ಲೇಖಕ: admin

ಮಡಿಕೇರಿ ಏ.28 NEWS DESK : ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಲ್ಲಿ ತೊಡಗಿರುವ ಕುಟುಂಬಗಳ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮೀಕ್ಷೆ ಆರಂಭವಾಗಿದ್ದು, ರಾಷ್ಟ್ರೀಯ ಸಪಾಯಿ ಕರ್ಮಚಾರಿಗಳ ನಾಯಕ ಐ.ಪಿ.ಡಿ ಸಾಲಪ್ಪ ಅವರ ಕುಲ ಬಾಂಧವರು ಸ್ವಾಭಿಮಾನಕ್ಕಾಗಿ ಅರುಂಧತಿಯಾರ್ ಜಾತಿಗೆ ಸೇರಿದವರೆಂದು ಸಮೀಕ್ಷೆ ಸಂದರ್ಭ ತಿಳಿಸುವಂತೆ ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಕೃಷ್ಣ ಮನವಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಹಾಗೂ ಆದಿ ದ್ರಾವಿಡ ಸಮುದಾಯ ಅರುಂಧತಿಯಾರ್ ಜಾತಿಗೆ ಸೇರಿದೆ. ಇವರು ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಲ್ಲಿ ತೊಡಗಿದ್ದು, ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಈ ಹಿಂದೆ ಮಾಡಿದ ಸಮೀಕ್ಷೆ ಕಾರ್ಯದ ಮಾಹಿತಿ ಸರಿಯಾಗಿ ಗೊತ್ತಿಲ್ಲದೆ ಅವಕಾಶ ವಂಚಿತರಾಗಿರುವುದರಿಂದ ಹಲವು ಯೋಜನೆಗಳನ್ನು ಕೈತಪ್ಪಿವೆ. ಶಿಕ್ಷಣ ಮತ್ತು ಆರೋಗ್ಯ ಸೇವೆಯು ಸಮರ್ಪಕವಾಗಿ ನಮಗೆ ಸಿಗುತ್ತಿಲ್ಲ. ಎಲ್ಲದರಿಂದಲೂ ನಾವು ವಂಚಿತರಾಗುತ್ತಿದ್ದೇವೆ. ಆದ್ದರಿಂದ ಈಗಾಗಲೇ ಆರಂಭವಾಗಿರುವ ಸಮೀಕ್ಷೆಯಲ್ಲಿ ಅರುಂಧತಿಯಾರ್ ಜಾರಿಗೆ ಸೇರಿದವರೆಂದು ಬರೆಸುವಂತಾಗಬೇಕು ಎಂದು ಹೇಳಿದರು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುಟುಂಬದವರೆಂದು ಪರಿಗಣಿಸುವ ಮೂಲಕ ನಮಗೆ…

Read More

ಸೋಮವಾರಪೇಟೆ ಏ.28 NEWS DESK : ಕೊಡಗು ವಿಶ್ವವಿದ್ಯಾಲಯಯವನ್ನು ರದ್ದುಪಡಿಸುವುದು ಅಥವಾ ವಿಲೀನಗೊಳಿಸುವುದಕ್ಕೆ ಮುಂದಾದರೆ ಅದರ ದುಷ್ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ ಎಂದು ರಾಜ್ಯ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಎಚ್ಚರಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಜೇಸಿ ವೇದಿಕೆಯಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯವನ್ನು ಉಳಿಸಿಬೇಕೆಂಬ ಹಕ್ಕೊತ್ತಾಯವನ್ನು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೊಡಗು ವಿಶ್ವವಿದ್ಯಾಲಯವನ್ನು ವಿಲೀನ ಮಾಡುವುದಿಲ್ಲ ಎಂದು ಇದೂವರೆಗೆ ಸರ್ಕಾರ ಅಧಿಕೃತ ಹೇಳಿಕೆ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳು ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ವಿಶ್ವವಿದ್ಯಾಲಯಕ್ಕೆ ಸೇರಲು ಭಯಪಡುತ್ತಿದ್ದಾರೆ ಎಂದರು. ಜನಪ್ರತಿನಿಧಿಗಳು, ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿದೆ. ಜಿಲ್ಲೆಯ ಶಾಸಕರುಗಳು ಕೂಡ ಇದರ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸುತ್ತಿಲ್ಲ ಎಂದರು. ಸಭೆಯಲ್ಲಿ ಪಾಲ್ಗೊಂಡಿದ್ದ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ ಮಾತನಾಡಿ, ಜಿಲ್ಲೆಯ ಇಬ್ಬರು ಶಾಸಕರುಗಳು ವಿಶ್ವವಿದ್ಯಾಲಯವನ್ನು ಉಳಿಸಲು ಹೆಚ್ಚಿನ ಪ್ರಯತ್ನ ಮಾಡಬೇಕು. ರೈತರು, ಬಡವರು, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ-ಪಂಗಡದವರು ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾರೆ. ಕೊಡಗಿನಲ್ಲಿ…

