ಲೇಖಕ: admin

ಮಡಿಕೇರಿ ಮೇ 21 NEWS DESK : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಅವರ ಉಪಸ್ಥಿತಿಯಲ್ಲಿ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಪ್ರಯುಕ್ತ ‘ಪ್ರತಿಜ್ಞಾ ವಿಧಿ’ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅವರ ಆಪ್ತ ಸಹಾಯಕರಾದ ಜಿ.ಷಣ್ಮುಖ ಅವರು ಬೋಧಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮಥ್ರ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಷಣ್ಮುಖ ಅವರು ಪ್ರಮಾಣ ವಚನ ಬೋಧಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಜಿಲ್ಲಾ…

Read More

ಮಡಿಕೇರಿ ಮೇ 21 NEWS DESK : ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಇದರ ಯಶಸ್ಸಿಗೆ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಲ್ಸ್ ಪೋಲಿಯೋ ಲಸಿಕೆಯು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜೂ.28 ರಿಂದ ಜು.1 ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಅಗತ್ಯ ಸಿಬ್ಬಂದಿಗಳ ನಿಯೋಜನೆ, ವಾಹನ ನಿಯೋಜನೆ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪೋಲಿಯೋ ಹನಿ ನೀಡುವ ಕಾರ್ಯಕ್ರಮ ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 5 ವರ್ಷದವರೆಗಿನ ಒಟ್ಟು 32,702 ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ 3,275, ಗ್ರಾಮೀಣ ಭಾಗದಲ್ಲಿ 29,427 ಮಕ್ಕಳಿದ್ದಾರೆ.…

Read More

ಮಡಿಕೇರಿ ಮೇ 21 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು  ಆಚರಿಸಲಾಯಿತು. ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಚೇರಿಯ ಅಧಿಕಾರಿ ಪೊಲೀಸ್ ಮತ್ತು ಲಿಪಿಕ ಸಿಬ್ಬಂದಿಗಳಿಗೆ  ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಿದರು.

Read More

ಮಡಿಕೇರಿ ಮೇ 21 NEWS DESK : ಪೊನ್ನಂಪೇಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಜೂ.6 ರಂದು ಹುದಿಕೇರಿಯಲ್ಲಿ ಜರಗಲಿದೆ. ಸಮ್ಮೇಳನದಲ್ಲಿ ಉದ್ಘಾಟನಾ ಸಮಾರಂಭ, ವಿಚಾರಗೋಷ್ಠಿ, ಕನ್ನಡ ಗೀತ ಗಾಯನ, ಕವಿಗೋಷ್ಠಿ, ಸಾಧಕರಿಗೆ ಸನ್ಮಾನ, ಸಮಾರೋಪ ಸಮಾರಂಭ ಮತ್ತು ತಾಲೂಕಿನ ಪ್ರತಿಭೆಗಳ ಪ್ರದರ್ಶನಕ್ಕಾಗಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಕಲಾವಿದರು ಅಥವಾ ಕಲಾವಿದರ ತಂಡ ಈ ಕೆಳಗಿನ ವಿಳಾಸ ಅಥವಾ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಅಪೇಕ್ಷೆ ಅಥವಾ ಅರ್ಜಿ ವಾಟ್ಸಾಪ್ ಮೂಲಕ ದಿನಾಂಕ 25.05.2026ರ ಒಳಗಾಗಿ ಸಲ್ಲಿಸಬಹುದು. ಸಂಪರ್ಕಿಸಬೇಕಾದ ವಿಳಾಸ : ಶ್ರೀ ಬಾನಂಗಡ ಅರುಣ್, ಅಧ್ಯಕ್ಷರು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ. ಹೆಚ್ಚಿನ ಮಾಹಿತಿಗೆ 94497 64418, 91138 92396, 94487 21542  ಸಂಪರ್ಕಿಸಬಹುದಾಗಿದೆ ಎಂದು ಸಮ್ಮೇಳನದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾದ ಬುಟ್ಟಿಯಂಡ ಸುನಿತಾ ಗಣಪತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 21 NEWS DESK : ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಂಗಳ್ಳಿ ಗ್ರಾಮದ ಊರ್ ಮಂದ್ ಹೊಳೆಗೆ 35ಲಕ್ಷ ವೆಚ್ಚದ ಸೇತುವೆ ನಿರ್ಮಾಣಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಪ್ರತೀ ಗ್ರಾಮಗಳ ಅಭಿವೃದ್ಧಿಯ ಕನಸು ತನ್ನದಾಗಿದ್ದು, ಈಡೇರಿಕೆಗೆ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ತಿಳಿಸಿದರು. ಅಭಿವೃದ್ಧಿಯಲ್ಲಿ ಗ್ರಾಮ ನಿವಾಸಿಗಳ ಪಾತ್ರವು ಮುಖ್ಯ, ಗುಣಮಟ್ಟದ ಕಾಮಗಾರಿ ಗಮನಿಸುವ ಹೊಣೆಗಾರಿಕೆ ಸ್ಥಳೀಯರದಾಗಬೇಕು ಎಂದರಲ್ಲದೆ, ಕಾಲಮಿತಿಯೊಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆಗಾರರಿಗೆ ಸೂಚಿಸಿದರು. ಈ ಸಂದರ್ಭ ಶಿರಂಗಳ್ಳಿ ಗ್ರಾಮಧ್ಯಕ್ಷ ಉಡುವೆರ ಮಿಟ್ಟು ತಮ್ಮಯ್ಯ, ಗರ್ವಾಲೆ ಕೊಡವ ಸಮಾಜ ಅಧ್ಯಕ್ಷ ಸರ್ಕಂಡ ಗಣಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಾಕೇರಿ ಸತೀಶ್, ಸ್ಥಳೀಯ ಮುಖಂಡರಾದ ಉದ್ದಿನಾಡಂಡ ರಘು, ಮೋಟನಳ್ಳಿರ ಸನ್ನಿ ಕಾರ್ಯಪ್ಪ ಸೇರಿದಂತೆ ಗ್ರಾಮಸ್ಥರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಮೇ 21 : ಬೆಲೆ ಹೆಚ್ಚಳದ ಪರಿಣಾಮ ಸಂಕಷ್ಟದ ಜೀವನ ಸಾಗಿಸುತ್ತಿರುವ ಆಟೋ ಚಾಲಕರ ಹಿತ ಕಾಪಾಡಲು ಸರಕಾರ “ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ” ರಚಿಸಬೇಕು ಎಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಎಸ್‌ಡಿಟಿಯು ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ಅವರು ಪೆಟ್ರೋಲ್, ಡೀಸೆಲ್, ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನಿತ್ಯ ದುಡಿಯುವ ಆಟೋ ಚಾಲಕರು ಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸದ ಶುಲ್ಕವೂ ದುಬಾರಿಯಾಗಿದೆ, ತೆರಿಗೆ ಹೊರೆ ಅಧಿಕವಾಗಿದೆ. ಆದ್ದರಿಂದ ಸರಕಾರ ತಕ್ಷಣ ಆಟೋ ಚಾಲಕರ ನೆರವಿಗೆ ಬಂದು “ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ” ರಚಿಸಿ ಅಗತ್ಯ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

