ಮಡಿಕೇರಿ ಜ.16 NEWS DESK : ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಸಂಕ್ರಾಂತಿ ದೀಪಾರಾಧನೆ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಟ್ರಸ್ಟ್ ಆವರಣದಲ್ಲಿ ಮಹಿಳೆಯರು ಸಾಲು ಹಣತೆ ಬೆಳಗಿದರು. ಟ್ರಸ್ಟ್ನ ಭಜನಾ ತಂಡದ ಸದಸ್ಯರು ಭಜನೆ ಮೂಲಕ ಮೆರುಗು ನೀಡಿದರು. ಸಾರ್ವಜನಿಕರು ಹಾಗೂ ದಾನಿಗಳ ಸಹಕಾರದಿಂದ ನೂತನವಾಗಿ ಖರೀದಿಸಲಾದ ಧ್ವನಿವರ್ಧಕವನ್ನು ಕಲಾವಿದ ಸುಭಾಷ್ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಭಜನೆ ಹಾಗೂ ಇನ್ನಿತರೆ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 53 ಸಾವಿರ ರೂ. ವೆಚ್ಚದಲ್ಲಿ ಧ್ವನಿವರ್ಧಕ ಖರೀದಿಸಲಾಗಿದೆ. ಇದಕ್ಕೆ ಗ್ರಾಮದ ಸಾರ್ವಜನಿಕರು, ದಾನಿಗಳು ನೆರವಾಗಿದ್ದಾರೆ ಎಂದರು. ಹಿಂದುಗಳ ಎಲ್ಲಾ ಹಬ್ಬ ಹರಿದಿನಗಳನ್ನು ಟ್ರಸ್ಟ್ ವತಿಯಿಂದ ಸಾರ್ವಜನಿಕವಾಗಿ ಆಚರಿಸಿ ನಮ್ಮ ಸಂಸ್ಕೃತಿ, ಆಚರಣೆಗಳನ್ನು ಈಗಿನ ತಲೆಮಾರಿಗೆ ಪರಿಚಯಿಸುವ ಕಾರ್ಯವೂ ಆಗುತ್ತಿದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ಕುಮಾರ್ ಮಾತನಾಡಿ, ವಿನಾಯಕ ಸೇವಾ ಟ್ರಸ್ಟ್ ಭಜನೆ ಮೂಲಕ ಎಲ್ಲರನ್ನೂ ಒಂದುಗೂಡಿಸುವ…
ಲೇಖಕ: admin
ಉಡುಪಿ ಜ.16 NEWS DESK : ಜಾಗತಿಕ ಸವಾಲುಗಳಿಗೆ ಉತ್ತರ ನೀಡಲು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸಾಧ್ಯವಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಮತ್ತು ಅವರ ಫಲಿತಾಂಶಗಳ ಸುಧಾರಣೆಗೆ ಖಾಸಗಿ ಸಂಸ್ಥೆಗಳ ಪಾತ್ರ ದೊಡ್ಡದು ಎಂದು ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷರಾದ ಮೋಹನ್ ಆಳ್ವಾ ತಿಳಿಸಿದರು. ಉಡುಪಿ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಯೊಳಗೆ ವ್ಯಾಪಾರ ಮನೋಧರ್ಮದ ಬದಲಾಗಿ ಸೇವಾ ಮನೋಭಾವವೇ ಮೂಲವಾಗಬೇಕು. ಅನಗತ್ಯ ಟೀಕೆ ಟಿಪ್ಪಣಿಗಳಿಗೆ ಚಿಂತಿಸದೆ ಫಲಿತಾಂಶದ ಕಡೆಗೆ ದುಡಿಯುವ ಮನಸ್ಸು ನಮ್ಮದಾಗಬೇಕು. ಪ್ರತೀ ಜಿಲ್ಲೆಗಳಲ್ಲೂ ಕುಪ್ಮಾ ಸಂಘಟನೆ ಬಲವಾಗಬೇಕು ಎಂದು ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಮಾತನಾಡಿ, ಇಲಾಖೆ ಮತ್ತು ಕುಪ್ಮಾ ಸಂಘಟನೆ ಜೊತೆಗೂಡಿ ಕೆಲಸ ನಿರ್ವಹಿಸಬೇಕು. ಪ್ರತೀ ಮಗುವಿಗೂ ಶಿಕ್ಷಣ ಸಿಗಲು ಖಾಸಗಿ ಸಂಸ್ಥೆಗಳ ಪಾಲು ದೊಡ್ಡದು ಎಂದು ಶುಭಹಾರೈಸಿದರು. ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷರಾದ ರಾಧಾಕೃಷ್ಣ ಶೆಣೈ ಮಾತನಾಡಿ, ಎಲ್ಲಾ…
