ನಾಪೋಕ್ಲು ಮಾ.6 NEWS DESK : ಕೊಡವ ಸಮಾಜದ ಕ್ರೀಡೆ, ಸಾಂಸ್ಕೃತಿಕ ಮತ್ತು ಮನರಂಜನಾ (ಕ್ಲಬ್) ಕೂಟದ ವತಿಯಿಂದ ಮೂರನೇ ವರ್ಷದ ಕೊಡವ ಬ್ಯಾಡ್ಮಿಂಟನ್ ಮತ್ತು ಸ್ನೂಕರ್ ಟೂರ್ನಮೆಂಟ್ ಮಾ.15 ಮತ್ತು 16ರಂದು ಸಮಾಜದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು (ಕ್ಲಬ್) ಕೂಟದ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ ತಿಳಿಸಿದರು. ನಾಪೋಕ್ಲು ಕೊಡವ ಸಮಾಜದ (ಕ್ಲಬ್) ಕೂಟದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷಂಪ್ರತಿ ನಡೆಸಿಕೊಂಡು ಬರಲಾಗುತ್ತಿರುವ ಕೊಡವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನೂರಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ. ಕ್ಲಬ್ ವತಿಯಿಂದ ನಡೆಯುವ ಮೂರನೇ ವರ್ಷದ ಟೂರ್ನಮೆಂಟ್ ಇದಾಗಿದ್ದು, ನಾಲ್ಕು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪುರುಷರ ಡಬಲ್ಸ್ 20 ವರ್ಷ ಒಳಗಿನವರಿಗೆ, 20-35 ವಯೋಮಿತಿ, 35-50 ವರ್ಷ ವಯೋಮಿತಿ ಹಾಗೂ 50 ವರ್ಷ ಮೇಲ್ಪಟ್ಟು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಮುಕ್ತ ಮಿಕ್ಸ್ ಡ್ ಡಬಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯು ನಡೆಯಲಿದೆ. ವಿಜೇತರಿಗೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನಗಳನ್ನು ವಿತರಿಸಲಾಗುವುದು ಎಂದ ಅವರು…
ಲೇಖಕ: admin
ನಾಪೋಕ್ಲು ಮಾ.6 NEWS DESK : ಪೇರೂರು ದವಸ ಭಂಡಾರದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮೂವೇರ ಪೆಮ್ಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬೊಟ್ಟೋಳಂಡ ಕರುಂಬಯ್ಯ, ನಿರ್ದೇಶಕರುಗಳಾಗಿ ಬೊಟ್ಟೋಳಂಡ ಮಿಟ್ಟು ಪೂಣಚ್ಚ, ತೋಲಂಡ ಕಾವೇರಪ್ಪ, ಬೊಟ್ಟೋಳಂಡ ಕುಶಾಲಪ್ಪ, ಮಚ್ಚುರ ಬಿದ್ದಯ್ಯ, ಪಾಲೇಯಡ ದೇವಯ್ಯ, ಆನೇಡ ಚಿಣ್ಣಪ್ಪ, ತೆಕ್ಕಡ ಭೀಮಯ್ಯ, ಬೊಟ್ಟೋಳಂಡ ರೇಷ್ಮ, ಪಾಲೆಯಡ ಪೂವಮ್ಮ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಸಹಕಾರ ಸಂಘಗಳ ಸಹ ನಿಬಂಧಕರಾದ ಸಂದಿಪ್ ಮತ್ತು ಪೇರೂರು ದವಸಭಂಡಾರದ ಕಾರ್ಯದರ್ಶಿ ಅಪ್ಪಚ್ಚೀರ ಬೋಪಯ್ಯ ಕಾರ್ಯ ನಿರ್ವಹಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮಾ.6 NEWS DESK : ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರೂರು-ಕೀಯಲ್ ಕೇರೀ-ಮೂವೇರ-ತೆಕ್ಕೆಡ ಹಾಗೂ ಮೇದರ ಮನೆಗಳಿಗೆ ತೆರಳುವ ರಸ್ತೆಯ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದಲ್ಲಿ ಕೈಗೊಳ್ಳಲಾಯಿತು. ಹಲವಾರು ವರ್ಷಗಳಿಂದ ಯಾವುದೇ ಪ್ರಮುಖ ಅಭಿವೃದ್ಧಿ ಕಾಮಗಾರಿ ಕಾಣದೆ ತೀರಾ ಕುಗ್ರಾಮವಾಗಿದ್ದ ಪೇರೊರು-ಕೀಯಲ್ ಕೇರಿಗೆ ರಸ್ತೆ ಕಾಮಗಾರಿ ಕೈಗೊಂಡಿದ್ದಕ್ಕೆ, ಈ ಭಾಗದ ಸ್ಥಳೀಯ ನಾಗರೀಕರು ಶಾಸಕರಿಗೆ ಧನ್ಯವಾದ ಸಲ್ಲಿಸಿದರು.
