ಮಡಿಕೇರಿ ಮಾ.31 NEWS DESK : ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿಯ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಜೊತೆಗೂಡಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಯುವನಿಧಿಯ 2023-24ರ ವಿಶೇಷ ನೋಂದಣಿ ಅಭಿಯಾನ ನಡೆಸಲಾಯಿತು. ಈ ಸಂದರ್ಭ ಪ್ರಾಂಶುಪಾಲರು ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ಮಾತನಾಡಿ ಯುವನಿಧಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಶೇಷ ನೋಂದಣಿ ಅಭಿಯಾನದ ಮಹತ್ವ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಹತೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.
ಲೇಖಕ: admin
ಮಡಿಕೇರಿ NEWS DESK ಮಾ.31 : ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಮಲ್ಲಿಕಮ್ಮ ಎಂಬುವವರು ಕಳೆದ 6 ದಿನಗಳಿಂದ ಕಾಣೆಯಾಗಿದ್ದಾರೆ. ಪಟ್ಟಣಕ್ಕೆ ಹೋದವರು ಮನೆಗೆ ಮರಳಿ ಬಂದಿರುವುದಿಲ್ಲ. ಇವರನ್ನು ಕಂಡಲ್ಲಿ ಅಥವಾ ಇವರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಈ 9611101070 ಸಂಖ್ಯೆಯನ್ನು ಸಂಪರ್ಕಿಸುವಂತೆ ಕುಟುಂಬದ ಸದಸ್ಯರು ವಿನಂತಿಸಿಕೊಂಡಿದ್ದಾರೆ.
ಮಡಿಕೇರಿ ಮಾ.31 NEWS DESK : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯಲ್ಲಿ 2025 ಏಪ್ರಿಲ್ 1 ರಿಂದ ದಿನದ ಕೂಲಿ ಮೊತ್ತವನ್ನು ರೂ. 349 ರಿಂದ 370ಕ್ಕೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇನ್ನು ಮುಂದೆ ನರೇಗಾ ಕೂಲಿಕಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ನರೇಗಾ ಯೋಜನೆಯಲ್ಲಿ ಹೆಣ್ಣು ಮತ್ತು ಗಂಡಿಗೆ ಸಮಾನ ಕೂಲಿ ಅಂದರೆ ಒಂದು ದಿನದ ಕೂಲಿಗೆ ರೂ 370 ಪಡೆಯುವ ಹಕ್ಕಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ ಕನಿಷ್ಠ 100 ದಿನಗಳ ಕೂಲಿ ದೊರೆಯುವಂತೆ ಮಾಡುವುದು ಹಾಗೂ 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಮತ್ತು ವಿಶೇಷಚೇತನರಿಗೆ ಕೆಲಸದಲ್ಲಿ ಶೇ.50 ವಿನಾಯಿತಿ ನೀಡಲಾಗಿದೆ. ಅರ್ಹ ಫಲಾನುಭವಿಗಳ ಒಂದು ಕುಟುಂಬಕ್ಕೆ ಜೀವಿತಾವಧಿಯಲ್ಲಿ ವೈಯಕ್ತಿಕ ಸೌಲಭ್ಯದಡಿ ರೂ.5…