Read More

ಸೋಮವಾರಪೇಟೆ ಏ.28 NEWS DESK : ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆ ಸಭೆ ಇನ್ಸ್‍ಪೆಕ್ಟರ್ ಮುದ್ದುಮಾದೇವ ಅವರ ಅಧ್ಯಕ್ಷತೆಯಲ್ಲಿ ಪೊಲೀಸ್ ಠಾಣೆಯಲ್ಲಿ ನಡೆಯಿತು. ಕಳೆದ ತಿಂಗಳ ಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಕಳ್ಳಬಟ್ಟಿ ಸಾರಾಯಿ ತಯಾರಿಕೆಯ ಬಗ್ಗೆ ಚರ್ಚೆ ನಡೆದಿತ್ತು. ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಜಂಟಿ ಕಾರ್ಯಚರಣೆ ನಡೆಸಲಾಯಿತು. 8 ಲೀಟರ್ ಬಟ್ಟಿ ಸರಾಯಿ, ಒಂದು ಬ್ಯಾರಲ್ ಪುಳಿಗಂಜಿ ಪತ್ತೆಹಚ್ಚಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಇನ್ಸ್‍ಪೆಕ್ಟರ್ ತಿಳಿಸಿದರು. ಸಭೆಯಲ್ಲಿ ರಾಜಪ್ಪ ಮಾತನಾಡಿ, ಅಬ್ಬಿಮಠ ಗ್ರಾಮದ ಬಸ್ ನಿಲ್ದಾಣ ಮತ್ತು ಯಡೂರು ಬಸ್ ನಿಲ್ದಾಣದಲ್ಲಿ ಬಿಡಿ ಸಿಗರೇಟು ಮತ್ತು ಮದ್ಯದ ಬಾಟಲ್‍ಗಳು ತುಂಬಿವೆ. ಪ್ರಯಾಣಿಕರು ನಿಲ್ದಾಣದಲ್ಲಿ ಕುಳಿತುಕೊಳ್ಳಲು ಅಸಹ್ಯ ಪಟ್ಟುಕೊಳ್ಳುತ್ತಿದ್ದಾರೆ. ಕೆಲ ಸಂದರ್ಭ ಪುಂಡರ ಹಾವಳಿಯೂ ಜಾಸ್ತಿಯಾಗಿದೆ. ಪೊಲೀಸರು ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದರು. ದಲಿತಪರ ಹೋರಾಟಗಾರ ಎಸ್.ಎ.ಪ್ರತಾಪ್ ಮಾತನಾಡಿ, ನಗರದಲ್ಲಿ ಪಾಕಿರ್ಂಗ್…