ಮಡಿಕೇರಿ ಮಾ.6 NEWS DESK : ಕಾಟಕೇರಿಯ ಎಸ್ಟೇಟ್ ನ ಪೈಪ್ಲೈನ್ ಒಳಗಡೆ ಸೇರಿಕೊಂಡಿದ್ದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪಿಯೂಸ್ ಪೆರೇರಾ ರಕ್ಷಿಸಿ ಅರಣ್ಯ ಇಲಾಖೆಗೆಯ ಸಮ್ಮುಖದಲ್ಲಿ ಅರಣ್ಯಕ್ಕೆ ಬಿಟ್ಟರು. ಹಾವುಗಳು ಕಂಡರೆ ಕೊಲ್ಲದೆ ಉರಗ ತಜ್ಞರಿಗೆ ಮಾಹಿತಿಯನ್ನು ನೀಡಿ ಸುರಕ್ಷಿತವಾಗಿ ಅರಣ್ಯ ಬಿಡುವಂತೆ ಕರೆ ನೀಡಿದರು. ಹಾವುಗಳು ಕಂಡುಬಂದರೆ +919481952253 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದರು.
ಮಡಿಕೇರಿ NEWS DESK ಮಾ.5 : ಮಡಿಕೇರಿಯ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಬಂಧಿತ ಆರೋಪಿಯಾಗಿರುವ ವ್ಯಕ್ತಿಗೆ ಟೂತ್ ಪೇಸ್ಟ್ ಟ್ಯೂಬ್ ನಲ್ಲಿ ಮಾದಕ ವಸ್ತು ನೀಡಲೆಂದು ತಂದಿದ್ದ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿವಾಸಿ ಸುರಭಿಲ್ (26) ಎಂಬಾತ ಬಂಧಿತ ಆರೋಪಿಯಾಗಿದ್ದು, ಟೂತ್ ಪೇಸ್ಟ್ ಟ್ಯೂಬ್ ಸಹಿತ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣಾಧೀನ ಬಂಧಿತ ಆರೋಪಿ ಸನಮ್ ಎಂಬಾತನ ಸಹೋದರನೆಂದು ಹೇಳಿಕೊಂಡು ಸಂದರ್ಶನಕ್ಕಾಗಿ ಸುರಭಿಲ್ ಕಾರಾಗೃಹಕ್ಕೆ ಬಂದು ದಿನ ನಿತ್ಯದ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಶ್, ಸೋಪ್, ಬಟ್ಟೆ ಸೋಪ್ ಮತ್ತು ಶ್ಯಾಂಪ್ ನ್ನು ನೀಡಲು ಮುಂದಾಗುತ್ತಾನೆ. ಜಿಲ್ಲಾ ಕಾರಾಗೃಹ ಅಧೀಕ್ಷಕ ಸಂಜಯ್ ಜತ್ತಿ ಅವರು ವಸ್ತುಗಳನ್ನು ಪರಿಶೀಲಿಸುವ ಸಂದರ್ಭ ಟೂತ್ ಪೇಸ್ಟ್ ಟ್ಯೂಬ್ನ ಒಳಗೆ ಪೇಸ್ಟ್ನ ಬದಲಿಗೆ ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿ ತಂದಿರುವುದು ಕಂಡುಬAದಿದೆ. ಇದು ನಿಷೇಧಿತ ಹ್ಯಾಶಿಶ್…
ಮಡಿಕೇರಿ ಮಾ.5 NEWS DESK : 2023-24 ನೇ ಸಾಲಿನ ಗಾಂಧಿ ಗ್ರಾಮ ರಾಜ್ಯ ಪುರಸ್ಕಾರಕ್ಕೆ ರಾಜ್ಯದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ 5 ಗ್ರಾ.ಪಂ ಗಳು ಆಯ್ಕೆಯಾಗಿವೆ. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾ.ಪಂ, ಸೋಮವಾರಪೇಟೆ ತಾಲ್ಲೂಕಿನ ದುಂಡಳ್ಳಿ, ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ, ಪೊನ್ನಂಪೇಟೆ ತಾಲ್ಲೂಕಿನ ಮಾಯಮುಡಿ ಹಾಗೂ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾ.ಪಂ ಗಳು ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಗಾಂಧಿ ಗ್ರಾಮ ಪುರಸ್ಕಾರವನ್ನು ಪಡೆದುಕೊಳ್ಳಲಿವೆ. ಗ್ರಾಮ ಪಂಚಾಯಿತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಸದುದ್ದೇಶದಿಂದ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯಿತಿಗಳನ್ನು ಪ್ರೋತ್ಸಾಹಿಸಲು 2013-14ನೇ ಸಾಲಿನಿಂದ ಪ್ರತಿ ತಾಲ್ಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿ ರೂ.5 ಲಕ್ಷಗಳ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುತ್ತಿದೆ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಕುರಿತು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ, ದುಂಡಳ್ಳಿ ಗ್ರಾ.ಪಂ ಅಧ್ಯಕ್ಷೆ ಸತ್ಯಾವತಿ, ಹಾಲುಗುಂದ ಗ್ರಾ.ಪಂ ಅಧ್ಯಕ್ಷ ಕುಶ ಅಯ್ಯಪ್ಪ, ಮಾಯಮುಡಿ ಗ್ರಾ.ಪಂ…
