ಮಡಿಕೇರಿ ಮಾ.4 NEWS DESK : ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಕಾರದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ‘ಜನಜಾಗೃತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನರು ಮದ್ಯ ಹಾಗೂ ಮಾದಕ ವಸ್ತುಗಳ ದುಶ್ಚಟದಿಂದ ದೂರ ಇರಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂದು ತಿಳಿಸಿದರು. ಮದ್ಯ ಹಾಗೂ ಮಾದಕ ವಸ್ತುಗಳಿಗೆ ತುತ್ತಾದಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳಬೇಕಾಗುತ್ತದೆ. ಇದರಿಂದ ಕುಟುಂಬದ ನಿರ್ವಹಣೆ ಕಷ್ಟವಾಗಲಿದೆ. ಜೊತೆಗೆ ಸಮಾಜದಲ್ಲಿ ಉತ್ತಮ ಬದುಕು…
ಲೇಖಕ: admin
ಮಡಿಕೇರಿ ಮಾ.3 NEWS DESK : ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ನಗರದ ಕ್ರಿಯೇಟಿವ್ ಸಂಸ್ಥೆಯ ಮಾಲೀಕ ಖಲೀಲ್ ಮಾತನಾಡಿ, ಶಿಕ್ಷಣ ಎಂಬುದು ಮಾನವನ ಜೀವನದಲ್ಲಿ ಯಾರೂ ಕದಿಯಲಾಗದ ಸಂಪತ್ತು. ಶಿಕ್ಷಣ ಮಾನವನ ಸರ್ವಾಂಗಿನ ಅಭಿವೃದ್ಧಿಗೆ ಪೂರಕವಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಭಯ ಆತಂಕ ಪಡದೆ ಗುರುಗಳು ಮಾಡಿರುವ ಪಾಠ ಪ್ರವಚನಗಳನ್ನು ನೆನಪಿಟ್ಟುಕೊಂಡು ಉತ್ತಮವಾಗಿ ಪರೀಕ್ಷೆಯನ್ನು ಹಬ್ಬದಂತೆ ಸಂತೋಷದಿಂದ ಬರೆಯ ಬೇಕು ಎಂದರು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನುಗಳಿಸುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ನೀಡಿ ಶುಭ ಕೋರಿದರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಉದೇರಿ ರಾಜೇಂದ್ರ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗ ನೀಡಿರುವ ಶಿಕ್ಷಣವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ರೂಪಿಸಿಕೊಳ್ಳಬೇಕು ಕರೆ ನೀಡಿದರು. ಕಾಲೇಜು ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ…
ಸೋಮವಾರಪೇಟೆ ಮಾ.3 NEWS DESK : ಆರೋಗ್ಯವಂತರು ಪ್ರತಿ 3 ತಿಂಗಳಿಗೊಮ್ಮೆ ಸ್ವಯಂಪ್ರೇರಿತ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವವನ್ನು ಉಳಿಸಬಹುದಾಗಿದೆ ಎಂದು ಮಡಿಕೇರಿ ರಕ್ತನಿಧಿ ಕೇಂದ್ರ ವೈದ್ಯೆ ಸ್ನೇಹಾ ಹೇಳಿದರು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಮತ್ತು ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ದೊಡ್ಡಮಳ್ತೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ದಾನಿಗಳ ಆರೋಗ್ಯ ತಪಾಸಣೆ ಮಾಡಿ ನಂತರ ಮಾತನಾಡಿದರು. ಆಗಗ್ಗೆ ರಕ್ತದಾನ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಹೃದಯ ಕಾಯಿಲೆಗಳು ಮತ್ತು ಪಾಶ್ರ್ವವಾಯು ಅಪಾಯ ಕಡಿಮೆಯಾಗುತ್ತದೆ. ರಕ್ತದಾನದಿಂದ ರಕ್ತದ ದಪ್ಪ ಕಡಿಮೆಯಾಗಿ ರಕ್ತಪರಿಚಲನೆ ಹೆಚ್ಚಾಗುತ್ತದೆ. ಹೊಸ ರಕ್ತ ಉತ್ಪತ್ತಿಯಾಗುತ್ತದೆ ಎಂದು ಹೇಳಿದರು. ರಕ್ತದಾನದ ಸಂದರ್ಭ ಆರೋಗ್ಯ ತಪಾಸಣೆ ಆಗುತ್ತದೆ. ರಕ್ತದಾನಿಗಳಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳಿದ್ದರೆ, ರಕ್ತನಿಧಿ ಕೇಂದ್ರದಿಂದ ರೋಗದ ಮಾಹಿತಿ ಸಿಗುತ್ತದೆ. ನಂತರ ಚಿಕಿತ್ಸೆ ಪಡೆದುಕೊಂಡು ಅಪಾಯದಿಂದ ಪಾರಾಗಬಹುದು ಎಂದು ಹೇಳಿದರು. ರಕ್ತದಾನದಿಂದ ಅನೇಕ ಪ್ರಯೋಜನಗಳಿದ್ದು, ಕಾರ್ಯಕ್ರಮದಲ್ಲಿ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ, ಉಪಾಧ್ಯಕ್ಷೆ…
ಸೋಮವಾರಪೇಟೆ ಮಾ.3 NEWS DESK : ಕೃಷಿ ಕಾರ್ಮಿಕರು, ಪರಿಶಿಷ್ಟಜಾತಿ, ಪಂಗಡದ ನಿವೇಶನ ರಹಿತ ಬಡವರಿಗೆ ಸರ್ಕಾರ ಉಚಿತ ನಿವೇಶನ ನೀಡುವಂತೆ ಆಗ್ರಹಿಸಿ ಯುನೈಟೈಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ನ ಜಿಲ್ಲಾ ಸಮಿತಿ ಹರದೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿತು. ಯೂನಿಯನ್ನ ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ ಅವರ ನೇತೃತ್ವದಲ್ಲಿ ಹರದೂರು ಬಾಣೆಯಿಂದ ಪಂಚಾಯಿತಿ ವರೆಗೆ ಮೆರವಣಿಗೆ ನಡೆಸಿ, ಹರದೂರು ಗ್ರಾಮ ಪಂಚಾಯಿತಿ ಮುಂಭಾಗ ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ನಿವೇಶನ ರಹಿತರು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ, ಕೊಡಗು ಜಿಲ್ಲೆಯಲ್ಲಿ ಪೈಸಾರಿ ಸೇರಿದಂತೆ ಇನ್ನಿತರ ಸರ್ಕಾರಿ ಭೂಮಿ ಬೇಕಾದಷ್ಟಿದೆ. ಕಳೆದ ಎರಡೂವರೆ ದಶಕಗಳಿಂದ ಮನೆಯಿಲ್ಲದ ಕಾರ್ಮಿಕರಿಗೆ ನಿವೇಶನ ನೀಡುವಂತೆ ನಿರಂತರ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಪೈಸಾರಿ ಜಾಗವನ್ನು ಬಲಾಡ್ಯರು ಕಬಳಿಸಿದ್ದಾರೆ. ಕೂಲಿ ಕಾರ್ಮಿಕರು ಅವರ ಮಕ್ಕಳು ಇವತ್ತಿಗೂ ಮುರುಕಲು ಗುಡಿಸಲಿನಲ್ಲಿ ಬದುಕುತ್ತಿದ್ದಾರೆ. ಲೈನ್ ಮನೆಯಲ್ಲೂ ಪ್ರಾಣಿಗಳಂತೆ ವಾಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಕಳೆದ 25 ವರ್ಷಗಳಿಂದ ಕಾರ್ಮಿಕರಿಗೆ ನಿವೇಶನ…
ಮಡಿಕೇರಿ ಮಾ.3 NEWS DESK : ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಎಎಸ್ಐ ಟಿ.ಎನ್.ದಯಾನಂದ, ಬಸವರಾಜ ಶೆಟ್ಟಿ ಮತ್ತು ಡಿಎಆರ್ನ ಎಆರ್ಎಸ್ಐ ಬಿ.ಸಿ.ಸೋಮಯ್ಯ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.
