ಕುಶಾಲನಗರ, ಮೇ 20 NEWS DESK : ಕುಶಾಲನಗರ ತಾಲೂಕಿನ ತೊರೆನೂರು ಗ್ರಾಮದಲ್ಲಿ ಮೇ 22 ರಂದು ಗ್ರಾಮ ದೇವತೆ ಶ್ರೀ ದೊಡ್ಡಮ್ಮ ಮತ್ತು ಚಿಕ್ಕಮ್ಮ ದೇವಿಯ ವಾರ್ಷಿಕ ಹಬ್ಬ ಹಾಗೂ ಜಾತ್ರೋತ್ಸವಕ್ಕೆ ಶ್ರೀ ಬಸವೇಶ್ವರ ದೇವಸ್ಥಾನ ಟ್ರಸ್ಟ್ ಹಾಗೂ ಗ್ರಾಮ ದೇವತಾ ಸಮಿತಿ ವತಿಯಿಂದ ಸಿದ್ಧತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಟಿ.ಬಿ.ಜಗದೀಶ್ ತಿಳಿಸಿದ್ದಾರೆ. ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಬಸವೇಶ್ವರ ದೇವಸ್ಥಾನ , ಮಠದ ಆವರಣದಲ್ಲಿನ ದೇವಿನ ಬನ ಸೇರಿದಂತೆ ಗ್ರಾಮವನ್ನು ಹಸಿರು ತಳಿರು- ತೋರಣ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲಾಗುವುದು. ಗ್ರಾಮದಲ್ಲಿ ಗ್ರಾಮಸ್ಥರು ಹೊರಗಿನಿಂದ ಬರುವ ನೆಂಟರಿಷ್ಟರು ಹಾಗೂ ಸ್ನೇಹಿತರಿಗೆ ವಿವಿಧ ಭಕ್ಷ್ಯ ಭೋಜನಗಳನ್ನು ನೀಡಿ ಆತಿಥ್ಯ ನೀಡುವುದು ಗ್ರಾಮೀಣ ಸೊಗಡಿನ ಪ್ರತೀಕವಾಗಿದೆ. ಕೊಡಗು ಹಾಗೂ ಹಾಸನ ಜಿಲ್ಲೆಯ ಗಡಿ ಗ್ರಾಮದ ತೊರೆನೂರು ಗ್ರಾಮದಲ್ಲಿ ನಡೆಯುವ ಗ್ರಾಮೀಣ ಭಾಗದ ದೇವಿಯ ಉತ್ಸವ ಹಾಗೂ ಜಾತ್ರೆಯಲ್ಲಿ ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಗಡಿ ಗ್ರಾಮಗಳ ಜನರು…
ಲೇಖಕ: admin
ಮಡಿಕೇರಿ ಮೇ 20 NEWS DESK : ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಇರಬೇಕು ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ವೇದಿಕೆಯಲ್ಲಿ ಬುಧವಾರ ನಡೆದ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನ. ಆದರೆ ವಾಸ್ತವ ಪರಿಸ್ಥಿತಿ ಹೇಗಿದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಹ ಸ್ಥಳೀಯ ಹಾಗೂ ನಾಡಿನ ಭಾಷೆಗಳು ಬಲಯುತವಾಗಿದೆ. ಆದರೆ ನಗರ, ಮಹಾನಗರ ಪ್ರದೇಶಗಳಲ್ಲಿ ಪರಿಸ್ಥಿತಿ ಯಾವ ರೀತಿ ಇದೆ ಎಂಬ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ಒತ್ತಿ ಹೇಳಿದರು. ಕನ್ನಡ ಭಾಷೆ ಬಗ್ಗೆ ತಾತ್ಸಾರ ಇರಬಾರದು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳ ಪರಿಸ್ಥಿತಿ…
