ಕುಶಾಲನಗರ ಮಾ.22 NEWS DESK : ನಾಲ್ಕು ಗೋಡೆಗಳ ನಡುವೆ ಸಿಲುಕಿಕೊಂಡಿದ್ದ ಮಹಿಳೆಗೆ ಇದೀಗ ಸ್ವಾವಲಂಬಿಯಾಗಿ ತನ್ನ ಪ್ರತಿಭೆಯನ್ನು ಹೊರಹೊಮ್ಮಿಸಲು ಹಲವು ಅವಕಾಶಗಳಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳ ಬೇಕಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ ಭೂಮಿಕಾ ಮಹಿಳಾ ಹಿತ ರಕ್ಷಣಾ ಸಮಿತಿಯ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಡುಗೆ ಮನೆಯಿಂದ ಅಂತರಿಕ್ಷದ ತನಕ ಇದೀಗ ಮಹಿಳೆಯರು ತಮ್ಮ ಸಾಧನೆ ಪ್ರದರ್ಶನ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಜ್ಞಾನವಿಕಾಸ ವೇದಿಕೆ ಮೂಲಕ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಈ ಮೂಲಕ ಲಕ್ಷಾಂತರ ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಯಾವುದೇ ಸಂದರ್ಭ ಮಹಿಳೆಯರು ತಮ್ಮ ಜವಾಬ್ದಾರಿಯನ್ನು ಮರೆಯದೆ ಕೌಟುಂಬಿಕ ಸಾಮರಸ್ಯವನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋಗಬೇಕಾಗಿದೆ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಕಾರ್ಯಕ್ರಮಗಳ…
ಲೇಖಕ: admin
ಮಡಿಕೇರಿ ಮಾ.22 NEWS DESK : ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮಾ.24ರಿಂದ ಮೇ 1ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ (ಮ್ಯಾನ್ಸ್ ಕಾಂಪೌಂಡ್)ದಲ್ಲಿ 31ನೇ ವರ್ಷದ ಉಚಿತ ಕ್ರೀಡಾ ಶಿಬಿರ ನಡೆಯಲಿದೆಯೆಂದು ಕ್ಲಬ್ನ ಪ್ರಮುಖರಾದ ಬೊಪ್ಪಂಡ ಶ್ಯಾಂ ಪೂಣಚ್ಚ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಕಿ, ಅಥ್ಲೆಟಿಕ್ಸ್, ಯೋಗ ತರಬೇತಿಗೆ ಸಂಬಂಧಿಸಿದಂತೆ ನಡೆಯುವ ಬೇಸಿಗೆ ಶಿಬಿರದಲ್ಲಿ 6 ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ. ಶಿಬಿರ ಮಾ.24ರಿಂದ ಆರಂಭಗೊಂಡರು, ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾದ ದಿ.ಸಿ.ವಿ.ಶಂಕರ ಸ್ವಾಮಿ ಅವರ ಜನ್ಮದಿನವಾದ ಏ.1 ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ ಎಂದರು. ಪ್ರತಿ ದಿನ ಬೆಳಿಗ್ಗೆ 6.30 ರಿಂದ 8.30 ಗಂಟೆಯವರೆಗೆ ಶಿಬಿರ ನಡೆಯಲಿದೆ. ಆಸಕ್ತರು ಮಾ.24 ರಂದು ಬೆಳಗ್ಗೆ ಆಗಮಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹದು. ಆ ನಂತರದ ದಿನಗಳಲ್ಲು ಶಿಬಿರಕ್ಕೆ ಸೇರಲು ಅವಕಾಶವಿರುವುದಾಗಿ ಸ್ಪಷ್ಟಪಡಿಸಿದರು. ಕ್ಲಬ್ ಅಧ್ಯಕ್ಷರಾದ ಕೊಟೇರ ಮುದ್ದಯ್ಯ ಮಾತನಾಡಿ, ಶಿಬಿರದಲ್ಲಿ ನುರಿತ ತರಬೇತುದಾರರಿಂದ ಕ್ರೀಡಾ ತರಬೇತಿ ನೀಡಲಾಗುತ್ತದೆ.…
ಮಡಿಕೇರಿ ಮಾ.22 NEWS DESK : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯ ಅಂಕನಳ್ಳಿಯ ಮನೆಹಳ್ಳಿ ಶ್ರೀ ತಪೋಕ್ಷೇತ್ರದಲ್ಲಿ ಏ.12 ರಿಂದ 14ರ ವರೆಗೆ ಶ್ರೀ ಗುರುಸಿದ್ಧವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಜರುಗಲಿದೆಯೆಂದು ಕ್ಷೇತ್ರದ ಸ್ವಾಮೀಜಿಗಳಾದ ಶ್ರೀ ಮಹಾಂತ ಶಿವಲಿಂಗ ಸ್ವಾಮಿಗಳು ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ದೇವಾಲಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಏ.12 ರಂದು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣದ ಮೂಲಕ ಚಾಲನೆ ದೊರೆಯಲಿದೆ. ಅಂದು ಸಂಜೆ 6.30 ಗಂಟೆಗೆ ಶ್ರೀ ಸ್ವಾಮಿಗೆ ಕಂಕಣ ಧಾರಣೆ, ಮಹಾಮಂಗಳಾರತಿ, 7 ಗಂಟೆಗೆ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರಸ್ವಾಮಿಯವರಿಗೆ ಸೂರ್ಯ ಮಂಡಲೋತ್ಸವ ಜರುಗಲಿದೆ ಎಂದು ಹೇಳಿದರು. ಏ.13 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಮದನಾಧಿ ಅನಘ ನಿರಂಜನ ಜಂಗಮ ಪೂಜೆ, ಸಂಜೆ 6.30 ಗಂಟೆಗೆ ಶ್ರೀ ಸ್ವಾಮಿಯವರ ‘ಅಡ್ಡಪಲ್ಲಕ್ಕಿ ಉತ್ಸವ’, ರಾತ್ರಿ 8.30 ಗಂಟೆಗೆ ದಾಸೋಹ ಜರುಗಲಿದೆ. ಏ.14 ರಂದು ಬೆಳಿಗ್ಗೆ…
ಮಡಿಕೇರಿ ಮಾ.22 NEWS DESK : ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಎಸ್ಸಿ ಮೋರ್ಚಾ ವತಿಯಿಂದ ಏ.13 ರಂದು ನಗರದಲ್ಲಿ ಸಾರ್ವಜನಿಕರಿಗಾಗಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ರಾಷ್ಟ್ರೀಯ ವಿಚಾರಗಳ ಪುಸ್ತಕ ಮೇಳ, ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಪಿ.ಎಂ.ರವಿ ಈ ಕುರಿತು ಮಾಹಿತಿ ನೀಡಿ, ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏಕ ಕಾಲಕ್ಕೆ ಈ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಸಮಾಜದ ಎಲ್ಲಾ ಸ್ತರಗಳ ಜನರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳ ಬಗ್ಗೆ ಇಂದಿಗೂ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರದ ಯೋಜನೆಗಳ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ನೀಡಲಾಗುತ್ತದೆಂದು ತಿಳಿಸಿದರು. ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಮಾಹಿತಿ ಕಾರ್ಯಾಗಾರದ ಸಭಾ ಕಾರ್ಯಕ್ರಮದಲ್ಲಿ ಮೈಸೂರು ಕೊಡಗು ಕ್ಷೇತ್ರದ ಸಂಸದ ಯದುವೀರ್…
ಪುತ್ತೂರು ಮಾ.22 NEWS DESK : ಕಾರಂಜಿಯಲ್ಲೂ ಒಂದು ಧ್ಯೇಯವಿದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮುಂಭಾಗದಲ್ಲಿ, ದಿವಂಗತ ಜಿ.ಎಲ್.ಆಚಾರ್ಯ ಅವರ ಜನ್ಮ ಶತಾಬ್ಧಿಯ ಸವಿನೆನಪಿಗಾಗಿ ಅವರ ಪುತ್ರ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಅವರು ಕೊಡುಗೆಯಾಗಿ ನೀಡಿದ ಕಾರಂಜಿಯ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತಾಡಿದರು. ದಿವಂಗತ ಜಿ.ಎಲ್.ಆಚಾರ್ಯ ಅವರು ಅಂದಿನ ದಿನಗಳಲ್ಲಿ ವಿಧ್ಯಾವರ್ಧಕ ಸಂಘದ ಏಳಿಗೆಗಾಗಿ ದುಡಿದವರು. ಇಂದು ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅನೇಕ ಸಮಾಜಮುಖೀ ಕಾರ್ಯಗಳನ್ನು ನಡೆಸುತ್ತಿರುವುದು ಸಂತೋಷವನ್ನು ತಂದಿದೆ. ಇದರಿಂದ ಅವರ ಆತ್ಮಕ್ಕೂ ಸಂತೋಷವಾಗಿರಬಹುದು ಎಂದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ನಿರ್ದೆಶಕ ಬಲರಾಮ ಆಚಾರ್ಯ.ಜಿ, ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಲಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು…
