ಲೇಖಕ: admin

ಮಡಿಕೇರಿ ಜೂ.15 NEWS DESK  : ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ನಿರ್ದೇಶನ ಮೇರೆಗೆ ಕಾಲೂರು- ಮಾಂದಲಪಟ್ಟಿ ರಸ್ತೆ ದುರಸ್ತಿ ಕಾರ್ಯ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದೆ. ವಾರದ ಹಿಂದೆ ಕಾಲೂರು ಗ್ರಾಮಸ್ಥರು ರಸ್ತೆ ಹಾಳಾಗಿರುವುದರಿಂದ ಬಸ್ ಸಂಚಾರವಿಲ್ಲದೆ ವಿಧ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಡಾ.ಮಂತರ್ ಗೌಡ ರವರಲ್ಲಿ ಮನವಿ ಮಾಡಿಕೊಂಡಿದ್ದರು. ಮಳೆ ಆರಂಭಗೊಂಡಿರುವುದರಿಂದ ಪೂರ್ಣ ಪ್ರಮಾಣದಲ್ಲಿ ರಸ್ತೆ ನಿರ್ಮಾಣ ಅಸಾಧ್ಯವಾಗಿದ್ದು ಸದ್ಯಕ್ಕೆ ತಾತ್ಕಾಲಿಕ ದುರಸ್ತಿ ಮಾಡಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ಶಾಸಕರು ಭರವಸೆ ನೀಡಿದ್ದರು. ಶಾಸಕರು ಭರವಸೆ ನೀಡಿದಂತೆ ಈಗ ತಾತ್ಕಾಲಿಕ ದುರಸ್ತಿ ಆಗುತ್ತಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರೀಶ್ ರವರು ಸ್ಥಳದಲ್ಲಿಯೇ ಇದ್ದು ಕಾಮಗಾರಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ತಮ್ಮ ಕೋರಿಕೆಗೆ ತಕ್ಷಣವೇ ಸ್ಪಂದನೆ ನೀಡಿದ ಡಾ ಮಂತರ್ ಗೌಡ ರವರ ನಡೆಯ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಜೂ.14 NEWS DESK : ಸಹಾರ ಫ್ರೆಂಡ್ಸ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿರಾಜಪೇಟೆಯಲ್ಲಿ ಬೃಹತ್ ರಕ್ತದಾನ ಶಿಬಿರದ ನಡೆಯಿತು. ಶಿಬಿರವನ್ನು ಉದ್ಘಾಟಿಸಿ, ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು, ರಕ್ತದಾನವೇ ಶ್ರೇಷ್ಠದಾನ ವಾಗಿದ್ದು, ಇನ್ನೊಬ್ಬರ ಜೀವ ಉಳಿಸುವ ಈ ಕಾರ್ಯ ಎಲ್ಲರಿಗೂ ಮಾದರಿಯಾಗಬೇಕು. ರಕ್ತದಾನ ಮಹಾದಾನವಾಗಿದ್ದು ಇದರಿಂದ ಸಮಾಜದ ಸ್ವಾಸ್ಥ್ಯ ಹಾಗೂ ಬಡ ಜನತೆಯ ಅವಶ್ಯಕತೆಗಳು ಪೂರೈಕೆಯಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಡಾ. ಕರುಂಬಯ್ಯ ,ಸಹಾರ ಫ್ರೆಂಡ್ಸ್ ಸದಸ್ಯರು ಅಬ್ದುಲ್ ರೌಫ್, ಮೊಹಸಿನ್, ಮಹಮ್ಮದ್ ಖಾಜಾ, ಸಮಿಉಲ, ಇರ್ಷಾದ್, ಆರ್ಚಿಪ್, ಪ್ರಮುಖರಾದ ಸೂರಜ್ ಹೊಸುರು, ಮಹಾದೇವ, ಮಹಮ್ಮದ್ ನಯಾಜ್, ಶಶಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಜೂ.14 NEWS DESK : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘ ಮತ್ತು ಡಿವೈಎಫ್‍ಐ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆಯ ಗಡಿಯಾರ ಕಂಬ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಭರತ್, ಕೇಂದ್ರ ಸರಕಾರ ನಿರಂತರವಾಗಿ ಹೆಚ್ಚಿಸುತ್ತಿರುವ ಅಡುಗೆ ಅನಿಲ ಹಾಗೂ ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೆ ಏರಿದ್ದು, ಜನ ಸಾಮಾನ್ಯರು ತೊಂದರೆಗೆ ಒಳಗಾಗಿದ್ದರೆ, ಅಸ್ಸಾಂ, ತಮಿಳುನಾಡು ಕೇರಳದಲ್ಲಿ ಚುನಾವಣೆ ಸಂಧರ್ಭದಲ್ಲಿ ತೈಲ ಬೆಲೆ ಏರಿಕೆ ಮಾಡದೇ ಚುನಾವಣೆ ನಂತರ ಬೆಲೆ ಏರಿಕೆ ಮಾಡಿದ್ದಾರೆ, ಅಡುಗೆ ಅನಿಲ 1000 ಹಾಗೂ ವಾಣಿಜ್ಯ ಅಡುಗೆ ಅನಿಲ ಬೆಲೆ 3000 ಆಗಿದ್ದು ಹೆಚ್ಚಳ ಹಿನ್ನೆಲೆ ನಗರದಲ್ಲಿ ಹಲವು ಹೊಟೇಲ್‍ಗಳು ಬಂದ್ ಆಗಿದೆ, 40 ರೂಪಾಯಿ ಇದ್ದ ದೋಸೆ 80 ಆಗಿದೆ, 50 ಇದ್ದ ಊಟಕ್ಕೆ 100 ರೂಪಾಯಿ ಆಗಿದೆ, ಈ ರೀತಿ…

