ಮಡಿಕೇರಿ NEWS DESK ಮಾ.9 : ವಿಶ್ವರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆ ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಕ್ಕೊತ್ತಾಯ ಮಂಡಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ವಿವಿಧ ಹಕ್ಕೊತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ವಿಶ್ವರಾಷ್ಟ್ರ ಸಂಸ್ಥೆಯ ಮಹಾ ಕಾರ್ಯದರ್ಶಿ, ಜಾಗತಿಕ ಮಹಿಳಾ ಸಬಲೀಕರಣದ ಕಾರ್ಯಾಂಗ ನಿರ್ದೇಶಕರು, ಯುನೆಸ್ಕೋದ ಮಹಾ ನಿರ್ದೇಶಕರು, ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು, ಮಹಿಳೆಯರ ಸಾಂಸ್ಕೃತಿಕ, ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಗುರುತಿಸಲು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಲಿಂಗ ಪಕ್ಷಪಾತ, ತಾರತಮ್ಯವನ್ನು ಕೊನೆಗೊಳಿಸಲು ಮತ್ತು ಲಿಂಗ ಸಮಾನತೆಯನ್ನು ಸಾಧಿಸುವ ಪ್ರಯತ್ನಗಳನ್ನು ಪ್ರೇರೇಪಿಸಲು ಇದು ಸಹಕಾರಿಯಾಗಿದೆ ಎಂದರು. ‘ಫಾರ್ ಆಲ್ ವುಮೆನ್ ಅಂಡ್ ಗರ್ಲ್ಸ್ : ರೈಟ್ಸ್, ಇಕ್ವಾಲಿಟಿ, ಎಂಪವರ್ ಮೆಂಟ್’ ಎಂಬ ಥೀಮ್ನಡಿಯಲ್ಲಿ ಸಿಎನ್ಸಿ ಹಕ್ಕೊತ್ತಾಯಗಳ ಪರಿಗಣನೆಯು…
ಲೇಖಕ: admin
ಕುಶಾಲನಗರ NEWS DESK ಮಾ.8 : ಕುಶಾಲನಗರ ತಾಲೂಕು ಶಿರಂಗಾಲ ಗ್ರಾಮದಲ್ಲಿ ಮಾರ್ಚ್ 14 ರಿಂದ ಮೂರು ದಿನಗಳ ಕಾಲ ಶ್ರೀ ಮಂಟಿಗಮ್ಮ ದೇವಿಯ ಹಬ್ಬ ಹಾಗೂ ಮಾರ್ಚ್ 17ರಂದು ಉಮಾ ಮಹೇಶ್ವರ ರಥೋತ್ಸವ ನಡೆಯಲಿದೆ ಎಂದು ಶ್ರೀ ಮಂಟಿಗಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಎಸ್ ಎಸ್ ಚಂದ್ರಶೇಖರ್ ತಿಳಿಸಿದ್ದಾರೆ. ಅವರು ಕುಶಾಲನಗರ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ತಾಲೂಕಿನ ಗಡಿಭಾಗದ ಶಿರಂಗಾಲ ಗ್ರಾಮದಲ್ಲಿ ಮಾರ್ಚ್ 14 ರಿಂದ ಮೂರು ದಿನಗಳ ಕಾಲ ಗ್ರಾಮದ ಇತಿಹಾಸವುಳ್ಳ ಶ್ರೀ ಮಂಟಿಗಮ್ಮ ದೇವಿಯ ದ್ರೈವಾರ್ಷಿಕ ಹಬ್ಬ ಹಾಗೂ ಜಾತ್ರೋತ್ಸವ ನಡೆಯಲಿದೆ. 14ರಂದು ಸಂಜೆ ಗ್ರಾಮದ ಮೂಲಸ್ಥಾನ ಕೋಟೆಯ ದೇವಸ್ಥಾನದಿಂದ ಪವಿತ್ರ ಬನಕ್ಕೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಒಯ್ಯಲಾಗುತ್ತದೆ. ಮಾರ್ಚ್ 15ರಂದು ಬೆಳಗ್ಗೆ 6 ಗಂಟೆಯಿಂದ ದೇವಿಯ ದರ್ಶನ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಲಿವೆ . ದೇವಿಯ ದರ್ಶನ 15 ರಿಂದ ಎರಡು ದಿನಗಳ ಕಾಲ ಇರುತ್ತದೆ ಎಂದು ಮಾಹಿತಿ ನೀಡಿದರು. ಹಗಲು ಗ್ರಾಮೀಣ…
