ಮಡಿಕೇರಿ ಮಾ.7 NEWS DESK : ಕೊಡಗು ವಿಶ್ವ ವಿದ್ಯಾನಿಲಯವನ್ನು ಜಿಲ್ಲೆಯಲ್ಲೇ ಉಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಾ.6ರಿಂದ ಆರಂಭಿಸಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಬಿಜೆಪಿ ಮುಕ್ತಾಯಗೊಳಿಸಿದೆ. ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಎರಡನೇ ದಿನದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಹಣಕಾಸಿನ ವೈಫಲ್ಯಗಳ ಹಿನ್ನೆಲೆಯಲ್ಲಿ ಕೊಡಗು ವಿವಿಯನ್ನು ಒಳಗೊಂಡಂತೆ 9 ವಿವಿಗಳಿಗೆ ಅಗತ್ಯ ನೆರವನ್ನು ನೀಡದ ರಾಜ್ಯ ಸರ್ಕಾರ ವಿವಿಗಳ ‘ವಿಲೀನ’ದ ಕುರಿತು ಮಾತನಾಡುತ್ತಿದೆ. ಈ ವಿಲೀನ ಎಂಬುವುದು ಅಂತಿಮವಾಗಿ ವಿವಿಗಳನ್ನು ಮುಚ್ಚುವುದೇ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಯಾವ ಭೂಮಿ ನಿಮಗೆ ಆಶ್ರಯವನ್ನು ನೀಡಿದೆಯೋ ಅಂತಹ ನೆಲದ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಈ ಹಿಂದೆ ಕೊಡಗಿನ ಜಮ್ಮಾಬಾಣೆ ಸಮಸ್ಯೆ ಸಂದರ್ಭ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗಲು ಶಾಸಕರಾಗಿದ್ದ ಅಪ್ಪಚ್ಚು ರಂಜನ್ ಹಾಗೂ ವಿಧಾನಸಭಾಧ್ಯಕ್ಷರಾಗಿದ್ದ ಕೆ.ಜಿ.ಬೋಪಯ್ಯ ಅವರು ಸದನದಲ್ಲೆ ಕೊಡಗಿನ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟಿಸಿದ್ದರು.…
ಲೇಖಕ: admin
ಮಡಿಕೇರಿ ಮಾ.7 NEWS DESK : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ್ ಮಿಷನ್ ಯೋಜನೆಯ ಕುರಿತು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷದತ್ತ ಚಾಮರಾಜ ಒಡೆಯರ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಪಾಲಕ ಎಂಜಿನಿಯರ್ ಆರ್.ಭಾಸ್ಕರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 457 ಗ್ರಾಮೀಣ ಜನವಸತಿ ಕಾಮಗಾರಿಗಳಿದ್ದು, ಇದರಲ್ಲಿ ಒಟ್ಟು 343 ಕಾಮಗಾರಿಗಳು ಪೂರ್ಣಗೊಂಡಿದೆ. ಹಾಗೆಯೇ 112 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ವಿವರಿಸಿದರು. ನಂತರ ಸಂಸದ ಯದುವೀರ್ ಒಡೆಯರ್ ಮಾತನಾಡಿ, ಅಂಕಿ ಅಂಶಗಳ ಪ್ರಕಾರ ಪ್ರಗತಿ ಸಾಧಿಸಿದ್ದು, ಕೆಲವು ಜನವಸತಿಗಳಲ್ಲಿ ಟ್ಯಾಂಕ್, ಪೈಪ್ಲೈನ್ ಮೂಲಕ ನಲ್ಲಿ ಸಂಪರ್ಕ ಕಲ್ಪಿಸಿರುವುದಿಲ್ಲ ಎಂದು ದೂರುಗಳು ಬಂದಿರುತ್ತದೆ ಎಂದು ಅಧಿಕಾರಿಗಳಿಗೆ ತಿಳಿಸಿ ಸ್ಪಷ್ಟನೆ ಪಡೆದರು. ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಮಾತನಾಡಿ ಕೊಡಗಿನಲ್ಲಿ ಯಾವುದೇ ಬಹುಗ್ರಾಮ ಕುಡಿಯುವ ನೀರು ಯೋಜನೆ ಇರುವುದಿಲ್ಲ, ಬೇಸಿಗೆಯಲ್ಲಿ ಬೋರ್ವೆಲ್ಗಳು ಬತ್ತಿ ಹೋಗುತ್ತಿದ್ದು, ಶಾಶ್ವತವಾಗಿ ನದಿ ನೀರನ್ನು ಶುದ್ಧೀಕರಿಸಿ…
ಮಡಿಕೇರಿ ಮಾ.7 NEWS DESK : ರಾಜ್ಯ ಸರ್ಕಾರದ ಬಜೆಟ್ ಒಂದು ವರ್ಗವನ್ನು ಓಲೈಸುವ ಬಜೆಟ್ ಆಗಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಟೀಕಿಸಿದ್ದಾರೆ. ಅಲ್ಪಸಂಖ್ಯಾತರ ಓಲೈಕೆಯ ಭಾಗವಾಗಿ ಬಜೆಟ್ನಲ್ಲಿ, ಅವರ ಅಭ್ಯುದಯಕ್ಕಾಗಿ 1800 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದೇಶಿ ಶಿಕ್ಷಣದ ನೆರವನ್ನು ರೂ.30 ಲಕ್ಷಕ್ಕೆ ಹೆಚ್ಚಿಸಿರುವುದು ಇದೇ ಕಾರಣದಿಂದ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್, ರಾಜ್ಯದ ಸಮಸ್ತ ಕನ್ನಡಿಗರಿಗೆ ಯೋಜನೆಗಳನ್ನು ರೂಪಿಸುವಲ್ಲಿ ವಿಫಲವಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಬಜೆಟ್ನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದೇಶಿ ಶಿಕ್ಷಣದ ನೆರವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಿರುವುದಲ್ಲದೆ, ವಿವಿಧ ಸೌಲಭ್ಯಗಳನ್ನು ನೀಡಲಾಗಿದ್ದು, ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ರಾಜ್ಯದ ಕನ್ನಡಿಗರೆಲ್ಲರಿಗೂ ಅನ್ವಯವಾಗುವ ರೀತಿಯ ಯೋಜನೆಗಳನ್ನು ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು. ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕಾಗಿ ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ನೂತನ ವಿವಿಗಳಿಗೆ ನೀಡಿದ್ದಲ್ಲಿ, ಅವುಗಳನ್ನು ಉಳಿಸಿಕೊಳ್ಳಲು ಸಾಧ್ಯವಿತ್ತು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ ಬಂದಿಲ್ಲವೆಂದು ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಸರ್ಕಾರ ಮಾಡಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ನ್ಯಾಯಯುತವಾಗಿ ನೀಡಬೇಕಾದ ಹಣವನ್ನು ನೀಡಿದೆ ಎಂದು ತಿಳಿಸಿದರು. ಕೊಡಗಿಗೆ ರೈಲ್ವೆ ಸಂಪರ್ಕಕ್ಕೆ ಅಗತ್ಯ ನೆರವನ್ನು ಕೇಂದ್ರ ನೀಡಿದೆ, ಆದರೆ ರಾಜ್ಯ ಸರ್ಕಾರ…
ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಸಾಲದ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, ಜನರನ್ನು ಸಾಲದಲ್ಲಿ ಮುಳುಗಿಸಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಕೂಡ ಕೊಡಗು ಜಿಲ್ಲೆಗೆ ನಿರಾಶೆಯಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರೀಕ್ಷೆ ಮಾಡಿತ್ತು, ಆದರೆ ಅದೆಲ್ಲವೂ ಹುಸಿಯಾಗಿದೆ ಎಂದು ತಿಳಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿಗೆ ಸಮುದಾಯ ಆಸ್ಪತ್ರೆ, ವಿರಾಜಪೇಟೆಗೆ 400 ಹಾಸಿಗೆಗಳ ಆಸ್ಪತ್ರೆ, ಕುಶಾಲನಗರ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಘೋಷಣೆ ಸ್ವಾಗತಾರ್ಹ. ಆದರೆ ಬಜೆಟ್ ನಲ್ಲಿ ಕಾಯ್ದಿರಿಸಿದ ಅನುದಾನ ಯಾವುದಕ್ಕೂ ಸಾಲುವುದಿಲ್ಲ. ಒಂದು ವರ್ಷದ ಅಕಾಲಿಕ ಮಳೆಯಿಂದ ಜಿಲ್ಲೆಯ ರಸ್ತೆಗಳು ಗುಂಡಿ ಬಿದ್ದಿವೆ. ರಸ್ತೆ ಅಭಿವೃದ್ಧಿಗೆ ಕೇವಲ 20 ಕೋಟಿ ರೂ. ನೀಡಿದ್ದಾರೆ. ಜಿಲ್ಲೆಯ ಕೃಷಿಕರ ಬೆಳೆ ನಷ್ಟ ಪರಿಹಾರಕ್ಕೆ ಅನುದಾನ ನೀಡಿಲ್ಲ, ವನ್ಯಜೀವಿ ದಾಳಿ…
