ಮಡಿಕೇರಿ NEWS DESK ಮಾ.9 : ಕಾಫಿ ಖರೀದಿ ಸಂದರ್ಭ ರಶೀದಿ ನೀಡದೆ ಹಾಗೂ ಮಾರಾಟ ಮಾಡುವವರ ಸಂಪೂರ್ಣ ವಿವರವನ್ನು ಪಡೆದುಕೊಳ್ಳದೆ ವ್ಯವಹಾರ ನಡೆಸಿದಲ್ಲಿ ಮತ್ತು ಕಳ್ಳತನ ಮಾಡಿರುವ ಕಾಫಿಯನ್ನು ಖರೀದಿ ಮಾಡಿರುವುದು ಕಂಡುಬಂದಲ್ಲಿ ಕಾಫಿ ಟ್ರೇಡರ್ಸ್ ಮಾಲೀಕರನ್ನು ನೇರ ಹೊಣೆಗಾರರನ್ನಾಗಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಮಾ.9 : ಕೊಡಗು ಗೌಡ ಯುವ ವೇದಿಕೆ : ಮೈಸೂರು ಘಟಕದ ನೂತನ ಕಾರ್ಯಕಾರಣಿ >> ಅಧ್ಯಕ್ಷ ಮೊಟ್ಟನ ಕೌಶಿಕ್, ಉಪಾಧ್ಯಕ್ಷ ಗುಡ್ಡೆಮನೆ ಕಿರಣ್, ಕಾರ್ಯದರ್ಶಿ ಹಿರನ್ ಕೊಂಬAಡ, ಸಹ ಕಾರ್ಯದರ್ಶಿ ಕೃತಿಕ ಕಡ್ಯದ, ಖಜಾಂಚಿ ಯೋಗೇಶ್, ಕ್ರೀಡಾ ಸಮಿತಿ ಆಕಾಶ್ ಕಲ್ಪಡ, ಅನ್ವಿತ ಕಾಳೆರಮ್ಮನ, ಸಾಂಸ್ಕೃತಿಕ ಸಮಿತಿ ರಕ್ಷಿತ್ ಪಾಣತ್ತಲೆ, ಸಚಿತ ಕುಂಟುಪುಣಿ, ಸಾಮಾಜಿಕ ಜಾಲತಾಣ ಕಡ್ಯದ ನವೀನ್
ಮಡಿಕೇರಿ NEWS DESK ಮಾ.9 : ವಿವಿಧ ತೋಟಗಳ ಕಣದಲ್ಲಿ ಒಣಗಿಸಲು ಇಟ್ಟಿದ್ದ ಕಾಫಿಯನ್ನು ಕಳವು ಮಾಡಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮದ ಶಾಂತಿನಗರದ ನಿವಾಸಿಗಳಾದ ಕೆ.ಬಿ.ಶಫೀಕ್ (26), ಟಿ.ಜೆ.ಪ್ರಾನ್ಸಿಸ್ (29), ಪೊನ್ನಪ್ಪಸಂತೆ ಗ್ರಾಮದ ಎಂ.ಬಿ.ಯಾಸಿನ್ (28) ಹಾಗೂ ನೋಕ್ಯ ಗ್ರಾಮದ ಅನೀಸ್ ಎಂ.ಜಿ (24) ಬಂಧಿತ ಆರೋಪಿಗಳು. ಬಂಧಿತರ ಬಳಿಯಿಂದ 2550 ಕೆ.ಜಿ ಕಾಫಿ, ಒಂದು ಪಿಕಪ್ ವಾಹನ, ಒಂದು ಮಾರುತಿ ಕಾರು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ-ಬಾಣಂಗಾಲ ಗ್ರಾಮದ ಹುಂಡಿ ಪ್ರದೇಶದ ನಿವಾಸಿ ಸಜಿ ಥಾಮಸ್ ಅವರ ತೋಟದ ಕಣದಲ್ಲಿ ಒಣಗಿಸಲು ಇಟ್ಟಿದ್ದ ಅಂದಾಜು 12 ಚೀಲ ಹಸಿ ಕಾಫಿ ಇದೇ ಜ.16 ರಂದು ಮತ್ತು 800 ಕೆ.ಜಿ ಹಸಿ ಕಾಫಿ ಫೆ.26 ರಂದು ಕಳ್ಳತನವಾಗಿತ್ತು. ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದ ಸಿದ್ದಾಪುರ ಪೊಲೀಸರು ತನಿಖೆ ಕೈಗೊಂಡಿದ್ದರು. ಮಡಿಕೇರಿ…
