ಮಡಿಕೇರಿ, NEWS DESK ಸೆ. 9: ನಗರದ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ದೇವಾಲಯದಲ್ಲಿ ರಾತ್ರಿ ವಿಶೇಷ ಪೂಜೆ ನೆರವೇರಿತು. ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ವತಿಯಿಂದ ವಿಶೇಷ ಭಜನಾ ಕಾರ್ಯಕ್ರಮವೂ ನಡೆಯಿತು. ರೋಮಾಂಚನ ಮೂಡಿಸಿದ ಮೊಸರು ಕುಡಿಕೆ ಸ್ಪರ್ಧೆ ಶ್ರೀ ಕೃಷ್ಣ ಜಯಂತಿ ಅಂಗವಾಗಿ ದೇವಾಲಯದ ವತಿಯಿಂದ ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಕಿರಣ್ ಕನಕರಾಜ್ ಹಾಗೂ ಅರುಣ್ ಚಿನ್ನಣ್ಣ ಅವರು ಮೊಸರು ಕುಡಿಕೆ ಒಡೆಯುವಲ್ಲಿ ಯಶಸ್ವಿಯಾದರು. ಸುತ್ತಲೂ ರಭಸದ ನೀರಿನ ಹೊಡೆತಗಳಿದ್ದರೂ ಅದನ್ನು ಲೆಕ್ಕಿಸದೆ ಇಬ್ಬರೂ ಸಾಹಸದಿಂದ ಮೊಸರು ಕುಡಿಕೆ ಒಡೆದು ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ಶ್ರೀ ಕೃಷ್ಣ ಹಾಗೂ ರಾಧೆಯ ಛದ್ಮವೇಷ ಸ್ಪರ್ಧೆ ಕೂಡ ಎಲ್ಲರ ಗಮನ ಸೆಳೆಯಿತು. 30ಕ್ಕೂ ಅಧಿಕ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಛದ್ಮವೇಷ ಸ್ಪರ್ಧೆಯಲ್ಲಿ…
ಲೇಖಕ: admin
ಮಡಿಕೇರಿ, NEWS DESK ಸೆ. 9: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಜೇನುಕಲ್ಲು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಟಿ.ಕೆ. ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿ.ಕೆ. ಚಂದ್ರಶೇಖರ್, ಪ್ರಸಕ್ತ ಸಾಲಿನಲ್ಲಿ ಸಂಘವು ರೂ.6.78 ಲಕ್ಷ ಲಾಭ ಗಳಿಸಿದೆ ಎಂದು ತಿಳಿಸಿದರು. ಹಾಲು ಉತ್ಪಾದಕ ರೈತರು ಸಂಘಕ್ಕೆ ಗುಣಮಟ್ಟದ ಹಾಲು ಪೂರೈಸುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಸಂಘದ ಸದಸ್ಯರ ಹಸುಗಳಿಗೆ ಉಚಿತ ಗರ್ಭಧಾರಣೆ ಹಾಗೂ ವಿಮಾ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು. ಹೈನುಗಾರಿಕೆಗೆ ಪೂರಕವಾಗುವಂತೆ ಸಾಲ ಸೌಲಭ್ಯಗಳ ಯೋಜನೆಗಳಲ್ಲಿ ರಿಯಾಯಿತಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಹೊಸ ಯೋಜನೆಗಳನ್ನು ಜಾರಿಗೊಳಿಸಿ ರೈತ ಸದಸ್ಯರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಅವರು ಹೇಳಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹಾಸನ ಹಾಲು…
