ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬಂಪರ್ ಕೊಡುಗೆ ನೀಡಿದೆ. 2026ರ ಸಾಲಿನ ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳ ಪೈಕಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 588 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ 234 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 144, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ 144 ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 390 ಹುದ್ದೆಗಳನ್ನು ಮೀಸಲಿಡಲಾಗಿದೆ.ಜುಲೈ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಗಳ ಹೋಲಿಕೆ: ಕಳೆದ ವರ್ಷ ವರ್ಸಸ್ ಈ ವರ್ಷ ಕಳೆದ ವರ್ಷ (2025ರಲ್ಲಿ) ಎಸ್ಬಿಐ ಕೇವಲ 541 ಪಿಒ ಹುದ್ದೆಗಳಿಗೆ ಮಾತ್ರ ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಬಾರಿ ಹುದ್ದೆಗಳ ಸಂಖ್ಯೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದ್ದು, ಒಟ್ಟು 1,500 ಹುದ್ದೆಗಳಿಗೆ (1446 ರೆಗ್ಯುಲರ್ + 54 ಬ್ಯಾಕ್ಲಾಗ್) ನೇಮಕಾತಿ ನಡೆಯುತ್ತಿದೆ. ಇದು ಅಭ್ಯರ್ಥಿಗಳಿಗೆ ಸಿಕ್ಕಿರುವ ಸುವರ್ಣಾವಕಾಶ. ಮುಂಬೈನಂತಹ ಮೆಟ್ರೋ ಸಿಟಿಯಲ್ಲಿ…
ಲೇಖಕ: admin
ಮಡಿಕೇರಿ NEWS DESK ಜು.3 : ನಗರದ ಪ್ರತಿಷ್ಠಿತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಣಿಶಾಸ್ತ್ರ ವಿಭಾಗದ ಪ್ರೊ.ಎಂ.ಪಿ.ಕೃಷ್ಣ ಅವರನ್ನು ಕಾಲೇಜ್ ನ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ.ಮೇಜರ್ ರಾಘವ ಬಿ. ಅವರು ತಮ್ಮ ಹುಟ್ಟೂರಿನ ಈ ಕಾಲೇಜ್ ನಲ್ಲಿ ಪದವಿ ಪಡೆದ ಪ್ರೊ.ಎಂ.ಪಿ.ಕೃಷ್ಣ ಅವರು ಇದೇ ಕಾಲೇಜ್ ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದುತ್ತಿರುವುದು ಹೆಮ್ಮೆ ಎನಿಸಿದೆ. ಇದು ಇವರಿಗೆ ಲಭಿಸಿದ ಭಾಗ್ಯವಾಗಿದೆ, ಈ ಗೌರವ ಸಿಗುವುದು ಅಪರೂಪ ಎಂದು ಅಭಿಪ್ರಾಯಪಟ್ಟರು. ಕಾಲೇಜ್ ನ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಕೈಜೋಡಿಸುತ್ತಿದ್ದ ಪ್ರೊ.ಎಂ.ಪಿ.ಕೃಷ್ಣ ಅವರ ಸೇವೆ ಶ್ಲಾಘನೀಯ. ಸೇವಾ ಮನೋಭಾವ ಮತ್ತು ಬೋಧಕರೊಂದಿಗಿನ ಒಡನಾಟ ಸದಾ ಹಚ್ಚಹಸಿರಾಗಿರಲಿದೆ. ಇವರ ನಿವೃತ್ತಿ ಜೀವನ ಸುಖಕರ ಹಾಗೂ ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದರು. ಹಿಂದಿ ವಿಭಾಗದ ಪ್ರೊ.ಶ್ರೀಧರ್ ಆರ್. ಹೆಗ್ಡೆ…
