ಮೈಸೂರು, ಮಾ.3 NEWS DESK : ಪ್ರಸಕ್ತ ತಿಂಗಳಿನಲ್ಲಿ ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಸ್ ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್, ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳಿಗೆ ಪೂರಕವಾಗಿ ಸೇವೆಯನ್ನು ಕಲ್ಪಿಸಬೇಕಾಗಿದೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆಯ ಬಸ್ಗಳ ಮೇಲೆ ಹೆಚ್ಚು ಅವಲಂಬಿತವಾಗಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಸೇವೆ ನೀಡಬೇಕಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಪರೀಕ್ಷೆ ಸಮಯದಲ್ಲಿ ಬಸ್ಗಳು ಸರಿಯಾದ ಸಮಯಕ್ಕೆ ನಿಲ್ದಾಣಕ್ಕೆ ಬರುತ್ತಿಲ್ಲ. ಒಂದು ವೇಳೆ ಬಂದರೂ ನಿಲ್ದಾಣದಲ್ಲಿ ನಿಲ್ಲಿಸದೇ ತೆರಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕೆಲವು ವಿದ್ಯಾರ್ಥಿಗಳು ನನಗೂ ದೂರು…
ಲೇಖಕ: admin
ಶನಿವಾರಸಂತೆ ಮಾ.3 NEWS DESK : ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣನವರು ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಶರಣ ಸಾಹಿತ್ಯದ ತಿರುಳನ್ನು ಪ್ರಸ್ತುತ ಸಮಾಜಕ್ಕೆ ಅಳವಡಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶನಿವಾರಸಂತೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಪ್ರಜ ಗುರುಕುಲದ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯ ಸುನಂದಾದೇವಿ-ಸಂಗಮೇಶ್ವರ ಗೌಡ ದಂಪತಿಯ ಪ್ರಾಯೋಜಕತ್ವದಲ್ಲಿ ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂಗೈಕ ಮಾಗನೂರು ಬಸಪ್ಪ ದತ್ತಿ ಶರಣ ಸಂಸ್ಕೃತಿ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ.ಶರಣ ಎಂದರೆ ಸಜ್ಜನ, ಸದ್ಭಕ್ತಿ, ಅನುಭಾವಿ ಎಂಬ ವ್ಯಕ್ತಿತ್ವ.ದತ್ತಿನಿದಿಯ ಶರಣ ಮಾಗನೂರು ಬಸಪ್ಪನವರು ಹುಟ್ಟಿನಿಂದ ದೊಡ್ಡವರಾಗಿ ಹುಟ್ಟಿದವರಲ್ಲ; ಹುಟ್ಟಿ ದೊಡ್ಡವರಾಗಿ ಬದುಕಿ, ಬಾಳಿ ಶಿಸ್ತನ್ನು ರೂಢಿಸಿಕೊಂವರು.ಶಿಕ್ಷಣ, ಸಂಸ್ಕೃತಿ, ದಾಸೋಹದಂತಹ ಸಮಾಜಮುಖಿ ಕೆಲಸ ಮಾಡಿದವರು. ಕೊಡಗಿನಲ್ಲಿ ಶರಣ ಸಾಹಿತ್ಯಕ್ಕೆ…