Read More

ಮಡಿಕೇರಿ ಏ.28 NEWS DESK : ನಿವೇಶನ ರಹಿತರಿಗೆ ನಿವೇಶ ನೀಡುವಂತೆ ಒತ್ತಾಯಿಸಿ ಚೆಟ್ಟಳ್ಳಿಯಲ್ಲಿ ನಿವೇಶನ ರಹಿತ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು. ಚೆಟ್ಟಳ್ಳಿ ಗ್ರಾ.ಪಂ ಮುಂಭಾಗದಲ್ಲಿ ಜಮಾಯಿಸಿದ ನಿವೇಶನ ರಹಿತರು ಹಾಗೂ ವಿವಿಧ ಸಂಘಟನೆಯ ಪ್ರಮುಖರು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತವಾಗಿ ವಾಸಿಸಲು ಮನೆಯಿಲ್ಲದ ಸುಮಾರು 700ಕ್ಕಿಂತಲೂ ಹೆಚ್ಚು ಕುಟುಂಬಗಳು ತೋಟದ ಲೈನ್‍ಮನೆಗಳಲ್ಲಿ, ಅಪಾಯಕಾರಿ ಪ್ರದೇಶಗಳಲ್ಲಿಯೂ ಬದುಕು ನಡೆಸುತ್ತಿದ್ದು, ಹುಟ್ಟಿನಿಂದಲೂ ಈ ರೀತಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಗಾಂಧಿಜೀಯವರ ರಾಮರಾಜ್ಯದ ಕನಸು ಈಡೇರಲಿಲ್ಲ. ಸಂವಿಧಾನ ಆಶಯಗಳು ಜಾರಿ ಮಾಡಲು ಸಾಧ್ಯವಾಗದ ಕಾರಣಕ್ಕಾಗಿ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆದಿವಾಸಿ, ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಇನ್ನೂ ಅನೇಕ ಸಮುದಾಯಗಳು ಬದುಕುವ ನೈಜ ಸ್ವಾತಂತ್ರ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗವು…

Read More

ಮಡಿಕೇರಿ ಏ.28 NEWS DESK : ಮಡಿಕೇರಿ ತಾಲ್ಲೂಕಿನ ಮುಕ್ಕೋಡ್ಲು, ಮಕ್ಕಂದೂರು, ಕಾಲೂರು, ಮುಟ್ಲು, ಹಮ್ಮಿಯಾಲ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಸಮಸ್ಯೆ ಕಾಡುತ್ತಿದ್ದು, ನಿತ್ಯ ಕೆಲಸ, ಕಾರ್ಯಗಳಿಗೆ ಅಡಚಣೆಯಾಗಿದೆ. ತಕ್ಷಣ ಅಧಿಕಾರಿಗಳು ನೆಟ್‍ವರ್ಕ್ ಸಮಸ್ಯೆಗೆ ಸ್ಪಂದಿಸದೆ ಇದ್ದಲ್ಲಿ ಬಿಎಸ್‍ಎನ್‍ಎಲ್ ಕಚೇರಿಗೆ ಮುತ್ತಿಗೆ ಹಾಕಲು ಗ್ರಾಮಸ್ಥರು ನಿರ್ಧರಿಸಿದ್ದಾರೆ ಎಂದು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ನ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚಿನ ದಿನಗಳಲ್ಲಿ ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಹೀನಾಯ ಸ್ಥಿತಿಯಲ್ಲಿದ್ದು, ವಿದ್ಯಾರ್ಥಿಗಳು, ಯುವ ಪೀಳಿಗೆ, ಉದ್ಯೋಗಸ್ಥರು ಹಾಗೂ ಸರ್ಕಾರಿ ಕಚೇರಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರಿಗೆ ಕರೆಗಳು ದೊರೆಯದೆ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ. ನೆಟ್‍ವರ್ಕ್ ಸಮಸ್ಯೆಯಿಂದಾಗಿ ಸಾರ್ವಜನಿಕ ಸೇವೆಗೆ ಅಡಚಣೆಯಾಗಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕ್ಷೀಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಒಂದು ತಿಂಗಳು ಕಳೆದರೆ ಮಳೆಗಾಲವೂ ಆರಂಭವಾಗುತ್ತದೆ, ಪ್ರಾಕೃತಿಕ ವಿಕೋಪಗಳು ಸಂಭವಿಸುವಾಗ ಅಥವಾ ಸಂಕಷ್ಟದ ಸಂದರ್ಭಗಳಲ್ಲಿ ಸಂಪರ್ಕ ಸಾಧಿಸಲು ಬಿಎಸ್‍ಎನ್‍ಎಲ್ ನೆಟ್‍ವರ್ಕ್…

