ಲೇಖಕ: admin

ಮಡಿಕೇರಿ ಏ.10 NEWS DESK : ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.11 ರಿಂದ ಏ.20ರವರೆಗೆ ಆಯೋಜಿಸಿದೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ನ ಪುತ್ತೂರು. ಹಾಸನ ಮತ್ತು ಸುಳ್ಯ ಶಾಖೆಗಳಲ್ಲಿ ಮಾತ್ರ “ವರುಷದ ಹರುಷ” ಶಾಪಿಂಗ್ ಹಬ್ಬವಿರುತ್ತದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500 ರವರೆಗೆ ರಿಯಾಯಿತಿ ನೀಡಲಾಗುವುದು. ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000 ರವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ರಿಯಾಯಿತಿ ನೀಡಲಾಗುವುದು. ಅಲ್ಲದೆ 916 ಚಿನ್ನಾಭರಣಕ್ಕಿಂತ 2400 ರೂಪಾಯಿ ಅಂದಾಜು ಕಡಿಮೆ ಬೆಲೆಯಲ್ಲಿ 18ಕ್ಯಾರೆಟ್ ಹಾಲ್‌ಮಾರ್ಕ್ ಚಿನ್ನಾಭರಣಗಳು ದೊರೆಯುತ್ತದೆ. ಇದು ದಿನನಿತ್ಯದ ಬಳಕೆಗೆ ಸೂಕ್ತವಾಗಿರುತ್ತದೆ. ಹೊಸ ಚಿನ್ನ ಖರೀದಿ ಮಾಡುವವರಿಗೆ ಹೊಸ ಪರಿಯಾಯವಾಗಿರುತ್ತದೆ. ಆಭರಣ ಚಿನ್ನದ…

Read More

ಮಡಿಕೇರಿ ಏ.10 NEWS DESK : ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ಪುತ್ತೂರು. ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.11 ರಿಂದ ಏ.20ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500 ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000 ರವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ರಿಯಾಯಿತಿ ನೀಡಲಾಗುವುದು. ಅಲ್ಲದೆ 916 ಚಿನ್ನಾಭರಣಕ್ಕಿಂತ 2400 ರೂಪಾಯಿ ಅಂದಾಜು ಕಡಿಮೆ ಬೆಲೆಯಲ್ಲಿ 18ಕ್ಯಾರೆಟ್ ಹಾಲ್‌ಮಾರ್ಕ್ ಚಿನ್ನಾಭರಣಗಳು ದೊರೆಯುತ್ತದೆ. ಇದು ದಿನನಿತ್ಯದ ಬಳಕೆಗೆ ಸೂಕ್ತವಾಗಿರುತ್ತದೆ.ಹೊಸ ಚಿನ್ನ ಖರೀದಿ ಮಾಡುವವರಿಗೆ ಹೊಸ ಪರಿಯಾಯವಾಗಿರುತ್ತದೆ. ಆಭರಣ ಚಿನ್ನದ ಬೆಲೆ ಪ್ರತೀ ಗ್ರಾಂಗೆ 17,000 ಕ್ಕೆ ಏರಿದ್ದು,…

Read More

ಮಡಿಕೇರಿ ಏ.10 NEWS DESK : ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ನಿಖರ ಹಾಗೂ ನಿರ್ದಿಷ್ಟವಾಗಿ ಭೂ ಮಾಪನ (ಸರ್ವೆ) ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ಜಿಲ್ಲಾಡಳಿತ ಸಹಕಾರದಲ್ಲಿ ರಾಷ್ಟ್ರೀಯ ಭೂ ಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆಗಳ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 37ನೇ ರಾಷ್ಟ್ರೀಯ ಭೂಮಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹಿಂದೆ ಸರಪಳಿ ಮೂಲಕ ಭೂ ಸಮೀಕ್ಷೆ ಅಥವಾ ಸರ್ವೆ ಮಾಡಲಾಗುತ್ತಿದ್ದು, ಈಗ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಅವುಗಳನ್ನು ಬಳಸಿಕೊಂಡು ತ್ವರಿತವಾಗಿ ಭೂಮಾಪನ ಸರ್ವೆ ಕಾರ್ಯ ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು. ಜಿಲ್ಲೆಯಲ್ಲಿ ಪೋಡಿ ಸರ್ವೆ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಆದ್ದರಿಂದ ಆದ್ಯತೆ ಮೇಲೆ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಇಂದಿನ ತಂತ್ರಜ್ಞಾನ ಹಾಗೂ ಸರ್ಕಾರದ ಸೌಲಭ್ಯವನ್ನು ಬಳಸಿಕೊಂಡು ಕಾಲ…