Read More

ಮಡಿಕೇರಿ ಮೇ 20 NEWS DESK : ಶ್ರೀಮಂಗಲ 66/11ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಬಿರುನಾಣಿ ಮತ್ತು ಎಫ್7 ಟಿ.ಶೆಟ್ಟಿಗೇರಿ ಫೀಡರ್‍ನಲ್ಲಿ ಮೇ, 21 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಈ ಫೀಡರ್‍ನ ಗ್ರಾಮಗಳಾದ ತೆರಾಲು, ಬಿರುನಾಣಿ, ಬಾಡಗರಕೇರಿ, ಪೂಕೊಳ, ಪೊರಾಡು, ಕೊಟಿಯಾಲು, ಟಿ.ಶೆಟ್ಟಿಗೇರಿ, ವೆಸ್ಟ್ ಈಸ್ಟ್ ನೆಮ್ಮಲೆ, ಕಾಫಿಕಾಡು ಎಸ್ಟೇಟ್, ಹೊಸಕೆರೆ, ಗೊಟುಕೊಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 20 NEWS DESK : 7ನೇ ಆವೃತ್ತಿಯ ಚೆನ್ನಯ್ಯನಕೋಟೆ ಪ್ರೀಮಿಯರ್ ಲೀಗ್’ ನ ಚಾಂಪಿಯನ್ಸ್ ಪಟ್ಟವನ್ನು ಸ್ಮ್ಯಾಶ್ ಟೀಂ ತನ್ನದಾಗಿಸಿಕೊಂಡರೆ ಫಾಲ್ಕನ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಕಳೆದ ಮೂರು ದಿನಗಳಿಂದ ಇಲ್ಲಿನ ಸರಕಾರಿ ಶಾಲಾ ಮೈದಾನದಲ್ಲಿ ಸುಮಾರು ಎಂಟು ತಂಡಗಳ ನಡುವೆ ನಡೆದ ಈ ಪಂದ್ಯಾವಳಿಯಲ್ಲಿ ಟೀಂ ಸ್ಮ್ಯಾಶ್, ಟೀಂ ಫಾಲ್ಕನ್, ಸಹರಾ ಹಾಗೂ ಸಾಗರ್ ತಂಡ ಲೀಗ್ ಹಂತದಲ್ಲಿ ಉತ್ತಮ ಅಂಕ ಪಡೆದು ಕ್ವಾಲಿಫೈಯರ್ ಸುತ್ತಿಗೆ ಅರ್ಹತೆ ಪಡೆದವು. ಕ್ವಾಲಿಫೈಯರ್ ನಲ್ಲಿ ಗೆಲುವು ಸಾಧಿಸಿದ ಟೀಂ ಸ್ಮ್ಯಾಶ್ ಹಾಗೂ ಟೀಂ ಫಾಲ್ಕನ್ ನಡುವೆ ನಡೆದ ಫೈನಲ್ಸ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಫಾಲ್ಕನ್ಸ್ ನಿಗದಿತ 4ಓವರ್ ಗಳಲ್ಲಿ ಪ್ರಮುಖ 8 ವಿಕೆಟ್ ಕಳೆದುಕೊಂಡು 23ರನ್ನುಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಟೀಂ ಸ್ಮ್ಯಾಶ್ 3.3 ಓವರ್ ನಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು 27 ರನ್ನುಗಳ ಕಲೆ ಹಾಕುವ ಭರ್ಜರಿ ಜಯ ಸಾಧಿಸಿ ಚಾಂಪಿಯನ್ಸ್…