ಮಡಿಕೇರಿ ಮೇ 20 NEWS DESK : ಆನ್ ಲೈನ್ ನಲ್ಲಿ ಔಷಧಿಗಳ ವ್ಯಾಪಾರಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸಿ ಔಷಧಿ ವ್ಯಾಪಾರಸ್ಥರ ಸಂಘ ಕರೆ ನೀಡಿದ್ದ ಔಷಧಿ ಮಳಿಗೆಗಳ ಬಂದ್ ಕೊಡಗಿನಲ್ಲಿ ಸಂಪೂಣ೯ ಯಶಸ್ವಿಯಾಗಿದೆ. ಕೊಡಗು ಜಿಲ್ಲೆಯಾದ್ಯಂತಲಿನ 200 ಕ್ಕೂ ಅಧಿಕ ಔಷಧಿ ಅಂಗಡಿಗಳು ಬುಧವಾರ ವ್ಯಾಪಾರ ಸ್ಥಗಿತಗೊಳಿಸಿದ್ದವು. ಬಂದ್ ಗೆ ಸಹಕಾರ ನೀಡಿದ ಗ್ರಾಹಕರಿಗೆ ಸಂಘದ ವತಿಯಿಂದ ಧನ್ಯವಾದ ಸಲ್ಲಿಸುವುದಾಗಿ ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಔಷದಿ ವ್ಯಾಪಾರಸ್ಥರ ಸಂಘದ ವತಿಯಿಂದ ಜಿಲ್ಲಾಡಳಿತ ಧ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹೆಚ್ ಹಾದಿಮನಿ ಸಂಘದಿಂದ ನೀಡಲಾದ ಮನವಿ ಪತ್ರವನ್ನು ಸ್ವೀಕರಿಸಿದರು. ಔಷಧಿ ವ್ಯಾಪಾರಸ್ಥರ ಸಂಘದ ಧ್ಯಕ್ಷ ಜೀವನ್ ಕುಶಾಲಪ್ಪ, ಜಂಟಿ ಕಾಯ೯ದಶಿ೯ ವಸಂತ್ ಕುಮಾರ್, ಉಪಾಧ್ಯಕ್ಷ ಎ.ಕೆ. ವಿನೋದ್ , ಖಜಾಂಜಿ ಪ್ರಸಾದ್ ಗೌಡ ಹಾಜರಿದ್ದರು. ಆನ್ಲೈನ್ನಲ್ಲಿ ಔಷಧಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸಕಾ೯ರ…
ಮಡಿಕೇರಿ NEWS DESK ಮೇ 20 : ಕೊಡಗು ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ, ಬಿಜೆಪಿಗೆ ಕಾರ್ಯಕರ್ತರ ನಾಯಕತ್ವವೇ ದೊಡ್ಡ ಶಕ್ತಿಯಾಗಿದೆ. ಬಿಜೆಪಿಗೆ ನಾಯಕತ್ವದ ಕೊರತೆ ಇರಬಹುದೆಂದು ಇತ್ತೀಚೆಗೆ ಮಡಿಕೇರಿ ಕ್ಷೇತ್ರದ ಶಾಸಕರು ನೀಡಿರುವ ಹೇಳಿಕೆ ಖಂಡನೀಯವೆoದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸದೃಢ ಹಿರಿಯ ಮುಖಂಡರ ನೇತೃತ್ವದಲ್ಲಿ ಬಿಜೆಪಿಯಲ್ಲಿರುವ ದೊಡ್ಡ ಸಂಖ್ಯೆಯ ಕಾರ್ಯಕರ್ತರೇ ನಾಯಕರಾಗಿದ್ದಾರೆ. ಆದರೆ ಕಾರ್ಯಕರ್ತರೇ ಇಲ್ಲದ ಕೊಡಗು ಕಾಂಗ್ರೆಸ್ ನಾಯಕತ್ವದ ಕೊರತೆಯನ್ನು ಎದುರಿಸುತ್ತಿದೆ. ಹೊರ ಜಿಲ್ಲೆಯಿಂದ ಬಂದು ಇಲ್ಲಿ ಶಾಸಕರಾಗಿರುವ ಮಡಿಕೇರಿ ಶಾಸಕರಿಗೆ ಇದು ಮರೆತು ಹೋಗಿದೆ. ಬಿಜೆಪಿ ಎಂದಿಗೂ ಆಮದು ನಾಯಕರನ್ನು ಶಾಸಕರನ್ನಾಗಿ ಮಾಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ನಾಯಕತ್ವದ ಬಗ್ಗೆ ಮಾತನಾಡಿ ಕಾಲಹರಣ ಮಾಡುವ ಬದಲು ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಶಾಸಕರು ಚಿಂತನೆ ಹರಿಸುವುದು ಸೂಕ್ತ. ಮಳೆಗಾಲ ಆರಂಭಗೊಳ್ಳಲು ಕೇವಲ ಎರಡು ವಾರಗಳಿರುವಾಗ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿರುವ ಶಾಸಕರ…
