ಲೇಖಕ: admin

ಮಡಿಕೇರಿ ಜೂ.16 NEWS DESK : ಕೊಡಗು ಜಿ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ನಿರ್ಮಾಣ ಪ್ರಗತಿಯಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಲು ಸಮಾಜಬಾಂಧವರ ಸಹಕಾರ ಅಗತ್ಯ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ತಿಳಿಸಿದರು. ಮಡಿಕೇರಿ ತಾಲ್ಲೂಕಿನ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಕೊಡಗು ಜಿ ಮರಾಠ/ಮರಾಟಿ ಸಮಾಜ ಸೇವಾ ಸಂಘದ 30ನೇ ವರ್ಷದ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸುಮಾರು 4ಕೋಟಿ ವೆಚ್ಚದಲ್ಲಿ ಸಂಘದ ಸಭಾಭವನ ನಿರ್ಮಾಣವಾಗಲಿದೆ. ಈಗಾಗಲೇ ಸರ್ಕಾರದಿಂದ ೨ ಕೋಟಿ ಅನುದಾನ ಘೋಷಣೆಯಾಗಿದ್ದು, ೬೫ ಲಕ್ಷ ಸಿಕ್ಕಿದೆ. 1.35ಕೋಟಿ ಹಣ ಬರಲು ಬಾಕಿಯಿದೆ. ಸರ್ಕಾರದ ಹಣದೊಂದಿಗೆ ಸಮಾಜಬಾಂಧವರ ಸಹಕಾರದೊಂದಿಗೆ 1.60 ಕೋಟಿ ವೆಚ್ಚದಲ್ಲಿ ಸಭಾಭವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನುಳಿದ ಕಾಮಗಾರಿ ನಡೆಸಲು ಸಮಾಜಬಾಂಧವರ ಸಹಕಾರ ಅಗತ್ಯವಾಗಿದ್ದು, ಪ್ರತಿ ಕುಟುಂಬದಿಂದ 5,000 ನೀಡುವಂತೆ ಮನವಿ ಮಾಡಿದರು.  ನಮ್ಮ ಜನಾಂಗಬಾಂಧವರಲ್ಲಿ ಸಾಕಷ್ಟು ಯುವಕರು ಇದ್ದಾರೆ. ಆದರೆ, ಸಂಘದ ಕಾರ್ಯಚಟುವಟಿಕೆಯಲ್ಲಿ ಪಾಲ್ಗೊಳ್ಳು ಹಿಂದೇಟು ಹಾಕುತ್ತಿದ್ದಾರೆ. ಇವು ಆಗಬಾರದು. ಮುಂದಿನ ದಿನಗಳಲ್ಲಿ ಯುವಕರು ಹೆಚ್ಚಿನ…

Read More

ಮಡಿಕೇರಿ ಜೂ.16 NEWS DESK : 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರತಿ ವರ್ಷದಂತೆ ಜೂನ್, 21 ರಂದು ಆಯುಷ್ ಮಂತ್ರಾಲಯ, ಭಾರತ ಸರ್ಕಾರ, ಆಯುಷ್ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಆಚರಿಸಲು ನಿರ್ಧರಿಸಲಾಗಿದೆ. 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಕೊಡಗು ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಯೋಗ ಒಕ್ಕೂಟ, ಮಡಿಕೇರಿ, ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಪೋಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಿಂದ ಹಳೆಯ ಖಾಸಗಿ ಬಸ್ ನಿಲ್ದಾಣ ಮೂಲಕ ಗಾಂಧಿ ಮೈದಾನದವರೆಗೆ ಜಾಥಾ ನಡೆಯಿತು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಜಾಥಾಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಶ್ರೀನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ.ಜಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ.ರಾಮಚಂದ್ರ ಕಾಮತ್, ಶಾಲಾ ಶಿಕ್ಷಣ ಇಲಾಖೆ,…

Read More

ಮಡಿಕೇರಿ ಜೂ.16 NEWS DESK : ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೊರಗುಳಿಯದಂತೆ ಮತ್ತು ಹೊಸ ಮತದಾರರನ್ನು ಸೇರಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಸಹಕಾರ ಮುಖ್ಯ. ಆದ್ದರಿಂದ ಬೂತ್‍ಮಟ್ಟದ ಏಜೆಂಟರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಆರ್.ಶ್ರೀಧರ್ ಅವರು ಹೇಳಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಮತಗಟ್ಟೆ ಏಜೆಂಟರುಗಳಿಗೆ ಎಸ್‍ಐಆರ್ ಕುರಿತು ನಡೆದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಏಜೆಂಟರು ಎಸ್‍ಐಆರ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡು, ಪಾರದರ್ಶಕವಾಗಿ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಹಕರಿಸಬೇಕು, ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು. ಕೈಬಿಟ್ಟ ಹೆಸರುಗಳನ್ನು ಮತ್ತೆ ಸೇರಿಸಲು ನಮೂನೆ ಭರ್ತಿ ಮಾಡಲು ಸಹಾಯ ಮಾಡಬೇಕು, ಮತಗಟ್ಟೆ ಹಂತದಲ್ಲಿನ ದೋಷಗಳನ್ನು ಗುರುತಿಸಿ, ಚುನಾವಣಾ ಅಧಿಕಾರಿಗಳಿಗೆ ಸರಿಯಾದ ಸಮಯದಲ್ಲಿ ಮಾಹಿತಿ ನೀಡಬೇಕು ಎಂದು ಆರ್.ಶ್ರೀಧರ್ ಅವರು ತಿಳಿಸಿದರು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಮತದಾರರ ಮಾಹಿತಿ ನವೀಕರಣ, ಹೊಸ ಮತದಾರರ…

Read More

ಮಡಿಕೇರಿ NEWS DESK ಜೂ. 16: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ, ಮೈಸೂರು–ಕೊಡಗು ಭಾಗಕ್ಕೆ ಸಂಬಂಧಿಸಿದ ಎರಡು ಮಹತ್ವದ ವಿಷಯಗಳ ಕುರಿತು ಮನವಿ ಸಲ್ಲಿಸಿದರು. ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವುದು ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ (ನಗರ್ ವನ್) ಯೋಜನೆ ಜಾರಿಗೊಳಿಸುವುದು ಈ ಮನವಿಗಳ ಪ್ರಮುಖ ಉದ್ದೇಶವಾಗಿತ್ತು. *ಕೊಡಗಿನಲ್ಲಿ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ತುರ್ತು ಕ್ರಮ ಅಗತ್ಯ* ಸಭೆಯಲ್ಲಿ ಮಾತನಾಡಿದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಆನೆಗಳು ಕೃಷಿ ಭೂಮಿಗಳು ಮತ್ತು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ನಿರಂತರವಾಗಿ ಹೆಚ್ಚುತ್ತಿದ್ದು, ಇದು ಜಿಲ್ಲೆಯ ಜನರ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಸಚಿವರ ಗಮನಕ್ಕೆ ತಂದರು. ಆನೆಗಳ ದಾಳಿಯಿಂದ ಮಾನವ ಜೀವಹಾನಿ, ಗಾಯಗಳು, ಬೆಳೆ ನಷ್ಟ, ಆಸ್ತಿ…

Read More

ಮಡಿಕೇರಿ ಜೂ.15 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‍ನಲ್ಲಿ ಜೂ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕಿಗ್ಗಾಲು, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಜೂ.15 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೇಟಿ ಮಾಡಿ ಶುಭಹಾರೈಸಿದರು. ಇದೇ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಸಿ ಸಹಕಾರ ಕೋರಿದರು.

Read More

ಮಡಿಕೇರಿ ಜೂ.15 NEWS DESK : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರ ಹಾಜರಾತಿ, ಶಾಲಾ ಮಕ್ಕಳ ಹಾಜರಾತಿ, ಬಿಸಿಯೂಟ, ಅಡುಗೆ ಕೋಣೆ, ಗಣಕಯಂತ್ರ ಕೊಠಡಿ ವೀಕ್ಷಣೆ, ಗ್ರಂಥಾಲಯ, ಕುಡಿಯುವ ನೀರು ಪೂರೈಕೆ, ಮತ್ತಿತರ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಇಲ್ಲಿನ ವ್ಯವಸ್ಥೆ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಡಗದಾಳು ಶಾಲೆಯು ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆಯುತ್ತಿದ್ದು, ಶಾಲಾ ದಾಖಲಾತಿ ಹೆಚ್ಚಿಸಲು ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದು ಹೇಳಿದರು. ಸುತ್ತಮುತ್ತಲಿನ ಎಲ್ಲಾ ಮಕ್ಕಳು ಶಾಲೆಗೆ ಸೇರಿ ಶಿಕ್ಷಣ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಶಾಲಾ ದಾಖಲಾತಿ ಹೆಚ್ಚಳಕ್ಕೆ ಶ್ರಮಿಸುವಂತೆ ಮುಖ್ಯಶಿಕ್ಷಕರು ಹಾಗು ಸಹಶಿಕ್ಷಕರಿಗೆ ಸಲಹೆ ಮಾಡಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಎಸ್‍ಎಸ್‍ಎಲ್‍ಸಿ ಯಲ್ಲಿ ಕಡಗದಾಳು ಶಾಲೆ ಶೇ.100 ರಷ್ಟು ಫಲಿತಾಂಶ ಪಡೆಯುತ್ತಿದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಗುಣಾತ್ಮಕ ಕಲಿಕೆಗೆ ಒತ್ತು ನೀಡಲಾಗಿದೆ…