ಪುತ್ತೂರು ಮಾ.22 NEWS DESK : ತಾಂತ್ರಿಕತೆ ಬಹಳ ಮುಂದುವರಿದಿದೆ, ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಗಳ ಕಣಜವೇ ಸಿಗುತ್ತದೆ. ಅದರಲ್ಲಿ ಕೆಟ್ಟದ್ದೂ ಇದೆ ಒಳ್ಳೆಯದೂ ಇದೆ. ಅದರ ಬಳಕೆಯಲ್ಲಿ ಬುದ್ದಿವಂತಿಕೆಯನ್ನು ತೋರಿಸಿದರೆ ನಮ್ಮ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಳ್ಳಬಹುದು ಎಂದು ವೆಂಚೂರ್ಸಾಫ್ಟ್ ಗ್ಲೋಬಲ್ ಯುಎಸ್ಎ ಮುಖ್ಯ ಕಾರ್ಯನಿರ್ವಣಾಧಿಕಾರಿ ಅಗರ್ತ ವೆಂಕಟ್ರಮಣ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಇದರ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಕಾಲೇಜು ಜೀವನ ಅತಿ ಮುಖ್ಯವಾದದ್ದು ಅಲ್ಲಿನ ಘಟನೆಗಳನ್ನು ನಾವು ಯಾವತ್ತೂ ಮರೆಯುವುದಕ್ಕೆ ಸಾಧ್ಯವಿಲ್ಲ. ಸಮಾಜದಲ್ಲಿ ವ್ಯಕ್ತಿಯೊಬ್ಬನನ್ನು ಗುರುತಿಸುವುದು ಅವನ ಶ್ರೀಮಂತಿಕೆಯಿಂದಲ್ಲ, ಬದಲಿಗೆ ಅವನ ವ್ಯಕ್ತಿತ್ವದಿಂದ. ನಿಮ್ಮ ನಡತೆ, ವ್ಯವಹಾರ ಮತ್ತು ಸಂಪರ್ಕ ಉತ್ತಮವಾಗಿದ್ದರೆ ಸಮಾಜದಲ್ಲಿ ನೀವು ಉನ್ನತರಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು. ಮುಖ್ಯ ಅತಿಥಿ ಮರ್ಸಿಡಿಸ್ ಬೆಂಜ್ ರೀಸರ್ಚ್ ಎಂಡ್ ಡೆವೆಲಪ್ಮೆಂಟ್ ಇಂಡಿಯಾ ಇದರ ಸೀನಿಯರ್ ಕನ್ಸಲ್ಟೆಂಟ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಶ್ರೀಮತಿ ತನ್ವಿ.ಡಿ.ಐ…
ಮಡಿಕೇರಿ ಮಾ.22 NEWS DESK : ‘ಮುದ್ದಂಡ ಕಪ್ ಹಾಕಿ ಉತ್ಸವ’ದ ಕ್ರೀಡಾಜ್ಯೋತಿ ಮಾ.25ರಂದು ಕೊಡವ ಹಾಕಿ ಹಬ್ಬದ ಜನಕರಾದ ಕರಡ ಗ್ರಾಮದ ಪಾಂಡಂಡ ಕುಟುಂಬದ ಐನ್ ಮನೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಮತ್ತು ಕೊಡವ ಹಾಕಿ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಹಬ್ಬದ ಜನಕ ದಿ.ಪಾಂಡಂಡ ಕುಟ್ಟಪ್ಪ ಅವರ ಪತ್ನಿ ಲೀಲ ಕುಟ್ಟಪ್ಪ ಅವರು ಉದ್ಘಾಟಿಸಲಿದ್ದಾರೆ. 1997ರಿಂದ ಇಲ್ಲಿಯವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ಎಲ್ಲಾ ಕುಟುಂಬಗಳ ಐನ್ ಮನೆಗಳಿಗೆ ಮ್ಯಾರಥಾನ್ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ಮಾ.28ರಂದು ಬೆಳಿಗ್ಗೆ 9ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿ ಸಾಗಲಿದೆ. ::: ಕ್ರೀಡಾಜ್ಯೋತಿ ಮಾರ್ಗ ::: ಮಾ.25ರಂದು ಕರಡ ಪಾಂಡಂಡ, ಕಿರುಗೂರು ಚೆಪ್ಪುಡಿರ, ಅಲಮೇಂಗಡ, ಟಿ.ಶೆಟ್ಟಿಗೇರಿ- ಒಂಟಿಯಂಗಡಿ ಮಚ್ಚಮಾಡ, ಚೆಕ್ಕೇರ, ಕಳ್ಳಿಚಂಡ,…
ತಮಿಳುನಾಡು ಮಾ.22 NEWS DESK : ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ನೇತೃತ್ವದಲ್ಲಿ ಸಮಾನಮನಸ್ಕರ ಮುಖಂಡರುಗಳ, ದಕ್ಷಿಣ ಭಾರತದ ಪ್ರಮುಖ ನಾಯಕರು ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಹಲವು ಪ್ರಮುಖ ಬೇಡಿಕೆಗಳ ಹಕ್ಕೊತ್ತಾಯಕ್ಕೆ ಸಂಬಂಧಪಟ್ಟ ಸಭೆಯು ಇಂದು ತಮಿಳುನಾಡಿನ ಚೆನ್ನೈನಲ್ಲಿ ನಡೆಯುತ್ತಿದೆ. ಸಭೆಯಲ್ಲಿ ಕರ್ನಾಟಕ ರಾಜ್ಯದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಪಾಲ್ಗೊಂಡಿದ್ದಾರೆ.
