ಮಡಿಕೇರಿ ಜ.16 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2025 ನೇ ವರ್ಷದ ಅಕಾಡೆಮಿ ಗೌರವ ಪ್ರಶಸ್ತಿಗೆ ಅರೆಭಾಷೆ ಸಂಸ್ಕøತಿ, ಸಾಹಿತ್ಯ, ಕಲೆ, ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರಿಂದ ಅರ್ಜಿ ಅಹ್ವಾನಿಸಿದ್ದು, ತಲಾ ಒಬ್ಬರಂತೆ 3 ಜನ ಸಾಧಕರನ್ನು ಅಕಾಡೆಮಿ ಗೌರವ ಪ್ರಶಸ್ತಿ 2025 ಕ್ಕೆ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಸ್ವತ: ಸಾಧಕರು ಸಲ್ಲಿಸುವುದು ಅಥವಾ ಅವರ ಅಭಿಮಾನಿಗಳು ಶಿಫಾರಸ್ಸುಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಇವರು ಸಲ್ಲಿಸಿರುವ ಸೇವೆ ಮತ್ತು ಸಾಧನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅರ್ಜಿಯ ಜೊತೆಗೆ ಅಕಾಡೆಮಿಗೆ ಒದಗಿಸುವುದು. ಈ ಸಂಬಂಧ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ “ಗೌರವ ಪ್ರಶಸ್ತಿ 2025” ಎಂದು ಬರೆದು…
ಲೇಖಕ: admin
ಮಡಿಕೇರಿ ಜ.16 NEWS DESK : ಜಿಲ್ಲೆಯ ಅಮ್ಮತ್ತಿ, ಪಾಲಿಬೆಟ್ಟ ಮತ್ತು ಚೆನ್ನಯ್ಯನ ಕೋಟೆ ಪೊಲೀಸ್ ಉಪ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದರು. ಈ ಸಂದರ್ಭ ಉಪ ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವಿಕೆ ಮುಂತಾದ ವಿಚಾರಗಳ ಬಗ್ಗೆ ಉಪ ಠಾಣಾ ಸಿಬ್ಬಂದಿಗಳಿಗೆ ಸೂಚನೆಗಳನ್ನು ನೀಡಲಾಯಿತು.
ನಾಪೋಕ್ಲು ಜ.16 NEWS DESK : ಮಕರ ಸಂಕ್ರಾಂತಿ ಭೂಮಿಗೂ ರೈತನಿಗೂ ಗೋವಿಗೂ ಇರುವ ಅವಿನಾಭಾವ ಸಂಬಂಧವನ್ನು ಸೂಚಿಸುವ ಹಬ್ಬ ಎಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ನಿರ್ದೇಶಕಿ ಕೂಡಕಂಡಿ ಸೋನಿ ಸುದೀಪ್ ಅವರು ಹೇಳಿದರು. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಚೇರಂಬಾಣೆ ಗೌಡ ಸಮಾಜದ ಆಯೋಜಿಸಿದ ಮಕರ ಸಂಕ್ರಾಂತಿ ಹಬ್ಬ ಹಾಗೂ ಒಕ್ಕೂಟದ 2026ನೇ ವರ್ಷದ ಮಾಸಿಕ ಸಭೆಯಲ್ಲಿ ಅವರು ಭಾಗವಹಿಸಿ ಸಂಕ್ರಮಣದ ಆಚರಣೆ ಮತ್ತು ಪದ್ಧತಿ ಪರಂಪರೆ ಬಗ್ಗೆ ಬೆಳಕು ಚೆಲ್ಲಿದರು. ರೈತರಿಗೆ ಇದು ಸುಗ್ಗಿ ಹಬ್ಬ. ದವಸ ಧಾನ್ಯಗಳು ಮನೆ ತುಂಬಿ ಸಂಭ್ರಮಿಸುವ ಕಾಲ. ಆದ್ದರಿಂದ ಮಾನವರಿಗೂ ಪ್ರಾಣಿಗಳಿಗೂ ಯಥೇಚ್ಛವಾಗಿ ದಾನ ನೀಡುತ್ತಾ ವರ್ಷವಿಡೀ ರೈತನಿಗೆ ಹೆಗಲುಕೊಟ್ಟ ಗೋವನ್ನು ಪೂಜಿಸುತ್ತಾ ಅವುಗಳ ದೇಹದಲ್ಲಿ ಕ್ರಿಮಿಕೀಟಗಳು ಬಾಧಿಸದಂತೆ ಅವುಗಳನ್ನು ಕಿಚ್ಚು ಹಾಯಿಸಿ ಸಂರಕ್ಷಣೆ ಮಾಡುವಂತಹ ಜಾನಪದ ಹಬ್ಬವೂ ಸಂಕ್ರಾಂತಿ ಎಂದರು. ಮಕರ ಸಂಕ್ರಾಂತಿಯನ್ನು ದೇಶದ ಎಲ್ಲೆಡೆಯಲ್ಲೂ ನಾನಾ ಹೆಸರುಗಳಿಂದ ಆಚರಿಸುತ್ತಾರೆ. ಒಟ್ಟಿನಲ್ಲಿ ಸಂಕ್ರಾಂತಿ ರೈತರ ಬಾಳಿನಲ್ಲಿ ಸಂಭ್ರಮದ…
ನಾಪೋಕ್ಲು ಜ.16 NEWS DESK : ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಗ್ರಾಮ ಸಭೆಯು ಜ.17 ರಂದು ನಡೆಯಲಿದೆ. ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 2025-26ನೇ ಸಾಲಿನ ಗ್ರಾಮ ಸಭೆಯು ಪಂಚಾಯಿತಿ ಅಧ್ಯಕ್ಷ ಶಾಂತಿ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್ ತಿಳಿಸಿದ್ದಾರೆ. ವರದಿ: ದುಗ್ಗಳ ಸದಾನಂದ.
