ಲೇಖಕ: admin

ಕುಶಾಲನಗರ NEWS DESK ಜು.22 : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ಸ್ಮಶಾನ ಅಭಿವೃದ್ಧಿಗೆ ಅನುದಾನ‌ ನೀಡುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು. ‌ಕುಶಾಲನಗರದ‌ ಶಾಸಕರ ಕಚೇರಿಯಲ್ಲಿ ಮನವಿ ಸಲ್ಲಿಸಿದ ಕೆ.ಬಿ.ಶಂಶುದ್ಧೀನ್, ಸುಂದರನಗರ ಸ್ಮಶಾನದ ಅಭಿವೃದ್ಧಿಗೆ ಶಾಸಕರ ಅನುದಾನ ನೀಡುವಂತೆ ಮನವಿ ಮಾಡಿದರು‌. ಇದಕ್ಕೆ ಸ್ಪಂದಿಸಿದ ಶಾಸಕರು, ಸ್ಮಶಾನ ಅಭಿವೃದ್ಧಿಗೆ‌ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್, ಸುಂದರನಗರ ಸ್ಮಶಾನ ಅಭಿವೃದ್ಧಿಗಾಗಿ ಶಾಸಕರ ಬಳಿ ಮನವಿ ಮಾಡಲಾಗಿದೆ. ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಬೇಗನೇ ಅನುದಾನ ನೀಡುವುದಾಗಿ ತಿಳಿಸಿದರು. ಹಾಗೆಯೇ ಸುಂದರನಗರ ಸರ್ಕಲ್ ನಲ್ಲಿ ದಿ.ಗುಂಡೂರಾವ್ ಅವರ ಪ್ರತಿಮೆ ನಿರ್ಮಾಣದ ಕೆಲಸವೂ ಆಗಲಿದೆ ಎಂದು ಭರವಸೆ ನೀಡಿದ್ದಾರೆ ಎಂದರು.

Read More

ಮಡಿಕೇರಿ NEWS DESK ಜು.22 : ಮಡಿಕೇರಿ ನಗರದಂಚಿನ ಕೆ.ನಿಡುಗಣೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪರಿಸರ ನಾಶ ಪಡಿಸಿ ಬಡಾವಣೆ ನಿರ್ಮಿಸುವ ಯೋಜನೆಯನ್ನು ತಕ್ಷಣ ಕೈಬಿಡಬೇಕೆಂದು ಒತ್ತಾಯಿಸಿ ಕೊಡಗು ಹಾಗೂ ಕಾವೇರಿ ಸಂರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೇದಿಕೆಯ ಅಧ್ಯಕ್ಷರು ಹಾಗೂ ಪರಿಸರವಾದಿ ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ ಅವರು ಮಾತನಾಡಿ ಸುಮಾರು 94 ಏಕರೆ ಪ್ರದೇಶದಲ್ಲಿ ಬಡಾವಣೆೆ ನಿರ್ಮಾಣ ಯೋಜನೆ ರೂಪಿಸಲಾಗಿದೆ. ಭೂ ಕಂದಾಯ ಕಾಯ್ದೆಯನ್ವಯ ಕೊಡಗಿನ ಗದ್ದೆ ಬಯಲು, ಹಸಿರ ಪರಿಸರಗಳಲ್ಲಿ ಭೂ ಪರಿವರ್ತನೆಗೆ ಅವಕಾಶವಿಲ್ಲವಾದರು, ಇಲ್ಲಿ ಭೂ ಪರಿವರ್ತನೆ ಮಾಡುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ. ಬಡಾವಣೆಯ ನಿರ್ಮಾಣಕ್ಕಾಗಿ 1500ಕ್ಕೂ ಹೆಚ್ಚಿನ ಮರಗಳನ್ನು ಧರೆಗುರುಳಿಸಲಾಗಿದೆ ಎಂದು ಆರೋಪಿಸಿದರು. ಒಂದೊಮ್ಮೆ ಇಲ್ಲಿ ಬಡಾವಣೆ ನಿರ್ಮಾಣವಾದಲ್ಲಿ, ಇಲ್ಲಿನ ಕಲುಷಿತ ನೀರು ನೇರವಾಗಿ ಮಡಿಕೇರಿಯ ಕುಡಿಯವ ನೀರಿನ ಪ್ರಮುಖ ಮೂಲವಾದ ಕೂಟುಹೊಳೆಗೆ ಸೇರಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈಗಾಗಲೇ ಬಡಾವಣೆ ನಿರ್ಮಾಣಕ್ಕೆ ಸಂಬ0ಧಿಸಿದ0ತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು…