Read More

ಮಡಿಕೇರಿ ಏ.28 NEWS DESK : ಮಡಿಕೇರಿಯ ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಚಿತ ಬೇಸಿಗೆ ಶಿಬಿರದ ಅಂಗವಾಗಿ ಮಾಂದಲ್‍ಪಟ್ಟಿಗೆ ಚಾರಣವನ್ನು ಆಯೋಜಿಸಲಾಗಿತ್ತು. ವಾಂಡರರ‍್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಕುಂಜಿಲ ಗ್ರಾಮದ ಕೋಟೇರ ಎನ್.ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಚಾರಣದಲ್ಲಿ ಶಿಬಿರಾರ್ಥಿ ಪುಟಾಣಿಗಳು, ಪೋಷಕರು, ಶಿಕ್ಷಕರು ಹಾಗೂ ಆಯೋಜಕರು ಸೇರಿದಂತೆ 150ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಹಸಿರ ಪರಿಸರದಲ್ಲಿ ಸಂತೋಷದಿಂದ ಭಾಗಿಯಾಗಿ ಉತ್ತಮ ಅನುಭವ ಪಡೆದುಕೊಂಡರು. ಕಾಲೂರಿನಿಂದ ಮಾಂದಲ್‍ಪಟ್ಟಿ ವರೆಗೆ ಕಾಲ್ನಡಿಗೆಯಲ್ಲೇ ತಲುಪಿ ಸಂಭ್ರಮಿಸಿದ ವಿದ್ಯಾರ್ಥಿಗಳು ನಂತರ ಹಟ್ಟಿಹೊಳೆಯ ಆವಂಡಿ ಜಲಪಾತಕ್ಕೆ ತೆರಳಿ ಪ್ರಕೃತಿ ಸೌಂದರ್ಯದ ನಡುವೆ ನೀರಿನಲ್ಲಿ ಮಿಂದೆದ್ದರು. 20 ಕಿ.ಮೀ ದೂರದ ಚಾರಣದಲ್ಲಿ ಎಲ್‍ಕೆಜಿಯಿಂದ 16 ವರ್ಷದ ವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ರುಚಿಕರವಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಶಿಬಿರದ ಸಂಘಟಕರಾದ ಬಾಬು ಸೋಮಯ್ಯ, ಶ್ಯಾಮ್ ಪೂಣಚ್ಚ, ಕುಡೆಕಲ್ ಸಂತೋಷ್, ಮಹೇಶ್ ಕುಮಾರ್, ವೆಂಕಟೇಶ್,…