ಸುಂಟಿಕೊಪ್ಪ ಜ.16 NEWS DESK : ಸುಂಟಿಕೊಪ್ಪ ಪೊಂಗಲ್ ಸಮಿತಿ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಸಂಭ್ರಮದಿಂದÀ ಪೊಂಗಲ್(ಮಕರಸಂಕ್ರಾಂತಿ) ಹಬ್ಬವನ್ನು ಆಚರಿಸಲಾಯಿತು. ಸುಂಟಿಕೊಪ್ಪ ಪೊಂಗಲ್ ಸಮಿತಿ ವತಿಯಿಂದ 26ನೇ ವರ್ಷದ ಆಚರಣೆಯ ಅಂಗವಾಗಿ ಬೆಳಿಗ್ಗೆ ಮಧುರಮ್ಮ ಬಡಾವಣೆಯಲ್ಲಿರುವ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ಮಹಿಳೆಯರು, ಯುವತಿಯರು ಪೂರ್ಣಕುಂಭ ಕಳಸವನ್ನು ಇರಿಸಿ ವಿಶೇಷ ಪೂಜೆಯನ್ನು ನೇರವೇರಿಸಿದರು. ನಂತರ ದೇವಾಲಯದ ಟ್ರಸ್ಟಿ, ಸಮಿತಿ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ಪೂರ್ಣಕುಂಭ ಕಳಸವನ್ನು ಹೊತ್ತು ಕೊಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮದುರಮ್ಮ ಬಡಾವಣೆಯ ವೃಕ್ಷೋದ್ಭವ ದೇವಾಲಯದಿಂದ ನಾದಸ್ವರದೊಂದಿಗೆ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಇರಿಸಿ ಮುಖ್ಯ ಬೀದಿಗಳ ಮೂಲಕ ಮೆರವಣಿಗೆ ನಡೆಸಿ ರಾಮ ಮಂದಿರ, ಅಯ್ಯಪ್ಪ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ದೇವಾಲಯದಲ್ಲಿ ಕಳಸಗಳನಿಟ್ಟು ಪೂಜೆ ಸಲ್ಲಿಸಲಾಯಿತು. ಭಕ್ತರು ದೇವಾಲಯದ ಆವರಣದಲ್ಲಿ ಪೊಂಗಲ್ಮಾಡಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮಧ್ಯಾಹ್ನ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ…
ಮಡಿಕೇರಿ ಜ.15 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿಗಳಲ್ಲಿ ಒಂದಾದ ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ದತ್ತಿಯ ಆಶಯದಂತೆ ಕೊಡಗು ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಉತ್ತಮ ಪ್ರಬಂಧಕ್ಕೆ ಬಹುಮಾನ ನೀಡುವ ಸಲುವಾಗಿ ವಿದ್ಯಾರ್ಥಿಗಳಿಂದ ಪ್ರಬಂಧವನ್ನು ಸ್ಪರ್ಧೆಗಾಗಿ ಆಹ್ವಾನಿಸಲಾಗಿತ್ತು. ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ 35 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನ ತೃತೀಯ ಬಿ.ಸಿ.ಎ ವಿದ್ಯಾರ್ಥಿನಿ ಮನ ಕೆ.ಆರ್ ಪಡೆದಿರುತ್ತಾರೆ. ದ್ವಿತೀಯ ಸ್ಥಾನವನ್ನು ಕೊಟ್ಟಮುಡಿಯ ಮರ್ಕಸ್ ಹಿದಾಯತ್ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಫಹಿನಾ ಟಿ.ಎ ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಶ್ರೀಮಂಗಲ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಷಾ ಪಿ.ಆರ್ ಹಾಗೂ ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರೇಕ್ಷ ಜಿ.ಎಂ ಪಡೆದುಕೊಂಡಿದ್ದಾರೆ. ಇವರಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಭಿನಂದನೆ…
