ಲೇಖಕ: admin

ಮಡಿಕೇರಿ NEWS DESK  ಮಾ.10 :  ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಕುಟ್ಟ ಗ್ರಾಮದ ಶಿವುಮಾದಪ್ಪ ಅವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಾಹಿದ್ ತೆಕ್ಕಿಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದ ಸಂದರ್ಭ ಹಲವು ಬಾರಿ ಶಿವು ಮಾದಪ್ಪ ಅವರ ಮನೆಗೆ ಭೇಟಿ ನೀಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದೇನೆ. ಅವರ ನಿಧನ ಕೊಡಗು ಜಿಲ್ಲೆಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಶಿವಮಾದಪ್ಪ ಅವರ ಕುಟುಂಬಕ್ಕೆ, ಹಿತೈಷಿಗಳಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ತುಂಬಲಿ ಎಂದು ಸಂತಾಪ ಸೂಚಕದಲ್ಲಿ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ.

Read More

ನಾಪೋಕ್ಲು ಮಾ.10 NEWS DESK : ಅಸಹಾಯಕರನ್ನು ಗುರುತಿಸಿ ಅವರ ನೆರವಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಬಲರನ್ನಾಗಿ ಮಾಡಲಾಗುತ್ತಿದೆ ಎಂದು ಗ್ರಾಮ ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಹೇಳಿದರು. ಹೊದ್ದೂರು ಗ್ರಾಮ ಪಂಚಾಯಿತಿಯ ಭಗವತಿ ಕಾಲೋನಿಯ ನಿವಾಸಿ ವೃದ್ಧೆ ಹೆಚ್.ಬಿ.ಬೊಮ್ಮಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಯೋಜನೆಯ ಮೂಲಕ ನಿರ್ಮಾಣ ಮಾಡಿಕೊಟ್ಟ ವಾತ್ಸಲ್ಯ ಗೃಹ ಉದ್ಘಾಟನೆ ಮಾಡಿ ಮಾತನಾಡಿದರು. ನಮ್ಮ ಗ್ರಾಮ ಅಭಿವೃದ್ಧಿ ಯೋಜನೆಯಾ ಮೂಲಕ ಹೆಚ್.ಬಿ.ಬೊಮ್ಮಿ ಅವರನ್ನು ಗುರುತಿಸಿ ಕೇವಲ 20 ದಿನಗಳಲ್ಲಿ ಮನೆ ನಿರ್ಮಾಣ ಮಾಡಿ ಇಂದು ಅವರಿಗೆ ಹಸ್ತಾಂತರಿಸಲಾಗಿದೆ ಎಂದ ಅವರು ರಾಜ್ಯದಲ್ಲಿ 78,023.ಮಾಸಾಸನ ನೀಡಲಾಗುತ್ತಿದೆ. ಸರಕಾರಿ ಶಾಲೆಗಳಿಗೆ ಡೆಸ್ಕ್ ಮತ್ತು ಬೆಂಚ್‍ಗೆ ಶ್ರೀ ಕ್ಷೇತ್ರದಿಂದ ಶೇ.80. ಶಾಲಾ ಅಭಿವೃದ್ಧಿ ಸಂಘದಿಂದ ಶೇ.20 ಸಹಾಯಧನದೊಂದಿಗೆ ರಾಜ್ಯದಲ್ಲಿ ಒಟ್ಟು 73534 ಸೆಟ್ ಡೆಸ್ಕ್ ಮತ್ತು ಬೆಂಚ್ ವಿತರಿಸಲಾಗಿದೆ. ಈ ವರ್ಷ ಕೊಡಗು ಜಿಲ್ಲೆಗೆ 10 ಕೋಟಿ ರೂ.ವೆಚ್ಚದಲ್ಲಿ…

