ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಭಾರತದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಬಳಿಯ ಇರುವೈಲು ಗ್ರಾಮದಲ್ಲಿರುವ ಒಂದು ಪೂಜ್ಯ ಹಿಂದೂ ದೇವಾಲಯವಾಗಿದೆ. ಈ ದೇವಾಲಯವು ದುರ್ಗಾಪರಮೇಶ್ವರಿ ದೇವಿಗೆ ಸಮರ್ಪಿತವಾಗಿದ್ದು ಇದನ್ನು ಶಕ್ತಿ, ರಕ್ಷಣೆ ಮತ್ತು ಸಮೃದ್ಧಿಯ ಸಾಕಾರರೂಪವಾಗಿ ಪೂಜಿಸಲಾಗುತ್ತದೆ. ಇದು ಸ್ಥಳೀಯ ಸಮುದಾಯಕ್ಕೆ ಪ್ರಮುಖ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿದೆ. ಇತಿಹಾಸ :: ಶ್ರೀ ದುರ್ಗಾ ಪರಮೇಶ್ವರಿ ದೇವಾಲಯದ ನಿಖರವಾದ ಮೂಲವನ್ನು ಸ್ಪಷ್ಟವಾಗಿ ದಾಖಲಿಸಲಾಗಿಲ್ಲ ಆದರೆ ಹಲವಾರು ಶತಮಾನಗಳಷ್ಟು ಹಳೆಯದು ಎಂದು ನಂಬಲಾಗಿದೆ. ಈ ದೇವಾಲಯವು ಈ ಪ್ರದೇಶದ ಪ್ರಮುಖ ಪೂಜಾ ಸ್ಥಳವಾಗಿದೆ ಮತ್ತು ಕರಾವಳಿ ಕರ್ನಾಟಕ ಪ್ರದೇಶದ ಆಳವಾದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ. ವರ್ಷಗಳಲ್ಲಿ ಇದು ತನ್ನ ಪರಂಪರೆಯನ್ನು ಸಂರಕ್ಷಿಸಲು ಮತ್ತು ಹೆಚ್ಚುತ್ತಿರುವ ಸಂಖ್ಯೆಯ ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಲು ನವೀಕರಣಗಳಿಗೆ ಒಳಗಾಗಿದೆ. ಮೂಡಬಿದ್ರೆಯ ಚೌಟರ ಸೀಮೆಗೆ ಒಳಪಟ್ಟ ಇರುವೈಲಿನ ದೇವಗಿರಿ, ವಜ್ರಗಿರಿ, ಕನಕಗಿರಿ ಎಂಬ ಪರ್ವತಗಳ ಮಧ್ಯದಲ್ಲಿ ಇರುವ ಈ ದೇವಾಲಯವು ಪುರಾತನದಲ್ಲಿ ಪ್ರಸ್ತುತ್ತ ದೇವಾಲಯವಿರುವ ಪೂರ್ವಕ್ಕೆ…
ಲೇಖಕ: admin
ಮಡಿಕೇರಿ ಮಾ.6 NEWS DESK : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಎಸ್ಡಿಪಿಐ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಎಸ್ಡಿಪಿಐ ಪಕ್ಷದ ಜನಪರ ಹೋರಾಟಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರ ಬಂಧನ ಕಾನೂನುಬಾಹಿರ ಕ್ರಮವಾಗಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ನಡೆಸಲಾಗುತ್ತಿರುವ ಹೋರಾಟ ಕೇಂದ್ರ ಸರ್ಕಾರದ ನಿದ್ದೆಗೆಡಿಸಿದೆ. ಹೋರಾಟವನ್ನು ಹತ್ತಿಕ್ಕುವ ಭಾಗವಾಗಿ ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ಮಾತನಾಡಿ ಎಸ್ಡಿಪಿಐ…
ಪನೀರ್ ಕ್ಯಾಲ್ಸಿಯಂ, ಮೆಗ್ನೀಸಿಯಮ್, ತಾಮ್ರ, ವಿಟಮಿನ್ ಎ, ಮ್ಯಾಂಗನೀಸ್, ಪ್ರೋಟೀನ್, ವಿಟಮಿನ್ಗಳು ಮತ್ತು 9 ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ. ಇದು ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅತ್ಯುತ್ತಮ ಮೂಲವಾಗಿದೆ. ಕೊಲೆಸ್ಟ್ರಾಲ್ ಮುಕ್ತವಾದ ಆಹಾರವೂ ಹೌದು. ಇದು ತೂಕ ಇಳಿಕೆಗೂ ಸಹಾಯ ಮಾಡುತ್ತದೆ ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಬೇಕಾಗುವ ಪದಾರ್ಥಗಳು :: ಎಣ್ಣೆ- 2 ಚಮಚ, ಜೀರಿಗೆ- 1 ಚಮಚ, ಈರುಳ್ಳಿ- 1 ಸಣ್ಣಗೆ ಹೆಚ್ಚಿದ್ದು, ಉಪ್ಪು- ರುಚಿಗೆ ತಕ್ಕಷ್ಟು, ಹಸಿಮೆಣಸಿನಕಾಯಿ- 1 ಸಣ್ಣಗೆ ಹೆಚ್ಚಿದ್ದು, ಶುಂಠಿ-ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಅಚ್ಚಖಾರದ ಪುಡಿ- ಅರ್ಧ ಚಮಚ, ಟೊಮೆಟೋ- 1 ಸಣ್ಣಗೆ ಹೆಚ್ಚಿದ್ದು, ಅರಿಶಿನ- ಸ್ವಲ್ಪ, ಗರಂ ಮಸಾಲಾ- ಅರ್ಧ ಚಮಚ, ಪನೀರ್- 2 ಕಪ್ ನಷ್ಟು ಸಣ್ಣಗೆ ಪುಡಿಪುಡಿ ಮಾಡಿದ್ದು, ಕಸೂರಿ ಮೇಥಿ- 1 ಚಮಚ, ಕೊತ್ತಂಬರಿ ಸೊಪ್ಪು- ಸ್ವಲ್ಪ ಮಾಡುವ ವಿಧಾನ :: ದೊಡ್ಡ ಬಾಣಲೆ ತೆಗೆದುಕೊಂಡು ಎಣ್ಣೆ ಬಿಸಿ ಮಾಡಿಕೊಳ್ಳಿ. ಅದಕ್ಕೆ ಜೀರಿಗೆ ಹಾಕಿ. ಅದು ಚಟಪಟ ಅಂದಮೇಲೆ ಹೆಚ್ಚಿದ ಈರುಳ್ಳಿ, ಹಸಿಮೆಣಸು…
ಮಡಿಕೇರಿ ಮಾ.6 NEWS DESK : ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರ 1 ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್ ಸೈಟ್ https://kodagu.nic.in ರಲ್ಲಿ ಪಡೆದು ಭರ್ತಿಮಾಡಿ, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ವಿಳಾಸಕ್ಕೆ ಅಂಚೆ/ ಟಪಾಲು ಮುಖೇನ ಸಲ್ಲಿಸಬಹುದೆಂದು ಅಪರ ಜಿಲ್ಲಾಧಿಕಾರಿ ಹಾಗೂ DITC ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ. ಶೈಕ್ಷಣಿಕ ವಿದ್ಯಾರ್ಹತೆ :: B.E. or B.Tech / BCA Stream : Computer Science or Information Science Enginnering, Electronic and Communication Telecom, ಅನುಭವ :: ಯಾವುದೇ ಸರ್ಕಾರಿ ಕಚೇರಿಯಲ್ಲಿ / ಕಂಪನಿ/ ಸಂಸ್ಥೆಗಳಲ್ಲಿ ಅನುಭವ ಹೊಂದಿದ್ದಲ್ಲಿ ಪ್ರಮಾಣ ಪತ್ರ (Freshers…
ಮಡಿಕೇರಿ ಮಾ.6 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಮಾ.7 ರಂದು ಮಾಸಿಕ ದುರ್ಗಾಪೂಜೆ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯಲಿರುವ ದುರ್ಗಾಪೂಜೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಿಯ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪೂಜಾ ಸೇವೆಯನ್ನು ಮಾಡಿಸುವ ಭಕ್ತಾದಿಗಳು ಸಂಜೆ 6.30 ಕ್ಕೆ ಹಾಜರಿದ್ದು, ಸಂಕಲ್ಪ ಮಾಡಿಸುವಂತೆ ಕೋರಿದೆ.
ಮಡಿಕೇರಿ ಮಾ.6 NEWS DESK : ಕೆದಕಲ್ ಗ್ರಾಮದ ಶ್ರೀ ಭದ್ರಕಾಳೇಶ್ವರಿ ದೇವಾಲಯದ 25ನೇ ವಾರ್ಷಿಕೋತ್ಸವವು ಮಾ.12 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಗಣಪತಿ ಹೋಮ, 11 ಗಂಟೆಗೆ ಕುಂಭಾಭಿಷೇಕ ಮತ್ತು ಕಳಸ ಪೂಜೆ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ತಿಳಿಸಿದೆ.