Read More

ಮಡಿಕೇರಿ ಜೂ.15 NEWS DESK : ವಿರಾಜಪೇಟೆ ತಾಲ್ಲೂಕಿನ ವಿ.ಬಾಡಗ ಬಳಿ ನಿರ್ಮಾಣವಾಗುತ್ತಿರುವ ‘ಕ್ರೀಡಾ ತರಬೇತಿ ಕೇಂದ್ರ’ದ ಆಡಳಿತ ಕಟ್ಟಡ ಕಾಮಗಾರಿಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಪರಿಶೀಲಿಸಿದರು.  ಸುಮಾರು 11 ಎಕರೆ ಜಾಗದಲ್ಲಿ ಅಥ್ಲೆಟಿಕ್ ಮಾದರಿಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕ್ರೀಡಾ ತರಬೇತಿ ಕೇಂದ್ರದ ಆಡಳಿತ ಭವನ ಜತೆಗೆ ಇತರೆ ಕಾಮಗಾರಿಯ ಜಾಗವನ್ನು ಶಾಸಕರು ವೀಕ್ಷಿಸಿದರು. ಸುಮಾರು 45 ಕೋಟಿ ರೂ. ಯೋಜನಾ ವೆಚ್ಚದಲ್ಲಿ ಕ್ರೀಡಾ ತರಬೇತಿ ಕೇಂದ್ರ ಹಾಗೂ ವಸತಿ ನಿಲಯ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲು ಉದ್ದೇಶಿಸಲಾಗಿದೆ. ಕ್ರೀಡಾ ತರಬೇತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಥಮ ಹಂತದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಆಡಳಿತ ಭವನ ನಿರ್ಮಾಣವಾಗುತ್ತಿದ್ದು, ಈ ಕಾಮಗಾರಿಯನ್ನು ಶಾಸಕರು ಪರಿಶೀಲಿಸಿದರು. ಆಡಳಿತ ಭವನದಲ್ಲಿ ನೆಲಮಹಡಿ ಹಾಗೂ ಮೊದಲ ಮಹಡಿ ಇರಲಿದ್ದು, ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ತರಬೇತಿ ಕೇಂದ್ರಗಳು ನಿರ್ಮಾಣವಾಗಲಿದೆ. ಒಳಾಂಗಣದಲ್ಲಿ ಶೆಟಲ್ ಬ್ಯಾಡಿಮಿಂಟನ್, ಟೇಬಲ್ ಟೆನ್ನಿಸ್, ಸ್ಕ್ವಾಷ್, ಜಿಮ್ಮು, ಹೊರಾಂಗಣದಲ್ಲಿ ಹಾಕಿ ಟರ್ಪ್,…