Read More

ಮಡಿಕೇರಿ ಏ.10 NEWS DESK : ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತಪ್ರತಿಗಳ ಸಮೀಕ್ಷೆಯು ಈಗಾಗಲೇ ಆರಂಭವಾಗಿದ್ದು, ಮೇ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯ ಯೋಜನೆ ಅನುಷ್ಠಾನ ಕುರಿತು ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಸ್ತಪ್ರತಿಗಳು ಇತಿಹಾಸ, ಸಾಹಿತ್ಯ, ಸಂಸ್ಕøತಿ, ಮತ್ತು ಜ್ಞಾನದ ಮೂಲ ಆಕಾರವಾಗಿದ್ದು, ಹಸ್ತಪ್ರತಿಗಳು ಪೂರ್ವಜರ ಬೌದ್ಧಿಕ ಸಂಪತ್ತನ್ನು ದಾಖಲಿಸುತ್ತವೆ. ಆದ್ದರಿಂದ ತಾಳೆಗರಿ, ಕಾಗದ ಅಥವಾ ಇತರೆ ವಸ್ತುಗಳ ಮೇಲೆ ಕೈಯಲ್ಲಿ ಬರೆದ ದಾಖಲೆಗಳನ್ನು ಜತನ ಮಾಡುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರಾಚ್ಯವಸ್ತು ಮತ್ತು ಪ್ರವಾಸೋದ್ಯಮ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಕೊಡಗು ಜಿಲ್ಲೆಗೆ ಐತಿಹಾಸಿಕ ಇತಿಹಾಸವಿದ್ದು, ಇಲ್ಲಿನ ಪುರಾತನ ಹಾಗೂ ಪ್ರಾಚೀನ ಕಾಲದ ಹಸ್ತಪ್ರತಿಗಳನ್ನು ಸಂಗ್ರಹಿಸಿ ಡಿಜಿಟಲೀಕರಣ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಹೇಳಿದರು. ಹಸ್ತಪ್ರತಿಗಳು…

Read More

ಮಡಿಕೇರಿ ಏ.10 NEWS DESK : ಕೊಡಗು ಜಿಲ್ಲಾಡಳಿತದ ವತಿಯಿಂದ ಏಪ್ರಿಲ್ 20 ರಂದು ನಡೆಯಲಿರುವ ಬಸವ ಜಯಂತಿಯ ಆರ್ಥಪೂರ್ಣ  ಆಚರಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಐಶ್ವರ್ಯ ಕರೆ ನೀಡಿದ್ದಾರೆ. ತಮ್ಮ ಕಛೇರಿಯಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ  ಕಾಯಕ ಯೋಗಿ ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಬಸವ ಅನುಯಾಯಿಗಳೊಂದಿಗೆ ಚರ್ಚಿಸಿ ಅರ್ಥಪೂರ್ಣ ಆಚರಣೆಗೆ ಮುಂದಾಗಬೇಕು.  ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ  ಸಹಭಾಗಿತ್ವದೊಂದಿಗೆ  ಬಸವ ಜಯಂತಿ ಅರ್ಥಪೂರ್ಣ ಆಚರಣೆಗೆ ಡಾ‌.ಐಶ್ವರ್ಯ ಕರೆ ಕೊಟ್ಟರು. ಈ ಸಂದರ್ಭ ಮಾತನಾಡಿದ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್  ಕೊಡಗು  ವೀರಶೈವ ಮಹಾಸಭಾ ಪದಾಧಿಕಾರಿಗಳ ಸಹಕಾರದೊಂದಿಗೆ ಬಸವ ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಲಾಗಿದೆ. ಮಡಿಕೇರಿ ಅರಮನೆ  ಆವರಣದಿಂದ ಅಂದು ಬೆಳಗ್ಗೆ  10 ಗಂಟೆಗೆ ಬಸವೇಶ್ವರರ ಭಾವಚಿತ್ರವನ್ನು ಅಲಂಕೃತ ಬೆಳ್ಳಿ ರಥದಲ್ಲಿ ವಿವಿಧ ಕಲಾತಂಡಗಳೊಂದಿಗೆ ಗಾಂಧಿ ಭವನದವರೆಗೂ ಮೆರವಣಿಗೆ ನಡೆಸುವ ಬಗ್ಗೆ ವಿವರಣೆ…