ಮಡಿಕೇರಿ ಮಾ.31 NEWS DESK : ಜಿಲ್ಲೆಯ ಹಾಡಿಗಳಿಗೂ ಸರ್ಕಾರದ ಪಂಚ ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಸಮಿತಿಯ ಉಪಾಧ್ಯಕ್ಷ ಪಂಕಜ ತಿಳಿಸಿದರು. ನಗರದ ಜಿ.ಪಂ.ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಹಾಡಿಗಳಲ್ಲಿಯೂ ಪದವಿ ಪೂರ್ಣಗೊಳಿಸಿರುವ ಯುವಕರಿದ್ದು, ಅವರಿಗೆ ಯುವನಿಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿ ನೋಂದಣಿ ಮಾಡಿಸಬೇಕು ಎಂದು ತಿಳಿಸಿದರು. ಸದಸ್ಯರಾದ ಮಂದ್ರೀರ ಮೋಹನ್ದಾಸ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಫಲಾನುಭವಿಗಳಿಂದಲೇ ಅಭಿಪ್ರಾಯ ಸಂಗ್ರಹಿಸುವ ಕಾರ್ಯವಾಗಬೇಕು. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು. ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ ಮಾತನಾಡಿ, ತಾಲೂಕು ಮಟ್ಟದಲ್ಲಿಯೇ ಫಲಾನುಭವಿಗಳ ಯಶೋಗಾಥೆ ಸಂಗ್ರಹ ಕಾರ್ಯವಾಗಬೇಕು ಎಂದರು. ಸಮಿತಿಯ ಉಪಾಧ್ಯಕ್ಷ ನಾಸೀರ್ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಅಕ್ಕಿ ವಿತರಿಸಬೇಕು. ಯಾವುದೇ ಕಾರಣಕ್ಕು ಹಣ…
ಮಡಿಕೇರಿ ಮಾ.31 NEWS DESK : ಮಡಿಕೇರಿ ನಗರದ ವಿವಿಧೆಡೆ ಮುಸ್ಲಿಂ ಬಾಂಧವರ ಸಂಭ್ರಮದ ಹಬ್ಬ ಈದುಲ್ ಫಿತ್ರ್ ರಂಜಾ಼ನ್ ನನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮಗುರುಗಳು ಧರ್ಮಸಂದೇಶ ನೀಡಿ ಹಬ್ಬಗಳ ಆಚರಣೆಯ ಕುರಿತು ವಿವರಿಸಿದರು. ಲೋಕಕಲ್ಯಾಣಕ್ಕಾಗಿ ಎಲ್ಲರೂ ಪ್ರಾರ್ಥಿಸುವಂತೆ ಕರೆ ನೀಡಿದರು. ಪರಸ್ಪರ ಆಲಿಂಗನದ ಮೂಲಕ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡ ಮುಸ್ಲಿಂ ಬಾಂಧವರು, ಕುಟುಂಬ ವರ್ಗ ಹಾಗೂ ಸ್ನೇಹಿತರೊಂದಿಗೆ ವಿಶೇಷ ಖಾದ್ಯಗಳನ್ನು ಸವಿದರು. ಕಳೆದ ಒಂದು ತಿಂಗಳ ರಂಜಾ಼ನ್ ಉಪವಾಸಕ್ಕೆ ತೆರೆ ಎಳೆದರು.