ಕುಶಾಲನಗರ ಜ.15 NEWS DESK : ಗೆಳೆಯರ ಬಳಗದ ವತಿಯಿಂದ ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರ ಜನ್ಮ ದಿನವನ್ನು ಕುಶಾಲನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ ಹಂಪಲು ವಿತರಿಸಿ ಆಚರಿಸಲಾಯಿತು. ಸರ್ಕಾರಿ ಆಸ್ಪತ್ರೆಯ 25ಕ್ಕೂ ಹೆಚ್ಚು ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಗೆಳೆಯರ ಬಳಗದ ಅಧ್ಯಕ್ಷರಾದ ಹಾಗೂ ಪುರಸಭೆ ಮಾಜಿ ಸದಸ್ಯರಾದ ವಿ.ಎಸ್.ಆನಂದ್ ಕುಮಾರ್, ಜನ್ಮದಿನವನ್ನು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಸಿ ಆಚರಿಸುತ್ತಿರುವುದು ಮೆಚ್ಚುಗೆಯ ವಿಷಯ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಗೆಳೆಯರ ಬಳಗದ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ ಎಂದರು. ಜೆಡಿಎಸ್ ಮುಖಂಡ ಎಚ್.ಟಿ.ವಸಂತ್ ಕುಮಾರ್ ಹಾಗೂ ಕೂರ್ಗ್ ಟಿವಿ 6 ವ್ಯವಸ್ಥಾಪಕ ನಿರ್ದೇಶಕರಾದ ಮೋಹನ್ ಮಾತನಾಡಿ, ರೋಗಿಗಳು ಆದಷ್ಟು ಬೇಗನೇ ಗುಣಮುಖರಾಗಬೇಕು ಎಂಬ ಉದ್ದೇಶದಿಂದ ರೋಗಿಗಳೊಂದಿಗೆ ಜನ್ಮ ದಿನವನ್ನು ಆಚರಿಸುತ್ತಿರುವ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರಿಗೆ ಅಭಿನಂದನೆಗಳು ಎಂದರು. ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ…
ಮಡಿಕೇರಿ ಜ.15 NEWS DESK : ಸೈಬರ್ ಅಪರಾಧಗಳ ಮೇಲೆ ನಿಗಾ ವಹಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಮಡಿಕೇರಿಯಲ್ಲಿರುವ ಸೈಬರ್ ಕ್ರೈಂ ಠಾಣೆಗೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದ ಅವರು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದರು. ಸೈಬರ್ ಅಪರಾಧಗಳ ತನಿಖೆಯ ಕುರಿತು ಸೂಕ್ತ ನಿರ್ದೇಶನ ನೀಡಿದರು.
ವಿರಾಜಪೇಟೆ ಜ.15 NEWS DESK : ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ದಾನಿಗಳು ನೀಡಿದ ಟ್ರ್ಯಾಕ್ ಸೂಟ್ ನ್ನು ವಿತರಿಸಲಾಯಿತು. ದಾನಿಗಳಾದ ಪರ್ವತಾರೋಹಿ ಜಮ್ಮಡ ಪ್ರೀತು ಅಪ್ಪಯ್ಯ, ವನ್ಯಜೀವಿ ಛಾಯಾಗ್ರಾಹಕರಾದ ಕುಜ್ನ್ಯ೦ಡ ಮಹೇಶ್, ಪ್ರಮೀಳಾ ಕೆ. ಎ.,ಹಾಗೂ ಪಟ್ಟಡ ರಕ್ಷಿತ್ ಚಂಗಪ್ಪ ಅವರು ವಿದ್ಯಾರ್ಥಿಗಳ ಟ್ರ್ಯಾಕ್ ಸೂಟ್ ಗೆ ಬೇಕಾದ ಧನ ಸಹಾಯವನ್ನು ನೀಡಿದ್ದರು. ಟ್ರ್ಯಾಕ್ ಸೂಟ್ ನ್ನು ದಾನಿಗಳಾದ ಕುಜ್ಞ್ಯoಡ ಮಹೇಶ್ ರವರು ಶಾಲಾ ಮಕ್ಕಳಿಗೆ ವಿತರಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ, ಸಹ ಶಿಕ್ಷಕಿ, ಸಿಬ್ಬಂದಿಗಳು, ಶಾಲೆಯ ಎಸ್ ಡಿ ಎಂ ಸಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಜ.15 NEWS DESK : ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಧಾರಾವಾಡ, ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಯುವನಿಧಿ ಯೋಜನೆಯಡಿಯಲ್ಲಿ, ಫಲಾನುಭವಿಗಳಿಗೆ ನಾಲ್ಕು ವಾರಗಳ ಕೌಶಲ್ಯಾದಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವ(ಹಾರ್ಡ್ವೇರ್ ಮತ್ತು ನೆಟ್ ವರ್ಕಿಂಗ್)ನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಫಲಾನುಭವಿಗಳಿಗೆ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಆಸಕ್ತ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಲು ಕೋರಿದೆ. ಭಾಗವಹಿಸುವವರು ಜನವರಿ, 20 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ, ದೂ.ಸಂ.7760145784,…