ಮಡಿಕೇರಿ ಜ.16 NEWS DESK : ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಸಂವಿಧಾನಬಾಹಿರ ಕ್ರಮವಾಗಿದ್ದು, ಇದರಿಂದ ಕೋಟ್ಯಾಂತರ ಮಂದಿ ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕವಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಸಮಿತಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಡಿಪಿಐನ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್ ಅವರು ಇತ್ತೀಚೆಗೆ ದೇಶದ 11 ರಾಜ್ಯಗಳಲ್ಲಿ ನಡೆಸಿದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 7 ಕೋಟಿ ಮತದಾರರು ಮತದಾನದ ಹಕ್ಕಿನಿಂದ ಹೊರಗುಳಿದಿದ್ದಾರೆ. ಇನ್ನುಳಿದಿರುವ 19 ರಾಜ್ಯಗಳಲ್ಲಿ ಪರಿಷ್ಕರಣೆ ನಡೆದರೆ ಇನ್ನೆಷ್ಟು ಕೋಟಿ ಮತದಾರರು ಮತದಾನದ ಹಕ್ಕಿನಿಂದ ವಂಚಿರಾಗಬಹುದು ಎನ್ನುವ ಆತಂಕ ಎದುರಾಗಿದೆ ಎಂದರು. ಮತದಾನದ ಹಕ್ಕನ್ನು ಸಾಬೀತು ಪಡಿಸಬೇಕಾದರೆ ಜನನ ಪ್ರಮಾಣ ಪತ್ರ, ಆಸ್ತಿ ಪತ್ರ, ಪಾಸ್ ಪೋರ್ಟ್ ಮೊದಲಾದ ದಾಖಲೆಗಳನ್ನು ಒದಗಿಸಬೇಕೆನ್ನುವ ನಿಯಮ ರೂಪಿಸಲಾಗಿದೆ. ಹಿರಿಯ ನಾಗರಿಕರು ಜನನ ಪ್ರಮಾಣ ಪತ್ರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆಯಲು ಸಾಧ್ಯವೇ, ದೇಶದಲ್ಲಿರುವ ಎಲ್ಲಾ ಪ್ರಜೆಗಳ ಬಳಿ ಸ್ವಂತ ಆಸ್ತಿ ಇದೆಯೇ, ಪಾಸ್ ಪೋರ್ಟ್…
ಕೋಲ್ಕತ್ತ ಜ.16 NEWS DESK : ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳ ಹಿರಿಯ ಮುಖಂಡರು ಹಾಗೂ ಸಿಪಿಐ(ಎಂ) ಪಕ್ಷದ ಹಿರಿಯ ಸದಸ್ಯರಾದ ಚಂದ್ರಶೇಖರ್ ಬೋಸ್ ಅವರು ಶುಕ್ರವಾರ ನಿಧನರಾದರು. ಅವರಿಗೆ 103 ವರ್ಷ ವಯಸ್ಸಾಗಿತ್ತು. ಕೋಲ್ಕತ್ತದ ಬಿಧಾನ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು ಎಂದು ಸಿಪಿಐ(ಎಂ) ಪಕ್ಷದ ಮೂಲಗಳು ತಿಳಿಸಿವೆ. ದೀರ್ಘ ಕಾಲದಿಂದ ಸಕ್ರಿಯ ರಾಜಕೀಯ ಹಾಗೂ ಕಾರ್ಮಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಬೋಸ್ ಅವರು, ಶತಾಯುಷಿಯಾಗಿಯೂ ಸಂಘಟನಾ ಚಟುವಟಿಕೆಯಲ್ಲಿ ತೊಡಗಿರುವ ಅಪರೂಪದ ನಾಯಕನಾಗಿದ್ದರು. ಚಂದ್ರಶೇಖರ್ ಬೋಸ್ ಅವರು ತಮ್ಮ ಪುತ್ರ, ಸೊಸೆ ಹಾಗೂ ಮೊಮ್ಮಗನನ್ನು ಅಗಲಿದ್ದಾರೆ.