ಮಡಿಕೇರಿ NEWS DESK ಮಾ.8 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16ನೇ ಬಾರಿಗೆ ಮಂಡಿಸಿರುವ ದಾಖಲೆಯ ಬಜೆಟ್ ನಲ್ಲಿ ಭರಪೂರ ಕೊಡುಗೆಗಳನ್ನು ನೀಡಿದ್ದು, ಇವುಗಳು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆಡಳಿತದ ಅನುಭವ ಮತ್ತು ಅರ್ಥ ವ್ಯವಸ್ಥೆಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಮುಖ್ಯಮಂತ್ರಿಗಳು ಸರ್ವರಿಗೂ ಸಮಾನ ಆದ್ಯತೆ ನೀಡಿ ಬಜೆಟ್ ಮಂಡಿಸಿದ್ದಾರೆ. ಆದರೆ ಬಿಜೆಪಿ ಮೊಸರನ್ನದಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಆಸ್ಪತ್ರೆಗಳ ಅಭಿವೃದ್ಧಿ, ರಸ್ತೆ, ಸೇತುವೆಗಳ ನಿರ್ಮಾಣ, ವನ್ಯಜೀವಿಗಳ ದಾಳಿಗೆ ಕಡಿವಾಣ, ಪರಿಶಿಷ್ಟರ ಏಳಿಗೆಗೆ ವಿಶೇಷ ಅನುದಾನ, ಕೂಡಿಗೆ ಕ್ರೀಡಾಶಾಲೆಯ ಉನ್ನತಿ, ಮಾದಾಪುರ – ಸೋಮವಾರಪೇಟೆ – ಶನಿವಾರಸಂತೆ – ಕೊಡ್ಲಿಪೇಟೆಯ 95 ಕಿ.ಮೀ ಅಂತರದ ಮಾರ್ಗವನ್ನು ಸರ್ವಋತು ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿರುವುದು ಸೇರಿದಂತೆ ಅನೇಕ ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಕೊಡಗು ಜಿಲ್ಲೆಗೆ ನೀಡಲಾಗಿದ್ದು, ಇದು ಜಿಲ್ಲೆಯ ಇತಿಹಾಸದಲ್ಲೇ…
ಸೋಮವಾರಪೇಟೆ ಮಾ.8 NEWS DESK : ವಿದ್ಯಾ ಇನ್ಸಿಟ್ಯೂಟ್ ಆಫ್ ಹೆಲ್ತ್ಕೇರ್ ಟ್ರೈನಿಂಗ್ ಸೆಂಟರ್ ನ ಪೋಷಕರ ಸಭೆ ನರ್ಸಿಂಗ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೊಡ್ಡಮಳ್ತೆ ಹೊನ್ನಮ್ಮ ತಾಯಿ ದೇವಾಲಯ ಸಮಿತಿ ಅಧ್ಯಕ್ಷ ಡಿ.ಎ.ಉದಯ ಉದ್ಘಾಟಿಸಿ ಮಾತನಾಡಿ, ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ರೈತಾಪಿ ಜನರು ಹೆಚ್ಚಾಗಿದ್ದಾರೆ. ನಗರ ಪ್ರದೇಶದ ಪ್ರತಿಷ್ಠಿತ ಕಾಲೇಜಿನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಕಷ್ಟಸಾಧ್ಯ. ತಾಲ್ಲೂಕಿನ ಮಟ್ಟಿಗೆ ವಿದ್ಯಾ ನರ್ಸಿಂಗ್ ಕಾಲೇಜು ಒಂದೇ ಇರುವುದು. ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ, ಹೆಚ್ಚಿನ ಅಂಕಗಳಿಸಿ, ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಕಲಿಕೆಯಿಂದ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಿಕ್ಕಿದ ಸಮಯವನ್ನು ವ್ಯರ್ಥ ಮಾಡದೆ ಕಲಿಯುವುದಕ್ಕೆ ಮೀಸಲಿಡಬೇಕು ಎಂದು ಕಿವಿಮಾತು ಹೇಳಿದರು. ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳಾ ಸುಬ್ರಮಣಿ, ಇನ್ಸಿಟ್ಯೂಟ್ನ ವ್ಯವಸ್ಥಾಪಕರಾದ ಕೆ.ಈ. ಸುಲೈಮಾನ್, ಪ್ರಾಂಶುಪಾಲರಾದ ಅಲೀಮ ಸುಲೈಮಾನ್ ಇದ್ದರು. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ನ.ಲ.ವಿಜಯ, ಪ್ರಾಧ್ಯಾಪಕರಾದ ಮಂಜುಳಾ ಸಂತೋಷ್ ಅವರನ್ನು…
ಸೋಮವಾರಪೇಟೆ ಮಾ.8 NEWS DESK : ಸೋಮವಾರಪೇಟೆಯ ಗಾಂಧಿನಗರದಲ್ಲಿರುವ ಶ್ರೀ ದೊಡ್ಡ ಮಾರಿಯಮ್ಮ ದೇವಾಲಯ ಸಮಿತಿಯ ನೂತನ ಅಧ್ಯಕ್ಷರಾಗಿ ಹೆಚ್.ಜಿ. ಚಿಂತು, ಕಾರ್ಯದರ್ಶಿಯಾಗಿ ದಿಲೀಪ್ ಆಯ್ಕೆಯಾದರು. 50ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯ ಆವರಣದಲ್ಲಿ ನೂತನ ಸಮಿತಿಯನ್ನು ರಚಿಸಲಾಗಿಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಸುಬ್ರಮಣಿ, ಗಂಗಾಧರ, ಅಂಜನಿ ಹಾಗೂ ಗೌರವ ಸಲಹೆಗಾರರಾಗಿ ಮಂಜುನಾಥ್, ಕೇಶವ ಹಾಗೂ ದುರ್ಗೆಶ್ ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಐ.ಬಿ.ಕೃಷ್ಣ, ಗೋಪಿ, ಮೂರ್ತಿ, ಸಹ ಕಾರ್ಯದರ್ಶಿಯಾಗಿ ಭರತ್, ಖಜಾಂಚಿಯಾಗಿ ಅಯ್ಯಪ್ಪ, ಸಹ ಖಜಾಂಚಿಯಾಗಿ ಹೇಮಂತ್ ಹಾಗೂ ದೀಪಕ್, ಸಂಚಾಲಕರಾಗಿ ಅನಂತ್ ಹಾಗೂ ಮನು ಆಯ್ಕೆಯಾದರು.
ಕುಶಾಲನಗರ ಮಾ.8 NEWS DESK : ಕುಶಾಲನಗರ 470ನೇ ವಿವಿಧೋದ್ದೇಶ ಮಹಿಳಾ ಸಹಕಾರ ಸಂಘದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕುಶಾಲನಗರ ಮಹಿಳಾ ಸಹಕಾರ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸೆಲಿನ ಡಿ ಕುನ್ನ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಹಾಯಕ ಪ್ರಾಧ್ಯಾಪಕಿ ಡಾ. ಎಂ.ರಶ್ಮಿ ಹಾಗೂ ಕಂದಾಯ ಇಲಾಖೆ ಆಹಾರ ನಿರೀಕ್ಷಕರಾದ ಎಂ.ಎಸ್.ಸ್ವಾತಿ ಪಾಲ್ಗೊಂಡು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಬಿ.ಆರ್.ಶೈಲಾ ಮತ್ತು ಆಡಳಿತ ಮಂಡಳಿ ನಿರ್ದೇಶಕರುಗಳು ಇದ್ದರು. ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಪ್ರಮುಖರಾದ ಟಿ.ಪಿ.ಜಯಪ್ರಕಾಶ್, ನೇತ್ರಾವತಿ, ಕೆ.ಎಸ್.ಮಂಜುನಾಥ್, ಶಾಮಿಯಾನ ಕೃಷ್ಣ, ಕೆ.ಆರ್.ಜಗದೀಶ್ ಮತ್ತು ಹಸನ್ ಅವುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಮಕ್ಕಳ ಛದ್ಮವೇಷ ಸ್ಪರ್ಧೆ ಗಮನ ಸೆಳೆಯಿತು.