Read More

ಮಡಿಕೇರಿ NEWS DESK ಜು.22 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಬಂಧನವನ್ನು ಖಂಡಿಸಿ ಮತ್ತು ನೀಟ್ ಪ್ರಶ್ನೆ ಸೋರಿಕೆ ಹಗರಣಕ್ಕೆ ಸಂಬ0ಧಿಸಿದ0ತೆ ಕೇಂದ್ರ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಸಂದರ್ಭ ರಸ್ತೆ ತಡೆ ಮಾಡಲು ಮುಂದಾದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು ಹಾಗೂ ಶಿಕ್ಷಣ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ರಾಹುಲ್ ಗಾಂಧಿ ಬಂಧನವನ್ನು ತೀವ್ರವಾಗಿ ಖಂಡಿಸಿದರು. ಕೇ0ದ್ರದ ಎನ್‌ಡಿಎ ನೇತೃತ್ವದ ಸರಕಾರ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದು, ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡುವ ಮೂಲಕ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ…

Read More

ಮಡಿಕೇರಿ NEWS DESK ಜು.21 : ಇದೇ ಜು.29 ರಿಂದ 31 ರ ವರೆಗೆ ನೇಪಾಳದ ಕಾಟ್ಮಂಡ್ ನಲ್ಲಿ ನಡೆಯುವ ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಭಾರತ ತಂಡಕ್ಕೆ ಕರ್ನಾಟಕ ರಾಜ್ಯದಿಂದ 21 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಮಿಕ್ಸ್ ಬಾಕ್ಸಿಂಗ್ ಅಸೋಸಿಯೇಷನ್ ನ ಪ್ರಧಾನÀ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಿಂದ ಮಿಥಶ್ ಜೆ., ರೀತನ್ ಡಿ.ಎಸ್,, ಅಜಯ್ ಎನ್.ಎಸ್., ಶ್ರಿಯಾನ್ ಗೌಡ, ಯಾಸಿನ್, ಹಫೀಸ್, ಕೌಶಿಕ್ ಕುಮಾರ್ ಯು.ಸಿ., ಮನ್ಸಿತ್ ಮೋಹನ್ ಹಾಗೂ ಸ್ವಾತಿಕ್ ಬಿ.ಎಸ್ ಆಯ್ಕೆಯಾಗಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಕುಶಾಲನಗರ NEWS DESK ಜು.21 : ಕುಶಾಲನಗರದ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ,ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ, ಬೆಳ್ಳಿಯ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ಫ್ಲಾಟ್ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ ಗೆ ರೂ.7000/-ವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ ಮೊದಲೇ ಖರೀದಿ ಮಾಡಿದ ಹಳೆಯ ಗ್ಲೋ ಡೈಮಂಡ್ಸ್‌ ಗಳಿಗೆ 90% ಬೈಬ್ಯಾಕ್ (Buy Back) ಅನ್ನು ನಿಮ್ಮ ಹೊಸ ಗ್ಲೋ ಡೈಮಂಡ್ಸ್ ಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದು. ಚಿನ್ನದ ದರವು ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿ ಸುಮಾರು ರೂ.16,500 ವರೆಗೆ ಇದ್ದರೆ,ಇದೀಗ ಸುಮಾರು ರೂ.13,000/- ರ ಮಟ್ಟಕ್ಕೆ ಇಳಿಕೆಯಾಗಿದೆ. ಈ ಬೆಲೆ ಇಳಿಕೆಯಿಂದ…