Read More

ನಾಪೋಕ್ಲು ಮಾ.10 NEWS DESK : ಕೋಟೇರಿಯ ಕಾಫಿ ತೋಟದಲ್ಲಿ ಕಾಡಾನೆ ದಾಳಿ ಮಾಡಿ, ಬಾಳೆ, ಕಾಫಿ, ಅಡಿಕೆ ಗಿಡಗಳನ್ನು ನಾಶಪಡಿಸಿ, ಆತಂಕ ಸೃಷ್ಟಿಸಿದೆ. ಕೊಳಕೇರಿ ಗ್ರಾಮದ ಕೋಟೆರಿಯ ಕಾಫಿ ತೋಟಗಳಲ್ಲಿ ರಾತ್ರಿ ಅಡ್ಡಾಡಿದ ಕಾಡಾನೆ ಅಪ್ಪಾರಂಡ ಸುಧೀರ್ ಅಪ್ಪಯ್ಯ ಅವರ ಕಾಫಿ ತೋಟಗಳಲ್ಲಿದ್ದ ತೆಂಗು, ಬಾಳೆ, ಅಡಿಕೆ, ಕಾಫಿ ಸೇರಿದಂತೆ ಕಬ್ಬಿಣದ ಗೇಟನ್ನು ಮುರಿದು ಹಾಕಿ ನಷ್ಟಪಡಿಸಿದೆ. ಅಲ್ಲದೇ ಇನ್ನಿತರ ತೋಟಕ್ಕೂ ದಾಲಿ ಮಾಡಿ ನಷ್ಟ ಸಂಭವಿಸಿದ್ದು, ಕಾಡಾನೆ ಅಕ್ಕಪಕ್ಕದ ತೋಟಗಳಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಾಡಾನೆಗಳ ಹಾವಳಿಯಿಂದ ನೆಮ್ಮದಿ ಇಲ್ಲದಂತ್ತಾಗಿದೆ ಎಂದು ಬೆಳೆಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಕಾಫಿ ಕೊಯ್ಲು ಮುಗಿಯುವ ಹಂತ ತಲುಪಿದ್ದು, ತೋಟಗಳಿಗೆ ನೀರು ಹಾಯಿಸುವ ಕೆಲಸಕ್ಕೆ ಬೆಳೆಗಾರರು ಮುಂದಾಗಿದ್ದಾರೆ. ಕಾಡಾನೆ ತೋಟಗಳಲ್ಲಿ ಸುತ್ತಾಡುತ್ತಿರುವುದರಿಂದಾಗಿ ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಬೆಳೆಗಾರರು ಆಂತಕ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಗ್ರಾಮಸ್ಥರು ಎಚ್ಚರಿಕೆಯಲ್ಲಿರುವಂತೆ ಮನವಿ ಮಾಡಿಕೊಂಡಿದ್ದಾರೆ. ವರದಿ…