Read More

ಮಡಿಕೇರಿ ಏ.10 NEWS DESK : ಜಿಲ್ಲಾ ಕವಾಯತು ಮೈದಾನದಲ್ಲಿ ಜಿಲ್ಲಾ ಕವಾಯತು ನಡೆಸಲಾಯಿತು. ಕವಾಯತಿನ ನಂತರ ಜಿಲ್ಲಾ ಪೊಲೀಸ್ ಘಟಕದ ವಿವಿಧ ವಿಭಾಗಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಸಿಬ್ಬಂದಿಗಳನ್ನು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ನಂತರ ಸಿಬ್ಬಂದಿಗಳ ಕುಂದುಕೊರತೆಗಳ ಬಗ್ಗೆ ವಿಚಾರಿಸಲಾಯಿತು.

Read More

ಗೋಣಿಕೊಪ್ಪ ಏ.10 NEWS DESK : ಇಂದಿನ ಯುದ್ಧದ ವಿದ್ಯಮಾನಗಳ ಅವಧಿಯೊಳಗೆ ಛಾಯಾಚಿತ್ರಗಾರರು ಆರ್ಥಿಕ ಮತ್ತು ಸ್ವಾವಲಂಬಿ ಬದುಕಿನ ಬಗ್ಗೆ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ದಕ್ಷಿಣ ಕೊಡಗಿನ ಛಾಯಾಚಿತ್ರಗಾರರ ಸಂಘದ ಅಧ್ಯಕ್ಷ ರವೀಂದ್ರ ಆತಂಕ ವ್ಯಕ್ತಪಡಿಸಿದರು. ಗೋಣಿಕೊಪ್ಪದ ಸೆಂಟ್ರಮ್ ಬಿಲ್ಡಿಂಗ್‍ನಲ್ಲಿರುವ ಸೂರ್ಯ ಸ್ಟುಡಿಯೋದಲ್ಲಿ ನಡೆದ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಇವೆಂಟ್ ಮ್ಯಾನೇಂಜ್‍ಮೆಂಟ್ ಎಂಬ ಹೆಸರಿನಲ್ಲಿ ಆನ್ಲೈನ್, ಫೇಸ್ ಬುಕ್, ವೆಬ್‍ಸೈಟ್‍ಗಳ ಮೂಲಕ ಪರಿಚಯವಿದವರಿಗೆ ಶುಭ ಸಮಾರಂಭಗಳ ಛಾಯಾಚಿತ್ರ ತೆಗೆಯಲು ಜನರು ಅನುವು ಮಾಡಿಕೊಡುತ್ತಿದ್ದಾರೆ. ಇದರಿಂದ ಜನರು ಮೋಸ ಹೋಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಬಂದ ಹಲವಾರು ದೂರುಗಳನ್ನು ಸಂಘ ಖುದ್ದು ಹಾಜರಿದ್ದು ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ವಿನಾಕಾರಣ ಸಮಸ್ಯೆಯನ್ನು ಜನರು ಎಳೆದುಕೊಳ್ಳುವ ಮೊದಲು ಸ್ಥಳೀಯ ಛಾಯಚಿತ್ರಗಾರರಿಗೆ ಆದ್ಯತೆ ನೀಡಿದಾಗ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿದೆ ಎಂದರು. ಈ ಹಿನ್ನೆಲೆಯಲ್ಲಿ ಜನರು ತಮ್ಮ ಕಾರ್ಯಕ್ರಮಗಳಿಗೆ ಫೋಟೋ ತೆಗೆಯುವ ವಿಚಾರಕ್ಕೆ ಸ್ಥಳೀಯರಿಗೆ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ಮನವಿ ಮಾಡಿದರು. ಕೊರೋನಾ ಮತ್ತು…