ಮಡಿಕೇರಿ NEWS DESK ಜು.3 : ಕೊಡಗು ಜಿಲ್ಲೆಯಲ್ಲಿನ ಮಾನವ–ಆನೆ ಸಂಘರ್ಷ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಮನವಿಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ. 2026ರ ಜೂನ್ 11ರಂದು ಸಂಸದ ಶ್ರೀ ಯದುವೀರ್ ಒಡೆಯರ್ ರವರು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಶ್ರೀ ಭೂಪೇಂದ್ರ ಯಾದವ್ ರವರನ್ನು ಬೇಟಿ ಯಾಗಿ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ಸಚಿವರು ಕೊಡಗಿನ ಅರಣ್ಯ ಅಂಚಿನ ಪ್ರದೇಶಗಳಲ್ಲಿ ರೈತರು, ತೋಟಗಾರರು ಮತ್ತು ಸ್ಥಳೀಯ ನಿವಾಸಿಗಳನ್ನು ಕಾಡುತ್ತಿರುವ ಮಾನವ–ಆನೆ ಸಂಘರ್ಷ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವಾಲಯವು ವನ್ಯಜೀವಿ ವಾಸಸ್ಥಳಗಳ ಅಭಿವೃದ್ಧಿ (Development of Wildlife Habitats) ಹಾಗೂ ಪ್ರಾಜೆಕ್ಟ್ ಟೈಗರ್ & ಎಲೆಫೆಂಟ್ (Project Tiger & Elephant) ಸೇರಿದಂತೆ ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ರಾಜ್ಯ ಸರ್ಕಾರಗಳಿಗೆ ಆರ್ಥಿಕ ನೆರವು ನೀಡುತ್ತಿರುವುದಾಗಿ…
ಮಂಗಳೂರು NEWS DESK ಜು.3 : ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ 2026-27 ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಬಿ. ಎ, ಬಿ. ಕಂ, ಬಿಬಿಎ , ಬಿ. ಎಸ್ಸಿ ಪದವಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಅಥವಾ ಗಣಿತಶಾಸ್ತ್ರ, ಸಂಖ್ಯಾಶಾಸ್ತ್ರ ವನ್ನು ಪದವಿ ತರಗತಿಯಲ್ಲಿ ಒಂದು ಕೋರ್ಸ್ ಆಗಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಕೋರ್ಸ್ ಗೆ ಪ್ರವೇಶಾತಿ ಪಡೆಯಲು ಅರ್ಹತೆಯನ್ನು ಹೊಂದಿರುತ್ತಾರೆ. ಶಿಕ್ಷಣದ ಜೊತೆಯಲ್ಲಿ ವಿಭಾಗವು ವೃತ್ತಿಪರ ಉದ್ಯೋಗ ತರಬೇತಿ, ಹೂಡಿಕೆ , ಬಂಡವಾಳ, ಹಾಗೂ ಹಣಕಾಸಿನ ವಿಶ್ಲೇಷಣೆ, ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಮಾರ್ಗದರ್ಶನ, ಹಣಕಾಸು ವಲಯದಲ್ಲಿರುವ ಅವಕಾಶಗಳು ಮತ್ತು ಸಂಶೋಧನಾ ಕ್ಷೇತ್ರಗಳಿಗೆ ಸಂಬಂಧಿಸಿದ ಶಿಕ್ಷಣಕ್ಕೆ ಮಹತ್ವವನ್ನು ನೀಡಿರುತ್ತದೆ. ಅಂತರಾಷ್ಟ್ರೀಯ ಮಟ್ಟದ ವ್ಯವಹಾರ ವಿಶ್ಲೇಷಣೆಯ ಬಗ್ಗೆ ನಿರಂತರವಾಗಿ ವಿಶ್ಲೇಷಣೆಯನ್ನು ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡುತ್ತ ಬಂದಿರುತ್ತದೆ.…
ವಿರಾಜಪೇಟೆ ಜು.2 NEWS DESK : ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್-2026)ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಎಸ್.ಪಿ.ರೈಮಂಡ್ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರರು ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಳ್ಳುವುದು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಸಂಯೋಜಕರು ಹಾಗೂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪವಿತ್ರ ಅವರು, ಎಸ್.ಐ.