ಮಡಿಕೇರಿ ಮಾ.3 NEWS DESK : ಇತಿಹಾಸ ಪ್ರಸಿದ್ಧ ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿಯ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವವು ಮಾ.8 ರಿಂದ 19ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಹನ್ನೆರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.8 ರಂದು ಬೆಳಿಗ್ಗೆ 6 ಗಂಟೆಗೆ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ, ಊರಿನವರು ಮತ್ತು ಊರಿನ ಮಹಿಳೆಯರಿಂದ 12 ತಳಿಯತಕ್ಕಿ, ಬೊಳ್ಚ್ಚ, ದುಡಿಕೊಟ್ಟ್ ಪಾಟ್ನೊಂದಿಗೆ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಬೆಳಿಗ್ಗೆ 6.30 ಗಂಟೆಯಿಂದ ಊರಿನ ಪರವಾಗಿ ಶತರುದ್ರಾಭಿಷೇಕ, ಪ್ರಸಾದ ವಿತರಣೆ ನಡೆಯದ್ದು, ರಾತ್ರಿ 8 ಗಂಟೆಗೆ ಆರಿದ್ರ ನಕ್ಷತ್ರದ ಮೂಹೂರ್ತದಲ್ಲಿ “ಕೊಡಿಮರ” ನಿಲ್ಲಿಸುವುದು, ಶುದ್ಧ ಕಲಶ, ಉತ್ಸವ ಮೂರ್ತಿ ದರ್ಶನ, ಪ್ರಸಾದ ವಿತರಣೆ ಹಾಗೂ ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ಜರುಗಲಿದೆ. ಮಾ.9 ರಂದು ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ, ಸಂಜೆ 7 ಗಂಟೆಗೆ ತೂಚಂಬಲಿ ನಡೆಯಲಿದೆ. ಮಾ.10 ರಂದು ಪ್ರಾತಃಕಾಲ 5 ಗಂಟೆಗೆ ಉತ್ಸವ ಮೂರ್ತಿದರ್ಶನ, ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ,…
ಮಡಿಕೇರಿ ಮಾ.3 NEWS DESK : ಕೊಡಗು ವಿವಿ ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಗುಡ್ಡೆಹೊಸೂರು ಗ್ರಾ.ಪಂ ಆಡಳಿತ ಮಂಡಳಿ ಖಂಡಿಸಿತು. ಕೊಡಗು ವಿವಿ ಬಡ ವಿದ್ಯಾರ್ಥಿಗಳ ಪಾಲಿನ ಜ್ಞಾನದೇಗುಲವಾಗಿದ್ದು, ಯಾವ ಕಾರಣಕ್ಕೂ ಸರ್ಕಾರ ಮುಚ್ಚಲು ಮುಂದಾಗಬಾರದು. ಕೊಡಗು ವಿವಿ ಯಿಂದ ಜಿಲ್ಲೆಯ ಬಡ ಮಕ್ಕಳು ಮೈಸೂರು, ಮಂಗಳೂರು ವಿವಿ ಗಳಿಗೆ ತೆರಳುವ ಪ್ರಯಾಸದ ಪ್ರಯಾಣ ತಪ್ಪಿದೆ. ಊರ ಬಾಗಿಲಲ್ಲಿ ವಿವಿ ಇರುವಾಗ ಅಪಾರ ಮಂದಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಎಂದು ಸ್ನಾತಕೋತ್ತರ ಪದವೀಧರೆ ಹಾಗೂ ಗ್ರಾಪಂ ಸದಸ್ಯೆ ವೈ.ಬಿ.ಉಮಾ ಸಭೆಯಲ್ಲಿ ಪ್ರಸ್ತಾಪಿಸಿದಾಗ ಸದಸ್ಯರಾದ ಶಿವಪ್ಪ, ಸೌಮ್ಯ, ನಾರಾಯಣ, ಪ್ರದೀಪ್, ಚಿದಾನಂದ, ಸೇರಿದಂತೆ ಇಡೀ ಆಡಳಿತ ಮಂಡಳಿ ಮೇಜು ತಟ್ಟಿ ಸರ್ಕಾರದ ಕ್ರಮವನ್ನು ಖಂಡಿಸಿದರು. ಸಭಾಧ್ಯಕ್ಷ ಪ್ರವೀಣ್ ಕುಮಾರ್ ಈ ಬಗ್ಗೆ ಸರ್ಕಾರಕ್ಕೆ ನಿಯೋಗ ತೆರಳಲು ಸಿದ್ಧ ಎಂದರು.