Read More

ಗೋಣಿಕೊಪ್ಪ ಏ.10 NEWS DESK : ಕೆದಮುಳ್ಳೂರು ಗ್ರಾಮದ ಕುಲ್ಲಚೆಟ್ಟಿ ಕುಟುಂಬಸ್ಥರು ಮೂರು ವರ್ಷಗಳಿಗೊಮ್ಮೆ ನಡೆಸುವ ಹರಿಸೇವೆ ಹಾಗೂ 101 ಕೋಲಗಳು ಏ.15 ರಿಂದ 17ರ ವರೆಗೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಏ.15 ರಂದು ಕುಲ್ಲಚೆಟ್ಟಿ ಐನ್‍ಮನೆಯಲ್ಲಿ ಬೆಳಗ್ಗೆ ವೆಂಕಟರಮಣ ದೇವರ ಹರಿಸೇವೆ, ಪೂಜಾ ಕಾರ್ಯಗಳು ನಡೆಯಲಿದೆ. ಸಂಜೆ, ಅರೆಭಾಷೆಗೌಡ ಜನರ ಪ್ರಮುಖ ದೈವವಾದ ಬಚ್ಚನಾಯಕ ಆರಾಧನೆ ಮತ್ತು ಕೋಲ, ಜತೆಗೆ ಹುಲಿ ಚಾಮುಂಡಿ, ಇತರೆ ಶ್ರೀ ಧರ್ಮ ದೇವತೆಗಳು, ಕೋಲಗಳು ನಡೆಯಲಿದೆ. ಏ.16 ರಂದು ಬೆಳಗೆ 10ಕ್ಕೆ ಧರ್ಮದೇವತೆ, ಸೀರಾಡಿ ದೈವದ ಕೋಲ ನಡೆಯಲಿದೆ.17 ರಂದು, ಪಾಷಣಮೂರ್ತಿ, ಪಂಜುರ್ಲಿಸೇರಿದಂತೆ ಹಲವು ಕೋಲಗಳು ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Read More