Read More

ಕುಶಾಲನಗರ ಜೂ.15 NEWS DESK : ಕುಶಾಲನಗರದ ಹಲವು ಶಿಕ್ಷಣ ಸಂಸ್ಥೆಗಳ ಪೈಕಿ ಫಾತಿಮಾ ಕಾನ್ವೆಂಟ್ ಶಾಲೆಗೆ ವಿಶಿಷ್ಟ ಸ್ಥಾನವಿದೆ. ಅಂತಹ ಶಿಕ್ಷಣ ಸಂಸ್ಥೆಯು 1976 ರಲ್ಲಿ ಆರಂಭವಾಗಿದ್ದು. ಈಗ ಅದರ ಸುವರ್ಣ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಾರ್ವಜನಿಕರನ್ನು ಸೇರಿಸಿಕೊಂಡು ಸುವರ್ಣ ವರ್ಷವನ್ನು ಹಬ್ಬವನ್ನಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು. ಅದರಂತೆ ಜೂನ್ ತಿಂಗಳಲ್ಲಿ ಶಾಲೆಯಲ್ಲಿ ಕಲೆಯುತ್ತಿರುವ ವಿದ್ಯಾರ್ಥಿಗಳಿಗೆ, ಪಾಲಕರಿಗೆ, ಶಾಲೆಯ ಸಿಬ್ಬಂದಿಗಳಿಗೆ ಜಾಗೃತಿ ಸಭೆ, ಜುಲೈ ತಿಂಗಳಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲು ಚಿಂತಿಸಲಾಗಿದೆ. ಆಗಸ್ಟ್ ತಿಂಗಳಲ್ಲಿ ಅಂತರ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಸೆಪ್ಟೆಂಬರ್ ತಿಂಗಳಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಮ್ಯಾರಥಾನ್,  ಯುವ ಜನಾಂಗದಲ್ಲಿ ಆಚಾರ ವಿಚಾರಗಳನ್ನು ತಿಳಿಸುವ ಪ್ರಯತ್ನವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಸಾಂಪ್ರದಾಯಿಕ ದಿನವನ್ನು ಅಕ್ಟೋಬರ್ ತಿಂಗಳಲ್ಲಿ ಆಚರಿಸಲಾಗುವುದು. ನವೆಂಬರ್…

Read More

ಮಡಿಕೇರಿ ಮಾ.15 NEWS DESK : ಸಮಾಜದಲ್ಲಿನ ಈ ರೀತಿಯ ಸಂಕಷ್ಟ ಕುಟುಂಬಗಳನ್ನು ಗುರುತಿಸಿ ತಮ್ಮಿಂದ ಸಾಧ್ಯವಿರುವ ಸೌಲಭ್ಯ ನೀಡುವ ಮೂಲಕ ಮಾನವೀಯ ಸ್ನೇಹಿತರ ಒಕ್ಕೂಟವು ಪ್ರಶಂಸೆಗೆ ಪಾತ್ರವಾಯಿತು. ಸ್ನೇಹಿತರ ಒಕ್ಕೂಟದ ಜಿಲ್ಲಾ ಮಟ್ಟದ ವಾರ್ಷಿಕ ಕಾರುಣ್ಯ ಕಾರ್ಯಕ್ರಮ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಡೆದ ಸಂದರ್ಭ ಮಕ್ಕಳು, ಮಹಿಳೆಯರು ಸೇರಿದಂತೆ ಜಿಲ್ಲೆಯ ಸುಮಾರು 70ಕ್ಕೂ ಅಧಿಕ ಅರ್ಹ ಫಲಾನುಭವಿಗಳು ಸ್ವೀಕರಿಸಿರು. ಅದಾಯ ಮಾರ್ಗವಿಲ್ಲದೆ ಬಲುಕಷ್ಟ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದ ಕುಟುಂಬಗಳಿಗೆ ಉತ್ತಮ ದರ್ಜೆಯ ಆಹಾರದ ಕಿಟ್, ಅನಾರೋಗ್ಯದಿಂದ ಬಳಲುತ್ತಿದ್ದಮಂದಿಯ ಚಿಕಿತ್ಸೆಗೆ ತಲಾ 5 ಸಾವಿರ ರೂಪಾಯಿ ಹಾಗೂ ವಿದ್ಯೆ ಕಲಿಯುವ ಕಷ್ಟದ ಕುಟುಂಬದಮಕ್ಕಳಿಗೆ ಪಠ್ಯ ಪರಿಕರ ಸೇರಿದಂತೆ ಒಟ್ಟು 70ಕ್ಕೂ ಅಧಿಕ ಮಂದಿಗೆ ರೂ 3,00,000 ವೆಚ್ಚದಲ್ಲಿ ಸವಲತ್ತುಗಳನ್ನು ವಿತರಿಸಲಾಯಿತು. ನಡೆಯಲಾಗದ ಅಶಕ್ತರನ್ನು ಒಕ್ಕೂಟದ ಕಾರ್ಯಕರ್ತರು ಎತ್ತಿಕೊಂಡು ಸಭಾಂಗಣಕ್ಕೆ ಕರೆತಂದು ಕೂರಿಸಿ ಅರ್ಹ ಸವಲತ್ತುಗಳನ್ನು ನೀಡಿದರು. ಒಕ್ಕೂಟದ ವಕ್ತಾರ ಶಶಿಕುಮಾರ್ ಚೆಟ್ಟಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರುಣ್ಯ ಕಾರ್ಯಕ್ರಮವನ್ನು ಮಡಿಕೇರಿ ನಗರಸಭೆಯ…

Read More