ಮಡಿಕೇರಿ ಜ.16 NEWS DESK : ಜಿಲ್ಲೆಯ ತಿತಿಮತಿ ಮತ್ತು ಬಾಳೆಲೆ ಉಪ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ತಡೆಯುವ ಕುರಿತು ಸೂಕ್ತ ಸೂಚನೆಗಳನ್ನು ನೀಡಿದರು.
ಮಡಿಕೇರಿ ಜ.16 NEWS DESK : ಬಾಲ್ಯದಿಂದಲೇ ಹಿಂದೂ ಸಂಸ್ಕಾರವನ್ನು ಮನವರಿಕೆ ಮಾಡಿಕೊಡುವ ಮತ್ತು ಧರ್ಮ ಬೋಧನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಮೂರ್ನಾಡಿನಲ್ಲಿ ಹಿಂದೂ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆಗೊಂಡಿತು. ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಮೂರ್ನಾಡಿನ ಶಿಕ್ಷಕರು ಹಾಗೂ ಅರ್ಚಕರಾದ ಶ್ರೀಹರಿ ಮತ್ತು ಮಮತಾ ಶ್ರೀಹರಿಯವರ ನಿವಾಸದ ಪೂಜಾ ಕೇಂದ್ರದಲ್ಲಿ ದೀಪ ಬೆಳಗಿಸಿ ಮಕ್ಕಳು ಮತ್ತು ಪೋಷಕರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕೇಂದ್ರವನ್ನು ಉದ್ಘಾಟಿಸಲಾಯಿತು. ನಂತರ ಮಕ್ಕಳಿಗೆ ಧರ್ಮ ಬೋಧನೆಯನ್ನು ನೀಡಿ ಸಂಸ್ಕಾರ ಪಾಠ ಮಾಡಲಾಯಿತು. ಹಾದಿ ತಪ್ಪಿ ಖಿನ್ನತೆಗೆ ಒಳಗಾಗುತ್ತಿರುವ ಮತ್ತು ದುಶ್ಚಟಗಳಿಗೆ ಬಲಿಯಾಗುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ. ಪೋಷಕರ ಒತ್ತಡದ ಜೀವನದ ನಡುವೆ ಮಕ್ಕಳಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಮನಗಂಡು ಹಾಗೂ ಹಿಂದೂ ಧರ್ಮ ಬೋಧನೆಯನ್ನು ವ್ಯಾಪಕಗೊಳಿಸುವ ಉದ್ದೇಶದಿಂದ ಹಿಂದೂ ಬಾಲ ಸಂಸ್ಕಾರ ಕೇಂದ್ರವನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲಿ ವಿವಿಧೆಡೆ ಕೇಂದ್ರ ಆರಂಭಗೊಳ್ಳಲಿದೆ ಎಂದು ಪ್ರಮುಖರು ವಿವರಿಸಿದರು. ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದಕ್ಕೆ…
ಸುಂಟಿಕೊಪ್ಪ ಜ.16 NEWS DESK : ಸುಂಟಿಕೊಪ್ಪ ಹೋಬಳಿ ನಾಗರಿಕರ ಹೋರಾಟ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಎಂ.ಎ.ಉಸ್ಮಾನ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಡಿ.ರಾಜು ರೈ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪ ಪ್ರವಾಸಿ ಮಂದಿರದಲ್ಲಿ ನೂತನ ಸಮಿತಿಯನ್ನು ರಚಿಸಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಾಗೇಶ್ ಪೂಜಾರಿ, ಪಟ್ಟೆಮನೆ.