ಮಡಿಕೇರಿ ಮಾ.7 NEWS DESK : ಕೊಡಗು ಜಿಲ್ಲೆಯ ಶಾಸಕದ್ವಯರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಬಿಜೆಪಿ ಮಂದಿ ಜಿಲ್ಲೆಯ ಜನರ ಹಾದಿ ತಪ್ಪಿಸುವುದಕ್ಕಾಗಿ ರಾಜಕೀಯ ಪ್ರೇರಿತವಾದ ಧರಣಿ ಸತ್ಯಾಗ್ರಹ ನಡೆಸಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ.ಮೋಹನ್ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನಿಂದ ಹತಾಶೆಗೊಂಡಿರುವ ಬಿಜೆಪಿ ನಾಯಕರು ಇಬ್ಬರು ಕಾಂಗ್ರೆಸ್ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ನಿತ್ಯ ಪ್ರತಿಭಟನೆಯ ಪ್ರಹಸನ ಮಾಡುತ್ತಿದ್ದಾರೆ. ತಮ್ಮ ಸುದೀರ್ಘ ಕಾಲದ ಅಧಿಕಾರವಧಿಯಲ್ಲಿ ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಸೂಚಿಸದವರು ಇಂದು ಅದೇ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ನಡೆಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಆರೋಪಿಸಿದ್ದಾರೆ. ಸಿ ಮತ್ತು ಡಿ ಭೂಮಿಯ ಗೊಂದಲ, ವನ್ಯಜೀವಿಗಳ ಹಾವಳಿ, ಬೆಳೆಗಾರರ ಕಡೆಗಣನೆ, ಪರಿಶಿಷ್ಟರ ಸಂಕಷ್ಟ ಇವುಗಳೆಲ್ಲವು ಇಂದು ಸೃಷ್ಟಿಯಾದ ಸಮಸ್ಯೆಗಳಲ್ಲ. ಕಳೆದ ಎರಡು ದಶಕಗಳಿಂದಲೂ ಈ ಸಮಸ್ಯೆ ಶಾಶ್ವತವಾಗಿಯೇ ಉಳಿದುಕೊಂಡಿವೆ. ಕಳೆದ 20 ವರ್ಷಗಳಿಂದ ಅಭಿವೃದ್ಧಿ ಕಾಣದ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದ ರಸ್ತೆಗಳೆಲ್ಲವೂ ಶಾಸಕರಾದ…
ಮಡಿಕೇರಿ ಮಾ.7 NEWS DESK : ಬಿದ್ದು ಸಿಕ್ಕಿದ ಪರ್ಸ್ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಡಿಎಆರ್ ಸಿಬ್ಬಂದಿ ನದಾಫ್ ಪ್ರಮಾಣಿಕತೆ ಮೆರೆದಿದ್ದಾರೆ. ಕಟ್ಟೆಮಾಡು ದೇವಾಲಯಕ್ಕೆ ದೇವರ ದರ್ಶನಕ್ಕೆ ಭೇಟಿ ನೀಡಿದ ಮಹಿಳೆಯೊಬ್ಬರು ಮೊಬೈಲ್ ಮತ್ತು ಹಣ ಇದ್ದ ಪರ್ಸ್ ಕಳೆದುಕೊಂಡಿದ್ದರು. ಇದೇ ಸಂದರ್ಭ ಕರ್ತವ್ಯದಲ್ಲಿದ್ದ ಡಿಎಆರ್ ಸಿಬ್ಬಂದಿ ನದಾಫ್ ಅವರಿಗೆ ದೇವಾಲಯದ ಆವರಣದಲ್ಲಿ ಪರ್ಸ್ ದೊರೆತ್ತಿದ್ದು, ಮಹಿಳೆಯನ್ನು ಹುಡುಕಿ ಪರ್ಸ್ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 16ನೇ ಬಜೆಟ್, ರಾಜ್ಯದ ಎಲ್ಲಾ ಜನತೆಯ ನಿರೀಕ್ಷೆಯನ್ನು ಮತ್ತಷ್ಟು ಪುಷ್ಟೀಕರಿಸುವುದರೊಂದಿಗೆ ಆರೋಗ್ಯ, ಶಿಕ್ಷಣ, ಸಾಮಾಜಿಕ ನ್ಯಾಯ, ರೈತ ಕೇಂದ್ರೀಕೃತ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಹಾಗೂ ಮಾನವ-ಪ್ರಾಣಿ ಸಂಘರ್ಷ ನಿವಾರಣೆಗೆ ವಿಶೇಷ ಒತ್ತು ನೀಡಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್, ಮುಖ್ಯಮಂತ್ರಿಗಳ ಸಾಮಾಜಿಕ ಬದ್ಧತೆ, ಆರ್ಥಿಕ ಕ್ಷೇತ್ರದಲ್ಲಿನ ವಿಶೇಷ ಅನುಭವ ಹಾಗೂ ಆಡಳಿತದಲ್ಲಿನ ಪ್ರಬುದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದಿರುವ ಅವರು, ರಾಜ್ಯದ ಕಟ್ಟ ಕಡೆಯ ಅಶಕ್ತ ಹಾಗೂ ಶೋಷಿತ ವ್ಯಕ್ತಿಯನ್ನು ಸಶಕ್ತಗೊಳಿಸುವ ದೂರದೃಷ್ಟಿ ಹೊಂದಿರುವ ಈ ಬಜೆಟ್, ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಅಭೂತಪೂರ್ವ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಿಶ್ಲೇಷಿಸಿದ್ದಾರೆ. ಕೊಡಗಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಗೆ ಅಧಿಕ ಅನುದಾನ ಒದಗಿಸುವುದರೊಂದಿಗೆ, ಕೊಡಗಿನ ಜಲ್ವಂತ ಸಮಸ್ಯೆಗಳಲ್ಲಿ ಒಂದಾಗಿರುವ ಮಾನವ-ಪ್ರಾಣಿ ಸಂಘರ್ಷದ…
ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು. ಕುಶಾಲನಗರ ತಾಲ್ಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು. ರಾಜ್ಯದ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಒಟ್ಟು 650 ಕೋಟಿ ರೂ. ಗಳನ್ನು ಘೋಷಿಸಲಾಗಿದೆ. ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮಥ್ರ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು ವಿವರಿಸಿದ್ದಾರೆ. ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು. ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ…
ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಕೊಡಗಿನ ಮಟ್ಟಿಗೆ ನಿರಾಶಾದಾಯಕವಾಗಿದೆ ಮತ್ತು ಅಲ್ಪಸಂಖ್ಯಾತರನ್ನು ಓಲೈಸಿ ಪರಿಶಿಷ್ಟರನ್ನು ಕಡೆಗಣಿಸಲಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಆರೋಪಿಸಿದ್ದಾರೆ. ಬಜೆಟ್ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು ಕೆಲವು ಆಸ್ಪತ್ರೆಗಳು ಮತ್ತು ರಸ್ತೆಗಳ ಅಭಿವೃದ್ಧಿಯ ಕುರಿತು ಬಜೆಟ್ ನಲ್ಲಿ ಉಲ್ಲೇಖಿಸಲಾಗಿದೆಯೇ ಹೊರತು ಕೊಡಗು ಜಿಲ್ಲೆಗೆ ಬೇರೆ ಯಾವುದೇ ವಿಶೇಷ ಕೊಡುಗೆಯನ್ನು ನೀಡಿಲ್ಲ. ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸುವ ಭರವಸೆ ನೀಡಿಲ್ಲ. ಮಿತಿ ಮೀರಿರುವ ವನ್ಯಜೀವಿಗಳ ದಾಳಿ ತಡೆಗೆ ಯಾವುದೇ ಯೋಜನೆಯನ್ನು ಘೋಷಿಸಿಲ್ಲ. ಕಾಫಿ ಬೆಳೆಗಾರರ ಹಾಗೂ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ರಾಜ್ಯಕ್ಕೆ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನದಿಯ ಸ್ವಚ್ಛತೆಯನ್ನು ಕಾಪಾಡಲು ಅನುದಾನ ಮೀಸಲಿಟ್ಟಿಲ್ಲ. ಪ್ರವಾಸೋದ್ಯಮದ ಬೆಳವಣಿಗೆಗೆ ಅನುದಾನ ಘೋಷಣೆ ಮಾಡಿಲ್ಲ. ಜಿಲ್ಲೆಯಲ್ಲಿರುವ ಕಾಲೇಜುಗಳ ಅಭಿವೃದ್ಧಿಗೆ ಆಸಕ್ತಿ ತೋರಿಲ್ಲ ಎಂದು ಟೀಕಿಸಿದ್ದಾರೆ. ಅಲ್ಪಸಂಖ್ಯಾತರನ್ನು ಓಲೈಸುವ ಭರದಲ್ಲಿ ಪರಿಶಿಷ್ಟರನ್ನು ಕಡೆಗಣಿಸಲಾಗಿದೆ,…