ಮಡಿಕೇರಿ ಮಾ.31 NEWS DESK : ಮಡಿಕೇರಿಯ ಸಿ.ಪಿ.ಸಿ ಲೇಔಟ್ನ ಮಸ್ಜಿದ್ ಉರ್ ರ್ರಹ್ಮಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮ್ಮರ್ ಮೌಲವಿ ಮಾತನಾಡಿ ಕಳೆದ ಒಂದು ತಿಂಗಳಿನಿಂದ ರಂಜಾ಼ನ್ ಉಪವಾಸ ವ್ರತದಿಂದ ಲಭಿಸಿದ ತರಬೇತಿ, ದೇವ ಭಯ ಹಾಗೂ ಆಧ್ಯಾತ್ಮಿಕತೆಯನ್ನು ಮುಂದೆಯೂ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕು. ನಾವು ಅನುಭವಿಸುತ್ತಿರುವ ಸುಖ ಸೌಕರ್ಯಗಳು, ಆಸ್ತಿ-ಅಂತಸ್ತು ಹಾಗೂ ಸಂಪತ್ತು ಆ ದೇವನ ಅನುಗ್ರಹವಾಗಿದೆ. ಆದರಿಂದ ಅಲ್ಲಾಹನ ಇಷ್ಟ ದಾಸರಾಗಬೇಕು. ಇಂದು ಲೋಕದಲ್ಲಿ ಯಾರದ್ದೊ ಸ್ವಾರ್ಥ ಹಿತಾಸಕ್ತಿಗಳಿಂದಾಗಿ ನಿರಂತರ ಯುದ್ದಗಳ ಪರಿಣಾಮ ಮಕ್ಕಳು, ಮಹಿಳೆಯರು ಸೇರಿದಂತೆ ನಿರಪರಾಧಿಗಳ ಹತ್ಯೆಯಾಗುತ್ತಿದೆ. ಈ ಸಂದರ್ಭದಲ್ಲಿ ನಾವು ಅವರ ವಿಮೋಚನೆಗಾಗಿ ಪ್ರಾರ್ಥಿಸಬೇಕು, ಪರಸ್ಪರ ಪ್ರೀತಿ ಮತ್ತು ವಿಶ್ವಾಸ ಹಾಗು ಸೇವಾ ಮನೋಭಾವವನ್ನು ಅಳವಡಿಸಬೇಕು. ಇಂದು ಸಮಾಜಕ್ಕೆ ಮಾರಕವಾಗಿ ಪರಿಣಮಿಸಿರುವ ಮಾದಕ ವ್ಯಸನದ ವಿರುದ್ಧ ಜಾತಿ ಮತ ಬೇಧವಿಲ್ಲದೇ ಒಂದಾಗಿ ಹೋರಾಡಬೇಕು. ಯುವಕರು, ಯುವತಿಯರು ಮತ್ತು ಸಣ್ಣ ಮಕ್ಕಳು ಕೂಡ ಇದಕ್ಕೆ ಬಲಿಯಾಗುತ್ತಿರುವುದು ಅತಿ ದೊಡ್ಡ ದುರಂತ ಇಂತಹ ಸಂದರ್ಭದಲ್ಲಿ ನಾವು ನಮ್ಮ…
ಮಡಿಕೇರಿ ಮಾ.31 NEWS DESK : ಮನುಷ್ಯನ ಮನಸ್ಸು ಶುದ್ಧೀಕರಣಗೊಂಡಲ್ಲಿ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕಂಡಕರೆ ಮಹಲ್ ಖತೀಬರಾದ ಮುಸ್ತಫಾ ಸಖಾಫಿ ಅಭಿಪ್ರಾಯಪಟ್ಟರು. ಮುಸ್ಲಿಮ್ ಬಾಂಧವರ ಈದುಲ್ ಫಿತ್ರ್ ಹಬ್ಬದ ಈದ್ ನಮಾಝ್ ನೇತೃತ್ವ ವಹಿಸಿ ಕಂಡಕರೆ ಮಸ್ಜಿದ್ ತಖ್ವಾದಲ್ಲಿ ಮಾತನಾಡಿದ ಅವರು, ಮನಸ್ಸಿನಲ್ಲಿ ದ್ವೇಷ,ಅಸೂಯೆ ಇರಿಸಿಕೊಂಡು ಜೀವನ ನಡೆಸಬಾರದು. ಮನುಜರ ಮನಸ್ಸು ಸದಾ ಕಾಲ ಶುದ್ಧೀಕರಣದಿಂದರಬೇಕು. ಅದಲ್ಲದೇ ಮನಸ್ಸಿನಲ್ಲೊಂದು,ಹೊರಗಡೆ ಒಂದು ವ್ಯಕ್ತಿತ್ವ ಇರಬಾರದು. ನಮ್ಮ, ನಡೆ,ನುಡಿ ನೇರವಾಗಿರಬೇಕು ಎಂದು ಹೇಳಿದ ಅವರು, ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳಿಗೆ ಯುವ ಸಮುದಾಯ ಬಲಿಯಾಗುತ್ತಿದ್ದಾರೆ. ಡ್ರಗ್ಸ್, ಗಾಂಜಾ,ಇನ್ನಿತರ ಮಾದಕ ವ್ಯಸನಗಳಿಂದ ಯುವಕರು ದೂರವಿದ್ದು ಸಮಾಜದ ಯಶಸ್ವಿಗೆ ದುಡಿಯಬೇಕು ಎಂದು ಮುಸ್ತಫಾ ಸಖಾಫಿ ಕರೆ ನೀಡಿದರು. ಈದುಲ್ ಫಿತ್ರ್ ನಮಾಝಿನ ಬಳಿಕ ಕಂಡಕರೆ ಖಬರ್ ಸ್ಥಾನದಲ್ಲಿ ಮರಣವೊಂದಿದವರಿಗೆ ವಿಶೇಷ ಪಾರ್ಥನೆ ನೆರವೇರಿಸಲಾಯಿತು. ನಂತರ ಎಲ್ಲರೂ ಪರಸ್ಪರ ಹಸ್ತಲಾಘವ ಮಾಡುವುದರ ಮೂಲಕ ಈದುಲ್ ಫಿತ್ರ್ ಶುಭಕೋರಿದರು. ಈ ಸಂದರ್ಭ ಮಹಮ್ಮದ್ ಮುಸ್ಲಿಯಾರ್,ಕಂಡಕರೆ…
