ಕುಶಾಲನಗರ NEWS DESK ಫೆ.27 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಯ ಹಾಗೂ ನೆರೆಯ ವಿವಿಧೆಡೆಯ ಗೌಡ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದಲ್ಲಿ ಮಾರ್ಚ್ 2ರಂದು ಅರೆ ಭಾಷೆ ಗಡಿನಾಡ ಉತ್ಸವ-2025 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಪೊನ್ನಚ್ಚನ ಮೋಹನ್ ತಿಳಿಸಿದ್ದಾರೆ. ಅವರು ಕುಶಾಲನಗರದ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಗಡಿ ಭಾಗದಲ್ಲಿ ಉತ್ಸವ ಮೂಲಕ ಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ ಎಂದರು. ಭಾಷೆ ಅಳಿದಲ್ಲಿ ಸಮುದಾಯದ ಸಂಸ್ಕೃತಿ ನಾಶ ಆಗುವ ಆತಂಕ ವ್ಯಕ್ತಪಡಿಸಿದ ಅವರು ಈ ಹಿನ್ನೆಲೆಯಲ್ಲಿ ಮಾರ್ಚ್ ಎರಡರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಅಂದು ಬೆಳಗ್ಗೆ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆ ಬಳಿಯಿಂದ 9 ಗಂಟೆಗೆ ಮೆರವಣಿಗೆ ಹೊರಡಲಿದೆ. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ…
ಲೇಖಕ: admin
ಕುಶಾಲನಗರ NEWS DESK ಫೆ.27 : ಕೊಡಗು ವಿವಿ ರದ್ದುಗೊಳಿಸಿ ಮಂಗಳೂರು ವಿವಿಗೆ ವಿಲೀನಗೊಳಿಸುವ ಸರ್ಕಾರದ ಚಿಂತನೆಯನ್ನು ವಿರೋಧಿಸಿ (28) ಅಳುವಾರ ವಿಶ್ವವಿದ್ಯಾಲಯದಿಂದ ಕುಶಾಲನಗರಕ್ಕೆ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಎರಡು ದಶಕಗಳ ಅವಧಿಯಿಂದ ಕೊಡಗು ಜಿಲ್ಲೆಗೆ ಪ್ರತ್ಯೇಕ ವಿವಿ ಬಗ್ಗೆ ಕಾಳಜಿ ವಹಿಸಿ ತಮ್ಮ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಶಂಕು ಸ್ಥಾಪನೆ ಮಾಡುವುದರೊಂದಿಗೆ ಸ್ಥಾಪನೆಗೊಂಡ ವಿಶ್ವವಿದ್ಯಾಲಯವನ್ನು ನಂತರ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇದೀಗ ಕೊಡಗು ವಿವಿ ರದ್ದುಗೊಳಿಸಿ ಮಂಗಳೂರು ವಿವಿಗೆ ವಿಲೀನಗೊಳಿಸುವ ಚಿಂತನೆ ನಡೆಸಿರುವುದು ಖಂಡನೀಯ. ಕೊಡಗು ಜಿಲ್ಲೆಯ ತಳಸ್ತರದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅನಾನುಕೂಲವಾಗಲಿದೆ. ತಕ್ಷಣ ಸರ್ಕಾರದ ಚಿಂತನೆಯನ್ನು ಹಿಂಪಡೆಯಬೇಕು. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಹೋರಾಟಗಳು ನಡೆಯುತ್ತಿವೆ. ಈ ಸಂಬಂಧ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ನೇತೃತ್ವದಲ್ಲಿ ನಡೆಯಲಿರುವ ಬೃಹತ್ ಜಾಥಾ ಕಾರ್ಯಕ್ರಮಕ್ಕೆ ಬಿಜೆಪಿ ಸಂಪೂರ್ಣ…
ಮಡಿಕೇರಿ ಫೆ.27 NEWS DESK : ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2025 ರ ಮೇ, 02 ರಿಂದ 2026 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು 2025 ರ ಮಾರ್ಚ್, 31 ರ ಸಂಜೆ 5.30 ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿ ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಎಸ್ಎಲ್ಸಿ ಅಂಕಪಟ್ಟಿ, ಛಾಪಾ ಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ…
