ಬೆಂಗಳೂರು NEWS DESK ಮಾ.7 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು. ಕುಶಾಲನಗರ ತಾಲ್ಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು. ರಾಜ್ಯದ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಒಟ್ಟು 650 ಕೋಟಿ ರೂ. ಗಳನ್ನು ಘೋಷಿಸಲಾಗಿದೆ. ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು ವಿವರಿಸಿದ್ದಾರೆ.
ಲೇಖಕ: admin
ಸೋಮವಾರಪೇಟೆ ಮಾ.7 NEWS DESK : ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತ್ವರಿತವಾಗಿ ತಯಾರು ಮಾಡುವ ಉದ್ದೇಶದಿಂದ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಶಾಲೆಯಲ್ಲಿ ಮಾ.20 ರಿಂದ ಏ.17ರ ವರಗೆ ಬೇಸಿಗೆ ರಜದಿನದ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು, ಜಿಲ್ಲೆ ಮತ್ತು ಹೊರಜಿಲ್ಲೆಯ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಹೇಳಿದರು. ನುರಿತ ಹಾಗೂ ಪ್ರತಿಭಾವಂತ ಉಪನ್ಯಾಸಕರು ತರಬೇತಿ ನೀಡಲಿದ್ದಾರೆ. ಕುವೆಂಪು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ. ಹೊರಗಿನ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಅವಶ್ಯಕತೆವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕೆಂದು ಉದ್ದೇಶದಿಂದ ಕುವೆಂಪು ವಿದ್ಯಾಸಂಸ್ಥೆಯನ್ನು 2003ರಲ್ಲಿ ಸ್ಥಾಪಿಸಲಾಯಿತು. ಪ್ರಸಕ್ತ ಶೇ.95 ರಷ್ಟು ವಿದ್ಯಾರ್ಥಿಗಳು ಕೃಷಿಕ ಕುಟುಂಬದ ಗ್ರಾಮೀಣ ಭಾಗದವರಾಗಿದ್ದಾರೆ. ಎಸ್ಎಸ್ಎಲ್ಸಿ ವಿಭಾಗದಲ್ಲಿ ಕಳೆದ 10 ವರ್ಷಗಳಿಂದ…
ನಾಪೋಕ್ಲು ಮಾ.7 NEWS DESK : ನೆಲಜಿ ಶ್ರೀ ಈಶ್ವರ ಇಗ್ಗುತ್ತಪ್ಪ ದೇವರ ವಾರ್ಷಿಕ ಕಲಾಡ್ಚ ಉತ್ಸವವು ಮಾ.13 ರಂದು ನಡೆಯಲಿದೆ. ಉತ್ಸವದ ಪ್ರಯುಕ್ತ ತುಲಾಭಾರ ಸೇವೆ, ಎತ್ತು ಪೋರಾಟ, ಮಹಾಪೂಜೆ, ದೇವರ ನೃತ್ಯ ಬಲಿ ಹಾಗೂ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ತಕ್ಕ ಮುಖ್ಯಸ್ಥರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಕೋರಿದ್ದಾರೆ. ತುಲಾಭಾರ ಸೇವೆ ಮಾಡಲಿಚ್ಚಿಸುವವರು ಮುಂಚಿತವಾಗಿ ದೇವಸ್ಥಾನದ ಕಾರ್ಯದರ್ಶಿ ಮುಕ್ಕಾಟ್ಟಿರ ವಿನಯ್ – 94495 54997 ಗೆ ಸಂಪರ್ಕಿಸಿ ಹೆಸರು ನೊಂದಾಯಿಸಿ ಕೊಳ್ಳುವಂತೆ ಮನವಿ ಮಾಡಿದ್ದಾರೆ. ವರದಿ – ದುಗ್ಗಳ ಸದಾನಂದ.