Read More

ಪುತ್ತೂರು ಏ.28 NEWS DESK : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯ ಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಆಶ್ರಯದಲ್ಲಿ ಕಾರ್ಮಿಕ ಭವಿಷ್ಯ ನಿಧಿ ಮಂಗಳೂರು ವಿಭಾಗದ ಜಿಲ್ಲಾ ಸಂಪರ್ಕ ಅಭಿಯಾನದ ಅಡಿಯಲ್ಲಿ ನಿಧಿ ಆಪ್ ಕೇ ನಿಕಟ್ ಎನ್ನುವ ಕಾರ್ಯಕ್ರಮದನ್ವಯ ಕಾಲೇಜಿನ ಶ್ರೀ ರಾಮ ಸಭಾಭವನದಲ್ಲಿ ನಡೆದ ಕಾರ್ಯಾಗಾರದಲ್ಲಿ ಕಾರ್ಮಿಕ ಭವಿಷ್ಯ ನಿಧಿಗೆ ಸಂಬಂಧಪಟ್ಟಂತೆ ಎಲ್ಲಾ ವಿವರಗಳನ್ನು ಮತ್ತು ಕಾಲಕಾಲಕ್ಕೆ ಬದಲಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಮಿಕ ಭವಿಷ್ಯ ನಿಧಿ ಮಂಗಳೂರು ವಿಭಾಗದ ಆಯುಕ್ತ ರಜೀಬ್ ಮುಖರ್ಜಿ, ಅಕೌಂಟ್ ಆಫೀಸರ್ ಬಿ.ಬಿ.ವೇಣುಗೋಪಾಲ್ ಮತ್ತು ಡಿಪಿಎ ನೀತಾ ಉದಯಶಂಕರ್ ಮಾಹಿತಿ ನೀಡಿದರು. ರಾಜ್ಯ ಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಂಗಳೂರು ಕಛೇರಿಯ ಸೋಶಿಯಲ್ ಸೆಕ್ಯೂರಿಟಿ ಆಫೀಸರ್ ನೀಲಯ್ಯ ಹಾಗೂ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಅಶ್ವಿನ್ ಕುಮಾರ್ ವಿವರವಾಗಿ ತಿಳಿಸಿದರು. ವಿವೇಕಾನಂದ…

Read More

ಮಡಿಕೇರಿ ಏ.28 NEWS DESK : ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಳ್ಯಕೋಡಿ ಚಿನ್ನಪ್ಪ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.  ಈ ಸಂದರ್ಭ ಮೃತರ ಕುಟುಂಬಕ್ಕೆ ಸರಕಾರದ ವತಿಯಿಂದ ರೂ.15ಲಕ್ಷ ಮೊತ್ತದ ಪರಿಹಾರದ ಚೆಕ್ ಅನ್ನು ಶಾಸಕರು ವಿತರಿಸಿದರು.  ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪೂವಯ್ಯ, ಸಿದ್ದಾಪುರ ವಲಯ ಅಧ್ಯಕ್ಷ  ಪ್ರತೀಶ್ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಏ.28 NEWS DESK : ಕೊಡಗು ಹೆಗ್ಗಡೆ ಸಮಾಜದ ಕ್ರೀಡೋತ್ಸವವು  ಮೇ 1 ರಿಂದ 3 ರವರಗೆ  ನಡೆಯಲಿದೆ. ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣ ನಡೆಯಲಿರುವ ಕ್ರೀಡೋತ್ಸವವದಲ್ಲಿ  ಕ್ರಿಕೆಟ್, ಪುರಷರು ಮತ್ತು ಮಹಿಳಾ ವಿಭಾಗಕ್ಕೆ ಪ್ರತ್ಯೇಕ ಹಗ್ಗ ಜಗ್ಗಟ, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ. ಕ್ರೀಡೋತ್ಸವಕ್ಕೆ ಮೇ 1 ರಂದು ಪೂರ್ವಹ್ನ 10.30 ಗಂಟೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿಲಿದ್ದು, ಮುಖ್ಯ ಅಥಿತಿಗಳಾಗಿ ವಿಶ್ರಾಂತ ಕುಲಪತಿ ಡಾ.ಪಡಿಞರಂಡ ಚಂಗಪ್ಪ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷರಾದ ಕೊರಕುಟ್ಟೀರ ಸರಾ ಚಂಗಪ್ಪ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ಮುಖ್ಯಮಂತ್ರಿಗಳ ಪದಕ ಪಡೆದ ಇಬ್ಬರು ಪೊಲೀಸ್ ಸಬ್ ಇನ್ಸಿಪೆಕ್ಟರ್  ತುದಿಮಾಡ ಸವಿ ಲೋಕೇಶ್ ಮತ್ತು ಚಂಗಚಂಡ ನಿತಿನ್ ಮಾಚಯ್ಯ  ಹಾಗು ಅಗ್ನಿ ಶಾಮಾಕದಳದಲ್ಲಿ ವಿಪ್ಪತ್ತು ನಿರ್ವಾಹಣಾ ಸೇವೆಯಲ್ಲಿನ ಅಪ್ರತಿಮ ಶೌರ್ಯಕ್ಕೆ ಮುಖ್ಯಮಂತ್ರಿಗಳ ಪದಕ ಪಡೆದ ಮಚ್ಚಂಡ ನಂಜಪ್ಪ ಅವರನ್ನು ಸನ್ಮಾನಿಸಿ, ಗೌರವಿಸಲಾಗವುದು.…