ಮಡಿಕೇರಿ ಮಾ.5 NEWS DESK : 66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆವಿ ಎಫ್3 ಶನಿವಾರಸಂತೆ ಮಾರ್ಗದಲ್ಲಿ, ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.6 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಮಾರ್ಗಗಳ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಶನಿವಾರಸಂತೆ ಟೌನ್, ಗುಡುಗಳಲೆ, ಕಾಜೂರು, ಕೂಜುಗೇರಿ, ಮಾದ್ರೆ, ಅಪ್ಪಶೆಟ್ಟಳ್ಳಿ, ಶೆಟ್ಟಿಗನ ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಮಾ.5 NEWS DESK : ಪೊಲೀಸ್ ಇಲಾಖೆ ವತಿಯಿಂದ ‘ಫಿಟ್ನೆಸ್ ಫಾರ್ ಆಲ್’ ಎಂಬ ಧ್ಯೇಯದೊಂದಿಗೆ ಸಮಾಜದ ಆರೋಗ್ಯ ಕಾಪಾಡುವ ಸಂದೇಶದೊಂದಿಗೆ ಹಾಗೂ ಮಾದಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ‘ಕರ್ನಾಟಕ ರಾಜ್ಯ ಪೊಲೀಸ್’ ಇಲಾಖಾ ವತಿಯಿಂದ ಮಾ.9 ರಂದು ‘ಮ್ಯಾರಥಾನ್ ಓಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕೇಂದ್ರಸ್ಥಾನದಲ್ಲಿ ನಡೆಯಲಿದೆ. ಅದರಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಾ.9 ರಂದು ಬೆಳಗ್ಗೆ 8 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಿಸಿ ನಗರದ ಹಳೆಯ ಬಸ್ಸು ನಿಲ್ದಾಣ, ಐ.ಜಿ.ವೃತ್ತ, ಮಾರ್ಗವಾಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದವರೆಗೆ ಮ್ಯಾರಥಾನ್ ಓಟ ನಡೆಯಲಿದೆ ಎಂದು ಎಂದು ಸಂಚಾರಿ ಪೊಲೀಸ್ ಠಾಣೆ ಠಾಣಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಮಾ.5 NEWS DESK : ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2025ನೇ ಸಾಲಿನ ಎಂ.ಡಿ ವೈದ್ಯಕೀಯ ಪರೀಕ್ಷೆಯಲ್ಲಿ Radiation Oncology ವಿಭಾಗದಲ್ಲಿ ಡಾ.ಶ್ರೀಲೇಖ ಕಾರಂತ ಅವರು ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರು ಚೆಂಬು ಗ್ರಾಮದ ಡಾ.ಫಲ್ಗುಣ ಅವರ ಪತ್ನಿ, ಮಡಿಕೇರಿ ಎಪಿಎಂಸಿ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ ಹಾಗೂ ನಿವೃತ್ತ ಶಿಕ್ಷಕಿ ಕಾಮಾಕ್ಷಿ ಅವರ ಸೊಸೆ. ಬೆಂಗಳೂರಿನ ಇಸ್ರೋ ಸಂಸ್ಥೆಯ ನಿವೃತ್ತ ವಿಜ್ಞಾನಿ ನಾಗೇಶ್ ರಾವ್ ಹಾಗೂ ಆಲ್ ಇಂಡಿಯಾ ರೇಡಿಯೋ ವಿಜ್ಞಾನಿ ಸುಜಾತಾ ಅವರ ಪುತ್ರಿಯಾಗಿರುವ ಡಾ.ಶ್ರೀಲೇಖ ಕಾರಂತ ಅವರು ಬೆಂಗಳೂರಿನ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜ್ ನಲ್ಲಿ ಎಂ.ಡಿ ವಿದ್ಯಾಭ್ಯಾಸ ಪೂರೈಸಿದ್ದಾರೆ.
ಮಡಿಕೇರಿ ಮಾ.5 NEWS DESK : ಎನ್ಸಿಸಿ ಡೆಕೋರೇಟ್ ಕರ್ನಾಟಕ ಮತ್ತು ಗೋವಾ ಇವರ ಕಾರ್ಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಮೈಸೂರು, ಬೆಳಗಾವಿ, ರಾಯಚೂರು ನಲ್ಲಿ 2024-25 ನೇ ಸಾಲಿನಲ್ಲಿ ಹೊರಗುತ್ತಿಗೆ ಮೇಲೆ ಖಾಲಿ ಇರುವ 10-ಜೆಸಿಒ ಮತ್ತು 19-ಎನ್ಸಿಒ ಇನ್ಸ್ಟ್ರಕ್ಟರ್ ಸ್ಟಾಪ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಾಜಿ ಸೈನಿಕ ಜೆಸಿಒ ಮತ್ತು ಹವಿಲ್ದಾರ್ ರ್ಯಾಂಕಿನ ಎನ್ಸಿಒಗಳು https://nis.bisag-n./nis/downloads- public ಜಾಲತಾಣದಲ್ಲಿ ಲಾಗಿನ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.