ಮಡಿಕೇರಿ ಮಾ.7 NEWS DESK : ಕೊಡಗು ಪತ್ರಕರ್ತರ ಸಂಘದಿಂದ ಅತ್ಯುತ್ತಮ ವರದಿಗಳಿಗೆ ನೀಡಲಾಗುವ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಏಳು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಂಘದಿಂದ ನೀಡಲಾಗುವ ಅತ್ಯುತ್ತಮ ರಾಜಕೀಯ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ‘ಪ್ರಜಾಪ್ರಭುತ್ವದ ದೇಗುಲದೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ದುಷ್ಕರ್ಮಿಗಳು’ ಎಂಬ ವರದಿಗೆ ಅನಿಲ್ .ಹೆಚ್.ಟಿ.ಪಡೆದು ಕೊಂಡಿದ್ದಾರೆ. ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಗೆ ವಿಜಯವಾಣಿಯಲ್ಲಿ ಪ್ರಕಟಗೊಂಡ ‘ಸೌಲಭ್ಯ ವಂಚಿತ ನಾಗರ ಹೊಳೆ ಆಶ್ರಮ ಶಾಲೆ’ ಎಂಬ ವರದಿಗೆ ವಿನೋದ್ ಮೂಡಗದ್ದೆ ಭಾಜನರಾಗಿದ್ದಾರೆ. ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿ ಪ್ರಜಾವಾಣಿಯಲ್ಲಿ ಪ್ರಕಟಗೊಂಡ ‘ಏಲಕ್ಕಿ ಕೃಷಿಯಲ್ಲಿ ಯಶಸ್ಸು ಕಂಡ ದಂಪತಿ’ ಎಂಬ ವರದಿಗೆ ಡಿ.ಪಿ.ಲೋಕೇಶ್ ಅವರಿಗೆ ಲಭಿಸಿದೆ. ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿ ಕನ್ನಡ ಪ್ರಭದಲ್ಲಿ ಪ್ರಕಟಗೊಂಡ ವಿಘ್ನೇಶ್ ಭೂತನಕಾಡು ಅವರ ‘ಏಷ್ಯನ್ ಗೇಮ್ಸ್ ಗೆ ಪುಟ್ಟ ಜಿಲ್ಲೆ ಕೊಡಗಿನ ಕ್ರೀಡಪಟುಗಳು’ ಎಂಬ ವರದಿಗೆ ದೊರೆತಿದೆ. ಸಂಘದ ಸಲಹೆಗಾರರು ಹಾಗೂ ಶಕ್ತಿ ಪತ್ರಿಕೆಯ ಸಲಹಾ…
ಮಡಿಕೇರಿ ಮಾ.7 NEWS DESK : ಮಡಿಕೇರಿ-ಪಾಣತ್ತೂರು (ಕೇರಳ ಗಡಿ) ಮಾರ್ಗದಲ್ಲಿ ಬಾಕಿ ಉಳಿದಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲೆಯ ಕುಂದಚೇರಿ, ಭಾಗಮಂಡಲ ಹೋಬಳಿ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿ ವಿಳಂಬ ವಾಗುತ್ತಿರುವುದರಿಂದ ಸ್ಥಳೀಯ ಪ್ರಯಾಣಿಕರಿಗೆ ಮತ್ತು ಅಂತರರಾಜ್ಯ ಪ್ರಯಾಣಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ನಿರ್ಮಾಣ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮತ್ತು ಅದನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತೀನ್ ಗಡ್ಕರಿ ಅವರಿಗೆ ಸಂಸದ ಯದುವೀರ್ ಮನವಿ ಸಲ್ಲಿಸಿದ್ದಾರೆ.