ಮಡಿಕೇರಿ ಫೆ.27 NEWS DESK : ಕೊಡಗು ಜಿಲ್ಲೆಯಾದ್ಯಂತ ಚೆಸ್ಕಾಂನ ವಿದ್ಯುತ್ ವಿತರಣಾ ಮಾರ್ಗಗಳು ಬಹುತೇಕ ತೋಟಗಳು, ಅರಣ್ಯ ಪ್ರದೇಶಗಳ ಮಧ್ಯೆ ಹಾಗೂ ಕಡಿದಾದ ಬೆಟ್ಟಗುಡ್ಡಗಳ ಅಂಚಿನಲ್ಲಿ ಹಾದುಹೋಗುತ್ತಿದ್ದು, ಮಳೆಗಾಲದ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಮರದ ಕೊಂಬೆಗಳು ಬೀಳುವಂತದ್ದು, ಕಡಿದಾದ ಗುಡ್ಡಗಳ ಜರಿತದಿಂದ ಕಂಬಗಳು ಬಾಗಿ, ತಂತಿಗಳು ತೀರಾ ಅಪಾಯಮಟ್ಟದಲ್ಲಿ ಜಾರುವಂತಹ ಸನ್ನಿವೇಶಗಳು ಎದುರಾಗಬಹುದು. ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ 24*7 ಸಹಾಯವಾಣಿ 1912 ಗೆ ಸಾರ್ವಜನಿಕರು ದೂರು ನೀಡಲು ಕೋರಿದೆ. ಹಾಗೆಯೇ ಕೊಡಗು ಜಿಲ್ಲೆಯಾದ್ಯಂತ ರೈತರು ತಮ್ಮ ತೋಟಗಳಲ್ಲಿ ಕಾಳುಮೆಣಸು ಕೀಳಲು ಮತ್ತು ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿಸುತ್ತಿದೆ. ಆದ್ದರಿಂದ, ಅಲ್ಯೂಮಿನಿಯಂ, ಕಬ್ಬಿಣದ ಏಣಿ ಬದಲು ಪೈಬರ್…
ಮಡಿಕೇರಿ ಫೆ.27 NEWS DESK : ಗತಕಾಲದ ಆದಿಮಸಂಜಾತ ಕೊಡವ ಯೋಧರು ಹಾಗೂ ದಂತಕಥೆಗಳ ಪ್ರತಿಮೆಗಳನ್ನು ಸ್ಥಾಪಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಮಡಿಕೇರಿ ಕೋಟೆ, ಭಾಗಮಂಡಲ ಮತ್ತು ತಲಕಾವೇರಿ ವ್ಯಾಪ್ತಿಯಲ್ಲಿ ದಂತಕಥೆಗಳಾಗಿ ಉಳಿದುಕೊಂಡಿರುವ ಹುತಾತ್ಮ ಯೋಧರ ಶೌರ್ಯವನ್ನು ಪುರಾತತ್ವ ಶಾಸ್ತ್ರದ ಸ್ಮಾರಕಗಳಾಗಿ ಅನಾವರಣಗೊಳಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಧ್ಯೆಯುಗದ ಆದಿಮಸಂಜಾತ ಕೊಡವರು ಕೊಡವಲ್ಯಾಂಡ್ ಅನ್ನು ಶೌರ್ಯದ ಕೇಂದ್ರವಾಗಿ ಮತ್ತು ಸಮರ ರಂಗದ ತೂಗು ತೊಟ್ಟಿಲನ್ನಾಗಿ ರೂಪಿಸಿದರು. ಪ್ರತಿಯೊಂದು ಕೊಡವ ಕುಲದಲ್ಲಿಯೂ, ತಮ್ಮ ಶೌರ್ಯವನ್ನು ಪ್ರದರ್ಶಿಸಿದ ಮತ್ತು ಈ ಪವಿತ್ರ ಭೂಮಿಯನ್ನು ಆಕ್ರಮಣದಿಂದ ರಕ್ಷಿಸಿದ ಅಪ್ರತಿಮ ವೀರಯೋಧರಿದ್ದರು. ದೇವಟ್ ಪರಂಬು ಹತ್ಯಾಕಾಂಡ ದುರಂತ, ಅರಮನೆಯಲ್ಲಿನ ಪಿತೂರಿ, ಕೊಡವರ ರಾಜಕೀಯ ಹತ್ಯೆ ಮತ್ತು ಮುಳ್ಳುಸೋಗೆ ಹಾಗೂ ಉಲುಗುಲಿಯಲ್ಲಿ ಟಿಪ್ಪು-ಹೈದರ್ ವಿರುದ್ಧ 32 ಬಾರಿ ನಡೆದ ಗೆರಿಲ್ಲಾ ಯುದ್ಧಗಳು, ಹಾಗೆಯೇ ಲಕ್ಕಡಿಕೋಟೆ, ಪಾಲ್ತೋಪ್ ಮತ್ತು ಪಾಲ್ಪರೆಯಂತಹ ಸಮರ ಭೂಮಿಗಳಲ್ಲಿ ಇತರ ಬಾಹ್ಯ…
ಮಡಿಕೇರಿ ಫೆ.27 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ಫೆಬ್ರವರಿ, 28 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಬೆಂಗಳೂರು ಶಿಕ್ಷಣ ತಜ್ಞರು ಮತ್ತು ಚಿಂತಕರಾದ ಪ್ರೊ.ಕೆ.ಇ.ರಾಧಾಕೃಷ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ವಿಧಾನಸಭೆ…
