ಲೇಖಕ: admin

ಮಡಿಕೇರಿ NEWS DESK ಜೂ.11 : ನನ್ನ ಮನವಿಗೆ ಸ್ಪಂದಿಸಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ 22 ಕೋಟಿ ರೂಪಾಯಿ ಅನುದಾನ ಒದಗಿಸಿದ ಕೇಂದ್ರ ಸರ್ಕಾರದ ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರಿಗೆ ವೈಯಕ್ತಿಕವಾಗಿ ಹಾಗೂ ಕೊಡಗು ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳು. (ಡಾ.ಮಂತರ್ ಗೌಡ, ಶಾಸಕರು, ಮಡಿಕೇರಿ ವಿಧಾನಸಭಾ ಕ್ಷೇತ್ರ)

Read More

ಮಡಿಕೇರಿ NEWS DESK ಜೂ.11 : ಮಡಿಕೇರಿ ಲಯನ್ಸ್ ಸಂಸ್ಥೆಯ 2026-27ನೇ ಸಾಲಿನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಎಲ್., ಕಾರ್ಯದರ್ಶಿಯಾಗಿ ಕೆ.ಮಧುಕರ್ ಹಾಗೂ ಕೋಶಾಧಿಕಾರಿಯಾಗಿ ಅಂಬೆಕಲ್ ನವೀನ್ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.27ರಂದು ಸಂಜೆ 7 ಗಂಟೆಗೆ ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ನಡೆಯಲಿದೆ. ಲಯನ್ಸ್ ಜಿಲ್ಲೆ 317ಸಿ ಯ ಪ್ರಥಮ ಉಪ ಜಿಲ್ಲಾ ಗವರ್ನರ್ ಲಯನ್ ಹರಿಪ್ರಸಾದ್ ರೈ ಅವರು ಪದಗ್ರಹಣಾಧಿಕಾರಿಯಾಗಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ದೀಕ್ಷೆಯನ್ನು ಬೋಧಿಸಲಿದ್ದಾರೆ.

Read More

ಮಡಿಕೇರಿ NEWS DESK ಜೂ.11 : ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟರ ಸಮಾಜವನ್ನು ಅವಹೇಳನ ಮಾಡಿರುವ ಮಹಿಳೆಯನ್ನು ತಕ್ಷಣ ಬಂಧಿಸಿ ಆಕೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಲ್ಲವ ಸಮಾಜ ಮತ್ತು ಬಂಟರ ಸಮಾಜ ಜಂಟಿಯಾಗಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ. ಜಾತಿ ಜನಾಂಗಗಳ ಮಧ್ಯೆ ವಿಷಬೀಜವನ್ನು ಬಿತ್ತುವ ಮತ್ತು ದ್ವೇಷವನ್ನು ಬೆಳೆಸುವ ಉದ್ದೇಶದಿಂದ ಮಹಿಳೆ ತನಗೆ ತೋಚಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಈಕೆ ತನ್ನ ಫೇಸ್‌ಬುಕ್ ಖಾತೆಯಲ್ಲಿ ಬಹಿರಂಗವಾಗಿ ಬಿಲ್ಲವ ಮತ್ತು ಬಂಟರ ಜನಾಂಗವನ್ನು ಕೀಳಾಗಿ ಹೀಯಾಳಿಸಿ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಇದು ಜಾತಿಗಳ ನಡುವೆ ವೈಷಮ್ಯ ಮೂಡಿಸುವ ಮತ್ತು ಗಲಭೆಗೆ ಪ್ರಚೋದನೆ ನೀಡಲು ಹೂಡಿರುವ ಸಂಚೆoದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಲಕ್ಷಾಂತರ ಬಿಲ್ಲವ ಹಾಗೂ ಬಂಟರ ಸಮುದಾಯದ ಜನರ ಧಾರ್ಮಿಕ ಮತ್ತು ಸಾಮಾಜಿಕ…

