ಲೇಖಕ: admin

ವಿರಾಜಪೇಟೆ ಮೇ 1 NEWS DESK :  ದಕ್ಷಿಣ ಕನ್ನಡದಲ್ಲಿ ಪ್ರಚಲಿತದಲ್ಲಿರುವ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಮೇ 5 ರಂದು ಕಡಂಗಮೂರೂರು ಗ್ರಾಮದ ನಾಲ್ಕನೇ ಮೈಲಿನಲ್ಲಿ ನಡೆಯಲಿದೆ. ವಿರಾಜಪೇಟೆ ತಾಲ್ಲೂಕಿನ ಕಡಂಗಮೂರೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಲ್ಕನೇ ಮೈಲಿಯ ಪಿ.ಪಿ. ಲೋಕೇಶ್ ಅವರ ಮನೆಯಲ್ಲಿ 3ನೇ ವರ್ಷದ ದೈವಗಳ ನೇಮೋತ್ಸವ ನಡೆಯಲಿದೆ. ಮೇ 5 ರಂದು ಸಂಜೆ ದೈವಗಳಿಗೆ ಅಲಂಕಾರ ಸೇವೆ, ಮಹಾಪೂಜೆ, ಚಂಡೆವಾದ್ಯ ನಂತರ ಪಾಷಾಣಮೂರ್ತಿ ದೈವ ಮತ್ತು ಇತರ ದೈವಗಳ ದರ್ಶನ ಬಳಿಕ ಅನ್ನಸಂತರ್ಪಣೆ ಜರುಗಲಿದೆ. ಅಣ್ಣಪ್ಪ ಪಂಜರ್ಲಿ ದೈವ ನೇಮ, ವರ್ಣ ಪಂಜುರ್ಲಿ ದೈವ ಮತ್ತು ಪಾಷಾಣಮೂರ್ತಿ ದೈವಗಳ ನೇಮ ನಡೆಯಲಿದೆ. ಮೇ 6 ರಂದು ಬೆಳಿಗ್ಗೆ ಗುಳಿಗ ಮತ್ತು ಕೊರಗಜ್ಹ ದೈವಗಳ ನೇಮ ನಡೆಯಲಿದೆ. ದೈವಗಳಿಗೆ ಪ್ರಸಾದ ಅರ್ಪಣೆ, ಅಗಮಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಪಿ.ಪಿ.ಲೋಕೇಶ್ 8105403505, ಪ್ರಮೀಳಾ 8867147501, ವಾಣಿ : 8147704308 ಮತ್ತು ಜಗದೀಶ್ : 9482332337 ಸಂಖ್ಯೆ…

Read More

ಮಡಿಕೇರಿ ಮೇ 1 NEWS DESK  : ಮಡಿಕೇರಿಯ ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ದಿ. ಸಿ.ವಿ.ಶಂಕರ್ ಸ್ವಾಮಿ‌ ಸ್ಮರಣಾರ್ಥ ಏರ್ಪಡಿಸಿಕೊಂಡು ಬರಲಾಗುತ್ತಿರುವ 32ನೇ ವರ್ಷದ ಉಚಿತ ಮಕ್ಕಳ ಬೇಸಿಗೆ ಕ್ರೀಡಾ ಶಿಬಿರದ ಸಮರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಮೇ 3 ರಂದು ಬೆಳಿಗ್ಗೆ 8.30 ಗಂಟೆಗೆ ನಡೆಯಲಿದೆ. ವಾಂಡರರ್ಸ್ ಅಧ್ಯಕ್ಷ  ಕೋಟೇರ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ ತಂಡದ ಹಾಕಿ ಆಟಗಾರ ವಿ.ಎಸ್.ವಿನಯ್,  ಹಿರಿಯ ಹಾಕಿ ಆಟಗಾರ ಕೆ.ಎ.ಗಣೇಶ್ ಉಪಸ್ಥಿತರಿರುವರು ಎಂದು ಶಿಬಿರದ ಸಂಚಾಲಕ ಬಾಬು ಸೋಮಯ್ಯ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 1 NEWS DESK : ಶಾಂತಿಯುತ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ಭಗವಾನ್ ಬುದ್ಧನ ಸಂದೇಶಗಳು ಮಾರ್ಗದರ್ಶಿಯಾಗಿದೆ ಎಂದು ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ನಡೆದ ಭಗವಾನ್ ಬುದ್ಧ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘರ್ಷ, ಪರಿಸರ ಸಮಸ್ಯೆ, ಸಾಮಾಜಿಕ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಬುದ್ಧನ ಸಂದೇಶಗಳು ಪ್ರಸ್ತುತವಾಗಿದೆ. ಅಹಿಂಸೆ, ದಯೆ, ಆತ್ಮನಿಗ್ರಹ ಹಾಗೂ ಸಕಲ ಜೀವಿಗಳ ಗೌರವಯುತ ತತ್ವಗಳು ಶಾಂತಿಯುತ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ಅವರು ಹೇಳಿದರು. ಭಗವಾನ್ ಬುದ್ಧನ ಜೀವನ ಮತ್ತು ಉಪದೇಶಗಳಿಗೆ ಸಂಬಂಧಿಸಿದ ಪವಿತ್ರ ಭೂಮಿಯಾಗಿರುವ ಭಾರತ ದೇಶವು ಧನ್ಯವಾಗಿದೆ. ಗೌತಮ ಬುದ್ಧನ ಜೀವನ ಮತ್ತು ಬೋಧನೆಗಳಲ್ಲಿ ಸಾರನಾಥ ಮತ್ತು ಕುಶಿನಗರ ಅತ್ಯಂತ ಪ್ರಮುಖವಾದ, ಪವಿತ್ರವಾದ ಎರಡು ಸ್ಥಳಗಳಾಗಿದ್ದು, ವಿಶ್ವದಾದ್ಯಂತ ಭಕ್ತರನ್ನು ಆಕರ್ಷಿಸುತ್ತಿದೆ. ಈ ಸಂದರ್ಭ ಬುದ್ಧನ ಆದರ್ಶನಗಳನ್ನು…