ಪಿ.ಉದಯಕುಮಾರ್, ಹೆಚ್.ಎಸ್.ಮುತ್ತಪ್ಪ, ಖಜಾಂಚಿಯಾಗಿ ರಮೇಶ್ ಶೇಟ್, ಸಹಕಾರ್ಯದರ್ಶಿಗಳಾಗಿ ಆರ್.ರಮೇಶ್ ಪಿಳ್ಳೆ, ಕೆ.ಎಸ್.ಅನಿಲ್ಕುಮಾರ್, ಎ.ಎಂ.ಶರೀಫ್, ಸಂತೋಷ್ (ದೀನು), ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಸ್.ಅಶೋಕ್ ನೇಮಕಗೊಂಡರು. ಸಮಿತಿ ಸದಸ್ಯರುಗಳಾಗಿ ಯಂಕನ ಶ್ರೀರಾಮ, ಗೌರವಧ್ಯಕ್ಷರುಗಳಾಗಿ ಎಸ್.ಎ.ವಹೀದ್ಜಾನ್, ಜಿನ್ನಪ್ಪ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು. ನಂತರ ಎಂ.ಎ.ಉಸ್ಮಾನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಗ್ರಾಮದಲ್ಲಿರುವ 18 ವರ್ಷ ಮೇಲ್ಪಟ್ಟ ಯುವಕರನ್ನು ಸಂಘಟನೆಗೆ ಸೇರಿಸಿಕೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಹೋರಾಟ ನಡೆಸಲು ಸಭೆಯಲ್ಲಿ ಅಂಗೀಕರಿಸಲಾಯಿತು. ಸುಂಟಿಕೊಪ್ಪ ಪಟ್ಟಣವು ಹೋಬಳಿ ಕೇಂದ್ರವಾಗಿದ್ದು, ಸಾಕಷ್ಟು ಭೌಗೋಳಿಕವಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಅವುಗಳನ್ನು ಪರಿಹರಿಸುವ ದಿಸೆಯಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆ ಪೂರಕವಾಗಿ ಸ್ಪಂದಿಸದಿರುವುದು, ಮೂಲಭೂತ ಸೌಕರ್ಯಗಳನ್ನು…
ಮಡಿಕೇರಿ ಜ.16 NEWS DESK : ಕೊಡುಗು ಗೌಡ ಹಿತ ರಕ್ಷಣಾ ಸಮಿತಿ ವತಿಯಿಂದ ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಕರ್ ಹಾಗೂ ನೂತನ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದು ಮಣಿಯ ಅವರನ್ನು ಅಭಿನಂದಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹೂವಿನ ಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭ ಸಮಿತಿಯ ಪದಾಧಿಕಾರಿಗಳಾದ ಪಿ.ಎಲ್.ಸುರೇಶ, ಪರ್ಮಲೆ ಗಣೇಶ, ದಂಬೆಕೋಡಿ ರಶ್ಮಿ, ದಂಬೆಕೋಡಿ ಕವನಾ ಬಿಷ್ಮ, ಪೂಜಾರಿರ ಪ್ರದೀಪ ಕುಮಾರ್, ಬಂಗಾರ ಕೋಡಿ ತುಳಸಿ ಗಾಂಧಿ ಪ್ರಸಾದ್, ಪಟ್ಟಡ ದೀಪಕ್, ಡೆಮ್ಮೆಲೆ ರಿತೀನ್, ಪೂಜಾರಿರ ದ್ರುವ, ಕವನ್ ಕೊತ್ತೋಳಿ ಹಾಗೂ ಪ್ರಮುಖರು ಹಾಜರಿದ್ದರು.