ಮಡಿಕೇರಿ ಮಾ.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಜನರ ಹಿತ ಕಾಯುವ ದಾಖಲೆಯ ಬಜೆಟ್ ನ್ನು ಮಂಡಿಸಿದ್ದು, ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿರೋಧ ಪಕ್ಷಗಳು ಬಜೆಟ್ ನ್ನು ವಿರೋಧಿಸಬೇಕೆಂದೇ ವಿರೋಧಿಸುವುದು ಸರಿಯಲ್ಲ. ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದ ಫಲವಾಗಿ ಹಲವು ಉತ್ತಮ ಕಾರ್ಯಕ್ರಮಗಳನ್ನು ಕೊಡಗು ಜಿಲ್ಲೆಗೆ ನೀಡಲಾಗಿದೆ. ವಿರಾಜಪೇಟೆಯಲ್ಲಿ 400 ಹಾಸಿಗೆಗಳ ಆಸ್ಪತ್ರೆಯ ನಿರ್ಮಾಣ, ಕುಶಾಲನಗರ ಆಸ್ಪತ್ರೆಯ ಅಭಿವೃದ್ಧಿ, ಮಡಿಕೇರಿ- ದೋಣಿಗಲ್ ನಡುವೆ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರು, ಬುಡಕಟ್ಟು ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ. ಮೀಸಲಿಟ್ಟಿರುವುದು, ಮಳೆಹಾನಿಯ ರಸ್ತೆ ಮತ್ತು ಸೇತುವೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲು ಕ್ರಮ ಕೈಗೊಂಡಿರುವುದು, ಕೂಡಿಗೆ ಕ್ರೀಡಾ ಶಾಲೆಯ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಒದಗಿಸಿರುವುದು,…
ಮಡಿಕೇರಿ ಮಾ.8 NEWS DESK : ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಮಾ.9 ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಮಧ್ಯಾಹ್ನ 12.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ನಾಪಂಡ ಮುತ್ತಪ್ಪ ಗೌರವ ಉಪಸ್ಥಿತರಿರಲಿದ್ದು, ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯದರ್ಪಣ ಪತ್ರಿಕೆ ಸಂಪಾದಕ ಹಾಗೂ ಸಮಾಜ ಸೇವಕ ಮಂಡಿಬೆಲೆ ರಾಜಣ್ಣ, ಕೊಡಗು ಪತ್ರಿಕಾ ಭವನ ಟ್ರಸ್ಟ್ ಮ್ಯಾನೆಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಪಾಲ್ಗೊಳ್ಳಲಿದ್ದಾರೆ.