Read More

ಮಡಿಕೇರಿ ಮಾ.10 NEWS DESK  : ಏಷ್ಯಾ ಖಂಡದ ಬೃಹತ್ ಸಾಹಿತ್ಯೋತ್ಸವ ‘ಫೆಸ್ಟಿವಲ್ ಆಫ್ ಲೆಟರ್ಸ್’ ಸಾಹಿತ್ಯೋತ್ಸವದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಮುಲ್ಲೇಂಗಡ ರೇವತಿ ಪೂವಯ್ಯ  ಕೊಡಗನ್ನು ಪ್ರತಿನಿಧಿಸಲಿದ್ದಾರೆ.  ಕೇಂದ್ರ ಸಾಹಿತ್ಯ ಅಕಾಡೆಮಿ ಮಾ.11 ರಂದು ದೆಹಲಿಯಲ್ಲಿ ಆಯೋಜಿಸಿರುವ “ಫೆಸ್ಟಿವಲ್ ಆಫ್ ಲೆಟರ್ಸ್” ಸಾಹಿತ್ಯೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಆಹ್ವಾನಿತ ಕೊಡವ ಭಾಷಾ ಕವಯಿತ್ರಿಯಾಗಿ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮಾ.10 NEWS DESK : ಕಲೆ, ಸಾಹಿತ್ಯ, ಶಿಕ್ಷಣ, ಆರೋಗ್ಯ, ಸಮಾಜ ಸೇವೆ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕರುನಾಡ ಕನ್ನಡ ಕಲಾ ಸಿರಿ ಬಳಗ ಹಾಗೂ ಎಜಿಎಸ್ ಚಾರಿಟೇಬಲ್ ಟ್ರಸ್ಟ್ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು,  ಈ ಬಾರಿ ಕೊಡಗಿನ ಪತ್ರಕರ್ತ ಪ್ರಶಾಂತ್.ಟಿ.ಆರ್ ವಿರಚಿತ ಹೊನ್ನಮ್ಮನ ಕನಸು ಕಾದಂಬರಿಗೆ ಅತ್ಯುತ್ತಮ ಕಾದಂಬರಿ ಪ್ರಶಸ್ತಿ ಲಭಿಸಿದೆ. ಹಳ್ಳಿಯ ವೃದ್ದ ಮಹಿಳೆಯೊಬ್ಬಳ ಮಾನಸಿಕ ತೊಳಲಾಟದ ಜೊತೆಗೆ ಸಾಮಾಜಿಕ ಕಳಕಳಿಯೂ ಈ ಕಾದಂಬರಿಯ ಕಥಾ ವಸ್ತುವಾಗಿದೆ.  ವಿಶೇಷ ಎಂದರೆ ಈ ಕಾದಂಬರಿಯನ್ನು ಮೆಚ್ಚಿದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್, ಬೆನ್ನುಡಿ ಬರೆದಿದ್ದಾರೆ. ಪ್ರಶಾಂತ್ ಅವರು ವಿಶ್ವವಾಣಿ ಪತ್ರಿಕೆಯಲ್ಲಿ ಸಿನಿಮಾ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಕೆಲವು ಸಿನಿಮಾಗಳಲ್ಲಿಯೂ ನಟಿಸುವ ಮೂಲಕ ನಟನಾಗಿಯೂ ಗುರುತಿಸಿಕೊಂಡಿದ್ದಾರೆ. ಏ.13 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‍ನ ಶ್ರೀಕೃಷ್ಣರಾಜ ಸಭಾಂಗದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಜ್ಯದ ವಿವಿಧ ಸಾಧಕರು, ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಮುಕ್ಕಾಟಿರ ಶಿವು ಮಾದಪ್ಪ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ತೀವ್ರ ಸಂತಾಪ ಸೂಚಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕಾಂಗ್ರೆಸ್ ಜಿಲ್ಲಾ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಅವರು ಪಕ್ಷಾತೀತ ನಾಯಕ ಶಿವು ಮಾದಪ್ಪ ಅವರ ಅಗಲಿಕೆ ಅತೀವ ನೋವು ತಂದಿದೆ, ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದ ಶಿವು ಮಾದಪ್ಪ ಅವರು ಸ್ನೇಹಜೀವಿಯಾಗಿದ್ದರು. ಸಮಾಜಸೇವೆಯೊಂದಿಗೆ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರ ಅಕಾಲಿಕ ನಿಧನ ದಿಗ್ಭ್ರಮೆ ಮೂಡಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಕ್ಷದ ಪರವಾಗಿ ಕೋರುವುದಾಗಿ ಎ.ಎಸ್.ಟಾಟು ಮೊಣ್ಣಪ್ಪ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.10 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡಲಾಗುವ  ಅಂಗನವಾಡಿ ಉತ್ತಮ ಕಾರ್ಯಕರ್ತೆ ಪ್ರಶಸ್ತಿಯನ್ನು ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಬಲ್ಲಮಾವಟಿ ವೃತ್ತದ ಹಳೆ ತಾಲ್ಲೂಕು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ  ಸಿ.ಜೆ.ಭಾಗ್ಯವತಿ ಪಡೆದುಕೊಂಡಿದ್ದಾರೆ.  ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸೌಲಭ್ಯಗಳನ್ನು ಅಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸಲು ತೆಗೆದುಕೊಂಡಿರುವ ಕ್ರಮ ಹಾಗೂ ಉತ್ತಮ ಚಟುವಟಿಕೆಳನ್ನು ಗುರುತಿಸಿ  ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಭಾಗ್ಯವತಿ ಅವರಿಗೆ “ಉತ್ತಮ ಅಂಗನವಾಡಿ ಶಿಕ್ಷಕಿ” ಪ್ರಶಸ್ತಿಯನ್ನು  ನೀಡಿ ಗೌರವಿಸಿದರು.

Read More

ಮಡಿಕೇರಿ ಮಾ.10 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಮುಕ್ಕಾಟಿರ ಶಿವು ಮಾದಪ್ಪ(49) ನಿಧನರಾಗಿದ್ದಾರೆ. ಭಾನುವಾರ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸಂತಾಪ ಸೂಚಿಸಿದ್ದಾರೆ. ಪಕ್ಷಾತೀತ ನಾಯಕ ಶಿವು ಮಾದಪ್ಪ ಅವರ ಅಗಲಿಕೆ ಅತೀವ ನೋವು ತಂದಿದೆ, ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದ ಶಿವು ಮಾದಪ್ಪ ಅವರು ಸ್ನೇಹಜೀವಿಯಾಗಿದ್ದರು.  ಸಮಾಜಸೇವೆಯೊಂದಿಗೆ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರ ಅಕಾಲಿಕ ನಿಧನ ದಿಗ್ಭ್ರಮೆ ಮೂಡಿಸಿದೆ ಎಂದು ಎ.ಎಸ್.ಟಾಟು ಮೊಣ್ಣಪ್ಪ ತಿಳಿಸಿದ್ದಾರೆ.   