Read More

ಸುಂಟಿಕೊಪ್ಪ ಮೇ 20 NEWS DESK : ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ 17ನೇ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30 ರಂದು ನಡೆಸಲು ಈಗಾಗಲೇ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಹಲವು ವೈಶಿಷ್ಟತೆಯನ್ನು ಹೊಂದಿರುವ ತವರೂರಾದ ಸುಂಟಿಕೊಪ್ಪ ತನ್ನದೆಯಾದ ಇತಿಹಾಸವನ್ನು ಇರಿಸಿಕೊಂಡಿದೆ. ಸುಂಟಿಕೊಪ್ಪ ಪಟ್ಟಣದ ಹೃದಯ ಭಾಗದಲ್ಲಿರುವ ವೃತ್ತವೊಂದಕ್ಕೆ ಕನ್ನಡ ವೃತ್ತ ಎಂದು ಪದನಾಮ ಮಾಡಲಾಗಿದ್ದು, ವೃತ್ತದಲ್ಲಿ ನಮ್ಮ ಸುಂಟಿಕೊಪ್ಪ ಬಳಗದವರು ಕನ್ನಡದ ಅಕ್ಷರ ಮಾಲೆಯನ್ನು ಅಳವಡಿಸಿದ್ದಾರೆ. ಇದರಿಂದ ಈ ವೃತ್ತದ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ. ಈ ಕನ್ನಡ ವೃತ್ತಕ್ಕೆ 4 ದಶಕಗಳ ಇತಿಹಾಸವಿದ್ದು ಕಳೆದ 32 ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ಸಂಘಟನೆಗಳು ಸೇರಿ ಅದ್ಧೂರಿಯಾಗಿ ಆಚರಿಸುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ತಾತ್ಕಲಿಕ ಕಚೇರಿಯನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ಹಳೆಯ ಕಟ್ಟಡದಲ್ಲಿ ತೆರೆಯುವ ಮೂಲಕ ಕಾರ್ಯಪ್ರವೃತವಾಗಿದೆ. ಸಮ್ಮೇಳದ ಆಶೋತ್ತರಗಳನ್ನು ಪ್ರತಿಬಿಂಬಿಸುವ ಲಾಂಛನವನ್ನು ಕನ್ನಡ ಸಾಹಿತ್ಯ ಸಂಸ್ಥಾಪನ ದಿನದಂದು ಅನಾವರಣಗೊಳಿಸಲಾಗಿದೆ ಸಮ್ಮೇಳನದ…

Read More

ಕುಶಾಲನಗರ ಮೇ 20 NEWS DESK : ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದ ನಂತರ ತಾಲ್ಲೂಕಿನ ಹೆಬ್ಬಾಲೆ ಪ್ರೌಢಶಾಲೆ ಹಾಗೂ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗಳಿಗೆ ಶೇ.100 ಫಲಿತಾಂಶ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ತಿಳಿಸಿದ್ದಾರೆ. ಕುಶಾಲನಗರ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಓರ್ವ ವಿದ್ಯಾರ್ಥಿನಿಯು ಮರು ಮೌಲ್ಯಮಾಪನದಲ್ಲಿ ತೇರ್ಗಡೆ ಹೊಂದಿದ್ದು, ಶಾಲೆಯ ಎಲ್ಲಾ 30 ವಿದ್ಯಾರ್ಥಿಗಳು ಕೂಡ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಬಂದಿದೆ. ಹಾಗೆಯೇ, ತಾಲ್ಲೂಕಿನ ಹೆಬ್ಬಾಲೆ ಪ್ರೌಢಶಾಲೆ ಯ ಒರ್ವ ವಿದ್ಯಾರ್ಥಿ ಕೂಡ ಮರು ಮೌಲ್ಯಮಾಪನದಲ್ಲಿ ತೇರ್ಗಡೆ ಹೊಂದಿದ್ದು, ಶಾಲೆಯ ಎಲ್ಲಾ 37 ವಿದ್ಯಾರ್ಥಿಗಳು ಕೂಡ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಬಂದಿದೆ ಎಂದು ತಿಳಿಸಲಾಗಿದೆ. ಇದರಿಂದ ತಾಲ್ಲೂಕಿನಲ್ಲಿ ಮೊದಲು 39 ಪ್ರೌಢಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಇದೀಗ 2 ಪ್ರೌಢಶಾಲೆಗಳು ಶೇ.100 ಫಲಿತಾಂಶ ಗಳಿಸಿದ ಹಿನ್ನೆಲೆಯಲ್ಲಿ ಸೋಮವಾರಪೇಟೆ…

Read More