ಮಡಿಕೇರಿ NEWS DESK ಮೇ 20 : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ವತಿಯಿಂದ ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ ಮೇ 22 ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಶುಕ್ರವಾರ ಬೆಳಿಗ್ಗೆ ಶ್ರೀ ಕೋಟೆ ಮಹಾಗಣಪತಿ ದೇವರಿಗೆ ಅಭಿಷೇಕ, 12 ತೆಂಗಿನ ಕಾಯಿಯ ಗಣ ಹೋಮ, 10 ಸಹಸ್ರ ದುರ್ವಾಂಕುರ ಸಮರ್ಪಣೆ, ಒಂದು ಸಹಸ್ರ ಎಕ್ಕ ಸಮರ್ಪಣೆಯಾಗಲಿದೆ. ನಂತರ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಮನವಿ ಮಾಡಿದೆ. ಕಾರ್ಯಕ್ರಮಕ್ಕೆ ಅಕ್ಕಿ, ತರಕಾರಿ. ಎಣ್ಣೆ, ಹೂವು ಮತ್ತಿತರ ಸಾಮಾಗ್ರಿಗಳನ್ನು ನೀಡುವವರು 9986498466, 8050342562 ನ್ನು ಸಂಪರ್ಕಿಸಬಹುದು.
ಮಡಿಕೇರಿ ಮೇ.19 NEWS DESK : ಮುಂಗಾರು ಆರಂಭ ಹಿನ್ನೆಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಗ್ಯಾರಂಟಿ ಸಮಿತಿ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾನ್ಸೂನ್ ಪ್ರಾರಂಭವಾಗುತ್ತಿದು, ತಾಲ್ಲೂಕಿನ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲು ಪೊನ್ನಂಪೇಟೆ ಹಾಗೂ ವಿರಾಜಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾಯಿತು. ಮಳೆಗಾಲ ಸಂದರ್ಭದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಿದೆ, ಆ ದಿಸೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಪ್ರಶಾಂತ್ ಅವರು ಸಲಹೆ ಮಾಡಿದರು. ಸೆಸ್ಕ್ ಇಲಾಖೆಯವರು ಮುಂಜಾಗ್ರತಾ ಕ್ರಮ ವಹಿಸಿ, ಹೆಚ್ಚಾಗಿ ಮಳೆ ಬೀಳುವ ಗ್ರಾ.ಪಂ.ಗಳಲ್ಲಿ ಸೆಸ್ಕ್ ಇಲಾಖೆಯಿಂದ ಜಂಗಲ್ ಕಟ್ಟಿಂಗ್ ಮಾಡಿಸಿಕೊಳ್ಳಿ ಹಾಗೂ ಅಂಗನವಾಡಿ ಮತ್ತು ಶಾಲೆಗಳ ಸುತ್ತಾ-ಮುತ್ತಾ ಇರುವಂತಹ ಅಪಾಯಕಾರಿ ಮರಗಳನ್ನು ತೆರೆವುಗೊಳಿಸಿ ಯಾವುದೇ ಮಕ್ಕಳಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮವಹಿಸಿ ಎಂದು ವಿರಾಜಪೇಟೆ…