Read More

ಮಡಿಕೇರಿ NEWS DESK ಜು.21 : ವಿರಾಜಪೇಟೆ ಕ್ಷೇತ್ರದ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಬಿಜೆಪಿ ದುರಸ್ತಿ ಹಂತದ ರಸ್ತೆಗಳಲ್ಲಿ ಬಾಳೆಗಿಡ ನೆಟ್ಟು ರಾಜಕೀಯ ಪ್ರೇರಿತ ಪ್ರತಿಭಟನೆ ನಡೆಸಿದೆ ಎಂದು ಭಾಗಮಂಡಲ ವಲಯ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ಅವರು ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆಯನ್ನು ಗಳಿಸುತ್ತಿರುವ ಶಾಸಕರ ಹೆಸರಿಗೆ ಮಸಿ ಬಳಿಯುವ ಪ್ರಯತ್ನವಾಗಿ ಭಾಗಮಂಡಲದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ ಎಂದು ಟೀಕಿಸಿದರು. ಕಳೆದ 20 ವರ್ಷಗಳಲ್ಲಿ ನಡೆಯದ ಅಭಿವೃದ್ಧಿ ಕಾರ್ಯಗಳು ಕೇವಲ 3 ವರ್ಷಗಳಲ್ಲಿ ನಡೆದಿದೆ. ಅಪೂರ್ಣಗೊಂಡು ನೆನೆಗುದಿಗೆ ಬಿದ್ದಿದ್ದ ಮೇಲು ಸೇತುವೆ ಯೋಜನೆ ಎ.ಎಸ್.ಪೊನ್ನಣ್ಣ ಅವರು ಶಾಸಕರಾದ ನಂತರ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಭಾಗಮಂಡಲ ಸುತ್ತಮುತ್ತಲ ಗ್ರಾಮಗಳಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ರಸ್ತೆಗಳು ಅಭಿವೃದ್ಧಿಯಾಗಿವೆ, ತಡೆಗೋಡೆ ಮತ್ತು ಕಾಂಕ್ರೀಟ್ ರಸ್ತೆಗಳು ನಿರ್ಮಾಣಗೊಂಡಿವೆ. ಬಿಜೆಪಿ ಪ್ರತಿಭಟನೆ ನಡೆಸಿದ ರಸ್ತೆಗಳ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ದುರಸ್ತಿಯ…

Read More

ಮಡಿಕೇರಿ NEWS DESK ಜು.21 : ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳತ್‌ಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ನಾಟಿ ಬಾಯ್ಸ್, ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಹ್ಯಾಂಡ್ ಬಾಲ್‌ನ ಫೈನಲ್ ಪಂದ್ಯದಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ನಾಟಿ ಬಾಯ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಹಗ್ಗಜಗ್ಗಾಟ ಪಂದ್ಯದಲ್ಲಿ ಕಿಶೋರ್ ರೈ ನಾಯಕತ್ವದ ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಲೀಗ್ ಮಾದರಿಯಲ್ಲಿ ನಾಟಿ ಬಾಯ್ಸ, ಯಂಗ್ ಸ್ಪೈಡರ್ಸ್, ಮಡ್ ಕಮಾಂಡೋಸ್, ಮಡ್ ಫೀಲ್ಡರ್ಸ್, ಮಡ್ ಬಾಯ್ಸ,  ರೈತ ಮಕ್ಕಳು ಸೇರಿದಂತೆ 6 ತಂಡಗಳು ಸೆಣಸಾಟ ನಡೆಸಿತ್ತು.ನಂತರ ನಡೆದ 40 ವರ್ಷ ವಯಸ್ಸಿನೊಳಗಿನವರ ವಿಭಾಗದಲ್ಲಿ ನಡೆದ ಓಟದ ಸ್ಪರ್ಧೆಯಲ್ಲಿ…