ಚೆಟ್ಟಳ್ಳಿ NEWS DESK ಮಾ.2 : ಚೆಟ್ಟಳ್ಳಿಯ ಚೇರಳ ಶ್ರೀಭಗವತಿ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ‘ಪಟ್ಟಣಿ ಹಬ್ಬ’ ದಂದು ಕಲ್ಡಚ ಹೋಗುವ ಸಂಪ್ರದಾಯದಂತೆ ಹೆಣ್ಣು ಮಕ್ಕಳು ದೇವಾಲಯದಿಂದ ಕಳಶದೊಂದಿಗೆ ತೆರಳಿ ಚೌಂಡಿ ಬನದಲ್ಲಿ ಪೂಜೆ ಮಾಡಿದರು. ಒಡ್ಡೋಲಗ ದುಡಿಕೊಟ್ಟ್ ನೊಂದಿಗೆ ದೇವತಕ್ಕರ ಮನೆಯಿಂದ ದೇವರ ಭಂಡಾರವನ್ನು ದೇವಾಲಯಕ್ಕೆ ತಂದು ಮಾಹಾಪೂಜೆ, ಕೊಂಬಾಟ್ ಸೇವೆ ಸಲ್ಲಿಸಲಾಯಿತು. ನಂತರ ದೇವರ ಭಂಡಾರವನ್ನು ದೇವತಕ್ಕರ ಮನೆಯಲ್ಲಿ ಇಡಲಾಯಿತು. ಮಾರನೇ ದಿನ ಊರಿನವರು ಅಯ್ಯಪ್ಪ ದೇವರಬನಕ್ಕೆ ತೆರಳಿ ದೇವರಿಗೆ ಬಲಿಪೂಜೆ ಮಾಡಿ ದೇವರ ಪ್ರಸಾದವನ್ನು ಸ್ವೀಕರಿಸಿದರು. ದೇವಾಲಯಕ್ಕೆ ಬಂದ ಭಕ್ತರು ತೆಂಗಿನಕಾಯಿಗೆ ಗುಂಡುಹೊಡೆಯುವ ಮೂಲಕ ದೇವರಕಟ್ಟು ಮುರಿಯಲಾಯಿತು. ಭಾನುವಾರ ಚೇರಳ ಶ್ರೀಭಗವತಿ ದೇವರ ದೊಡ್ಡಹಬ್ಬ ನಡೆಯಿತು. ಬಿಳಿಕುಪ್ಪಸ ದಟ್ಟಿಯನ್ನು ತೊಟ್ಟ ಊರಿನ ಕೊಡವ ಮತ್ತು ಗೌಡ ಜನಾಂಗದವರು ಕೊಂಗೇಟಿರ ಐನ್ ಮನೆಯಿಂದ ಊರುತಕ್ಕರಾದ ಕೊಂಗೇಟಿರ ಹರೀಶ್ ಅಪ್ಪಣ್ಣ ಹಾಗೂ ಕೊಂಗೇಟಿರ ಕುಟುಂಬಸ್ಥರನ್ನು ಒಡ್ಡೋಲಗ ದುಡಿಕೊಟ್ಟ್ನೊಂದಿಗೆ ದೇವಾಲಯಕ್ಕೆ ಕರೆ ತಂದರು. ನಂತರ ದೇವತಕ್ಕ ಚೇರಳ ತಮ್ಮಂಡ…
ಕುಶಾಲನಗರ NEWS DESK ಮಾ.2 : ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ ಎಂದು ಕರ್ನಾಟಕ ಸರಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅಂಗಸಂಸ್ಥೆಗಳ ಹಾಗೂ ವಿವಿಧ ಗೌಡ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವ -2025 ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ತಾಯಿನುಡಿಗಳನ್ನು ಬಳಕೆ ಮಾಡುವ ಮೂಲಕ ಉಳಿಸುವುದರೊಂದಿಗೆ ಅಕಾಡೆಮಿ ಮೂಲಕ ಭಾಷೆಯ ಅಭಿವೃದ್ಧಿಗೆ ಕಾರ್ಯಸೂಚಿ ನೀಡುವ ಕೆಲಸವಾಗಬೇಕಾಗಿದೆ ಎಂದರು. ಪ್ರಸಕ್ತ ಭಾಷೆ ಸಂಸ್ಕೃತಿ ದಿಕ್ಕಾಪಾಲಾಗಿ ಹೋಗುತ್ತಿದ್ದು, ಜನಗಣತಿ ಮೂಲಕ ತಮ್ಮ ಸಮುದಾಯದ ಜನಸಂಖ್ಯೆ ಮಾಹಿತಿಯನ್ನು ಸರಕಾರಕ್ಕೆ ಲಭಿಸುವಂತೆ ಮಾಡುವುದು, ಮುಖ್ಯ ಭಾಷೆ -ಉಪಭಾಷೆಗಳ ನಡುವೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸುವುದು ಈ ಮೂಲಕ ಭಾಷೆಗಳ ಬೆಳವಣಿಗೆ ಸಾಧ್ಯ ಎಂದ ಅವರು ಅಧಿಕಾರದ ಮೂಲಕ ಭಾಷೆಗಳನ್ನು ನಿರ್ಧಾರ ಮಾಡುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು. ಚರಿತ್ರೆಗಳು…