ಮಡಿಕೇರಿ ಮಾ.3 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡಗು ಜಿಲ್ಲಾ ಕಾರಾಗೃಹದ ಸಂದರ್ಶಕರ ಸಮಿತಿಯ ನಾಮ ನಿರ್ದೇಶಿತ ಸದಸ್ಯರನ್ನಾಗಿ ಹನೀಫ್ ಕೊರ್ತಿ, ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಕೆ.ಆರ್ ಹಾಗೂ ವಿಮಲ ಹೆಚ್.ಬಿ ಅವರನ್ನು ಆಯ್ಕೆ ಮಾಡಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆದೇಶಿಸಿದ್ದಾರೆ. ಹಿರಿಯ ಕಾಂಗ್ರೆಸ್ಸಿಗ ಹನೀಫ್ ಕೊರ್ತಿ ಅವರು 5ನೇ ಬಾರಿಗೆ ನಾಮ ನಿರ್ದೇಶಿತ ಸದಸ್ಯರಾಗಿದ್ದಾರೆ.
ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ಪ್ರಪ್ರಥಮ ಹಾಗೂ ಪ್ರತಿಷ್ಠಿತ ದತ್ತಿ “ದಿ.ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ” ಯು ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು ರಚಿಸಿದ “ಶ್ರೀ ಕಾವೇರಿ ದರ್ಶನಂ – ಸಮಗ್ರ ಕಾವೇರಿ ಚರಿತೆ” ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕ ಬಿ.ಎಸ್.ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ ಕೃತಿಗಳನ್ನು ಆಹ್ವಾನಿಸಿದಾಗ ಹತ್ತು ಸಾಹಿತಿಗಳು ತಮ್ಮ ಕೃತಿಗಳನ್ನು ಪ್ರಸ್ತುತಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳು ಪ್ರತ್ಯೇಕವಾಗಿ ಈ ಪುಸ್ತಕಗಳನ್ನು ಪರಿಶೀಲಿಸಿ ನೀಡಿದ ಅಂಕಗಳನ್ನು ಜಿಲ್ಲಾ ಸಮಿತಿ ಒಟ್ಟುಗೂಡಿಸಿ ಹತ್ತು ಜನ ಲೇಖಕರಲ್ಲಿ ಅತಿ ಹೆಚ್ಚು ಅಂಕ ಪಡೆದ “ಶ್ರೀ ಕಾವೇರಿ ದರ್ಶನಂ -ಸಮಗ್ರ ಕಾವೇರಿ ಚರಿತೆ” ಕೃತಿಯ ಲೇಖಕ ನಾಗೇಶ್ ಕಾಲೂರು ಪಡೆದುಕೊಂಡಿದ್ದಾರೆ. ಮುಂದೆ ನಡೆಯುವ…
ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೂರ್ನಾಡು ಪಿ.ಎಂ.ಶ್ರೀ ಪ್ರಾಥಮಿಕ ಶಾಲೆ ಸಂಯುಕ್ತಾಶ್ರಯದಲ್ಲಿ 2024 -25 ನೇ ಸಾಲಿನ 22ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಸಣ್ಣಕತೆಗಳ ಗೌರಮ್ಮ ದತ್ತಿ ನಿಧಿ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವು ಮಾ.7 ರಂದು ಮೂರ್ನಾಡುವಿನಲ್ಲಿ ನಡೆಯಲಿದೆ. ಮೂರ್ನಾಡಿನ ಪಿ.ಎಂ.ಶ್ರೀ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಸ್.ಕುಶನ್ ರೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಈ ಬಾರಿಯ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ವಿಜೇತರಾದ ಕೂಡಕಂಡಿ ಓಂ ಶ್ರೀ ದಯಾನಂದರವರಿಗೆ ಮೈಸೂರಿನ ಯುವರಾಜ ಕಾಲೇಜಿನ ಸಾಹಿತಿಗಳಾದ ಎಚ್.ನಿವೇದಿತಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್…