Read More

ಮಡಿಕೇರಿ ಜೂ.10 NEWS DESK : ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಜೊತೆಗೆ ನೋಡಲ್ ಹಾಗೂ ಸಹಾಯಕ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ. :: ಸಹಾಯವಾಣಿ ಕೇಂದ್ರ ವಿವರ : ಜಿಲ್ಲಾಡಳಿತ ಭವನದಲ್ಲಿರುವ ಸಹಾಯವಾಣಿ ಸಂಖ್ಯೆ 8550001077 ಸಂಪರ್ಕಿಸಬಹುದಾಗಿದೆ. ಹಾಗೆಯೇ ತಾಲ್ಲೂಕು ಮಟ್ಟದಲ್ಲಿ ಮಡಿಕೇರಿ ತಾಲ್ಲೂಕು 08272-228396, ಸೋಮವಾರಪೇಟೆ ತಾಲ್ಲೂಕು 08276-282045, ಕುಶಾಲನಗರ ತಾಲ್ಲೂಕು 08276-200198, ವಿರಾಜಪೇಟೆ ತಾಲ್ಲೂಕು 08274-257328 ಹಾಗೂ ಪೊನ್ನಂಪೇಟೆ ತಾಲ್ಲೂಕು 08274-249700 ನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲೆಯ ವಿವಿಧ ಪ್ರದೇಶಗಳಿಗೆ ನಿಯೋಜಿಸಿರುವ ನೋಡಲ್ ಅಧಿಕಾರಿ ಹಾಗೂ ಸಹಾಯಕ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆ ವಿವರ ::  ಮಡಿಕೇರಿ ನಗರವ್ಯಾಪ್ತಿ ಹಾಗೂ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ನೋಡಲ್ ಅಧಿಕಾರಿ ಮಡಿಕೇರಿ ನಗರಸಭೆ ಪೌರಾಯುಕ್ತರು ದೂ.ಸಂ. 9845723666, ಸಹಾಯಕ ನೋಡಲ್ ಅಧಿಕಾರಿ ಕಂದಾಯ ಅಧಿಕಾರಿ, ನಗರಸಭೆ, ಮಡಿಕೇರಿ ದೂ.ಸಂ.…

Read More

ವಿರಾಜಪೇಟೆ ಜೂ.10 NEWS DESK : ವಿದ್ಯಾರ್ಥಿಗಳು ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರು ಅವರು ಹೇಳಿದರು. ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯ ರೂವಾರಿಗಳು. ಮೂರು ವರ್ಷಗಳ ಪದವಿ ಶಿಕ್ಷಣವನ್ನು ಪಡೆದು ತೆರಳುವ ನೀವು ಸಮಾಜ ನೀಡುವ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು. ಓದುಗಾರಿಕೆಯ ಜೊತೆಗೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಿರಿ ಎಂದು ಹೇಳಿದರು. ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ.ಜೆ.ದಿವಾಕರ ಕುಂದಲ್ಪಾಡಿ ಅವರು ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಿರಿ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವುದರ ಮೂಲಕ ಉತ್ತಮ ಉದ್ಯೋಗವನ್ನು ಪಡೆದು ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಹಿತ ನುಡಿಗಳನ್ನಾಡಿದರು. ಸಮಾಜ ಹಾಗೂ ರಾಷ್ಟ್ರಕ್ಕೂ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ. ಸರಸ್ವತಿ, ವಿದ್ಯಾರ್ಥಿಗಳು ಜೀವನದ…

Read More

ಮಡಿಕೇರಿ ಜೂ.10 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಮಡಿಕೇರಿ ಬ್ರಹ್ಮಕುಮಾರಿ ಶಾಖೆ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ಮಡಿಕೇರಿ ಶಾಖೆಯ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ ಅವರು ಮಾತನಾಡಿ, ದಿನದ ಮಹತ್ವ ತಿಳಿಸಿದರು. ಭೂಮಿಯು ಸಮಸ್ತ ಜೀವಿಗಳಿಗೂ ಜೀವನಾಧಾರ, ಪೋಷಕ ಹಾಗೂ ಎಲ್ಲವನ್ನೂ ಸಹಿಸಿಕೊಂಡು “ಕ್ಷಮಾಪನೆ ಮತ್ತು ಕೊಡುವ ಗುಣ”ಕ್ಕೆ (ದಾನಶೀಲತೆ) ಸಂಕೇತವಾಗಿದೆ. ಭೂಮಿಯು ನಮಗೆ ನೀತಿಯ ಪಾಠವನ್ನು, ಜೀವನದ ಮೌಲ್ಯಗಳನ್ನು ಮತ್ತು ಪ್ರಕೃತಿಯ ಸೌಂದರ್ಯವನ್ನು ನೀಡುತ್ತದೆ. ಆ ನಿಟ್ಟಿನಲ್ಲಿ ನಾವುಗಳು ವಿಶ್ವ ಪರಿಸರ ದಿನವನ್ನು ಒಂದು ದಿನಕ್ಕೆ ಸೀಮಿತ ಗೊಳಿಸದೇ ಸಹಸ್ರಾರು ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಬೇಕು ಎಂದು ಕರೆ ನೀಡಿದರು. ಅದೇ ರೀತಿ ಪ್ರಕೃತಿಯ ಐದು ಗುಣವನ್ನು ಜೀವನದಲ್ಲಿ ಅಳವಡಿಸಿಕೊಂಡು ನಮ್ಮೊಂದಿಗೆ ಇತರರನ್ನು ಸುಖಿಯಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಆವರಣದಲ್ಲಿ ಹಣ್ಣಿನ ಗಿಡ ನೆಟ್ಟು,…