ತುಮಕೂರು ಮೇ 19 NEWS DESK : ದುಬಾರೆ ಆನೆ ಶಿಬಿರದಲ್ಲಿ ದಸರಾ ಆನೆ ಕಂಜನ್ ಮತ್ತು ಮಕನಾ ಆನೆ ಮಾರ್ತಾಂಡ ನಡುವೆ ನಡೆದ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅನಿರೀಕ್ಷಿತವಾದ ಮತ್ತು ಊಹಿಸಲೂ ಆಗದ ದುರ್ಘಟನೆಯಲ್ಲಿ ಒಬ್ಬ ಪ್ರವಾಸಿ ಮಹಿಳೆ ಮತ್ತು ಒಂದು ಆನೆ ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ ಎಂದು ತಿಳಿಸಿರುವ ಅವರು ಸಂತಾಪ ಸೂಚಿಸಿದ್ದಾರೆ. ಹಾಸನ ಜಿಲ್ಲೆ ಆಲೂರಿನಲ್ಲಿ 2023 ರಲ್ಲಿ ಸೆರೆ ಹಿಡಿಯಲಾಗಿದ್ದ 53 ವರ್ಷದ ಮಾರ್ತಾಂಡ 4500 ಕೆ.ಜಿ. ತೂಕವಿತ್ತು. ಹಾಸನ ಜಿಲ್ಲೆ ಯಸಳೂರಿನ ಬಳಿ 2014ರಲ್ಲಿ ಸೆರೆ ಹಿಡಿಯಲಾಗಿದ್ದ 26 ವರ್ಷದ ಕಂಜನ್ 3 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದ್ದ. ಇನ್ನು ಮುಂದೆ ದಸರಾ ಮಹೋತ್ಸವಕ್ಕೆ ಈ ಆನೆಯನ್ನು ಬಳಸದಂತೆ ಸೂಚಿಸಿರುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರು ಮೇ 19 NEWS DESK : ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದುಬಾರೆ ಶಿಬಿರದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಸೂಚನೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.”ಈ ಘಟನೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದೇನೆ. ಘಟನೆಗೆ ನಿಖರ ಕಾರಣಗಳೇನು ಮತ್ತು ಪ್ರವಾಸಿ ಮಾರ್ಗಸೂಚಿ ನಿರ್ವಹಣೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ,” ಎಂದು ಸಚಿವರು ತಿಳಿಸಿದ್ದಾರೆ. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಆನೆ ಶಿಬಿರಗಳಲ್ಲಿ ಕಟ್ಟುನಿಟ್ಟಾಗಿ ಪ್ರವಾಸಿಗರ…
ಸೋಮವಾರಪೇಟೆ ಮೇ 19 NEWS DESK : ಪಟ್ಟಣದ ಸ್ವಚ್ಛತೆಗೆ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಅವರು ಹೇಳಿದರು. ಎಂ.