ಮಡಿಕೇರಿ NEWS DESK ಮಾ.9 : ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು ಮಾಡುತಿದ್ದ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಸತ್ಯನಗರದ ನಿವಾಸಿ ಇಲಿಯಾಸ್ (47) ಬಂಧಿತ ಆರೋಪಿಯಾಗಿದ್ದು, 30 ಕೆಜಿ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಿರಾಜಪೇಟೆ ನಗರದ ನಿಸರ್ಗ ಬಡಾವಣೆಯ ಕಿರುಮಕ್ಕಿ ಜಂಕ್ಷನ್ ಸಮೀಪ ಗಾಂಜಾ ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಡಿವೈಎಸ್ಪಿ ಮಹೇಶ್ ಕುಮಾರ್.ಎಸ್, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪಿಎಸ್ಐ ವಾಣಿ ಶ್ರೀ ಬಿ.ಎಸ್ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದರು. ಪೊಲೀಸರ ಕಾರ್ಯದಕ್ಷತೆಯ ಕುರಿತು ಶ್ಲಾಘನೆ ವ್ಯಕ್ತಪಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು, ಮಾದಕ ವಸ್ತು ದಂಧೆ ಕುರಿತು ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಡಿಕೇರಿ NEWS DESK ಮಾ.9 : ಕೊಡಗು ಜಿಲ್ಲೆಯ ಮೇಲಿನ ಅಪಾರ ಕಾಳಜಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ. ಇದನ್ನು ಸಹಿಸದ ಬಿಜೆಪಿ ಮಂದಿ ಕೇವಲ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಆಸಕ್ತಿಯಿಂದ ಕೊಡಗು ಜಿಲ್ಲೆಗೆ ಹಿಂದೆಂದಿಗಿಂತಲೂ ಅಧಿಕ ಅನುದಾನ ಈ ಬಾರಿಯ ಬಜೆಟ್ ನಲ್ಲಿ ಹರಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಶಾಸಕದ್ವಯರ ಮೇಲೆ ಜಿಲ್ಲೆಯ ಜನರ ಪ್ರೀತಿ ಹೆಚ್ಚಾಗುತ್ತಲೇ ಇದ್ದು, ಇದನ್ನು ಸಹಿಸದ ಬಿಜೆಪಿ ವಿನಾಕಾರಣ ಪ್ರತಿಭಟನೆಗಳನ್ನು ಮಾಡಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಟೀಕಿಸಿದ್ದಾರೆ. ಮಡಿಕೇರಿ – ದೋಣಿಗಲ್ -ಮಾದಾಪುರ – ಸೋಮವಾರಪೇಟೆ – ಶನಿವಾರಸಂತೆ – ಕೊಡ್ಲಿಪೇಟೆಯ 95 ಕಿ.ಮೀ ಅಂತರದ ಮಾರ್ಗವನ್ನು ಸರ್ವಋತು ರಸ್ತೆಯನ್ನಾಗಿ…