Read More

ಸಿದ್ದಾಪುರ  ಏ.28 NEWS DESK : ಇಂಜಿಲಗೆರೆ ಗ್ರಾಮದ ಪೊಮಾಡಪುರ ಶ್ರೀ ಮುತ್ತಪ್ಪ ದೇವಾಲಯದ 70ನೇ  ತೆರೆ ಮಹೋತ್ಸವ ಶ್ರದ್ಧಾಭಕ್ತಿಯಿಂದ  ನಡೆಯಿತು. ಮಹೋತ್ಸವಕ್ಕೆ ಅಮ್ಮತ್ತಿ, ಓಂಟಿಯಂಗಡಿ, ಪಾಲಿಬೆಟ್ಟ, ಗುಹ್ಯ, ಸಿದ್ದಾಪುರ, ನೆಲ್ಯಹುದಿಕೇರಿ ಸೇರಿದಂತೆ ‌‌ಸುತ್ತಮುತ್ತಲಿನ ಗ್ರಾಮಗಳಿಂದ ‌ಸಾವಿರಾರು ‌ಭಕ್ತರು ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. 2 ದಿನಗಳ ಕಾಲ ನಡೆದ ತೆರೆ ಮಹೋತ್ಸವದಲ್ಲಿ ವಿವಿಧ ದೇವರುಗಳ ಕೋಲಗಳ ತೆರೆಗಳನ್ನು ಭಕ್ತರು ಕಣ್ತುಂಬಿಕೊಂಡರು ಚೆಂಡೆಗಳೊಂದಿಗೆ ವಸೂರಿಮಾಲಾ ತೆರೆ‌ ಗುಳಿಗನ ತೆರೆ ಕುಟ್ಟಿಚಾತನ್ ತೆರೆ ಮತ್ತು ಮುತ್ತಪ್ಪನ ತಿರುವಪ್ಪನ ತೆರೆ ಭಕ್ತರನ್ನು ಹೆಚ್ಚು ಆಕರ್ಷಿಸಿತು ಉಳಿದಂತ‌ ಮುತ್ತಪ್ಪ ತಿರುವಪ್ಪನ ವೆಳ್ಳಾಟಂ ನಡೆದವು.  ಮಹೋತ್ಸವದ ಭಾಗವಾಗಿ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ತೆರೆ ಮಹೋತ್ಸವದ ಅಂಗವಾಗಿ ಪೊಮಾಡಪುರ ಮುತ್ತಪ್ಪ ದೇವಾಲಯ  ಹಾಗೂ ರಸ್ತೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ಧಿಗೆ ವಿವಿಧ ಹರಕೆ ಕಾಣಿಕೆ ಒಪ್ಪಿಸಿ ಪ್ರಸಾದ ಪಡೆದುಕೊಂಡರು.ಈ ಸಂದರ್ಭ ಪೊಮಾಡಪುರ ಶ್ರೀ ಮುತ್ತಪ್ಪ ದೇವಾಲಯದ ಸಮಿತಿ ಅಧ್ಯಕ್ಷ ಟಿ.ಎ.ಪ್ರಕಾಶ್ ಕಾರ್ಯದರ್ಶಿ…

Read More