ಕುಶಾಲನಗರ ಮಾ.6 NEWS DESK : ಕುಶಾಲನಗರ ಸಂಸ್ಕೃತ ಭಾರತಿ ಮತ್ತು ರಂಗಭಾರತಿ ಕಲಾಮಂದಿರಂ ಸಹಯೋಗದೊಂದಿಗೆ ಕುಶಾಲನಗರದ ರಂಗಭಾರತಿ ಕಲಾಮಂದಿರಂನಲ್ಲಿ ಹತ್ತು ದಿನಗಳ ಕಾಲ ನಡೆಯಲಿರುವ ಉಚಿತ ಸಂಸ್ಕೃತ ಸಂಭಾಷಣಾ ಶಿಬಿರವನ್ನು ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯಾವುದೇ ಅಧ್ಯಯನಕ್ಕೆ ವಯಸ್ಸಿನ ಮಿತಿ ಇರುವುದಿಲ್ಲ. ಹುಟ್ಟಿನಿಂದ ಸಾಯುವ ತನಕ ನಿರಂತರ ಕಲಿಕೆಯ ಅಗತ್ಯತೆ ಇರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಉದ್ಯಮಿ ಹಾಗೂ ಸಂಸ್ಕೃತ ವಿದ್ವಾಂಸರಾಗಿರುವ ವೇದ ವಿಜ್ಞಾನ ಗುರುಕುಲದ ಶಶಾಂಕ್ ಹತ್ವಾರ್ ಸಂಸ್ಕೃತ ಪದಗಳನ್ನು ಬಳಸುವ ಮೂಲಕ ಶಿಬಿರಾರ್ಥಿಗಳ ಪರಿಚಯ ಮಾತುಗಳೊಂದಿಗೆ ಹತ್ತು ದಿನಗಳ ಕಾಲ ನಡೆಯುವ ಉಚಿತ ತರಗತಿ ಆರಂಭಿಸಿದರು. ಸಂಸ್ಕೃತ ಭಾರತಿ ಮಂಗಳೂರು ವಿಭಾಗ ಸಂಯೋಜಕ ಮಧುಸೂದನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗಭಾರತಿಯ ಕಾರ್ಯದರ್ಶಿ ದೀಪ ಕಾರ್ಯಕ್ರಮ ನಿರೂಪಿಸಿದರು. ರಶ್ಮಿ ಸಂಜಯ್ ಪ್ರಾರ್ಥಿಸಿದರು. ಶಿಕ್ಷಕಿ ಕೃತಿಕ ಸ್ವಾಗತಿಸಿದರು. ಮಧುಸೂದನ್ ವಂದಿಸಿದರು.
ಮಡಿಕೇರಿ ಮಾ.6 NEWS DESK : ಕೋದಂಡ ರಾಮ ದೇವಾಲಯದಲ್ಲಿ 35ನೇ ವರ್ಷದ ರಾಮೋತ್ಸವವನ್ನು ಅದ್ದೂರಿಯಾಗಿ ನಡೆಸುವ ಪ್ರಯುಕ್ತ ರಾಮೋತ್ಸವ ಮಹಿಳಾ ಸಮಿತಿಯ ಸಭೆ ನಡೆಯಿತು. ಕೋದಂಡ ರಾಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷತೆ ಭಾರತಿ ರಮೇಶ್ ರಾಮೋತ್ಸವದಲ್ಲಿ ಮಹಿಳಾ ಸಮಿತಿಯ ಪಾತ್ರದ ಕುರಿತು ವಿವರಿಸಿದರು. ಉದ್ಯಮಿ ಜಯಂತಿ ಶೆಟ್ಟಿ ಮಾತನಾಡಿ, ರಾಮೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಕಡೆಯಿಂದಲೂ ಮಹಿಳೆಯರು ಬರಬೇಕು, ಮಡಿಕೇರಿಯ ಕೋದಂಡ ರಾಮ ದೇವಾಲಯದಲ್ಲಿ ಈ ರಾಮೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಜಾತಿಗಳನ್ನು ಮೀರಿ ನಡೆಯುತ್ತಿದೆ. ಇಲ್ಲಿ ಎಲ್ಲರೂ ಸಮಾನರು ಎಂದರು.ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್, ಈ ಉತ್ಸವ ಸಂಪೂರ್ಣವಾಗಿ ಯಶಸ್ವಿಯಾಗಬೇಕು. ಯಶಸ್ವಿಯಾಗಲು ಮಹಿಳಾ ಸಮಿತಿಯ ಪಾತ್ರ ಬಹಳಾ ಮುಖ್ಯವಾಗಿರುತ್ತದೆ. ಪ್ರತಿಯೊಂದು ಹಂತದಲ್ಲೂ ಮಹಿಳೆಯರ ಪ್ರಾತಿನಿಧ್ಯ ನಮಗೆ ಶಕ್ತಿ ನೀಡುತ್ತದೆ ಎಂದರು. ಅಲ್ಲದೆ ಉತ್ಸವದ ಸಂಪೂರ್ಣ ತಯಾರಿಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ರಾಮೋತ್ಸವ ಸಮಿತಿಯ ಮಹಿಳಾ ಸಮಿತಿಯ ಉಪಾಧ್ಯಕ್ಷರಾದ…
ಮಡಿಕೇರಿ ಮಾ.6 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮಾರ್ಚ್, 12 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಡ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂರವಾಣಿ ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಮಾ.6 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ…
ಗೋಣಿಕೊಪ್ಪ ಮಾ.6 NEWS DESK : ಗೋಣಿಕೊಪ್ಪ ಪಟ್ಟಣದ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಬೆಂಗಳೂರಿನಿಂದ ಟ್ರಾಫಿಕ್ ತಜ್ಞರ ಸಲಹೆ ಪಡೆದು ಬಗೆಹರಿಸಲಾಗುವುದು ಎಂದು ವಿರಾಜಪೇಟೆ ತಾಲ್ಲೂಕು ಪೊಲೀಸ್ ಉಪಾಧೀಕ್ಷಕ ಜಯಕುಮಾರ್ ಭರವಸೆ ನೀಡಿದರು. ಪರಿಮಳ ಮಂಗಳ ವಿಹಾರದಲ್ಲಿ ನಡೆದ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಟೋ ರಿಕ್ಷಗಳು, ಬಸ್ಸುಗಳ ಸಂಚಾರ ಮತ್ತು ನಿಲುಗಡೆ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದೆ. ಈ ಬಗ್ಗೆ ಚಾಲಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುವುದು. ಅಗಲಿಕರಣಗೊಳ್ಳದ ಕಿರಿದಾದ ರಸ್ತೆಗಳಿಂದ ಮತ್ತು ಹೆಚ್ಚಾಗುತ್ತಿರುವ ವಾಹನಗಳ ಸಂಖ್ಯೆಯಿಂದ ಟ್ರಾಫಿಕ್ ಸಮಸ್ಯೆ ಉಲ್ಬಣಿಸುತ್ತಿದೆ. ಇದನ್ನು ನಿಯಂತ್ರಿಸಲು ಸ್ಥಳೀಯ ವರ್ತಕರ ಸಹಕಾರ ಅಗತ್ಯ ಎಂದು ಡಿವೈಎಸ್ಪಿ ಮನವಿ ಮಾಡಿದರು. ಚಾಲಕರು ಹಾಗೂ ವ್ಯಾಪಾರಿಗಳು ತಮ್ಮ ವೈಯಕ್ತಿಕ ಇಚ್ಚೆಗಳ ನಡುವೆಯೂ ಸಾಮಾಜಿಕ ಬದ್ಧತೆ ಮತ್ತು ಕಳಕಳಿ ಹೊಂದಿದಾಗ ಪಟ್ಟಣದ ಬಹುತೇಕ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ. ಪೊಲೀಸರ ಜತೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮನವಿ ಮಡಿದರು. ಪೊನ್ನಂಪೇಟೆ ತಿರುವಿನಲ್ಲಿ ಸಿಗ್ನಲ್ ಅಳವಡಿಕೆ, ಸಿ.ಸಿ. ಕ್ಯಾಮೆರ ಅಳವಡಿಕೆ,…