ಮಡಿಕೇರಿ NEWS DESK ಮಾ.9 : ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಮತ್ತು ಅತ್ಯುತ್ತಮ ವರದಿಗಳಿಗೆ ನೀಡಲಾಗುವ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ, ಇಲ್ಲಿನ ಪತ್ರಿಕಾ ಭವನದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಮಾಜ ಸೇವಕ ಮಂಡಿಬೆಲೆ ರಾಜಣ್ಣ ಮಾತನಾಡಿ, ಪತ್ರಿಕೋದ್ಯಮ ಇಂದು ಕವಲು ದಾರಿಯಲ್ಲಿದ್ದು, ನಷ್ಟದ ಹಾದಿಯಲ್ಲಿದೆ. ಪತ್ರಕರ್ತರು ವೃತ್ತಿಯನ್ನಾಗಿ ತೆಗೆದುಕೊಂಡು ಪತ್ರಿಕೆಯಲ್ಲಿ ಕೆಲಸ ಮಾಡಿದಲ್ಲಿ ಜೀವನ ನಡೆಸುವುದು ಕಷ್ಟು. ಇದನ್ನು ಕೇವಲ ಪ್ರವೃತ್ತಿಯನ್ನಾಗಿ ಮಾತ್ರ ತೆಗೆದುಕೊಳ್ಳಬಹುದಾಗಿದೆ. ಹೆಚ್ಚಿನ ಪತ್ರಕರ್ತರು ಇಂದು ವೃತ್ತಿಗೆ ಅಗೌರವ ತರುವ ಕೆಲಸ ಮಾಡುತ್ತಿರುವುದನ್ನು ಕಾಣಬಹುದು. ಮೊದಲು ವೃತ್ತಿಗೆ ಗೌರವ ತರುವ ಕೆಲಸವನ್ನು ಪತ್ರಕರ್ತರಿಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉದ್ಯಮಿ ನಾಪಂಡ ಮುತ್ತಪ್ಪ ಮಾತನಾಡಿ, ಯಾವುದೇ ಸಂಘಟನೆಗಳು ವಿಭಜನೆಗೊಳ್ಳುತ್ತಾ ಸಾಗಿದಲ್ಲಿ, ಅದು ತನ್ನ ಶಕ್ತಿಯನ್ನು ಕಳೆದುಕೊಳ್ಳುತ್ತದೆ. ಇದರಿಂದಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ. ಹಿಂದೆ ಪತ್ರಿಕೆಯಲ್ಲಿ ಹಲವಾರು ತನಿಖಾ ವರದಿಗಳು ಬರುತ್ತಿದ್ದವು. ಆದರೆ, ಇಂದು ಅಂತಹ ವರದಿಗಳು ಪತ್ರಿಕೆಯಿಂದ ಮಾಯವಾಗಿವೆ.…
ಮಡಿಕೇರಿ NEWS DESK ಮಾ.9 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 16ನೇ ಬಜೆಟ್ ಜನಸಾಮಾನ್ಯರ ಪರವಾಗಿದೆ. ಆದರೆ ಬಿಜೆಪಿ ಇದನ್ನು ಅಲ್ಪಸಂಖ್ಯಾತರ ಬಜೆಟ್ ಎಂದು ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದೆಯೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಹೆಚ್.ಯು.ಇಸಾಕ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರ್ಕಾರದ ಬಜೆಟ್ ಕೊಡಗು ಜಿಲ್ಲೆಗೂ ವರದಾನವಾಗಿದ್ದು, ಇಬ್ಬರು ಶಾಸಕರ ಪ್ರಯತ್ನದಿಂದ ಆರೋಗ್ಯ, ಶಿಕ್ಷಣ ಕ್ಷೇತ್ರ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ದೊಡ್ಡ ಪ್ರಮಾಣದ ಅನುದಾನ ಘೋಷಣೆಯಾಗಿದೆ. ಜನಪರ ಕಾಳಜಿ ವಹಿಸಿರುವ ಶಾಸಕದ್ವಯರು ಅಭಿನಂದನಾರ್ಹರು ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಪ್ರತಿ ಜಿಲ್ಲೆಯ ಮೇಲೂ ಹೆಚ್ಚಿನ ಕಾಳಜಿ ತೋರಿ ಸರ್ವಜನರ ಏಳಿಗೆಗಾಗಿ ಸಮಾನ ಅನುದಾನ ಹಂಚಿಕೆ ಮಾಡಿದ್ದಾರೆ. ಬಜೆಟ್ ಗಾತ್ರದಲ್ಲಿ ಕೇವಲ ಶೇ.1 ರಷ್ಟು ಅನುದಾನ ಮಾತ್ರ ಅಲ್ಪಸಂಖ್ಯಾತರಿಗೆ ಮೀಸಲಿಡಲಾಗಿದೆ. ಆದರೆ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿ ಇದು ಅಲ್ಪಸಂಖ್ಯಾತರ ಬಜೆಟ್ ಎಂದು ಪ್ರತಿಬಿಂಬಿಸಿ ರಾಜಕೀಯ ಲಾಭ ಪಡೆಯುವ ಯತ್ನ…
ಕುಶಾಲನಗರ NEWS DESK ಮಾ.9 : ಕುಶಾಲನಗರ ಸಮೀಪದ ಬೈಲುಕುಪ್ಪೆ ಟಿಬೆಟಿಯನ್ ನಿರಾಶ್ರಿತ ಶಿಬಿರದ ಗೋಲ್ಡನ್ ಟೆಂಪಲ್ ಆವರಣದಲ್ಲಿ ವಿಶ್ವದ ಅತಿ ದೊಡ್ಡ ಚಿತ್ರಪರದೆ ಎಂದು ಖ್ಯಾತಿ ಹೊಂದಿರುವ ಗುರು ಪದ್ಮ ಸಂಭವ ಚಿತ್ರಪಟವನ್ನು ಭಾನುವಾರ ಬೆಳಗ್ಗೆ ಅನಾವರಣಗೊಳಿಸಲಾಯಿತು. ಟಿಬೆಟಿಯನ್ ನೂತನ ವರ್ಷ ಲೋಸಾರ್ ಅಂಗವಾಗಿ ವಾರ್ಷಿಕವಾಗಿ ಎರಡು ಚಿತ್ರಪಟಗಳನ್ನು ಅನಾವರಣ ಗೊಳಿಸುವ ಕಾರ್ಯಕ್ರಮ ನಡೆಯುತ್ತಿದೆ, ಗುರು ಪದ್ಮ ಸಂಭವ ಚಿತ್ರಪಟ ಕೇವಲ ಅರ್ಧ ಗಂಟೆಗಳ ಕಾಲ ಪ್ರದರ್ಶನ ಮಾಡಿ ಸಾಮೂಹಿಕವಾಗಿ ಪೂಜೆ ಸಲ್ಲಿಸಲಾಯಿತು. ಕೊಪ್ಪ ಸಮೀಪದ ಟಿಬೆಟಿಯನ್ ಶಿಬಿರದ ಗೋಲ್ಡನ್ ಟೆಂಪಲ್ ಆವರಣದಲ್ಲಿ ಏಳು ಅಂತಸ್ತಿನ ಕಟ್ಟಡದ ಮೇಲೆ ಬೃಹತ್ ಕಬ್ಬಿಣದ ಗೋಪುರ ಅಳವಡಿಸಲಾಗಿದ್ದು ಇದರಲ್ಲಿ 200 ಅಡಿ ಎತ್ತರ 180 ಅಡಿಗಳಷ್ಟು ಅಗಲವಿರುವ ಚಿತ್ರಪಟವನ್ನು ಮುಂಜಾನೆ 7.30 ರಿಂದ ಅರ್ಧ ಗಂಟೆ ಕಾಲ ಪ್ರದರ್ಶಿಸಿ ಟಿಬೆಟಿಯನ್ ಧರ್ಮ ಗುರುಗಳು ವಿಶೇಷ ಪೂಜೆ ಸಲ್ಲಿಸಿದರು. ಕಳೆದ 25 ವರ್ಷಗಳಿಂದ ಟಿಬೆಟ್ ನೂತನ ವರ್ಷದ ಸಂಭ್ರಮಾಚರಣೆ ಅವಧಿಯ ನಡುವೆ ಈ ರೀತಿ…
ಮಡಿಕೇರಿ NEWS DESK ಮಾ.9 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನ್ನು ನೆಪಮಾಡಿಕೊಂಡು ಬಿಜೆಪಿ ಮತ್ತೆ ಅಲ್ಪಸಂಖ್ಯಾತರ ಅವಹೇಳನದಲ್ಲಿ ತೊಡಗಿದೆೆ. ಪ್ರತಿಯೊಂದು ವಿಚಾರದಲ್ಲೂ ಅಲ್ಪಸಂಖ್ಯಾತರನ್ನು ಗುರಿ ಮಾಡುತ್ತಿರುವ ಬಿಜೆಪಿಯ ರಾಜಕೀಯ ತಂತ್ರಗಾರಿಕೆ ಎಂದಿಗೂ ಫಲಿಸುವುದಿಲ್ಲವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಎಂ.ಎ.