ಮಡಿಕೇರಿ NEWS DESK ಸೆ.9: ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ವತಿಯಿಂದ ದೇವಟ್ ಪರಂಬ್ ಕೊಡವ ಹತ್ಯಾಕಾಂಡ ಸ್ಮಾರಕ ಹಾಗೂ ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಕೊಡವ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕೊಡವರ ಯೋಗಕ್ಷೇಮಕ್ಕಾಗಿ ಹಾಗೂ ಕೊಡವಲ್ಯಾಂಡ್ಗೆ ವಿಶೇಷ ಸಾಂವಿಧಾನಿಕ ಸ್ಥಾನಮಾನ ದೊರೆಯಬೇಕೆಂಬ ಹೋರಾಟಕ್ಕೆ ಆಶೀರ್ವಾದ ಕೋರಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ 1633ರಿಂದ 1834ರವರೆಗೆ ನಡೆದ ಕರಾಳ ಆಡಳಿತದ ಅವಧಿಯಲ್ಲಿ ಕೊಡವರು ಎದುರಿಸಿದ ದುರಂತಗಳನ್ನು ಸ್ಮರಿಸಲಾಯಿತು. 1785ರ ಡಿಸೆಂಬರ್ 12ರಂದು ಮೈಸೂರು ಸುಲ್ತಾನರ ಪಡೆಗಳು ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರ ಸಹಯೋಗದೊಂದಿಗೆ ನಡೆಸಿದ ದಾಳಿಯನ್ನೂ ಸ್ಮರಿಸಲಾಯಿತು. ಪ್ರಾರ್ಥನಾ ವಿಧಿಗಳಲ್ಲಿ ಲೆ. ಕರ್ನಲ್ ಬಿ.ಎಂ. ಪಾರ್ವತಿ, ಪಟ್ಟಮಾಡ ಕುಶ, ಅರೆಯಡ ಗಿರೀಶ್ ತಿಮ್ಮಯ್ಯ, ಮಂಡಪಂಡ ಮನೋಜ್ ಮಂದಣ್ಣ, ಕೊಟ್ಟಕತಿರ ಬಾಬಿ ಪಲಂಗಪ್ಪ, ಮಂಡಪಂಡ ದೀಪಕ್ ಗಣಪತಿ, ಅಪ್ಪಾರಂಡ ಶ್ರೀನಿವಾಸ್ ನಂಜಪ್ಪ, ಪಾಲೇಕಂಡ ಪ್ರಧಾನ್ ಪೂಣಚ್ಚ ಹಾಗೂ ಐತಿಚಂಡ ಪೂವಣ್ಣ ಭಾಗವಹಿಸಿದ್ದರು.
ಮಡಿಕೇರಿ NEWS DESK ಸೆ.9: ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ವತಿಯಿಂದ ದೇವಟ್ ಪರಂಬ್ ಕೊಡವ ಹತ್ಯಾಕಾಂಡ ಸ್ಮಾರಕ ಹಾಗೂ ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಕೊಡವ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕೊಡವರ ಯೋಗಕ್ಷೇಮಕ್ಕಾಗಿ ಹಾಗೂ ಕೊಡವಲ್ಯಾಂಡ್ಗೆ ವಿಶೇಷ ಸಾಂವಿಧಾನಿಕ ಸ್ಥಾನಮಾನ ದೊರೆಯಬೇಕೆಂಬ ಹೋರಾಟಕ್ಕೆ ಆಶೀರ್ವಾದ ಕೋರಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ 1633ರಿಂದ 1834ರವರೆಗೆ ನಡೆದ ಕರಾಳ ಆಡಳಿತದ ಅವಧಿಯಲ್ಲಿ ಕೊಡವರು ಎದುರಿಸಿದ ದುರಂತಗಳನ್ನು ಸ್ಮರಿಸಲಾಯಿತು. 1785ರ ಡಿಸೆಂಬರ್ 12ರಂದು ಮೈಸೂರು ಸುಲ್ತಾನರ ಪಡೆಗಳು ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರ ಸಹಯೋಗದೊಂದಿಗೆ ನಡೆಸಿದ ದಾಳಿಯನ್ನೂ ಸ್ಮರಿಸಲಾಯಿತು. ಪ್ರಾರ್ಥನಾ ವಿಧಿಗಳಲ್ಲಿ ಲೆ. ಕರ್ನಲ್ ಬಿ.ಎಂ. ಪಾರ್ವತಿ, ಪಟ್ಟಮಾಡ ಕುಶ, ಅರೆಯಡ ಗಿರೀಶ್ ತಿಮ್ಮಯ್ಯ, ಮಂಡಪಂಡ ಮನೋಜ್ ಮಂದಣ್ಣ, ಕೊಟ್ಟಕತಿರ ಬಾಬಿ ಪಲಂಗಪ್ಪ, ಮಂಡಪಂಡ ದೀಪಕ್ ಗಣಪತಿ, ಅಪ್ಪಾರಂಡ ಶ್ರೀನಿವಾಸ್ ನಂಜಪ್ಪ, ಪಾಲೇಕಂಡ ಪ್ರಧಾನ್ ಪೂಣಚ್ಚ ಹಾಗೂ ಐತಿಚಂಡ ಪೂವಣ್ಣ ಭಾಗವಹಿಸಿದ್ದರು.