Read More

ಮಡಿಕೇರಿ ಮೇ 1 NEWS DESK :  ಖ್ಯಾತ ಅಂತರಾಷ್ಟ್ರೀಯ ಹಾಕಿ ಪಟು, ಮಾಜಿ ಒಲಂಪಿಯನ್, ಭಾರತ ಹಾಕಿ ತಂಡದ ಮಾಜಿ ಗೋಲ್ ಕೀಪರ್ ಎ.ಬಿ.ಸುಬ್ಬಯ್ಯನವರ ನಿವಾಸಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಎ.ಬಿ.ಸುಬ್ಬಯ್ಯ ಅವರು ತಂದೆ ಅಂಜಪರವಂಡ ಬೋಪಯ್ಯ ತಮ್ಮ 92 ವರ್ಷ ಪ್ರಾಯದಲ್ಲಿ ನಿಧನರಾಗಿದ್ದ ಹಿನ್ನಲೆಯಲ್ಲಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ನಿವೃತ್ತ ಡಿ.ಸಿ.ಎಫ್ ವಾಟೇರಿರ ಕಾರ್ಯಪ್ಪ, ಪ್ರಮುಖರಾದ ಸೂರಜ್ ಹೊಸೂರು ಹಾಜರಿದ್ದರು.