ಮಡಿಕೇರಿ ಮಾ.31 NEWS DESK : ಪೇರಡ್ಕ-ಗೂನಡ್ಕದಲ್ಲಿ ಸಂಭ್ರಮದ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇತಿಹಾಸ ಪ್ರಸಿದ್ಧ ಅತಿ ಪುರಾಣ ಪೇರಡ್ಕ-ಗೂನಡ್ಕ ಮೋಹಿಯದ್ದಿನ್ ಜುಮ ಮಸ್ಜಿದ್ ಖತೀಬ್ ಉಸ್ತಾದ ನಹೀಮ್ ಫೈಜಿ ಅಲ್ ಮಹಬರಿ ಈದ್ ಸಂದೇಶ ನೀಡಿ ಕೋಮು ಸೌಹಾರ್ದತೆ, ಕುಟುಂಬ ಜೀವನ,ರಂಜಾನ್ ಪಾವಿತ್ರತೆ ಬಗ್ಗೆ ತಿಳಿಸಿದರು. ಜಮಾ ಅತ್ ಸರ್ವರೂ ಪಾಲ್ಗೊಂಡು ಪರಸ್ಪರ ಸ್ನೇಹ ಮಿಲನ ಮಾಡಿಕೊಂಡರು. ಮೃತಪಟ್ಟವರಿಗೆ ಖಬರ್ ಸ್ಥಾನದಲ್ಲಿ ಝಿಯಾರತ್ ಮತ್ತು ಪೇರಡ್ಕ ವಲಿಯುಲ್ಲಾಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ನಡೆಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್, ಪದಾಧಿಕಾರಿಗಳದ ಟಿ.ಬಿ.ಹನೀಫ್, ಪಿ.ಕೆ.ಉಮ್ಮರ್ ಗೂನಡ್ಕ, ತೆಕ್ಕಿಲ್ ಮೊಹಮದ್ ಕುಂಞಿ ಪೇರಡ್ಕ, ಪಾಂಡಿ ಉಸ್ಮಾನ್, ಸಿನಾನ್ ದರ್ಕಾಸ್, ಡಿ.ಎ.ಮೊಯಿದು ದರ್ಕಾಸ್ ಗೂನಡ್ಕ, ಭಾತಿಶ ತೆಕ್ಕಿಲ್ ಸೆಟ್ಟಿಯಡ್ಕ, ಎಂ.ಆರ್.ಡಿ.ಎ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ, ಎಸ್.ಕೆ.ಎಸ್.ಎಸ್.ಎಫ್.ಅಧ್ಯಕ್ಷ ಮುನೀರ್ ಧಾರಿಮಿ, ಅಕ್ಬರ್ ಕರಾವಳಿ, ಪಾಂಡಿ ಅಬ್ಬಾಸ್ ನಿವೃತ್ತ ಅರಣ್ಯ ಅಧಿಕಾರಿ ಯೂಸುಫ್, ತಾಲೂಕು ಕಚೇರಿ ಸಿಬ್ಬಂದಿ ರಜಾಕ್ ಮೊದಲಾದವರು ಭಾಗವಹಿಸಿದರು. …
ಮಡಿಕೇರಿ ಮಾ.31 NEWS DESK : ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್ ಅವರು ವಿರಾಜಪೇಟೆ ತಾಲೂಕಿನ ಬೇಟೊಳಿ ಗ್ರಾಮದ ಚಿಟ್ಟಡೆ ಸರ್ಕಾರಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿˌ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದರು. ನಂತರ ಮಾತನಾಡಿದ ಅವರು ಕೇಂದ್ರ ಸರ್ಕಾರದ ಹಲವಾರು ಗ್ರಾಮ ಕಲ್ಯಾಣ ಯೋಜನೆಗಳ ಮೂಲಕ ಜಿಲ್ಲೆಯಾದ್ಯಂತ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಾಹಾರ ನೀಡುವುದಾಗಿ ಭರವಸೆ ನೀಡಿದರು.
*ಕೃತಜ್ಞತೆ, ಪರಿಶ್ರಮ, ಕ್ಷಮೆ, ಕರುಣೆ ಬಾಳಿನ ಬೆಳಕಾಗಲಿ ಸರ್ವರಿಗೂ ಹಬ್ಬಗಳು ಒಳಿತು ಮಾಡಲಿ*