Read More

ಮಡಿಕೇರಿ NEWS DESK ಜೂ.10 : ನಗರದ ಹೃದಯಭಾಗದಲ್ಲಿರುವ ಹಲವು ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಸಂಪಿಗೆಕಟ್ಟೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಚಾಲಕರು, ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕರು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ರಸ್ತೆ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಯುವ ಘಟಕದ ಜಿಲ್ಲಾಧ್ಯಕ್ಷ ಎಂ.ಕೆ.ಆಶಿಕ್ ಒತ್ತಾಯಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಸಂಪಿಗೆಕಟ್ಟೆ ರಸ್ತೆ ಅಭಿವೃದ್ಧಿ ಕಂಡಿಲ್ಲ. ಪ್ರಸ್ತುತ ಮಳೆಗಾಲವಾಗಿರುವುದರಿಂದ ರಸ್ತೆಯ ಗುಂಡಿಗಳಲ್ಲಿ ಮಳೆನೀರು ನಿಲ್ಲುತ್ತಿದೆ. ಪ್ರತಿದಿನ ದ್ವಿಚಕ್ರ ವಾಹನ ಸವಾರರು ಗುಂಡಿಗಳಿಗೆ ಬಿದ್ದು ಗಾಯಗೊಳ್ಳುತ್ತಿದ್ದಾರೆ. ಅದರಲ್ಲೂ ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ. ಪ್ರತಿದಿನ ಇದೇ ರಸ್ತೆಯಲ್ಲಿ ರಾಜರಾಜೇಶ್ವರಿ ವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಜೀವದ ಹಂಗು ತೊರೆದು ಅಪಾಯಕಾರಿ ಗುಂಡಿಗಳ ನಡುವೆಯೇ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇದು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಅಲ್ಲದೆ ರಸ್ತೆ ಅವ್ಯವಸ್ಥೆ ಮಡಿಕೇರಿ…

Read More

ಕುಶಾಲನಗರ ಜೂ.10 NEWS DESK : ಕುಶಾಲನಗರದಲ್ಲಿ ಜೂ.23 ರಂದು ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪ್ರಥಮ ಸಮ್ಮೇಳನದ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಸೋಮೇಶ್ವರ ದೇವಾಲಯ ರಸ್ತೆಯ ಮೂರನೇ ತಿರುವಿನ ಬಿ.ನಟರಾಜು ಎಂಬವರ ನಿವಾಸದಲ್ಲಿ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನದ ಕಚೇರಿಯನ್ನು ಆರಂಭಿಸಲಾಯಿತು. ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್. ವಿ. ಶಿವಪ್ಪ ಹಾಗೂ ವಿಶಾಲನಗರದ ಎಪಿಸಿಎಂಎಸ್ ಅಧ್ಯಕ್ಷ ಎಚ್.ಬಿ.ಚಂದ್ರಪ್ಪ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಮಹಾಸಭಾದ ಅಧ್ಯಕ್ಷ ಹೆಚ್. ವಿ. ಶಿವಪ್ಪ, ಕೊಡಗು ಜಿಲ್ಲೆಯ ಕೇಂದ್ರ ಸ್ಥಾನ ಕುಶಾಲನಗರದಲ್ಲಿ ಜರುಗುತ್ತಿರುವ ಮೊದಲನೆ ಶರಣ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಕಾರ್ಯನಿರತರಾಗಿ ಅಚ್ಚುಕಟ್ಟಾಗಿ ಹಾಗೂ ಶಿಸ್ತು ಬದ್ಧವಾಗಿ ಕಾರ್ಯಯೋಜನೆ ರೂಪಿಸಬೇಕು. ಸುತ್ತೂರು ಜಗದ್ಗುರುಗಳು ಇದೇ ಮೊದಲ ಬಾರಿಗೆ ಕುಶಾಲನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರ್ಪಡೆಯಾಗುವ ಮೂಲಕ ಅವರನ್ನು ಜಾತ್ಯತೀತವಾಗಿ ಹಾಗೂ ಧರ್ಮಾತೀತವಾಗಿ ಸ್ವಾಗತಿಸಿ ಕಾರ್ಯಕ್ರಮಕ್ಕೆ ಮೆರುಗು…