Read More

ಮಡಿಕೇರಿ ಮೇ 1 NEWS DESK : ವಿರಾಜಪೇಟೆ ತಾಲ್ಲೂಕಿನ ಕಡಂಗಮರೂರು ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಗ್ರಾಮದ ಪ್ರಸಿದ್ಧ ಶ್ರೀ ಭದ್ರಕಾಳಿ ಹಾಗೂ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಇದೇ ಸಂದರ್ಭ ದೇವಸ್ಥಾನಕ್ಕೆ ತೆರಳುವ ನೂತನ ರಸ್ತೆ ಲೋಕಾರ್ಪಣೆ ಮಾಡಿದ  ಶಾಸಕರು,  ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ತಮ್ಮ ಅನುದಾನದ 3 ಲಕ್ಷದಲ್ಲಿ ರಸ್ತೆಯನ್ನು ನಿರ್ಮಿಸಿ ಕೊಟ್ಟಿದ್ದು, ಲೋಕಾರ್ಪಣೆಯನ್ನು ಗೊಳಿಸಿ ಶುಭ ಹಾರೈಸಿದರು.  ತಕ್ಕ ಮುಖ್ಯಸ್ಥರು, ಪಕ್ಷದ ಮುಖಂಡರು ಮಂಡೆಟೀರ ಅನಿಲ್, ಮಂಡೆಪಂಡ ರೋಷನ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಗೋಣಿಕೊಪ್ಪ ಮೇ 1 NEWS DESK : ಗೊಂದಲಗೊಂಡ ಮನಸ್ಸನ್ನು ನಿರಾಳತೆ, ನಿರ್ಮಲತೆಗೆ ಕೊಂಡೊಯ್ಯಲು ದೇವಲಾಯದ ವಾತಾವರಣದಿಂದ ಸಾಧ್ಯ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹೊಸೂರು ಸತೀಶ್‍ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಜೀರ್ಣೋದ್ಧಾರಗೊಂಡ ಭಾಗಮಂಡಲ ತಾವೂರು ಗ್ರಾಮದ ಶ್ರೀ ಮಹಿಷಾಸುರ ಮರ್ಧಿನಿ ದೇವಸ್ಥಾನದ ನವೀಕೃತ ಪೌಳಿಯನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತನ್ನ ನೋವುಗಳನ್ನು ಸಂಕೋಚವಿಲ್ಲದೆ ವ್ಯಕ್ತಪಡಿಸಿಕೊಳ್ಳಲು ದೇವಾಲಯಗಳ ಅವಶ್ಯಕತೆಇದೆ. ಗರ್ಭಗುಡಿಯಲ್ಲಿ ಸ್ಥಾಪಿಸಿರುವ ದೇವರ ಮೂರ್ತಿಗಳು ಮನುಷ್ಯನ ಬದುಕಿಗೆ ಆಶಾಭಾವನೆಯ ಶಕ್ತಿಯನ್ನು ತುಂಬಬಲ್ಲದು. ಹೀಗಾಗಿ ಪ್ರಾರ್ಥನೆ ಮತ್ತು ಧಾರ್ಮಿಕ ಕಾರ್ಯಗಳು ಪ್ರತಿಯೊಬ್ಬನಿಗೂ ಅಗತ್ಯ ಎಂದು ತಿಳಿಸಿದರು. ಮನುಷ್ಯನ ಮನದೊಳಗೆ ಅಡಗಿರುವ ರಹಸ್ಯ ವಿಚಾರಗಳನ್ನು ಮತ್ತೊಬ್ಬ ವ್ಯಕ್ತಿಯೊಂದಿಗೆ ಹಂಚಿಕೊಂಡಾಗ ಅದು ಅಪಾಯದ ಸನ್ನಿವೇಶಗಳನ್ನು ತರಬಹುದು, ಆದರೆ ದೇವಾಲಯದಲ್ಲಿರುವ ದೇವರ ಮೂರ್ತಿಯೊಂದಿಗೆ ಮನಸ್ಸು ಮತ್ತು ಗರ್ಭಗುಡಿಯಲ್ಲಿನ ಸ್ಥಾಪಿತ ಮೂರ್ತಿಯೊಂದಿಗೆ ಮನದ ಮಾತುಕತೆ ನಡೆಸಿದಾಗ ಮನಸು ಶಾಂತಿಯುತವಾಗಿರಲು ಸಾಧ್ಯವಾಗಬಲ್ಲದು ಎಂದು ತಿಳಿಸಿದರು. ಧಾರ್ಮಿಕ ಆಚರಣೆಗಳಿಗೆ,ಸಮಾನತೆಯ ವ್ಯವಸ್ಥೆಗಳಿಗೆ ದೇವಸ್ಥಾನಗಳು ಸ್ಥಳೀಯ ಗ್ರಾಮಗಳ ಶಕ್ತಿಯಾಗುತ್ತದೆ ಎಂದು ಹೇಳಿದರು. ದೇವಸ್ಥಾನದಲ್ಲಿ ಬಾರಿಸುವ ಗಂಟೆಯ…