ಮಡಿಕೇರಿ ಮಾ.6 NEWS DESK : ಮಡಿಕೇರಿ ನಗರ ಠಾಣೆಯಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮ ನಡೆಯಿತು. ಠಾಣೆಗೆ ಭೇಟಿ ನೀಡಿದ ವಿದ್ಯಾರ್ಥಿಗಳಿಗೆ ಠಾಣೆಯ ಬಗ್ಗೆ, ಪೊಲೀಸ್ ಸೇವೆಗಳ ಬಗ್ಗೆ, ಮಕ್ಕಳ ಕಾನೂನು, ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳ ಕುರಿತು ಠಾಣಾಧಿಕಾರಿಗಳು ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.
ಮಡಿಕೇರಿ ಮಾ.6 NEWS DESK : ನಾಪೋಕ್ಲು ಹಾಗೂ ವಿರಾಜಪೇಟೆ ಗ್ರಾಮಾಂತರ ಠಾಣೆಗೆ ಸಂಬಂಧಿಸಿದ ನರಿಯಂದಡ ಗ್ರಾಮ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ನಾಪೋಕ್ಲು ಮತ್ತು ವಿರಾಜಪೇಟೆ ಗ್ರಾಮಾಂತರ ಠಾಣೆಯ ಅಧಿಕಾರಿಗಳು ಭಾಗವಹಿಸಿ, ಗ್ರಾಮಸ್ಥರಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಅಪ್ರಾಪ್ತರಿಂದ ವಾಹನ ಚಾಲನೆ, ಸೈಬರ್ ಅಪರಾಧಗಳು ಸೇರಿದಂತೆ ಇತರ ವಿಷಯಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.
ಮಡಿಕೇರಿ ಮಾ.6 NEWS DESK : ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸಬಾರದು, ಸಿ ಮತ್ತು ಡಿ ಭೂಮಿಯ ಗೊಂದಲ ನಿವಾರಿಸಬೇಕು, ಪರಿಶಿಷ್ಟರ ಅನುದಾನವನ್ನು ಉಚಿತ ಭಾಗ್ಯಗಳಿಗೆ ಬಳಸಬಾರದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದೆ. ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಧರಣಿ ಸತ್ಯಾಗ್ರಹ ಆರಂಭಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮೂರು ಪ್ರಮುಖ ಬೇಡಿಕೆಗಳು ಸೇರಿದಂತೆ ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ತನ್ನ ಬಜೆಟ್ ಅಧಿವೇಶನದಲ್ಲೇ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕೊಡಗು ವಿವಿ ಎನ್ನುವುದು ಒಂದೆರಡು ದಿನಗಳಲ್ಲಿ ದೊರಕಿದ್ದಲ್ಲ. ಕಳೆದ ಎರಡು ದಶಕಗಳ ನಿರಂತರ ಪ್ರಯತ್ನಗಳಿಂದ, ಜಿಲ್ಲೆಯ ಬಡ ಮಕ್ಕಳ ಉನ್ನತ ವ್ಯಾಸಂಗದ ಕನಸನ್ನು ನನಸುಗೊಳಿಸುವ ನಿಟ್ಟಿನಲ್ಲಿ ದೊರೆತ ಫಲವೇ ಆಗಿದೆ. ಯಾವುದೇ ಕಾರಣಕ್ಕೂ ಕೊಡಗು ವಿವಿಯನ್ನು ರದ್ದುಗೊಳಿಸಲು ಬಿಡುವುದಿಲ್ಲ ಎಂದರು. ಅಧಿವೇಶನದಲ್ಲಿ ಸರ್ಕಾರ ಕೊಡಗಿನ…
ನಾಪೋಕ್ಲು ಮಾ.6 NEWS DESK : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಅಪ್ಪಚೆಟ್ಟೋಳಂಡ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಮಾ.24 ರಿಂದ ಹಾಕಿ ತರಬೇತಿ ಶಿಬಿರ ನಡೆಯಲಿದೆ. ಬಲ್ಲಮಾವಟಿ ನೇತಾಜಿ ವಿದ್ಯಾ ಸಂಸ್ಥೆ ಆಟದ ಮೈದಾನದಲ್ಲಿ ನಡೆಯಲಿರುವ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಶಿಬಿರದ ಆಯೋಜಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಹೆಸರು ನೊಂದಾಯಿಸಿ ಕೊಳ್ಳಲು ಕರವಂಡ ಸುರೇಶ್-9480251850, ಚಂಗೇಟಿರ ಸೋಮಣ್ಣ-9901629090 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ವರದಿ : ದುಗ್ಗಳ ಸದಾನಂದ.