Read More

ಮಡಿಕೇರಿ NEWS DESK ಜು.20 : ಹಾರಂಗಿ ಅಣೆಕಟ್ಟಿನ ನಿರ್ಮಾಣದ ಹಂತದಲ್ಲಿ ಜಾಗ ಕಳೆದುಕೊಂಡವರಿಗೆ ಯಡವನಾಡಿನಲ್ಲಿ ಪರ್ಯಾಯವಾಗಿ ನೀಡಿದ ಜಾಗವೊಂದಕ್ಕೆ ಸಂಬ0ಧಿಸಿದ0ತೆ “ಸಾಗುವಳಿ ಪತ್ರ” ದಾಖಲೆಯನ್ನು ನೀಡದ ಕಂದಾಯ ಇಲಾಖೆ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಫಲಾನುಭವಿ ಕುಟುಂಬದ ಸದಸ್ಯ ಉಮೇಶ್ ಜಿ.ಪಿ. ಜಿಲ್ಲಾಡಳಿವನ್ನು ಒತ್ತಾಯಿಸಿದ್ದಾರೆ. ನಗದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಹಾರಂಗಿ ಹಿನ್ನೀರು ಪ್ರದೇಶದಲ್ಲಿ ತಮ್ಮ ಕುಟುಂಬ ವಾಸವಿತ್ತು. ಅಣೆಕಟ್ಟು ನಿರ್ಮಾಣದ ಬಳಿಕ ತಾನು ಗಾಳಿಬೀಡು ಪಂಚಾಯ್ತಿಯ ಒಂದನೇ ಮೊಣ್ಣಂಗೇರಿಯಲ್ಲಿ ನೆಲೆಸಿದ್ದೇನೆ. ನಮ್ಮ ಕುಟುಂಬಕ್ಕೆ ಯಡವನಾಡು ಗ್ರಾಮದಲ್ಲಿ ಮುಳುಗಡೆಯಾದ ಜಾಗಕ್ಕೆ ಬದಲಾಗಿ 3.74 ಎಕರೆ ಜಾಗವನ್ನು ಒದಗಿಸಲಾಗಿದೆ ಎಂದರು. ಯಡವನಾಡು ಗ್ರಾಮದಲ್ಲಿ ನಮ್ಮ ಕುಟುಂಬಕ್ಕೆ ನೀಡಿರುವ ಜಾಗಕ್ಕೆ ಸಂಬ0ಧಿಸಿದ ಸಾಗುವಳಿ ಪತ್ರದ ದಾಖಲೆಯ ಪ್ರತಿಯನ್ನು ನೀಡುವಂತೆ ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಕಛೇರಿಯಲ್ಲಿ ಕೋರಿದ್ದೆ. ವಿಷಯಕ್ಕೆ ಸಂಬ0ಧಿಸಿದ0ತೆ ಉಪ ವಿಭಾಗಾಧಿಕಾರಿಯವರು ವಿಚಾರಣೆ ನಡೆಸಿ, ದಾಖಲೆ ಒದಗಿಸುವಂತೆ ಸೂಚಿಸಿದ್ದರು. ಆದರೆ ಪ್ರಸ್ತುತ ಮೂಲ ದಾಖಲಾಗಿ ಲಭ್ಯತೆ ಇಲ್ಲವೆಂದು…

Read More

ಮಡಿಕೇರಿ NEWS DESK ಜು.21 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2026-27ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ ಪುಸ್ತಕದ ನಾಲ್ಕು  ಪ್ರತಿಗಳನ್ನು  ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು.2021ರ ನಂತರ ಪ್ರಕಟಿತ  ಪುಸ್ತಕಗಳನ್ನು ಮಾತ್ರ ಕಳುಹಿಸಬೇಕು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸಬೇಕು. ಲಕೊಟೆಯ ಮೇಲೆ  *”ಗೌರಮ್ಮ ದತ್ತಿ ಪ್ರಶಸ್ತಿ”ಗೆ* ಎಂದು ಬರೆಯಬೇಕು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ >>> ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ : 94483 46276. ಇಲ್ಲಿಗೆ ದಿನಾಂಕ 31.07..2026 ರ ಒಳಗಾಗಿ ತಲುಪಿಸಬೇಕೆಂದು  ಪರಿಷತ್ತಿನ ಅಧ್ಯಕ್ಷರಾದ…

Read More

ಮಡಿಕೇರಿ NEWS DESK ಜು.21 : ಸಂಪೂರ್ಣ ಹದಗೆಟ್ಟಿರುವ ಭಾಗಮಂಡಲ- ನಾಪೋಕ್ಲು ಮತ್ತು ಭಾಗಮಂಡಲ ಕರಿಕೆ ರಸ್ತೆಯ ಅವ್ಯವಸ್ಥೆಯನ್ನು ಖಂಡಿಸಿ ಬಿಜೆಪಿ ಶಕ್ತಿ ಕೇಂದ್ರ ಪ್ರತಿಭಟನೆ ನಡೆಸಿತು. ರಸ್ತೆಯಲ್ಲಿನ ಹೊಂಡ ಗುಂಡಿಗಳಲ್ಲಿ ಬಾಳೆಗಿಡ ನೆಡುವ ಮೂಲಕ ಪ್ರತಿಭಟನಾಕಾರರು ರಾಜ್ಯ ಸರಕಾರ ಹಾಗೂ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆಯುದ್ದಕ್ಕೂ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ. ಕೆಸರು ನೀರು ತುಂಬಿಕೊ0ಡು ವಾಹನಗಳ ಸಂಚಾರದೊ0ದಿಗೆ ಜನ ಸಂಚಾರಕ್ಕೂ ತೊಡಕುಂಟಾಗುತ್ತಿದೆ. ಹೀಗಿದ್ದೂ ಸಂಬ0ಧಪಟ್ಟವರು ರಸ್ತೆ ದುರಸ್ತಿಯತ್ತ ಗಮನ ಹರಿಸಿಲ್ಲವೆಂದು ಬಿಜೆಪಿ ಪ್ರಮುಖರು ಆರೋಪಿಸಿದರು.

Read More