ಗೋಣಿಕೊಪ್ಪ ಏ.10 NEWS DESK : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ 20 ವರ್ಷಗಳಿಂದ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ ಎನ್.ಕೆ.ಜಯಶ್ರೀ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಬೀಳ್ಕೊಡಲಾಯಿತು. ಸಹ ಶಿಕ್ಷಕರು ವಿವಿಧ ಉಡುಗೊರೆಗಳನ್ನು ನೀಡುವ ಮೂಲಕ ಜಯಶ್ರೀ ಅವರ ನಿವೃತ್ತ ಜೀವನಕ್ಕೆ ಶುಭಕೋರಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಮಾರ್ಗದರ್ಶನದಲ್ಲಿ ಸಮಾರಂಭ ನಡೆಯಿತು. ಸನ್ಮಾನಿಸಿ ಮಾತನಾಡಿದ ಮುಖ್ಯ ಶಿಕ್ಷಕ ಕುಮಾರ್, ಕಳೆದ 20 ವರ್ಷಗಳಿಂದ ಶಾಲೆಯಲ್ಲಿ ವಿದ್ಯಾದಾನ ಮಾಡುವ ಮೂಲಕ ಸರ್ವ ಶ್ರೇಷ್ಠವಾದ ಕಾರ್ಯವನ್ನು ನಡೆಸಿದ್ದಾರೆ. ನಿವೃತ್ತಿ ಜೀವನವು ಅಷ್ಟೇ ಸುಂದರವಾಗಿ ನಡೆಯಲಿ ಎಂದು ಹೇಳಿದರು. ಶಾಲಾ ಮೇಲುಸ್ತುವಾರಿ ಮತ್ತುಅಭಿವೃದ್ದಿ ಸಮಿತಿಅಧ್ಯಕ್ಷಜಗದೀಶ್‍ಜೋಡುಬೀಟಿ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರಗಳನ್ನು ಬಿತ್ತುವ ಮೂಲಕ ಅವರ ಸುಂದರಜೀವನವನ್ನುಕಟ್ಟಿಕೊಡುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದಾಗಿದೆ. ಅಂತಹಜವಾಬ್ದಾರಿಯನ್ನು ನಿಭಾಯಿಸಿದ ಶಿಕ್ಷಕಿ ಜಯಶ್ರೀ ಅವರ ನಿವೃತ್ತಿಜೀವನದ ಬದುಕು ಶಾಂತಿಯುತವಾಗಿ ನಡೆಯಲಿ ಎಂದು ಹಾರೈಸಿದರು. ಸೇವಾ ನಿವೃತ್ತಿ ಹೊಂದಿದ ಶಿಕ್ಷಕಿ…

Read More

ಸೋಮವಾರಪೇಟೆ ಏ.10 NEWS DESK : ಸೋಮವಾರಪೇಟೆ ಪಟ್ಟಣದ ಸಂತಜೋಸೆಫರ ಪಿಯು ಕಾಲೇಜು ಶೇ.100 ರ ಫಲಿತಾಂಶ ಗಳಿಸಿದೆ. ವಿಜ್ಞಾನದ ವಿಭಾಗದಲ್ಲಿ 28 ಮತ್ತು ವಾಣಿಜ್ಯ ವಿಭಾಗದಲ್ಲಿ 70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 26 ವಿದ್ಯಾರ್ಥಿಗಳು ಉತ್ತಮ ದರ್ಜೆ, 67 ವಿದ್ಯಾರ್ಥಿಗಳು ಪ್ರಥಮ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಜಿ.ಆರ್. ಸಾನಿಕ 600ಕ್ಕೆ 571 ಅಂಕಗಳು(ಶೇ.95.16), ಸಿ.ಪಿ.ವರ್ಷಾ 555(92.5),ಡಿ.ಡಿ. ಐಶ್ಚರ್ಯ 541(90.16), ವಾಣಿಜ್ಯ ವಿಭಾಗದಲ್ಲಿ ಇಂಪಾ 573(95.5), ಜಿ.ಆರ್.ಮಿಲನ 565(94.17), ಎ.ಪಿ.ಲೀಲಾ 553(92.16) ಅಂಕ ಗಳಿಸಿದ್ದಾರೆ. ವಿಶ್ವಮಾನವ ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಶೇ.98 ರಷ್ಟು ಫಲಿತಾಂಶ ದೊರೆತ್ತಿದೆ. ವಿಜ್ಞಾನ ವಿಭಾಗದಲ್ಲಿ ಎಚ್.ಎನ್.ಪವನ್ 586(ಶೇ.98), ಎಚ್.ಆರ್.ಜೀವಿತ 565(94.16), ಧನ್ಯಶ್ರೀ 564(94), ಇಬ್ಬನಿ ವಿ ಗೌಡ 557(92.8), ವಾಣಿಜ್ಯ ವಿಭಾಗದಲ್ಲಿ ಜಿ.ಜಿ.ಮನಿಷಾ 581(96.18), ಕೆ.ಎಸ್.ಮನಿಷಾ 575(95.8), ಸಿ.ಎಂ. ನಿಕಿಲ್ 568(94.18) ಅಂಕಗಳಿಸಿದ್ದಾರೆ. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ…

Read More