ಕಲೀಲ್ ಬಾಷ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಣಕಾಸು ಖಾತೆಯ ಬಗ್ಗೆ ಹೆಚ್ಚು ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಸಮಪಾಲು, ಸಮಬಾಳು’ ಎಂಬ ಅರ್ಥದಲ್ಲಿ ಈ ಬಾರಿ ಮಂಡಿಸಿದ ಬಜೆಟ್ ನಲ್ಲಿ ಸರ್ವರಿಗೂ ಸಮಾನವಾದ ಆದ್ಯತೆ ನೀಡಿದ್ದಾರೆ. ಅಲ್ಪಸಂಖ್ಯಾತರು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ರಾಜ್ಯ ಅಭಿವೃದ್ಧಿಪಥದಲ್ಲಿ ಸಾಗುತ್ತದೆ ಎನ್ನುವ ಗುರಿಯೊಂದಿಗೆ ಅನುದಾನ ಹಂಚಿಕೆ ಮಾಡಿದ್ದಾರೆ. ತಾವು ಮಂಡಿಸಿದ ದೊಡ್ಡ ಗಾತ್ರದ ಬಜೆಟ್ ನಲ್ಲಿ ಶೇ.1ರಷ್ಟನ್ನು ಮಾತ್ರ ಅಲ್ಪಸಂಖ್ಯಾತರಿಗೆ ನೀಡಲಾಗಿದೆ. ಆದರೆ ಬಿಜೆಪಿ ಮಂದಿ ಇದನ್ನೇ ದೊಡ್ಡದು ಮಾಡಿ ಅಲ್ಪಸಂಖ್ಯಾತರ ತೇಜೋವಧೆಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರು ಈ ದೇಶಕ್ಕೆ…
ಮಡಿಕೇರಿ NEWS DESK ಮಾ.9 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಆಯೋಜನೆಯಲ್ಲಿ Fitness for all ಎಂಬ ಧ್ಯೇಯ ವಾಕ್ಯದೊಂದಿಗೆ ರಾಜ್ಯದಾದ್ಯಂತ ಇಂದು ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರೊಂದಿಗೆ ಮ್ಯಾರಥಾನ್ ರಸ್ತೆ ಓಟವನ್ನು ಆಯೋಜಿಸಲಾಗಿತ್ತು. ಈ ಕಾಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಪೊಲೀಸ್ ಘಟಕದ ಆಯೋಜನೆಯಲ್ಲಿ ಡ್ರಗ್ಸ್ ಮುಕ್ತ ಕೊಡಗು ಎನ್ನುವ ಪರಿಕಲ್ಪನೆಯೊಂದಿಗೆ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದವರೆಗೆ ರಸ್ತೆ ಓಟವನ್ನು ನಡೆಸಲಾಯಿತು. ಇದೇ ಸಂದರ್ಭದಲ್ಲಿ ವಿಕ್ರಮ್ ಜಾದೂಗಾರ್ ರವರಿಂದ ಮಾದಕ ದ್ರವ್ಯವನ್ನು ನಾಶಪಡಿಸುವ ಪರಿಕಲ್ಪನೆಯ ಜಾದೂ ಕಾರ್ಯಕ್ರಮವನ್ನು ಸಹ ಆ ಏರ್ಪಡಿಸಲಾಗಿತ್ತು. ನಂತರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳ ಬಗ್ಗೆ ನೆರೆದಿದ್ದ ವಿದ್ಯಾರ್ಥಿಗಳೊಂದಿಗೆ ಪ್ರಶ್ನೋತ್ತರ ಸಂವಾದ ನಡೆಸಿ ಜಾಗೃತಿ ಮೂಡಿಸಲಾಯಿತು. ಕೊಡಗು ಜಿಲ್ಲಾ ಪೊಲೀಸ್ ಘಟಕದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು…