Read More

ಮೂರ್ನಾಡು ಜೂ.14 NEWS DESK : ಮೂರ್ನಾಡು ಪ್ರೌಢಶಾಲೆಯ 1993-1995ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಪ್ರಕೃತಿರಶ್ಮಿ ವಿದ್ಯಾರ್ಥಿ ಬಳಗದ ವತಿಯಿಂದ ಮೂರ್ನಾಡು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣಾಕಾರ್ಯಕ್ರಮ ನಡೆಯಿತು. ಮೂರ್ನಾಡು ವಿದ್ಯಾಸಂಸ್ಥೆಯಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಡಿ. ಪ್ರಶಾಂತ್‍ಅವರು ಮಾತನಾಡಿ ಸಮಾನ ಮನಸ್ಕ ವ್ಯಕ್ತಿಗಳಿಂದ ರೂಪುಗೊಳ್ಳುವ ಸಂಘಟನೆಗಳು ಸದೃಢತೆಯಿಂದಕೂಡಿರುತ್ತದೆ. ಇಲ್ಲಿಜಾತಿ, ಧರ್ಮ, ಬಡವ, ಬಲ್ಲಿದ ಅನ್ನೋತಾರತಮ್ಯ ಇರುವುದಿಲ್ಲ. ಸಂಘಟನೆಗಳು ಸೇವಾ ಮನೋಭಾವನೆಯಿಂದ ಸಮಾಜಕ್ಕೆ ಸದುಪಯೋಗವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಆಗ ಸಮಾಜದಲ್ಲಿ ಉತ್ತಮ ಸಂಘಟನೆಯಿದು ಎಂದು ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಸಂಘದಲ್ಲಿ ಕ್ರೂಢೀಕರಣವಾಗುವ ಹಣದಲ್ಲಿ ಶೇ.30 ರಷ್ಟು ಸೇವೆಗೆ ವಿನಿಯೋಗಿಸಿದಷ್ಟರೆ ಸಾಕು. ಉಳಿದ ಹಣದಲ್ಲಿ ಸದಸ್ಯರ ಕ್ಷೇಮಾಭಿವೃದ್ದಿ ಹಾಗೂ ಮನರಂಜನೆಯ ನಿಮಿತ್ತ ಮೀಸಲಿಡಬಹುದು. ವಿದ್ಯಾರ್ಥಿಗಳ ವಿದ್ಯಾಭ್ಯಾಸವಧಿಯಲ್ಲಿ ಹಲವಾರು ತಪ್ಪುಗಳು ಘಟಿಸುತ್ತದೆ. ಆದರೆ ಅವುಗಳನ್ನು ತಿದ್ದಿಕೊಳ್ಳುವುದರ ಮೂಲಕ ಯಶಸ್ಸನ್ನು ಕಾಣಬೇಕು ಮತ್ತು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು…