ಸೋಮವಾರಪೇಟೆ NEWS DESK ಸೆ.9: ಕೊಡಗಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ದೇವಸ್ಥಾನಗಳ ಅಭಿವೃದ್ಧಿ ಹಾಗೂ ಜೀರ್ಣೋದ್ಧಾರಕ್ಕೆ ಶಾಸಕ ಡಾ. ಮಂತರ್ ಗೌಡ ವಿಶೇಷ ಕಾಳಜಿ ವಹಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಶ್ರೀ ವೀರಭದ್ರೇಶ್ವರ ಸ್ವಾಮಿ, ಕನ್ನಂಬಾಡಿ ಅಮ್ಮ ಹಾಗೂ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 50 ಲಕ್ಷ ಅನುದಾನ ಒದಗಿಸುವಂತೆ ಶಾಸಕ ಡಾ. ಮಂತರ್ ಗೌಡ ಅವರು ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಸಚಿವ ಕೆ.ಎಸ್. ಬಸವಂತಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ದೇವಸ್ಥಾನಗಳ ಮೂಲಸೌಕರ್ಯ ಅಭಿವೃದ್ಧಿ, ಜೀರ್ಣೋದ್ಧಾರ ಹಾಗೂ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರದ ಮೂಲಕವೂ ಮನವಿ ಮಾಡಲಾಗಿದೆ. ಶಾಸಕರ ಈ ಪ್ರಯತ್ನದಿಂದ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಅಬ್ಬೂರುಕಟ್ಟೆ ವಲಯ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್ ಹೊಸಳ್ಳಿ, ಮುಖಂಡರಾದ ಅರುಣ್ ಕೊತ್ನಳ್ಳಿ, ನೇಗಳ್ಳೆ-ಕರ್ಕಳ್ಳಿ ಬೂತ್ ಅಧ್ಯಕ್ಷರಾದ ಮೇಘ ಹಾಗೂ ಪರಮೇಶ್ ಉಪಸ್ಥಿತರಿದ್ದರು.…
ಸೋಮವಾರಪೇಟೆ NEWS DESK ಸೆ.9 : ಸೋಮವಾರಪೇಟೆ ಪಟ್ಟಣದಲ್ಲಿರುವ ತಾಲ್ಲೂಕು ಆಸ್ಪತ್ರೆ ವೈದ್ಯರ ಕೊರತೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಂದಾಗಿ ರೋಗಿಗಳ ಪಾಲಿಗೆ ನರಕದ ಕೂಪದಂತಾಗಿದೆ ಎಂಬ ಆರೋಪ ಕೇಳಿಬಂದಿದೆ. ಸುತ್ತಮುತ್ತಲಿನ ನೂರಾರು ರೋಗಿಗಳು ಪ್ರತಿನಿತ್ಯ ಆಸ್ಪತ್ರೆಗೆ ಬರುತ್ತಿದ್ದು, ಅಗತ್ಯ ಸಂಖ್ಯೆಯಲ್ಲಿ ವೈದ್ಯರು ಲಭ್ಯವಿಲ್ಲದೆ ಪರದಾಡುವಂತಾಗಿದೆ. ದಾಖಲೆ ಹಾಗೂ ಹೆಸರಿಗಷ್ಟೇ ಏಳೆಂಟು ವೈದ್ಯರುಗಳಿದ್ದರೂ, ಹೊರರೋಗಿಗಳ ವಿಭಾಗದಲ್ಲಿ ದಿನನಿತ್ಯ ಕೇವಲ ಒಬ್ಬರು ಅಥವಾ ಇಬ್ಬರು ವೈದ್ಯರು ಮಾತ್ರ ಲಭ್ಯವಿರುವ ಪರಿಸ್ಥಿತಿ ಇದೆ. ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹಾಗೂ ಆಂತರಿಕ ಸಮಸ್ಯೆಗಳಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ವೈದ್ಯರ ಕೊರತೆಯ ಜೊತೆಗೆ ಕೆಲವು ಔಷಧಿ ಮತ್ತು ಮಾತ್ರೆಗಳು ಆಸ್ಪತ್ರೆಯಲ್ಲಿ ಲಭ್ಯವಿಲ್ಲದೆ, ಹೊರಗಿನ ಔಷಧಿ ಅಂಗಡಿಗಳಿoದ ಖರೀದಿಸಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ ಎನ್ನುವ ಆರೋಪವಿದೆ. ವೈದ್ಯರ ಕೊರತೆ ಇರುವುದು ನಿಜವಾದರೂ, ಮಡಿಕೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿರುವ ಕೆಲವು ವೈದ್ಯರನ್ನು ವಾರದಲ್ಲಿ ಮೂರು ಅಥವಾ ನಾಲ್ಕು ದಿನ ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ನಿಯೋಜಿಸುವ ಮೂಲಕ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸಬಹುದಾಗಿದೆ. ಆದರೆ ಈ…