ಮಡಿಕೇರಿ ಫೆ.27 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಪ್ರೀಮಿಯರ್ ಲೀಗ್ ವತಿಯಿಂದ ಕೊಡ್ಲಿಪೇಟೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗಾಗಿ ನಡೆದ ಮಹಾ ನಾಯಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ಜ್ಯೋತಿ ಬಾಪುಲೆ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಜೈ ಭೀಮ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಪಂದ್ಯಾವಳಿಯಲ್ಲಿ ಪರಿಶಿಷ್ಟ ನಾಯಕರುಗಳ ಹೆಸರನ್ನು ಹೊಂದಿದ್ದ ಹೋಬಳಿ ಮಟ್ಟದ 10 ತಂಡಗಳು ಪಾಲ್ಗೊಂಡಿದ್ದವು. ದಲಿತ ಮುಖಂಡ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜೆ.ಎಲ್.ಜನಾರ್ಧನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಜೆ.ಎಲ್.ಜನಾರ್ಧನ್ ಅವರು ಸಮಾಜದ ಒಗ್ಗಟ್ಟಿಗೆ ಕ್ರೀಡೆ ಸಹಕಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪ್ರಥಮ ದರ್ಜೆ ಸಹಾಯಕ ಶಾಂತಕುಮಾರ್, ಮಾಜಿ ಸೈನಿಕ ವಿಶ್ವನಾಥ್, ಗ್ರಾ.ಪಂ ಸದಸ್ಯ ಪ್ರಸನ್ನ, ದಲಿತ ಮುಖಂಡರಾದ ಜಗದೀಶ್, ವಸಂತ, ವೀರೇಂದ್ರ, ವೀರಭದ್ರ, ಚಂದ್ರು, ವಸಂತ ಯುವ…
ಮಡಿಕೇರಿ ಫೆ.27 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರದಲ್ಲಿರುವ ಶ್ರೀ ರಾಮೋತ್ಸವ ಆಡಳಿತ ಮಂಡಳಿ ವತಿಯಿಂದ ಫೆ.28 ರಂದು 35ನೇ ಶ್ರೀ ರಾಮೋತ್ಸವ ಅಂಗವಾಗಿ ಸಭೆ ನಡೆಯಲಿದೆ. ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಸಂಜೆ 5 ಗಂಟೆಗೆ ಶ್ರೀ ಕೋದಂಡರಾಮ ದೇವಾಲಯ ಸಮಿತಿ ವತಿಯಿಂದ ಪೂಜೆ ಸಲ್ಲಿಸಿ, ನಂತರ ದೇವಾಲಯದ ಆವರಣದಲ್ಲಿ ಕೆ.ಎಂ.ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದ್ದಾರೆ.
ಮಡಿಕೇರಿ ಫೆ.27 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯು ಪಂಚಾಯತಿ ಅಧ್ಯಕ್ಷ ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ತಿಂಗಳಲ್ಲಿ ಆನೆ ಕೆರೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಇರುವ ಕೋಳಿ, ಮತ್ತು ಆಡು ಮಾಂಸದ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ ಮಾಡುವ ಮೂಲಕ ಗ್ರಾಮ ಪಂಚಾಯತಿಗೆ ಆದಾಯ ಕ್ರೋಡೀಕರಿಸುವ ವಿವಿಧ ಯೋಜನೆಯಗಳ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಅಲ್ಲದೆ ಈಗಾಗಲೇ 15 ನೇ ಹಣಕಾಸು ಯೋಜನೆಯ ಅಡಿಯಲ್ಲಿ ಕ್ರಿಯಾ ಯೋಜನೆ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚೆಗಳು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಕಲ್ಪಿಸುವ ವಿಷಯ ಹಾಗೂ ವಸತಿ ರಹಿತರಿಗೆ ನಿವೇಶನದ ಜಾಗವನ್ನು ಒದಗಿಸುವ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಹಾಜರಿದ್ದ ಸದಸ್ಯರು ಮುಂದಿನ ದಿನಗಳಲ್ಲಿ ಬೇಸಿಗೆ ಕಾಲವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ…
ಮಡಿಕೇರಿ ಫೆ.27 NEWS DESK : ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಮಡಿಕೇರಿ ನಗರದ ರಾಜರಾಜೇಶ್ವರಿ ಶಾಲಾ ಮಕ್ಕಳಿಗೆ “ತೆರೆದ ಮನೆ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಸಂಚಾರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಂಚಾರ ಸುರಕ್ಷತೆ, ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.