Read More

ಮಡಿಕೇರಿ ಜೂ.14 NEWS DESK : ನಗರದ ಮಾರ್ನಿಂಗ್‌ ಸ್ಟಾರ್ ತಂಡದಿಂದ ತರಬೇತಿ ಪಡೆದ ಐವರು ಯುವಕರು ಅಗ್ನಿವೀರ್‌ ಯೋಜನೆ ಮೂಲಕ ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ನಗರದ ಹೋಟೆಲ್‌ ಸಮುದ್ರ ಸಭಾಂಗಣದಲ್ಲಿ ತಂಡದ ಪ್ರಮುಖರಾದ ಸುರೇಶ್‌ ರೈ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಸೇನೆಗೆ ಆಯ್ಕೆಯಾಗಿರುವ ಎಸ್‌.ವಿ.ಮೋಕ್ಷಿತ್‌ ಭಾಗಮಂಡಲ, ಡಿ.ಎಚ್.‌ಆಕಾಶ್‌ ಭಾಗಮಂಡಲ, ಎಚ್‌.ಆರ್.‌ ಯಶ್ವಂತ್‌ ಕೂಡಿಗೆ, ಬಿ.ಜಿ. ಹರ್ಷಿತ್‌ ಚೆಂಬು, ಬಿ.ಎಸ್.‌ ತಿಲಕ್‌ ಮಡಿಕೇರಿ ಅವರನ್ನು ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಗಣ್ಯರು ಅಭಿನಂದಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉದ್ಯಮಿ ಶರೀನ್‌ ಮಾತನಾಡಿ, ವಿವಿಧ ಕ್ಷೇತ್ರದಲ್ಲಿರುವ ಮಂದಿ ಸೇರಿಕೊಂಡು ನಡೆಸುತ್ತಿರುವ ಮಾರ್ನಿಂಗ್‌ ಸ್ಟಾರ್‌ ತಂಡ ಸೇನೆಗೆ ಸೇರಲು ಆಸಕ್ತಿ ಇರುವ ಯುವಕರಿಗೆ ತರಬೇತಿ ನೀಡುವ ಮೂಲಕ ಅತ್ಯುತ್ತಮ ಕಾರ್ಯ ಮಾಡುತ್ತಿದೆ. ತಂಡದ ಎಲ್ಲಾ ಕಾರ್ಯಕ್ಕೂ ತನ್ನ ಸಹಕಾರ ನೀಡುವುದಾಗಿ ತಿಳಿಸಿದರು.  ಉದ್ಯಮಿ ಪಪ್ಪಿ ವಸಂತ ಮಾತನಾಡಿ, ಒಳ್ಳೆಯ ಉದ್ದೇಶದಿಂದ ಸಮಾನ ಮನಸ್ಕರ…

Read More

ಮಡಿಕೇರಿ ಜೂ.14 NEWS DESK : ಪತ್ರಕರ್ತರು ವಿಶ್ವಾಸಾರ್ಹತೆಯನ್ನು ಗಳಿಸಿಕೊಳ್ಳಬೇಕು. ದಂಧೆಕೋರರು, ನಕಲಿ ಪತ್ರಕರ್ತರನ್ನು ಸುದ್ದಿಮನೆಯಿಂದ ದೂರವಿಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು.  ನಗರದ ಪತ್ರಿಕಾ ಭವನದಲ್ಲಿ ಆಯೋಜಿತ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರ ವರದಿಗಳಿಗೆ ಸಿಗುವ ಪ್ರಶಸ್ತಿಗಳು ಪ್ರೇರಣೆ ನೀಡುತ್ತವೆ. ಬೆನ್ನು ತಟ್ಟಿ ಪ್ರೋತ್ಸಾಹಿಸಿದಂತೆ.  ಪತ್ರಕರ್ತರು ಪ್ರಶಸ್ತಿ ಪಡೆಯುವುದು ಮುಖ್ಯವಲ್ಲ. ಸಾಮಾಜಿಕ ಸಮಸ್ಯೆಗಳನ್ನು ವರದಿ ಮೂಲಕ ಕಟ್ಟಿಕೊಡಬೇಕು. ಪತ್ರಕರ್ತರನ್ನು ಜನರು, ಸಮಾಜ ನಂಬಬೇಕಾದರೆ ಮೊದಲು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು. ಇದರಿಂದ ಮಾತ್ರ ಪತ್ರಕರ್ತರಿಗೆ ಸಾರ್ಥಕತೆ ದೊರೆಯುತ್ತದೆ ಎಂದರು.   ಸಂಘ ರಾಜ್ಯದಲ್ಲಿ 95  ವಸಂತವನ್ನು ಯಶಸ್ವಿಯಾಗಿ ಪೂರೈಸಿದ್ದು, ರಾಜ್ಯದ ಬೃಹತ್ ಸಂಘಟನೆಯಾಗಿದೆ. ರಾಜ್ಯದ ಪತ್ರಕರ್ತರ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದ ಅವರು, ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಎಂದು ಹೇಳಿಕೊಂಡು ಪ್ರವಾಹದ ರೀತಿ ನಕಲಿ ಪತ್ರಕರ್ತರು, ದಂಧೆಕೋರರು, ವಸೂಲಿಕೋರರು ಸುದ್ದಿಮನೆ ಪ್ರವೇಶಿಸುತ್ತಿರುವುದು…