ಪೊನ್ನಂಪೇಟೆ NEWS DESK ಮಾ.2 : ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕ ಇವರ ವತಿಯಿಂದ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳ ಶೈಕ್ಷಣಿಕ ಉತ್ತೇಜನಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ’ ರಾಜ್ಯಮಟ್ಟದ ಸಮಾಜ ಸೇವಾ ಪ್ರಶಸ್ತಿ ಪುರಸ್ಕೃತರಾದ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಕೆದಮುಳ್ಳೂರು ಗ್ರಾ. ಪಂ. ಸದಸ್ಯರಾದ ಮೀತಲತಂಡ ಎಂ. ಇಸ್ಮಾಯಿಲ್ ಅವರನ್ನು ಕೆದಮುಳ್ಳೂರು ಗ್ರಾ.ಪಂ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕೆದಮುಳ್ಳೂರು ಗ್ರಾ. ಪಂ. ಅಧ್ಯಕ್ಷರಾದ ಮಾಳೇಟಿರ ಜಫ್ರಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಸಾಧನೆಗಾಗಿ ಇಸ್ಮಾಯಿಲ್ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಅಲ್ಲದೆ ತಾಲೂಕು ಮಟ್ಟದ ಅತ್ಯುತ್ತಮ ಕಂಪ್ಯೂಟರ್ ಆಪರೇಟರ್ ಎಂಬ ವಿಶೇಷ ಪುರಸ್ಕಾರಕ್ಕೆ ಭಾಜನರಾದ ಕೆದಮುಳ್ಳೂರು ಗ್ರಾ.ಪಂ. ಯ ಡಾಟಾ ಎಂಟ್ರಿ ಆಪರೇಟರ್ ಬಿ.ಜಿ.ಕಾವ್ಯ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಳೇಟಿರ ಜಫ್ರಿ ಉತ್ತಪ್ಪ, ಸತತವಾಗಿ 3ನೇ ಬಾರಿಗೆ…
ಮಡಿಕೇರಿ NEWS DESK ಮಾ.2 : ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರೊಂದಿಗೆ ಇತರರ ಪ್ರೋತ್ಸಾಹ ಕೂಡ ಅತ್ಯಗತ್ಯ. ಕ್ರೀಡಾಕ್ಷೇತ್ರದಲ್ಲಿಯೂ ವಿನೂತನ ಪ್ರಯತ್ನಗಳು ಆದಾಗ ಮತ್ತಷ್ಟು ಕ್ರೀಡಾಪಟುಗಳು ಬೆಳಕಿಗೆ ಬರಲು ಸಾಧ್ಯ ಎಂದು ಕೊಡಗಿನ ಹೆಸರಾಂತ ಬಾಸ್ಕೆಟ್ ಬಾಲ್ ಆಟಗಾತಿ೯ ಮಂಡೆಪಂಡ ಡಾ. ಪುಪ್ಪಾ ಕುಟ್ಟಣ್ಣ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ 55 ಲಕ್ಷ ರು. ವೆಚ್ಚದಲ್ಲಿ ಸ್ಫಾಪನೆಯಾದ ತನ್ನದೇ ಹೆಸರಿನ ಡಾ. ಪುಪ್ಪಾ ಕುಟ್ಟಣ್ಣ ಬಾಸ್ಕೆಟ್ ಬಾಲ್ ಕೋಟ್೯ ಉದ್ಘಾಟಿಸಿ ಮಾತನಾಡಿದ ಅಂತರರಾಷ್ಟ್ರೀಯ ಬಾಸ್ಕೆಟ್ ಬಾಲ್ ಮಾಜಿ ಆಟಗಾತಿ೯ಯೂ ಆಗಿರುವ ಪುಪ್ಪಾಕುಟ್ಟಣ್ಮ , ಅನೇಕ ಸ್ಥಳಗಳಲ್ಲಿ ನಿಮಾ೯ಣವಾಗಿರುವ ಬಾಸ್ಕೆಟ್ ಬಾಲ್ ಕೋಟ್೯ಗಿಂತ ಕೊಡಗು ವಿದ್ಯಾಲಯದಲ್ಲಿ ನಿಮಾ೯ಣವಾದ ಕ್ರೀಡಾಂಗಣ ವಿನೂತನವಾಗಿದೆ. ಕೊಡಗಿನಲ್ಲಿ ಇಂಥ ಹೊಸತನದ ಪ್ರಯತ್ನಕ್ಕೆ ಕೊಡಗು ವಿದ್ಯಾಲಯ ಮುಂದಾಗಿರುವುದು ಶ್ಲಾಘನೀಯ ಎಂದರು. ತನ್ನ ಹೆಸರಿನಲ್ಲಿಯೇ ಬಾಸ್ಕೆಟ್ ಬಾಲ್ ಕೋಟ್೯ ನಿಮಾ೯ಣವಾಗಿರುವುದು ತನ್ನ ಕ್ರೀಡಾಜೀವನದಲ್ಲಿಯೇ ಸ್ಮರಣೀಯವಾಗಿದೆ ಎಂದೂ ಅವರು ಧನ್ಯತಾ ಭಾವದಿಂದ ಹೇಳಿದರು. ಪ್ರತೀ ಕ್ರೀಡಾಸಾಧಕರಿಗೆ ಮುಖ್ಯವಾಗಿ ಛಲ,…