ವಾಷಿಂಗ್ಟನ್, ಜ.16 NEWS DESK : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ವೆನೆಝುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ಈ ವೇಳೆ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಟ್ರಂಪ್ ಅವರಿಗೆ ಪ್ರದಾನ ಮಾಡಿದರು. ಈ ಭೇಟಿಯನ್ನು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ದೃಢಪಡಿಸಿದರು.
ಭಾರತದ ಪ್ರಾಚೀನ ಕಡಲ ಸಂಪ್ರದಾಯ ಹಾಗೂ ಸಮುದ್ರ ವ್ಯಾಪಾರದ ಇತಿಹಾಸವನ್ನು ಜೀವಂತವಾಗಿ ಪುನರುಜ್ಜೀವನಗೊಳಿಸುವ ಉದ್ದೇಶದೊಂದಿಗೆ ನಿರ್ಮಿಸಲಾದ ಸಾಂಪ್ರದಾಯಿಕ ಕೈಯಿಂದ ಹೊಲಿಯಲಾದ ಭಾರತೀಯ ಹಡಗು ‘ಐಎನ್ಎಸ್ವಿ ಕೌಂಡಿನ್ಯಾ’ ತನ್ನ ಮೊದಲ ವಿದೇಶಿ ಸಮುದ್ರ ಪ್ರಯಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. 18 ದಿನಗಳ ದೀರ್ಘ ಸಮುದ್ರಯಾನದ ಬಳಿಕ ಈ ಹಡಗು ಓಮನ್ನ ಮಸ್ಕತ್ ಕರಾವಳಿಗೆ ತಲುಪಿದ್ದು, ಬುಧವಾರ ಅದರ ಆಗಮನವನ್ನು ಅಧಿಕೃತವಾಗಿ ದೃಢಪಡಿಸಲಾಯಿತು. :: ಪೋರಬಂದರ್ನಿಂದ ಮಸ್ಕತ್ವರೆಗೆ ಐತಿಹಾಸಿಕ ಪಯಣ : : ಐಎನ್ಎಸ್ವಿ ಕೌಂಡಿನ್ಯಾ ಡಿಸೆಂಬರ್ 29, 2025 ರಂದು ಗುಜರಾತ್ನ ಪೋರಬಂದರ್ ಬಂದರಿನಿಂದ ತನ್ನ ಮೊದಲ ವಿದೇಶಿ ಸಮುದ್ರಯಾನ ಆರಂಭಿಸಿತ್ತು. ಈ ಪ್ರಯಾಣವನ್ನು ಸುಮಾರು 15 ದಿನಗಳಲ್ಲಿ ಪೂರ್ಣಗೊಳಿಸುವ ಯೋಜನೆ ಇತ್ತು. ಆದರೆ ಸಮುದ್ರದ ಸಹಜ ಸವಾಲುಗಳು ಹಾಗೂ ಹವಾಮಾನ ಪರಿಸ್ಥಿತಿಗಳ ಕಾರಣದಿಂದ ಈ ಯಾನ 18 ದಿನಗಳ ಕಾಲ ಮುಂದುವರಿಯಿತು. ಈ ಐತಿಹಾಸಿಕ ಹಡಗಿನಲ್ಲಿ ಕಮಾಂಡರ್ ವಿಕಾಸ್ ಶಿಯೋರನ್ ನೇತೃತ್ವದ 16 ಸದಸ್ಯರ ಸಿಬ್ಬಂದಿ ಭಾಗವಹಿಸಿದ್ದರು. ಆಧುನಿಕ ಸೌಲಭ್ಯಗಳಿಲ್ಲದ ಹಡಗಿನಲ್ಲಿ ಪ್ರಯಾಣಿಸುವ…