ಪೊನ್ನಂಪೇಟೆ ಮಾ.22 NEWS DESK : ಹನ್ನೆರಡನೇ ಶತಮಾನದಲ್ಲಿ ಇದ್ದ ರಾಜಪ್ರಭುತ್ವದ ವಿರುದ್ಧ ಪ್ರಜಾಪ್ರಭುತ್ವದ ಬೀಜ ಬಿತ್ತಿದ ಶರಣರು ಈ ರಾಷ್ಟ್ರ ಕಂಡ ಪ್ರಪ್ರಥಮ ಸ್ವಾಂತಂತ್ರ್ಯ ಚಳುವಳಿಗಾರರು ಎಂದು ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ವತಿಯಿಂದ ಬಿಜಾಪುರದ ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕಿನ ವತಿಯಿಂದ ಸ್ಥಾಪಿಸಿರುವ ವಚನ ಸಾಹಿತ್ಯ ಸಂವರ್ಧಕ ಡಾ.ಫ.ಗು.ಹಳಕಟ್ಟಿ ಅವರ ಜೀವನ ಹಾಗೂ ಸಾಧನೆ ಕುರಿತ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜಪ್ರಭುತ್ವದ ಕಾಲದಲ್ಲಿ ಅಸಮಾನತೆಯಿಂದ ಜನ ಬಳಲಿದ್ದರು. ವೇದ, ಆಗಮ, ಉಪನಿಷತ್ತುಗಳು ಸಂಸ್ಕ್ರತ ಭಾಷೆಯಲ್ಲಿದ್ದು ಜನಸಾಮಾನ್ಯರಿಗೆ ಅರ್ಥವಾಗುತ್ತಿರಲಿಲ್ಲ. ಅಂತಹ ಕಾಲದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಸರಳ ಭಾಷೆಯ ವಚನಗಳ ಮೂಲಕ ಬಹುದೊಡ್ಡ ಕ್ರಾಂತಿಯನ್ನು ಮಾಡಿದ ಬಸವಾದಿ ಶರಣರು ಸಮಾಜದಲ್ಲಿ ಸಮಾನತೆ ಹಾಗೂ ಮಹಿಳಾ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಜನರಲ್ಲಿ ಹೇರಿದ್ದ ಮೂಢನಂಬಿಕೆಗಳ ವಿರುದ್ಧವೂ ಸಮರ ಸಾರಿದ ಶರಣರು ಪುರೋಹಿತಶಾಹಿ…
ಕುಶಾಲನಗರ ಮಾ.22 NEWS DESK : ಕೊಡಗು ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ ಅಭಿಯಾನ ಯೋಜನೆಯ ಜಲ ಜೀವನ್ ಮಿಷನ್ , ಶಾಲಾ ಶಿಕ್ಷಣ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಷ್ಟ್ರೀಯ ಹಸಿರು ಪಡೆ ( ಎನ್.ಜಿ.ಸಿ.),ಇಕೋ ಕ್ಲಬ್ , ಕೂಡುಮಂಗಳೂರು ಗ್ರಾಮ ಪಂಚಾಯತಿ, ಹಾಸನದ ಸೀಕೋ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ( ಮಾ.22 ರಂದು ) ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.), ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಎಸ್.ಡಿ.ಎಂ.ಸಿ. ಹಾಗೂ ಇಕೋ ಕ್ಲಬ್ ನ ವತಿಯಿಂದ ಕೂಡ್ಲೂರು ಗ್ರಾಮದಲ್ಲಿ ವಿಶ್ವ ಜಲ ದಿನವನ್ನು ಆಚರಿಸಲಾಯಿತು. ಶಾಲಾ ಪ್ರಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿಶ್ವ ಜಲ ದಿನದ ಮಹತ್ವ ಹಾಗೂ ನೀರಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಅತ್ಯಮೂಲ್ಯ ಸಂಪತ್ತಾದ…