Read More

ಕುಶಾಲನಗರ ಮಾ.10 NEWS DESK : ಸ್ತ್ರೀ ಯು ನಾಲ್ಕು ಗೋಡೆಗಳ ನಡುವೆ ಕಾಲ ಕಳೆಯುವ ಕಾಲವೀಗ ಕಣ್ಮರೆಯಾಗಿ ಪುರುಷ ಪ್ರಧಾನ ಸಮಾಜದಲ್ಲಿ ಪುರುಷನಷ್ಟೇ ಧೀಮಂತಿಕೆಯಿಂದ ಬದುಕಲು ಸಾಧ್ಯವಿದೆ. ಶಕ್ತಿ ಸಮಾಜದ ಬೆಳವಣಿಗೆಗೆ ಪೂರಕವಾಗಿದೆ ಎಂದು ಶನಿವಾರಸಂತೆ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯ ಅಧ್ಯಾಪಕ ಕೆ.ಪಿ. ಜಯಕುಮಾರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ  ಸಹಯೋಗದಲ್ಲಿ ಕುಶಾಲನಗರ ಪಟ್ಟಣದ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಕ್ಷೇತ್ರದಲ್ಲೂ ಹೆಣ್ಣು ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ತಳಮಟ್ಟದಿಂದ ಮೇಲೆ ಬಂದು ಸಮಾಜದ ಎಲ್ಲಾ ಸ್ತರಗಳಲ್ಲಿ ಮಹಿಳೆಯರು ಬೆಳೆದಿದ್ದಾರೆ. ಮಹಿಳೆಯು ಮಾತೃ ಸ್ವರೂಪಿ, ತನ್ನ ಜೀವನದಲ್ಲಿ ಎಲ್ಲಾ ಹಂತದ ಕಷ್ಟಗಳನ್ನು ಸಹನೆಯಿಂದ ದಾಟಿಕೊಂಡು ಮುನ್ನಡೆಯುತ್ತಾಳೆ. ಈ ಹಿಂದೆ ಮಹಿಳೆಯು ಕೇವಲ ಅಡುಗೆ ಕೋಣೆಗೆ ಮಾತ್ರ ಸೀಮಿತವಾಗುತ್ತಿದ್ದಳು. ಆದರೆ ಪ್ರಸ್ತುತ ಸಮಾಜದ ಎಲ್ಲಾ ರಂಗಗಳಲ್ಲಿ ಪುರುಷನ ಸಮಾನಾಗಿ…

Read More

ಕುಶಾಲನಗರ ಮಾ.10 NEWS DESK : ಕುಟುಂಬ ಹಾಗೂ ಸಮಾಜದಲ್ಲಿ ಹೆಣ್ಣು ತ್ಯಾಗದ ಸಂಕೇತ. ಹೆಣ್ಣನ್ನು ಸೌಂದರ್ಯಕ್ಕಿಂತ ಸಾಮರ್ಥ್ಯದ ಮೂಲಕ ಅರ್ಥ ಮಾಡಿಕೊಳ್ಳಬೇಕು. ತಾಯಿಯಿಲ್ಲದೆ ಒಂದು ದಿನವೂ ಮನೆ ಪರಿಪೂರ್ಣವಾಗುವುದಿಲ್ಲ ಎಂದು ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ಅಧ್ಯಕ್ಷೆ ತೇಜ ದಿನೇಶ್ ಹೇಳಿದರು. ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ವತಿಯಿಂದ ಸ್ಥಳೀಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಮಹಿಳೆಯರು ಇಂದು ಸಾಮಾಜಿಕ , ರಾಜಕೀಯ ಹಾಗೂ ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುವ ಮೂಲಕ ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಎತ್ತಿಹಿಡಿಯುತ್ತಿದ್ದಾಳೆ ಎಂದರು. ಸಮಾಜದಲ್ಲಿ ಮಹಿಳೆ ವಿವಿಧ ರೀತಿಯ ಸ್ಥಾನಗಳನ್ನು ಅಲಂಕರಿಸುವ ಮೂಲಕ ನೀಡಿರುವ ಜವಾಬ್ದಾರಿಯನ್ನು ನಿರ್ವಹಣೆ ಮಾಡುತ್ತಿದ್ದಾಳೆ. ಅದರ ಜತೆಯಲ್ಲಿ ಆಕೆಗೆ ಆತ್ಮವಿಶ್ವಾಸ ತುಂಬುವ ಕೆಲಸ ಸಮಾಜದಿಂದ ಆಗಬೇಕಿದೆ ಎಂದು ತೇಜ ದಿನೇಶ್ ಅಭಿಪ್ರಾಯಪಟ್ಟರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಪಿ.ನವೀನ್ ಕುಮಾರ್ ಮಾತನಾಡಿ, ‘ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ.…

Read More