ಮಡಿಕೇರಿ NEWS DESK ಮಾ.2 : ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಮತ್ತು ಜನಪರ ಅಂಶಗಳನ್ನು ಅಳವಡಿಸುವಂತೆ ಒತ್ತಾಯಿಸಿರುವ ವಿವಿಧ ಬೇಡಿಕೆಗಳ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ರಚಿಸಿರುವ “ಜನತಾ ಬಜೆಟ್” ಪ್ರತಿಯನ್ನು ಪಕ್ಷದ ಪ್ರಮುಖರು ಶಾಸಕದ್ವಯರಿಗೆ ಸಲ್ಲಿಸಿದರು. ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಸಿನ್ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ನಗರದಲ್ಲಿ ಭೇಟಿಯಾಗಿ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಮನವಿ ಮಾಡಿದರು. 2025-26 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುವ ಸಂದರ್ಭ ವನ್ಯಜೀವಿಗಳ ಸಮಸ್ಯೆ, ರೈತರ ಹಾಗೂ ಕಾರ್ಮಿಕ ಸಂಕಷ್ಟಗಳಿಗೆ ಪರಿಹಾರ, ಶಿಕ್ಷಣಕ್ಕೆ ಒತ್ತು ನೀಡಿ ಕಾನೂನು ಕಾಲೇಜು ಸ್ಥಾಪನೆ, ಉನ್ನತ ಶಿಕ್ಷಣದ ತರಬೇತಿ ಕೇಂದ್ರಗಳ ಆರಂಭ, ಕೊಡಗು ವಿವಿಯನ್ನು ಜಿಲ್ಲೆಯಲ್ಲೇ ಉಳಿಸುವುದು, ಜನರ ಆರೋಗ್ಯದ ಹಿತದೃಷ್ಟಿಯಿಂದ ಮಲ್ಟಿ ಸ್ಪೆಷಾಲಿಟಿ…
ಮಡಿಕೇರಿ NEWS DESK ಮಾ.2 : ಅಮ್ಮತ್ತಿ ಫ್ರೆಂಡ್ಸ್ ಹಾಗೂ ಕೊಡಗು ಮುಸ್ಲಿಂ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ 6ನೇ ವರ್ಷದ ಕೊಡಗು ಜಿಲ್ಲಾ ಮುಸ್ಲಿಂ ಕಪ್ ಕಾಲ್ಚೆಂಡು ಪಂದ್ಯಾವಳಿ ಏಪ್ರಿಲ್ 23 ರಿಂದ 27 ರವರೆಗೆ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅಮ್ಮತ್ತಿ ಫ್ರೆಂಡ್ಸ್ ಕ್ರೀಡಾಕೂಟದ ಆಯೋಜಕ ಶಮೀರ್ ಅಮ್ಮತ್ತಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಚಾಂಪಿಯನ್ ತಂಡಕ್ಕೆ ಕೊಡಗಿನ ಮುಸ್ಲಿಂ ಕಪ್ ಇತಿಹಾಸದಲ್ಲಿ ಅತಿ ಹೆಚ್ಚು ನಗದು ರೂ.101111 ಮತ್ತು ಟ್ರೋಫಿ, ದ್ವಿತೀಯ ರೂ.50555 ಮತ್ತು ಟ್ರೋಫಿ, ತೃತೀಯ ರೂ.20222 ಮತ್ತು ಟ್ರೋಫಿ, ನಾಲ್ಕನೇ ಬಹುಮಾನ ರೂ.10111 ಮತ್ತು ಟ್ರೋಫಿ ಹಾಗೂ ಹಲವಾರು ವೈಯುಕ್ತಿಕ ಟ್ರೋಫಿಗಳನ್ನು ನೀಡಲಾಗುವುದು. ಮೈದಾನ ಶುಲ್ಕ 3 ಸಾವಿರ ರೂ. ನಿಗಧಿ ಪಡಿಸಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8861775265 ನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ NEWS DESK ಮಾ.2 : ವಿಭಿನ್ನ ನಿರೂಪಣಾ ಶೈಲಿ, ಪಾತ್ರ ಪೋಷಣೆ ಮತ್ತು ಕೊಡಗಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಥಾ ವಸ್ತುವಿನ ಚಲನಚಿತ್ರಗಳನ್ನು ನಿರ್ದೇಶಿಸುವ ಮೂಲಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ವರೆಗೂ ಸಿನಿ ಹೆಜ್ಜೆಯನ್ನು ಬೆಳೆಸಿ ಸಿನಿಮಾರಂಗದಲ್ಲಿ ಕೊಡಗಿನ ಪ್ರತಿಭೆಗಳ ಇರುವಿಕೆಯನ್ನು ಸಾಕ್ಷೀಕರಿಸಿದ ಪ್ರಶಸ್ತಿ ವಿಜೇತ ನಿರ್ದೇಶಕ, ನಟ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ “ಕಾಂಗತ ಮೂಡ್ (ದಿ ಶ್ಯಾಡೋ)” ಕೊಡವ ಚಲನಚಿತ್ರ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ “ಕಾಂಗತ ಮೂಡ್”(“(The Shadow) 16ನೇ ಚಲನಚಿತ್ರೋತ್ಸವದ ಕನ್ನಡ ಸ್ಪರ್ಧಾ ವಿಭಾಗದಲ್ಲಿ ಆಯ್ಕೆಯಾಗಿದೆ. ಬೆಂಗಳೂರಿನ ರಾಜಾಜಿನಗರದ ಒರೆಯನ್ ಮಾಲ್ ನಲ್ಲಿ ಮಾರ್ಚ್ 1 ರಿಂದ 8ರ ವರೆಗೆ ನಡೆಯುತ್ತಿರುವ ಚಲನಚಿತ್ರೋತ್ಸವದಲ್ಲಿ “ಕಾಂಗತ ಮೂಡ್” ಎರಡು ಪ್ರದರ್ಶನ ಕಾಣಲಿದೆ. ಮಾ.2 ರಂದು ಮಧ್ಯಾಹ್ನ 3 ಗಂಟೆಗೆ ರಾಜ್ ಕುಮಾರ್ ಭವನ್ ಮತ್ತು ಮಾ.6ರಂದು ಮಧ್ಯಾಹ್ನ…
ಮಡಿಕೇರಿ ಮಾ.1 NEWS DESK : ಮಡಿಕೇರಿ ಬ್ರಹ್ಮಕುಮಾರಿ ಲೈಟ್ಹೌಸ್ ನಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಶಿವ ದ್ವಜರೋಹಣ ಹಾಗೂ 89 ನೇ ತ್ರಿಮೂರ್ತಿ ಶಿವ ಜಯಂತಿ ಕಾರ್ಯಕ್ರಮ ನಡೆಯಿತು. ಬ್ರಹ್ಮಕುಮಾರಿ ಲೈಟ್ಹೌಸ್ ನ ಜಿಲ್ಲಾ ಸಂಚಾಲಕಿ, ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿ ಜಿ, ಹಿರಿಯ ವಕೀಲರಾದ ಬಾಲ ಸುಬ್ರಮಣ್ಯ ಪಂಜರ್ಪಣೆ, ಇಎನ್ಟಿ ತಜ್ಞ ಡಾ.ಮೋಹನ್ ಅಪ್ಪಾಜಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಲೈಟ್ಹೌಸ್ ಮುಂಭಾಗ ಧ್ವಜಾರೋಹಣ ನೆರವೇರಿಸಿದರು. ನೆರೆದಿದ್ದ ಎಲ್ಲರು ವಿಶೇಷ ಜ್ಯೋತಿರ್ಲಿಂಗ ದರ್ಶನ ಪಡೆದರು. ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗೋಣಿಕೊಪ್ಪಲಿನ ಲೋಪಮುದ್ರೆ ಆಸ್ಪತ್ರೆಯ ಡಾ.ಅಮೃತ ನಾಣಯ್ಯ ಉದ್ಘಾಟಿಸಿ, ಆಸ್ಪತ್ರೆಯ ಸೇವಾ ಭಾವನೆಯ ಹಿನ್ನೆಲೆಯನ್ನು ತಿಳಿಸಿದರು. ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಶಿವ ಸ್ಮೃತಿ ಹಾಡಿ ಶುಭಹಾರೈಸಿದರು. ಕೊಡಗು ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ವಾತ್ಸಲ್ಯ ರಮೇಶ್, ಕುಮಾರಿ ಅಧಿತಿ, ಚಿನ್ಮಯಿ ಶಿವ ನೃತ್ಯ ಮಾಡಿದರು. ಕುಷಿ ನೃತ್ಯದ ಮೂಲಕ ಗಮನ ಸೆಳೆದರು. ಕಾರ್ಯಕ್ರಮದ ನಂತರ ನೆರೆದಿದ್ದವರಿಗೆ ಪ್ರಸಾದ ವಿತರಣೆ…