ಮೂರ್ನಾಡು ಸೆ.8 NEWS DESK : ಸಹಕಾರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ 102ನೇ ವರ್ಷದ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಕಾರ್ಯಕ್ರಮವು ಸಂಭ್ರಮದಿಂದ ಹಾಗೂ ಅತ್ಯಂತ ಯಶಸ್ವಿಯಾಗಿ ನಡೆಯಿತು. ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಆಟೋಟಗಳ ಕಾರ್ಯಕ್ರಮಕ್ಕೆ ಕೋಡಂಬೂರು ಗ್ರಾಮದ ಕಾಫಿ ಬೆಳೆಗಾರ ಬಡುವಂಡ ಬಿ. ಮುತ್ತಪ್ಪ ಅವರು ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪುರುಷರು, ಮಹಿಳೆಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ವಿವಿಧ ಓಟದ ಸ್ಪರ್ಧೆಗಳು, ಭಾರದ ಕಲ್ಲು ಎಸೆತ, ನಿಂಬೆಹಣ್ಣು-ಚಮಚ ಓಟ, ವಯಸ್ಕರ ಓಟ, ಕಾಲುಕಟ್ಟಿ ಓಟ ಹಾಗೂ ವಾದ್ಯದ ಕುಣಿತ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ವಿಜೇತರಿಗೆ ಮುಖ್ಯ ಅತಿಥಿಗಳು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಗೆ ಒಳಪಟ್ಟ ಆರು ಗ್ರಾಮಗಳ ಪುರುಷರು ಹಾಗೂ ಮಹಿಳೆಯರ ತಂಡಗಳ ನಡುವೆ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ಪುರುಷರ ವಿಭಾಗದಲ್ಲಿ ಕಿಗ್ಗಾಲು ಗ್ರಾಮದ ತಂಡವನ್ನು ಸೋಲಿಸಿದ ಬಾಡಗ…
ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಯ ಪ್ರಮುಖ ಸಭೆಯು ನಗರಾಧ್ಯಕ್ಷ ಮಾಳೇಟಿರ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ, ಎಸ್.ಐ.ಆರ್ ಯೋಜನೆ ಹಾಗೂ ಭಾರತ್ ಜೋಡೋ ಕಾರ್ಯಕ್ರಮದ ಮುಂದಿನ ರೂಪುರೇಷೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಪ್ರಮುಖವಾಗಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು, ಸಾಮಾಜಿಕ ನ್ಯಾಯದ ತತ್ವದಡಿಯಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಯಿತು. ಪ್ರತಿಯೊಂದು ಬೂತ್ನಿಂದ ಸದಸ್ಯರ ಹೆಸರುಗಳನ್ನು ಪಡೆದುಕೊಂಡು ಅಂತಿಮ ಪಟ್ಟಿಯನ್ನು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸಲ್ಲಿಸಿ, ನೂತನ ಸಮಿತಿಯನ್ನು ಆಯ್ದುಕೊಳ್ಳಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಿ.ಎ. ನಾಸರ್, ನಗರ ಕಾಂಗ್ರೆಸ್ ಉಪಾಧ್ಯಕ್ಷರಾದ ಶಾಹುಲ್ ಹಮೀದ್, ದಿನೇಶ್ ನಂಬಿಯಾರ್, ಡಿಸಿಸಿ ಸದಸ್ಯರಾದ ಮರ್ವೀನ್ ಲೋಬೊ,…