Read More

ವಿರಾಜಪೇಟೆ ಜೂ.13 NEWS DESK : ವಿರಾಜಪೇಟೆ ಕೊಡವ ಸಮಾಜದ ಪ್ರಸ್ತುತ ಸಾಲಿನ ಮಹಾಸಭೆಯು ಜು.26 ರಂದು ಬೆಳಿಗ್ಗೆ 10.30 ಗಂಟೆಗೆ ಸಮಾಜದ ಸಭಾಂಗಣದಲ್ಲಿ ಕೊಡವ ಸಮಾಜದ ಅಧ್ಯಕ್ಷರಾದ ಅಮ್ಮಣಿಚಂಡ ರವಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ತಿಳಿಸಿದ್ದಾರೆ. ವಿರಾಜಪೇಟೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ವಿರಾಜಪೇಟೆ ಕೊಡವ ಸಮಾಜದಲ್ಲಿ ಮದುವೆ ಸಮಾರಂಭದ ದಿನದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದೆ. ಮುಖ್ಯ ರಸ್ತೆಗಳ ಬದಿಯಲ್ಲಿ ವಾಹನ ಅಡ್ಡಾದಿಡ್ಡಿ ನಿಲ್ಲಿಸಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗುವುದನ್ನು ತಪ್ಪಿಸಲು ಸಮಾಜ ಅಗತ್ಯ ಕ್ರಮ ಕೈಗೊಂಡಿದ್ದು, ವಾಹನ ಸವಾರರು ಪುರಸಭೆಯ ನೀರು ವಿತರಣ ಕೇಂದ್ರದ ಸಮೀಪದ ರಸ್ತೆಯ ಬಲ ಬದಿಯಲ್ಲಿಯೂ ಮತ್ತು ಸಮಾಜದ ತ್ರೀವೇಣಿ ಶಾಲೆಯ ರಸ್ತೆ ಬದಿಯಲ್ಲಿ ಮಾತ್ರ ವಾಹನ ನಿಲ್ಲಿಸಬೇಕು. ಉಳಿದಂತೆ ವಾಹನ ನಿಲುಗಡೆಗೆ ನಾವು 2 ಎಕ್ರೆ ಜಾಗವನ್ನು ಗುತ್ತಿಗೆ ಆಧಾರದಲ್ಲಿ ಪಡೆದಿದ್ದು ಅಲ್ಲಿ ವಾಹನ ನಿಲುಗಡೆ ಮಾಡಿ ಸಹಕರಿಸಬೇಕು.…