ಕುಶಾಲನಗರ ಮಾ.8 NEWS DESK : ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರೂಪಕಗಳ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಮೂಲಕ ಅಂತರ್ರಾಷ್ಟ್ರೀಯ ಮಹಿಳಾ ದಿನವನ್ನು ವಿಭಿನ್ನವಾಗಿ ಆಚರಿಸಲಾಯಿತು. ವಿದ್ಯಾವಂತರು ಹಾಗೂ ಉದ್ಯೋಗಸ್ಥರು ಹೆಚ್ಚಾಗಿ ತಮ್ಮ ತಮ್ಮ ಹೆತ್ತವರನ್ನು ವೃದ್ಧಾಶ್ರಮಗಳಿಗೆ ದಾಖಲಿಸುತ್ತಾ ಮಾನವೀಯತೆ ಮರೆಯುತ್ತಿರುವ ಚಿತ್ರಣ, ಸಮಾಜದಲ್ಲಿ ಇಂದಿಗೂ ಕೂಡ ಮರುಳಿಸುವ, ಹೆಣ್ಣುಮಕ್ಕಳ ಭ್ರೂಣ ಹತ್ಯೆಗಳು ಹಾಗೂ ಪರಿಣಾಮಗಳು, ಹೆಣ್ಣು ಮಕ್ಕಳ ಮೇಲೆ ನಡೆಯುತ್ತಲೇ ಇರುವ ಲೈಂಗಿಕ ದೌರ್ಜನ್ಯಗಳ ಕುರಿತು ವಿದ್ಯಾರ್ಥಿಗಳಿಂದ ರೂಪುಗೊಂಡಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಕಾಲೇಜು ಪ್ರಾಂಶುಪಾಲೆ ಟಿ.ಎ.ಲಿಖಿತಾ ಅವರ ಪರಿಕಲ್ಪನೆಯಲ್ಲಿ ಕಲಾರಂಭ್ ಎಂಬ ವಿನೂತನ ಕಾರ್ಯಕ್ರಮಕ್ಕೆ ಕಾಲೇಜು ಆವರಣ ಸಾಕ್ಷಿಯಾಗಿತ್ತು. ಕಾಲೇಜಿನ ಟ್ರಿಸ್ಟಿ ಎನ್.ಎನ್.ನಂಜಪ್ಪ, ಕಾಲೇಜು ಅಧೀಕ್ಷಕ ಮಹೇಶ್ ಅಮೀನ್, ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಶ್ಮಾ ಇದ್ದರು. ರೂಪಕಗಳ ತೀರ್ಪುಗಾರರಾಗಿ ಪಿಯು ವಿಭಾಗದ ಉಪನ್ಯಾಸಕ ವಿಕ್ರಂ, ಮಂಜುನಾಥ್, ಮಹೇಶ್ ಅಮೀನ್, ಕಾರ್ಯನಿರ್ವಹಿಸಿದರು. ಉಪನ್ಯಾಸಕ ಮಂಜೇಶ್ ಸ್ವಾಗತಿಸಿದರು. ದೀಪ್ತಿ…
ಮಡಿಕೇರಿ ಮಾ.8 NEWS DESK : ಕೇವಲ 27 ವರ್ಷ ಬದುಕಿದ ಕೊಡಗಿನ ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅತ್ಯಾಧೃತ ಮತ್ತು ಅನನ್ಯವಾದದ್ದು ಎಂದು ಮೈಸೂರು ಯುವರಾಜ ಕಾಲೇಜಿನ ಉಪನ್ಯಾಸಕಿ ಎಚ್ ನಿವೇದಿತಾ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮೂರ್ನಾಡು ಪಿಎಂ ಶ್ರೀ ಮಾದರಿ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡುತ್ತಿದ್ದರು. ತಮ್ಮ ಅತಿ ಸಣ್ಣ ಜೀವಿತಾವಧಿಯಲ್ಲಿ ಅವರು 21 ಕಥೆಗಳನ್ನು ಬರೆದರು. ಅದರಲ್ಲಿ ಮಹಿಳಾ ಸ್ವಾತಂತ್ರ್ಯ, ವಿಧವಾ ವಿವಾಹ, ಬಾಲ್ಯ ವಿವಾಹ, ವಿಧವಾ ಸಮಸ್ಯೆಗಳ ಬಗ್ಗೆ ಬರೆದಿದ್ದಾರೆ. ಅವರು ನೇರವಾಗಿ ಸ್ವಾತಂತ್ರ ಹೋರಾಟಕ್ಕೆ ಇಳಿಯದಿದ್ದರೂ ಗಾಂಧೀಜಿಯವರು 1934 ರಲ್ಲಿ ಹರಿಜನೋದ್ಧಾರಕ್ಕಾಗಿ ನಿಧಿ ಸಂಗ್ರಹಿಸಲು ಕರ್ನಾಟಕದಲ್ಲಿ 12 ದಿನಗಳ ಪ್ರವಾಸವನ್ನು ಕೈಗೊಂಡರು. ಫೆಬ್ರವರಿ 22-23, 1934…