ಜಿ. ರಸ್ತೆಯ ಯೂನಿಯನ್ ಬ್ಯಾಂಕ್ಗೆ ಸೇರಿದ ಜಾಗದಲ್ಲಿ ಸಂಗ್ರಹವಾಗಿರುವ ತ್ಯಾಜ್ಯ ವಿಲೇವಾರಿಗೆ ಕ್ರಮ ತೆಗೆದುಕೊಂಡು ನಂತರ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರೊಂದಿಗೆ ಕಸವಿಲೇವಾರಿಯ ಬಗ್ಗೆ ಕೆಲವು ಸಲಹೆಗಳನ್ನು ನೀಡಿದರು. ಪಟ್ಟಣದ ಸ್ವಚ್ಚತೆಗೆ ಸಾರ್ವಜನಿಕರು ಕೈಜೋಡಿಸಬೇಕು. ರಸ್ತೆ ಬದಿಯಲ್ಲಿ ಕಸವನ್ನು ಎಸೆದರೆ, ಇಡೀ ಪರಿಸರ ಗಬ್ಬೆದ್ದು ನಾರುತ್ತದೆ. ಸಾಂಕ್ರಾಮಿಕ ರೋಗಗಳು ಹರಡಿ ದೊಡ್ಡ ಮಟ್ಟದ ಸಮಸ್ಯೆಯಾಗುತ್ತದೆ. ಈ ರಸ್ತೆಯಲ್ಲಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ತೆರಳುತ್ತಾರೆ. ಅವರ ಕಷ್ಟವನ್ನು ನಾವೆಲ್ಲರೂ ಕೇಳಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಯೂನಿಯನ್ ಬ್ಯಾಂಕ್ನವರು ತಮ್ಮ ಜಾಗದ ಸುತ್ತ ಬೇಲಿ ಹಾಕಿಸಿಕೊಂಡು ಭದ್ರಪಡಿಸಿಕೊಳ್ಳಬೇಕು. ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು ಎಂದು ಬ್ಯಾಂಕ್ ಅಧಿಕಾರಿಗೆ ಸೂಚಿಸಿದರು. ರಸ್ತೆ ಬದಿಯಲ್ಲಿ ಕಸ ಸಂಗ್ರಹವಾಗುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರ ಅಳವಡಿಸಿ ನಿರ್ವಹಣೆ ಮಾಡಬೇಕು. ಅನಾಗರಿಕರಂತೆ ರಸ್ತೆ ಬದಿಯಲ್ಲಿ ಕಸ ಎಸೆಯುವವರು ಸಿಕ್ಕಿಬಿದ್ದರೆ, ಕಾನೂನು ಕ್ರಮ…
ಸೋಮವಾರಪೇಟೆ ಮೇ 19 NEWS DESK : ಜಿಲ್ಲಾ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುವ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿಗೆ ತಾಲ್ಲೂಕಿನ ಬೆಂಕಳ್ಳಿ-ಕೊತ್ನಳ್ಳಿ ಗ್ರಾಮದ ವಿದ್ಯಾರ್ಥಿನಿ ಸಿ.ಎಸ್.ಆದ್ವಿ ಭಾಜನರಾಗಿದ್ದಾರೆ. 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 623 ಅಂಕಗಳನ್ನು ಪಡೆದು ಜಿಲ್ಲೆಯ ಟಾಪರ್ ಅಗಿದ್ದರು. ಶೇ. 99.68 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 4ನೇ ಸ್ಥಾನ ಗಳಿಸಿದ್ದರು. ಸೋಮವಾರಪೇಟೆ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾಗಿದ್ದರು. ಬೆಂಕಳ್ಳಿ ಗ್ರಾಮದ ರೈತರಾದ ಸಿ.ಎಸ್.ಪ್ರಗತಿ, ಸಿ.ಟಿ.ಸತೀಶ್ ಅವರ ಪುತ್ರಿಯಾಗಿರುವ ಆದ್ವಿ, ತಮ್ಮೂರಿಗೆ ಸರ್ಕಾರಿ ಬಸ್ ಸೌಲಭ್ಯವಿಲ್ಲದ ಹಿನ್ನೆಲೆಯಲ್ಲಿ ಸರ್ಕಾರದ ಬಾಲಕಿಯರ ಹಾಸ್ಟೇಲ್ನಲ್ಲಿ ವಾಸವಿದ್ದು, ಪರೀಕ್ಷೆಗೆ ತಯಾರಿ ನಡೆಸಿ ಯಶ ಕಂಡಿದ್ದರು.