Read More

ಮಡಿಕೇರಿ ಮೇ 1 NEWS DESK : ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಮೇ 3 ರಿಂದ ಮೇ 6ರ ವರಗೆ ಶ್ರೀ ಮಾರಿಯಮ್ಮ ಕರಗೋತ್ಸವ ನಡೆಯಲಿದೆ. ಮೇ 3 ರಂದು ಪಂಪಿನ ಕೆರೆಯಿಂದ ಶ್ರೀ ಕಂಚಿ ಕಾಮಾಕ್ಷಿಯಮ್ಮ, ಶ್ರೀ ಮುತ್ತು ಮಾರಿಯಮ್ಮ ಬೇವಿನ ಸೊಪ್ಪಿನ ಕರಗಗಳು ಶೃಂಗಾರಗೊಂಡು ಸಂಜೆ ಅಲ್ಲಿಂದ ವಿಶೇಷ ಪೂಜೆಯ ನಂತರ ಮೆರವಣಿಗೆ ಮೂಲಕ ಹೊರಟು ಮುಖ್ಯಬೀದಿಗಾಗಿ ದೇವಾಲಯ ಸೇರಲಿದೆ. ಮೇ 4 ಮತ್ತು 5 ರಂದು ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಕರಗಗಳಿಗೆ ವಿಶೇಷ ಪೂಜೆ ನಡೆಯಲಿದ್ದು, ಮೇ 6 ರಂದು ಬುಧವಾರ ಕರಗಗಳ ವಿಸರ್ಜನೋತ್ಸವ ನಡೆಯಲಿದೆ.  ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ಮನವಿ ಮಾಡಿದೆ. ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಹಿಂದಿನ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿದ್ದ ಶ್ರೀ ಮಾರಿಯಮ್ಮ ಬೇವಿನ ಸೊಪ್ಪಿನ ಕರಗೋತ್ಸವ ನಾಡಿನಲ್ಲಿ ಭೀಕರ ಸಾಂಕ್ರಾಮಿಕ ರೋಗಗಳನ್ನು ತಡೆಕಟ್ಟಲು ಈ…

Read More

ಮಡಿಕೇರಿ ಮೇ 1 NEWS DESK : ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಕೊಡವ ಕುಟುಂಬಗಳ ನಡುವೆ ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜಿತ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ಯ ಫೈನಲ್ಸ್ ಪಂದ್ಯದಲ್ಲಿ ಚೆಕ್ಕೇರ ತಂಡ 9ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಮಹಿಳಾ ಕ್ರಿಕೆಟ್‍ನಲ್ಲಿ ಹರಿಹರ ಮುಕ್ಕಾಟಿರ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇದೇ ಮೊದಲ ಬಾರಿಗೆ ಫೈನಲ್ ಹಂತ ಪ್ರವೇಶಿಸಿದ ಕೆದಮಳ್ಳೂರು ಮಾಳೇಟಿರ ಕುಟುಂಬದ ಪುರುಷರ ತಂಡ ಹಾಗೂ ಮಣವಟ್ಟಿರ ಕುಟುಂಬದ ಮಹಿಳಾ ತಂಡ ರನ್ನರ್ಸ್ ಸ್ಥಾನವನ್ನು ತಮ್ಮದಾಗಿಸಿಕೊಂಡವು. *ರೋಚಕ ಪಂದ್ಯಾಟ* ಬೆಳಗೆ ನಡೆದ ಮಹಿಳಾ ತಂಡದ ಫೈನಲ್ ಪಂದ್ಯದಲ್ಲಿ ಮೊದಲಿಗೆ ಟಾಸ್ ಗೆದ್ದ ಮಣವಟ್ಟಿರ ತಂಡ ಬ್ಯಾಟಿಂಗ್ ಅಯ್ದುಕೊಂಡಿತು. ಆರಂಭದಲ್ಲೇ ಅತ್ಯುತ್ತಮ ಹೋರಾಟಕ್ಕೆ ಇಳಿದ ಮಣವಟ್ಟಿರ ಮಹಿಳಾ ಆಟಗಾರರು ನಿಗಧಿತ 6 ಓವರ್ ಮುಕ್ತಾಯಕ್ಕೆ ರನ್ ಔಟ್‍ನಲ್ಲಿ 1 ವಿಕೆಟ್ ಕಳೆದುಕೊಂಡು 41 ರನ್ ಗಳಿಸಿ, ಎದುರಾಳಿ ಹರಿಹರ ಮುಕ್ಕಾಟಿರ…

Read More

ಗೋಣಿಕೊಪ್ಪ ಮೇ 1 NEWS DESK : ಕೃಷಿ ವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕ ಆಧಾರಿತ ಪೋಷಕಾಂಶ ಕುರಿತು ಕಾಫಿ ಬೆಳೆಗಾರರಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಭಾಗವಹಿಸಿದ 62 ಕಾಫಿ ಬೆಳೆಗಾರರಿಗೆ ಮತ್ತು ರೈತರಿಗೆ ವೈಜ್ಞಾನಿಕ ಆಧಾರಿತ ರಸಗೊಬ್ಬರ ಬಳಕೆಯ ಮಹತ್ವವನ್ನು, ಮಣ್ಣಿನ ಆರೋಗ್ಯ ಸುಧಾರಣೆ, ಸಸ್ಯಗಳ ರೋಗನಿರೋಧಕ ಶಕ್ತಿ ಹೆಚ್ಚಳ, ಉತ್ಪಾದಕತೆ ವೃದ್ಧಿ ಹಾಗೂ ಆಮದು ಅವಲಂಬನೆ ಕಡಿತ ಸಾಧ್ಯವಾಗುವುದನ್ನು ತಜ್ಞರು ವಿವರಣೆ ನೀಡಿದರು. ವಿಶೇಷವಾಗಿ ಜೈವಿಕ ಗೊಬ್ಬರಗಳ ಬಳಕೆ ಮತ್ತು ವರ್ಮಿಕಂಪೋಸ್ಟ್, ಜೀವಾಮೃತ, ಪಂಚಗವ್ಯ, ನೀಂ ಕೇಕ್, ಹೊಂಗೆ ಕೇಕ್, ಟ್ರೈಕೋಡರ್ಮಾ ಇವುಗಳನ್ನು ಬಳಸಿ ಮಣ್ಣಿನ ಆರ್ಗಾನಿಕ್ ಕಾರ್ಬನ್, ಜೀವ ವೈವಿಧ್ಯತೆಯನ್ನು ಹೆಚ್ಚಿಸಬಹುದು ಎಂದು ತಿಳಿಸಲಾಯಿತು. ಸೂಕ್ಷ್ಮ ಪೋಷಕಾಂಶಗಳ ಮಹತ್ವವನ್ನು ವಿವರಿಸಿ, “ಹಿಡನ್ ಹಂಗರ್” ಸಮಸ್ಯೆಯನ್ನುತಪ್ಪಿಸಲು ಮತ್ತು ಸಮತೋಲನ ಪೋಷಣೆಯನ್ನುಒದಗಿಸಲು ಮಾಹಿತಿ ನೀಡಲಾಯಿತು. ಪೊನ್ನಂಪೇಟೆತಾಲೂಕು ಸಹಾಯಕ ಕೃಷಿ ನಿರ್ದೇಶಕದೊರೈರಾಜ್, ಕೊಡಗು ಕೃಷಿ ಇನ್‍ಪುಟ್‍ಡೀಲರ್ಸ್ ಸಂಘದಅಧ್ಯಕ್ಷ ನಂದಕುಮಾರ್, ಸೇರಿದಂತೆಕೇಂದ್ರದ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಇದ್ದರು.

Read More

ಮಡಿಕೇರಿ ಮೇ 1 NEWS DESK : ಪ್ರಾಚೀನ ಕೊಡವ ಸಾಂಪ್ರದಾಯಿಕ ಆವಾಸಸ್ಥಾನದ ಪ್ರಾದೇಶಿಕ ಮಿತಿಯೊಳಗೆ ಪ್ರತ್ಯೇಕ ಕೊಡವ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿ ಕ್ಷೇತ್ರಗಳ ಸ್ಥಾಪನೆ, ಅಥವಾ ಪರ್ಯಾಯವಾಗಿ ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಚುನಾವಣಾ ಕ್ಷೇತ್ರದ ಮಾದರಿಯಲ್ಲಿ ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಕೊಡವರಿಗಾಗಿ ಪ್ರತ್ಯೇಕ ಅಮೂರ್ತ ಕೊಡವ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿ ಕ್ಷೇತ್ರಗಳನ್ನು ರಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲು ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಭಿಯಾನವನ್ನು ಆರಂಭಿಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ತಲಕಾವೇರಿಯಲ್ಲಿ ಧಾರ್ಮಿಕ ಪ್ರಾರ್ಥನೆ ಸಲ್ಲಿಸಿ ಕೊಡವರ ಸಾಂವಿಧಾನಿಕ ಉದ್ದೇಶಕ್ಕಾಗಿ ದೈವಿಕ ಆಶೀರ್ವಾದವನ್ನು ಕೋರಿದ ಸದಸ್ಯರು ಮಾನವ ಸರಪಳಿ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಸಿಎನ್‍ಸಿ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ಮೇ 12 ರಿಂದ 48 ಗಂಟೆಗಳ ಹಗಲು-ರಾತ್ರಿ ಶಾಂತಿಯುತ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಎನ್.ಯು.ನಾಚಪ್ಪ ತಿಳಿಸಿದರು.…

Read More