ಆರ್ ನ ಉದ್ದೇಶಗಳು, ಮತದಾರನು ಪಾಲ್ಗೊಳ್ಳುವ ಹಂತಗಳು ಹಾಗೂ ಮತದಾನದ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿಯನ್ನು ಮೂಡಿಸಿದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ ಜು.2 NEWS DESK : ಕಲ್ಯಾಣ ಕ್ರಾಂತಿಯ ಬಳಿಕ ಕಣ್ಮರೆಯಾದ ವಚನ ಸಾಹಿತ್ಯವನ್ನು ಸಂಗ್ರಹಿಸುವಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್.ಮೂರ್ತಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಗಾಂಧಿ ಭವನದಲ್ಲಿ ನಡೆದ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನಾಚರಣೆ (ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ) ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಚನ ಸಾಹಿತ್ಯವು 12ನೇ ಶತಮಾನದ ಶರಣರ ಚಿಂತನೆ, ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಭಂಡಾರವಾಗಿದೆ. ವಿದ್ಯಾರ್ಥಿಗಳು ವಚನಗಳನ್ನು ಮೈಗೂಡಿಸಿಕೊಳ್ಳಬೇಕು. ದಿನಕ್ಕೆ ಒಂದು ವಚನಗಳನ್ನಾದರೂ ಕಲಿತು ಅದರ ಮೆರುಗನ್ನು ಬದುಕಿನಲ್ಲಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ಡಾ.ಫ.ಗು.ಹಳಕಟ್ಟಿ ಅವರು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ವಚನ ಸಾಹಿತ್ಯದ ಅಧ್ಯಯನದಿಂದ ಅರಿವು ಜಾಗೃತಗೊಂಡು, ಬೆಳಕು ಮೂಡುತ್ತದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷರಾದ ಶಿವಪ್ಪ ಅವರು, ಬಸವಾದಿ ಶರಣರು…
ಮಡಿಕೇರಿ ಜು.2 NEWS DESK : ಕೃಷಿಕರಿಗೆ ನಕಲಿ ಹಾಗೂ ಅಸಲಿ ರಸಗೊಬ್ಬರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಮಾರಾಟಗಾರರು, ವಿತರಕರು ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ಕಳಪೆ ಹಾಗೂ ನಕಲಿ ಬಿತ್ತನೆ ಬೀಜ ಮತ್ತು ಕೀಟನಾಶಕಗಳ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೆಲವು ಅನಧೀಕೃತ ಮತ್ತು ಪರವಾನಗಿ ರಹಿತ ಮಾರಾಟಗಾರರು ರೈತರಿಗೆ ಕಳಪೆ ಹಾಗೂ ನಕಲಿ ಬಿತ್ತನೆ ಬೀಜ ಮತ್ತು ಕೀಟನಾಶಕಗಳನ್ನು ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ದೂರುಗಳು ಕಂಡು ಬರುತ್ತಿದೆ. ಇಂತಹ ಕೃತ್ಯಗಳಿಂದ ರೈತರು ಆರ್ಥಿಕ ನಷ್ಟ ಅನುಭವಿಸುದಲ್ಲದೆ, ಕೃಷಿ ಉತ್ಪಾದನೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು ಮತ್ತು ಮಣ್ಣು ಆರೋಗ್ಯ ನೋಡಿಕೊಂಡು ರಸಗೊಬ್ಬರ ಬಳಸುವಂತಾಗಲು ರೈತರಿಗೆ ಮನವರಿಕೆ ಮಾಡಬೇಕು. ಅಧಿಕಾರಿಗಳು,…
ಸುಂಟಿಕೊಪ್ಪ ಜು.2 NEWS DESK : ಸಣ್ಣ ಪ್ರಮಾಣದ ಮಳೆ ಮತ್ತು ಗಾಳಿಗೆ ಕೆದಕಲ್ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಇದ್ದ ಬೃಹತ್ ಮರವೊಂದು ಹೆದ್ದಾರಿಗೆ ಬಿದ್ದ ಪರಿಣಾಮ 2 ಬದಿಯ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಗುರುವಾರದಂದು ಅಲ್ಪಪ್ರಮಾಣದ ಮಳೆ ಸುರಿಯುತ್ತಿದ್ದು, ಬಿರುಸಿನ ಗಾಳಿಯ ಪರಿಣಾಮ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಪರಿಣಾಮ ಬಾರೀ ವಾಹನಗಳ ಸಂಚಾರಕ್ಕೆ ತೊಡಕು ಉಂಟಾಯಿತು. ಕಿಲೋ ಮೀಟರ್ ದೂರದವರೆಗೆ ವಾಹನಗಳು ಸರತಿ ಸಾಲಿನಲ್ಲಿ ಸುಮಾರು 2 ಗಂಟೆಗಳ ಕಾಲಗಳ ಸ್ಥಗಿತಗೊಂಡು ಪ್ರಯಾಣಿಕರು ವಾಹನ ಸವಾರರಿಗೆ ತೀವ್ರ ತೊಂದರೆಯನ್ನು ಉಂಟುಮಾಡಿತು. ಸ್ಥಳಕ್ಕೆ ಅಗ್ನಿಶಾಮಕ ದಳದವರು, ಗ್ರಾಮಸ್ಥರು ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮಡಿಕೇರಿ ಜು.2 NEWS DESK : ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದ್ದು, ರಾಜ್ಯ ಸರಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಪ್ರಮುಖರು ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಶಾಸ್ತ್ರಿ, ಹಲವಾರು ವರ್ಷಗಳಿಂದ ರಸ ಗೊಬ್ಬರ ವಿಚಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ. ಸಬ್ಸಿಡಿ ವ್ಯಾಪ್ತಿಗೆ ಒಳಪಡುವ ರಸ ಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಮಾತ್ರವಲ್ಲದೇ ಗೊಬ್ಬರ ಜೊತೆಯಲ್ಲಿಯೇ ಇತರ ಉತ್ಪನ್ನಗಳನ್ನು ಖರೀದಿಸಬೇಕೆಂದು ರೈತರನ್ನು ಒತ್ತಾಯಿಸಲಾಗುತ್ತಿದೆ. ಮಾತ್ರವಲ್ಲದೇ ಗೊಬ್ಬರ ಉತ್ಪಾದಕ ಕಂಪೆನಿಯೇ ಗೊಬ್ಬರ ಸರಬರಾಜು ದರವನ್ನು ಪಾವತಿಸಬೇಕು ಎಂಬ ನಿಯಮವಿದೆ. ಆದರೆ ಈ ನಿಯಮವನ್ನು ಉಲ್ಲಂಘಿಸಿ ರೈತರಿಂದಲೇ ಸರಬರಾಜು ದರ ವಸೂಲಿ ಮಾಡಲಾಗುತ್ತಿದೆ. ಈ ಎಲ್ಲಾ ವಿಚಾರಗಳು ಕೃಷಿ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೂ ಮಾಹಿತಿ ಇದೆ. ಆದರೂ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು. ಇಂತಹ ಅವ್ಯವಸ್ಥೆಗಳಿಗೆ…
ಮಡಿಕೇರಿ ಜು.2 NEWS DESK : ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಆರಂಭವಾದ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್ ಆಗಿ ಕೊಡಗು ಜಿಲ್ಲೆಯ ಮಾದಾಪುರ ಗ್ರಾಮದ ರಿಯಾಝ್ ನಝೀರ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಸಾರಿಗೆ ಇತಿಹಾಸದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಯು.ಎ.ಇ.ಯ ಹೊಸ ಪ್ರಯಾಣಿಕ ರೈಲು ಸಾರಿಗೆಯ ಪ್ರಥಮ ಯಾನಕ್ಕೆ ಪೈಲಟ್ ಆಗಿ ರಿಯಾಝ್ ಅವರನ್ನು ಅಲ್ಲಿನ ಆಡಳಿತ ನೇಮಕ ಮಾಡಿದೆ. ರಿಯಾಝ್ ಅವರು ಖತರ್ ಮೆಟ್ರೊ ಮತ್ತು ಖತರ್ ಟ್ರಾಮ್ ಸೇವೆಗಳ ಉದ್ಘಾಟನೆಯ ವೇಳೆ ಕೂಡ ಮೊದಲ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿದ್ದರು. “ಬಾಲ್ಯದ ಸಮಯದಲ್ಲಿ ಕನಿಷ್ಠ ಸೈಕಲ್ ಕೂಡ ನನಗೆ ಸಿಗಲಿಲ್ಲ. ಈಗ ಅತ್ಯಂತ ಜವಾಬ್ದಾರಿಯುತವಾದ ರೈಲು ಸೇವೆಯ ಪ್ರಥಮ ಯಾನದ ಪೈಲಟ್ ಆಗುವ ಯೋಗ ಸಿಕ್ಕಿರುವುದಕ್ಕೆ ಹೆಮ್ಮೆ ಆಗುತ್ತಿದೆ” ಎಂದು ರಿಯಾಝ್ ಅವರು ಪ್ರತಿಕ್ರಿಯಿಸಿದ್ದಾರೆ. ರಿಯಾಝ್ ಅವರು ಪ್ರಸ್ತುತ ಸುಂಟಿಕೊಪ್ಪದಲ್ಲಿ ವಾಸವಿರುವ ಹಾಜಿ ನಝೀರ್ ಹಾಗೂ ರಹ್ಮತ್ ದಂಪತಿಯ ಪುತ್ರ.