Read More

ಮಡಿಕೇರಿ NEWS DESK ಜೂ.10 : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ವನ್ಯಜೀವಿಗಳ ಹಾವಳಿ ಮಿತಿ ಮೀರಿದೆ. ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರಕಾರದ ವಿರುದ್ಧ ಬೆಂಗಳೂರು ಚಲೋ ಮತ್ತು ವಿಧಾನಸೌಧಕ್ಕೆ ಮುತ್ತಿಗೆ ಹೋರಾಟವನ್ನು ಬಿಜೆಪಿ ರೂಪಿಸಲಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಅವರು ರಾಜ್ಯದ ಕೊಡಗು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಈ ಐದು ಜಿಲ್ಲೆಗಳ ಜನರನ್ನು ಒಗ್ಗೂಡಿಸಿ ಬೆಂಗಳೂರು ಚಲೋ ಹೋರಾಟ ನಡೆಸಲಾಗುವುದು ಎಂದರು. ವನ್ಯಜೀವಿಗಳ ನಿರಂತರ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಇದರಿಂದ ಆತಂಕಗೊoಡಿರುವ ರೈತರು ಹಾಗೂ ಕಾರ್ಮಿಕರು ತೋಟಗಳಿಗೆ ತೆರಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಬಿಟ್ಟಿ ಭಾಗ್ಯಗಳಿಗೆ ರೂ.56 ಸಾವಿರ ಕೋಟಿ ಖರ್ಚು ಮಾಡುತ್ತಿರುವ ಸರಕಾರ ಐದು ಜಿಲ್ಲೆಗಳಲ್ಲಿ ಕಾಡಾನೆ ದಾಳಿ…

Read More

ಕುಶಾಲನಗರ  ಜೂ.10 NEWS DESK :  ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಜೂ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಶರಣ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಬಳಿಕ ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಕೊಡಲು ಇಚ್ಛಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜೂನ್ ತಿಂಗಳ 15 ನೆ ದಿನಾಂಕದೊಳಗೆ ತಮ್ಮ ಹೆಸರುಗಳನ್ನು ನೊಂದಾಯಿಸಲು ಸಮ್ಮೇಳನ ಸಮಿತಿಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಸ್.ನಂದೀಶ್ ತಿಳಿಸಿದ್ದಾರೆ. ಶರಣರ ವಚನ ಗೀತೆಗಳು, ಜನಪದ ಗೀತೆಗಳು, ಭರತ ನಾಟ್ಯ, ಸಮೂಹ ನೃತ್ಯ, ಶರಣರ ಛದ್ಮ ವೇಶಗಳು, ಶರಣರ ರೂಪಕಗಳು ಹಾಗೂ ಕಿರು ನಾಟಕಗಳಿಗೆ ಅವಕಾಶ ಇರುತ್ತದೆ. ಆಸಕ್ತರು ತಮ್ಮ ಹೆಸರನ್ನು ಎಸ್.ನಂದೀಶ್, ಸಮ್ಮೇಳನದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರು, ಕುಶಾಲನಗರ. ಮೊಬೈಲ್ ಸಂಖ್ಯೆ 94810 72372 ಇಲ್ಲಿ ನೊಂದಾಯಿಸಬೇಕೆಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಕೋರಿದ್ದಾರೆ.

Read More