ವಿರಾಜಪೇಟೆ ಸೆ.8 NEWS DESK : ಮೀನುಪೇಟೆಯ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ 18ನೇ ವರ್ಷದ ಓಣಂ ಆಚರಣೆಯು ಮೀನುಪೇಟೆಯ ಶ್ರೀ ಮುತ್ತಪ್ಪ ಕಲಾಮಂಟಪದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಸಾಂಸ್ಕೃತಿಕ ವೈವಿಧ್ಯದೊಂದಿಗೆ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ಶ್ರೀ ಮುತ್ತಪ್ಪ ಸನ್ನಿಧಿಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಹಾಬಲಿ ನೃತ್ಯರೂಪಕ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಬಳಿಕ ಮುತ್ತಪ್ಪ ದೇವಾಲಯದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಘೋಷಗಳೊಂದಿಗೆ ವೈಭವದ ಮಾವೇಲಿ ಮೆರವಣಿಗೆ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಸಾಂಪ್ರದಾಯಿಕ ಓಣಂ ಸದ್ಯವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಓಣಂ ಆಚರಣೆಯು ವಿಶ್ವಾದ್ಯಂತ ಪ್ರಖ್ಯಾತಿ ಪಡೆದ ಹಬ್ಬವಾಗಿದೆ. ಕೇರಳದ ವಿಭಿನ್ನ ಸಂಸ್ಕೃತಿಯ ವಿಶಿಷ್ಟ ಆಚರಣೆಯು ನಮ್ಮ ನಾಡಿನಲ್ಲಿಯೂ ಪಸರಿಸುತ್ತಿರುವುದು ದೇಶದ ಸಮೃದ್ಧ ಸಾಂಸ್ಕೃತಿಕ ಇತಿಹಾಸಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು. ಮಲಯಾಳಿ ಸಮಾಜದವರು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸುವ ಓಣಂ ಹಬ್ಬವು ಸಕಲ ಮನುಕುಲಕ್ಕೆ ಒಳಿತನ್ನು…
ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಐತಿಹಾಸಿಕ ಕ್ರೈಸ್ತ ದೇವಾಲಯವಾದ ಸಂತ ಅನ್ನಮ್ಮ ಚರ್ಚ್ನಲ್ಲಿ ಮೇರಿಮಾತೆ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಸಂಭ್ರಮವಾಗಿ ಆಚರಿಸಲಾಯಿತು. ಹಬ್ಬದ ಅಂಗವಾಗಿ ಕಳೆದ ಒಂಬತ್ತು ದಿನಗಳಿಂದ ಚರ್ಚ್ನಲ್ಲಿ ವಿಶೇಷ ನವೆನ ಪ್ರಾರ್ಥನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಹಬ್ಬದ ದಿನವಾದ ಮಂಗಳವಾರ ಚರ್ಚ್ನಲ್ಲಿ ಬೆಳಗ್ಗಿನಿಂದಲೇ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂತ ಅನ್ನಮ್ಮ ಚರ್ಚ್ನ ಪ್ರಧಾನ ಧರ್ಮಗುರುಗಳಾದ ರೆವರೆಂಡ್ ಫಾದರ್ ಜೇಮ್ಸ್ ಡೊಮಿನಿಕ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಪ್ರಧಾನ ಧರ್ಮಗುರುಗಳು ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ಹಬ್ಬದ ಪ್ರಯುಕ್ತ ಪ್ರಬೋಧನೆ, ಬೈಬಲ್ ಪಠಣ ಹಾಗೂ ಗಾಯನ ವೃಂದದವರಿಂದ ದೇವರ ನಾಮಸ್ತುತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಧರ್ಮಗುರುಗಳು ಆಶೀರ್ವಚನದ ಮೂಲಕ ಹಬ್ಬದ ಸಂದೇಶ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಂತ ಅನ್ನಮ್ಮ ಚರ್ಚ್ನ ಒಳ ಆವರಣದಲ್ಲಿರುವ ಮಾತೆ ಮೇರಿಯವರ ಪ್ರತಿಮೆಗೆ ನೆರೆದಿದ್ದ ಭಕ್ತಾದಿಗಳು ಪುಷ್ಪಾರ್ಚನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಭಕ್ತರು ಪರಸ್ಪರ…






