರ್ದೈವಿ. ಅಪಘಾತದ ತೀವ್ರತೆಗೆ ಶಶಿ ಅವರ ತಲೆ ನಜ್ಜುಗುಜ್ಜಾಗಿದೆ. ಬೈಲುಕುಪ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೇಖಕ: admin
ಪೋರ್ಟ್ ಲೂಯಿಸ್ ಮಾ.11 NEWS DESK : ಎರಡು ದಿನಗಳ ಭೇಟಿಗಾಗಿ ಮಾರಿಷಸ್ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾರಿಷಸ್ನಲ್ಲಿರುವ ಭಾರತೀಯ ವಲಸಿಗರು ಆತ್ಮೀಯವಾಗಿ ಸ್ವಾಗತಿಸಿದರು. ಇಂದು ಮಾರಿಷಸ್ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಸಮುದಾಯದ ಮಹಿಳೆಯರು ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿಯೊಂದಿಗೆ ಸ್ವಾಗತಿಸಿದರು. ಈ ವೇಳೆ ಹಾಡುಗಳನ್ನು ಹಾಡುತ್ತಿರುವವರೊಂದಿಗೆ ಪ್ರಧಾನಿ ಮೋದಿ ಚಪ್ಪಾಳೆ ತಟ್ಟುತ್ತಾ ಆನಂದಿಸಿದರು. ಗೀತ್ ಗವಾಯಿ ಎಂಬುದು ಭಾರತದ ಭೋಜ್ಪುರಿ ಪಟ್ಟಿಯ ಮಹಿಳೆಯರು ಮಾರಿಷಸ್ಗೆ ತಂದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಾಕಾರಗೊಳಿಸುವ ಸಾಂಪ್ರದಾಯಿಕ ಭೋಜ್ಪುರಿ ಸಂಗೀತ ಮೇಳವಾಗಿದೆ. “ಮಾರಿಷಸ್ನಲ್ಲಿರುವ ಭಾರತೀಯ ಸಮುದಾಯದಿಂದ ಬಂದ ಆತ್ಮೀಯ ಸ್ವಾಗತದಿಂದ ನಾನು ತುಂಬಾ ಭಾವುಕನಾಗಿದ್ದೇನೆ. ಭಾರತೀಯ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳಿಗೆ ಅವರ ಬಲವಾದ ನಂಟು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು, ಮಾ.11 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ Mo-Jo-Kit ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ…
ಮಡಿಕೇರಿ ಮಾ.11 NEWS DESK : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022-2023 ಮತ್ತು 2024 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಸಕರು/ ಮುದ್ರಕರು/ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ,ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಲಾಸ/ದೂರವಾಣಿ ಸಂಖ್ಯೆ- ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್, 29 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560 002 – ಈ ವಿಲಾಸಕ್ಕೆ ಕಲುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ…
ಮಡಿಕೇರಿ ಮಾ.11 NEWS DESK : ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸಲು ಸಭೆಯು ಮಾ.13 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆಯವರೆಗೆ ಮಡಿಕೇರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್, ಚಾ.ವಿ.ಸ.ನಿ.ನಿ., ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ, ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಮಾ.11 NEWS DESK : 2025-26ನೇ ಸಾಲಿನ ಆಯವ್ಯಯ ಮಂಜೂರಾತಿ ಸಂಬಂಧ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಮಾ.11 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ಹೆಚ್.ಎಲ್.ರಮೇಶ್ ತಿಳಿಸಿದ್ದಾರೆ.
ಮಡಿಕೇರಿ ಮಾ.11 NEWS DESK : ಕೂಡಿಗೆ ಗ್ರಾ.ಪಂ ವ್ಯಾಪ್ತಿಯ ಮದಲಾಪುರದ ಸಮೀಪದ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಶ್ರೀ ಮುನೇಶ್ವರ ಸ್ವಾಮಿ ಮತ್ತು ಚೌಡೇಶ್ವರಿ ದೇವರ ವಾರ್ಷಿಕ ಮಹಾಪೂಜೆ ಶ್ರದ್ದಾಭಕ್ತಿಯಿಂದ ನೆರವೇರಿತು. ಎರಡು ದಿನಗಳ ಕಾಲ ನಡೆದ ಪೂಜಾ ಮಹೋತ್ಸವದಲ್ಲಿ ಸೋಮವಾರಪೇಟೆ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶೀಕೇಂದ್ರ ಮಹಾಸ್ವಾಮಿ ಹಾಗೂ ಅಖಿಲಭಾರತ ಸಂತ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಶ್ ನಾಥ್ ಗುರೂಜೀ ಪಾಲ್ಗೊಂಡು ಭಕ್ತರಿಗೆ ಆಶೀರ್ವಚನ ನೀಡಿದರು. ಧಾರ್ಮಿಕವಾಗಿ ಹಿಂದೂ ಧರ್ಮ ಶ್ರೇಷ್ಠ ಧರ್ಮ. ಸಂಸ್ಕಾರಯುತ ಹಿಂದೂ ಧರ್ಮದ ಉಳಿವಿಗೆ ಎಲ್ಲರೂ ಕಟಿಬದ್ದರಾಗಬೇಕಿದೆ. ಜೀವನದೊಂದಿಗೆ ಧರ್ಮದ ಅಭಿವೃದ್ದಿಗೆ ಕೂಡ ಎಲ್ಲರೂ ಮುಂದಾಗಬೇಕಿದೆ. ಮೌಲ್ಯಗಳು ಅಡಕಗೊಂಡಿರುವ ಹಿಂದೂ ಧರ್ಮ ಹೊರತುಪಡಿಸಿ ಇತರೆ ಧರ್ಮದತ್ತ ಮುಖಮಾಡದಂತೆ ನಿಶ್ಚಲ ನಿರಂಜನ ಸ್ವಾಮೀಜಿ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಹಿಂದೂಗಳ ನೆಮ್ಮದಿಯ ಜೀವನಕ್ಕೆ ಸನಾತನ ಧರ್ಮ ಉಳಿಯಬೇಕಿದೆ. ಹಸಿರು ಉಳಿದರೆ ಉಸಿರು ಎನ್ನುವ…