Read More

ವಿರಾಜಪೇಟೆ ಜೂ.13 NEWS DESK  : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ವಿರಾಜಪೇಟೆಯಲ್ಲಿ ಹೆಚ್‍ಪಿವಿ ಲಸಿಕೆ (ಗರ್ಭ ಕಂಠ ಕ್ಯಾನ್ಸರ್ ತಡಗಟ್ಟುವ ಚುಚ್ಚುಮದ್ದು) ಬಗ್ಗೆ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾಕೋಟುಪರಂಬು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಆಕಾಶ್, ಆರೋಗ್ಯ ನಿರೀಕ್ಷಣ ಅಧೀಕ್ಷಕಿ ಬಿ.ಎಸ್ ದುಂಭಿತ, ಶುಶ್ರೂಷಕಿ ಭವ್ಯ ಅವರು ಗರ್ಭ ಕಂಠ ಕ್ಯಾನ್ಸರ್ ತಡಗಟ್ಟುವ ಚುಚ್ಚುಮದ್ದು ಇದರ ಬಗ್ಗೆ ಮಾಹಿತಿ ನೀಡಿ ಮಾತನಾಡಿ, ವಿಶ್ವ ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಮಾಸವು ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ಆಚರಿಸಲಾಗುವ ಜಾಗತಿಕ ಆರೋಗ್ಯ ರಕ್ಷಣಾ ಕಾರ್ಯಕ್ರಮವಾಗಿದ್ದು, ಜಾಗತಿಕವಾಗಿ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ ಎಂದರು. ಗರ್ಭಕಂಠದ ಕ್ಯಾನ್ಸರ್‍ನ ಆರಂಭಿಕ ರೋಗನಿರ್ಣಯ, ಚಿಕಿತ್ಸೆ ಮತ್ತು ತಡೆಗಟ್ಟುವ ಶಿಫಾರಸುಗಳ ಮಹತ್ವವನ್ನು ಒತ್ತಿಹೇಳಲು ಹಲವಾರು ಅಭಿಯಾನಗಳು ಮತ್ತು ಚಟುವಟಿಕೆಗಳ ಮೂಲಕ ಗರ್ಭಕಂಠದ ಕ್ಯಾನ್ಸರ್‍ನ ಜಾಗೃತಿ ಮೂಡಿಸಲು ವಿವಿಧ ಅಂತರರಾಷ್ಟ್ರೀಯ ಮತ್ತು…

Read More

ಮಡಿಕೇರಿ ಜೂ.13 NEWS DESK : ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಮಡಿಕೇರಿ ತಾಲ್ಲೂಕು ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ನಗರದ ಕೋಟೆ ಮಹಿಳಾ ಸಮಾಜ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಯುವಜನರನ್ನು ಸಮಾಜದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಹಾಗೂ ಸಮಾಜದ ಅಭಿವೃದ್ಧಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮಡಿಕೇರಿ ತಾಲ್ಲೂಕು ಸಮಿತಿಯ ಅಧ್ಯಕ್ಷರಾಗಿ ರಘು ಹೆಬ್ಬಟ್ಟಗೇರಿ, ಉಪಾಧ್ಯಕ್ಷರಾಗಿ ದಿನೇಶ್ ಟಿ., ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್ ಮಡಿಕೇರಿ, ಸಹ ಕಾರ್ಯದರ್ಶಿಯಾಗಿ ದರ್ಶಿತ್, ಖಜಾಂಚಿಯಾಗಿ ಪ್ರಕಾಶ್ ಮೊಗೇರ ಹಾಗೂ ಪ್ರಚಾರಕರಾಗಿ ವಿವೇಕ್ ಮೊಗೇರ ಅವರು ಆಯ್ಕೆಯಾದರು. ಇದೇ ವೇಳೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಮೇಶ್, ಶ್ರೀನಿವಾಸ್, ಸುರೇಶ್ ಎಂ.ಕೆ., ರಾಜೇಶ್, ಶಶಿ ಮರ್ಗೋಡು, ವಿಶ್ವನಾಥ್ ಹಾಗೂ ಹರೀಶ್ ಬೆಟ್ಟಗೇರಿ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಅಧ್ಯಕ್ಷ ಜನಾರ್ಧನ್, ಸಮಾಜದ ಅಭಿವೃದ್ಧಿಗೆ…

Read More

ಮಡಿಕೇರಿ ಜೂ.13 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ.14 ರಂದು ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ಅಪರಾಹ್ನ 12 ಗಂಟೆಗೆ ಮಡಿಕೇರಿಯ ಪತ್ರಿಕಾ ಭವನದಲ್ಲಿ ಸಮಾರಂಭ ನಡೆಯಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಹರಪಳ್ಳಿ ರವೀಂದ್ರ, ಉದ್ಯಮಿ ಅವರೆಮಾದಂಡ ಶರಣ್ ಪೂಣಚ್ಚ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ ಹಾಗೂ ರಾಷ್ಟ್ರೀಯ ಸಮಿತಿ ಸದಸ್ಯ ಪಳೆಯಂಡ ಪಾರ್ಥ ಚಿಣ್ಣಪ್ಪ ಭಾಗವಹಿಸಲಿದ್ದಾರೆ. 20 ವಿಭಾಗದ ವಾರ್ಷಿಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Read More