ಮಡಿಕೇರಿ ಮಾ.11 NEWS DESK : ಶಿರಂಗಾಲದ ಗ್ರಾಮದೇವತೆ ಶ್ರೀ ಮಂಟಿಗಮ್ಮ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾದ್ವಾರವನ್ನು ಲೋಕಾರ್ಪಣೆಗೊಳಿಸಲಾಯಿತು. ಬಸವಾಪಟ್ಟಣದ ತೊಟ್ಟಿಮನೆ ಬಾಲಣ್ಣ ಕುಟುಂಬಸ್ಥರು ನಿರ್ಮಿಸಿರುವ ಮಹಾದ್ವಾರ ಹಾಗೂ ಗೋಪುರವನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬಸವಾಪಟ್ಟಣ ತೊಟ್ಟಿಮನೆ ಬಾಲಣ್ಣ ಕುಟುಂಬಸ್ಥರು ಸುಮಾರು ರೂ. 16 ಲಕ್ಷ ವೆಚ್ಚದಲ್ಲಿ ಸುಂದರವಾದ ಮಹಾದ್ವಾರವನ್ನು ನಿರ್ಮಾಣ ಮಾಡಿದ್ದು, ಇದು ದೇವಾಲಯದ ಮೆರುಗನ್ನು ಹೆಚ್ಚಿಸಿದೆ. ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಸಾವಿರಾರು ಭಕ್ತರು ತಮ್ಮ ತನುಧನ ಅರ್ಪಿಸಿ ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ ಎಂದರು. ಶಿರಂಗಾಲ ಗ್ರಾಮದ ದೇವತೆ ಶ್ರೀ ಮಂಟಿಗಮ್ಮ ದೇವಿಯ ಜಾತ್ರೋತ್ಸವ ಒಂದು ವಾರಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ.ಈ ಹಬ್ಬಕ್ಕೆ ಗ್ರಾಮದ ಜನರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು, ಹಾಸನ ಹಾಗೂ ಮೈಸೂರು ಜಿಲ್ಲೆಯ ಗಡಿಗ್ರಾಮಗಳ ಜನರು ಸೇರಿದಂತೆ 30 ಸಾವಿರಕ್ಕೂ ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಜೊತೆಗೆ ಪ್ರತಿನಿತ್ಯ ದಾನಿಗಳಿಂದ ಅನ್ನ…
ಮಡಿಕೇರಿ ಮಾ.11 NEWS DESK : ಇದೇ ಮಾ.21 ರಿಂದ ಏ.4 ರವರೆಗೆ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಷಷ್ಟ ನಿರ್ದೇಶನ ನೀಡಿದ್ದಾರೆ. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಸಂಬಂಧ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಶೇಕಡಾವಾರು ಉತ್ತೀರ್ಣ ಜೊತೆಗೆ ಕಳೆದ ಬಾರಿಯಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಮತ್ತು ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು. ಪರೀಕ್ಷಾ ಮೌಲ್ಯ ಉಳಿಸಿಕೊಳ್ಳಬೇಕು. ಶಿಕ್ಷಕರೇ ಮಕ್ಕಳ ಬೇಸ್ಮೆಂಟ್ ಆಗಿದ್ದಾರೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ವೆಂಕಟ್ ರಾಜಾ ತಿಳಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಜೊತೆಗೆ ಸಿಸಿಟಿವಿ ಸಮರ್ಪಕವಾಗಿ…
ಮಡಿಕೇರಿ ಮಾ.11 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ನಿಂದ ಸಹಕಾರ ಕ್ಷೇತ್ರದ ವಿವಿಧ ವಲಯಗಳ ಬವಲರ್ಧನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯ ಸಹಕಾರ ಸಂಘಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಎನ್.ಎಂ.ಉಮೇಶ್ ಉತ್ತಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಸಹಕಾರ ಸಂಘಗಳ ನಿರ್ವಹಣೆಗೆ ಅಗತ್ಯವಿರುವ ಕಾಯ್ದೆ-ಕಾನೂನು ಮತ್ತು ಸೈಬರ್ ಭದ್ರತೆ ಕುರಿತು ನಗರದ ಮಯೂರ ವ್ಯಾಲಿ ವ್ಯೂ ಹೊಟೇಲ್ನಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಕ್ಷೇತ್ರದೊಂದಿಗೆ ಸಾಮಾಜಿಕ ವಲಯದ ಹಲವು ಸಮಸ್ಯೆಗಳಿಗೂ ಸರ್ಕಾರದ ಮಟ್ಟಿನಲ್ಲಿ ಪರಿಹರಿಸಲು ಸಹ ಪ್ರಯತ್ನಿಸಲಾಗುತ್ತಿರುವ ಯೂನಿಯನ್ ಅಧ್ಯಕ್ಷರ ಕಾರ್ಯ ಶ್ಲಾಘನೀಯ ಎಂದರು. ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆ. ಉತ್ತಮ ಜೀವನಕ್ಕಾಗಿ ಸದಾ ಕಾಲ ನಾವು ಕಲಿಯುತ್ತಿದಲ್ಲಿ…






